Tag: geologists

  • ಜೋಶಿಮಠ ಮುಳುಗುವ ಆತಂಕ – ಪರಿಸ್ಥಿತಿ ಅವಲೋಕಿಸಲು ತಜ್ಞರ ತಂಡಕ್ಕೆ ಸೂಚನೆ

    ಜೋಶಿಮಠ ಮುಳುಗುವ ಆತಂಕ – ಪರಿಸ್ಥಿತಿ ಅವಲೋಕಿಸಲು ತಜ್ಞರ ತಂಡಕ್ಕೆ ಸೂಚನೆ

    ಡೆಹ್ರಾಡೂನ್: ಜೋಶಿಮಠದ (Joshimath) ನಿವಾಸಿಗಳು ತಮ್ಮ ಮನೆಗಳು, ರಸ್ತೆಗಳಲ್ಲಿ ಉಂಟಾಗಿರುವ ದೊಡ್ಡ ಬಿರುಕುಗಳಿಂದ ಅತೀವ ಅತಂಕಕ್ಕೀಡಾಗಿದ್ದಾರೆ. 500ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಜನರು ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.

    ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA) ಸದಸ್ಯರು ಉತ್ತರಾಖಂಡದ (Uttarakhand) ಜೋಶಿಮಠಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಚಮೋಲಿ ಜಿಲ್ಲೆಯಲ್ಲಿರುವ ಜೋಶಿಮಠ ಉಳಿಸುವ ಎಲ್ಲ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ (PMO) ಹೇಳಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಮಾಡಿದ್ರೆ ರಾಜಕೀಯ ಎದುರಾಳಿಗಳಿಗೆ ಸಂಕಷ್ಟನಾ..?

    ಭಾನುವಾರ ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ನಡೆದ ಪರಿಶೀಲನಾ ಸಭೆಯ ನಂತರ ಗೃಹ ಸಚಿವಾಲಯದ ಗಡಿ ನಿರ್ವಹಣಾ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರು ಉತ್ತರಾಖಂಡಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಲು ನಿಧರ್ರಿಸಲಾಯಿತು. ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಿಶ್ರಾ, ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ನಡೆಸಿದ ಸಭೆಯಲ್ಲಿದ್ದರು. ಇದನ್ನೂ ಓದಿ:  ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ಎಸೆದಿಲ್ಲ: NFR ಸ್ಪಷ್ಟನೆ

    ಸದ್ಯ ಸಂತ್ರಸ್ತರಿಗೆ ನೈತಿಕ ಬೆಂಬಲದ ಅಗತ್ಯವಿದೆ. ಆದ್ದರಿಂದ ವಿಭಿನ್ನ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವ ತಜ್ಞರನ್ನು ಆಹ್ವಾನಿಸಿದ್ದೇವೆ. ಜ್ಯೋತಿಷಿಗಳಿಂದ ಧರ್ಮ ಶಾಸ್ತ್ರಿಗಳವರೆಗೂ ಜ್ಯೋತಿರ್ಮಠವನ್ನು ಸಂರಕ್ಷಿಸುವ ಆಚರಣೆಗಳ ಬಗ್ಗೆ ಅವರು ನಮಗೆ ತಿಳಿಸಿದ್ದಾರೆ ಎಂದು ಧಾರ್ಮಿಕ ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

    ಇದೇ ತಿಂಗಳ ಜನವರಿ 22-31ರ ವರೆಗೆ ನರಸಿಂಗ ದೇವಸ್ಥಾನದಲ್ಲಿ ವಿಶೇಷ ಯಾಗ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಅದನ್ನು ನಾವು ಮಾಡೇ ಮಾಡುತ್ತೇವೆ. ಹೊರತಾಗಿ ಪರಿಸ್ಥಿತಿಗೆ ಕಾರಣವೇನೆಂಬುದನ್ನು ತನಿಖೆ ಮಾಡಲು ತಜ್ಞರನ್ನು ಸಹ ಕರೆಸಬೇಕು. ಅಲ್ಲಿವರೆಗೆ ನಾವು ನೊಂದ ಜನರೊಂದಿಗೆ ನಿಲ್ಲುತ್ತೇವೆ ಎಂದು ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ತಿಳಿಸಿದ್ದಾರೆ.

    ನಾವು ಸಹ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋಗಿದ್ದೇವೆ. ನಮ್ಮೊಂದಿಗೆ ನಮ್ಮ ಕಾನೂನು ತಂಡವಿದೆ. ಈ ವಿಷಯವನ್ನು ಸಿಜೆಐ ಮುಂದೆ ಮಂಡಿಸಿ ತುರ್ತು ವಿಚಾರಣೆಗೆ ಮನವಿ ಮಾಡಲಾಗುವುದು. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಒತ್ತಾಯಿಸಲಾಗುವುದು ಎಂದು ಧಾರ್ಮಿಕ ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ, ಐಐಟಿ ರೂರ್ಕಿ, ವಾಡಿಯಾ ಇನ್‌ಸ್ಟಿಟ್ಯೂಟ್ ಆಫ್ ಹಿಮಾಲಯನ್ ಜಿಯಾಲಜಿ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈಡ್ರಾಲಜಿ ಮತ್ತು ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ತಜ್ಞರ ತಂಡಗಳು ಅಧ್ಯಯನ ಮಾಡುವಂತೆ ನಿರ್ದೇಶನ ನೀಡಲಾಗಿದೆ.

    ಎನ್‌ಡಿಆರ್‌ಎಫ್‌ನ ಒಂದು ತಂಡ ಮತ್ತು ಎಸ್‌ಡಿಆರ್‌ಎಫ್‌ನ 4 ತಂಡಗಳು ಈಗಾಗಲೇ ಜೋಶಿಮಠಕ್ಕೆ ತಲುಪಿದ್ದು, ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದ್ದಾರೆ. ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಲ್ಲಿ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಯ್ಯಪ್ಪ, ನೆಹರು ನಗರ ಬೆಟ್ಟಗಳು ವಾಸಕ್ಕೆ ಯೋಗ್ಯವಲ್ಲ- ಭೂ ವಿಜ್ಞಾನಿಗಳ ತಂಡ

    ಅಯ್ಯಪ್ಪ, ನೆಹರು ನಗರ ಬೆಟ್ಟಗಳು ವಾಸಕ್ಕೆ ಯೋಗ್ಯವಲ್ಲ- ಭೂ ವಿಜ್ಞಾನಿಗಳ ತಂಡ

    ಮಡಿಕೇರಿ: ವಿರಾಜಪೇಟೆಯಲ್ಲಿರುವ ಅಯ್ಯಪ್ಪ ಮತ್ತು ನೆಹರು ನಗರ ಬೆಟ್ಟಗಳು ಯಾವುದೇ ಕಾರಣಕ್ಕೂ ವಾಸಿಸಲು ಸುರಕ್ಷಿತವಲ್ಲ ಎಂದು ಕೇಂದ್ರ ಗಣಿ ಮತ್ತು ಭೂವಿಜ್ಞಾನ ಇಲಾಖೆ ವಿಜ್ಞಾನಿಗಳ ತಂಡ ಸ್ಪಷ್ಟಪಡಿಸಿದೆ.

    ಎರಡೂ ಬೆಟ್ಟಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಇಂದು ವಿಜ್ಞಾನಿಗಳ ತಂಡ ಬೆಟ್ಟಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜ್ಞಾನಿ ಕಪಿಲ್ ಸಿಂಗ್, ಸದ್ಯ ಬೆಟ್ಟದಲ್ಲಿ ಮೂಡಿರುವ ಬಿರುಕುಗಳು ಮುಂದೆ ಗುಡ್ಡ ಕುಸಿತದ ಮುನ್ಸೂಚನೆಯಂತಿವೆ. ಹೀಗಾಗಿ ಅಯ್ಯಪ್ಪ ಹಾಗೂ ನೆಹರು ಬೆಟ್ಟಗಳು ಯಾವುದೇ ಕಾರಣಕ್ಕೂ ವಾಸಕ್ಕೆ ಸುರಕ್ಷಿತವಾದ ಸ್ಥಳಗಳಲ್ಲ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಮಳೆಗಾಲದ ಸಂದರ್ಭದಲ್ಲಿ ಯಾವಾಗ ಬೇಕಾದರೂ ಬೆಟ್ಟ ಕುಸಿಯುವ ಸಾಧ್ಯತೆ ಇದೆ ಎಂದು ಅಧ್ಯಯನ ತಂಡ ಹೇಳಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ 54 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಜೊತೆಗೆ ಆಗಸ್ಟ್ 31 ರವರೆಗೆ ಈ ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗುವುದು. ಬಳಿಕ ವಿಜ್ಞಾನಿಗಳ ತಂಡದ ವರದಿಯನ್ನು ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಇತ್ತೀಚೆಗೆ ಎರಡೂ ಬೆಟ್ಟಗಳು ಭಾರೀ ಬಿರುಕು ಬಿಟ್ಟಿದ್ದವು. ಹೀಗಾಗಿ ಇಂದು ಬೆಂಗಳೂರಿನಿಂದ ಭೂವಿಜ್ಞಾನಿಗಳ ತಂಡ ಆಗಮಿಸಿ, ಎರಡೂ ಬೆಟ್ಟಗಳ ಮಣ್ಣು ಪರೀಕ್ಷೆ ನಡೆಸಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೇತೃತ್ವದಲ್ಲಿ ತಂಡ ಬೆಟ್ಟಕ್ಕೆ ಭೇಟಿ ನೀಡಿತ್ತು. ಕಪಿಲ್ ಸಿಂಗ್ ಮತ್ತು ಸುನಂದ ಬಸು ವಿಜ್ಞಾನಿಗಳ ತಂಡ ಮಳೆಗಾಲದಲ್ಲಿ ಬೆಟ್ಟ ಕುಸಿಯುವ ಸಾಧ್ಯತೆ ಇದೆ, ಹೀಗಾಗಿ ಅಲ್ಲಿ ವಾಸ ಮಾಡುವುದು ಯೋಗ್ಯವಲ್ಲ ಎಂದು ದೃಢಪಡಿಸಿದೆ.

    ಈ ಹಿಂದೆಯೇ ವಿರಾಜಪೇಟೆ ನಗರದ ನೆಹರು ನಗರ ಬೆಟ್ಟ ಮತ್ತು ಅಯ್ಯಪ್ಪ ಬೆಟ್ಟ ಕುಸಿಯುವ ಭೀತಿಯಲ್ಲಿವೆ. ನೆಹರು ನಗರದಲ್ಲಿ ಬೆಟ್ಟ ಸಂಪೂರ್ಣ ಬಾಯ್ತೆರಿದಿದ್ದು, ಬೆಟ್ಟದ ಬಿರುಕು ಕ್ಷಣ ಕ್ಷಣಕ್ಕೂ ಅಗಲವಾಗುತ್ತಿದೆ. ಅಲ್ಲದೆ, ಅಯ್ಯಪ್ಪ ಬೆಟ್ಟದಲ್ಲಿ ಸಹ ದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲೂ ಬೆಟ್ಟ ಕುಸಿಯಬಹುದು ಎಂದು ಜಿಲ್ಲಾಡಳಿತ ತಿಳಿಸಿತ್ತು.

    ಮುನ್ನೆಚ್ಚರಿಕಾ ಕ್ರಮವಾಗಿ ನೆಹರು ಬೆಟ್ಟದ 8 ಕುಟುಂಬಗಳನ್ನು ಹಾಗೂ ಅಯ್ಯಪ್ಪ ಬೆಟ್ಟದ ಬಳಿಯ 25 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿತ್ತು. ಈ ಎಲ್ಲ ಕುಟುಂಬಗಳಿಗೆ ವಿರಾಜಪೇಟೆಯ ಸರ್ಕಾರಿ ಶಾಲೆಯಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಸ್ಥಳಾಂತರಿಸಿದರೂ ಯಾವ ಪ್ರಮಾಣದಲ್ಲಿ ಗುಡ್ಡ ಕುಸಿಯಲಿದೆ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ವಿರಾಜಪೇಟೆ ನಗರದ ಜನತೆ ತೀವ್ರ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.