Tag: Geologist

  • ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ.

    ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್ ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

    4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು.

    ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೊಂಡಿದ್ದನು. ಆದರೆ ಪ್ರತಿಮಾ ಅವರು ಕಿರಣ್‍ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಪ್ರತಿಮಾ ಮೇಲೆ ದ್ವೇಷಕಾರಿದ್ದನು.

    ಕಿರಣ್‍ಗೆ ವಾರ್ನಿಂಗ್ ಕೊಟ್ಟಿದ್ದ ಪ್ರತಿಮಾ: ಪ್ರತಿಮಾ ರೇಡ್ ಹೋಗುವ ವಿಚಾರ ಲೀಕ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದನು.

    ಕೊಲೆ ದಿನವೂ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದನು. ಆದರೆ ಆಕೆ ಅದನ್ನು ತಿರಸ್ಕರಿಸಿದ್ದರಿಂದ ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೇಪ್ ಆಗಿದ್ದನು. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

  • ಮಳೆ ಬಂದ್ರೆ ಡೇಂಜರ್ – ಕೊರೊನಾ ಹೆಚ್ಚಾಗೋ ಸಾಧ್ಯತೆ

    ಮಳೆ ಬಂದ್ರೆ ಡೇಂಜರ್ – ಕೊರೊನಾ ಹೆಚ್ಚಾಗೋ ಸಾಧ್ಯತೆ

    ಬೆಂಗಳೂರು: ಕೊರೊನಾ ವೈರಸ್ ಭೀತಿಯ ಸಮಯದಲ್ಲೇ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ಹಲವೆಡೆ ಮಳೆಯಾಗುತ್ತಿದೆ. ಆದರೆ ಈ ಮಳೆ ಬಂದರೆ ತೀರಾ ಅಪಾಯ ಎಂದು ಭೂಗರ್ಭ ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    ಎರಡು ದಿನಗಳಿಂದ ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗಿದೆ. ಇಂದು ಸಹ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಸಿಲಿಕಾನ್ ಸಿಟಿಯಲ್ಲೂ ಕೂಡ ಮಳೆ ಆರಂಭವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಅಪಾಯ ಎದುರಾಗಬಹುದು ಎನ್ನುವ ಆತಂಕವನ್ನು ಭೂಗರ್ಭ ಶಾಸ್ತ್ರಜ್ಞ ಪ್ರಕಾಶ್ ಹೊರಹಾಕಿದ್ದಾರೆ.

    ಮಳೆಯಲ್ಲಿ ಕೊರೊನಾ ವೈರಸ್ ವ್ಯಾಪಕತೆ ಹೆಚ್ಚಾಗುತ್ತಂತೆ. ಅಲ್ಲದೇ ಮಳೆಯಿಂದ ಭೂಮಿಯಲ್ಲಿ ಈ ವೈರಸ್ ನೆಲೆಗೊಳ್ಳಲು ಬಹು ಸುಲಭ. ಹೀಗಾಗಿ ನೀರಿನಲ್ಲಿ ವೈರಸ್ ಸೇರಿಕೊಂಡು ಕುಡಿಯುವ ನೀರಿನ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಳೆಯಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆಯಿದೆ ಎಂದು ಭೂಗರ್ಭ ತಜ್ಞರು ಹೇಳಿದ್ದಾರೆ.

    ಮಳೆ ಬಂದರೆ ವಾತಾವರಣ ತಂಪಾಗಿ, ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತದೆ. ಜೊತೆಗೆ ಈ ವೈರಸ್ ನೀರಿನಲ್ಲಿ ಕೂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಕುಡಿಯುವ ನೀರಿನ ಮೂಲಕವೂ ಈ ವೈರಸ್ ನಮ್ಮ ದೇಹ ಸೇರುವ ಸಾಧ್ಯತೆ ಇದೆ. ಮಳೆಗಾಲದ ಮುಂಚೆಯೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ಭೂಗರ್ಭ ಶಾಸ್ತ್ರಜ್ಞ ಪ್ರಕಾಶ್ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನ ಹೆಣ್ಣೂರು, ಮಾನ್ಯತಾ ಟೆಕ್ ಪಾರ್ಕ್, ಸಂಪಿಗೆಹಳ್ಳಿ, ಹೆಗ್ಡೆ ನಗರ ಮತ್ತು ಕೊತ್ತನೂರು ಸುತ್ತಮುತ್ತ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗಳಿಂದ ಧಾರಾಕಾರ ಮಳೆಯಾಗುತ್ತಿದೆ.

