Tag: Gift Box

  • ಮೈಸೂರಿನ ಶ್ರೀಗಂಧದ ಪೆಟ್ಟಿಗೆಯಲ್ಲಿ ಬೈಡನ್‌ಗೆ ಉಡುಗೊರೆ – ಮೋದಿ ಕೊಟ್ಟ ಗಿಫ್ಟ್ ಬಾಕ್ಸ್‌ನಲ್ಲಿ ಏನಿದೆ?

    ಮೈಸೂರಿನ ಶ್ರೀಗಂಧದ ಪೆಟ್ಟಿಗೆಯಲ್ಲಿ ಬೈಡನ್‌ಗೆ ಉಡುಗೊರೆ – ಮೋದಿ ಕೊಟ್ಟ ಗಿಫ್ಟ್ ಬಾಕ್ಸ್‌ನಲ್ಲಿ ಏನಿದೆ?

    ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅಮರಿಕ ಅಧ್ಯಕ್ಷ ಜೋ ಬೈಡನ್ (Joe Biden) ದಂಪತಿಗೆ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

    ವಿದೇಶದ ಅತಿಥಿಗಳು ಭಾರತಕ್ಕೆ ಆಗಮಿಸಿದಾಗ ಅಥವಾ ತಾವೇ ವಿದೇಶಕ್ಕೆ ಹೋದಾಗ ಮೋದಿ ಪ್ರತಿ ಬಾರಿ ಭಾರತೀಯ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ವಸ್ತುಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಅದೇ ರೀತಿಯಾಗಿ ಈ ಬಾರಿಯೂ ಬೈಡನ್ ದಂಪತಿಗೆ ಹಲವು ಉಡುಗೊರೆಯನ್ನು ನೀಡಿದ್ದಾರೆ. ಇದನ್ನೂ ಓದಿ: ವಾಷಿಂಗ್ಟನ್‌ನಲ್ಲಿ ಅದ್ಧೂರಿ ಸ್ವಾಗತ – ಮೋದಿಗಾಗಿ ಖಾದ್ಯ ತಯಾರಿಸಿದ್ದಾರೆ ಜಿಲ್ ಬೈಡೆನ್

    ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತ ಭವನಕ್ಕೆ (White House) ಭೇಟಿ ನೀಡಿದ ಮೋದಿ ಅವರು ಜೋ ಬೈಡನ್ ದಂಪತಿಗೆ ಮೈಸೂರಿನಲ್ಲಿ (Mysuru) ಪ್ರಖ್ಯಾತಿ ಹೊಂದಿರುವ ಶ್ರೀಗಂಧದಿಂದ (Sandal) ತಯಾರಿಸಲಾದ ಪೆಟ್ಟಿಗೆಯಲ್ಲಿ ನಾನಾರೀತಿಯ ಉಡುಗೊರೆಗಳನ್ನು ನೀಡಿದ್ದಾರೆ. ಈ ಉಡುಗೊರೆ ಪೆಟ್ಟಿಗೆಯನ್ನು ರಾಜಸ್ಥಾನದಲ್ಲಿರುವ (Rajasthan) ಜೈಪುರದ ಖ್ಯಾತ ಕುಶಲಕರ್ಮಿಯೊಬ್ಬರು ತಯಾರಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಮೋದಿ ‘ಯೋಗ’ – ಗಿನ್ನಿಸ್‌ ದಾಖಲೆ ಬರೆದ ವಿಶ್ವಸಂಸ್ಥೆ ಕೇಂದ್ರ ಕಚೇರಿ

    ಈ ಪೆಟ್ಟಿಗೆಯಲ್ಲಿ ಪೇಪಿಯರ್ ಮಾಚೆ (Papier Mache) ಎಂಬ ಸಣ್ಣ ಪೆಟ್ಟಿಗೆಯನ್ನು ಇರಿಸಲಾಗಿದೆ. ಈ ಸಣ್ಣ ಪೆಟ್ಟಿಗೆಯಲ್ಲಿ ಒಂದು ಹಸಿರು ಡೈಮಂಡ್ (Diamond) ಅನ್ನು ಇರಿಸಲಾಗಿದೆ. ಈ ಪೆಟ್ಟಿಗೆ ಕಾರ್-ಎ-ಕಲಮ್ದಾನಿ ಎಂದು ಕರೆಯಲ್ಪಡುವ ಕಾಶ್ಮೀರದ ಪೇಪಿಯರ್ ಮಾಚೆ ಎಂಬ ಕಾಗದದ ತಿರುಳಿನಿಂದ ತಯಾರಿಸಲಾಗಿದೆ. ಈ ಹಸಿರು ಬಣ್ಣದ ಡೈಮಂಡ್ ಭಾರತದ 75 ವರ್ಷಗಳ ಸ್ವಾತಂತ್ರ್ಯವನ್ನು ಮತ್ತು ಸುಸ್ಥಿರ ಅಂತರಾಷ್ಟ್ರೀಯ ಸಂಬಂಧಗಳನ್ನು ಸಂಕೇತಿಸುತ್ತದೆ. ಇದನ್ನೂ ಓದಿ: ಯೋಗಕ್ಕೆ ಯಾವುದೇ ಹಕ್ಕುಸ್ವಾಮ್ಯ, ಪೇಟೆಂಟ್‌ಗಳಿಲ್ಲ: ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಮೋದಿ ಭಾಷಣ

    ಅಲ್ಲದೇ ಈ ಗಂಧದ ಪೆಟ್ಟಿಗೆಯಲ್ಲಿ ಹಿಂದೂಗಳು ಪೂಜಿಸುವ ವಿಘ್ನನಿವಾರಕ ಎಂದೇ ಖ್ಯಾತಿಯಾಗಿರುವ ಗಣೇಶನ ಮೂರ್ತಿಯನ್ನು (Ganesha Idol) ಇರಿಸಲಾಗಿದೆ. ಈ ಮೂರ್ತಿಯನ್ನು ಕೋಲ್ಕತ್ತಾದ ಐದನೇ ತಲೆಮಾರಿನ ಬೆಳ್ಳಿ ತಯಾರಿಸುವ ಅಕ್ಕಸಾಲಿಗರು ಕರಕುಶಲತೆಯಿಂದ ತಯಾರಿಸಿದ್ದಾರೆ. ಈ ಪೆಟ್ಟಿಗೆಯಲ್ಲಿ ಮನೆಯನ್ನು ಬೆಳಗುವ ಬೆಳ್ಳಿಯ ದೀಪಗಳನ್ನು (Silver Diyas) ಒಳಗೊಂಡಿದೆ. ಇದನ್ನೂ ಸಹ ಇದೇ ಅಕ್ಕಸಾಲಿಗರು ತಯಾರಿಸಿರುತ್ತಾರೆ. ಇದನ್ನೂ ಓದಿ: ನಾನೂ ಸಹ ಮೋದಿಯ ಅಭಿಮಾನಿಯಾಗಿದ್ದೇನೆ: ಎಲಾನ್ ಮಸ್ಕ್

    ಮೋದಿ ಅಮೇರಿಕ ಅಧ್ಯಕ್ಷರಿಗೆ ನೀಡಿದ ಪೆಟ್ಟಿಗೆ 10 ದಾನಗಳನ್ನು (Danas) ಒಳಗೊಂಡಿದೆ. ಈ ದಾನಗಳಲ್ಲಿ ಮೊದಲನೆಯದು ಗೋದಾನ. ಗೋದಾನದ ಬದಲಿಗೆ ಪ್ರಧಾನಿ ಮೋದಿಯವರು ಪಶ್ಚಿಮ ಬಂಗಾಳದ (West Bengal) ನುರಿತ ಕುಶಲಕರ್ಮಿಗಳು ತಯಾರಿಸಿದ ಬೆಳ್ಳಿಯ ತೆಂಗಿನಕಾಯಿಯನ್ನು ದಾನವನ್ನಾಗಿ ನೀಡಿದ್ದಾರೆ. ಭೂದಾನದ ಬದಲಿಗೆ ಕರ್ನಾಟಕದ ಮೈಸೂರಿನಿಂದ ತಂದ ಪರಿಮಳಯುಕ್ತ ಶ್ರೀಗಂಧದ ತುಂಡನ್ನು ನೀಡಿದ್ದಾರೆ. ತಿಲದಾನವಾಗಿ (ಎಳ್ಳು ದಾನ) ತಮಿಳುನಾಡಿನಿಂದ (Tamil Nadu) ಪಡೆದ ಬಿಳಿ ಎಳ್ಳನ್ನು ಬೈಡನ್ ದಂಪತಿಗೆ ನೀಡಿದ್ದಾರೆ. ಇನ್ನು ಹಿರಣ್ಯದಾನವಾಗಿ (ಚಿನ್ನದಾನ) ರಾಜಸ್ಥಾನದಲ್ಲಿ ತಯಾರಿಸಲ್ಪಟ್ಟ 24 ಕ್ಯಾರೆಟ್ ಹಾಲ್‌ಮಾರ್ಕ್ ಹೊಂದಿರುವ ಪರಿಶುದ್ಧ ಚಿನ್ನದ ನಾಣ್ಯವನ್ನು ನೀಡಿದ್ದಾರೆ. ರುಪಾಯಿದಾನವಾಗಿ 99.5% ಹಾಲ್‌ಮಾರ್ಕ್ ಹೊಂದಿರುವ ಬೆಳ್ಳಿಯ ನಾಣ್ಯವನ್ನು ನೀಡಲಾಗಿದೆ. ಲವಣದಾನವಾಗಿ ಗುಜರಾತ್‌ನಿಂದ (Gujarat) ತಂದ ಉಪ್ಪನ್ನು ಸಮರ್ಪಿಸಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ: ಮೋದಿ

    ಮುಂದುವರೆದಂತೆ ಈ ಪೆಟ್ಟಿಗೆಯು ಪಂಜಾಬ್‌ನಲ್ಲಿ (Punjab) ತಯಾರಿಸಿದ ತುಪ್ಪ ಮತ್ತು ಬೆಣ್ಣೆಯನ್ನು ಒಳಗೊಂಡಿದೆ. ಅಲ್ಲದೇ ಜಾರ್ಖಂಡ್‌ನಲ್ಲಿ (Jharkhand) ಕೈಯಿಂದ ತಯಾರಿಸಿದ ರೇಷ್ಮೆ ಬಟ್ಟೆ, ಉತ್ತರಾಖಂಡದ ಉದ್ದ ಅಕ್ಕಿ ಮತ್ತು ಮಹಾರಾಷ್ಟ್ರದ ಬೆಲ್ಲವನ್ನು ಒಳಗೊಂಡಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಎಲೋನ್‌ ಮಸ್ಕ್‌ ಭೇಟಿಯಾಗ್ತಾರೆ ಪ್ರಧಾನಿ ಮೋದಿ

    1973ರಲ್ಲಿ ಡಬ್ಲ್ಯುಬಿ ಯೀಟ್ಸ್ ಭಾರತೀಯ ಉಪನಿಷತ್ (Upanishads) ಇಂಗ್ಲಿಷ್‌ನಲ್ಲಿ ಅನುವಾದ ಮಾಡಿದ್ದರು ಈ ಅನುವಾದಕ್ಕೆ ಲೇಖಕರಾಗಿ ಪುರೋಹಿತ ಸ್ವಾಮಿ ಸಹ ಸಹಕಾರ ನೀಡಿದ್ದರು. ಇದು ಯೀಟ್ಸ್ ಅವರ ಅಂತಿಮ ಕೃತಿಗಳಲ್ಲಿ ಒಂದಾಗಿದ್ದು, ಈ ಪುಸ್ತಕದ ಮೊದಲ ಆವೃತ್ತಿಯಾದ ‘ದಿ ಟೆನ್ ಪ್ರಿನ್ಸಿಪಾಲ್ ಉಪನಿಷತ್’ನ ಪ್ರತಿಯನ್ನು ಪ್ರಧಾನಿ ಮೋದಿಯವರು ಜೋ ಬೈಡನ್ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೇ ಅಮೆರಿಕದ ಪ್ರಥಮ ಮಹಿಳೆ ಡಾ.ಜಿಲ್ ಬೈಡನ್ ಅವರಿಗೆ 7.5 ಕ್ಯಾರೆಟ್‌ನ ಹಸಿರು ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಜಲಾಂತರ್ಗಾಮಿ ನಾಪತ್ತೆ – ಟೈಟಾನಿಕ್ ನೋಡಲು ತೆರಳಿದ್ದ ಪ್ರವಾಸಿಗರಲ್ಲಿದ್ರು ಪಾಕಿಸ್ತಾನದ ಶ್ರೀಮಂತ

  • ‘ಗಿಫ್ಟ್ ಬಾಕ್ಸ್’ ಹಾಡುಗಳು ಬಿಡುಗಡೆ

    ‘ಗಿಫ್ಟ್ ಬಾಕ್ಸ್’ ಹಾಡುಗಳು ಬಿಡುಗಡೆ

    ‘ಗಿಫ್ಟ್ ಬಾಕ್ಸ್’ ಮಾನವ ಕಳ್ಳ ಸಾಗಾಣಿಕೆ ಮಾಡುವ ವ್ಯಕ್ತಿ ಹಾಗೂ ಲಾಕ್ಡ್ ಇನ್ ಸಿಂಡ್ರಮ್ ಎಂಬ ನರರೋಗ ಸಮಸ್ಯೆಯ ಕುರಿತಂತೆ ಕಥಾ ಹಂದರವುಳ್ಳ ಚಿತ್ರ. ರಘು ಎಸ್.ಪಿ. ಈ ಚಿತ್ರದ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗ ಮೈಸೂರಿನ ಒಂದಷ್ಟು ಸಮಾನ ಮನಸ್ಕರೆಲ್ಲ ಸೇರಿ ‘ಗಿಫ್ಟ್ ಬಾಕ್ಸ್’ ಎಂಬ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಹಾಡುಗಳು ಹಾಗೂ ಟ್ರೈಲರ್ ಬಿಡುಗಡೆ ಸಮಾರಂಭ ಶ್ರೀ ಚಾಮುಂಡೇಶ್ವರಿ ಸ್ಟುಡಿಯೋಸ್ ಆವರಣದಲ್ಲಿ ನೆರವೇರಿತು. ನಿವೃತ್ತ ಪೊಲೀಸ್ ಕಮೀಷನರ್ ಟಿ.ಲೋಕೇಶ್ವರ್, ಪತ್ರಕರ್ತ ಜಿ.ಎನ್.ಮೋಹನ್ ಹಾಗೂ ನಟ ಡಾಲಿ ಧನಂಜಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಗಿಫ್ಟ್ ಬಾಕ್ಸ್ ಹಾಡುಗಳನ್ನು ಬಿಡುಗಡೆಗೊಳಿಸಿದರು. 3 ವರ್ಷಗಳ ಹಿಂದೆ ‘ಪಲ್ಲಟ’ ಎಂಬ ಚಿತ್ರ ನಿರ್ಮಿಸಿ ರಘು ಅವರು ರಾಜ್ಯ ಪ್ರಶಸ್ತಿ ಕೂಡ ಗಳಿಸಿದ್ದರು. ಅಲ್ಲದೆ ಈ ಚಿತ್ರ ಹಲವು ಚಲನಚಿತ್ರೋತ್ಸವಗಳಲ್ಲಿ ಕೂಡ ಪ್ರದರ್ಶನ ಕಂಡಿತ್ತು.

    ಈ ಸಂದರ್ಭದಲ್ಲಿ ಚಿತ್ರದ ಕುರಿತಂತೆ ಮಾತನಾಡಿದ ನಿರ್ದೇಶಕ ರಘು ಮುಖ್ಯವಾಗಿ 2 ಟಾಪಿಕ್ ಮೇಲೆ ಈ ಚಿತ್ರಕಥೆ ಸಾಗುತ್ತದೆ. ಹ್ಯೂಮನ್ ಟ್ರಾಪಿಕ್ (ಮಾನವ ಕಳ್ಳ ಸಾಗಾಣಿಕೆ) ಹಾಗೂ ಲಾಕ್ಡ್ ಇನ್ ಸಿಂಡ್ರೋಮ್ ಕಾಯಿಲೆ ಚಿತ್ರದ ಮುಖ್ಯ ಕಥಾವಸ್ತು. ಹ್ಯೂಮನ್ ಟ್ರಾಫಿಕ್ ಮೇಲೆ ಅನೇಕ ಸಿನಿಮಾಗಳು ಬಂದಿದ್ದರೂ ಅದರಲ್ಲಿ ಯಾರೂ ಟಚ್ ಮಾಡಿರದಂಥ ಒಂದು ವಿಷಯವನ್ನು ತೆಗೆದುಕೊಂಡು ಈ ಸಿನಿಮಾ ಮಾಡಿದ್ದೇನೆ. ಮುಗ್ಧ ಯುವಕನೊಬ್ಬ ತನಗರಿವಿಲ್ಲದಂತೆ ಈ ಮಾನವ ಕಳ್ಳ ಸಾಗಾಣಿಕೆದಾರರ ಜಾಲದಲ್ಲಿ ಸಿಕ್ಕಿಹಾಕಿಕೊಳ್ಳಬೇಕಾಗುತ್ತದೆ. ನಂತರ ಆತನ ಮನಃಸ್ಥಿತಿ ಹೇಗಿರುತ್ತದೆ. ಆತ ತನ್ನ ಫ್ಯಾಮಿಲಿಯನ್ನು ಹೇಗೆ ಫೇಸ್ ಮಾಡಬೇಕಾಗುತ್ತದೆ. ಆ ಜಾಲದಿಂದ ಹೊರಬರಲು ಏನೆಲ್ಲಾ ಪ್ರಯತ್ನ ಮಾಡಿದ ಎಂದು ಈ ಚಿತ್ರದಲ್ಲಿ ಹೇಳಿದ್ದೇವೆ. ಗಿಫ್ಟ್ ಬಾಕ್ಸ್ ಇಡೀ ಸಿನಿಮಾದ ಒಂದು ಭಾಗವಾಗಿ ಮೂಡಿಬರುತ್ತದೆ. 38 ದಿನಗಳ ಕಾಲ ಮೈಸೂರಿನ ಚಾಮುಂಡಿ ಬೆಟ್ಟದ ಬಳಿಯ ಹಳ್ಳಿಯೊಂದರಲ್ಲಿ ಶೂಟ್ ಮಾಡಿದ್ದೇವೆ. ಇಡೀ ಸಿನಿಮಾ ಸಿಂಕ್ ಸೌಂಡ್‍ನಲ್ಲಿ ಶೂಟ್ ಆಗಿದೆ. ಅದಕ್ಕೆ ತುಂಬಾ ಸಮಯ ಬೇಕಿರುತ್ತದೆ. ರಿತ್ವಿಕ್ ಮಠದ್ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಅಮಿತಾ ಕುಲಾಲ್ ಹಾಗೂ ದೀಪ್ತಿ ಮೋಹನ್ ನಾಯಕಿಯರು, ಮುರಳಿ ಗುಂಡಣ್ಣ, ಶಿವಾಜಿರಾವ್ ಜಾಧವ್ ಹಾಗೂ ಪ್ರೊ. ಲಕ್ಷ್ಮಿ ಚಂದ್ರಶೇಖರ್ ಉಳಿದ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದರು.

    ವಾಸು ದೀಕ್ಷಿತ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದ್ದು, ಅನನ್ಯಾ ಭಟ್, ಬಿಂದು ಮಾಲಿನಿ, ವಾಸು ದೀಕ್ಷಿತ್ ಹಾಡುಗಳಿಗೆ ದನಿಯಾಗಿದ್ದಾರೆ. ಹಳ್ಳಿ ಚಿತ್ರ ಬ್ಯಾನರ್ ಪರವಾಗಿ ಮಧು ದೀಕ್ಷಿತ್ ಮಾತನಾಡಿ, ಈ ಕಥೆಯನ್ನು ಓದಿದ ನಂತರವೂ ನಮ್ಮನ್ನು ಕಾಡುತ್ತದೆ. ಸಿನಿಮಾ ಕೂಡ ಅದ್ಭುತವಾಗಿ ಮೂಡಿಬಂದಿದೆ ಎಂದು ಹೇಳಿದರು.

    ನಿವೃತ್ತ ಪೊಲಿಸ್ ಅಧಿಕಾರಿ ಪಿ.ಲೋಕೇಶ್ವರ್ ಮಾತನಾಡಿ, ಪ್ರತಿವರ್ಷ ನಮ್ಮ ದೇಶದಲ್ಲಿ ವರ್ಷಕ್ಕೆ ಲಕ್ಷಾಂತರ ಜನ ಮಿಸ್ಸಿಂಗ್ ಆಗುತ್ತಾರೆ. ಅದರಲ್ಲಿ ಹೆಣ್ಣು ಮಕ್ಕಳ ಸಂಖ್ಯೆಯೇ ಜಾಸ್ತಿ. ಹುಟ್ಟಿದ ಅರ್ಧಗಂಟೆಯಲ್ಲೇ ಮಗು ಮಿಸ್ ಆಗುತ್ತದೆ. ಅಲ್ಲಿಂದಲೇ ಮಿಸ್ಸಿಂಗ್ ಪ್ರಕರಣ ಆರಂಭವಾಗುತ್ತದೆ. ಉತ್ತರ ಕರ್ನಾಟಕದ ಕಡೆ ಬಡತನದ ಕಾರಣದಿಂದ ಪೋಷಕರೇ ತಮ್ಮ ಮಕ್ಕಳನ್ನು ಕಳಿಸಿಕೊಡುತ್ತಾರೆ. ಅಂತಹವರೆಲ್ಲ ಸ್ಲೀಪಿಂಗ್ ಸೆಲ್ ಆಗಿ ಬದುಕುತ್ತಾರೆ. ರಘು ಇದನ್ನೆಲ್ಲಾ ಈ ಸಿನಿಮಾದಲ್ಲಿ ತೋರಿಸಿದ್ದಾರೆ ಎಂದುಕೊಂಡಿದ್ದೇನೆ. ಈ ಕುರಿತು ಜನ ಜಾಗೃತರಾಗಬೇಕು ಎಂದು ಹೇಳಿದರು.

    ನಾನಿಲ್ಲಿ ಸ್ಟಾರ್ ಆಗಿ ಬಂದಿಲ್ಲ, ಒಬ್ಬ ಗೆಳೆಯನಾಗಿ ಶುಭ ಕೋರಲು ಬಂದಿದ್ದೇನೆ ಎಂದು ಡಾಲಿ ಧನಂಜಯ ಹೇಳಿದರು.