Tag: gelatin

  • ಹೆಂಡತಿಯನ್ನು ತಬ್ಬಿ ಕೊಂದೇ ಬಿಟ್ಟ – ಇದು ಸೂಸೈಡ್‌ ಬಾಂಬರ್‌ ಸಿಟ್ಟಿನ ಕಥೆ

    ಹೆಂಡತಿಯನ್ನು ತಬ್ಬಿ ಕೊಂದೇ ಬಿಟ್ಟ – ಇದು ಸೂಸೈಡ್‌ ಬಾಂಬರ್‌ ಸಿಟ್ಟಿನ ಕಥೆ

    ಐಜ್ವಾಲ್: ಪತ್ನಿಯ ಮೇಲೆ ಕೋಪ ಮಾಡಿಕೊಂಡು ಬೇರೆಯಾಗಿ ವಾಸಿಸುತ್ತಿದ್ದ ಗಂಡನೊಬ್ಬ ಆಕೆಯನ್ನು ಕೊಲ್ಲಲು ತನ್ನ ಬಟ್ಟೆಯೊಳಗೆ ಜಿಲೆಟಿನ್ ಬಾಂಬ್ ಇಟ್ಟುಕೊಂಡು ಆಕೆಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ. ಬಾಂಬ್ ಸ್ಫೋಟವಾಗಿ ಗಂಡ-ಹೆಂಡತಿ ಇಬ್ಬರೂ ಸಾವನ್ನಪ್ಪಿರುವ ಘಟನೆ ಮಿಜೋರಾಂನ ಲುಂಗೇಲಿಯಲ್ಲಿ ನಡೆದಿದೆ.

    61 ವರ್ಷದ ಮಹಿಳೆ ಮತ್ತು ಈಕೆಯ ಪತಿ ರೋಹ್‍ಮಿಂಗ್ಲಿಯಾನ ಮೃತರಾಗಿದ್ದಾರೆ. ನಿನ್ನೆ ಮಧ್ಯಾಹ್ನ 12:15ರ ವೇಳೆಗೆ ಬಾಂಬ್ ಸ್ಫೋಟವಾಗಿದೆ. ಆತ್ಮಾಹುತಿ ಬಾಂಬ್ ಸಿಡಿಸಿ ಹೆಂಡತಿಯನ್ನು ಕೊಲ್ಲಲು ಮುಂದಾದ ಗಂಡ, ಆ ರೀತಿಯ ನಿರ್ಧಾರ ತೆಗೆದುಕೊಳ್ಳಲು ಕಾರಣವೇನೆಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಒಳಗಡೆ ಇರೋ ವಸ್ತುಗಳನ್ನು ನೋಡಿ ರೆಸಿಪಿ ವಿವರ ನೀಡಲಿದೆ ಅಮೆಜಾನ್‌ ಸ್ಮಾರ್ಟ್‌ ಫ್ರಿಡ್ಜ್‌

     

    ಮಹಿಳೆ ರೋಹ್‍ಮಿಂಗ್ಲಿಯಾನನ್ನು ಎರಡನೇ ಮದುವೆಯಾಗಿದ್ದಳು. ಇಬ್ಬರ ನಡುವೆ ಜಗಳ ನಡೆದಿದ್ದರಿಂದ ಪ್ರತ್ಯೇಕವಾಗಿ ಒಂದು ವರ್ಷದಿಂದ ವಾಸವಾಗಿದ್ದರು. ಆದರೆ ಅವರು ನಿನ್ನೆ ಒಂದೇ ಕಡೆ ಸೇರಿದ್ದರು. ತರಕಾರಿ ಮಾರುತ್ತಿದ್ದ ಆ ಮಹಿಳೆಯನ್ನು ಹುಡುಕಿ ಬಂದ ಆಕೆಯ ಪತಿ, ಆಕೆಯ ಜೊತೆಯಲ್ಲಿದ್ದ ಮಗಳನ್ನು ದೂರ ಕಳಿಸಿದ್ದ. ಮಗಳು ದೂರ ಹೋದ ನಂತರ ಪತ್ನಿಯನ್ನು ಕೊಲೆ ಮಾಡಲು ಮುಂದಾಗಿದ್ದಾನೆ. ಇದನ್ನೂ ಓದಿ:RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

    ಪ್ರತ್ಯಕ್ಷದರ್ಶಿಗಳು ತಿಳಿಸಿರುವ ಪ್ರಕಾರ, ತರಕಾರಿ ಮಾರುತ್ತಾ ಗಾಡಿಯ ಬಳಿ ಕುಳಿತಿದ್ದ ಹೆಂಡತಿಯ ಪಕ್ಕದಲ್ಲೇ ಕುಳಿತ ಆಕೆಯ ಗಂಡ ತನಗಾಗಿ ಒಂದು ಸಿಗರೇಟ್ ತಂದುಕೊಡುವಂತೆ ಕೇಳಿದ್ದ. ಆಕೆ ಸಿಗರೇಟ್ ತಂದು ಕೊಟ್ಟಾಗ ಅದನ್ನು ಬಾಯಿಗಿಟ್ಟುಕೊಂಡ ಆತ ಎದ್ದು ನಿಂತವನೇ ತಲೆ ಸುತ್ತುಬಂದಂತೆ ನಟಿಸಿ ಕೆಳಗೆ ಬೀಳುವವನಿದ್ದ. ಆಗ ಎದ್ದು ನಿಂತ ಆತನ ಹೆಂಡತಿಯನ್ನು ಜೋರಾಗಿ ತಬ್ಬಿಕೊಂಡ ಕೂಡಲೇ ಬಾಂಬ್ ಸ್ಫೋಟವಾಗಿತ್ತು. ಸುತ್ತಮುತ್ತಲಿದ್ದವರು ನೋಡನೋಡುತ್ತಿದ್ದಂತೆಯೇ ಅವರಿಬ್ಬರ ದೇಹ ಛಿದ್ರವಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಪಿಡಿಒನಿಂದ ರಾಷ್ಟ್ರಪತಿವರೆಗೆ RSS ಕಾರ್ಯಕರ್ತರೇ ಇರೋದು- ಹೆಚ್‍ಡಿಕೆಗೆ ಸುನೀ

