Tag: General Elections 2024 India Elections 2024

  • ಚಾರ್ ಸೌ ಫಾರ್ ಗುರಿ – ಮೂರನೇ ಹಂತದ ಮತದಾನ ಬಿಜೆಪಿಗೆ ಎಷ್ಟು ಮುಖ್ಯ?

    ಚಾರ್ ಸೌ ಫಾರ್ ಗುರಿ – ಮೂರನೇ ಹಂತದ ಮತದಾನ ಬಿಜೆಪಿಗೆ ಎಷ್ಟು ಮುಖ್ಯ?

    ನವದೆಹಲಿ: ಲೋಕಸಭಾ ಚುನಾವಣೆಗೆ (Loksabha Elections2024) ಮೂರು ದಿನಗಳು ಮಾತ್ರ ಬಾಕಿ ಉಳಿದಿದ್ದು, ಕರ್ನಾಟಕ ಸೇರಿದಂತೆ 13 ರಾಜ್ಯಗಳ 95 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೂರನೇ ಹಂತದ ಮತದಾನ ಕೇಸರಿ ಪಡೆಗೆ ಅತಿ ಮುಖ್ಯವಾಗಿದ್ದು, ಚಾರ್ ಸೌ ಫಾರ್ ಗುರಿ ಹೊಂದಿರುವ ಬಿಜೆಪಿ ನಾಯಕರಿಗೆ ಇದು ನಿರ್ಣಾಯಕ ಹಂತವಾಗಿದೆ.

    ಮತ್ತೊಮ್ಮೆ ಮೋದಿ (Narendra Modi) ಸರ್ಕಾರ, ಚಾರ್ ಸೌ ಫಾರ್ ಎಂಬ ಘೋಷಣೆಯೊಂದಿಗೆ ಚುನಾವಣಾ ಕಣಕ್ಕಿಳಿದಿರುವ ಬಿಜೆಪಿ (BJP) ನಾಯಕರು ನಿರಂತರ ಪ್ರಚಾರ ಮಾಡುತ್ತಿದ್ದಾರೆ. ಹಗಲು ರಾತ್ರಿ ಎನ್ನದೇ ತಂತ್ರ ಹೆಣೆಯುತ್ತಿದ್ದಾರೆ. ಈಗಾಗಲೇ ಎರಡು ಹಂತದ ಮತದಾನ ಮುಕ್ತಾಯಗೊಂಡಿದ್ದು, ಮೂರನೇ ಹಂತದ ಮೇಲೆ ಬಿಜೆಪಿ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ: ಹುಬ್ಬಳ್ಳಿ ಕೇಸ್‌ ಉಲ್ಲೇಖಿಸಿ ಬಿಜೆಪಿ ಆಕ್ರೋಶ

    ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ 13 ರಾಜ್ಯಗಳ 95 ಕ್ಷೇತ್ರಗಳಲ್ಲಿ ಮೇ 7 ರಂದು ಮತದಾನ ನಡೆಯಲಿದೆ. ಈ ಮತದಾನ ಮೇಲೆ ಬಿಜೆಪಿ ಹೆಚ್ಚು ಕೇಂದ್ರಿಕರಿಸಿದೆ. ಈ 95 ಸ್ಥಾನಗಳಲ್ಲಿ 2009 ರಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿತ್ತು. 2014 ರಲ್ಲಿ ಇದು 67ಕ್ಕೆ ಏರಿತು. 2019 ರಲ್ಲಿ 72ಕ್ಕೆ ತಲುಪಿದೆ. ಇಷ್ಟು ಮಾತ್ರವಲ್ಲದೇ ಇಲ್ಲಿ ಪಕ್ಷದ ಮತಗಳ ಪಾಲು ಸಹ ನಿರಂತರವಾಗಿ ಏರಿಕೆಯಾಗುತ್ತಿದೆ. 78 ಸ್ಥಾನಗಳಲ್ಲಿ ಬಿಜೆಪಿ 40% ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದೆ. ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್ 2009 ರಲ್ಲಿ 27 ಸ್ಥಾನಗಳಿಂದ 2014 ರಲ್ಲಿ 9 ಮತ್ತು 2019 ರಲ್ಲಿ ಕೇವಲ ನಾಲ್ಕು ಸ್ಥಾನಗಳಿಗೆ ಕುಸಿತ ಕಂಡಿತ್ತು.

