Tag: Gavisiddeshwara swamiji

  • ವಿದ್ಯಾರ್ಥಿಯ ಶೂ ಲೇಸ್ ಕಟ್ಟಿದ ಗವಿ ಸಿದ್ದೇಶ್ವರ ಶ್ರೀಗಳು

    ವಿದ್ಯಾರ್ಥಿಯ ಶೂ ಲೇಸ್ ಕಟ್ಟಿದ ಗವಿ ಸಿದ್ದೇಶ್ವರ ಶ್ರೀಗಳು

    ಕೊಪ್ಪಳ: ವಿಶ್ವವಿಖ್ಯಾತ ಗವಿ ಮಠದ ಗವಿ ಸಿದ್ದೇಶ್ವರ ಶ್ರೀಗಳು ವಿದ್ಯಾರ್ಥಿಯೊಬ್ಬನ ಶೂ ಲೇಸ್ ಕಟ್ಟಿ ಸರಳತೆ ಮೆರೆದಿದ್ದಾರೆ.

    ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ಮಠದ ವತಿಯಿಂದ ವಿನೂತನ ವೃಕ್ಷ ಸಂಕಲ್ಪ ಜಾಗೃತಿ ಅಭಿಯಾನವನ್ನು ಆಯೋಜಿಲಾಗಿತ್ತು. ಲಕ್ಷ ವೃಕ್ಷೋತ್ಸವ ಶೀರ್ಷಿಕೆಯ ದೈವ ಸಾಕ್ಷಾತ್ಕಾರಕ್ಕೆ ಲಕ್ಷ ದೀಪೋತ್ಸವ, ಪ್ರಕೃತಿ ಸಾಕ್ಷಾತ್ಕರಕ್ಕೆ ಲಕ್ಷ ವೃಕ್ಷೋತ್ಸವ ಎಂಬ ಘೋಷವಾಕ್ಯದೊಂದಿಗೆ ಕೊಪ್ಪಳದ ಸಾರ್ವಜನಿಕ ಮೈದಾನದಿಂದ ಆರಂಭವಾದ ಜಾಥಾ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನಿಲ್‍ಕುಮಾರ ಚಾಲನೆ ನೀಡಿದ್ದರು.

    ಲಕ್ಷ ವೃಕ್ಷೋತ್ಸವ ಜಾಥಾ ಸಮಯದಲ್ಲಿ ಬಾಲಕನೊಬ್ಬನ ಶೂ ಲೇಸ್ ಬಿಚ್ಚಿತ್ತು. ಇದನ್ನು ಗಮಿನಿಸಿದ ಗವಿ ಸಿದ್ದೇಶ್ವರ ಶ್ರೀಗಳು, ಬಾಲಕ ಬಳಿಗೆ ಬಂದು ಶೂ ಲೇಸ್ ಕಟ್ಟಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಶ್ರೀಗಳ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ವೃಕ್ಷ ಸಂಕಲ್ಪ ಜಾಗೃತಿ ಅಭಿಯಾನದಲ್ಲಿ ವಿವಿಧ ಶಾಲೆ ಹಾಗೂ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮೆರವಣಿಗೆಯು ಸಾರ್ವಜನಿಕ ಮೈದಾನದಿಂದ ಅಶೋಕ ಸರ್ಕಲ್, ಜವಾಹರ್ ರಸ್ತೆ, ಗಡಿಯಾರ ಕಂಭ, ಶಾರದಾ ಚಿತ್ರಮಂದಿರವಾಗಿ ಸಾಗಿ ಗವಿಮಠದ ಮಹಾದಾಸೋಹ ಭವನ ತಲುಪಿತು.

