Tag: genitals

  • ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪುಣೆ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಗುಪ್ತಾಂಗವನ್ನು ಡ್ರಿಲ್‌ ಮಾಡಿ ಬಳಿಕ ಬೀಗ ಹಾಕಿದ ವಿಚಿತ್ರ ಪ್ರಸಂಗವೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಅಚ್ಚರಿ ಎನಿಸಿದರೂ ಸತ್ಯವಾಗಿರುವ ಈ ಘಟನೆ ಮಹಾರಾಷ್ಟ್ರದ (Maharastra) ಪಿಂಪ್ರಿ ಚಿಂಚ್ವಾಡದಲ್ಲಿ ನಡೆದಿದೆ. ವ್ಯಕ್ತಿಯನ್ನು ಉಪೇಂದ್ರ ಹುಡಕೆ ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈತ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಮನೆಯಲ್ಲಿಯೇ ಇರುತ್ತಿದ್ದಳು. ಸದ್ಯ ಪ್ರಕರಣ ಸಂಬಂಧ ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

    ಪತ್ನಿಗೆ ಬೇರೊಬ್ಬನ ಜೊತೆ ಸಂಬಂಧ ಇರುವ ಬಗ್ಗೆ ಉಪೇಂದ್ರ ಅನುಮಾನಗೊಂಡಿದ್ದನು. ಹೀಗಾಗಿ ಮೇ 11 ರಂದು ಕಂಠಪೂರ್ತಿ ಕುಡಿದು ಬಂದಿದ್ದ ಉಪೇಂದ್ರ, ಪತ್ನಿಗೆ ಮನಬಂದಂತೆ ಥಳಿಸಿ, ಒದ್ದಿದ್ದಾನೆ. ಬಳಿಕ ಆಕೆಯನ್ನು ಚೂಡಿದಾರದ ಶಾಲಿನಿಂದ ಕಟ್ಟಿಹಾಕಿ ಹೇಯ ಕೃತ್ಯ ಎಸಗಿದ್ದಾನೆ.

    ಹರಿತವಾದ ಬ್ಲೇಡ್‌ನಿಂದ ಗುಪ್ತಾಂಗದ ಎರಡೂ ಕಡೆ ರಂಧ್ರಗಳನ್ನು ಮಾಡಿದ್ದಾನೆ. ಕಬ್ಬಿಣದ ಸ್ಕ್ರೂಗಳನ್ನು ಹಾಕಿ ನಂತರ ಆಕೆಯ ಜನನಾಂಗದ ಪ್ರದೇಶಕ್ಕೆ ಬೀಗ ಹಾಕಿದ್ದಾನೆ. ಇತ್ತ ಪತಿಯ ನೀಚ ಕೃತ್ಯದಿಂದ ನೋವು ತಾಳಲಾರದೆ 28 ವರ್ಷದ ಪತ್ನಿ ಜೋರಾಗಿ ಕಿರುಚಾಡಿದ್ದಾಳೆ. ಆದರೂ ಪತಿ ಆಕೆಯ ಮೇಲೆ ಕಿಂಚಿತ್ತೂ ಅನುಕಂಪ ತೋರಿಸಲಿಲ್ಲ. ಇದನ್ನೂ ಓದಿ: ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ – 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

    ಮಹಿಳೆಯ ಕಿರುಚಾಟ ಕೇಳಿಸಿಕೊಂಡ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದ ಒದ್ದಾಡುತ್ತಿರುವುದನ್ನು ಕಂಡು ಗಾಬರಿಗೊಂಡಿದ್ದಾರೆ. ಅಲ್ಲದೇ ಕೂಡಲೇ ಆಕೆಯನ್ನು ಹತ್ತಿರದಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ವೈದ್ಯರು ತುರ್ತು ಸರ್ಜರಿ ಮೂಲಕ ಸ್ಕ್ರೂ ಹಾಗೂ ಲಾಕ್‌ ಅನ್ನು ತೆಗೆಯುವಲ್ಲಿ ಯಶಸ್ವಿಯಾದರು.