    ಮೂರನೇ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಕರ್ನಾಟಕ ಮತ್ತು ಗುಜರಾತ್ ನಿರ್ಣಾಯಕವಾಗಿದೆ. ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಕ್ಷೇತ್ರ ಹೆಚ್ಚಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಬಿಜೆಪಿ ನಾಯಕರ ಲೆಕ್ಕಚಾರದ ಪ್ರಕಾರ 95 ಕೇತ್ರಗಳ ಪೈಕಿ 42 ಕ್ಷೇತ್ರಗಳಲ್ಲಿ ಅತ್ಯಂತ ಬಲಿಷ್ಠವಾಗಿದೆ. ಹೀಗಾಗಿ ಬಾಕಿ ಕ್ಷೇತ್ರಗಳ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಜೆಪಿ ನಿರ್ಣಾಯಕ ಹೋರಾಟ ಮಾಡುತ್ತಿದೆ. ಹೆಚ್ಚುವರಿ ಸೀಟಿನ ನಿರೀಕ್ಷೆಗಳಿದ್ದರೂ ಕರ್ನಾಟಕ ಮತ್ತು ಮಹರಾಷ್ಟ್ರದಂತಹ ರಾಜ್ಯಗಳಲ್ಲಿ ಕಳೆದ ಬಾರಿ ಗೆದ್ದ ಕೆಲವು ಕ್ಷೇತ್ರಗಳನ್ನು ಈ ಬಾರಿ ಗೆಲ್ಲುವುದು ಸವಾಲಾಗಿದೆ. ಇದರಿಂದ ಹೆಚ್ಚಿನ ಸಾಧನೆಯಾಗದಿದ್ದರೂ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಲೆಕ್ಕಚಾರದಲ್ಲಿ ಬಿಜೆಪಿ ಇದೆ. ಈ ಹಂತದಲ್ಲಿ ಸಣ್ಣ ವ್ಯತ್ಯಾಸವಾದರೂ ಬಿಜೆಪಿಯ 400 ಗುರಿಗೆ ದೊಡ್ಡ ಹಿನ್ನಡೆಯಾಗಲಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಮನೆ ದೇವರು ಈಶ್ವರನ ಪ್ರಸಾದ ತಂದ ಅರ್ಚಕ

  • ಕಣದಿಂದ ಹಿಂದೆ ಸರಿಯಬೇಡಿ – ಈಶ್ವರಪ್ಪಗೆ ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ ಗೋಪಾಲ್ ಜೀ ಬೆಂಬಲ

    ಕಣದಿಂದ ಹಿಂದೆ ಸರಿಯಬೇಡಿ – ಈಶ್ವರಪ್ಪಗೆ ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ ಗೋಪಾಲ್ ಜೀ ಬೆಂಬಲ

    ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಶಿವಮೊಗ್ಗ  (Shivamogga) ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ರಾಮಮಂದಿರ ನಿರ್ಮಾಣ ಜವಾಬ್ದಾರಿ ಹೊತ್ತಿರುವ ಕರ್ನಾಟಕ ಮೂಲದ ಗೋಪಾಲ್ ಜೀಯವರು ಕರೆ ಮಾಡಿ ಮಾತಾಡಿದ್ದಾರೆ. ಈ ವೇಳೆ ಗೋಪಾಲ್ ಜೀಯವರು (Gopal Ji) ಕಣದಿಂದ ಹಿಂದೆ ಸರಿ ಬೇಡಿ ಎಂಬ ಸಲಹೆ ನೀಡಿದ್ದಾರೆ.

