ದೊಡ್ಮನೆ ಸೊಸೆ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಸೋಲು ಕಂಡಿದ್ದಾರೆ. ಶಿವಮೊಗ್ಗ (Shimoga) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೀತಾ, ಪ್ರತಿ ಸ್ಪರ್ಧಿ ಬಿ.ವೈ ರಾಘವೇಂದ್ರ ಎದುರು ಸೋಲು ಒಪ್ಪಿಕೊಂಡಿದ್ದಾರೆ. ಈ ಬಾರಿ ಗೀತಾ ಗೆಲುವಿಗಾಗಿ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಯರು ಪ್ರಚಾರ ಮಾಡಿದ್ದರು. ಆದರೆ, ಯಾವ ಪ್ರಚಾರವೂ ಅವರನ್ನು ಕೈ ಹಿಡಿಯಲಿಲ್ಲ.
ಆರ್.ಚಂದ್ರು ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಫಾದರ್ ಸಿನಿಮಾದ ಮುಹೂರ್ತ ನಾಳೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಬೆಳಗ್ಗೆ 11 ಗಂಟೆಗೆ ನೆರವೇರಲಿದೆ. ಈ ಅದ್ಧೂರಿ ಸಮಾರಂಭಕ್ಕೆ ನಟ ಶಿವರಾಜ್ ಕುಮಾರ್ (Shivaraj Kumar) ಮತ್ತು ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ (Geeta Shivaraj Kumar) ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ರಾಮಚಂದ್ರ ಗೌಡ, ಮಂಜುನಾಥ್ ಹೆಗಡೆ, ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅತಿಥಿಗಳಾಗಿ ಆಗಮಿಸುತ್ತಿದ್ದು, ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿ ಅಮೃತಾ ಅಯ್ಯಂಗಾರ, ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ರಕಾಶ್ ರಾಜ್, ಸುನಿಲ್ ಸೇರಿದಂತೆ ಹಲವಾರು ನಟ ನಟಿಯರು ಹಾಗೂ ತಂತ್ರಜ್ಞರು ಭಾಗಿಯಾಗಲಿದ್ದಾರೆ.
ಆರ್.ಸಿ. ಸ್ಟುಡಿಯೋಸ್. ಇದು ಆರ್ ಚಂದ್ರು (R. Chandru) ಅವರ ಬಹುದೊಡ್ಡ ಕನಸು. ಇದೊಂದು ಪ್ಯಾನ್ ಇಂಡಿಯಾ ಬ್ಯಾನರ್. ಕನ್ನಡಕ್ಕೆ ಸೀಮಿತವಾಗಿದ್ದ ಶ್ರೀ ಸಿದ್ದೇಶ್ವರ ಮೂವೀಸ್ ಬ್ಯಾನರ್ ಅನ್ನು ಸೇರಿಸಿಕೊಂಡೇ ಆರ್.ಸಿ. ಸ್ಟುಡಿಯೋಸ್ ಹುಟ್ಟು ಕಂಡಿದೆ. ಈವರೆಗೆ ಸ್ಟಾರ್ ನಟರ ಐದು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದ ಆರ್.ಚಂದ್ರು, ಈಗ ಆರ್.ಸಿ. ಸ್ಟುಡಿಯೋಸ್ ಸಂಸ್ಥೆ ಮೂಲಕ ಒಟ್ಟಾರೆ ಆರು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಅನೌನ್ಸ್ ಮಾಡಿದ್ದಾರೆ. ಅವೆಲ್ಲವೂ ಬಿಗ್ ಬಜೆಟ್ ಸಿನಿಮಾಗಳು, ಬಿಗ್ ಸ್ಟಾರ್ಸ್ ಸಿನಿಮಾಗಳು ಅನ್ನೋದು ವಿಶೇಷ. ಆ ಸಾಲಿನಲ್ಲಿರುವ ಸಿನಿಮಾಗಳ ಪೈಕಿ ‘ಫಾದರ್’ (Father) ಎಂಬ ಆರನೇ ಸಿನಿಮಾ ಏಪ್ರಿಲ್ 27ರಂದು ಅದ್ಧೂರಿಯಾಗಿ ಮುಹೂರ್ತ ನೆರವೇರುತ್ತಿದೆ. ಹುಡುಗಿಯರ ಪಾಲಿನ ಪ್ರೀತಿಯ ಡಾರ್ಲಿಂಗ್ ಎನಿಸಿಕೊಂಡಿರುವ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಪಂಚಭಾಷೆ ನಟ ಪ್ರಕಾರ್ ರೈ (Prakash Raj) ಈ ಚಿತ್ರದ ಮುಖ್ಯ ಆಕರ್ಷಣೆ.
ಈ ಸಿನಿಮಾದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಅಪ್ಪ- ಮಗನ ಬಾಂಧವ್ಯ ಕುರಿತಾದ ಕಥಾಹಂದರ ಹೊಂದಿರುವ ಸಿನಿಮಾ. ಅಪ್ಪನ ಮೌಲ್ಯ ಸಾರಿದ್ದ ಆರ್. ಚಂದ್ರು ಅವರ ಮೊದಲ ಸೂಪರ್ ಹಿಟ್ ಸಿನಿಮಾ ತಾಜ್ ಮಹಲ್ ಇಂದಿಗೂ ಕಾಡುತ್ತೆ. ಫಾದರ್ ಕೂಡ ಅಂಥದ್ದೇ ಕಂಟೆಂಟ್ ಹೊಂದಿರುವ ಸಿನಿಮಾ ಅನ್ನೋ ಫೀಲ್ ಹೆಸರಲ್ಲೇ ಇದೆ. ಮೊದಲಿಂದಲೂ ಆರ್. ಚಂದ್ರು ಕಂಟೆಂಟ್ಗೆ ಒತ್ತು ಕೊಟ್ಟವರು. ಈ ಫಾದರ್ ಕೂಡ ಅದಕ್ಕೆ ಹೊರತಾಗಿರಲ್ಲ ಎಂಬ ಭಾವನೆ ನಮ್ಮದು. ಸದ್ಯಕ್ಕೆ ಫಾದರ್ ಏಪ್ರಿಲ್ 27 ರಂದು ಸೆಟ್ಟೇರುತ್ತಿದೆ. ಅಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ಸಿಗಲಿದೆ.
ಸಿನಿಮಾ ಅನ್ನೋದಕ್ಕೆ ದೊಡ್ಡ ಶಕ್ತಿ ಇದೆ. ಅಳು-ನಗುವಿನ ಸಂಕೇತವಿದ್ದರೂ ಅಲ್ಲೆಲ್ಲೋ ಒಂದು ಕಡೆ ಆಪ್ತವೆನಿಸೋ ಅಂಶಗಳು ನೋಡುಗರನ್ನು ಬಿಗಿದಪ್ಪುತ್ತವೆ. ಈ ಫಾದರ್ ಸಿನಿಮಾ ಕೂಡ ಎದೆ ಭಾರವೆನಿಸುವ ಚಿತ್ರ. ಮನಸ್ಸಿಗೆ ಖುಷಿ ಕೊಡುವ, ಕಣ್ಣಲ್ಲಿ ಆನಂದಭಾಷ್ಪ ತರುವ ಮತ್ತೆ ಮತ್ತೆ ಕಾಡುವ, ಏನೋ ಕಳೆದುಕೊಂಡ ಸಂಕಟ, ಇನ್ನೇನ್ನನ್ನೋ ಪಡೆಯಬೇಕೆಂಬ ಹಂಬಲ, ಮತ್ತೇನೋ ಉಳಿಸಿಕೊಳ್ಳಬೇಕೆಂಬ ಹಠ ಇವೆಲ್ಲದರ ಸಮ್ಮಿಶ್ರಣವೇ ಫಾದರ್ ಅಂತೆ.