    ಈ ಘಟನೆ ಬಳಿಕ ಅವರ ಮಗಳು ನಾಪತ್ತೆಯಾಗಿದ್ದಾಳೆ. ಬಾಂಬ್ ತಯಾರಿಸಲು ಬಳಸುವ ಜಿಲೆಟಿನ್ ಅನ್ನು ಬಟ್ಟೆಯೊಳಗೆ ಇಟ್ಟುಕೊಂಡಿದ್ದ ಗಂಡ ತಾನೂ ಸತ್ತು ಹೆಂಡತಿಯನ್ನೂ ಕೊಂದಿದ್ದಾನೆ.

  • ಕಾರ್ ಸ್ಫೋಟ ಪ್ರಕರಣ, ಕ್ವಾರಿಯಲ್ಲಿ ಜಿಲೆಟಿನ್ ಬಳಸ್ತಿರಲಿಲ್ಲ: ಎಸ್‍ಪಿ ಗಿರೀಶ್

    ಕಾರ್ ಸ್ಫೋಟ ಪ್ರಕರಣ, ಕ್ವಾರಿಯಲ್ಲಿ ಜಿಲೆಟಿನ್ ಬಳಸ್ತಿರಲಿಲ್ಲ: ಎಸ್‍ಪಿ ಗಿರೀಶ್

    ಬೆಂಗಳೂರು: ಶಿವಮೊಗ್ಗದ ಹುಣಸೋಡು ಮತ್ತು ಚಿಕ್ಕಬಳ್ಳಾಪುರದ ಗುಡಿಬಂಡೆ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಸ್ಫೋಟ ಸಂಭವಿಸಿದೆ. ಕನಕಪುರ ತಾಲೂಕಿನ ಸಂಗಮ ರಸ್ತೆಯ ಮರಳೇಗವಿ ಮಠದ ಕಲ್ಲು ಕ್ವಾರಿ ಬಳಿ ಕಾರ್ ಸ್ಫೋಟಗೊಂಡು ವ್ಯಕ್ತಿಯೊಬ್ಬ ಛಿದ್ರ ಛಿದ್ರವಾಗಿ ಸಾವನ್ನಪ್ಪಿದಾನೆ. ಆದರೆ ಕ್ವಾರಿಯಲ್ಲಿ ಜಿಲೆಟಿನ್ ಬಳಸುತ್ತಿರಲಿಲ್ಲ ಎಂದು ಅಲ್ಲಿನ ಎಸ್‍ಪಿ ಗಿರೀಶ್ ಹೇಳಿಕೆ ನೀಡಿದ್ದಾರೆ.

    ಕನಕಪುರದ ಮಹೇಶ್ ಎಂಬವರು ಸಾವನ್ನಪ್ಪಿರುವ ದುರ್ದೈವಿ. ಮರಳೇಗವಿ ಮಠದ ಕ್ವಾರಿಯಲ್ಲಿ ಮಹೇಶ್ ಅವರು ಕ್ವಾರಿಗೆ ಕಬ್ಬಿಣದ, ಸಲಕರಣೆಗಳನ್ನು ಸಾಗಿಸುವ ಕೆಲಸ ಮಾಡಿಕೊಂಡಿದ್ದರು. ಯಾವ ಕಾರಣಕ್ಕೆ ಕಾರು ಸ್ಫೋಟವಾಗಿದೆ ಅನ್ನೋದು ಗೊತ್ತಾಗಿಲ್ಲ. ಆದರೆ ಮಠದ ಕ್ವಾರಿಯಲ್ಲಿ ಜಿಲೆಟಿನ್ ಬಳಸುತ್ತಿರಲಿಲ್ಲ ಎಂದು ಎಸ್‍ಪಿ ಗಿರೀಶ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾಬೂಲ್‍ನಿಂದ ಭಾರತೀಯರ ಕರೆತರಲು ಕಸರತ್ತು

    ಕ್ವಾರಿಯಲ್ಲಿ ಕಲ್ಲು ಕಟ್ ಮಾಡುವ ಕೆಲಸ ಮಾಡಲಾಗುತ್ತಿದೆ. ಕಲ್ಲು ಕಟ್ ಮಾಡಲು ಜಿಲೆಟಿನ್ ಬೇಕಾಗಿಲ್ಲ. ಕ್ವಾರಿಯಿಂದ ಎರಡು ಕಿಮೀ ದೂರದಲ್ಲಿ ಕಾರು ಸ್ಫೋಟವಾಗಿದೆ. ಕ್ವಾರಿಯಿಂದ ವಾಪಸ್ ಎರಡು ಕಿಮೀ ದೂರದವರೆಗೆ ಮಹೇಶ್ ಕಾರನ್ನು ಓಡಿಸಿಕೊಂಡು ಹೋಗಿದ್ದಾರೆ, ಆ ಬಳಿಕ ಕಾರು ಸ್ಫೋಟವಾಗಿದ್ದು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಸ್ಫೋಟದ ರಭಸಕ್ಕೆ ಮಹೇಶ್ ಅವರ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿದ್ದು, ಘಟನಾ ಸ್ಥಳಕ್ಕೆ ಬಾಂಬ್ ಸ್ಕ್ಯಾಡ್ ಕರೆಸಿ ಪರಿಶೀಲನೆ ಮಾಡುವ ಕೆಲಸ ಮಾಡಲಾಗುತ್ತಿದೆ. ಅವರ ತನಿಖೆಯ ಬಳಿಕ ಸ್ಫೋಟದ ಕಾರಣ ತಿಳಿಯಲಿದೆ.ಈ ನಡುವೆ ಕಾರ್ ನಲ್ಲಿ ಜಿಲೆಟಿನ್ ಇತ್ತಾ, ಇಲ್ವಾ ಅನ್ನೋದು ಸದ್ಯಕ್ಕೆ ಗೊತ್ತಾಗಿಲ್ಲ. ಈ ಬಗ್ಗೆ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ: ಅರವಿಂದ್ ಕೇಜ್ರಿವಾಲ್

  • ಚಾಕೇನಹಳ್ಳಿ ಸ್ಫೋಟ ಪ್ರಕರಣ- ಸಚಿವ, ಸಂಸದ, ಶಾಸಕರು ಸ್ಥಳಕ್ಕೆ ಭೇಟಿ, ಪರಿಶೀಲನೆ

    ಚಾಕೇನಹಳ್ಳಿ ಸ್ಫೋಟ ಪ್ರಕರಣ- ಸಚಿವ, ಸಂಸದ, ಶಾಸಕರು ಸ್ಥಳಕ್ಕೆ ಭೇಟಿ, ಪರಿಶೀಲನೆ

    – ಘಟನೆಯಲ್ಲಿ ಓರ್ವ ಸಾವು, ಇಬ್ಬರಿಗೆ ತೀವ್ರ ಗಾಯ

    ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿಯಲ್ಲಿ ಸ್ಪೋಟಕ ದುರ್ಘಟನೆ ಪ್ರಕರಣ ನಡೆದ ಸ್ಥಳಕ್ಕೆ ಇಂದು ಉಸ್ತುವಾರಿ ಸಚಿವ ಗೋಪಾಲಯ್ಯ, ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಮಾಹಿತಿ ಪಡೆದ ಸಚಿವರು ಹಾಗೂ ಶಾಸಕರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬರವಸೆ ನೀಡಿದರು.

    ಚಾಕೇನಹಳ್ಳಿಯಲ್ಲಿ ಭಾನುವಾರ ಸ್ಫೋಟಕ ತುಂಬಿದ ಗೋಡೌನ್ ಬಳಿ ಸ್ಫೋಟ ಸಂಭವಿಸಿತ್ತು. ಪ್ರಕರಣದಲ್ಲಿ ಸಂಪತ್ ಸಾವನ್ನಪ್ಪಿ, ನಟರಾಜ್ ಹಾಗೂ ರವಿ ಗಂಭೀರ ಸ್ಥಿತಿ ತಲುಪಿದ್ದಾರೆ. ಇಂದು ಈ ಘಟನಾ ಸ್ಥಳಕ್ಕೆ ಹಾಸನ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸ್ಪೋಟಕ ಗೋಡೌನ್ ದುರ್ಗಾಂಬಾ ಎಂಟರ್ ಪ್ರೈಸಸ್ ಹೆಸರಿನಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.

    ಪರಿಶೀಲನೆ ಬಳಿಕ ಮಾತನಾಡಿದ ಪ್ರಜ್ವಲ್ ರೇವಣ್ಣ, ಸ್ಫೋಟಕದ ಗೋಡೌನ್ ನ್ನು ಬೇರೆಡೆ ಸ್ಥಳಾಂತರಿಸಬೇಕು. ಹೊಲ, ಹಳ್ಳಿ ಸಮೀಪ ಇರುವ ಕಾರಣ ಲೈಸೆನ್ಸ್ ಇದ್ದರೂ ಇಂತಹ ಸ್ಫೋಟಕ ಗೋಡೌನ್ ಇಲ್ಲಿ ಇರುವುದು ಸೂಕ್ತ ಅಲ್ಲ. ಘಟನೆ ಹೇಗೆ ನಡೆದಿದೆ ಎನ್ನುವ ಬಗ್ಗೆ ಈಗಲೇ ಮಾತನಾಡುವುದು ಸೂಕ್ತ ಅಲ್ಲ. ಏನೇ ಆದರೂ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಸ್ಫೋಟಕ ಗೋಡೌನ್ ಮಾಲೀಕ ನಾಗೇಶ್ ನಾಪತ್ತೆಯಾಗಿದ್ದಾನೆ ಎಂದು ಸಂಸದ ಪ್ರಜ್ವಲ್ ಹೇಳಿದರು.

    ಇಲ್ಲಿ ಸ್ಫೋಟಕ ಗೋಡೌನ್ ಇರೋದೆ ನನಗೆ ತಿಳಿದಿರಲಿಲ್ಲ. ಕೆಲವಡೆ 30 ಅಡಿ ವರೆಗೆ ರಿಗ್ ತೋಡಿ ಸ್ಫೋಟಕ ಇಡುತ್ತಾರೆ. ಈ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದಿದ್ದೆ. ಎಲ್ಲ ಕಲ್ಲು ಕ್ವಾರಿಗಳ ಡ್ರೋನ್ ಸರ್ವೇ ನಡೆಯಬೇಂದು ಪತ್ರ ಕೂಡ ಬರೆದಿದ್ದೇನೆ. ನನ್ನ ಕ್ಷೇತ್ರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಮೃತರ ಕುಟುಂಬಕ್ಕೆ ಸರ್ಕಾರ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

    ಪ್ರಕರಣದ ನಂತರ ಜಿಲೆಟಿನ್ ಸಂಗ್ರಹ ಗೋಡೌನ್ ಮಾಲೀಕ ನಾಗೇಶ್ ನಾಪತ್ತೆಯಾಗಿದ್ದಾನೆ. ತಮಿಳುನಾಡಿನಿಂದ ಇಲ್ಲಿಗೆ ಸ್ಪೋಟಕ ತರಲಾಗಿದ್ದು, ರಸೀದಿಗಳು ಇವೆ ಎಂದು ಸಚಿವರು ಅಧಿಕೃತ ಹೇಳಿಕೆ ನೀಡಿದ್ದಾರೆ. ಆದರೆ ಡಿಟೋನೇಟರ್ ಸ್ಫೋಟದಿಂದಲೇ ಈಘಟನೆ ನಡೆದಿದ್ದು, ಈ ಸ್ಪೋಟಕಗಳನ್ನು ಸಾಗಿಸುವ ಕ್ರಮದಲ್ಲಿ ತಪ್ಪಾಗಿರೋದು ಕಂಡುಬಂದಿದೆ. ಯಾರೇ ಆದರೂ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.

    ಈ ಸ್ಫೋಟಕ ಗೋಡೌನ್ ಗೆ ಲೈಸೆನ್ಸ್ ಇದ್ದರೂ ಜಿಲೆಟಿನ್ ಸಾಗಿಸುವಾಗ ತೆಗೆದುಕೊಳ್ಳಬೇಕಾದ ಜಾಗ್ರತಾ ಕ್ರಮ ವಹಿಸದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನೆಯಲ್ಲಿ ತೀವ್ರಗಾಯಗೊಂಡ ರವಿ ಹಾಗೂ ನಟರಾಜ್ ಕೂಡ ಜೀವನ್ಮರಣ ಹೋರಾಟದಲ್ಲಿದ್ದಾರೆ.

  • ಜಿಲೆಟಿನ್ ರೀತಿಯ ವಸ್ತು ಸ್ಫೋಟ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಜಿಲೆಟಿನ್ ರೀತಿಯ ವಸ್ತು ಸ್ಫೋಟ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    – ಸ್ಫೋಟದ ತೀವ್ರತೆಗೆ 300 ಮೀ. ಹಾರಿದ ವ್ಯಕ್ತಿಯ ದೇಹ
    – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಪೋಟಕ

    ಹಾಸನ: ಸ್ಫೋಟಕ ವಸ್ತುಗಳಿಂದಾಗಿ ರಾಜ್ಯದಲ್ಲಿ ಎಷ್ಟೆಲ್ಲ ಅನಾಹುತ ಸಂಭವಿಸಿದರೂ ಜನ, ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಯಲ್ಲಿ ಜಿಲೆಟಿನ್ ರೀತಿಯ ಸ್ಫೋಟಕ ಸಿಡಿದು ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

    ಸ್ಫೋಟಕ ವಸ್ತುಗಳನ್ನು ಅನ್‍ಲೋಡ್ ಮಾಡುವಾಗ ಘಟನೆ ಸಂಭವಿಸಿದೆ. ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಚಾಕೇನಹಳ್ಳಿ ಗ್ರಾಮದ ಸಮೀಪವೇ ಸ್ಫೋಟಕಗಳ ಗೋಡೋನ್ ಇದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯ ದೇಹ ಮುನ್ನೂರು ಮೀಟರ್ ಹಾರಿ ಹೋಗಿದೆ.

    ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಆಗಮಿಸಿದ್ದು, ಗೋಡೋನ್‍ನಲ್ಲಿ ಜಿಲೆಟಿನ್ ಕಡ್ಡಿ ಸೇರಿದಂತೆ ಇತರೆ ಸ್ಫೋಟಕ ವಸ್ತುಗಳು ತುಂಬಿವೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಎಎಸ್‍ಪಿ ನಂದಿನಿ ಭೇಟಿ ನೀಡಿದ್ದಾರೆ.

    ಚಾಕೇನಹಳ್ಳಿಕಟ್ಟೆ ಸುತ್ತ ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಲಾಗಿತ್ತು. ಆದರೂ ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ.

    ಮೃತ ವ್ಯಕ್ತಿಯನ್ನು ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

  • ಸ್ಟೋನ್ ಕ್ರಶರ್ ಮೇಲೆ ಪೊಲೀಸ್ ದಾಳಿ – 200 ಕಿಲೋ ಜಿಲೆಟಿನ್ ವಶಕ್ಕೆ

    ಸ್ಟೋನ್ ಕ್ರಶರ್ ಮೇಲೆ ಪೊಲೀಸ್ ದಾಳಿ – 200 ಕಿಲೋ ಜಿಲೆಟಿನ್ ವಶಕ್ಕೆ

    ಧಾರವಾಡ: ಸ್ಟೋನ್ ಕ್ರಶರ್ ಮೇಲೆ ದಾಳಿ ಮಾಡಿದ ಧಾರವಾಡ ಜಿಲ್ಲಾ ಪೊಲೀಸರು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಕಿಲೋ ಜಿಲೆಟಿನ್ ಕಡ್ಡಿ ವಶಕ್ಕೆ ಪಡೆದು ಕ್ರಷರ್ ಮಾಲಿಕರ ಮೇಲೆ ಕೇಸ್ ದಾಖಲಿಸಿಕೊಂಡಿದ್ದಾರೆ.

    ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ದಯಾನಂದ ಮಾಸೂರ ಎಂಬುವವರಿಗೆ ಸೇರಿದ ಕ್ರಶರ್ ಮೇಲೆ ದಾಳಿ ಮಾಡಿದ್ದ ಪೊಲೀಸರು, ಸ್ಥಳದಿಂದ 1650 ಜಿಲೆಟಿನ್ ಕಡ್ಡಿಗಳು ಹಾಗೂ 700 ಎಲೆಕ್ಟ್ರಾನಿಕ್ ಡಿಟೋನೇಟರ್‍ ಗಳನ್ನು ವಶಪಡಿಸಿಕೊಂಡಿದ್ದಾರೆ.

    ಕ್ರಶರ್ ಇರುವ ಸ್ಥಳದಲ್ಲಿ ಈ ಜಿಲೆಟಿನ್ ಕಡ್ಡಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದಡಿ ಮಾಲೀಕ ಸೇರಿ ಮೂರು ಜನರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿದ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ್, ಲೈಸನ್ಸ್ ಇದ್ದವರು ಮಾತ್ರ ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹ ಮಾಡಿ ಬ್ಲಾಸ್ಟ್ ಮಾಡಬಹುದು. ಆದರೆ ಇಲ್ಲಿ ಲೈಸನ್ಸ್ ಇಲ್ಲದೆ ಅಕ್ರಮವಾಗಿ ಈ ರೀತಿ ಇಟ್ಟಿರುವುದರಿಂದಾಗಿ ಕ್ರಶರ್ ಮಾಲಿಕ, ಜಿಲೆಟಿನ್ ಪೂರೈಕೆ ಮಾಡಿದವರು ಹಾಗೂ ಕ್ರಶರ್‍ ನಲ್ಲಿ ಕೆಲಸ ಮಾಡುವವರ ಮೇಲೆ ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದರು.

  • ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸ

    ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸ

    ತುಮಕೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತ ಮಾಸುವ ಮುನ್ನವೇ ತುಮಕೂರಿನಲ್ಲಿ ಜಿಲೆಟಿನ್ ಸ್ಫೋಟಗೊಂಡು ಮನೆ ಧ್ವಂಸವಾದ ಘಟನೆ ನಡೆದಿದೆ.

    ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಲಕ್ಷ್ಮೀಕಾಂತ್ ಎಂಬವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಲಕ್ಷ್ಮೀಕಾಂತ್ ಅವರು ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

    ಬಿಸಿಲಿನ ತಾಪಕ್ಕೆ ಸೀಟಿನ ಮನೆಯಲ್ಲಿ ಇಟ್ಟಿದ್ದ ಜಿಲೆಟಿನ್ ಕಡ್ಡಿ ಸ್ಫೋಟಗೊಂಡಿದೆ. ಪರಿಣಾಮ ಮನೆ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ಹೊರಗಿದ್ದ ಸುವರ್ಣಮ್ಮ ಎಂಬವರಿಗೆ ಸಿಮೆಂಟ್ ಶೀಟು ತಗುಲಿ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದಂತೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಈ ಸಂಬಂಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಕ್ರಮವಾಗಿ ಸಂಗ್ರಹಿಸಿದ್ದ 1,200 ಜಿಲೆಟಿನ್ ಟ್ಯೂಬ್ ವಶ

    ಅಕ್ರಮವಾಗಿ ಸಂಗ್ರಹಿಸಿದ್ದ 1,200 ಜಿಲೆಟಿನ್ ಟ್ಯೂಬ್ ವಶ

    ಹಾಸನ: ಶಿವಮೊಗ್ಗ ಕ್ವಾರೆಯೊಂದರಲ್ಲಿ ನಡೆದ ಸ್ಫೋಟದ ನಂತರ ಹಾಸನ ಜಿಲ್ಲೆಯ ಪೊಲೀಸರು ಎಚ್ಚೆತ್ತಿದ್ದಾರೆ. ಐ.ಎಸ್.ಡಿ. ಹಾಗೂ ಗೊರೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಜಿಲೆಟಿನ್ ಹಾಗೂ ಇತರೆ ವಸ್ತಗಳನ್ನು ವಶಪಡಿಸಿಕೊಂಡಿದ್ದಾರೆ.