    ಪ್ರಕರಣ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

  • ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ್ಳು!

    ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ್ಳು!

    ಭೋಪಾಲ್: ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿರುವ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ಮಧ್ಯಪ್ರದೇಶದ ಟಿಕಮ್ ಗಢ ಜಿಲ್ಲೆಯಲ್ಲಿ ಡಿಸೆಂಬರ್ 7ರಂದು ನಡೆದಿದೆ. ತನ್ನ ಸ್ವ-ಇಚ್ಛೆಗೆ ವಿರುದ್ಧವಾಗಿ ಬಲವಂತದಿಂದ ಸೆಕ್ಸ್ ಮಾಡುವಂತೆ ಒತ್ತಡ ಹಾಕಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಪತಿಯ ಕಿರುಕುಳದಿಂದ ಬೇಸತ್ತ 24 ವರ್ಷದ ಪತ್ತನ ರೊಚ್ಚಿಗೆದ್ದು 27 ವರ್ಷದ ಪತಿಯ ಮರ್ಮಾಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿ ಬಿಟ್ಟಿದ್ದಾಳೆ. ಇದನ್ನೂ ಓದಿ: 27 ದಿನದ ಶಿಶುವಿನ ತಲೆಯನ್ನು ಗೋಡೆಗೆ ಚಚ್ಚಿ ಕೊಂದ ಕ್ರೂರಿ ತಾಯಿ

    ಪತಿ ಹಾಗೂ ಪತ್ನಿ ಮಧ್ಯೆ ದೈಹಿಕ ಸಂಬಂಧದ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಹೀಗಿರುವಾಗಿ ಪತಿ ಪ್ರತಿನಿತ್ಯ ಸೆಕ್ಸ್ ಮಾಡುವಂತೆ ಒತ್ತಡ ಹೇರುತ್ತಿದ್ದನು. ಆದರೆ ಇದು ಪತ್ನಿಗೆ ಇಷ್ಟವಿರಲಿಲ್ಲ. ಹೀಗಾಗಿ ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದಾಗ ಸಿಟ್ಟಿನಿಂದ ಪತ್ನಿ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಮ್ಲೆಟ್ ಸೀದು ಹೋಗಿದೆ ಎಂದಿದ್ದಕೆ ಬಿಸಿ ಬಾಣಲೆಯಿಂದ ಹೊಡೆದ ಹೋಟೆಲ್ ಮಾಲೀಕ

    ಸಾಂದರ್ಭಿಕ ಚಿತ್ರ

    ಈ ಘಟನೆ ಡಿ.7ರಂದು ರಾತ್ರಿ ನಡೆದಿದ್ದು, ಕೂಡಲೇ ಆತ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾನೆ. ಡಿ.13ರಂದು ಸಂತ್ರಸ್ತ ಠಾಣೆಗೆ ಬಂದು ದೂರು ನೀಡಿದ್ದಾನೆ. ಈ ದಂಪತಿ 2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಮದುವೆಯಾದ ಕೆಲ ತಿಂಗಳಿನಿಂದಲೇ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿದೆ. ಪರಿಣಾಮ ಇಬ್ಬರೂ ಬೇರೆ ಬೇರೆಯಾಗಿ ಜೀವನ ನಡೆಸುತ್ತಿದ್ದರು. ಆದರೂ ಇಬ್ಬರ ನಡುವೆ ಮತ್ತೆ ಜಗಳವಾಗಿದ್ದು, ಪರಿಣಾಮ ಪತ್ನಿ ಈ ಮೂಲಕ ಪತಿಗೆ ಬುದ್ಧಿ ಕಲಿಸಿದ್ದಾಳೆ. ಇದನ್ನೂ ಓದಿ: ಮಗನನ್ನ ನೀರಿನ ಸಂಪ್‍ಗೆ ಎಸೆದು ತಂದೆ ಆತ್ಮಹತ್ಯೆ