    ಚುನಾವಣೆಗೆ ಸ್ಪರ್ಧಿಸುವ ತೀರ್ಮಾನ ಮಾಡಿದ ಬಳಿಕ ದೇವಾಲಯಗಳಿಗೆ ಭೇಟಿ ಕೊಡುತ್ತಿರುವ ಈಶ್ವರಪ್ಪ, ಇಂದು ಬಿಳಕಿ ಮಠಕ್ಕೆ ತೆರಳಿದ್ದಾರೆ. ಈ ವೇಳೆ ಗೋಪಾಲ್ ಜೀಯವರ ಕರೆ ಬಂದಿದೆ. ಈ ವೇಳೆ, ಮಠಾಧೀಶರು ಹಾಗೂ ಹಿಂದುತ್ವದ ಕಾರ್ಯಕರ್ತರು ನನಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾವೇರಿ ಬೊಮ್ಮಾಯಿ ಸೋಲುತ್ತಾರೆ. ಇಲ್ಲಿ ರಾಘವೇಂದ್ರ ಸೋಲುತ್ತಾನೆ. ಯಡಿಯೂರಪ್ಪ ವಿರುದ್ಧ ಸಾಕಷ್ಟು ವಿರೋಧವಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ, ಗೋಪಾಲ್‌ ಜೀಯವರು ಈಶ್ವರಪ್ಪ ಸ್ಪರ್ಧೆಗೆ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ – ಕಾಂಗ್ರೆಸ್‌ನಿಂದ ಡಿವಿಎಸ್‌ ಸ್ಪರ್ಧೆ?

    ಬಳಿಕ ಈಶ್ವರಪ್ಪನವರು, ಗೆದ್ದು ಬಂದು ನೀವು ಇರುವ ಜಾಗ ಅಯೋಧ್ಯೆಗೆ ಬಂದು ಪ್ರಭು ಶ್ರೀರಾಮಚಂದ್ರನ ಅಶೀರ್ವಾದ ಪಡೆಯುತ್ತೇನೆ. ನಾನು ಇಂದು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ. ಭಾಗವಹಿಸಿದರೆ ಮೋದಿಯವರು ನನ್ನ ಎದುರು ರಾಘವೇಂದ್ರಗೆ ಮತ ಕೇಳ್ತಾರೆ. ನಾನು ಏನು ಮಾಡೋದು ಆಗ? ನಾನು ಆ ಕಾರ್ಯಕ್ರಮಕ್ಕೆ ತೊಂದರೆ ಕೊಡ್ಲಾ? ಗೆದ್ದು, ಬಳಿಕ ಮೋದಿಯವರನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಜಾ – ಕೂಡಲೇ ಜೈಲಾಧಿಕಾರಿಗಳ ಮುಂದೆ ಹಾಜರಾಗುವಂತೆ ಸುಪ್ರೀಂ ಆದೇಶ

  • ನಾವು ತ್ಯಾಗ ಮಾಡಿ ಬಂದವರು, ಲೋಕಸಭಾ ಟಿಕೆಟ್ ನನಗೆ ಕೊಡ್ಬೇಕು: ಬಿ.ಸಿ ಪಾಟೀಲ್

    ನಾವು ತ್ಯಾಗ ಮಾಡಿ ಬಂದವರು, ಲೋಕಸಭಾ ಟಿಕೆಟ್ ನನಗೆ ಕೊಡ್ಬೇಕು: ಬಿ.ಸಿ ಪಾಟೀಲ್

    – ಟಿಕೆಟ್ ಕೊಡದಿದ್ರೆ ನನಗೆ ನಂದೇ ಹಾದಿ ಇದೆ

    ಹಾವೇರಿ: ಈ ಕ್ಷೇತ್ರದ ಲೋಕಸಭಾ ಟಿಕೆಟ್ ನನಗೆ ಕೊಡಬೇಕು, ನಾವು ತ್ಯಾಗ ಮಾಡಿ ಬಂದವರು ಎಂದು ಮಾಜಿ ಸಚಿವ ಬಿಸಿ ಪಾಟೀಲ್ (BC Patil) ಹೇಳಿದ್ದಾರೆ.

    ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮನೆಯಲ್ಲಿ ಕೂತುಕೊಂಡಿದ್ದೇವೆ. ನಮಗೆ ಹೆದರಿಸೋದು ಬೆದರಿಸೋದು ಗೊತ್ತಿಲ್ಲ. ಸೈಲೆಂಟ್ ಆಗಿ ಇದ್ದೀವಿ ಎಂದರೆ ಅದು ನಮ್ಮ ದೌರ್ಬಲ್ಯ ಎಂದು ಭಾವಿಸಬಾರದು. ಈಗಾಗಲೇ ಬೊಮ್ಮಾಯಿ ಸಿಎಂ ಆಗಿದ್ದಾರೆ. ನಾನು ಹಾವೇರಿ (Haveri) ಹಾಗೂ ಗದಗ ಜಿಲ್ಲೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಕೊಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಮಾಜಿ ಕಾಂಗ್ರೆಸ್ ಶಾಸಕ ವಾಸು ಅನಾರೋಗ್ಯದಿಂದ ನಿಧನ

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra) ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಹಾಗೆಂದು ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ. ನನಗೆ ಕೊಡಬೇಕು ಎಂದು ವಾದ ಮಾಡುತ್ತಿದ್ದೇನೆ. ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾನಾಡುತ್ತೇನೆ. ನನಗೆ ನಂದೇ ಹಾದಿ ಇದೆ. ಹೆಬ್ಬಾರ್, ಎಸ್‍.ಟಿ ಸೋಮಶೇಖರ್ ಹಾದಿ ಬೇಕಾಗಿಲ್ಲ ಎಂದಿದ್ದಾರೆ.

    ಯಡಿಯೂರಪ್ಪನವರೇ ಕಾಂತೇಶ್ ಜೊತೆ ನಿಂತು ಗೆಲ್ಲಿಸಿಕೊಂಡು ಬರೋದಾಗಿ ಮಾತುಕೊಟ್ಟಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ, ಯಡಿಯೂರಪ್ಪನವರೇ ಆ ಮಾತು ಹೇಳಬೇಕಲ್ವಾ? ಅವರು ಹೇಳಿದರೆ ಆ ಪ್ರಕಾರ ನಡೆದುಕೊಳ್ಳಬೇಕಾಗುತ್ತೆ. ನಮಗೆ ಯಾವ ರೀತಿನೂ ಯಡಿಯೂರಪ್ಪ ಅವರು ಹೇಳಿಲ್ಲ. ನಾನು ಸೋತಿದ್ದೀನಿ, ಅವಕಾಶ ಕೊಡಿ ಗೆಲ್ತೀನಿ ಎಂದು ಕೇಳಿದ್ದೇನೆ. ಕಾಂತೇಶ್‍ಗೆ ಟಿಕೆಟ್ ಕೊಟ್ಟರೆ ವಿಚಾರ ಮಾಡುತ್ತೇನೆ. ಕಾಂತೇಶ್ ಅವರ ಬಗ್ಗೆ ಮಾತಾಡೋಕೆ ಹೋಗಲ್ಲ, ಕಾಂತೇಶ್‍ಗೂ ನನಗೂ ಸಂಬಂಧ ಇಲ್ಲ ಎಂದಿದ್ದಾರೆ.

    ನಾನು ಎಲ್ಲಾ ಹೇಳಿದರೆ ನಿಮಗೆ ರುಚಿ ಉಳಿಯಲ್ಲ. ನಾನು ಎಚ್ಚರಿಕೆ ಕೊಡುತ್ತಿಲ್ಲ. ಒಬ್ಬ ಗ್ರಾಮ ಪಂಚಾಯತಿ ಸದಸ್ಯ ತನ್ನ ಸ್ಥಾನ ತ್ಯಾಗ ಮಾಡಲ್ಲ. ನಾವು ತ್ಯಾಗ ಮಾಡಿದ್ದೇವೆ. ನಮಗೆ ಟಿಕೆಟ್ ಕೊಡುವುದರಲ್ಲಿ ನ್ಯಾಯ ಇದೆ. ನಮ್ಮ ತ್ಯಾಗದಿಂದ ಸರ್ಕಾರ ಬಂತು. ಇನ್ನೂ 2023ರಲ್ಲಿ ಬಿಜೆಪಿ ಸೋತಿದೆ. ನಾವೆಲ್ಲಾ ಸೋತಿದ್ದೇವೆ, ಈಗ ನಮ್ಮ ಹಿತವನ್ನೂ ಅವರು ಕಾಯಲಿ. ಆ ಜವಾಬ್ದಾರಿ ಅವರಿಗೆ ಇದೆ ಅಲ್ವಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ಬಳ್ಳಾರಿಯಲ್ಲಿ ತನಿಖೆ ಚುರುಕು, ಬಾಂಬರ್‌ನಂತೆ ಡ್ರೆಸ್‌ ಹಾಕಿ ಓರ್ವನ ವಿಚಾರಣೆ