    ಹಾಸನ ತಾಲೂಕಿನ ಕಟ್ಟಾಯ ಹೋಬಳಿ ಇಂದ್ರಾಪುರ ಗ್ರಾಮದ ಬಳಿಯಿರುವ ಕ್ವಾರೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 1,200 ಜಿಲೆಟಿನ್ ಟ್ಯೂಬ್, 2 ಡೀಟೇನೆಟರ್, 10 ಕೆಜಿ ಅಮೋನಿಯಂ ನೈಟ್ರೆಟ್, ಕನೆಕ್ಟಿಂಗ್ ವೈರ್ ಗಳು ವಶಪಡಿಸಿಕೊಳ್ಳಲಾಗಿದೆ. ಹನುಮಂತಪುರದ ಮಂಜೇಗೌಡ ಎಂಬವರಿಗೆ ಸೇರಿದ ಕ್ವಾರೆ ಇದಾಗಿದ್ದು ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಐ.ಎಸ್.ಡಿ. ಮೈಸೂರು ವಿಭಾಗದ ಡಿ.ಎಸ್.ಪಿ. ಪ್ರಭಾಕರ್ ರಾವ್ ಸಿಂದೆ, ಹಾಸನ-ಕೊಡಗು ಪಿಐ ಗೋಪಾಲಕೃಷ್ಣ, ಹಾಸನ ವೃತ್ತ ನಿರೀಕ್ಷಕ ಸುರೇಶ್, ಗೊರೂರು ಠಾಣೆ ಪಿ.ಎಸ್.ಐ. ಸಾಗರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

  • ಶಿವಮೊಗ್ಗದ ಹುಣಸೋಡು ಬಳಿ ಸ್ಫೋಟ ಪ್ರಕರಣ: ಕ್ರಷರ್ ಮಾಲೀಕ ಸುಧಾಕರ್ ಅರೆಸ್ಟ್

    ಶಿವಮೊಗ್ಗದ ಹುಣಸೋಡು ಬಳಿ ಸ್ಫೋಟ ಪ್ರಕರಣ: ಕ್ರಷರ್ ಮಾಲೀಕ ಸುಧಾಕರ್ ಅರೆಸ್ಟ್

    ಶಿವಮೊಗ್ಗ: ಜಿಲ್ಲೆಯ ಹಣಸೋಡು ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕ್ರಷರ್ ಮಾಲೀಕ ಸುಧಾಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ಶಿವಮೊಗ್ಗ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಸುಧಾಕರ್ ನನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಗಣಿಗಾರಿಕೆಗೆ ಭೂಮಿ ಕೊಟ್ಟಿರುವ ಅನಿಲ್ ಕುಲಕರ್ಣಿ ಯನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಶಿವಮೊಗ್ಗದ ರವೀಂದ್ರ ನಗರದ ನಿವಾಸಿ ಸುಧಾಕರ್ ಒಡೆತನದ ಕಲ್ಲನಾಗೂರಿನಲ್ಲಿರುವ ಬಿವಿಎಸ್ ಸ್ಟೋನ್ ಕ್ರಷರ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೂರು ವರ್ಷದ ಮಟ್ಟಿಗೆ ಜಿಲ್ಲಾಡಳಿತ ಪರವಾನಗಿ ನೀಡಿತ್ತು. ಈ ವೇಳೆ ಸುರಕ್ಷಿತ ವಲಯದ ಸುತ್ತ 100 ಮೀಟರ್ ಅಂತರದಲ್ಲಿ ಯಾವುದೇ ಚಟುವಟಿಕೆ ಕೈಗೊಳ್ಳಲ್ಲ ಎಂಬ ಷರತ್ತಿಗೆ ಒಪ್ಪಿಗೆ ಸೂಚಿಸಿ ಸುಧಾಕರ್ ಸಹಿ ಕೂಡ ಹಾಕಿದ್ದ.

    ಆ ಬಳಿಕ ಸ್ಫೋಟಕಗಳ ಬಗ್ಗೆ ಸ್ಥಳೀಯರು ಹತ್ತಾರು ಬಾರಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಜಿಲ್ಲಾಡಳಿತ ಹಾಗೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಇದೀಗ ಸ್ಥಳೀಯ ನಿವಾಸಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ನಿನ್ನೆ ರಾತ್ರಿ 10.30ರ ವೇಳೆ ಭಾರೀ ಶಬ್ದ ಕೇಳಿದ ಜನ ಭಯಭೀತರಾಗಿದ್ದರು. ಬಳಿಕ ಅದು ಜಲ್ಲಿ ಕ್ರಷರ್‍ನಲ್ಲಿ ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡಿರುವುದಾಗಿ ಬಯಲಾಗಿದೆ. ಈ ದುರ್ಘಟನೆಯಲ್ಲಿ ಕಾರ್ಮಿಕರು ಮೃತಪಟ್ಟಿದ್ದು, ಸದ್ಯ 7 ಮೃತದೇಹಗಳು ಪತ್ತೆಯಾಗಿವೆ. ಜಿಲೆಟಿನ್ ತುಂಬಿದ ಲಾರಿ ಸ್ಫೋಟದ ತೀವ್ರತೆಗೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿ ಪೀಸ್ ಪೀಸ್ ಆಗಿದೆ. ಕಿಲೋಮೀಟರ್ ದೂರದವರೆಗೂ ಲಾರಿಯ ಬಿಡಿಭಾಗಗಳು ಹಾರಿವೆ.

    ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿದ್ದು, ಒಂದೊಂದು ಅಂಗಾಂಗ ಒಂದೊಂದು ಕಡೆ ಸಿಕ್ಕಿದೆ. ಕ್ರಷರ್ ಸುತ್ತಮುತ್ತ ಇದ್ದ ಬಹುತೇಕ ಮರಗಳು ನಾಶವಾಗಿವೆ. 40 ಕಿಲೋಮೀಟರ್ ದೂರದವರೆಗೂ ಶಬ್ದ ಕೇಳಿದೆ. ಸ್ಫೋಟದ ಸ್ಥಳದಲ್ಲಿ ಕೆಟ್ಟ ವಾಸನೆ ಬರುತ್ತಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಘಟನೆಯಿಂದ ಭಾರೀ ಹಾನಿ ಸಂಭವಿಸಿದೆ.

  • ಶಿವಮೊಗ್ಗ ಘೋರ ದುರಂತ – ನರೇಂದ್ರ ಮೋದಿ ಸಂತಾಪ

    ಶಿವಮೊಗ್ಗ ಘೋರ ದುರಂತ – ನರೇಂದ್ರ ಮೋದಿ ಸಂತಾಪ

    ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಇರುವ ಕ್ರಷರ್ ನಲ್ಲಿ ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡು ಹಲವು ಕಾರ್ಮಿಕರು ಬಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.

    ಈ ಸಂಬಂಧ ಪಿಎಂಓ ಇಂಡಿಯಾ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದು, ಶಿವಮೊಗ್ಗದಲ್ಲಿ ಘನಘೋರ ದುರಂತ ಸಂಭವಿಸಿದ್ದು, ಇದರಿಂದ ನೋವಾಗಿದೆ. ಮೃತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ, ಇನ್ನು ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳುವಂತಾಗಲಿ ಎಂದು ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ನೆರವು ನೀಡುತ್ತದೆ ಎಂದು ಬರೆದುಕೊಳ್ಳಲಾಗಿದೆ.

    ಸಿಎಂ ತವರು ಜಿಲ್ಲೆಯಲ್ಲಿ ಅಕ್ರಮ ಕ್ರಷರ್ ಮಾಫಿಯಾ ನಡೆಯುತ್ತಿರುವುದು ಬಯಲಾಗಿದೆ. ನಿನ್ನೆ ರಾತ್ರಿ 10.30ರ ಸಮಯಕ್ಕೆ ಏಕಾಏಕಿ ಭಾರೀ ಶಬ್ದಕ್ಕೆ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದಾರೆ. ಬಳಿಕ ಇದು ಅಕ್ರಮ ಕ್ರಷರ್ ನಲ್ಲಿ ಜಿಲೆಟಿನ್ ಕಡ್ಡಿಗಳು ಒಮ್ಮೆಲೆ ಸ್ಫೋಟಗೊಂಡಿದ್ದು ಎಂಬುದಾಗಿ ತಿಳಿದುಬಂದಿದೆ.

    ಸ್ಫೋಟದ ತೀವ್ರತೆಗೆ ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿದ್ದು, ರುಂಡ ಮುಂಡ ಬೇರೆ ಬೇರೆಯಾಗಿ ಎಲ್ಲೆಂದರಲ್ಲಿ ಬಿದ್ದಿವೆ. ಅಂಚುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಫೋಟಗೊಂಡ ಸ್ಥಳದ ಸುತ್ತಮುತ್ತ ಮರಗಿಡಗಳು ಸಂಪೂರ್ಣ ಹಾನಿಗೊಳಗಾಗಿವೆ. ಸ್ಫೋಟದಿಂದ ಲಾರಿಯ ಬಿಡಿಭಾಗಗಳು ನೂರಾರು ಮೀಟರ್ ದೂರಕ್ಕೆ ಹಾರಿವೆ.

     

  • ಅಕ್ರಮ ಕ್ರಷರ್ ನಿಲ್ಲಿಸಿ, ನಮ್ಮನ್ನು ಕಾಪಾಡಿ- ಶಿವಮೊಗ್ಗದ ಹುಣಸೋಡು ಜನರ ಆಕ್ರೋಶ ಸ್ಫೋಟ

    ಅಕ್ರಮ ಕ್ರಷರ್ ನಿಲ್ಲಿಸಿ, ನಮ್ಮನ್ನು ಕಾಪಾಡಿ- ಶಿವಮೊಗ್ಗದ ಹುಣಸೋಡು ಜನರ ಆಕ್ರೋಶ ಸ್ಫೋಟ

    – ಇದ್ರಲ್ಲಿ ಪ್ರಭಾವಿಗಳ ಕೈವಾಡ ಇದೆ

    ಶಿವಮೊಗ್ಗ: ಸಿಎಂ ತವರು ಜಿಲ್ಲೆಯಲ್ಲಿ ಅಕ್ರಮ ಕ್ರಷರ್ ಮಾಫಿಯಾ ನಡೆಯುತ್ತಿರುವುದು ಬಯಲಾಗಿದೆ. ನಿನ್ನೆ ರಾತ್ರಿ 10.30ರ ಸಮಯಕ್ಕೆ ಏಕಾಏಕಿ ಭಾರೀ ಶಬ್ದಕ್ಕೆ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದಾರೆ. ಬಳಿಕ ಇದು ಅಕ್ರಮ ಕ್ರಷರ್ ನಲ್ಲಿ ಜಿಲೆಟಿನ್ ಕಡ್ಡಿಗಳು ಒಮ್ಮೆಲೆ ಸ್ಫೋಟಗೊಂಡಿದ್ದು ಎಂಬುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ಹುಣಸೋಡು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಕ್ರಮ ಕ್ರಷರ್ ನಿಲ್ಲಿಸಿ, ನಮ್ಮನ್ನು ಕಾಪಾಡಿ. ನಮ್ಮನ್ನು ಹಾಗೂ ನಮ್ಮ ಬದುಕನ್ನು ಕಾಪಾಡಿ. ಇದರಲ್ಲಿ ಪ್ರಭಾವಿಗಳ ಕೈವಾಡ ಇದೆ. ನಮ್ಮನ್ನು ಇಲ್ಲೆಲ್ಲಿಗೂ ಬಿಟ್ಟುಕೊಳ್ಳಲ್ಲ ಯಾಕೆ..? ಸತ್ತವರು ಮನುಷ್ಯರಲ್ವಾ ಎಂದು ಪ್ರಶ್ನಿಸುವ ಮೂಲಕ ಪೊಲೀಸರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ.

    ಶಿವಮೊಗ್ಗದ ಸುತ್ತಮುತ್ತ ಪ್ರದೇಶಗಳಾದ ಅಬ್ಬಲಗೆರೆ ಪಂಚಾಯತಿ, ಕಲ್ಲುಗಂಗೂರು ಗ್ರಾಮ, ಹುಣಸೋಡು, ಬಸವನಗಂಗೂರು, ಮತ್ತೋಡು, ಗೆಜ್ಜೆನಹಳ್ಳಿ ಎಲ್ಲಿ ನೊಡಿದ್ರೂ ಅಕ್ರಮ ಕ್ರಷರ್‍ಗಳ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಇಲ್ಲಿನ ಇಡೀ ಪರಿಸರ ಸಂಪೂರ್ಣ ಸರ್ವನಾಶವಾಗಿದೆ. ಸದ್ಯ ನಡೆದ ಈ ಘನಘೋರ ದುರಂತಕ್ಕೆ ಯಾರು ಹೊಣೆ? ಜಲ್ಲಿ ಕ್ರಷರ್‍ಗಳ ಹಿಂದೆ ಜಿಲ್ಲೆಯ ಪ್ರಭಾವಿಗಳ ಪಾತ್ರವಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಘಟನೆಯಲ್ಲಿ 15 ಮಂದಿ ಕಾರ್ಮಿಕರು ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ದುರಂತ ಸಂಬಂಧ ನಿನ್ನೆ ರಾತ್ರಿ ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ಪ್ರತಿಕ್ರಿಯಿಸಿ, ಶಿವಮೊಗ್ಗದ ಅಬಲಗೇರೆ ಬಳಿ ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ಜಿಲೆಟಿನ್ ಕಡ್ಡಿ ತುಂಬಿದ ಲಾರಿ ಸ್ಪೋಟ್ ಅಗಿರುವ ಬಗ್ಗೆ ಶಂಕೆಯಿದೆ. ಸದ್ಯಕ್ಕೆ ಲಾರಿಯೊಂದು ಸುಟ್ಟಿದೆ ಕೆಲವೂಂದು ಮೃತದೇಹಗಳು ಪತ್ತೆಯಾಗಿವೆ. ರಾತ್ರಿ ಸುಮಾರು 10-30ರ ವೇಳೆಗೆ ದೊಡ್ಡ ಶಬ್ದವೂಂದು ಕೇಳಿಬಂದಿದೆಯೆಂದು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು. ಈ ಹಿನ್ನೆಲೆ ಸ್ಥಳಕ್ಕೆ ಬಂದಿ ಪರಿಶೀಲನೆ ಮಾಡಿದ ಬಳಿಕ ನಮಗೆ ಇಷ್ಟೂ ಮಾಹಿತಿ ತಿಳಿದಿದೆ. ಸದ್ಯಕ್ಕೆ ಕತ್ತಲೆಯಾಗಿರುವ ಕಾರಣ ಯಾವುದರ ಬಗ್ಗೆ ನಿಖರ ಮಾಹಿತಿ ನೀಡಲು ಸಾಧ್ಯವಿಲ್ಲ. ನಾಳೆ ಬೆಂಗಳೂರಿನಿಂದ ವಿಧಿವಿಜ್ಞಾನ ತಂಡ ಹಾಗೂ ಸಿಆರ್‍ಎಫ್ ತಂಡ ಅಗಮಿಸಲಿದೆ. ಬಳಿಕ ವಷ್ಟೇ ಮಾಹಿತಿ ನೀಡಲು ಸಾಧ್ಯವೆಂದು ಹೇಳಿದ್ದರು.