  • ಬೆಂಗ್ಳೂರಿನಲ್ಲಿದೆ ಅಪರೂಪದ ಡೈನೋಸಾರ್ ಮೊಟ್ಟೆ

    ಬೆಂಗ್ಳೂರಿನಲ್ಲಿದೆ ಅಪರೂಪದ ಡೈನೋಸಾರ್ ಮೊಟ್ಟೆ

    ಬೆಂಗಳೂರು: ಭೂಮಿಯ ಮೇಲೆ ದೈತ್ಯ ಪ್ರಾಣಿ ಡೈನೋಸಾರ್ ಇತ್ತು ಎನ್ನುವುದಕ್ಕೆ ಹಲವು ಪುರಾವೆಗಳು ಸಿಕ್ಕಿವೆ. ಇಂದಿಗೂ ಅದರ ಬಗ್ಗೆ ಸಂಶೋಧನೆ ಮುಂದುವರೆಯುತ್ತಾಲೇ ಇದೆ. ಆದರೆ ಅತಿ ಅಪರೂಪದ ಡೈನೋಸಾರ್ ಮೊಟ್ಟೆ ಬೆಂಗಳೂರಿನಲ್ಲಿ ಇರುವುದು ವಿಶೇಷ.

    ಹೌದು. ಭೂಗರ್ಭ ಶಾಸ್ತ್ರಜ್ಞ ಪ್ರಕಾಶ್ ಅವರು ಈ ಡೈನೋಸಾರ್ ಮೊಟ್ಟೆಯನ್ನು ತಮ್ಮ ಸಂಶೋಧನೆಗಾಗಿ ತಂದಿಟ್ಟುಕೊಂಡಿದ್ದಾರೆ. 65 ದಶಲಕ್ಷ ವರ್ಷದ ಹಿಂದೆ ಜ್ವಾಲಮುಖಿ ಸ್ಪೋಟದಿಂದ ಕತ್ತಲು ಮತ್ತು ಶೀತಲ ವಾತಾವರಣ ನಿರ್ಮಾಣವಾಗಿತ್ತು. ಆಗ ಬಂದ ಕಪ್ಪು ಹೊಗೆಯಿಂದ ಭೂಮಿಯ ಮೇಲಿದ್ದ ಅಪರೂಪದ ಪ್ರಾಣಿ ಪಕ್ಷಿಗಳು ಸಾವನ್ನಪ್ಪಿದ್ದವು ಎನ್ನಲಾಗುತ್ತದೆ. ಬಹುತೇಕ ಜೀವಿಗಳು ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುತ್ತಿತ್ತಂತೆ, ಆಗ ಈ ಅಪರೂಪದ ಡೈನೋಸಾರ್ ಗುಜರಾತ್ ಭಾಗಕ್ಕೆ ಬಂದಿದ್ದು, ಅಲ್ಲಿ 22 ಮೊಟ್ಟೆ ಇಟ್ಟಿತ್ತು ಎನ್ನಲಾಗಿದೆ.

    ಆ ಬಳಿಕ ಈ ಪ್ರದೇಶದಲ್ಲಿ ಪ್ರವಾಹ ಬಂದು ಈ ಮೊಟ್ಟೆಯೆಲ್ಲಾ ಭೂಮಿಯ ಒಳಗೆ ಹುಗಿದು ಹೋಗಿತ್ತು. ಈ ವಿಶೇಷ ಮೊಟ್ಟೆಯನ್ನು ಸಂಶೋಧನೆಗಾಗಿ ವಿಜ್ಞಾನಿಗಳು ಹುಡುಕಿ ತಂದಿದ್ದರು. ಅದರಲ್ಲಿ ಒಂದು ಮೊಟ್ಟೆಯನ್ನು ಪ್ರಕಾಶ್ ಅವರು ತಂದು ಸಂಶೋಧನೆಗೆ ಬಳಕೆ ಮಾಡುತ್ತಿದ್ದಾರೆ. ಕಾಲಂತಾರದಲ್ಲಿ ಈ ಡೈನೋಸಾರ್ ಮೊಟ್ಟೆ ಕಲ್ಲಿನ ರೂಪಕ್ಕೆ ಬದಲಾಗಿರೋದು ವಿಶೇಷವಾಗಿದೆ ಎಂದು ಪ್ರಕಾಶ್ ಅವರು ತಿಳಿಸಿದ್ದಾರೆ.