ಇಲ್ಲಿ ನೋವಿದೆ, ನಲಿವಿದೆ. ಬಾಂಧವ್ಯದ ಹೂರಣವಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಾಸ್ತವದ ತಿರುಳಿದೆ. ಪ್ರತಿಯೊಬ್ಬರ ಮನಸ್ಸಿಗೂ ನಾಟುವ ಅಂಶವಿದೆ. ಕಣ್ಣಿಗೆ ಕಟ್ಟುವ ಚಿತ್ರಣವೂ ಇರಲಿದೆ. ಫಾದರ್ ಪ್ರತಿಯೊಬ್ಬರ ಮನಸ್ಸನ್ನು ಹಗುರಾಗಿಸೋ ಚಿತ್ರವಾದರೂ, ಏನೋ ಒಂದು ಮಿಸ್ ಆಯ್ತು ಅನ್ನೋ ಭಾವನೆಯ ಚಿತ್ರ ಇದಾಗಲಿದೆ. ಆರ್.ಸಿ. ಸ್ಟುಡಿಯೋದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿರುವುದರಿಂದ ಸ್ಟುಡಿಯೋ ಮುಖ್ಯಸ್ಥ ಆರ್.ಚಂದ್ರು ಒಂದೊಳ್ಳೆಯ ಕಂಟೆಂಟ್ ಆಯ್ಕೆ ಮಾಡಿಕೊಂಡಿದ್ದಾರೆ. ಹೌದು, ಜಗತ್ತಿನಲ್ಲಿ ಅಪ್ಪನ ಸ್ಥಾನ ತುಂಬೋಕೆ ಯಾರಿಂದಲೂ ಸಾಧ್ಯವಿಲ್ಲ. ಅಪ್ಪ ಅನ್ನೋದು ಆಕಾಶಕ್ಕಿಂತಲೂ ಮಿಗಿಲು. ಅಪ್ಪನ ಬಿಸಿಯುಸಿರು, ಅಪ್ಪನ ಅಪ್ಪುಗೆ, ಅಪ್ಪನ ನೋವು, ಅಪ್ಪನ ಬೆವರು, ಅಪ್ಪನ ಕಾತರ, ಆತುರ, ಚಡಪಡಿಕೆ, ಆಸೆ, ಜವಾಬ್ದಾರಿ ಇತ್ಯಾದಿಗಳ ರೂಪವೇ ಈ ಫಾದರ್ ಅಂತಂದುಕೊಂಡರೂ ಅದಕ್ಕಿಂತಲೂ ಮಿಗಿಲಾಗಿದ್ದು ಈ ಫಾದರ್ ಒಳಗಿದೆ. ಇದು ಎಲ್ಲರಿಗೂ ಇಷ್ಟವಾಗುವ ಚಿತ್ರವಾಗುತ್ತೆ ಎಂಬ ಭರವಸೆ ಆರ್ ಸಿ ಸ್ಟುಡಿಯೋದ್ದು.
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಪರವಾಗಿ ವರುಣಾ ಕ್ಷೇತ್ರದಲ್ಲಿ (Varuna Constituency) ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಭರ್ಜರಿ ಪ್ರಚಾರ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ರಮ್ಯಾ (Ramya), ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವ ಗೀತಾ ಶಿವರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ (Shivarajkumar) ಮತ್ತು ಸಿದ್ಧರಾಮಯ್ಯನವರಿಗೆ ಆಪ್ತರಾಗಿರುವ ದುನಿಯಾ ವಿಜಯ್ (Duniya Vijay) ಹಾಗೂ ನಿಶ್ಚಿಕಾ ನಾಯ್ದು ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಸಿದ್ದರಾಮಯ್ಯ ಪರ ಮತಯಾಚಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಪ್ಪಾಜಿ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ – ನಿಶ್ವಿಕಾ ನಾಯ್ಡು
ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ನಟ ದುನಿಯಾ ವಿಜಯ್, ಸಿದ್ದರಾಮಯ್ಯನವರು ಬಡವರಿಗಾಗಿ ಅನೇಕ ಕಾರ್ಯಕ್ರಮಗಳನ್ನ ನೀಡಿದ್ದಾರೆ. ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಹೇಳಿದ್ದಾರೆ.
5 ವರ್ಷ ಪೂರ್ಣ ಆಡಳಿತ ಮಾಡಿದ್ದಾರೆ ಅಂದ್ರೆ ಭ್ರಷ್ಟರಹಿತ ಆಡಳಿತ ಅನ್ನೋದು ಗೊತ್ತಾಗುತ್ತೆ. ಹೊರಗಿನವರಿಗಿಂತ ನಮ್ಮೂರಿನವರು, ನಮ್ಮವರನ್ನ ಗೆಲ್ಲಿಸಬೇಕು. ಎಲ್ಲರೂ ಕೂಡ ಸಿದ್ದರಾಮಯ್ಯ ನವರಿಗೆ ಮತ ಹಾಕಿ. ಅವರು ಮತ್ತೆ ಸಿಎಂ ಆಗ್ಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜಕೀಯ ಅಖಾಡಕ್ಕೆ ಅಪ್ಪು ಎಳೆತಂದ ಪ್ರತಾಪ್ ಸಿಂಹ : ನಟ ಶಿವಣ್ಣ ಪ್ರತಿಕ್ರಿಯೆ
ಸಿದ್ದರಾಮಯ್ಯ ಪರ ಶಿವಣ್ಣ ಪ್ರಚಾರಕ್ಕೆ ಬಿಜೆಪಿ ನಾಯಕರ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಿವಣ್ಣ ಅವರ ಬಗ್ಗೆ ಯಾರೂ ಮಾತುನಾಡುವಂತಿಲ್ಲ. ಜೊತೆಗೆ ರಾಜಕೀಯ ವಿವಾದಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಏಕೆಂದರೆ ನಾನು ರಾಜಕೀಯಕ್ಕೆ ಬರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ನಟ ಶಿವರಾಜ್ ಕುಮಾರ್ ಪತ್ನಿ ಸಮೇತ ಇಂದು ಕುಮಾರಸ್ವಾಮಿ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿ ಸ್ಮಾರಕ ಸ್ಥಳ ಅಭಿವೃದ್ಧಿ ಕುರಿತಂತೆ ಸಿಎಂ ಜೊತೆ ಮಾತನಾಡಿದ್ದೇವೆ. ಶಕ್ತಿಧಾಮ ಕುರಿತು ಕೆಲವು ಮಾಹಿತಿಯನ್ನು ನೀಡಿದ್ದೇವೆ. ಈ ಕುರಿತು ಪರಿಶೀಲನೆ ನಡೆಸಿದ ಬಳಿಕ ಚರ್ಚೆ ನಡೆಸುವುದಾಗಿ ಸಿಎಂ ತಿಳಿಸಿದರು. ಆದರೆ ಈ ವೇಳೆ ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿಲ್ಲ ಎಂದರು.
ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಿಂದ ಪತ್ನಿ ಗೀತಾ ಶಿವರಾಜ್ ಕುಮಾರ್ ಕಣಕ್ಕಿಳಿಸುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಆದರೆ ಅವರು ಸ್ಪರ್ಧಿಸಬೇಕು ಗೆಲ್ಲಬೇಕೆಂದು ದೇವರ ಇಚ್ಛೆ ಇದ್ದರೆ ಯಾರೂ ತಪ್ಪಿಸಲಾಗದು ಎಂದು ಹೇಳಿದರು.
Renowned actor Shivarajkumar and Geetha Shivarajkumar called on Chief Minister HD Kumaraswamy today, and discussed about the development of Shantidhama, which was run by late Parvathamma Rajkumar and regarding opening a school. pic.twitter.com/ULnrXaeBgM
ಬಳಿಕ ಮಾತನಾಡಿದ ಗೀತಾ ಶಿವರಾಜ್ ಕುಮಾರ್, ಚುನಾವಣೆಯ ಕುರಿತು ಇದುವರೆಗೂ ಯಾವುದೇ ಯೋಚನೆ ಮಾಡಿಲ್ಲ. ಚುನಾವಣೆಗೆ ಇನ್ನು ಸಾಕಷ್ಟು ಸಮಯ ಇದೆ. ಈ ಕುರಿತು ನನ್ನ ಸಹೋದರನ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಮಧು ಬಂಗಾರಪ್ಪ ಅವರಿಗೆ ನೀಡುವ ಕುರಿತು ಪ್ರಶ್ನೆಗೆ ಉತ್ತರಿಸಿ, ಸಿಎಂ ಕುಮಾರಸ್ವಾಮಿ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಕುರಿತು ಇದುವರೆಗೂ ಯಾವುದೇ ಚರ್ಚೆ ನಡೆಸಿಲ್ಲ. ಸೂಕ್ತ ವ್ಯಕ್ತಿಯನ್ನು ನೇಮಕ ಮಾಡುವ ಆಶಾಭಾವನೆ ಇದೆ. ಅವರು ಯಾವುದೇ ತೀರ್ಮಾನ ತೆಗೆದುಕೊಂಡರು ಸ್ವಾಗತ ಎಂದರು.