Tag: german

  • ಜರ್ಮನಿಯ ಕ್ರಿಸ್ಮಸ್‌ ಮಾರುಕಟ್ಟೆಯಲ್ಲಿ ಕಾರು ದಾಳಿ – ಇಬ್ಬರು ಸಾವು, 60 ಮಂದಿಗೆ ಗಾಯ

    ಜರ್ಮನಿಯ ಕ್ರಿಸ್ಮಸ್‌ ಮಾರುಕಟ್ಟೆಯಲ್ಲಿ ಕಾರು ದಾಳಿ – ಇಬ್ಬರು ಸಾವು, 60 ಮಂದಿಗೆ ಗಾಯ

    ಬರ್ಲಿನ್‌: ಜರ್ಮನಿಯ ಮ್ಯಾಗ್ಡೆಬರ್ಗ್‌ನ ಕ್ರಿಸ್‍ಮಸ್ ಮಾರುಕಟ್ಟೆಯಲ್ಲಿ (German Christmas Market) ಜನರ ಗುಂಪಿನ ಮೇಲೆ ಕಾರೊಂದು ನುಗ್ಗಿದ (Car Attack_ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ಹೇಳಿದ್ದಾರೆ.

    ದಾಳಿ ನಡೆಸಿದ ಕಾರು ಚಾಲಕ 50 ವರ್ಷ ವಯಸ್ಸಿನ ವೈದ್ಯನಾಗಿದ್ದು, ಈತ ಮೂಲತಃ ಸೌದಿ ಅರೇಬಿಯಾದವನು (Saudi Man) ಎನ್ನಲಾಗಿದೆ. ಜರ್ಮನಿಯ ಕಾಯಂ ನಿವಾಸಿ ಕಾರ್ಡ್ ಪಡೆದಿದ್ದ. ಸದ್ಯ ಘಟನೆ ಬಳಿಕ ಈತನನ್ನ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ ಸಂಬಂಧ ಟ್ರಂಪ್‌ ಜೊತೆ ಮಾತುಕತೆಗೆ ಸಿದ್ಧ: ಪುಟಿನ್‌

    ಸದ್ಯಕ್ಕೆ ಆತನೊಬ್ಬನೇ ದಾಳಿಕೋರ ಎಂದು ನಂಬಲಾಗಿದೆ. ನಮಗೆ ತಿಳಿದಂತೆ ಸದ್ಯದಲ್ಲಿ ನಗರಕ್ಕೆ ಬೇರೆ ಯಾವುದೇ ಅಪಾಯ ಇಲ್ಲ ಎಂದು ಸ್ಯಾಕ್ಸೋನಿ-ಅನ್ಹಾಲ್ಟ್ ಗವರ್ನರ್ ರೀನರ್ ಹಸ್ಲೋಫ್ ಸ್ಪಷ್ಟಪಡಿಸಿದ್ದಾರೆ. ಈ ಭಯಾನಕ ದುರಂತದಲ್ಲಿ ಹಲವರು ಸಂತ್ರಸ್ತರಾಗಿದ್ದಾರೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ದೃಶ್ಯಾವಳಿಗಳು ವೈರಲ್ ಆಗಿವೆ. ಕಪ್ಪು ಕಾರೊಂದು ಜನದಟ್ಟಣೆಯಿದ್ದ ಕಡೆಗೆ ರಭಸದಿಂದ ನುಗ್ಗಿದೆ. ಭಯಭೀತರಾದ ಜನತೆ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ದುರಂತ ಸಂಭವಿಸಿರುವುದು ಕಂಡುಬಂದಿದೆ. ಇಡೀ ಘಟನಾವಳಿಯ ವಿಡಿಯೋವನ್ನು ನಾಗರಿಕರೊಬ್ಬರು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ – ಮುಂದಿನ ವರ್ಷದಿಂದಲೇ ಎಲ್ಲಾ ನಾಗರಿಕರಿಗೂ ಫ್ರೀ!

    https://youtu.be/YlG_OlaLqTs?si=lSo-h5mJkp1GX1qv

    ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅಂಬುಲೆನ್ಸ್‌ಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಟ್ರೆಚರ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅವರು ತೆರಿಗೆ ವಿಧಿಸಿದ್ರೆ ನಾವು ಅವರ ಮೇಲೆ ಅಷ್ಟೇ ತೆರಿಗೆ ಹಾಕ್ತೀವಿ: ಭಾರತಕ್ಕೆ ಟ್ರಂಪ್‌ ಸಂದೇಶ

  • ವಿಮಾನ ಪತನ: ಹಾಲಿವುಡ್ ನಟ, ಪುತ್ರಿಯರಿಬ್ಬರು ದುರ್ಮರಣ

    ವಿಮಾನ ಪತನ: ಹಾಲಿವುಡ್ ನಟ, ಪುತ್ರಿಯರಿಬ್ಬರು ದುರ್ಮರಣ

    ಜರ್ಮನ್ (GERMAN) ಮೂಲದ ಖ್ಯಾತ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ (CHRISTIAN OLIVER) ವಿಮಾನ ದುರ್ಘಟನೆಯಲ್ಲಿ ನಿಧನರಾಗಿದ್ದಾರೆ. ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರು ಪ್ರವಾಸಕ್ಕೆಂದು ಸಣ್ಣ ವಿಮಾನವೊಂದರಲ್ಲಿ ಪ್ರಯಾಣಿಸುತ್ತಿದ್ದರು. ಅದು ಅಪಘಾತಕ್ಕೀಡಾಗಿ ಕೆರಿಬಿಯನ್ ಸಮುದ್ರಕ್ಕೆ ಬಿದ್ದಿತ್ತು.