  • ಕ್ಯಾರ್, ಮಹಾ ನಂತರ ಕರುನಾಡಿಗೆ ಅಪ್ಪಳಿಸಲಿವೆ ಇನ್ನೆರಡು ಚಂಡಮಾರುತಗಳು

    ಕ್ಯಾರ್, ಮಹಾ ನಂತರ ಕರುನಾಡಿಗೆ ಅಪ್ಪಳಿಸಲಿವೆ ಇನ್ನೆರಡು ಚಂಡಮಾರುತಗಳು

    ಬೆಂಗಳೂರು: ಕ್ಯಾರ್, ಮಹಾ ಎರಡು ಚಂಡಮಾರುತದ ಅಬ್ಬರಕ್ಕೆ ಕರುನಾಡಿನ ಕರಾವಳಿ ಸೇರಿದಂತೆ ಬಹುತೇಕ ಭಾಗ ನಲುಗಿ ಹೋಗಿದೆ. ಈಗಾಗಲೇ ಮಹಾ ಅಬ್ಬರಕ್ಕೆ ಕರಾವಳಿ ಭಾಗದಲ್ಲಿ ಮಳೆ ಜೊತೆ ರಕ್ಕಸ ಅಲೆ ಸೃಷ್ಟಿಯಾಗಿದೆ. ಈ ಮಧ್ಯೆ ಇನ್ನೆರಡು ಚಂಡಮಾರುತದ ಎಚ್ಚರಿಕೆಯನ್ನು ಭೂಗರ್ಭ ವಿಜ್ಞಾನಿಗಳು ಕೊಟ್ಟಿದ್ದಾರೆ.

    ಕ್ಯಾರ್ ಚಂಡಮಾರುತದ ಹೊಡೆತ, ಮಹಾ ಚಂಡಮಾರುತದ ಘರ್ಜನೆ ಕರಾವಳಿಯನ್ನು ಹಿಂಡಿ ಹಿಪ್ಪೆ ಮಾಡಿದೆ. ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ಕು ದಿನ ಹೈ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

    ಇದರ ನಡುವೆ ಇನ್ನೆರಡು ಸದ್ದಿಲ್ಲದೇ ಚಂಡಮಾರುತ ಬಂಗಾಳಕೊಲ್ಲಿಯ ಗರ್ಭದಲ್ಲಿ ಪುಟಿದೇಳಲು ತಯಾರಾಗಿದೆ. ಹೌದು ನವೆಂಬರ್ ತಿಂಗಳಲ್ಲಿ ಇನ್ನೆರಡು ಚಂಡಮಾರುತ ಫಾರ್ಮ್ ಆಗಲಿದ್ದು, ಮೊದಲ ವಾರದಲ್ಲಿಯೇ ಕರುನಾಡನ್ನು ಅಲ್ಲೋಲಕಲ್ಲೋಲ ಮಾಡುವ ಎಚ್ಚರಿಕೆಯನ್ನು ಭೂಗರ್ಭ ತಜ್ಞರು ಕೊಟ್ಟಿದ್ದಾರೆ.

    ಬಂಗಾಳಕೊಲ್ಲಿಯ ಸಾಗರದೊಳಗಿನ ಜ್ವಾಲಮುಖಿ ಸ್ಫೋಟದಿಂದ ಈ ಚಂಡಮಾರುತ ಸೃಷ್ಟಿಯಾಗಲಿದ್ದು ಜಲಪ್ರವಾಹ ತರುವ ಸಾಧ್ಯತೆ ಇದೆ. ಚಂಡಮಾರುತದ ಪರಿಣಾಮ ಬೆಂಗಳೂರು, ಮೈಸೂರು, ಕೋಲಾರ ರಾಮನಗರ ಭಾಗಕ್ಕೆ ಹೆಚ್ಚು ಹಾನಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ನವೆಂಬರ್ ತಿಂಗಳು ಚಿಲ್ಡ್ ವೆದರ್ ಇರುತ್ತೆ ಅಂತೆಲ್ಲ ಅಂದುಕೊಂಡಿದ್ದ ಕರುನಾಡಿಗೆ ಈಗ ಜಲರಕ್ಕಸನ ಕಾಟದ ಮುನ್ಸೂಚನೆ ಸಿಕ್ಕಿದ್ದು, ಭೀತಿಯ ವಾತವರಣ ಸೃಷ್ಟಿಯಾಗಿದೆ.