    POLICE JEEP

    ಘಟನೆಗೆ ಸಂಬಂಧಿಸಂತೆ ಪತ್ನಿ ವಿರುದ್ಧ ಐಪಿಸಿ ಸೆಕ್ಷನ್ 324ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಜೈಲಿನಲ್ಲಿ ತನ್ನ ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡ ಕೊಲೆಗಡುಕ

    ಜೈಲಿನಲ್ಲಿ ತನ್ನ ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡ ಕೊಲೆಗಡುಕ

    – ಶಿವ ದೇವನಿಗೆ ಅರ್ಪಣೆ

    ಭೊಪಾಲ್: ಕೊಲೆಗಡುಕನೊಬ್ಬ ಜೈಲಿನೊಳಗಡೆ ತನ್ನ ಮರ್ಮಾಂಗವನ್ನು ತಾನೇ ಕತ್ತರಿಸಿಕೊಂಡ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

    25 ವರ್ಷದ ಯುವಕ ಕೊಲೆ ಮಾಡಿ ಗ್ವಾಲಿಯಲ್ಲಿರುವ ಕೇಂದ್ರ ಕಾರಾಗ್ರಹಕ್ಕೆ ಸೇರಿದ್ದನು. ಈತ ಮಂಗಳವಾರ ಬೆಳಗ್ಗೆ ಹರಿತವಾದ ಆಯುಧದಿಂದ ತನ್ನ ಮರ್ಮಾಂಗವನ್ನು ತಾನೇ ಕೊಯ್ದುಕೊಂಡಿದ್ದಾನೆ. ನಂತರ ಶಿವ ದೇವನಿಗೆ ಅರ್ಪಣೆ ಮಾಡಿದ್ದಾನೆ.

    ಕೊಲೆಗಡುಕನನ್ನು ವಿಷ್ಣು ಸಿಂಗ್ ಎಂದು ಗುರುತಿಸಲಾಗಿದ್ದು, ಈತನಿಗೊಂದು ಕನಸು ಬಿದ್ದಿದ್ದಂತೆ. ಅದೇನೆಂದರೆ, ಸಾಕ್ಷಾತ್ ಶಿವ ದೇವನೇ ಈತನ ಎದುರು ಪ್ರತಕ್ಷನಾಗಿ ನೀನು ನಿನ್ನ ಮರ್ಮಾಂಗವನ್ನು ಕತ್ತರಿಸಿ ನನಗೆ ಅರ್ಪಿಸಬೇಕು ಎಂದು ಕೇಳಿಕೊಂಡಿದ್ದನಂತೆ. ಈ ಹಿನ್ನೆಲೆಯನ್ನು ತಾನು ಈ ರೀತಿ ಮಾಡಿಕೊಂಡಿರುವುದಾಗಿ ಸಿಂಗ್ ತಿಳಿಸಿದ್ದಾನೆ.

    ಇತ್ತ ಜೈಲಿನೊಳಗೆ ಬೆಳಗ್ಗೆ 6.30ರ ವೇಳೆಗೆ ಕೈದಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಜೈಲಿನ ಅಧಿಕಾರಿಗಳು ಗಮನಿಸಿದ್ದಾರೆ. ಅಲ್ಲದೆ ಕೂಡಲೇ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೂಡಲೇ ವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ಮರ್ಮಾಂಗವನ್ನು ಮರುಜೋಡಣೆ ಮಾಡಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಸದ್ಯ ಕೊಲೆಗಡುಕನ ಸ್ಥಿತಿ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

    ಈ ಸಂಬಂಧ ಜೈಲಿನ ಜೈಲು ಅಧೀಕ್ಷಕ ಮನೋಜ್ ಪ್ರತಿಕ್ರಿಯಿಸಿ, ವಿಷ್ಣು ಸಿಂಗ್ 2018ರ ಅಕ್ಟೋಬರ್ ತಿಂಗಳಲ್ಲಿ ಕೊಲೆ ಮಾಡಿ ಜೈಲು ಸೇರಿದ್ದಾನೆ. ಈತ ಅವಿವಾಹಿತನಾಗಿದ್ದು, ಜೈಲಿನೊಳಗಡೆ ಹರಿತವಾದ ಆಯುಧವನ್ನು ಬಳಸಿ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾನೆ. ಈ ಮೂಲಕ ಜೈಲಿನ ಆವರಣದಲ್ಲಿರುವ ದೇವಾಲಯದ ದೇವರಿಗೆ ಅರ್ಪಿಸಿದ್ದಾನೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಅವರು ತಿಳಿಸಿದರು.

    ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಲೆಗೈದು ಜೈಲು ಸೇರಿದ್ದ ಈತ ಮೊದಲು ತನ್ನನ್ನು ಯಾರಾದರೂ ನೋಡುತ್ತಿದ್ದಾರೆಯೇ ಎಂದು ಆ ಕಡೆ ಈ ಕಡೆ ನೋಡಿಕೊಂಡಿದ್ದಾನೆ. ಈ ವೇಳೆ ಯಾರೂ ನೋಡುತ್ತಿಲ್ಲವೆಂಬುದನ್ನು ಅರಿತ ಕೊಲೆಗಡುಕ ಕೂಡಲೇ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾನೆ ಎಂದು ಕೈದಿಯೊಬ್ಬ ನಡೆದ ಘಟನೆಯನ್ನು ವಿವರಿಸಿದ್ದಾನೆ.

  • ಸಂಸಾರ ನಡೆಸೋಣ ಬಾ ಎಂದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ

    ಸಂಸಾರ ನಡೆಸೋಣ ಬಾ ಎಂದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ

    ಅಮರಾವತಿ: ಸಂಸಾರ ನಡೆಸೋಣ ಬಾ ಎಂದು ಕರೆದ ಪತಿಯ ಮರ್ಮಾಂಗವನ್ನು ಪತ್ನಿ ಕತ್ತರಿಸಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ಪಾಣ್ಯಂ ತಾಲೂಕಿನ ಎಸ್.ಕೊಟ್ಟಾಲ ಗ್ರಾಮದ ಯೂನುಸ್ (23) ಪತ್ನಿಯಿಂದ ಹಲ್ಲೆಗೆ ಒಳಗಾದ ಪತಿ. ಹಸೀನಾಳ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ. ಕರ್ನೂಲ್ ಜಿಲ್ಲೆಯ ಗಡಿವೆಮುಲ ತಾಲೂಕಿನ ಸೋಮಾಪುರಂನಲ್ಲಿ ಗುರುವಾರ ಘಟನೆ ನಡೆದಿದೆ.

    ಯೂನುಸ್ ಎರಡು ವರ್ಷಗಳ ಹಿಂದೆಯಷ್ಟೇ ಸೋಮಾಪುರಂ ಗ್ರಾಮದ ಹಸೀನಾಳನ್ನು ಮದುವೆಯಾಗಿದ್ದ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತಿ-ಪತ್ನಿ ಸಣ್ಣ ವಿಚಾರಕ್ಕೆ ಜಗಳವಾಡಿ ದೂರವಾಗಿದ್ದರು. ಪತಿ ಮನೆ ಬಿಟ್ಟು ಬಂದಿದ್ದ ಹಸೀನಾ ತವರು ಮನೆ ಸೇರಿದ್ದಳು. ಇಂದಲ್ಲ ನಾಳೆ ಪತ್ನಿ ಬರುತ್ತಾಳೆ ಅಂತ ಯೂನಸ್ ಎರಡು ವರ್ಷಗಳಿಂದ ಕಾಯುತ್ತಲೇ ಇದ್ದ. ಆದರೆ ಹಸೀನಾ ಮಾತ್ರ ತವರು ಮನೆಯಲ್ಲಿಯೇ ಉಳಿದಿದ್ದಳು.

    ಯೂನುಸ್ ಎರಡು ವರ್ಷಗಳ ಬಳಿಕ ಸೋಮಾಪುರಂನಲ್ಲಿರುವ ಅತ್ತೆಯ ಮನೆಗೆ ತೆರಳಿ ಪತ್ನಿ ಹಸೀನಾಳನ್ನು ಸಂಸಾರ ಮಾಡೋಣ ಬಾ ಎಂದು ಕರೆದಿದ್ದಾನೆ. ಪತಿಯ ಮಾತು ಕೇಳಿದ ಹಾಸೀನಾ ಕೋಪಗೊಂಡಿದ್ದಾಳೆ. ಮಾತಿಗೆ ಮಾತು ಬೆಳೆದು, ಕೈ ಕೈ ಮಿಲಾಯಿಸಿದ್ದಾರೆ. ಕುಟುಂಬಸ್ಥರ ಜೊತೆ ಸೇರಿ ಹಸೀನಾ ಪತಿ ಯೂನುಸ್‍ನನ್ನು ಕಂಬಕ್ಕೆ ಕಟ್ಟಿ ಹಾಕಿ ಮನ ಬಂದಂತೆ ಥಳಿಸಿದ್ದಾಳೆ. ಈ ವೇಳೆ ಹಸೀನಾ ಪತಿಯ ಮರ್ಮಾಂಗವನ್ನು ಕತ್ತರಿಸಿ ಹಾಕಿದ್ದಾಳೆ.

    ಗಂಭೀರವಾಗಿ ಗಾಯಗೊಂಡ ಯೂನುಸ್ ಕಾಪಾಡುವಂತೆ ಕೂಗಿ ಅಳುತ್ತಿದ್ದ ಧ್ವನಿಯನ್ನು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ತಕ್ಷಣವೇ ಯೂನುಸ್‍ನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯೂನುಸ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ನೀಡಲಾಗುತ್ತದೆ ಎಂದು ವರದಿಯಾಗಿದೆ.

  • ಬ್ಯಾಚುಲರ್ ಪಾರ್ಟಿಯಲ್ಲಿ ವರನ ಮರ್ಮಾಂಗಕ್ಕೆ ಗೆಳೆಯನಿಂದ್ಲೇ ಬಿತ್ತು ಗುಂಡೇಟು!

    ಬ್ಯಾಚುಲರ್ ಪಾರ್ಟಿಯಲ್ಲಿ ವರನ ಮರ್ಮಾಂಗಕ್ಕೆ ಗೆಳೆಯನಿಂದ್ಲೇ ಬಿತ್ತು ಗುಂಡೇಟು!

    ಕೈರೋ: ಮದುವೆ ಹಿಂದಿನ ದಿನ ವರನ ಜೊತೆ ಸ್ನೇಹಿತರು ಸಂಭ್ರಮಾಚರಣೆ ಮಾಡೋ ಸಂದರ್ಭದಲ್ಲಿ ಅತೀ ಉತ್ಸಾಹದಲ್ಲಿ ಸ್ನೇಹಿತನೊಬ್ಬ ವರನ ಮರ್ಮಾಂಗಕ್ಕೆ ಗುಂಡೇಟು ಹೊಡೆದಿರುವ ಘಟನೆ ಈಜಿಪ್ಟ್‍ನಲ್ಲಿ ನಡೆದಿದೆ.

    28 ವರ್ಷದ ವರ ಓಮರ್ ಅಲ್ ಅಲ್‍ಸೈದ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

    ಓಮರ್ ಮದುವೆಗೂ ಮುನ್ನ ಬ್ಯಾಚುಲರ್ ಪಾರ್ಟಿಯ ಸಂಭ್ರಮದಲ್ಲಿದ್ದ. ಈ ವೇಳೆ ಸ್ನೇಹಿತರಲ್ಲೊಬ್ಬ ಸಂಭ್ರಮಾಚರಣೆಗೆ ಗುಂಡು ಹಾರಿಸಿದ್ದ. ಉತ್ಸಾಹದಲ್ಲಿ ಗುಂಡು ಹಾರಿಸಿದ ಸ್ನೇಹಿತನಿಗೆ ಗನ್ ಮೇಲಕ್ಕೆ ಗುರಿಯಿಡಬೇಕು ಅನ್ನೋದು ಮರೆತುಹೋಗಿತ್ತು. ಪರಿಣಾಮ ಗುಂಡು ವರನ ಮರ್ಮಾಂಗಕ್ಕೆ ತಗುಲಿದೆ.

    ಘಟನೆಯಿಂದ ಓಮರ್‍ನ ಮರ್ಮಾಂಗ, ತೊಡೆ ಹಾಗೂ ಕೈಗೆ ಗಂಭೀರ ಗಾಯಗಳಾಗಿವೆ. ತಾನು ಮಾಡಿದ ಎಡವಟ್ಟಿನಿಂದ ಸ್ನೇಹಿತ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದು, ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಅತ್ತ ಗಾಯಗೊಂಡ ಓಮರ್ ಇನ್ನೂ ಬ್ಯಾಚುಲರ್ ಆಗಿದ್ದಾನೆ ಎಂದು ವರದಿಯಾಗಿದೆ. ಗಾಯಗೊಂಡಿರುವ ಓಮರ್‍ನ ಭಾವಿ ಪತ್ನಿಗೆ ಮುಂದೆ ಆತನನ್ನು ಮದುವೆಯಾಗೋ ಯೋಚನೆ ಇದೆಯಾ ಎಂಬುದು ಸ್ಪಷ್ಟವಾಗಿಲ್ಲ. ಸದ್ಯ ಈಜಿಪ್ಟ್‍ನ ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ವೈರಲ್ ಆಗಿದೆ. ಗನ್ ಸರಿಯಾಗಿ ಹಿಡಿಯಲು ಬಾರದ ವರನ ಸ್ನೇಹಿತನ ಬಗ್ಗೆ ಜನ ಟೀಕಿಸಿದ್ದಾರೆ.

    ಈಜಿಪ್ಟ್ ನಲ್ಲಿ ಮದುವೆ ಸಂಭ್ರಮದಲ್ಲಿ ಗುಂಡು ಹಾರಿಸಿ ಅನಾಹುತವಾಗಿರೋದು ಇದೇ ಮೊದಲೇನಲ್ಲ. ಅಕ್ಟೋಬರ್‍ನಲ್ಲಿ ಇಲ್ಲಿನ ಮದುವೆ ಸಮಾರಂಭವೊಂದಲ್ಲಿ ಅತಿಥಿಗೆ ಗುಂಡೇಟು ತಗುಲಿ ಸರ್ಜರಿಗೆ ಒಳಪಡಬೇಕಾಯ್ತು. ಈಜಿಪ್ಟ್ ನ ಬಾನಿ ಸ್ವೆಫ್‍ನಲ್ಲಿ 30 ವರ್ಷದ ವ್ಯಕ್ತಿ ಮುದವೆಗೆ ಬಂದಿದ್ದಾಗ ಅವರ ತೊಡೆಗೆ ಗುಂಡೇಟು ತಗುಲಿತ್ತು. ಅವರಿಗೆ ಸರ್ಜರಿ ಮಾಡಿಸಬೇಕಾಯ್ತು.

  • ಸೆಕ್ಸ್, ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆಯ ಬಂಧನ

    ಸೆಕ್ಸ್, ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆಯ ಬಂಧನ

    ನವದೆಹಲಿ: ಮದುವೆಯಾಗಲು ನಿರಾಕರಿಸಿದ್ದಕ್ಕೆ ತನ್ನ ಪ್ರಿಯಕರನ ಮರ್ಮಾಂಗವನ್ನು ಕತ್ತರಿಸಿದ 23 ವರ್ಷದ ಮಹಿಳೆಯನ್ನು ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ.

    ದೆಹಲಿಯ ಮಂಗೋಲ್ಪುರಿಯ ಮಹಿಳೆಯ ಮನೆಯಲ್ಲಿ 35 ವರ್ಷದ ಬೀದಿ ವ್ಯಾಪಾರಿ ರವಿ ಮೇಲೆ ಬುಧವಾರದಂದು ದಾಳಿ ನಡೆದಿದೆ. ಮಹಿಳೆಯ ಸಂಬಂಧಿಯೊಬ್ಬರು ರವಿಯನ್ನ ಅಲ್ಲಿಗೆ ಕರೆಸಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

    ರವಿ ತನ್ನ 4 ವರ್ಷದ ಪ್ರೇಯಸಿಯ ಮನೆಗೆ ಹೋದ ನಂತರ ಮದುವೆಯ ಬಗ್ಗೆ ಪ್ರಸ್ತಾಪವಾಗಿದೆ. ಆದ್ರೆ ಮದುವೆಗೆ ತನ್ನ ಮನೆಯವರ ವಿರೋಧವಿದೆ ಎಂದು ರವಿ ಮದುವೆಯಾಗಲು ನಿರಾಕರಿಸಿದ್ದಾರೆ. ನಂತರ ಮಹಿಳೆಯು ರವಿಯನ್ನು ಬಲವಂತವಾಗಿ ಬಾತ್‍ರೂಮಿಗೆ ಕರೆದೊಯ್ದು, ಆತನ ಬಟ್ಟೆ ಕಳಚಿ ಆಕೆಯೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯ ಮಾಡಿದಳು ಎಂದು ರವಿ ಪೊಲೀಸರಿಗೆ ಹೇಳಿದ್ದಾರೆ.

    ತಾನು ಹೇಳಿದಂತೆ ಮಾಡದಿದ್ದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಹಿಳೆ ಬೆದರಿಕೆ ಹಾಕಿದ್ದು, ರವಿ ಇದಕ್ಕೆ ನಿರಾಕರಿಸಿದಾಗ ಚಾಕುವಿನಿಂದ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ಈ ಘಟನೆ ನಡೆದಾಗ ಮಹಿಳೆಯ ಸಹೋದರ ಹಾಗೂ ಅತ್ತಿಗೆ ಮನೆಯಲ್ಲೇ ಇದ್ದರು. ಆಕೆ ನನ್ನ ಮೇಲೆ ದಾಳಿ ಮಾಡಿದಾಗ ಅವರು ತಡೆಯಲು ಮುಂದಾಗಲಿಲ್ಲ ಎಂದು ರವಿ ಹೇಳಿದ್ದಾರೆ.

    ದಾಳಿಯ ಬಳಿಕ ರವಿ ಕಿರುಚುತ್ತಾ ಮನೆಯಿಂದ ಹೊರಗೆ ಓಡಿಬಂದಿದ್ದು, ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿ, ರವಿಯನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ರವಿಯನ್ನು ಜೈಪುರ ಗೋಲ್ಡನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕೃತ್ಯವೆಸಗಿದ ನಂತರ ಮಹಿಳೆ ಹಾಗೂ ಆಕೆಯ ಮನೆಯವರು ಪರಾರಿಯಾಗಿದ್ದರು. ಭಾನುವಾರದಂದು ಸಹೋದರ ಹಾಗೂ ಅತ್ತಿಗೆಯನ್ನು ಪತ್ತೆಹಚ್ಚಿದ ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದ್ದು, ನಂತರ ಮಹಿಳೆಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.