Tag: Giriraj Singh

  • ಹಿಂದೂಗಳಿಗೊಂದು ಮುಸ್ಲಿಮರಿಗೊಂದು ಕಾನೂನು ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌

    ಹಿಂದೂಗಳಿಗೊಂದು ಮುಸ್ಲಿಮರಿಗೊಂದು ಕಾನೂನು ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌

    ಪಾಟ್ನಾ: ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಪಡಿಸುವುದಾಗಿ ಅಸ್ಸಾಂ (Assam) ಸಚಿವ ಸಂಪುಟ ಘೋಷಿಸಿದ ನಂತರ ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ಅಸ್ಸಾಂ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಹಿಂದೂ (Hindus) ಮತ್ತು ಮುಸ್ಲಿಮರಿಗೆ (Muslims) ಪ್ರತ್ಯೇಕ ಕಾನೂನುಗಳು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆಯನ್ನು (UCC) ತಂದಿದೆ. ಈಗ ಅಸ್ಸಾಂನಲ್ಲಿ ಎಲ್ಲರೂ ಒಂದು ಕಾನೂನನ್ನು ಅನುಸರಿಸಿದರೆ ಅದು ಪ್ರಯೋಜನಕಾರಿಯಾಗಿದೆ. ಹಿಂದೂಗಳು ಮತ್ತು ಮುಸ್ಲಿಮರಿಗೆ ವಿಭಿನ್ನ ಕಾನೂನುಗಳು ಸಾಧ್ಯವಾಗುವುದಿಲ್ಲ. ಆ ರೀತಿಯಲ್ಲಿ ದೇಶವು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಗಿರಿರಾಜ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದು

    ಅಸ್ಸಾಂ ಸರ್ಕಾರದ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದು ನಿರ್ಧಾರವನ್ನು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ನಾಯಕ ರಫೀಕುಲ್ ಇಸ್ಲಾಂ ಟೀಕಿಸಿದ್ದಾರೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ತಂತ್ರ ಎಂದು ಆರೋಪಿಸಿದ್ದಾರೆ.

    ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯನ್ನು ತರಲು ಧೈರ್ಯ ಹೊಂದಿಲ್ಲ. ಆದ್ದರಿಂದ ವಿವಾಹ ಕಾಯ್ದೆಯನ್ನು ರದ್ದುಗೊಳಿಸಿದೆ. ಉತ್ತರಾಖಂಡದಲ್ಲಿ ತಂದದ್ದು ಯುಸಿಸಿಯೂ ಅಲ್ಲ. ಅಸ್ಸಾಮಿಗೂ ಯುಸಿಸಿ ತರಲು ಯತ್ನಿಸುತ್ತಿದ್ದರು. ಆದರೆ ಅವರು ಅದನ್ನು ಅಸ್ಸಾಂಗೆ ತರಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಇಲ್ಲಿ ಹಲವಾರು ಜಾತಿಗಳು ಮತ್ತು ಸಮುದಾಯಗಳ ಜನರಿದ್ದಾರೆ. ಬಿಜೆಪಿ ಅನುಯಾಯಿಗಳು ಇಲ್ಲಿ ಆ ಆಚರಣೆಗಳನ್ನು ಅನುಸರಿಸುತ್ತಾರೆ. ಚುನಾವಣೆಗಳು ಸಮೀಪಿಸುತ್ತಿವೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ಅವರ ತಂತ್ರವಾಗಿದೆ ಎಂದು ರಫೀಕುಲ್‌ ಟೀಕಿಸಿದ್ದಾರೆ. ಇದನ್ನೂ ಓದಿ: Loksabha Election: ದೆಹಲಿಯಲ್ಲಿ ಕಾಂಗ್ರೆಸ್‌, ಎಎಪಿ ನಡುವೆ ಸೀಟು ಹಂಚಿಕೆ ಫೈನಲ್‌

    2011 ರ ಜನಗಣತಿಯ ಪ್ರಕಾರ, ಮುಸ್ಲಿಮರು ಅಸ್ಸಾಂನ ಜನಸಂಖ್ಯೆಯ ಶೇ.34 ರಷ್ಟಿದ್ದು, ಒಟ್ಟು 3.12 ಕೋಟಿ ಜನಸಂಖ್ಯೆ ಪೈಕಿ 1.06 ಕೋಟಿಯಷ್ಟಿದ್ದಾರೆ.

    ಅಸ್ಸಾಂ ಕ್ಯಾಬಿನೆಟ್ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 ಅನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: ತಮಿಳುನಾಡಿನ ಕಾಂಗ್ರೆಸ್ ಶಾಸಕಿ ಬಿಜೆಪಿ ಸೇರ್ಪಡೆ

  • ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

    ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

    ಪಾಟ್ನಾ: ಹಿಂದೂಗಳು ಹಲಾಲ್ ಮಾಂಸವನ್ನು (Halal Meat) ತಿನ್ನುವುದನ್ನು ಬಿಟ್ಟುಬಿಡಬೇಕು ಮತ್ತು ಒಂದೇ ಏಟಿಗೆ ಕೊಲ್ಲಲ್ಪಡುವ ಪ್ರಾಣಿಗಳ ಮಾಂಸವಾದ ‘ಝಟ್ಕಾ’ವನ್ನು (Jhatka) ಮಾತ್ರ ಸೇವಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ (Giriraj Singh) ಭಾನುವಾರ ಹೇಳಿದ್ದಾರೆ.

    ಬಿಜೆಪಿಯ ಹಿರಿಯ ನಾಯಕರಾದ ಸಿಂಗ್ ತಮ್ಮ ಬೇಗುಸರಾಯ್ ಸಂಸದೀಯ ಕ್ಷೇತ್ರದಲ್ಲಿ ಜನರಲ್ಲಿ ಈ ಮನವಿ ಮಾಡಿದ್ದಾರೆ. ತಮ್ಮ ಹಿಂದೂ ಬೆಂಬಲಿಗರು ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ಧರ್ಮವನ್ನು ಹಾಳು ಮಾಡುವುದಿಲ್ಲ ಎಂಬ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಂತೆ ಮಾಡಿದ್ದಾರೆ.

    ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಈಗ ಹಿಂದೂಗಳು ಕೂಡಾ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಅವರು ಕರೆ ನೀಡಿದರು. ಇದನ್ನೂ ಓದಿ: ನಮ್ಮ ಮಠಾಧಿಪತಿಗಳ ಕೈಗೆ ಆಯುಧ ಕೊಡ್ಬೇಕು: ದಿಂಗಾಲೇಶ್ವರ ಸ್ವಾಮೀಜಿ

    ಹಿಂದೂಗಳು ಪ್ರಾಣಿ ವಧೆ ಮಾಡುವ ವಿಧಾನವೆಂದರೆ ಝಟ್ಕಾ. ಹಿಂದೂಗಳು ಪ್ರಾಣಿ ಬಲಿ ಮಾಡಿದಾಗಲೆಲ್ಲಾ ಅವರು ಒಂದೇ ಹೊಡೆತದಲ್ಲಿ ಮಾಡುತ್ತಾರೆ. ಹೀಗಾಗಿ ಅವರು ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮನ್ನು ತಾವು ಭ್ರಷ್ಟಗೊಳಿಸಬಾರದು. ಅವರು ಯಾವಾಗಲೂ ಜಟ್ಕಾಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

    ಕೆಲವು ವಾರಗಳ ಹಿಂದೆ ಸಿಂಗ್ ಅವರು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಿಂದ ಸ್ಫೂರ್ತಿ ಪಡೆದು ಹಲಾಲ್ ಎಂದು ಲೇಬಲ್ ಮಾಡಿದ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಜಿಲ್ಲಾ ಕೋರ್ಟ್‌ಗೆ ವರದಿ ಸಲ್ಲಿಕೆ

  • ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೊಳಿಸಿ – ಗಿರಿರಾಜ್ ಸಿಂಗ್

    ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೊಳಿಸಿ – ಗಿರಿರಾಜ್ ಸಿಂಗ್

    ನವದೆಹಲಿ: ಜನಸಂಖ್ಯಾ ನಿಯಂತ್ರಣ ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ (BJP) ನಾಯಕರ ಹೇಳಿಕೆಗಳು ಆಗಾಗ ಮುನ್ನೆಲೆಗೆ ಬರುತ್ತಿವೆ. ಕೇಂದ್ರ ಸಚಿವರೂ ಆಗಿರವ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (Giriraj Singh) ಕೂಡ ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯ (Population) ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

    ಲಿಂಗ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯಾ ನಿಯಂತ್ರಣ ಮಸೂದೆ (Population Control Bill) ಬಗ್ಗೆ ಅವರು ಮತ್ತೊಮ್ಮೆ ದನಿ ಎತ್ತಿದ್ದು, ಭಾರತದಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯಾ ನಿಯಂತ್ರಣ ಮಸೂದೆ ನಿರ್ಣಾಯಕವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!

    ನಮ್ಮಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯೆ ನಿಯಂತ್ರಿಸುವುದು ಅವಶ್ಯಕವಾಗಿದೆ. ಭಾರತವು ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ, ಈ ಬಗ್ಗೆ ಕಾನೂನು ರೂಪಿಸಬೇಕು ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆ ಜೊತೆಗೆ 75 ಸಾವಿರ ಭಗವದ್ಗೀತೆ ಪುಸ್ತಕ ವಿತರಣೆ – 132 ಜೋಡಿಗೆ ಮದುವೆ ಭಾಗ್ಯ

    ಚೀನಾ (China) ಜನಸಂಖ್ಯೆ ನಿಯಂತ್ರಿಸುವುದಕ್ಕಾಗಿ `ಒನ್ ಚೈಲ್ಡ್ ಪಾಲಿಸಿ’ (ಒಂದು ಮಗುವನ್ನು ಹೊಂದುವ ನೀತಿ) ಜಾರಿಗೆ ತಂದಿತು. ಈ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿ ಅಭಿವೃದ್ಧಿ ಸಾಧಿಸಿತು. ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಅನುಸರಿಸದವರ ಮತದಾನದ ಹಕ್ಕನ್ನೂ ಕಸಿದುಕೊಳ್ಳಬೇಕು ಎಂದು ಕೇಂದ್ರ ಸಚಿವ ಸಲಹೆ ನೀಡಿದ್ದಾರೆ.

    ಸರ್ಕಾರ ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯವನ್ನು ಧರ್ಮದ ಚೌಕಟ್ಟಿನಲ್ಲಿ ನೋಡಬಾರದು. ಅಂತಹ ಘಟನೆಗಳನ್ನು ಪೂರ್ವಾಗ್ರಹ ರಹಿತವಾಗಿ ಎಲ್ಲರೂ ಖಂಡಿಸಬೇಕು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಮನವಮಿ ಮೆರವಣಿಗೆಯನ್ನು ಪಾಕಿಸ್ತಾನದಲ್ಲಿ ನಡೆಸಲು ಸಾಧ್ಯವೇ? ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌

    ರಾಮನವಮಿ ಮೆರವಣಿಗೆಯನ್ನು ಪಾಕಿಸ್ತಾನದಲ್ಲಿ ನಡೆಸಲು ಸಾಧ್ಯವೇ? ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌

    ನವದೆಹಲಿ: ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳನ್ನು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಪ್ರಶ್ನಿಸಿದ್ದಾರೆ. ರಾಮನವಮಿ ಮೆರವಣಿಗೆಯನ್ನು ಭಾರತದಲ್ಲಲ್ಲದೇ ಪಾಕಿಸ್ತಾನದಲ್ಲಿ ನಡೆಸಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

    ಈ ದೇಶದಲ್ಲಿ ಇಲ್ಲದಿದ್ದರೆ ರಾಮನವಮಿ ಮೆರವಣಿಗೆಗಳನ್ನು ಎಲ್ಲಿ ನಡೆಸಬೇಕು? ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಇತರ ದೇಶಗಳಲ್ಲಿಯೇ ಎಂದು ಸಿಂಗ್ ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮೆರವಣಿಗೆಗೂ ಮುನ್ನ ಆಯೋಜಕರಿಂದ ಅಫಿಡವಿಟ್ ಕಡ್ಡಾಯ

    RAMANAVAMI

    1947ರಲ್ಲಿ ಧರ್ಮ ವಿಭಜನೆಯಾಯಿತು. ಈಗ ಅಸಾದುದ್ದೀನ್ ಓವೈಸಿಯಂಥವರು ಈ ಬೀದಿ, ಆ ಬೀದಿಗೆ ಏಕೆ ಹೋಗುತ್ತಾರೆ ಎಂದು ಕೇಳುತ್ತಾರೆ. ಅದನ್ನೆಲ್ಲ ಹಿಂದೂ ಓಣಿ, ಮುಸ್ಲಿಂ ಬೀದಿ ಎಂದು ವಿಂಗಡಿಸಿದ್ದಾರೆಯೇ? ಈ ರೀತಿಯ ಮನಸ್ಥಿತಿಯಿದ್ದರೆ ವಿಭಜನೆಯಾಗುತ್ತದೆ. ಪಾಕಿಸ್ತಾನಕ್ಕೆ ಹೋಗಬೇಕಾದವರು ಅಲ್ಲಿಗೆ ಹೋದರು. ನಮ್ಮ ದೇಶದಲ್ಲಿ ನಮ್ಮ ಧಾರ್ಮಿಕ ಆಚರಣೆಗಳಿಗೆ ಯಾವುದೇ ಅಡ್ಡಿಯಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಸ್ವಾತಂತ್ರ್ಯ ನಂತರ ಹೊಸ ಮಸೀದಿಗಳ ನಿರ್ಮಾಣವನ್ನು ಭಾರತದಲ್ಲಿ ಎಂದಿಗೂ ವಿರೋಧಿಸಲಿಲ್ಲ. ಪಾಕಿಸ್ತಾನದಲ್ಲಿ ದೇವಾಲಯಗಳನ್ನು ಕೆಡವಲಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮೋದಿ, ಅಮಿತ್ ಶಾರನ್ನು ನಿಂದಿಸಿದ್ದ ವ್ಯಕ್ತಿ ಬಂಧನ

    RAMANAVAMI

    ಕರ್ನಾಟಕದ ಹುಬ್ಬಳ್ಳಿ ಮತ್ತು ದೆಹಲಿಯ ಜಹಂಗಿರ್‌ಪುರಿಯಲ್ಲಿ ಕೋಮುಗಲಭೆ ವಿರೋಧಿಸಿ ಗಿರಿರಾಜ್‌ ಸಿಂಗ್‌ ಮಾತನಾಡಿದ್ದಾರೆ. ಗುಜರಾತ್‌, ಮಧ್ಯಪ್ರದೇಶ, ಜಾರ್ಖಂಡ್‌, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವ ಘರ್ಷಣೆ ಆಗಿತ್ತು.

  • ಸೋಲೂರಿನಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಹುಲ್ಲನ್ನು ಬಳಸಿ ಬಯೋ ಗ್ಯಾಸ್ ತಯಾರು – ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶಂಸೆ

    ಸೋಲೂರಿನಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಹುಲ್ಲನ್ನು ಬಳಸಿ ಬಯೋ ಗ್ಯಾಸ್ ತಯಾರು – ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶಂಸೆ

    ಆನೇಕಲ್: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸತತ್(ಸಸ್ಟೇನಬಲ್ ಆಲ್ಟರ್ನೇಟಿವ್ ಟುವರ್ಡ್ಸ್ ಅಫೋರ್ಡಬಲ್ ಟ್ರಾನ್ಸ್ ಪೊರ್ಟೇಶನ್ ) ಯೋಜನೆಯಡಿಯಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಹುಲ್ಲನ್ನು ಬಳಸಿ ಬಯೋ ಗ್ಯಾಸ್ ತಯಾರು ಮಾಡುವ ಘಟಕ ಸ್ಥಾಪನೆಗೊಂಡಿದ್ದು, ಇಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಘಟಕಕ್ಕೆ ಭೇಟಿ ನೀಡಿ ಪ್ರಶಂಸೆ ವ್ಯಕ್ತಪಡಿಸಿದರು.

    ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸೋಲೂರು ಗ್ರಾಮದಲ್ಲಿರುವ ಹೈಕಾನ್ ರೆನೆವಾಬ್ಲೆ ಪ್ರೈವೆಟ್ ಲಿಮಿಟೆಡ್ ಘಟಕವು ದೇಶದಲ್ಲಿಯೇ ಪ್ರಥಮ ಬಾರಿಗೆ ಹುಲ್ಲಿನಿಂದ ಬಯೋ ಗ್ಯಾಸ್ ತಯಾರು ಮಾಡುವ ಘಟಕವಾಗಿದೆ. ಕೇಂದ್ರ ಸರ್ಕಾರವು ಕಳೆದ ಮೂರು ವರ್ಷದ ಹಿಂದೆ ಸತತ್ ಎಂಬ ಯೋಜನೆಯನ್ನು ಸಾಮಾನ್ಯ ಜನರಿಗೆ ಪರಿಚಯಿಸಿದ್ದು, ಗ್ಯಾಸ್ ತಯಾರು ಮಾಡಿದಾಗ ಅದನ್ನು ಇಂಡಿಯನ್ ಆಯಿಲ್ ಹಾಗೂ ಗೇಲ್ ಕಂಪನಿಗಳು ಪಡೆದುಕೊಂಡು ಗ್ರಾಹಕರಿಗೆ ತಲುಪಿಸಲಿದೆ. ಇದನ್ನೂ ಓದಿ:  ಉಡುಪಿಯಲ್ಲಿ ಹಟ್ಟಿಗೆ ನುಗ್ಗಿ ಗೋವು ಕಳ್ಳತನ- ಪೊಲೀಸ್ ಠಾಣೆ ಮುಂದೆ ಪ್ರತಿಭಟನಾ ಭಜನೆ

    ಹೈಕಾನ್ ರೆನೆವಾಬ್ಲೆ ಪ್ರೈವೆಟ್ ಲಿಮಿಟೆಡ್ ಘಟಕದ ಮುಖ್ಯಸ್ಥ ಶಶಿಕಾಂತ್ ಮತ್ತು ಅವರ ತಂಡ ಈ ಅದ್ಭುತವಾದ ಯೋಜನೆಗೆ ಕೈಜೋಡಿಸಿದ್ದಾರೆಂದು ಗಿರಿರಾಜ್ ಸಿಂಗ್ ಪ್ರಶಂಸೆ ವ್ಯಕ್ತಪಡಿಸಿದರು.

    ಹೈಕಾನ್ ರೆನೆವಾಬ್ಲೆ ಪ್ರೈವೆಟ್ ಲಿಮಿಟೆಡ್ ಘಟಕದ ನಿರ್ದೇಶಕ ಶಶಿಕಾಂತ್ ಹೆಗಡೆ ಈ ಕುರಿತು ಮಾತನಾಡಿದ್ದು, ಕೇಂದ್ರ ಸರ್ಕಾರದ ಸತತ್ ಯೋಜನೆ ಅಡಿಯಲ್ಲಿ ಹುಲ್ಲಿನಿಂದ ಗ್ಯಾಸ್ ತಯಾರು ಮಾಡುವ ಪ್ರಯೋಗವನ್ನು ಮಾಡಿದ್ದು, ಯಶಸ್ವಿಯಾಗಿದೆ. ಇದನ್ನೂ ಓದಿ:  ಮಲೆಮಹದೇಶ್ವರ ಬೆಟ್ಟ 5 ವರ್ಷಗಳಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಲಿದೆ: ಬೊಮ್ಮಾಯಿ

    ಇಂಡಿಯನ್ ಗ್ಯಾಸ್ ಕಂಪನಿಯ ಜೊತೆ ಹತ್ತು ವರ್ಷಗಳ ಕಾಂಟ್ರಾಕ್ಟ್ ಆಗಿದ್ದು ಸಪ್ಲೈ ಸಹ ಪ್ರಾರಂಭವಾಗಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದಲೂ ಸಬ್ಸಿಡಿ ದೊರೆಯುತ್ತಿದೆ ಎಂದರು.

    ಭಾರತದಲ್ಲಿ ಮೊದಲಿನಿಂದಲೂ ಗೊಬ್ಬರದಿಂದ ಗ್ಯಾಸ್ ತಯಾರು ಮಾಡುತ್ತಿದ್ದರೂ ಈಗ ಹೈಕಾನ್ ಕಂಪನಿಯು ಭಾರತದಲ್ಲಿಯೇ ಪ್ರಥಮ ಬಾರಿಗೆ ಹುಲ್ಲಿನಿಂದ ಗ್ಯಾಸ್ ತಯಾರು ಮಾಡುವುದನ್ನು ಪರಿಚಯಿಸಿದೆ. ಸಾಮಾನ್ಯ ರೈತನು ಸಹ ಹುಲ್ಲನ್ನು ಬೆಳೆದು ಈ ರೀತಿ ಗ್ಯಾಸ್ ತಯಾರು ಮಾಡುವ ಘಟಕಗಳನ್ನು ಮಾಡಿಕೊಂಡು ಕಂಪನಿಗಳಿಗೆ, ಮನೆಗಳಿಗೆ ಸೇರಿದಂತೆ ಗ್ಯಾಸ್ ಅವಶ್ಯಕತೆ ಇರುವ ಕಡೆಗಳಿಗೆ ಉತ್ಪಾದನೆ ಮಾಡಬಹುದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ರಾಜ್ಯದ ಹಲವೆಡೆ ನಾಲ್ಕು ದಿನ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

    ಈ ಮೂಲಕ ಗ್ಯಾಸ್ ಅನ್ನು ಹೊರದೇಶಗಳಿಂದ ಆಮದು ಮಾಡಿಕೊಳ್ಳುವುದು ಕಡಿಮೆಯಾಗಿ, ನಮ್ಮಲ್ಲಿಯೇ ಉತ್ಪಾದನೆ ಹೆಚ್ಚಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆ ಪರಿಚಯಿಸಿದೆ. ಇದರಿಂದ ಸಾಕಷ್ಟು ಜನಕ್ಕೆ ಇದರಿಂದ ಕೆಲಸವು ದೊರೆತಂತಾಗಿದೆ ಎಂದರು.