  • ಪಶ್ವಿಮಘಟ್ಟದಲ್ಲಿ ಭೂ ಸ್ತರಭಂಗ-ಭೂಕಂಪನದ ಬಗ್ಗೆ ಭೂ ವಿಜ್ಞಾನಿ ಎಚ್ಚರಿಕೆ

    ಪಶ್ವಿಮಘಟ್ಟದಲ್ಲಿ ಭೂ ಸ್ತರಭಂಗ-ಭೂಕಂಪನದ ಬಗ್ಗೆ ಭೂ ವಿಜ್ಞಾನಿ ಎಚ್ಚರಿಕೆ

    ಉಡುಪಿ: ಜಿಲ್ಲೆಯ ಬೈಂದೂರಿನಲ್ಲಿ ಶುಕ್ರವಾರ ಮಧ್ಯಾಹ್ನ ಅನುಭವವಾದ ಭೂಕಂಪನ ವಿಚಾರಕ್ಕೆ ಸಂಬಂಧಿಸಿದಂತೆ ಮಣಿಪಾಲದ ಭೂ ವಿಜ್ಞಾನಿ ಉದಯ ಶಂಕರ್ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ಭೂಮಿ ಮೇಲೆ ಮನುಷ್ಯನ ದಾಳಿಯಿಂದಲೇ ಇಂತಹ ಘಟನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

    ಗಣಿಗಾರಿಕೆ, ಬುಲ್ಡೋಜರ್‍ಗಳ ಬಳಕೆ, ಕಾಡು ನಾಶದಂತಹ ವಿಪರೀತ ಆಟಾಟೋಪಕ್ಕೆ ಕಡಿವಾಣ ಹಾಕದಿದ್ದರೆ ಮುಂದೆ ನಾವು ಅಂದುಕೊಳ್ಳುವ ಹಾಗೆ ಪರಿಸ್ಥಿತಿ ಇರುವುದಿಲ್ಲ ಎಂದು ಭೂ ವಿಜ್ಞಾನಿ ಉದಯ ಶಂಕರ್ ಭಟ್ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಜಿಲ್ಲೆಯ ಗೋಳಿಬೇರು, ಕ್ಯಾರ್ತೂರು ಸಾರಂಗಿ, ಗಂಗನಾಡು, ಅತ್ಯಾಡಿಯಲ್ಲಿ ಭೂಕಂಪನದ ಮಾಹಿತಿ ಸಿಕ್ಕಿದೆ. ಪಶ್ಚಿಮ ಘಟ್ಟದಲ್ಲಿ ಆದ ಭೂ ಸ್ತರಭಂಗ(ಭೂ ಕುಸಿತ) ಇದಕ್ಕೆ ಕಾರಣ. ಪಶ್ಚಿಮ ಘಟ್ಟದ ಉದ್ದಕ್ಕೂ ಈ ಹಿಂದೆಯೇ ಸ್ತರಭಂಗವಾಗಿದೆ. ಈ ಜಾಗದಲ್ಲೇ ಮತ್ತೆ ಭೂಕುಸಿತ ಆಗಿರಬಹುದು. ಇದರಿಂದಾಗಿ ಭೂ ಕಂಪನದ ಅನುಭವ ಆಗುತ್ತದೆ. ಜೋರಾದ ಶಬ್ಧ ಕೇಳಿಬರುತ್ತದೆ ಎಂದು ಹೇಳಿದ್ದಾರೆ.

    ಭೂಕಂಪನ ಅನ್ನೋದು ಸ್ವಾಭಾವಿಕ ಪ್ರಕ್ರಿಯೆ. ಆ ಭಾಗದಲ್ಲಿ ಜೆಸಿಬಿ ಬಳಕೆ- ಕಲ್ಲುಕೋರೆಯ ಸ್ಫೋಟದಿಂದ ಸ್ತರಭಂಗ ಆಗಿರಬಹುದು. ಪಶ್ಚಿಮಘಟ್ಟದ ಸರಣಿಯಲ್ಲಿ ಈ ಹಿಂದೆಯೇ ಭೂಮಿ ಬಿರುಕು ಬಿಟ್ಟಿತ್ತು. ಸದ್ಯ ಆಗಿರೋದು ಭೂಮಿಯ ಸ್ಟ್ರೆಸ್ ರಿಲೀಸ್ ಪ್ರೊಸೀಜರ್ ಅಷ್ಟೆ. ಮನುಷ್ಯನ ಚಟುವಟಿಕೆಗಳು ಹಿಡಿತದಲ್ಲಿ ಇರಬೇಕು, ಭೂಮಿಯ ಮೇಲೆ ಅಟ್ಟಹಾಸ ಕಮ್ಮಿ ಮಾಡಿದರೆ ಇಂತಹ ಬೆಳವಣಿಗೆಯನ್ನು ತಡೆಗಟ್ಟಬಹುದು ಎಂದು ಉದಯ ಶಂಕರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv