Tag: Ghaziabad

  • ಯುಪಿ 15 ಜಿಲ್ಲೆಗಳು ಏ.30ರವರೆಗೂ ಲಾಕ್‍ಡೌನ್ – ಮನೆಯಿಂದ ಯಾರೂ ಹೊರಬರುವಂತಿಲ್ಲ

    ಯುಪಿ 15 ಜಿಲ್ಲೆಗಳು ಏ.30ರವರೆಗೂ ಲಾಕ್‍ಡೌನ್ – ಮನೆಯಿಂದ ಯಾರೂ ಹೊರಬರುವಂತಿಲ್ಲ

    – ಹೋಮ್ ಡಿಲೆವರಿ, ವೈದ್ಯಕೀಯ ಸಿಬ್ಬಂದಿಗೆ ಮಾತ್ರ ಅನುಮತಿ
    – ಅಗತ್ಯ ವಸ್ತುಗಳು ಮನೆ ಬಾಗಿಲಿಗೆ ರವಾನೆ

    ಲಕ್ನೋ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಕ್ನೋ, ನೋಯ್ಡಾ, ಆಗ್ರಾ, ವಾರಣಾಸಿ, ಗಾಜಿಯಾಬಾದ್, ಮೀರತ್ ಸೇರಿದಂತೆ 15 ಜಿಲ್ಲೆಗಳಲ್ಲಿ ಏಪ್ರಿಲ್ 30ರವರೆಗೂ ಲಾಕ್‍ಡೌನ್ ವಿಸ್ತರಿಸಲಾಗಿದೆ.

    ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಆರ್.ಕೆ. ತಿವಾರಿ, ರಾಜ್ಯದ ಲಕ್ನೋ, ಆಗ್ರಾ, ಗಾಜಿಯಾಬಾದ್, ಗೌತಂಬುದ್ ನಗರ, ಕಾನ್ಪುರ, ವಾರಣಾಸಿ, ಶಾಮ್ಲಿ, ಮೀರತ್, ಬರೇಲಿ, ಬುಲಂದ್‍ಶಹರ್, ಫಿರೋಜಾಬಾದ್, ಮಹಾರಾಜಗಂಜ್, ಸೀತಾಪುರ, ಸಹರಾನ್‍ಪುರ ಹಾಗೂ ಬಸ್ತಿ ಜಿಲ್ಲೆಗಳಲ್ಲಿ ಏಪ್ರಿಲ್ 30ರವರೆಗೆ ಲಾಕ್‍ಡೌನ್ ವಿಸ್ತರಿಸಲಾಗಿದೆ. ಅಷ್ಟೇ ಅಲ್ಲದೆ ಕೇವಲ ವೈದ್ಯಕೀಯ ಹಾಗೂ ಹೋಮ್ ಡಿಲೆವರಿ ಸಿಬ್ಬಂದಿಗೆ ಮಾತ್ರ ಹೊರಗೆ ಬರಲು ಅವಕಾಶವಿದೆ ಎಂದು ತಿಳಿಸಿದ್ದಾರೆ.

    ಎಲ್ಲಾ ಅಗತ್ಯ ಸರಕುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಲಿದೆ. ಯಾರಿಗೂ ತಮ್ಮ ಮನೆಗಳಿಂದ ಹೊರಹೋಗಲು ಅನುಮತಿ ನೀಡುವುದಿಲ್ಲ ಎಂದು ಆರ್.ಕೆ.ತಿವಾರಿ ಖಡಕ್ ಸಂದೇಶ ರವಾನಿಸಿದ್ದಾರೆ.

    ಲಾಕ್‍ಡೌನ್ ವಿಸ್ತರಿಸಿದ 15 ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಸಮುದಾಯ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಯವರೆಗೆ 21 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 326ಕ್ಕೆ ತಲುಪಿದೆ. ಇಲ್ಲಿವರೆಗೂ ಸೋಂಕಿಗೆ ಒಳಗಾದವರಲ್ಲಿ 21 ಜನರು ಚೇತರಿಸಿಕೊಂಡಿದ್ದು, 3 ಮಂದಿ ಮೃತಪಟ್ಟಿದ್ದಾರೆ.

    ಕೊರೊನಾ ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಏಪ್ರಿಲ್ 14 ರವರೆಗೆ 21 ದಿನಗಳ ಲಾಕ್‍ಡೌನ್ ಘೋಷಿಸಿದ್ದರು. ಮಂಗಳವಾರ ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳು ಲಾಕ್‍ಡೌನ್ ವಿಸ್ತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದವು. ಆದರೆ ಕೇಂದ್ರ ಸರ್ಕಾರ ಈವರೆಗೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.

  • ಆಸ್ಪತ್ರೆಯಲ್ಲಿ ಅರೆನಗ್ನವಾಗಿ ತಬ್ಲಿಘಿಗಳ ಓಡಾಟ, ದಾದಿಯರೊಂದಿಗೆ ಅಶ್ಲೀಲ ವರ್ತನೆ

    ಆಸ್ಪತ್ರೆಯಲ್ಲಿ ಅರೆನಗ್ನವಾಗಿ ತಬ್ಲಿಘಿಗಳ ಓಡಾಟ, ದಾದಿಯರೊಂದಿಗೆ ಅಶ್ಲೀಲ ವರ್ತನೆ

    ನವದೆಹಲಿ: ಚಿಕಿತ್ಸೆ ಕೊಡಲು ಬಂದಿದ್ದ ಡಾಕ್ಟರ್ ಮೇಲೆ ಹಾಗೂ ಎಲ್ಲೆಂದರಲ್ಲಿ ಉಗುಳಿ ವಿಕೃತಿ ಮೆರೆದಿದ್ದ ತಬ್ಲಿಘಿಗಳು ಗುರುವಾರ ನರ್ಸ್ ಗಳೊಂದಿಗೆ ಅಸಭ್ಯವಾಗಿದೆ ವರ್ತಿಸಿದ್ದಾರೆ.

    ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಯು ಕ್ವಾರಂಟೈನ್‍ನಲ್ಲಿರುವ ತಬ್ಲಿಘಿಗಳಿಂದ ಹಿಂಸೆ ಅನುಭವಿಸುತ್ತಿದ್ದಾರೆ. ನಿಜಾಮುದ್ದೀನ್ ಮರ್ಕಜ್ ಸಮೀಪ ಗಾಜಿಯಾಬಾದ್‍ನ ಆಸ್ಪತ್ರೆಯೊಂದರಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಬ್ಲಿಘಿಗಳು ದಾದಿಯರ ಮುಂದೆ ಅರೆನಗ್ನವಾಗಿ ಓಡಾಡುವುದು ಹಾಗೂ ಅಶ್ಲೀಲ ಸನ್ನೆಗಳ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಅಸಭ್ಯ ನಡೆ ಮುಂದುವರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನೂ ಓದಿ: ದೆಹಲಿಯ ಜಮಾತ್ ಸಭೆಯಿಂದ ದೇಶಾದ್ಯಂತ ಕೊರೊನಾ ಹರಡಿದ್ದು ಹೇಗೆ?

    ಗಾಜಿಯಾಬಾದ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಉತ್ತರ ಪ್ರದೇಶ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿ ವೈದ್ಯಕೀಯ ವೀಕ್ಷಣೆಗೆ ಒಳಪಡಿಸಲಾಗಿರುವ ಉತ್ತರ ಪ್ರದೇಶದ ನಗರ ಮೂಲದ ತಬ್ಲಿಘಿಗಳು ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರು ಪ್ಯಾಂಟ್ ಧರಿಸದೇ ತಿರುಗಾಡುತ್ತಿರುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದು, ಕರ್ಕಷವಾಗಿ ಹಾಡುವುದು ಹಾಗೂ ಸಿಗರೇಟ್ ಕೊಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

    ತಬ್ಲಿಘಿ ಜಮಾತ್‍ನ ನಿಜಾಮುದ್ದೀನ್ ಸಂಕೀರ್ಣದಿಂದ ಬುಧವಾರ ಸ್ಥಳಾಂತರಿಸಿದ ಕ್ವಾರಂಟೈನ್‍ಗಳ ವಿರುದ್ಧ ನರ್ಸ್ ಗಳು ದೂರಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕ್ವಾರಂಟೈನ್‍ಗಳಿಂದ ನಮಾಜ್

    ಬುಧವಾರ ಏನಾಗಿತ್ತು?:
    ನಿಜಾಮುದ್ದೀನ್‍ನ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 167 ಜನರನ್ನು ತುಘಲಕಾಬಾದ್‍ನಲ್ಲಿ 2,140 ಗಂಟೆಗಳ ಕಾಲ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಈ ಪೈಕಿ 97 ಜನರನ್ನು ಡೀಸೆಲ್ ಶೆಡ್ ತರಬೇತಿ ಶಾಲೆಯ ಹಾಸ್ಟೆಲ್ ಕ್ಯಾರೆಂಟೈನ್ ಸೆಂಟರ್ ಮತ್ತು 70 ಜನರಿಗೆ ಆರ್‍ಪಿಎಫ್ ಬ್ಯಾರಕ್ ಕ್ಯಾರಂಟೈನ್ ಸೆಂಟರ್ ನಲ್ಲಿ ಇರಿಸಲಾಗಿದೆ ಎಂದು ಎಎನ್‍ಐ ಸುದ್ದಿ ಸಂಸ್ಥೆ ಬುಧವಾರ ವರದಿ ಮಾಡಿತ್ತು.

    ಕ್ವಾರಂಟೈನ್‍ನಲ್ಲಿರುವ ಕೆಲವರು ಬುಧವಾರ ಬೆಳಗ್ಗೆಯಿಂದ ಅಶಿಸ್ತಿನಿಂದ ವರ್ತಿಸಿದ್ದರು. ಆಹಾರ ಪದಾರ್ಥಗಳಿಗೆ ಅಸಮಂಜಸ ಬೇಡಿಕೆ ಇಟ್ಟಿದ್ದರು. ಅಷ್ಟೇ ಅಲ್ಲದೆ ಕ್ಯಾರೆಂಟೈನ್ ಸೆಂಟರ್ ನಲ್ಲಿರುವ ಸಿಬ್ಬಂದಿ, ವೈದ್ಯರೊಂದಿಗೆ ಅಸಭ್ಯವಾಗಿ ನಡೆದುಕೊಂಡು, ಅವರ ಮೇಲೆ ಉಗುಳಿದ್ದರು. ಜೊತೆಗೆ ಹಾಸ್ಟೆಲ್ ಕಟ್ಟಡದ ಸುತ್ತಲೂ ತಿರುಗಾಟ ನಡೆಸಿದ್ದರು ಎಂದು ವರದಿಯಾಗಿತ್ತು. ಇದನ್ನೂ ಓದಿ: ದೇಶದಲ್ಲಿ 2,400ಕ್ಕೂ ಹೆಚ್ಚು ಜನರಿಗೆ ಕೊರೊನಾ – ಇನ್ನೆರಡು ವಾರದಲ್ಲೇ 10,000 ತಲುಪೋ ಸಾಧ್ಯತೆ

    ಮಸೀದಿಯಲ್ಲಿ ನಡೆದ ಕಾರ್ಯಕ್ರಮ ಏನು?
    ತಬ್ಲಿಘಿ-ಎ-ಜಮಾತ್ ಎಂಬ ಧಾರ್ಮಿಕ ಸಂಸ್ಥೆ ಮಾರ್ಚ್ 1ರಿಂದ ಮಾರ್ಚ್ 15ರವರೆಗೂ ದೆಹಲಿ ಹೊರವಲಯದಲ್ಲಿರುವ ನಿಜಾಮುದ್ದೀನ್ ಪ್ರಾಂತ್ಯದ ಮರ್ಕಜ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿವಿಧ ರಾಜ್ಯಗಳಿಂದ 2,500ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂಡೋನೇಷಿಯಾ, ಮಲೇಷಿಯಾ, ಥಾಯ್ಲೆಂಡ್, ಸೌದಿ ಅರೇಬಿಯಾ, ಕಜಕಿಸ್ತಾನ ಸೇರಿದಂತೆ ಒಟ್ಟು 16 ದೇಶಗಳ ಧರ್ಮಗುರುಗಳಿಂದ ಉಪನ್ಯಾಸವನ್ನು ಆಯೋಜಿಸಲಾಗಿತ್ತು.

    ಕಾರ್ಯಕ್ರಮದ ಅವಧಿಯಲ್ಲಿ ಮರ್ಕಜ್ ಮಸೀದಿಯಲ್ಲೇ 280 ಧರ್ಮಗುರುಗಳು ಉಳಿದುಕೊಂಡಿದ್ದರು. 8 ಸಾವಿರಕ್ಕೂ ಹೆಚ್ಚು ಭಾರತೀಯ ಮುಸ್ಲಿಮರಿಂದಲೂ ಅದೇ 6 ಅಂತಸ್ತಿನ ಮಸೀದಿಯಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಧಾರ್ಮಿಕ ಕಾರ್ಯಕ್ರಮದಲ್ಲಿ ಕೊರೋನಾ ವೈರಸ್ ಪಾಲ್ಗೊಂಡವರಿಗೆ ಕೊರೊನಾ ವೈರಸ್ ಹಬ್ಬಿದೆ.

    ಉಲ್ಲಂಘನೆ ಯಾಕೆ?
    ಈ ಕಾರ್ಯಕ್ರಮದ ಆಯೋಜಕರು ಮತ್ತು ಬೆಂಬಲಿಸುವ ವ್ಯಕ್ತಿಗಳು ಯಾವುದೇ ಉಲ್ಲಂಘನೆ ಆಗಿಲ್ಲ. ಜನತಾ ಕಫ್ರ್ಯೂ ಮತ್ತು 21 ದಿನಗಳ ಲಾಕ್‍ಡೌನ್ ಘೋಷಣೆಯಾಗಿದ್ದರಿಂದ ಅಲ್ಲಿದ್ದ ಮಂದಿಗೆ ಊರಿಗೆ ತೆರಳಲು ಸಾಧ್ಯವಾಗಿಲ್ಲ ಎಂದು ವಾದಿಸುತ್ತಿದ್ದಾರೆ. ಆದರೆ ಈ ಕಾರ್ಯಕ್ರಮ ಕಾನೂನು ಮತ್ತು ನಿಯಮಗಳನ್ನು ಉಲ್ಲಂಘಿಸಿ ನಡೆಸಲಾಗಿದೆ ಎನ್ನುವುದಕ್ಕೆ ಹಲವು ಸಾಕ್ಷ್ಯಗಳು ಸಿಗುತ್ತಿವೆ.

    ಉಲ್ಲಂಘನೆ -1: ಪ್ರವಾಸಿ ವೀಸಾದಡಿ ಬಂದವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ಆದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ನೀಡಿ ಪ್ರವಾಸಿ ವೀಸಾ ಪಡೆದುಕೊಂಡಿದ್ದರು. ಈಗ ಈ ವೀಸಾ ಪಡೆದು ಬಂದವನ್ನು ಬಂದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಗೃಹ ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ.

    ಕಳೆದ 2 ದಿನಗಳಿಂದ ಈ ಜಾಗದಲ್ಲಿ 281 ವಿದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ನೇಪಾಳ 19, ಮಲೇಷ್ಯಾ 20, ಅಫ್ಘಾನಿಸ್ಥಾನ 1, ಮ್ಯಾನ್ಮಾರ್ 33, ಕಿರ್ಗಿಸ್ಥಾನ 28, ಇಂಡೋನೇಷ್ಯಾ 72, ಥಾಯ್ಲೆಂಡ್ 7, ಶ್ರೀಲಂಕಾ 34, ಬಾಂಗ್ಲಾದೇಶ 19, ಇಂಗ್ಲೆಂಡ್ 3, ಫಿಜಿ 4, ಫ್ರಾನ್ಸ್, ಸಿಂಗಾಪುರ, ಕುವೈತ್, ಅಫ್ಘಾನಿಸ್ಥಾನ, ಅಲ್ಜೀರಿಯಾದಿಂದ ತಲಾ ಒಬ್ಬೊಬ್ಬರು ಭಾಗವಹಿಸಿದ್ದಾರೆ. ಇದು ಪತ್ತೆಯಾದವರ ಸಂಖ್ಯೆ, ಇಲ್ಲಿಂದ ಹಲವು ರಾಜ್ಯಗಳಿಗೆ ವಿದೇಶಿಯರು ಪ್ರಯಾಣಿಸಿದ್ದು ಅದರ ಲೆಕ್ಕ ಸಿಗಬೇಕಿದೆ.

    ಉಲ್ಲಂಘನೆ – 2: ವಿದೇಶದಿಂದ ಬಂದಂತಹ ವ್ಯಕ್ತಿಗಳು ಹೋಮ್ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯ. ಎಲ್ಲ ರಾಜ್ಯ ಸರ್ಕಾರಗಳು ಈ ವಿಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು ಮನೆಗೆ ತೆರಳಿ ನೋಟಿಸ್ ಅಂಟಿಸಿ ಬರುತ್ತಿದ್ದಾರೆ. ಆದರೆ ಇಲ್ಲಿ ವಿದೇಶದಿಂದ ಬಂದವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ವಿದೇಶಿ ವ್ಯಕ್ತಿಗಳ ಪೈಕಿ ಎಷ್ಟು ಜನ ಆದೇಶ ಉಲ್ಲಂಘಿಸಿದ್ದಾರೆ ಎನ್ನುವುದು ಮುಂದೆ ತಿಳಿದು ಬರಲಿದೆ. ಈ ಕಾರಣಕ್ಕಾಗಿ ಐಪಿಸಿ ಸೆಕ್ಷನ್ 271(ಸೋಂಕು ಇದ್ದರೂ ಕ್ವಾರಂಟೈನ್ ನಿಯಮ ಉಲ್ಲಂಘನೆ) ಅಡಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಹಲವು ರಾಜ್ಯ ಸರ್ಕಾರಗಳು ವಿದೇಶದಿಂದ ಪ್ರವಾಸಕ್ಕೆ ಬಂದವರ ಮಾಹಿತಿ ಸಿಗುತ್ತಿಲ್ಲ ಪತ್ತೆ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದವು. ಈಗ ನಾಪತ್ತೆಯಾದ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರಬಹುದೇ ಎನ್ನುವ ಅನುಮಾನ ಎದ್ದಿದೆ.

    ಉಲ್ಲಂಘನೆ – 3: ದೆಹಲಿ ಸರ್ಕಾರ ಫೆ.13 ರಂದು 200ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಿತ್ತು. ಅಂದು ಸುದ್ದಿಗೋಷ್ಠಿ ನಡೆಸಿದ್ದ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಐಪಿಎಲ್ ಸೇರಿದಂತೆ ಎಲ್ಲ ಸಭೆ ಸಮಾರಂಭಗಳಿಗೆ ಸರ್ಕಾರ ನಿಷೇಧ ಹೇರಿದೆ ಎಂದು ತಿಳಿಸಿದ್ದರು. ನಿಷೇಧ ಹೇರಿದ್ದರೂ ಈ ಕಾರ್ಯಕ್ರಮ ಮಾ.15 ರವರೆಗೆ ಹೇಗೆ ನಡೆಯಿತು ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

    ಉಲ್ಲಂಘನೆ – 4: 1897ರ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಸೆಕ್ಷನ್ 3 ಉಲ್ಲಂಘನೆಯಾಗಿದೆ. ಈ ಕಾಯ್ದೆ ಅಡಿ ಸಾಂಕ್ರಾಮಿಕ ರೋಗವನ್ನು ಹರಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ. ಕೊರೊನಾ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾರ್ಚ್ 13 ರಂದು ಈ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು.

    ಉಲ್ಲಂಘನೆ – 5 : ಈ ಕಾರ್ಯಕ್ರಮದ ಆಯೋಜಕರು ಐಪಿಸಿ ಸೆಕ್ಷನ್ ಗಳನ್ನು ಸಹ ಉಲ್ಲಂಘನೆ ಮಾಡಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 269(ನಿರ್ಲಕ್ಷ್ಯದಿಂದ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡಿರುವುದು), 270(ಉದ್ದೇಶಪೂರ್ವಕವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ಸೋಂಕನ್ನು ಹರಡಿರುವುದು) ಮತ್ತು 120 ಬಿ(ಕ್ರಿಮಿನಲ್ ಒಳಸಂಚು) ಉಲ್ಲಂಘಿಸಿದ್ದು ದೆಹಲಿ ಪೊಲೀಸರು ಈಗ 1897ರ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಮತ್ತು ಈ ಮೇಲೆ ತಿಳಿಸಿದ ಐಪಿಸಿ ಸೆಕ್ಷನ್ ಅಡಿ ಆಯೋಜಕರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

  • ಹಣದಾಸೆಗೆ ಸುಳ್ಳು ಗ್ಯಾಂಗ್ ರೇಪ್ ಕಥೆ ಕಟ್ಟಿದ ಇಬ್ಬರು ಮಹಿಳೆಯರು ಅರೆಸ್ಟ್

    ಹಣದಾಸೆಗೆ ಸುಳ್ಳು ಗ್ಯಾಂಗ್ ರೇಪ್ ಕಥೆ ಕಟ್ಟಿದ ಇಬ್ಬರು ಮಹಿಳೆಯರು ಅರೆಸ್ಟ್

    – ಸರ್ಕಾರದಿಂದ ಧನಸಹಾಯ ಪಡೆಯಲು ಖತರ್ನಾಕ್ ಪ್ಲಾನ್

    ಲಕ್ನೋ: ಒಂದೆಡೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಅತ್ಯಾಚಾರದ ಪ್ರಕರಣಗಳು ಹೆಚ್ಚು ನಡೆಯುತ್ತಿದೆ. ಇನ್ನೊಂದೆಡೆ ಗಾಜಿಯಾಬಾದ್‍ನಲ್ಲಿ ನಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹಣ ದೋಚಲು ಮಹಿಳೆಯರಿಬ್ಬರು ಸುಳ್ಳು ಆರೋಪ ಮಾಡಿ ಕಂಬಿ ಎಣೆಸುತ್ತಿದ್ದಾರೆ.

    ಗಾಜಿಯಾಬಾದ್‍ನ ಮುಸ್ಸೂರಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಈ ಘಟನೆ ನಡೆದಿದೆ. ರೇಪ್ ಸಂತ್ರಸ್ತೆಯರು ಎಂದು ಸುಳ್ಳು ಹೇಳಿ ಇಬ್ಬರು ಮಹಿಳೆಯರು ಸರ್ಕಾರದಿಂದ ಹಣ ಪಡೆಯಲು ಮಾಡಿದ್ದ ಪ್ಲಾನ್ ಈಗ ಮಕಾಡೆ ಮಲಗಿದೆ. ತಡರಾತ್ರಿ 11 ಗಂಟೆ ವೇಳೆಗೆ ಮಹಿಳೆ ಪೊಲೀಸ್ ಠಾಣೆಗೆ ಕರೆ ಮಾಡಿ, ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿದ್ದಾಳೆ.

    ಈ ಬಗ್ಗೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಮಹಿಳೆ ರಸ್ತೆ ಮೇಲೆ ಪ್ರಜ್ಞೆ ತಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ತಕ್ಷಣ ಆಕೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ವಿಚಾರಣೆ ವೇಳೆ, ರಾತ್ರಿ ಲಿಫ್ಟ್ ನೀಡುವ ನೆಪದಲ್ಲಿ ಗುಂಪೊಂದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದೆ ಎಂದು ಮಹಿಳೆ ಹೇಳಿದ್ದಳು. ಅಲ್ಲದೆ ವೈದ್ಯಕೀಯ ಪರೀಕ್ಷೆಯನ್ನು ನಿರಾಕರಿಸಿದ್ದಳು. ಆಗ ಪೊಲೀಸರಿಗೆ ಅನುಮಾನ ಮೂಡಿ ಈ ಬಗ್ಗೆ ತನಿಖೆ ಕೈಗೊಂಡಾಗ ಮಹಿಳೆಯ ನಿಜಬಣ್ಣ ಬಯಲಾಗಿದೆ.

    ಮಹಿಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಸುಳ್ಳು ದೂರು ಕೊಟ್ಟು ನಾಟಕವಾಡಿರುವುದು ಬಯಲಾಗಿದೆ. ಸರ್ಕಾರದಿಂದ ಅತ್ಯಾಚಾರ ಸಂತ್ರಸ್ತೆಗೆ ಸಿಗುವ ಧನ ಸಹಾಯವನ್ನು ಪಡೆಯೋದಕ್ಕೆ ಮಹಿಳೆ ಈ ಖತರ್ನಾಕ್ ಪ್ಲಾನ್ ಮಾಡಿರುವುದು ಬಯಲಾಗಿದೆ.

    ಮಹಿಳೆಯ ಅಸಲಿಯತ್ತು ತಿಳಿಯುತ್ತಿದ್ದಂತೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಹಾಗೆಯೇ ಆರೋಪಿ ಜೊತೆಗೆ ಕೈಜೋಡಿಸಿದ್ದ ಇನ್ನೋರ್ವ ಮಹಿಳೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮುಂದಾಗಿದೆ. ಆದರೆ ಹೀಗೆ ಮಹಿಳೆಯರೇ ಸುಳ್ಳು ಆರೋಪ ಮಾಡಿ ಹಣ ದೋಚಲು ಮುಂದಾಗಿದ್ದು ವಿಪರ್ಯಾಸವಾಗಿದೆ.

  • ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

    ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

    ಲಕ್ನೋ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮುರಾದ್ ನಗರದಲ್ಲಿ ನಡೆದಿದೆ.

    ಮೃತ ತಾಯಿಯನ್ನು ಮುರಾದ್ ನಗರದ ಪ್ರೀತ್ ವಿಹಾರ್ ಕಾಲೋನಿ ನಿವಾಸಿ 32 ವರ್ಷದ ದೀಪಾ ಎಂದು ಗುರುತಿಸಲಾಗಿದೆ. ದೀಪಾ ಮಕ್ಕಳಾದ 8 ವರ್ಷದ ರೀನಾ ಮತ್ತು 5 ವರ್ಷದ ಗಂಡು ಮಗು ಲಲಿತ್ ಮೇಲೂ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದು, ತಾಯಿ ದೀಪಾ ಮತ್ತು ಮಗಳು ರೀನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮಗ ಲಲಿತ್ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿ ನರೇಶ್ ಕುಮಾರ್ ಜಾಡಾನ್ ತಿಳಿಸಿದ್ದಾರೆ.

    ಈ ಘಟನೆಯ ಬಗ್ಗೆ ಮಾತನಾಡಿರುವ ನರೇಶ್ ಕುಮಾರ್, ಘಟನಾ ಸ್ಥಳದಲ್ಲಿ ಸಂಪೂರ್ಣ ಅವ್ಯವಸ್ಥೆ ಇದೆ. ಈ ಪ್ರಕರಣವು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತೋರುತ್ತದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

  • ನಾವು ಶಾಶ್ವತವಾಗಿ ನೋವು ಅನುಭವಿಸುವ ಕಾಲ ಮುಗಿಯಿತು: ಉಗ್ರರ ವಿರುದ್ಧ ಮೋದಿ ಕಿಡಿ

    ನಾವು ಶಾಶ್ವತವಾಗಿ ನೋವು ಅನುಭವಿಸುವ ಕಾಲ ಮುಗಿಯಿತು: ಉಗ್ರರ ವಿರುದ್ಧ ಮೋದಿ ಕಿಡಿ

    ಲಕ್ನೋ: ಉಗ್ರರ ದಾಳಿಯನ್ನು ಸಹಿಸಿಕೊಂಡು ಕೂರುವ ಕಾಲ ಮುಗಿದು ಹೋಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಭಾರತದ ಮೇಲೆ ದಾಳಿ ನಡೆಸುವ ಉಗ್ರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದ ಕೇಂದ್ರ ಕೈಗಾರಿಕಾ ರಕ್ಷಣಾ ಪಡೆಯ (ಸಿಐಎಸ್‍ಎಫ್) 50ನೇ ಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ಸಾಕು ಸಾಕಿನ್ನು. ನಾವು ಶಾಶ್ವತವಾಗಿ ನೋವು ಅನುಭವಿಸುತ್ತ ಕೂರುವ ಕಾಲ ಮುಗಿದು ಹೋಯಿತು ಎಂದು ಉರಿ ಹಾಗೂ ಪುಲ್ವಾಮಾ ದಾಳಿಯನ್ನು ಮೋದಿ ಪ್ರಸ್ತಾಪಿಸಿದರು.

    ನೆರೆಯ ಶತ್ರು ರಾಷ್ಟ್ರ ಹಾಗೂ ದೇಶದಲ್ಲಿ ಸಂಚು ರೂಪಿಸುವ ಕೆಲವು ವೈರಿಗಳಿಗೆ ಹೊರಗಿನ ಶಕ್ತಿಗಳ ಸಹಕಾರ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಿಐಎಸ್‍ಎಫ್ ನಂತಹ ಭದ್ರತಾ ಪಡೆಗಳ ಪಾತ್ರ ಮಹತ್ವದ್ದಾಗಿದೆ. ನಮ್ಮೊಂದಿಗೆ ಶತ್ರು ದೇಶಗಳು ನೇರವಾಗಿ ಯುದ್ಧ ಮಾಡುವ ಸಾಮಥ್ರ್ಯ ಹೊಂದಿಲ್ಲ. ಹೀಗಾಗಿ ದೇಶದಲ್ಲಿರುವ ಶತ್ರುಗಳಿಗೆ ಕುಮ್ಮಕ್ಕು, ಸಹಕಾರ ನೀಡುತ್ತಿವೆ ಎಂದು ಪರೋಕ್ಷಾಗಿ ಪಾಕಿಸ್ತಾನವನ್ನು ಕುಟುಕಿದರು.

    ಸಿಐಎಸ್‍ಎಫ್ ದೇಶದ ಜನರನ್ನು ರಕ್ಷಿಸುತ್ತಿದೆ. ಸುರಕ್ಷತೆಗೆ ಅನೇಕ ತಂತ್ರಗಳಿವೆ. ಅವು ಸಮಯಕ್ಕೆ ತಕ್ಕಂತೆ ಬದಲಾಗುತ್ತವೆ. ಹಾಗೇ ಸಿಐಎಸ್‍ಎಫ್ ವರ್ಷದಿಂದ ವರ್ಷಕ್ಕೆ ಅನೇಕ ರಕ್ಷಣಾ ತಂತ್ರಗಳನ್ನು ಬಳಿಸಿಕೊಂಡು ಬೆಳೆಯುತ್ತಿದೆ. ಒಬ್ಬ ವ್ಯಕ್ತಿಯ ರಕ್ಷಣೆ ಸುಲಭ; ಆದರೆ ಒಂದು ಸಂಸ್ಥೆಯ ರಕ್ಷಣೆ ಬಹಳ ಕಷ್ಟ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪಕ್ಕದ್ಮನೆ ಆಂಟಿ ಮೇಲೆ ಲವ್-ಮದ್ವೆಗಾಗಿ 4 ವರ್ಷದ ಕಂದಮ್ಮನನ್ನೇ ಅಪಹರಿಸಿದ!

    ಪಕ್ಕದ್ಮನೆ ಆಂಟಿ ಮೇಲೆ ಲವ್-ಮದ್ವೆಗಾಗಿ 4 ವರ್ಷದ ಕಂದಮ್ಮನನ್ನೇ ಅಪಹರಿಸಿದ!

    ಘಜಿಯಾಬಾದ್: 4 ವರ್ಷದ ಮಗುವಿನ ತಾಯಿಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ 28 ವರ್ಷದ ಯುವಕನೊಬ್ಬ ಆಕೆಯ ಕಂದನನ್ನು ಅಪಹರಣ ಮಾಡಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ ನಗರದಲ್ಲಿ ನಡೆದಿದೆ.

    28 ವರ್ಷದ ಮೌನು ತ್ಯಾಗಿ ಮಗುವನ್ನು ಅಪಹರಣ ಮಾಡಿದ್ದ ಆರೋಪಿ. ಸದ್ಯ ಆರೋಪಿ ಅಪಹರಣ ಮಾಡಿದ್ದ ಮಗುವನ್ನು ದೆಹಲಿಯಿಂದ ಸಹರಾನ್ಪುರ್ ಮಾರ್ಗವಾಗಿ ಬಸ್ಸಿನಲ್ಲಿ ತೆರಳುತ್ತಿದ್ದ ವೇಳೆ ಪೊಲೀಸರು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ.

    ಆರೋಪಿ ಮೌನು ತ್ಯಾಗಿ ಕೂಲಿ ಕಾರ್ಮಿಕನಾಗಿದ್ದು, ಮಹಿಳೆ ವಾಸಿಸುತ್ತಿದ್ದ ಮನೆಯ ಬಳಿಯೇ ವಾಸಿಸುತ್ತಿದ್ದ. ಅಲ್ಲದೇ ಕಳೆದ ಒಂದು ವರ್ಷದಿಂದ ಮಹಿಳೆಗೂ ಪರಿಚಯವಿದ್ದ. ಆದರೆ ಜುಲೈ 24 ರಂದು ಮಗು ಶಾಲೆಗೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ತ್ಯಾಗಿ ಅಪಹರಣ ಮಾಡಿದ್ದ. ಮಗು ಕಾಣೆಯಾದ ಬಗ್ಗೆ 25 ರಂದು ಮಹಿಳೆ ದೂರು ದಾಖಲಿಸಿದ್ದರು.

    ಅಂದಹಾಗೇ ಕುಡಿತದ ದಾಸನಾಗಿದ್ದ ಪತಿಯನ್ನು ತೊರೆದಿದ್ದ ಮಹಿಳೆ ಕಳೆದ ಕೆಲ ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದರು. ಇದನ್ನೇ ಅನುಕೂಲ ಮಾಡಿಕೊಂಡ ತ್ಯಾಗಿ ತನ್ನೊಂದಿಗೆ ಮದುವೆಯಾಗುವಂತೆ ಮಹಿಳೆಗೆ ಒತ್ತಾಯ ಮಾಡಿದ್ದ. ಆದರೆ ಈಗಾಗಲೇ ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಮೌನು ತ್ಯಾಗಿಯನ್ನು ಮದುವೆಯಾಗಲು ಮಹಿಳೆ ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಆರೋಪಿ ಮಗುವನ್ನು ಅಪಹರಣ ಮಾಡಿದ್ದ.

    ಮೌನು ತ್ಯಾಗಿ ಹಲವು ದಿನಗಳಿಂದ ಕುಟುಂಬಕ್ಕೆ ಪರಿಚಯವಿದ್ದ ಕಾರಣ ಮಗು ಸಹ ಆತ ಕರೆದ ತಕ್ಷಣ ಜೊತೆ ತೆರಳಿದೆ. ಮಗುವನ್ನು ಕರೆದುಕೊಂಡ ಆರೋಪಿ ಮೊದಲು ಮೀರತ್ ಗೆ ತೆರಳಿದ್ದು, ಬಳಿಕ ಮಗುವಿನ ತಾಯಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಅಲ್ಲದೇ ತನ್ನನ್ನು ಮದುವೆಯಾಗದಿದ್ದರೆ ಮಗುವನ್ನು ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದ. ಈ ವೇಳೆ ಆತಂಕಗೊಂಡ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

    ಪ್ರಕರಣ ಕುರಿತು ದೂರು ಪಡೆದ ಪೊಲೀಸರು ಆರೋಪಿಯ ಫೋನ್ ಮಾಹಿತಿ ಪಡೆದು ಆತ ಇರುವ ಸ್ಥಳವನ್ನು ಪತ್ತೆಮಾಡಿ ಮಗುವನ್ನು ರಕ್ಷಿಸಲು ಯಶಸ್ವಿಯಾಗಿದ್ದಾರೆ. ಅಲ್ಲದೇ ಆರೋಪಿ ಶಾಲೆಯ ಬಳಿಯಿಂದ ಮಗುವನ್ನು ಅಪಹರಣ ಮಾಡಲು ಬಳಕೆ ಮಾಡಿದ್ದ ಬೈಕನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಆತನ ವಿರುದ್ಧ ಅಪಹರಣ ದೂರಿನ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

  • 10 ವರ್ಷಗಳಿಂದ ಸೆಕ್ಸ್ ನಿರಾಕರಿಸಿದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

    10 ವರ್ಷಗಳಿಂದ ಸೆಕ್ಸ್ ನಿರಾಕರಿಸಿದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

    ಲಕ್ನೋ: 10 ವರ್ಷಗಳಿಂದ ತನ್ನೊಂದಿಗೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿದ್ದಕ್ಕೆ 30 ವರ್ಷದ ಮಹಿಳೆಯೊಬ್ಬರು ತನ್ನ ಗಂಡನ ಮರ್ಮಾಂಗವನ್ನೇ ಕತ್ತರಿಸಿರೋ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್‍ನಲ್ಲಿ ನಡೆದಿದೆ.

    ಗುರುವಾರ ಸುಮಾರು 9.30ರ ಸುಮಾರಿಗೆ ಈ ಘಟನೆ ನಡೆದಿದೆ. ದಂಪತಿ ಬುಲಂದ್‍ಶಹರ್‍ನಿಂದ ಬಂದು 8 ವರ್ಷಗಳಿಂದ ಘಾಜಿಯಾಬಾದ್‍ನಲ್ಲಿ ವಾಸವಿದ್ದರು. ಇವರಿಗೆ ಮಕ್ಕಳಾಗಿರಲಿಲ್ಲ. ಆಗಾಗ ಇದೇ ವಿಷಯವಾಗಿ ಜಗಳವಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

    ಮಹಿಳೆಯ ಗಂಡ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದದೆ ಮಾನಸಿಕ ಹಿಂಸೆ ನೀಡುತ್ತಿದ್ದರು. ಆಕೆಯೊಂದಿಗೆ ಮಕ್ಕಳಾಗದಂತೆ ತಡೆದಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಗಂಡನ ವರ್ತನೆಯಿಂದ ಬೇಸತ್ತು ಅಡುಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಬಾತ್‍ರೂಮಿನಿಂದ ಹೊರಬಂದ ಪತಿಯ ಮೇಲೆ ಮಹಿಳೆ ದಾಳಿ ಮಾಡಿದ್ದಾರೆ ಅಂತ ಪೊಲೀಸ್ ಅಧಿಕರಿ ಅನಿಲ್ ಕುಮಾರ್ ಯಾದವ್ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    ಘಟನೆ ಬಗ್ಗೆ ಖೋಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಬಂಧಿಸಲಾಗಿದೆ. ನನ್ನ ಗಂಡನಿಗೆ ಈ ರೀತಿ ಮಾಡದೆ ಬೇರೆ ದಾರಿ ಇರಲಿಲ್ಲ ಎಂದು ಮಹಿಳೆ ಹೇಳಿದ್ದಾರೆ. ಹಲ್ಲೆಗೊಳಗಾದ ಪತಿ ಕ್ಯಾಬ್ ಆಪರೇಟರ್ ಆಗಿದ್ದು, ಎರಡು ಇನ್ನೋವಾ ಕಾರ್‍ಗಳನ್ನ ಹೊಂದಿದ್ದಾರೆಂದು ವರದಿಯಾಗಿದೆ.

    ಮಕ್ಕಳಾಗಿರಲಿಲ್ಲ: ನನ್ನ ಗಂಡ ತನ್ನ ಪುರುಷತ್ವದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು. ಬೇರೆ ಮಹಿಳೆಯರೊಂದಿಗೆ ನನಗೆ ಮಕ್ಕಳಾಗುತ್ತವೆ. ಆದ್ರೆ ನಿನ್ನೊಂದಿಗೆ ಆಗಲ್ಲ ಎಂದು ಹೇಳುತ್ತಿದ್ದರು. ಆದರೂ ನಾನು ಅವರನ್ನು ಸಹಿಸಿಕೊಂಡಿದ್ದೆ. ಅವರು ನನ್ನನ್ನು ಯಾಕೆ ದ್ವೇಷಿಸುತ್ತಾರೆಂದು ಗೊತ್ತಿಲ್ಲ. ಅವರು ಆಗಾಗ ನನ್ನನ್ನು ದೂರ ಹೋಗುವಂತೆ ಹೇಳುತ್ತಿದ್ದರು. ನಮಗೆ 2006ರಲ್ಲಿ ಮದುವೆಯಾಯಿತು. ನನ್ನನ್ನು ಮತ್ತು ನನ್ನ ತಂಗಿಯರನ್ನು ಅವರು ಆಗಾಗ ನಿಂದಿಸುತ್ತಿದ್ದರು. ನನ್ನ ಮೇಲೆ ಹಲ್ಲೆ ಮಾಡುತ್ತಿದ್ದರು. ನಮಗೆ ಮಕ್ಕಳಾಗಬೇಕೆಂದು ನಾನು ಸಾಕಷ್ಟು ಬಾರಿ ಅವರನ್ನು ಒತ್ತಾಯಿಸಿದ್ದೆ. ಆದರೆ ಅವರು ನನ್ನೊಂದಿಗೆ ಸಂಭೋಗ ಮಾಡುತ್ತಿರಲಿಲ್ಲ ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ.

    ಪಶ್ಚಾತ್ತಾಪವಿಲ್ಲ: ಇದೇ ಕಾರಣಕ್ಕೆ ನಮ್ಮ ಮಧ್ಯೆ ಬುಧವಾರದಂದು ಜಗಳ ನಡೆದಿತ್ತು. ನಾನು ಸಾಕಷ್ಟು ಮಾನಸಿಕ ಹಿಂಸೆ ಮತ್ತು ಅವಮಾನ ಅನುಭವಿಸಿದ್ದೇನೆ. ಆದ್ದರಿಂದ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನ್ನ ಸಂಬಂಧಿಕರು ಮಕ್ಕಳಾಗದಿರುವ ಬಗ್ಗೆ ನನ್ನನ್ನು ಪ್ರಶ್ನಿಸಿದಾಗ ನನ್ನ ಬಳಿ ಯಾವುದೇ ಉತ್ತರವಿರಲಿಲ್ಲ ಎಂದು ಆಕೆ ಹೇಳಿದ್ದಾರೆ.

    ಘಟನೆ ಬಳಿಕ ಹಲ್ಲೆಗೊಳಗಾದ ಪತಿಯನ್ನು ನೋಯ್ಡಾದ ಜೇಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಈ ಬಗ್ಗೆ ಹಲ್ಲೆಗೊಳಗಾದ ವ್ಯಕ್ತಿಯ ಸಹೋದರ ಹೇಳಿಕೆ ನೀಡಿದ್ದು, ವೈದ್ಯರು ನನ್ನ ಸಹೋದರನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಆತ ಆಗ ತಾನೇ ಬಾತ್‍ರೂಮಿನಿಂದ ಹೊರಗೆ ಬಂದಿದ್ದ. ನನ್ನ ಸಹೋದರ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ ಆಕೆ ಹೊರಗಿನಿಂದ ಬಾಗಿಲನ್ನು ಲಾಕ್ ಮಾಡಿ ಹೋಗಿದ್ದಳು. ನಂತರ ನನ್ನ ಸಹೋದರ ಪೊಲೀಸರಿಗೆ ಕರೆ ಮಾಡಿದ ಎಂದು ಹೇಳಿದ್ದಾರೆ.

    ಪತಿಯ ಸ್ಥಿತಿ ಗಂಭೀರ: ಹಲ್ಲೆಗೊಳಗಾದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ನಾವು ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಅವರ ಸ್ಥಿತಿ ಗಂಭಿರವಾಗಿದೆ. ಅವರು ಬದುಕುಳಿತಯುತ್ತಾರೆ ಅಂತ ಅಂದುಕೊಂಡಿದ್ದೇವೆ. ಇಂತಹ ಪ್ರಕರಣಗಳಲ್ಲಿ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ನಂತರವೂ ಮಕ್ಕಳಾಗುತ್ತವೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ಸೌರಭ್ ಗುಪ್ತಾ ಹೇಳಿದ್ದಾರೆ.