    ಶುಕ್ರವಾರ ಕೆರಿಬಿಯನ್ ಸಮುದ್ರದ ಮಧ್ಯ ಇಂಥದ್ದೊಂದು ಘಟನೆ ನಡೆದಿದ್ದು, 51 ವರ್ಷದ ಕ್ರಿಶ್ಚಿಯನ್ ಆಲಿವರ್ ಹಾಗೂ ಹತ್ತು ವರ್ಷದ ಮತ್ತು ಹನ್ನೆರಡು ವರ್ಷದ ಇಬ್ಬರು ಪುತ್ರಿಯರು ನಿಧನರಾಗಿದ್ದಾರೆ. ಜೊತೆಗೆ ವಿಮಾನ ಪೈಲೆಟ್ ರಾಬರ್ಟ್ ಕೂಡ ಸಾವನ್ನಪ್ಪಿದ್ದಾರೆ.

     

    ಮೂಲಗಳ ಪ್ರಕಾರ ನಟ ಪ್ರಯಾಣಿಸುತ್ತಿದ್ದ ಲಘು ವಿಮಾನ ಸೇಂಟ್ ವಿನ್ಸೆಂಟ್ ಮತ್ತು ಕೆರಿಬಿಯನ್ ಗ್ರೆನಡೈನ್ಸ್ ದ್ವೀಪಗಳ ಭಾಗದ ಪ್ಯಾಗೆಟ್ ಫಾರ್ಮ್ ನಿಂದ ನಿರ್ಗಮಿಸಿದ್ದರು. ಈ ವಿಮಾನವು ದ್ವೀಪ ಸೆಂಟ್ ಲೂಸಿಯಾದಲ್ಲಿ ಲ್ಯಾಂಡ್ ಆಗಬೇಕಿತ್ತು. ವಿಮಾನ ಟೇಕಾಫ್ ಆಗುತ್ತಿದ್ದಂತೆಯೇ ಸಮಸ್ಯೆ ಕಾಣಿಸಿಕೊಂಡಿದೆ. ವಿಮಾನ ನಿಯಂತ್ರಣಕ್ಕೆ ಬಾರದೇ ಪತನವಾಗಿದೆ.

  • ನನ್ನ ಮಗಳು ಬದುಕಿದ್ದಾಳೆ, ಆಕೆಯನ್ನು ರಕ್ಷಿಸಿ – ಅರೆಬೆತ್ತಲೆ ಮೆರವಣಿಗೆಯಾಗಿದ್ದ ಶಾನಿ ಲೌಕ್ ತಾಯಿ ಮನವಿ

    ನನ್ನ ಮಗಳು ಬದುಕಿದ್ದಾಳೆ, ಆಕೆಯನ್ನು ರಕ್ಷಿಸಿ – ಅರೆಬೆತ್ತಲೆ ಮೆರವಣಿಗೆಯಾಗಿದ್ದ ಶಾನಿ ಲೌಕ್ ತಾಯಿ ಮನವಿ

    ಬರ್ಲಿನ್: ಇಸ್ರೇಲ್ (Israel) ಮೇಲೆ ದಾಳಿ ಮಾಡಿದ ಹಮಾಸ್ (Hamas) ಉಗ್ರರು ಅರೆಬೆತ್ತಲಾಗಿ ಮೆರವಣಿಗೆ ಮಾಡಿದ್ದ ಯುವತಿ ಶಾನಿ ಲೌಕ್ (Shani Louk) ಇನ್ನೂ ಜೀವಂತವಾಗಿದ್ದಾಳೆ, ಆಕೆಯನ್ನು ರಕ್ಷಿಸಿ ಎಂದು ಆಕೆಯ ತಾಯಿ ಮನವಿ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ವೀಯೋವನ್ನು ಸಾಮಾಜಿಕ ಜಾಲತಾಣಗದಲ್ಲಿ ಬಿಡುಗಡೆ ಮಾಡಿರುವ ಶಾನಿ ಲೌಕ್ ತಾಯಿ ರಿಕಾರ್ಡಾ ಲೌಕ್, ನನ್ನ ಮಗಳು ಇನ್ನೂ ಜೀವಂತವಾಗಿದ್ದಾಳೆ. ಆಕೆ ಹಮಾಸ್ ಆಸ್ಪತ್ರೆಯಲ್ಲಿ ಇರುವುದಾಗಿ ಗಾಜಾ ಪಟ್ಟಿಯಲ್ಲಿರುವ ನನ್ನ ಕುಟುಂಬದ ಸ್ನೇಹಿತರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

    ಶಾನಿ ಇನ್ನೂ ಜೀವಂತವಾಗಿದ್ದಾಳೆ. ಆದರೆ ಆಕೆಯ ತಲೆಗೆ ಗಂಭೀರವಾದ ಗಾಯವಾಗಿದೆ. ಆಕೆ ಗಂಭೀರ ಸ್ಥಿತಿಯಲ್ಲಿದ್ದಾಳೆ. ಆಕೆಯ ಜೀವ ಪ್ರತಿ ನಿಮಿಷವೂ ನಿರ್ಣಾಯಕ ಸ್ಥಿತಿಯಲ್ಲಿದೆ. ನಾವು ಜರ್ಮನ್ (German) ಸರ್ಕಾರವನ್ನು ತ್ವರಿತವಾಗಿ ಕಾರ್ಯನಿರ್ವಹಿಸುವಂತೆ ಕೇಳಿಕೊಳ್ಳುತ್ತಿದ್ದೇವೆ ಎಂದು ಮಹಿಳೆ ವೀಡಿಯೋದಲ್ಲಿ ಹೇಳಿದ್ದಾರೆ.

    ಅಧಿಕಾರದ ಪ್ರಶ್ನೆಯ ಬಗ್ಗೆ ಯಾರೂ ವಾದಿಸಕೂಡದು. ಶಾನಿಯನ್ನು ಗಾಜಾ ಪಟ್ಟಿಯಿಂದ ಹೊರತರಲು ತಕ್ಷಣವೇ ಕಾರ್ಯನಿರ್ವಹಿಸಬೇಕು. ಶಾನಿಯನ್ನು ಜೀವಂತವಾಗಿ ಹಾಗೂ ಆರೋಗ್ಯವಾಗಿ ಮನೆಗೆ ಮರಳಿ ಕರೆತರಲು ಜರ್ಮನಿ ಅಧಿಕಾರಿಗಳಿಗೆ ಇದು ನನ್ನ ಕಡೆಯ ಮನವಿ ಎಂದು ಅವರು ಹೇಳಿದ್ದಾರೆ.

    ಶಾನಿ ಇನ್ನೂ ಬದುಕಿದ್ದಾಳೆ ಎಂದು ಮಾಹಿತಿ ನೀಡಿರುವ ಮಹಿಳೆಯ ಕುಟುಂಬದ ಸ್ನೇಹಿತರಿಗೆ ಸ್ವತಃ ಹಮಾಸ್‌ನ ಆಸ್ಪತ್ರೆಯಲ್ಲಿ ಆಕೆಯನ್ನು ಭೇಟಿಯಾಗಲು ಅವಕಾಶ ನೀಡಲಾಗಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಇಸ್ರೇಲ್‌ಗೆ ಬಂದಿಳಿದ ಅಮೆರಿಕದ ಶಸ್ತ್ರಾಸ್ತ್ರ ಹೊತ್ತ ಮೊದಲ ವಿಮಾನ – ಇಸ್ರೇಲ್‌ಗೆ ನೂರಾನೆ ಬಲ

    ಶಾನಿ ಲೌಕ್ ಟ್ಯಾಟೂ ಕಲಾವಿದೆಯಾಗಿದ್ದು, ಶನಿವಾರ ಗಾಜಾ ಪಟ್ಟಿಯ ಸಮೀಪ ನಡೆದ ಟ್ರೈಬ್ ಆಫ್ ಸೂಪರ್‌ನೋವಾ ಸಂಗೀತ ಉತ್ಸವದಲ್ಲಿ ಪಾಲ್ಗೊಂಡಿದ್ದಳು. ಇದೇ ವೇಳೆ ಹಮಾಸ್ ಉಗ್ರರು ಅಲ್ಲಿ ದಾಳಿ ನಡೆಸಿ, ಶಾನಿ ಸೇರಿದಂತೆ ಹಲವು ಯುವತಿಯರನ್ನು ಅಪಹರಿಸಿ ಒತ್ತೆಯಾಳಾಗಿಟ್ಟಿದ್ದರು. ಉಗ್ರರು ಶಾನಿಯನ್ನು ಪಿಕಪ್ ಟ್ರಕ್‌ನ ಹಿಂಭಾಗದಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿ, ಅರೆಬೆತ್ತಲೆ ಸ್ಥಿತಿಯಲ್ಲಿ ಮೆರವಣಿಗೆ ಮಾಡಿದ್ದರು. ಈ ವೀಡಿಯೋ ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಮಾತ್ರವಲ್ಲದೆ ಹಮಾಸ್ ಉಗ್ರರ ಕ್ರೌರ್ಯ ಜಾಗತಿಕವಾಗಿ ಕೆಂಗಣ್ಣಿಗೆ ಕಾರಣವಾಗಿದೆ.

    ಶಾನಿ ಲೌಕ್ ಅರೆಬೆತ್ತಲಾಗಿ ಮೆರವಣಿಗೆ ಮಾಡಿದ್ದ ಸಂದರ್ಭ ರಕ್ತಸಿಕ್ತ ಸ್ಥಿತಿಯಲ್ಲಿ ಹಾಗೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಈ ಹಿನ್ನೆಲೆ ಆಕೆಯನ್ನು ಹಮಾಸ್ ಉಗ್ರರು ಕೊಂದಿರಬಹುದು ಎನ್ನಲಾಗಿತ್ತು. ಈ ಹಿನ್ನೆಲೆ ಆಕೆಯ ತಾಯಿ ಇದಕ್ಕೂ ಮೊದಲು ವೀಡಿಯೋ ಮಾಡಿ, ನನ್ನ ಮಗಳ ಶವವನ್ನಾದರೂ ಕೊಡಿ ಎಂದು ಕೇಳಿಕೊಂಡಿದ್ದರು. ಇದನ್ನೂ ಓದಿ: ಹಮಾಸ್-ಇಸ್ರೇಲ್‌ ಸಂಘರ್ಷದಲ್ಲಿ 14 ಅಮೆರಿಕನ್ನರ ಸಾವು; ದಾಳಿಯನ್ನು ಖಂಡಿಸಿದ ಜೋ ಬೈಡನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜರ್ಮನಿಯಲ್ಲಿ ಆರ್ಥಿಕ ಹಿಂಜರಿತ

    ಜರ್ಮನಿಯಲ್ಲಿ ಆರ್ಥಿಕ ಹಿಂಜರಿತ

    ಬರ್ಲಿನ್: ಜರ್ಮನಿಯಲ್ಲಿ (Germany) ಕುಟುಂಬಗಳು ಖರ್ಚು ವಚ್ಚಗಳನ್ನು ಬಿಗಿಗೊಳಿಸಿರುವ ಹಿನ್ನೆಲೆ ಈ ವರ್ಷದ ತ್ರೈಮಾಸಿಕದಲ್ಲಿ ಆರ್ಥಿಕತೆಯಲ್ಲಿ ಹಿಂಜರಿತ (Recession) ಕಂಡಿದೆ.

    ಗುರುವಾರ ಜರ್ಮನಿಯ ಅಂಕಿಅಂಶಗಳ ಕಚೇರಿ ವರ್ಷದ ಮೊದಲ ತ್ರೈಮಾಸಿಕ ಜಿಡಿಪಿ (ಒಟ್ಟು ದೇಶೀಯ ಉತ್ಪನ್ನ) ವರದಿಯನ್ನು ಬಿಡುಗಡೆಗೊಳಿಸಿದೆ. ಜಿಡಿಪಿ (GDP) ಬೆಳವಣಿಗೆ ದರ 0.3%ಕ್ಕೆ ಇಳಿದಿದ್ದು, ಇದೀಗ ಜರ್ಮನಿ ಆರ್ಥಿಕ ಹಿಂಜರಿತದ ಹಾದಿಯಲ್ಲಿದೆ.

     

    2022ರ ಕೊನೆಯ ತ್ರೈಮಾಸಿಕ ವರದಿಯಲ್ಲಿ ಜರ್ಮನಿಯ ಜಿಡಿಪಿ 0.5% ರಷ್ಟು ಇಳಿಕೆಯಾಗಿತ್ತು. ಇದಾದ ಬಳಿಕ ಗುರುವಾರ ಬಿಡುಗಡೆಯಾಗಿರುವ ಜಿಡಿಪಿಯಲ್ಲಿಯೂ ಕುಸಿತ ಕಂಡಿದೆ. ಸತತ ಎರಡು ತ್ರೈಮಾಸಿಕಗಳ ಜಿಡಿಪಿ ಕುಸಿತವಾದರೆ ಅದನ್ನು ತಾಂತ್ರಿಕ ಹಿಂಜರಿತ ಎಂದು ಕರೆಯಲಾಗುತ್ತದೆ.

    ಉಕ್ರೇನ್‌ನ ಮೇಲೆ ರಷ್ಯಾ ಆಕ್ರಮಣ ಮಾಡಿದ ಬಳಿಕ ಮಾಸ್ಕೋದೊಂದಿಗೆ ಸಂಬಂಧಗಳನ್ನು ಕಡಿತಗಿಳಿಸುವ ನಾಯಕರ ನಿರ್ಧಾರದಿಂದ ಯುರೋಪ್‌ನ ಅತಿ ದೊಡ್ಡ ಆರ್ಥಿಕತೆ ಇದೀಗ ಒತ್ತಡದಲ್ಲಿದೆ. ಕೆಲ ಅಂಕಿ ಅಂಶಗಳ ಪ್ರಕಾರ ಮೊದಲ ತ್ರೈಮಾಸಿಕದಲ್ಲಿ ಜರ್ಮನ್‌ನಲ್ಲಿ ನಾಗರಿಕರು ತಮ್ಮ ಗೃಹಬಳಕೆಯ ಖರ್ಚನ್ನು ತೀವ್ರವಾಗಿ ಕಡಿಮೆ ಮಾಡಿದ್ದಾರೆ. ಗ್ರಾಹಕರು ತಮ್ಮ ಹಣವನ್ನು ಬಟ್ಟೆ, ಪೀಠೋಪಕರಣ, ವಾಹನ ಸೇರಿದಂತೆ ದುಬಾರಿ ವಸ್ತುಗಳಿಗಾಗಿ ವ್ಯಯಿಸಲು ಇಷ್ಟಪಡುತ್ತಿಲ್ಲ. ಈ ಹಿನ್ನೆಲೆ ಅಂತಿಮ ಬಳಕೆಯ ವೆಚ್ಚ 1.2% ರಷ್ಟು ಕುಸಿದಿದೆ. ಇದನ್ನೂ ಓದಿ: ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ

    ಕಳೆದ ವರ್ಷದ ಕೊನೆಯಲ್ಲಿ ಜರ್ಮನಿ ಆರ್ಥಿಕ ಹಿಂಜರಿತಕ್ಕೆ ಸಿಲುಕಿಕೊಂಡಿತು. ಇದಕ್ಕೆ ಮುಖ್ಯ ಕಾರಣ ಇಂಧನ ಬೆಲೆಯಲ್ಲಿನ ಏರಿಕೆ. ಈ ಹಿನ್ನೆಲೆ ಗ್ರಾಹಕರು ತಮ್ಮ ಖರ್ಚು ವೆಚ್ಚಗಳನ್ನು ಮಿತವಾಗಿ ಬಳಸುತ್ತಿದ್ದಾರೆ ಎಂದು ಪ್ಯಾಂಥಿಯಾನ್ ಮ್ಯಾಕ್ರೋ ಎಕನಾಮಿಕ್ಸ್‌ನ ಮುಖ್ಯ ಯೂರೋ ವಲಯದ ಅರ್ಥಶಾಸ್ತ್ರಜ್ಞ ಕ್ಲಾಸ್ ವಿಸ್ಟೆಸೆನ್ ತಿಳಿಸಿದ್ದಾರೆ. ಇದನ್ನೂ ಓದಿ: IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?

  • ಜರ್ಮನ್ ಚಿತ್ರೋತ್ಸವದಲ್ಲಿ ಮಂಸೋರೆ ನಿರ್ದೇಶನ 19.20.21 ಸಿನಿಮಾ

    ಜರ್ಮನ್ ಚಿತ್ರೋತ್ಸವದಲ್ಲಿ ಮಂಸೋರೆ ನಿರ್ದೇಶನ 19.20.21 ಸಿನಿಮಾ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ (Mansore) ಅವರ ’19.20.21’ ಸಿನಿಮಾ ಇಂಡೋಜರ್ಮನ್ ಫಿಲ್ಮ್ ವೀಕ್ 12ನೇ ಆವೃತ್ತಿಯ ಚಲನಚಿತ್ರೋತ್ಸವಕ್ಕೆ (Chirotsava) ಆಗಿಯಾಗಿದೆ. ಇದೇ ತಿಂಗಳ ಮೇ 29 ರಿಂದ ಜೂನ್ 07ನೇ ತಾರೀಖಿನವರೆಗೆ ಜರ್ಮನಿಯ (German) ಬರ್ಲಿನ್‌ನಲ್ಲಿರುವ ಐತಿಹಾಸಿಕ ಬ್ಯಾಬಿಲೋನ್ ಥಿಯೇಟರ್‌ನಲ್ಲಿ ಈ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ‘19.20.21’ ಸಿನೆಮಾ ಪ್ರದರ್ಶನವಾಗಲಿದೆ.

    ಇದು ನೈಜ ಘಟನೆ ಆಧರಿಸಿದ ಸಿನಿಮಾವಾಗಿದ್ದು, ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಸಿನಿಮಾ ಮಾಡಿದ್ದಾರೆ ನಿರ್ದೇಶಕರು. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದ್ದ ಟೀಮ್, ಈ ಘಟನೆಗೆ ಸಂಬಂಧಿಸಿದ ಮಾಹಿತಿ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದಾರೆ. ಸಮುದಾಯದ ಒಬ್ಬ ಹುಡುಗನ ಹೋರಾಟದ ಕಥೆ ಈ ಸಿನಿಮಾದ ಜೀವಾಳ. ಇದನ್ನೂ ಓದಿ:ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ

    ರಂಗಭೂಮಿ ಕಲಾವಿದರರಾದ ಶೃಂಗ ಬಿ ವಿ (Shringa) ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ (MD Pallavi), ಮಹದೇವ್ ಹಡಪತ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರ ಸೇರಿದಂತೆ ಹಲವು ಕಡೆ ಚಿತ್ರವನ್ನು ಸೆರೆ ಹಿಡಿಯಲಾಗಿದೆ.

    ಶಿವು ಬಿ ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ (Virendra Mallanna) ಮತ್ತು ಅವಿನಾಶ್ ಜಿ  ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕತೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ (Devaraj.R) 19.20.21 ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

  • ಜರ್ಮನಿ ಸಚಿವರ ಭಾರತ ಪ್ರವಾಸ – ಹಲವು ಒಪ್ಪಂದಗಳಿಗೆ ಇಂದು ಸಹಿ

    ಜರ್ಮನಿ ಸಚಿವರ ಭಾರತ ಪ್ರವಾಸ – ಹಲವು ಒಪ್ಪಂದಗಳಿಗೆ ಇಂದು ಸಹಿ

    ನವದೆಹಲಿ: ಚೀನಾ (China), ರಷ್ಯಾದೊಂದಿಗೆ (Russia) ಭಾರತದ ಸಂಬಂಧಗಳು ಹಾಗೂ ಭಾರತ ಮತ್ತು ಜರ್ಮನಿ ನಡುವಿನ ಅಭಿವೃದ್ಧಿ ಸಹಕಾರ ಕುರಿತು ಚರ್ಚೆ ನಡೆಸಲು ಜರ್ಮನಿಯ ವಿದೇಶಾಂಗ ಸಚಿವೆ ಅನ್ನಾಲೆನಾ ಬೇರ್ಬಾಕ್ (Annalena Baerbock) ಅವರು ಭಾರತದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

    ಅನ್ನಾಲೆನಾ ಬೇರ್ಬಾಕ್ ಎರಡು ದಿನಗಳ ಭೇಟಿಯಾಗಿ ಭಾರತಕ್ಕೆ ಆಗಮಿಸಿದ್ದು, ವಿದೇಶಾಂಗ ಸವಿವ ಜೈಶಂಕರ್ (Jaishankar) ಜೊತೆಗೆ ಮಾತುಕತೆ ನಡೆಸಲಿದ್ದಾರೆ. ರಷ್ಯಾ-ಉಕ್ರೆನ್ ಸಂಘರ್ಷದ (Russia Ukraine War) ಜಾಗತಿಕ ಪರಿಣಾಮಗಳು, ಗಾಲ್ವಾನ್ ಕಣಿವೆ ಘಟನೆಗಳು, ಚೀನಾದೊಂದಿಗೆ ಭಾರತದ ಸಂಬಂಧಗಳ ಕುರಿತು ಉಭಯ ದೇಶಗಳ ಸಚಿವರು ಚರ್ಚೆ ಮಾಡಲಿದ್ದಾರೆ. ಇದನ್ನೂ ಓದಿ: ಸ್ವಂತ ಮಗಳು ಸೇರಿ 20ಕ್ಕೂ ಹೆಚ್ಚು ಯುವತಿಯರ ಮದುವೆ- ಸ್ವಘೋಷಿತ ಪ್ರವಾದಿ ಅರೆಸ್ಟ್

    ಇದೇ ವೇಳೆ ಎರಡೂ ಕಡೆಯವರು ವಿವಿಧ ಚಲನಶೀಲತೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇದರಿಂದ ಪರಸ್ಪರ ದೇಶದ ಜನರು ಎರಡೂ ದೇಶಗಳಲ್ಲಿ ಅಧ್ಯಯನ, ಸಂಶೋಧನೆ ಹಾಗೂ ಉದ್ಯೋಗ ಮಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಇದನ್ನೂ ಓದಿ: ಸತತ 1 ವರ್ಷ ಡ್ರಮ್‌ನಲ್ಲಿತ್ತು ಮಹಿಳೆ ದೇಹದ ಪೀಸ್‌ಗಳು – ಮನೆ ಬಾಡಿಗೆ ಕೊಟ್ಟಿದ್ದ ಮಾಲೀಕ ಶಾಕ್‌!

    ಭಾರತ ಜಿ7 ರಾಷ್ಟ್ರಗಳ (G7 Nations) ಅಧ್ಯಕ್ಷತೆ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಜರ್ಮನ್ ಸಚಿವರು ಭೇಟಿ ನೀಡಿದ್ದಾರೆ. ಜಿ20 ಶೃಂಗ ಸಭೆಯಲ್ಲಿ ಭಾರತವು ಜಾಗತಿಕವಾಗಿ ತನ್ನ ಸಾಮರ್ಥ್ಯ ನಿರ್ವಹಿಸಲು ಸಿದ್ಧವಾಗಿದೆ ಎಂಬುದನ್ನು ತೋರಿಸಿದೆ. ಎಲ್ಲಾ ಆಂತರಿಕ ಹಾಗೂ ಸಾಮಾಜಿಕ ಸವಾಲುಗಳ ನಡುವೆಯೂ ಭಾರತ ವಿಶ್ವದ ಇತರ ದೇಶಗಳಿಗೆ ಮಾದರಿಯಾಗಿದೆ. ಅಲ್ಲದೇ ಕಳೆದ 15 ವರ್ಷಗಳಲ್ಲಿ ಭಾರತವು 400 ಮಿಲಿಯನ್ ಜನರನ್ನು ಸಂಪೂರ್ಣ ಬಡತನದಿಂದ ಹೊರತರುವಲ್ಲಿ ಯಶಸ್ವಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಿರಿಕಿರಿ ಎಂದು ರೋಗಿಗೆ ಹಾಕಿದ್ದ ವೆಂಟಿಲೇಟರ್‌ನ್ನೇ ಆಫ್ ಮಾಡಿದ ವೃದ್ಧೆ

    ಕಿರಿಕಿರಿ ಎಂದು ರೋಗಿಗೆ ಹಾಕಿದ್ದ ವೆಂಟಿಲೇಟರ್‌ನ್ನೇ ಆಫ್ ಮಾಡಿದ ವೃದ್ಧೆ

    ಬರ್ಲಿನ್: ವೃದ್ಧೆಯೊಬ್ಬಳು ಆಸ್ಪತ್ರೆಯಲ್ಲಿದ್ದ (Hospital) ವೆಂಟಿಲೇಟರ್ (Ventilator) ಶಬ್ದವು ಕಿರಿಕಿರಿಯಾಗುತ್ತಿದೆ ಎಂದು ಪಕ್ಕದಲ್ಲಿದ್ದ ರೋಗಿಯ ವೆಂಟಿಲೇಟರ್‍ನ್ನು ಆಫ್ ಮಾಡಿದ ಘಟನೆ ಜರ್ಮನಿಯಲ್ಲಿ ನಡೆದಿದೆ.

    ಜರ್ಮನ್‍ನ (German) ನೈರುತ್ಯ ನಗರವಾದ ಮ್ಯಾನ್‍ಹೈಮ್‍ನಲ್ಲಿ ಈ ಘಟನೆ ನಡೆದಿದೆ. 72 ವರ್ಷದ ಜರ್ಮನ್ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಳು. ಈ ಸಂದರ್ಭದಲ್ಲಿ ಆಕೆಯ ಪಕ್ಕದಲ್ಲಿದ್ದ ರೋಗಿಯನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಆದರೆ ಆ ವೆಂಟಿಲೇಟರ್‌ನಿಂದ ತೀವ್ರ ಶಬ್ದ ಬರುತ್ತಿದೆ ಎಂದು 2 ಬಾರಿ ಆಫ್ ಮಾಡಿದ್ದಾಳೆ. ಇದನ್ನೂ ಓದಿ: ಗಡಿಪಾರು ನೋಟಿಸ್‌ಗೆ ಹೆದರಿ ಆತ್ಮಹತ್ಯೆಗೆ ಯತ್ನ – ಕ್ರಿಮಿನಲ್ ಆರೋಪಿ ಕೋಬ್ರಾ ಸುಹೇಲ್ ಸಾವು

    jail

    ಆದರೆ ಅಷ್ಟರಲ್ಲಿ ವೈದ್ಯರು ಗಮನಿಸಿದ್ದು, ವೆಂಟಿಲೇಟರ್‍ನಲ್ಲಿದ್ದ ರೋಗಿಯು ಸಾವಿನ ದವಡೆಯಿಂದ ಪಾರಾಗಿದ್ದಾನೆ. ಆದರೂ ಆತನಿಗೆ ತೀವ್ರ ನಿಗಾ ಘಟಕದ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೊಲೆಗೆ ಯತ್ನ ಆರೋಪದ ಅಡಿ ಜರ್ಮನಿ ಪೊಲೀಸರು ವೃದ್ಧೆಯನ್ನು ಬಂಧಿಸಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಈಗ ಆಕೆಯನ್ನು ಜೈಲಿಗೆ ಹಾಕಲಾಗಿದೆ. ಇದನ್ನೂ ಓದಿ: ದೆಹಲಿ ಗಲಭೆ ಕಲ್ಲು ತೂರಾಟ ಕೇಸ್‍ನಲ್ಲಿ ಉಮರ್ ಖಾಲಿದ್ ಖುಲಾಸೆ, ಬಿಡುಗಡೆ ಭಾಗ್ಯವಿಲ್ಲ

    Live Tv
    [brid partner=56869869 player=32851 video=960834 autoplay=true]

  • ಜಿ7 ಶೃಂಗಸಭೆ – ಮೋದಿ ಬಳಿ ತೆರಳಿ ಬೈಡನ್ ಶೇಕ್ ಹ್ಯಾಂಡ್

    ಜಿ7 ಶೃಂಗಸಭೆ – ಮೋದಿ ಬಳಿ ತೆರಳಿ ಬೈಡನ್ ಶೇಕ್ ಹ್ಯಾಂಡ್

    ಬರ್ಲಿನ್: ಪ್ರಧಾನಿ ನರೇಂದ್ರ ಮೋದಿ ಜರ್ಮನಿಯ ಸ್ಲೋಸ್ ಎಲ್ಮಾವ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಗೆ ತೆರಳಿದ್ದು, ಅಲ್ಲಿ ವಿಶ್ವದ ನಾಯಕರನ್ನು ಭೇಟಿಯಾಗಿದ್ದಾರೆ. ಜಾಗತಿಕ ನಾಯಕರೊಂದಿಗೆ ಮೋದಿ ಖುಷಿಯ ಕ್ಷಣ ಕಳೆದಿರುವುದು ಕ್ಯಾಮೆರಾ ಕಣ್ಣುಗಳು ಸೆರೆ ಹಿಡಿದಿವೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹಾಗೂ ಕೆನಡಾದ ಪ್ರಧಾನಿ ಜಸ್ಟಿನ್ ಟುಡ್ರೋ ಸೇರಿದಂತೆ ಅನೇಕ ಗಣ್ಯರೊಂದಿಗೆ ಮೋದಿ ಆತ್ಮೀಯವಾಗಿ ಸಮಯ ಕಳೆದಿದ್ದಾರೆ. ಇದನ್ನೂ ಓದಿ: ಮೋದಿಯವರ ವ್ಯಕ್ತಿತ್ವ, ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

    ಜೋ ಬೈಡನ್ ಮೋದಿ ಅವರನ್ನು ಸ್ವಾಗತಿಸಲು ಹಾಗೂ ಸಂತೋಷವನ್ನು ಹಂಚಿಕೊಳ್ಳಲು ಅವರ ಬಳಿ ತೆರಳಿದ್ದಾರೆ. ಕೆನಡಾ ಪ್ರಧಾನಿಯೊಂದಿಗೆ ಸಂವಹನದಲ್ಲಿ ತೊಡಗಿದ್ದ ಮೋದಿ ಬೈಡನ್ ಕಂಡು ಸಂತೋಷದಿಂದ ಅವರ ಕೈ ಕುಲುಕಿ ಮಾತನಾಡಿದ್ದಾರೆ. ಇದನ್ನೂ ಓದಿ: ಅಗ್ನಿಪಥ್‌ಗೆ ಭರ್ಜರಿ ಪ್ರತಿಕ್ರಿಯೆ – 4 ದಿನಕ್ಕೆ 94 ಸಾವಿರ ಅರ್ಜಿ

    ಮೇ ತಿಂಗಳಲ್ಲಿ ಜಪಾನ್‌ನಲ್ಲಿ ನಡೆದ ಕ್ವಾಡ್ ಶೃಂಗಸಭೆಯ ಬಳಿಕ ಮೋದಿ ಮತ್ತು ಬೈಡನ್ ಜಿ7 ಶೃಂಗಸಭೆಯಲ್ಲಿ ಮೊದಲ ಬಾರಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರು ಜುಲೈನಲ್ಲಿ ನಡೆಯಲಿರುವ ಐ2ಯು2 ವರ್ಚುವಲ್ ಶೃಂಗಸಭೆಯಲ್ಲಿ ಇಸ್ರೇಲ್ ಹಾಗೂ ಸಂಯುಕ್ತ ಅರಬ್ ಸಂಸ್ಥಾನದ ನಾಯಕರನ್ನು ಭೇಟಿಯಾಗಲಿದ್ದಾರೆ.

    Live Tv

  • ಬಟ್ಟೆ ಧರಿಸಿದರೆ ಸೋಮಾರಿತನ ಬರುತ್ತೆ ಎಂದು 5 ವರ್ಷದಿಂದ ಬಟ್ಟೆನೇ ಧರಿಸಿಲ್ಲ ಈ ಮಹಿಳೆ

    ಬಟ್ಟೆ ಧರಿಸಿದರೆ ಸೋಮಾರಿತನ ಬರುತ್ತೆ ಎಂದು 5 ವರ್ಷದಿಂದ ಬಟ್ಟೆನೇ ಧರಿಸಿಲ್ಲ ಈ ಮಹಿಳೆ

    ಬರ್ನಿನ್: ಇತ್ತೀಚೆಗೆ ಮಹಿಳೆಯೊಬ್ಬರಿಗೆ ನೀರು ಎಂದರೆ ಅಲರ್ಜಿ ಇತ್ತು. ಈಗ ಇಲ್ಲೊಬ್ಬ ಮಹಿಳೆಗೆ ಬಟ್ಟೆ ಎಂದರೇ ಅಲರ್ಜಿ. ಮಹಿಳೆಯೊಬ್ಬಳಿಗೆ ಬಟ್ಟೆ ಎಂದರೆ ಆಗುವುದಿಲ್ಲ ಎಂದು ಆಕೆಯೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಇದು ಭಾರೀ ಸುದ್ದಿಯಾಗಿದೆ.

    ಜರ್ಮನಿ ನಿವಾಸಿ ಕೆರ್ಸ್ಟಿನ್ ಅವರಿಗೆ ಬಟ್ಟೆ ಎಂದರೆ ಆಗುವುದಿಲ್ಲ. ಇವರಿಗೆ ಬಟ್ಟೆ ಹಾಕಿಕೊಂಡರೆ ಸೋಮಾರಿತನ ಬರುತ್ತೆ ಎಂದು ಕಳೆದ 5 ವರ್ಷಗಳಿಂದ ಬಟ್ಟೆಯನ್ನು ಹಾಕಿಕೊಂಡಿಲ್ಲ. ಬಟ್ಟೆ ಬದಲಿಗೆ ಕೆರ್ಸ್ಟಿನ್ ತಮ್ಮ ಮೈ ಮುಚ್ಚಿಕೊಳ್ಳಲು ಟ್ಯಾಟೂ ಹಾಕಿಸಿಕೊಂಡಿರುವುದು ವಿಶೇಷವಾಗಿದೆ. ಇದನ್ನೂ ಓದಿ: ಪಾಪದ ಕೊಡ ನಮ್ಮದಾ ನಿಮ್ಮದಾ?: ಅಶೋಕ್‍ಗೆ ತಿರುಗೇಟು ಕೊಟ್ಟ ಸಿದ್ದು 

    ಈ ಫೋಟೋಗಳನ್ನು ಕೆರ್ಸ್ಟಿನ್ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೆರ್ಸ್ಟಿನ್ ಟ್ಯಾಟೂಗಾಗಿ 25,000 ಡಾಲರ್(ರೂ.24 ಲಕ್ಷಕ್ಕೂ ಹೆಚ್ಚು) ಖರ್ಚು ಮಾಡಿದ್ದಾಳೆ ಎಂದು ಆಕೆಯೇ ನೆಟ್ಟಿಗರಿಗೆ ತಿಳಿಸಿದ್ದಾರೆ.

    1992, 2014 ಮತ್ತು 2022 ರಲ್ಲಿ ಕೆರ್ಸ್ಟಿನ್ ಟ್ರಿಸ್ಟಾನ್ ಹೇಗಿದ್ದರು ಎಂಬುದನ್ನು ತೋರಿಸಲು ಆಕೆ ಫೋಟೋವನ್ನು ಶೇರ್ ಮಾಡಿಕೊಂಡಿದ್ದು, ಫುಲ್ ವೈರಲ್ ಆಗಿದೆ. ಕೆರ್ಸ್ಟಿನ್ ಭಿನ್ನ ಫೋಟೋಗಳು ನೆಟ್ಟಿಗರನ್ನು ಆಕರ್ಪಿಸುವ ಕೇಂದ್ರವಾಗುತ್ತಿದೆ. ಪ್ರಸ್ತುತ ಕೆರ್ಸ್ಟಿನ್ ಅವರಿಗೆ 50 ವರ್ಷವಾಗಿದ್ದು, ಇನ್‍ಸ್ಟಾದಲ್ಲಿ ಸುಮಾರು ಎರಡು ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಇದನ್ನೂ ಓದಿ: ಬೆಣ್ಣೆ ಹಳ್ಳದಲ್ಲಿ ಪ್ರವಾಹ – ನಾಲ್ವರು ಕಾರ್ಮಿಕರನ್ನ ರಕ್ಷಿಸಿದ ಅಗ್ನಿಶಾಮಕ ದಳ 

  • ಸವಾಲುಗಳ ನಡುವೆ ಪ್ರಧಾನಿ ಮೋದಿ ಯುರೋಪ್‌ ಪ್ರವಾಸ

    ಸವಾಲುಗಳ ನಡುವೆ ಪ್ರಧಾನಿ ಮೋದಿ ಯುರೋಪ್‌ ಪ್ರವಾಸ

    ನವದೆಹಲಿ: ಮೂರು ರಾಷ್ಟ್ರಗಳ ನಿರ್ಣಾಯಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರಮೋದಿ ಅವರು, ಯುರೋಪಿಯನ್ ಪಾಲುದಾರರೊಂದಿಗೆ ಶಾಂತಿ, ಸಮೃದ್ಧಿಗಾಗಿ ಸಹಕಾರದ ಮನೋಭಾವ ಬಲಪಡಿಸಲು ಹಾಗೂ ಕೋವಿಡ್ ಆರ್ಥಿಕ ಚೇತರಿಕೆಯನ್ನು ಬಲಪಡಿಸಲು ಬರ್ಲಿನ್, ಕೋಪನ್ ಹೇಗನ್ ಮತ್ತು ಪ್ಯಾರಿಸ್ ಪ್ರವಾಸಕ್ಕೆ ತೆರಳುತ್ತಿದ್ದಾರೆ.

    MODI VISIT EUROP

    ಅವರಿಂದು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಿದ್ದಾರೆ. ಇದರೊಂದಿಗೆ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನೂ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಲಿಫ್ಟ್‌ನಲ್ಲಿ ಹೋಗುವುದೆಂದರೆ ನನಗೆ ಭಯ: ಅಜಯ್ ದೇವಗನ್

    ಪ್ರವಾಸಕ್ಕೂ ಮುನ್ನ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಯುರೋಪ್ ಪ್ರವಾಸ ಮಾಡುತ್ತಿದ್ದೇನೆ ಎಂದಿದ್ದಾರೆ ಎಂದು ಹೇಳಿದೆ.

    ಭಾರತ ಮತ್ತು ಜರ್ಮನಿ ನಡುವಿನ ದೀರ್ಘಕಾಲದ ವಾಣಿಜ್ಯ ಸಂಬಂಧಗಳು ನಮ್ಮ ಕಾರ್ಯತಂತ್ರದ ಸಹಭಾಗಿತ್ವದ ಆಧಾರ ಸ್ತಂಭಗಳಲ್ಲಿ ಒಂದಾಗಿದೆ. 2021ಕ್ಕೆ ಭಾರತ ಮತ್ತು ಜರ್ಮನಿ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಗೆ 70 ವರ್ಷ ಕಳೆದಿದೆ. ಚಾನ್ಸೆಲರ್ ಸ್ಕೋಲ್ಜ್ ಮತ್ತು ನಾನು ಜಂಟಿಯಾಗಿ ನಮ್ಮ ಉದ್ಯಮ ಉತ್ತೇಜಿಸುವ ಗುರಿ ಹೊಂದಿದ್ದು, ಜಾಗತಿಕ ಬೆಳವಣಿಗಳ ಬಗ್ಗೆ ಚರ್ಚಿಸಲಿದ್ದೇವೆ. ಇದರಿಂದ ಎರಡೂ ದೇಶಗಳಲ್ಲಿ ಕೋವಿಡ್ ಆರ್ಥಿಕ ಚೇತರಿಕೆ ಬಲಪಡಿಸಲು ಸಹಾಯ ಮಾಡುತ್ತದೆ. ಬರ್ಲಿನ್‌ಗೆ ನನ್ನ ಭೇಟಿಯು ಚಾನ್ಸೆಲರ್ ಸ್ಕೋಲ್ಜ್ ಅವರೊಂದಿಗೆ ವಿವರವಾದ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲು ಒಂದು ಅವಕಾಶವಾಗಿದೆ. ಇದೇ ವೇಳೆ ಉಕ್ರೇನ್ ಯುದ್ಧದ ಬಗ್ಗೆಯೂ ಗಮನ ಹರಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

    ಯುರೋಪ್ ಖಂಡ ಭಾರತೀಯ ಮೂಲದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ನೆಲೆಯಾಗಿದೆ ಮತ್ತು ಜರ್ಮನಿಯು ಈ ಸಂಖ್ಯೆಯಲ್ಲಿ ಗಮನಾರ್ಹ ಪ್ರಮಾಣವನ್ನು ಹೊಂದಿದೆ. ಯುರೋಪ್‌ನೊಂದಿಗಿನ ನಮ್ಮ ಸಂಬಂಧಗಳಲ್ಲಿ ಪ್ರಮುಖ ಆಧಾರವಾಗಿದೆ ಮತ್ತು ಆದ್ದರಿಂದ ನಾನು ನನ್ನ ಭೇಟಿಯ ಅವಕಾಶವನ್ನು ತೆಗೆದುಕೊಳ್ಳುತ್ತೇನೆ ಅಲ್ಲಿ ನಮ್ಮ ಸಹೋದರ, ಸಹೋದರಿಯರನ್ನು ಭೇಟಿ ಮಾಡುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

    ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್‌ನ ಕೋಪನ್‌ಹೇಗನ್‌ಗೆ ಪ್ರಯಾಣಿಸಲಿದ್ದಾರೆ. ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು 2022ರಲ್ಲಿ ಪ್ರಧಾನಿಯವರ ಮೊದಲ ವಿದೇಶಿ ಪ್ರವಾಸವಾಗಿದೆ.