Tag: Gavisiddheshwar Fair

  • ಕೊಪ್ಪಳ ಗವಿಮಠ ಜಾತ್ರೆಗೆ ಕೊರೊನಾ ಅಡ್ಡಿ

    ಕೊಪ್ಪಳ ಗವಿಮಠ ಜಾತ್ರೆಗೆ ಕೊರೊನಾ ಅಡ್ಡಿ

    ಕೊಪ್ಪಳ: ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಪ್ರಖ್ಯಾತಿ ಪಡೆದಿರುವ ಕೊಪ್ಪಳ ಗವಿಮಠದ ಜಾತ್ರೆ ನಡೆಯುತ್ತಾ? ಇಲ್ಲವಾ? ಅನ್ನೋ ಅನುಮಾನ ಭಕ್ತರಲ್ಲಿ ಮೂಡಿದೆ. ಸದ್ಯ ಜಾತ್ರೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಪ್ರತಿ ವರ್ಷ ಈ ಜಾತ್ರೆಯಲ್ಲಿ ಸುಮಾರು ಐದು ಲಕ್ಷಕ್ಕೂ ಅಧಿಕ ಜನ ಸೇರುತ್ತಾರೆ.

    ಲಕ್ಷಾಂತರ ಜನರು ಸೇರುವ ಜಾತ್ರೆಗೆ ನಾವು ಅನುಮತಿ ನೀಡಲ್ಲ. ಸರ್ಕಾರದ ನಿರ್ದೇಶನದಂತೆ ಕೋವಿಡ್ ನಿಯಮಗಳ ಪ್ರಕಾರ ಜಾತ್ರೆಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಜಿಲ್ಲೆಯ ಯಾವುದೇ ಜಾತ್ರೆಗೆ ಅನುಮತಿ ನೀಡಿಲ್ಲ, ಗವಿಸಿದ್ದೇಶ್ವರ ಜಾತ್ರೆಗೂ ಅನುಮತಿ ನೀಡಲ್ಲ. ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲಾಗಿದೆ. ಮತ್ತೆ ಲಕ್ಷಾಂತರ ಜನರು ಒಂದೆಡೆ ಸೇರುವದರಿಂದ ಸೋಂಕು ಉಲ್ಬಣ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸೂರಳ್ಕರ್ ಸ್ಪಷ್ಟಪಡಿಸಿದ್ದಾರೆ.

    15 ದಿನಗಳ ಕಾಲ ಜರುಗುವ ಜಾತ್ರೆಗೆ ಎರಡು ತಿಂಗಳ ಮುಂಚೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಜಾತ್ರೆ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಜಾತ್ರೆಗೆ ಅನುಮತಿ ಕೋರಲಾಗಿದೆ. ಜಾತ್ರೆಗೆ ಅನುಮತಿ ನೀಡದೆ ಇರುವುದರಿಂದ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಮತ್ತು ಜಿಲ್ಲಾಧಿಕಾರಿ ಮಧ್ಯೆ ಹಗ್ಗಜಗ್ಗಾಟ ಆರಂಭವಾಗಿದೆ. ಸ್ವಾಮೀಜಿ ಅವರು ಜನವರಿ ಎರಡನೇ ವಾರದಂದು ಜಾತ್ರೆ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಒಟ್ಟಿನಲ್ಲಿ ಕೊರೊನಾ ಕರಿನೆರಳು ಮಹಾಕುಂಭಮೇಳ ಎಂದೇ ಪ್ರಖ್ಯಾತಿ ಪಡೆದ ಗವಿಸಿದ್ದೇಶ್ವರ ಜಾತ್ರೆಗೂ ಆವರಿಸಿದ್ದು ಜಾತ್ರೆ ನಡೆಯುತ್ತೋ ಇಲ್ವೋ ಎಂಬ ಅನುಮಾನ ಭಕ್ತರಲ್ಲಿ ಮೂಡಿದೆ. ಜಾತ್ರೆಯ ಸ್ಪಷ್ಟ ನಿರ್ಧಾರ ಜನವರಿ 15ರ ಬಳಿಕ ಉತ್ತರ ಸಿಗಲಿದೆ.

  • ಗವಿಮಠ ಜಾತ್ರೆಯಲ್ಲಿ ಭಕ್ತರಿಗೆ ಮಿರ್ಚಿ ಪ್ರಸಾದ

    ಗವಿಮಠ ಜಾತ್ರೆಯಲ್ಲಿ ಭಕ್ತರಿಗೆ ಮಿರ್ಚಿ ಪ್ರಸಾದ

    ಕೊಪ್ಪಳ: ಗವಿನಾಡು ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಮಿರ್ಚಿ ಹಬ್ಬ ಆರಂಭವಾಗಿದೆ. ಜಾತ್ರೆಯ ಹಿನ್ನೆಲೆ ಮಾಹಾದಾಸೋಹಕ್ಕೆ ಹೆಸರುವಾಸಿಯಾದ ಗವಿ ಮಠದಲ್ಲಿ ಮಿರ್ಚಿ ಮಾಡುವ ಕೆಲಸದಲ್ಲಿ ಬಾಣಸಿಗರು ನಿರತರಾಗಿದ್ದಾರೆ.

    ದಕ್ಷಿಣ ಭಾರತದ ಕುಂಭಮೇಳ ಎಂದು ಹೆಸರುವಾಸಿಯಾದ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸುತ್ತಾರೆ. ಜಾತ್ರೆಯ ಮಾಹಾ ದಾಸೋಹ ಮತ್ತೊಂದು ವೈಶಿಷ್ಟ್ಯವಾಗಿದ್ದು, 300ಕ್ಕೂ ಹೆಚ್ಚು ಬಾಣಸಿಗರು ಮಿರ್ಚಿ ಮಾಡ್ತಿದಾರೆ. ದಾಸೋಹಕ್ಕೆ ಬಂದ ಭಕ್ತರಿಗೆ ಕಳೆದ ಐದು ವರ್ಷದಿಂದ ಗವಿ ಮಠ ಮಿರ್ಚಿ ನೀಡ್ತಿದೆ. ಸುಮಾರು ಮೂರು ಲಕ್ಷ ಜನರು ಇಂದು ಗವಿ ಮಠದ ಜಾತ್ರೆಯಲ್ಲಿ ಖಡಕ್ ಮಿರ್ಚಿ ರುಚಿ ಸವಿಯಲಿದ್ದಾರೆ.

    15 ಕ್ವಿಂಟಾಲ್ ಕಡಲೆ ಹಿಟ್ಟು, ಹತ್ತು ಬ್ಯಾರೆಲ್ ಒಳ್ಳೆ ಎಣ್ಣೆ ಹಾಗೂ 18 ಕ್ವಿಂಟಾಲ್ ಮೆಣಸಿಕಾಯಿ ಮಿರ್ಚಿ ದಾಸೋಹಕ್ಕೆ ಬಳಸಲಾಗುತ್ತಿದೆ. ಸಿಂಧನೂರಿನ ಗವಿ ಮಠದ ಭಕ್ತರು ಹಣ ಹಾಕಿ, ದಾಸೋಹಕ್ಕೆ ಬಂದ ಭಕ್ತರಿಗೆ ಮಿರ್ಚಿ ರುಚಿ ತೋರಿಸುತ್ತಿದ್ದಾರೆ.