    ಲಕ್ಷವೃಕ್ಷೋತ್ಸವ ಎಂಬ ಜಾಥಾ ನಡಿಗೆ ಕಾರ್ಯಕ್ರಮದ ನಿಮಿತ್ತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಆಯ್ಕೆಯಾಗಿ ಪ್ರಥಮ, ದ್ವೀತಿಯ, ಹಾಗೂ ತೃತಿಯ ಸ್ಥಾನ ಪಡೆದ ಪ್ರೌಢ ಶಾಲಾ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಸಣ್ಣ ನೀರಾವರಿ ಮತ್ತು ಕೆರೆಯ ಅಭಿವೃದ್ಧಿ ಪ್ರಾಧಿಕಾರ, ಖಾಸಗಿ ಶಾಲಾ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಯ ಅಧಿಕಾರಿಗಳು, ಶಿಕ್ಷಕವೃಂದ, ಸಿಬ್ಬಂದಿವರ್ಗ ಮತ್ತು ಇತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

  • ಪೇಜಾವರ ಶ್ರೀಗಳದ್ದು ಪುಟ್ಟ ದೇಹ, ದಿಟ್ಟ ಮಾತಾಗಿತ್ತು: ಗವಿಮಠದ ಸ್ವಾಮೀಜಿ

    ಪೇಜಾವರ ಶ್ರೀಗಳದ್ದು ಪುಟ್ಟ ದೇಹ, ದಿಟ್ಟ ಮಾತಾಗಿತ್ತು: ಗವಿಮಠದ ಸ್ವಾಮೀಜಿ

    ಕೊಪ್ಪಳ: ಪೇಜಾವರ ಶ್ರೀಗಳು ಅಸ್ತಂಗತರಾಗಿರುವುದಕ್ಕೆ ಕೊಪ್ಪಳದ ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

    ಕೊಪ್ಪಳದಲ್ಲಿ ಮಾತನಾಡಿದ ಸ್ವಾಮೀಜಿ, ಪೇಜಾವರ ಮಠದ ಶ್ರೀಗಳು ವ್ಯಕ್ತಿತ್ವ ಆಧರಣಿಯ ಮತ್ತು ಅನುಕರಣಿಯವಾಗಿದೆ. ಅವರದು ಪುಟ್ಟ ದೇಹ, ದಿಟ್ಟ ಮಾತಾಗಿತ್ತು. ಮುಖದಲ್ಲಿ ಸದಾ ದೈವಿ ಕಳೆ, ಮನದಲ್ಲಿ ಸದಾ ದೇಶಪ್ರೇಮ ಇತ್ತು ಎಂದು ನೆನೆದರು.

    ವಿಶ್ವೇಶತೀರ್ಥ ಶ್ರೀಪಾದರು ಜನರ ಕಣ್ಣಿಂದ ದೂರ ಆಗಿರಬಹುದು, ಮಣ್ಣಲ್ಲಿ ಮರೆಯಾಗಬಹುದು ಲಕ್ಷ ಲಕ್ಷ ಭಕ್ತರ ಹೃದಯದಿಂದ ದೂರ ಆಗುವ ವ್ಯಕ್ತಿತ್ವ ಅವರದ್ದಲ್ಲ. ಆಧ್ಯಾತ್ಮ ಚೇತನ ಅಗಲಿದ್ದು ಈ ನಾಡಿಗೆ ತುಂಬದ ಹಾನಿಯಾಗಿದೆ. ಅವರ ಆದರ್ಶಗಳು, ಆಲೋಚನೆಗಳು ನಮಗೆ ಬೆಳಕಾಗಲಿವೆ ಎಂದರು.

    ಪೇಜಾವರ ಶ್ರೀಗಳು 2012ರ ಜನೇವರಿ 11ರಂದು ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಉದ್ಘಾಟನೆ ನೆರವೆರಿಸಿದ್ದರು. ಜಾತ್ರಾ ಮಹೋತ್ಸವ ನೋಡಿ ತುಂಬ ಸಂತೋಷ ಪಟ್ಟಿದ್ದರು. ನಮ್ಮ ಜಾತ್ರೆಯನ್ನು ನೋಡಿ ಪೂರಿ ಜಗನ್ನಾಥ್ ಜಾತ್ರೆಗೆ ಹೋಲಿಸಿ ನಮಗೆಲ್ಲ ಮಾರ್ಗದರ್ಶನ ಮಾಡಿದ್ದರು. ನಮ್ಮೆಲ್ಲರಿಗೂ ಸಂತೋಷ ಪಡುವ ಮಾತನಾಡಿ ನಮಗೆಲ್ಲ ಹುರಿದುಂಬಿಸಿದ್ದು ಇನ್ನೂ ಸ್ಮರಣೆಯಲ್ಲಿದೆ ಎಂದು ನೆನೆದರು.

  • ಮಸೀದಿ ಸಂದರ್ಶನ ಕಾರ್ಯಕ್ರಮಕ್ಕೆ ಗವಿಮಠದ ಸ್ವಾಮೀಜಿ ಚಾಲನೆ

    ಮಸೀದಿ ಸಂದರ್ಶನ ಕಾರ್ಯಕ್ರಮಕ್ಕೆ ಗವಿಮಠದ ಸ್ವಾಮೀಜಿ ಚಾಲನೆ

    – ಕೋಮು ಸೌಹಾರ್ದತೆ ಮೂಡಿಸಲು ಮುಂದಾದ ಮುಸ್ಲಿಂ ಬಾಂಧವರ

    ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧರ್ಮ ಧರ್ಮಗಳ ನಡುವೆ ಕೋಮು ಸೌಹಾರ್ದತೆ ಮೂಡಿಸುವ ನಿಟ್ಟಿನಲ್ಲಿ ಜಮಾತ್-ಎ-ಇಸ್ಲಾಂ ಹಿಂದ್ ಸಂಘಟನೆ ಮಸೀದಿ ಸಂದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದೆ. ನೂರಾರು ಹಿಂದೂಗಳು ಮಸೀದಿಗೆ ಭೇಟಿ ನೀಡಿ ಇಸ್ಲಾಂ ಧರ್ಮ ಹಾಗೂ ಮಸೀದಿ ಬಗ್ಗೆ ತಿಳಿದುಕೊಂಡರು.

    ಕೊಪ್ಪಳದ ನಗರದ ಸ್ಟೇಷನ್ ರಸ್ತೆಯಲ್ಲಿರುವ ಮಸ್ಜಿದ್-ಎ-ಅಲ್ಲಾದಲ್ಲಿ ಇಂದು ವಿಭಿನ್ನ ಕಾರ್ಯಕ್ರಮವೊಂದು ನಡೆಯಿತು. ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗಳು ಮಸೀದಿಗೆ ಭೇಟಿ ನೀಡಿದರು. ಈ ವೇಳೆ ಸ್ವಾಮೀಜಿಗಳಿಗೆ ಮುಸ್ಲಿಂ ಬಾಂಧವರ ಮಸೀದಿಯ ಬಗ್ಗೆ ವಿವರಿಸಿದರು.

    ಮಸೀದಿ ಸಂದರ್ಶನ ಕಾರ್ಯಕ್ರಮಕ್ಕೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು. ಮಸೀದಿಗೆ ಭೇಟಿ ನೀಡಿದ ಗವಿಸಿದ್ದೇಶ್ವರ ಸ್ವಾಮೀಜಿ ಅಲ್ಲಿನ ವ್ಯವಸ್ಥೆ ಹಾಗೂ ಪ್ರಾರ್ಥನೆ ಮಾಡುವ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ಜೊತೆಗೆ ಮುಸ್ಲಿಂ ಬಾಂಧವರು ಹಿಂದೂ ಸಮಾಜದ ಎಲ್ಲ ಸಮುದಾಯದವರಿಗೂ ಸಹ ಮಸೀದಿಗೆ ಆಹ್ವಾನ ನೀಡಿದ್ದರು. ಮುಸ್ಲಿಂ ಬಾಂಧವರ ಕರೆಗೆ ಓಗೊಟ್ಟು ಬಂದಿದ್ದ ನೂರಾರು ಹಿಂದೂಗಳಿಗೂ ಸಹ ಮಸೀದಿ ಹಾಗೂ ಇಸ್ಲಾಂ ಧರ್ಮದ ಕುರಿತು ಮಾಹಿತಿ ನೀಡಿಲಾಯಿತು. ಹಿಂದೂ ಪುರಷರಷ್ಟೇ ಅಲ್ಲದೆ ಮಹಿಳೆಯರೂ ಸಹ ಮಸೀದಿ ಸಂದರ್ಶನದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ.

    ಈ ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆವರೆಗೂ ನಡೆಯಿತು. ಈ ವೇಳೆ ಸಾವಿರಾರು ಹಿಂದೂಗಳು ಮಸೀದಿಗೆ ಭೇಟಿ ನೀಡಿದರು. ಒಟ್ಟಿನಲ್ಲಿ ಸಮಾಜದಲ್ಲಿ ಧರ್ಮ, ಧರ್ಮಗಳ ನಡುವೆ ಸಾಮರಸ್ಯ ಮೂಡಿಸುವ ಉದ್ದೇಶದಿಂದ ಕೊಪ್ಪಳದಲ್ಲಿ ಮಸೀದಿ ಸಂದರ್ಶನ ಹಮ್ಮಿಕೊಂಡಿದ್ದು ನಿಜಕ್ಕೂ ಪ್ರಶಂಸನಿಯ ಕೆಲಸವಾಗಿದೆ.

  • ಗವಿಮಠ ಜಾತ್ರಾ ಮಹೋತ್ಸವದಲ್ಲಿ ಬದಲಾವಣೆಯಿಲ್ಲ: ಗವಿಸಿದ್ಧೇಶ್ವರ ಶ್ರೀ

    ಗವಿಮಠ ಜಾತ್ರಾ ಮಹೋತ್ಸವದಲ್ಲಿ ಬದಲಾವಣೆಯಿಲ್ಲ: ಗವಿಸಿದ್ಧೇಶ್ವರ ಶ್ರೀ

    ಕೊಪ್ಪಳ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಶ್ರೀಗಳ ಶಿವೈಕ್ಯರಾದ ಹಿನ್ನೆಲೆಯಲ್ಲಿ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಗವಿಮಠದ ಗವಿಸಿದ್ಧೇಶ್ವರ ಶ್ರೀಗಳು ತಿಳಿಸಿದ್ದಾರೆ.

    ನಗರದ ಗವಿಮಠದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಗಳವಾರದಿಂದ ಪ್ರಾರಂಭವಾಗುವ ಜಾತ್ರಾ ಕಾರ್ಯಕ್ರಮಗಳು ನಡೆಯುತ್ತವೆ. ನಾಳೆ ಸಂಜೆ 6 ಗಂಟೆಗೆ ಕೆನಡಾದ ಮ್ಯಾಥ್ಯೂ ಪೌರ್ಟಿಯರ್ ದಂಪತಿ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಿದ್ದಗಂಗಾ ಶ್ರೀಗಳ ಅಗಲಿಕೆ ನೋವನ್ನು ತಂದಿದೆ. ಲಕ್ಷಾಂತರ ಜನರಿಗೆ ಅನ್ನ, ಜ್ಞಾನವನ್ನು ನೀಡಿ ಬೆಳಕು ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ತಂದೆ-ತಾಯಿ, ಗುರುವಾಗಿ ಮಾರ್ಗದರ್ಶನ ಮಾಡಿದ್ದಾರೆ. ಹೀಗಾಗಿ ಶ್ರೀಗಳನ್ನು ಜಗತ್ತಿನ ಎಂಟನೇ ಅದ್ಭುತ ಅಂತ ಕರೆಯಬಹುದು ಎಂದು ಹೇಳಿದರು.

    ಸಿದ್ದಗಂಗಾ ಶ್ರೀಗಳನ್ನು ಕಳೆದುಕೊಂಡ ನಾಡು ಅನಾಥವಾಗಿದೆ. ಅವರು ಈ ಕಾಲದ ಸರ್ವಶ್ರೇಷ್ಠ ಸಂತರು, ಶಿವಕುಮಾರ ಶ್ರೀಗಳು ಒಬ್ಬ ತಪಸ್ವಿ, ಇಷ್ಟಲಿಂಗ, ಸಮಾಜ ಸೇವಕ, ಕರುಣಾಮಯಿ ಇಷ್ಟು ಗುಣಗಳನ್ನು ಹೊತ್ತು ಭೂಮಿಗೆ ಬಂದ ಭಗವಂತ. ಶ್ರೀಗಳ ಆತ್ಮಕ್ಕೆ ಚಿರಶಾಂತಿ ನೀಡಲಿ ಎನ್ನುವುದಕ್ಕಿಂತ, ಸಿದ್ದಗಂಗಾ ಶ್ರೀಗಳ ಆತ್ಮ ಲಕ್ಷಾಂತರ ಆತ್ಮದಲ್ಲಿ ಬೆರೆಯಲಿ ಅಂತ ದೇವರಲ್ಲಿ ಬೇಡಿಕೊಳ್ಳಬೇಕು ಎಂದರು.

    2005ರಲ್ಲಿ ಗವಿಮಠದ ಎರಡು ಸಾವಿರ ವಿದ್ಯಾರ್ಥಿಗಳ ಉಚಿತ ಪ್ರಸಾದ ನಿಲಯ ಅಡಿಗಲ್ಲು ಹಾಗೂ 2006ರಲ್ಲಿ ಉದ್ಘಾಟನೆಯನ್ನು ಶ್ರೀ ಶಿವಕುಮಾರ ಸ್ವಾಮೀಜಿಗಳು ನೆರವೇರಿಸಿದ್ದರು. ಇತ್ತೀಚೆಗೆ ಶ್ರೀಗಳ 111ನೇ ಜನ್ಮದಿನಾಚರಣೆಯಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಅವರಿಂದ ಆಶೀರ್ವಾದ ಪಡೆದಿದ್ದೆ ಎಂದು ಗವಿಸಿದ್ಧೇಶ್ವರ ಸ್ವಾಮೀಜಿ ಸ್ಮರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಗುವಿನೊಂದಿಗೆ ಮಗುವಾದ ಗವಿಸಿದ್ದೇಶ್ವರ ಸ್ವಾಮೀಜಿ- ವಿಡಿಯೋ ವೈರಲ್

    ಮಗುವಿನೊಂದಿಗೆ ಮಗುವಾದ ಗವಿಸಿದ್ದೇಶ್ವರ ಸ್ವಾಮೀಜಿ- ವಿಡಿಯೋ ವೈರಲ್

    ಕೊಪ್ಪಳ: ಜಿಲ್ಲೆಯ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಸ್ವಾಮೀಜಿ ಪುಟ್ಟ ಮಗುವನ್ನ ಎತ್ತಿ ಆಟ ಆಡಿಸುತ್ತಿರೋ ದೃಶ್ಯ ಇದೀಗ ವೈರಲ್ ಆಗಿದ್ದು, ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮಗುವಿನೊಂದಿಗೆ ಮಗುವಾಗಿ ಕಾಲ ಕಳೆದಿದ್ದಾರೆ.

    ಜಿಲ್ಲೆಯ ಗವಿಸಿದ್ದೇಶ್ವರ ಮಠ ಇಡೀ ಕರ್ನಾಟಕದಲ್ಲಿ ಹೆಸರುವಾಸಿಯಾಗಿದೆ. ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತುಂಬಾ ಸರಳ ವ್ಯಕ್ತಿಯಾಗಿದ್ದು, ಸ್ವಾಮೀಜಿ ಬಗ್ಗೆ ಭಕ್ತರಿಗೆ ಎಲ್ಲಿಲ್ಲದ ಭಯ ಭಕ್ತಿ. ಸ್ವಾಮೀಜಿಯನ್ನ ನೋಡಲು ನಿತ್ಯ ನೂರಾರು ಜನ ಮಠಕ್ಕೆ ಆಗಮಿಸುತ್ತಾರೆ. ಆದ್ರೆ ಅದೇ ಅಭಿನವ ಗವಿಸಿದ್ದೇಶ್ವರ ಸ್ವಾಮಿಗಳು ಮಗುವಿನೊಂದಿಗೆ ಆಟ ಆಡುತ್ತಿರೋ ವಿಡಿಯೋ ಇದೀಗ ವೈರಲ್ ಆಗಿದೆ.

    ಸ್ವಾಮಿಜಿ ಅವರು ಮಠದ ಆವರಣದಲ್ಲಿ ಪುಟ್ಟ ಮಗುವನ್ನ ಎತ್ತಿ ಆಟ ಆಡಿಸಿ, ಮಗುವಿನೊಂದಿಗೆ ತಾವು ಮಗುವಾಗಿ ಕಾಲ ಕಳೆದು ಸಂತಸ ಪಟ್ಟರು.

    https://www.youtube.com/watch?v=Jow2D4cgLEQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv