Tag: ghatkopar

  • ಮುಂಬೈ ಬಿಲ್ ಬೋರ್ಡ್ ದುರಂತ – ಜಾಹೀರಾತು ಕಂಪನಿಯ ಮಾಲೀಕ ಅರೆಸ್ಟ್

    ಮುಂಬೈ ಬಿಲ್ ಬೋರ್ಡ್ ದುರಂತ – ಜಾಹೀರಾತು ಕಂಪನಿಯ ಮಾಲೀಕ ಅರೆಸ್ಟ್

    ಮುಂಬೈ: ಘಾಟ್‍ಕೋಪರ್‌ನಲ್ಲಿ (Ghatkopar) ಬಿಲ್ ಬೋರ್ಡ್ (Billboard) ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ (Bhavesh Bhinde) ಎಂಬವರನ್ನು ರಾಜಸ್ಥಾನದ ಉದಯಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‍ನ ಮಾಲೀಕ ಭಿಂಡೆ ಅವರನ್ನು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ (Mumbai Police Crime Branch) ಬಂಧಿಸಿದೆ. ಆರೋಪಿಯ ಬಂಧನಕ್ಕೆ ಮುಂಬೈ ಪೊಲೀಸರಿಂದ ಒಟ್ಟು ಎಂಟು ತಂಡಗಳನ್ನು ವಿವಿಧ ಸ್ಥಳಗಳಿಗೆ ಕಳುಹಿಸಲಾಗಿತ್ತು. ಆರೋಪಿ ಪದೇ ಪದೇ ಸ್ಥಳ ಬದಲಿಸುತ್ತಿದ್ದ. ಅಲ್ಲದೇ ಹೆಸರು ಬದಲಿಸಿಕೊಂಡು ಉದಯಪುರದ ಹೋಟೆಲ್ ಒಂದರಲ್ಲಿ ತಂಗಿದ್ದ. ಇದೀಗ ಆರೋಪಿಯ ಬಂಧನವಾಗಿದ್ದು, ಇಂದು (ಶುಕ್ರವಾರ) ಬೆಳಗ್ಗೆ ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಂಜಲಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್ – ಬಗೆದಷ್ಟು ಬಯಲಾಗ್ತಿದೆ ವಿಶ್ವನ ದುಷ್ಕೃತ್ಯ

    ಜಾಹೀರಾತು ಫಲಕ ಅಳವಡಿಕೆ ಕಂಪನಿ, ಫಲಕ ಅಳವಡಿಸುವಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಕಂಪನಿಗೆ 40*40 ಅಡಿಗಳ ಫಲಕ ಅಳವಡಿಸಲು ಮಾತ್ರ ಪರವಾನಿಗೆ ಇತ್ತು. ದುರ್ಘಟನೆಗೆ ಕಾರಣವಾದ ಜಾಹೀರಾತು ಫಲಕ 120*120 ಅಡಿ ಇತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ.

    ಮೇ 12ರ ಸಂಜೆ ಘಾಟ್‍ಕೋಪರ್‌ನಲ್ಲಿ ಗಾಳಿ ಮಳೆಗೆ ಬೃಹತ್ ಜಾಹೀರಾತು ಫಲಕ ಕುಸಿದು ಬಿದ್ದಿತ್ತು. ಇದರ ಪರಿಣಾಮ ಮಳೆಯಿಂದಾಗಿ ಪೆಟ್ರೋಲ್ ಬಂಕ್‍ನಲ್ಲಿ ನಿಂತುಕೊಂಡಿದ್ದ 16 ಮಂದಿ ಸಾವಿಗೀಡಾಗಿದ್ದರು. ಘಟನೆಯಲ್ಲಿ 75 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಎಕ್ಸ್‌‌ಪ್ರೇಸ್‌ವೇಯಲ್ಲಿ ಸಂಚರಿಸುವ ಚಾಲಕರೇ ಎಚ್ಚರವಾಗಿರಿ – ಕೇವಲ 16 ದಿನದಲ್ಲಿ 12 ಸಾವಿರ ಕೇಸ್‌ ದಾಖಲು

  • ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು ಪಾರು ಮಾಡಿತು ಒಂದು ಕರೆ!

    ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು ಪಾರು ಮಾಡಿತು ಒಂದು ಕರೆ!

    ಮುಂಬೈ: ಇಲ್ಲಿನ ಘಾಟ್ಕೋಪರ್ ನಲ್ಲಿ 4 ಅಂತಸ್ತಿನ ಕಟ್ಟಡವೊಂದು ಮಂಗಳವಾರ ಬೆಳಗ್ಗೆ ಕುಸಿದು ಬಿದ್ದಿತ್ತು. ಘಟನೆಯಿಂದಾಗಿ ಕಟ್ಟಡದ ಅವಶೇಷಗಳಡಿ ಸಿಲುಕಿದ ವ್ಯಕ್ತಿಯೊಬ್ಬರನ್ನು ಬರೋಬ್ಬರಿ 15 ಗಂಟೆಗಳ ಬಳಿಕ ರಕ್ಷಣೆ ಮಾಡಲಾಗಿದೆ.

    57 ವರ್ಷದ ರಾಜೇಶ್ ಧೋಶಿ ಅಪಾಯದಿಂದ ಪಾರಾದ ವ್ಯಕ್ತಿ. ಘಟನೆ ನಡೆದ ವೇಳೆ ರಾಜೇಶ್ ಒಬ್ಬರೇ ಮನೆಯಲ್ಲಿದ್ದರು.

    ರಾಜೇಶ್ ಕುಟುಂಬ ಕುಸಿದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ವಾಸವಾಗಿದ್ದರು. ರಾಜೇಶ್ ಪತ್ನಿ ಹಾಗೂ ಮಗ ಮಂಗಳವಾರ ಬೆಳಗ್ಗೆ ದೇವಸ್ಥಾನಕ್ಕೆಂದು ಹೊರಗಡೆ ಹೋಗಿದ್ದರು. ಹೀಗಾಗಿ ರಾಜೇಶ್ ಒಬ್ಬರೇ ಮನೆಯಲ್ಲಿದ್ದರು. ಈ ವೇಳೆ ಕಟ್ಟಡ ಕುಸಿದಿದ್ದು, ಐವರು ದುರ್ಮರಣಕ್ಕೀಡಾಗಿ ಸುಮಾರು 30 ಕ್ಕೂ ಹೆಚ್ಚು ಮಂದಿ ಕಟ್ಟಡದೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇದರಲ್ಲಿ ರಾಜೇಶ್ ಕೂಡ ಒಬ್ಬರಾಗಿದ್ದರು. ಇನ್ನು ಘಟನೆಯಿಂದ 12 ಮಂದಿಯನ್ನು ಆ ಕೂಡಲೇ ರಕ್ಷಣೆ ಮಾಡಲಾಗಿತ್ತು.

    ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ರಾಜೇಶ್ ತನ್ನ ಕೈಯಲಿದ್ದ ಮೊಬೈಲ್ ನಿಂದ ಮಗನಿಗೆ ಕರೆ ಮಾಡಿ ತಾನು ಬದುಕಿದ್ದು, ಕಟ್ಟಡದೊಳಗೆ ಸಿಲುಕಿದ್ದೇನೆ. ನನ್ನ ಕಾಲಿನ ಮೇಲೆ ದೊಡ್ಡದಾದ ಸ್ಲಾಬ್ ತುಂಡೊಂದು ಬಿದ್ದಿದ್ದು, ಹೀಗಾಗಿ ಹೊರ ಬರಲು ಸಾಧ್ಯವಾಗುತ್ತಿಲ್ಲ ಅಂತ ಮಾಹಿತಿ ನಿಡಿದ್ದಾರೆ. ಕೂಡಲೇ ಕುಟುಂಬ ಎನ್ ಡಿಆರ್ ಎಫ್ ಸಿಬ್ಬಂದಿ ಅವರಿಗೆ ಮಾಹಿತಿ ರವಾನಿಸಿ ರಾಜೇಶ್ ಅವರನ್ನು ಅಪಾಯದಿಂದ ಪಾರು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

    ಅಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಟ್ಟಡದ ಅವಶೇಷಗಳಡಿ ಸಿಲುಕಿರುವ ರಾಜೇಶ್ ಅವರನ್ನು ಪತ್ತೆ ಹಚ್ಚಿ, ಬರೋಬ್ಬರಿ 15 ಗಂಟೆಗಳ ಬಳಿಕ ರಕ್ಷಿಸಿದ್ದಾರೆ. ಬಳಿಕ ಅವರನ್ನು ಸ್ಥಳೀಯ ಶಾಂತಿನಿಕೇತನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಮುಂಬೈನ ಘಟ್ಕೋಪರ್ ನಲ್ಲಿ ಸ್ಥಳೀಯ ಶಿವಸೇನೆ ಮುಖಂಡರೊಬ್ಬರ ಮಾಲೀಕತ್ವದ ನಾಲ್ಕು ಅಂತಸ್ತಿನ ಕಟ್ಟಡವೊಂದು ಮಂಗಳವಾರ ಬೆಳಗ್ಗೆ ಕುಸಿದುಬಿದ್ದಿದೆ. ರಾತ್ರಿ 9 ಗಂಟೆಯವರೆಗೆ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ 12 ಮಂದಿ ಸಾವನಪ್ಪಿದ್ದು, 11 ಮಂದಿಗೆ ಗಾಯಗಳಾಗಿತ್ತು. 23 ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖಂಡ ಸುನಿಲ್ ಶಿತಾಪ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕಟ್ಟಡದ ನೆಲ ಮಾಳಿಗೆಯಲ್ಲಿದ್ದ ನರ್ಸಿಂಗ್ ಹೋಂ ಅನ್ನು ದುರಸ್ತಿ ಮಾಡಲಾಗುತ್ತಿದ್ದು, ಇದೇ ಕಟ್ಟಡ ಕುಸಿದು ಬೀಳಲು ಕಾರಣವೆಂದು ಶಂಕಿಸಲಾಗಿದೆ.