Tag: Girish Karnad

  • ನಾಟಕ ಟಿಪ್ಪು ವಿರುದ್ಧ ಅಲ್ಲ, ತುಕ್ಡೆ ತುಕ್ಡೆ ಅನ್ನೋರ ವಿರುದ್ಧ- ಅಡ್ಡಂಡ ಕಾರ್ಯಪ್ಪ

    ನಾಟಕ ಟಿಪ್ಪು ವಿರುದ್ಧ ಅಲ್ಲ, ತುಕ್ಡೆ ತುಕ್ಡೆ ಅನ್ನೋರ ವಿರುದ್ಧ- ಅಡ್ಡಂಡ ಕಾರ್ಯಪ್ಪ

    ಕೋಲಾರ: ನನ್ನ ನಾಟಕ ಟಿಪ್ಪು ವಿರುದ್ಧ ಅಲ್ಲ, ಮುಸ್ಲಿಂ ವಿರುದ್ಧ ಅಲ್ಲ. ತುಕ್ಡೆ ತುಕ್ಡೆ ಅನ್ನೋರು, ಪೊಲೀಸ್ ಠಾಣೆಗೆ ಬೆಂಕಿ ಹಾಕುವವರ ವಿರುದ್ಧವಾಗಿದೆ ಎಂದು ರಂಗಾಯಣ (Rangayana) ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ (Addanda Cariappa) ತಿಳಿಸಿದ್ದಾರೆ.

    ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಜನರು ವಿರೋಧ ಮಾಡುತ್ತಿದ್ದಾರೆ. ರಣ ಹೇಡಿಯ ನಿಜ ರೂಪ ಬಯಲು ಮಾಡುವುದು ನನ್ನ ಉದ್ದೇಶ. ನಾಟಕ ಅಂದ್ರೆ ಕಲ್ಪನೆ ಅಲ್ಲ, ಸತ್ಯದ ಅನಾವರಣ. ಟಿಪ್ಪು ವೀರನಲ್ಲ. ಆತನ ಮತ್ತೊಂದು ಮುಖವಾಡವೆ ಟಿಪ್ಪು ನಿಜ ಕನಸುಗಳು (Tippu Nija Kanasugalu) ನಾಟಕ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ಸ್ಥಿತಿ ಯಾರಿಗೂ ಬೇಡ- ಅಪ್ಪನ ನೆನಪಿಗಾಗಿ ಕ್ಯಾಂಟೀನ್ ಮಂಜಣ್ಣನಿಂದ ಉಚಿತ ಅಂಬುಲೆನ್ಸ್ ಸೇವೆ

    ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನದ ಮೂಲಕ ಟಿಪ್ಪುವಿನ ಬಗ್ಗೆ ಮರೆಮಾಚಿದ್ದ ಮತ್ತೊಂದು ಮುಖವಾಡ ಬಯಲಾಗುತ್ತಿದೆ. ಮರೆಮಾಚಿದ್ದ ವಿಚಾರಗಳನ್ನು ಜನರ ಮುಂದೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಮಾ.7 ರಂದು ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಾಟಕ ಪ್ರದರ್ಶನವಾಗಲಿದೆ. ಈಗಾಗಲೇ ರಾಜ್ಯದಲ್ಲಿ 55 ಪ್ರದರ್ಶನಗಳನ್ನ ಮಾಡಲಾಗಿದೆ. ಆದ್ರೆ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನನ್ನ ವಾಕ್ ಸ್ವಾತಂತ್ರ್ಯ ಬಳಸಿಕೊಂಡು ನಾನು ನಾಟಕ ರೂಪಿಸಿದ್ದೇನೆ. ರಫಿವುಲ್ಲಾ ಎಂಬಾತ ನನ್ನ ವಿರುದ್ಧ ಬೆಂಗಳೂರಿನಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದಾನೆ. ನ್ಯಾಯಾಲಯದಲ್ಲಿ ನನ್ನ ಪರವಾಗಿ ತೀರ್ಪು ಬರಲಿದೆ. ನನ್ನ ನಾಟಕ ಪ್ರತಿನಿತ್ಯ ರಂಗಭೂಮಿಯಲ್ಲಿ ಸದ್ದು ಮಾಡುತ್ತದೆ. ನಾನು ಬಂದಾಗ ನನ್ನ ವಿರುದ್ಧ ಮಾತನಾಡುವುದು, ಫ್ಲೆಕ್ಸ್‍ಗಳನ್ನ ಹರಿದು ಹಾಕುವ ಕೆಲಸವನ್ನು ಮುಸ್ಲಿಂ ಮುಖಂಡರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಬರಗೂರು ರಾಮಚಂದ್ರಪ್ಪ (Baraguru Ramachandrappa), ಗಿರೀಶ್ ಕಾರ್ನಾಡ್ (Girish Karnad) ಅವರು ಬರೆದ ನಾಟಕಗಳಿಗೆ ವಿರೋಧ ಇಲ್ಲ. ಆದ್ರೆ ನನ್ನ ನಾಟಕಕ್ಕೆ ಮಾತ್ರ ವಿರೋಧ ಇದೆ. ಯಾಕೆ ಅವರೆಲ್ಲಾ ದೊಡ್ಡವರು ಅಂತ ಪ್ರಶ್ನೆ ಮಾಡುತ್ತಿಲ್ವಾ? ಅವರೆಲ್ಲಾ ಎಡಪಂಥೀಯರು, ಬ್ರಾಹ್ಮಣರು ಸೇರಿದಂತೆ ಬೇರೆ ಬೇರೆಯವರನ್ನ ಹಲವು ರೀತಿಯಲ್ಲಿ ವರ್ಣಿಸಿದಾಗ ಖುಷಿ ಪಡ್ತಾರೆ. ಆದ್ರೆ ಟಿಪ್ಪು ಬಗ್ಗೆ ಅವರ ನಿಜ ರೂಪ ಬಯಲಾಗುತ್ತೆ ಅನ್ನೋ ಕಾರಣಕ್ಕೆ ವಿರೋಧ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

  • ಕನ್ನಡಸಾರಸ್ವತ ಲೋಕದ ಪ್ರತಿಭೆಯ ಯುಗಾಂತ್ಯ – ಸರ್ಕಾರಿ ಗೌರವ, ಧಾರ್ಮಿಕ ವಿಧಾನಗಳಿಲ್ಲದೇ ಅಂತ್ಯಕ್ರಿಯೆ

    ಕನ್ನಡಸಾರಸ್ವತ ಲೋಕದ ಪ್ರತಿಭೆಯ ಯುಗಾಂತ್ಯ – ಸರ್ಕಾರಿ ಗೌರವ, ಧಾರ್ಮಿಕ ವಿಧಾನಗಳಿಲ್ಲದೇ ಅಂತ್ಯಕ್ರಿಯೆ

    ಬೆಂಗಳೂರು: ಭಾರತೀಯ ಕಲೆ, ಸಂಗೀತ, ಸಾಹಿತ್ಯ, ನಾಟಕ, ನೃತ್ಯ, ನಟನೆ, ನಿರ್ದೇಶನ, ಚಿತ್ರಕಲೆ, ಜಾನಪದ ಸಂಸ್ಕೃತಿ, ಬಹುಭಾಷೆಗಳಲ್ಲಿ ಪಾಂಡಿತ್ಯ, ಪ್ರಗತಿಪರ ವಿಚಾರಧಾರೆ, ವ್ಯವಸ್ಥೆಯ ವಿರುದ್ಧ ಬಂಡೇಳುವ ಪ್ರವೃತ್ತಿ ಎಲ್ಲವನ್ನು ಒಳಗೊಂಡ ನಾಯಕ ಗಿರೀಶ್ ಕಾರ್ನಾಡರ ಅಂತ್ಯಕ್ರಿಯೆ ಬೈಯಪ್ಪನಹಳ್ಳಿ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು.

    ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 81 ವರ್ಷದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದರು. ಗಿರೀಶ್ ಕಾರ್ನಾಡರ ಕೊನೆಯ ಆಸೆಯಂತೆ, ಯಾವುದೇ ಸರ್ಕಾರಿ ಗೌರವಗಳಿಲ್ಲದೇ, ಅಂತಿಮ ಮೆರವಣಿಗೆ, ಹಾರ ತುರಾಯಿಗಳು ಇಲ್ಲದೇ, ಅಂತಿಮ ವಿಧಿವಿಧಾನಗಳು ಇಲ್ಲದೇ ಬೈಯಪ್ಪನಹಳ್ಳಿ ಕಲ್ಲಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

    ಸಾಹಿತಿ ಅನಂತಮೂರ್ತಿ ಮತ್ತು ಇತರರ ಸಾವಿನ ವೇಳೆ ಎದುರಾದ ಟೀಕೆ, ವಿರೋಧಗಳಿಂದಾಗಿ ನೊಂದಿದ್ದ ಕಾರ್ನಾಡರು, ತಮ್ಮ ಅಂತ್ಯಕ್ರಿಯೆಗೆ ಯಾವುದೇ ಸರ್ಕಾರಿ ಗೌರವ ಬೇಡ ಅಂತ ಕುಟುಂಬದ ಸದಸ್ಯರಿಗೂ ತಿಳಿಸಿದ್ದರು. ಆದರೂ ಕಲ್ಲಹಳ್ಳಿ ವಿದ್ಯುತ್ ಚಿತಾಗಾರಕ್ಕೆ ಸರ್ಕಾರದ ಪರವಾಗಿ ಸಚಿವ ಡಿಕೆ ಶಿವಕುಮಾರ್, ದೇಶಪಾಂಡೆ ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಇನ್ನುಳಿದಂತೆ ಕಾರ್ನಾಡರ ಆಪ್ತರಾದ ಬರಗೂರು ರಾಮಚಂದ್ರಪ್ಪ, ಬಿ ಜಯಶ್ರೀ, ಚಿರಂಜೀವಿ ಸಿಂಗ್, ಮರಳಸಿದ್ದಪ್ಪ, ಸುರೇಶ್ ಹೆಬ್ಳಿಕರ್ ಸೇರಿ ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು.

    https://www.youtube.com/watch?v=VFiqV4WJVGw

  • 7 ತಿಂಗಳ ಬಳಿಕ ಶ್ರುತಿ ಹರಿಹರನ್ ಟ್ವಿಟ್ಟರ್‌ಗೆ ಎಂಟ್ರಿ

    7 ತಿಂಗಳ ಬಳಿಕ ಶ್ರುತಿ ಹರಿಹರನ್ ಟ್ವಿಟ್ಟರ್‌ಗೆ ಎಂಟ್ರಿ

    ಬೆಂಗಳೂರು: ಲೂಸಿಯಾ ಬೆಡಗಿ ಶ್ರುತಿ ಹರಿಹರನ್ ಮೀಟೂ ವಿವಾದದ ಬಳಿಕ ಟ್ವಿಟ್ಟರ್ ನಿಂದ ದೂರ ಉಳಿದಿದ್ದರು. 7 ತಿಂಗಳ ಬಳಿಕ ಮತ್ತೆ ಟ್ವಿಟ್ಟರ್‌ಗೆ ಎಂಟ್ರಿ ಕೊಟ್ಟಿದ್ದಾರೆ.

    ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೆಯಾದ ಹೆಜ್ಜೆ ಮೂಡಿಸಿದ್ದ ಶ್ರುತಿ ಹರಿಹರನ್ ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ದಕ್ಷಿಣ ಭಾರತದಲ್ಲಿ ಸುದ್ದಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯಾರಾಗಿದ್ದ ಶ್ರುತಿ, ಕೊನೆಯದಾಗಿ ನವೆಂಬರ್ ತಿಂಗಳಿನಲ್ಲಿ ಮೀಟೂ ಬಗ್ಗೆಯೇ ಒಂದು ಟ್ವೀಟ್ ಮಾಡಿ ಶ್ರುತಿ ಸುಮ್ಮನಾಗಿದ್ದರು.

    ಇತ್ತೀಚೆಗೆ ತೆರೆಕಂಡ ತಮ್ಮ `ನಾತಿಚರಾಮಿ’ ಸಿನಿಮಾ ಬಗ್ಗೆ ಹಾಗೂ ಕೆಲವು ಸಣ್ಣ ಪುಟ್ಟ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದರು. ಅಷ್ಟು ಬಿಟ್ಟರೆ ಇನ್ನು ಯಾವುದರ ಬಗ್ಗೆಯೂ ಅವರು ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡುತ್ತಿರಲಿಲ್ಲ.

    ಆದರೆ, ಇದೀಗ 7 ತಿಂಗಳುಗಳ ಬಳಿಕ ಮತ್ತೆ ಟ್ವಿಟ್ಟರ್ ನಲ್ಲಿ ಶ್ರುತಿ ಹರಿಹರನ್ ಪ್ರತ್ಯಕ್ಷರಾಗಿದ್ದಾರೆ. ಇಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು, ಈ ಬಗ್ಗೆ ಶ್ರುತಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಒಬ್ಬ ಲೆಜೆಂಡ್‍ರನ್ನು ಕಳೆದುಕೊಂಡ ನೋವನ್ನು ಹಂಚಿಕೊಳ್ಳಲು ಬಹಳ ಕಾಲದ ಬಳಿಕ ಸಾಮಾಜಿಕ ಜಾಲತಾಣಕ್ಕೆ ಬರುತ್ತಿದ್ದೇನೆ. ಇಂತಹ ಅದ್ಭುತ ವ್ಯಕ್ತಿಯ ಜೊತೆಗೆ ಕೆಲಸ ಮಾಡುವ ಅವಕಾಶ ಒಮ್ಮೆ ನನಗೆ ಸಿಕ್ಕಿತ್ತು. ಅವರ ಸರಳತೆ ಹಾಗೂ ಜ್ಞಾನ ವಿಸ್ಮಯವಾದದ್ದು, ಅವರು ನಮ್ಮ ಹೃದಯದಲ್ಲಿ ಸದಾ ಇರುತ್ತಾರೆ ಎಂದು ಟ್ವೀಟ್ ಮಾಡಿ ನೆನೆದಿದ್ದಾರೆ.

    ಗಿರೀಶ್ ಕಾರ್ನಾಡ್ ಅವರ ಜೊತೆಗೆ ಕನ್ನಡದ ಇಂದಿನ ಯುವ ನಟಿಯರಿಗೆ ನಟಿಸುವ ಅವಕಾಶ ಸಿಕ್ಕಿದ್ದು ಕಡಿಮೆ. ಆದರೆ ಇಂತಹ ಅದ್ಭುತ ನಟನ ಜೊತೆಗೆ ಶ್ರುತಿ ಹರಿಹರನ್ ಅವರಿಗೆ ಒಮ್ಮೆ ನಟಿಸುವ ಭಾಗ್ಯ ಸಿಕ್ಕಿತ್ತು. ಜಾಕಬ್ ವರ್ಗಿಸ್ ನಿರ್ದೇಶನದಲ್ಲಿ ಮೂಡಿಬಂದಿದ್ದ `ಸವಾರಿ 2′ ಸಿನಿಮಾದಲ್ಲಿ ಕಾರ್ನಾಡರ ಜೊತೆಗೆ ಶ್ರುತಿ ನಟಿಸಿದ್ದರು.

  • ಕಾರ್ನಾಡ್ ವಿಧಿವಶ – ಮೋದಿ, ಕೋವಿಂದ್ ಸೇರಿದಂತೆ ಗಣ್ಯರಿಂದ ಕಂಬನಿ

    ಕಾರ್ನಾಡ್ ವಿಧಿವಶ – ಮೋದಿ, ಕೋವಿಂದ್ ಸೇರಿದಂತೆ ಗಣ್ಯರಿಂದ ಕಂಬನಿ

    ನವದೆಹಲಿ: ಇಂದು ವಿಧಿವಶರಾದ ಜ್ಞಾನಪೀಠ ಪುರಸ್ಕೃತ ಕನ್ನಡದ ಹೆಮ್ಮೆಯ ಸಾಹಿತಿ ಗಿರೀಶ್ ಕಾರ್ನಾಡ್ ಅವರನ್ನು ನೆನೆದು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಇತರೇ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಚಿತ್ರರಂಗದ ಕಲಾವಿದರು, ರಾಜಕಾರಣಿಗಳು ಹಾಗೂ ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಒಳ್ಳೆಯ ವಿಚಾರಗಳಿಗೆ ಭಾವೋದ್ವೇಗದಿಂದ ಮಾತನಾಡುವುದು ಅವರಿಗೆ ಅಚ್ಚುಮೆಚ್ಚು. ಇಂತಹ ಅದ್ಭುತ ಸಾಹಿತಿ, ಕಲಾವಿದ ನಮ್ಮನ್ನು ಅಗಲಿರುವುದು ನನಗೆ ಬಹಳ ದುಃಖವಾಗಿದೆ ಎಂದು ಮೋದಿ ಟ್ವೀಟ್ ಮಾಡಿ ನೊಂದಿದ್ದಾರೆ. ಇದನ್ನೂ ಓದಿ:ಗಿರೀಶ್ ಕಾರ್ನಾಡ್ ಬರೆದ ಪತ್ರ ಬಹಿರಂಗ ಪಡಿಸಿದ ಪ್ರಕಾಶ್ ರಾಜ್

    ಪ್ರಧಾನಿ ನರೇಂದ್ರ ಮೋದಿ
    ಗಿರೀಶ್ ಕಾರ್ನಾಡ್ ಅವರು ತಮ್ಮ ಅದ್ಭುತ ನಟನೆಯಿಂದ ಎಲ್ಲಾ ಮಾಧ್ಯಮಗಳಲ್ಲೂ ಹೆಸರು ಮಾಡಿದವರು. ಹಾಗೆಯೇ ಒಳ್ಳೆಯ ವಿಚಾರಗಳಿಗೆ ಭಾವೋದ್ವೇಗದಿಂದ ಮಾತನಾಡುವುದು ಅವರಿಗೆ ಅಚ್ಚುಮೆಚ್ಚು. ಅವರ ಕೃತಿಗಳು ಹೀಗೆಯೇ ಮುಂಬರುವ ವರ್ಷಗಳಲ್ಲೂ ಜನಪ್ರಿಯವಾಗಿರಲಿ. ಅವರ ಸಾವಿನಿಂದ ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರಿದ್ದಾರೆ.

    ರಾಷ್ಟ್ರಪತಿ
    ಭಾರತೀಯ ರಂಗಭೂಮಿಯ ಹಿರಿಯ ನಟ, ಸಾಹಿತಿ ಗಿರೀಶ್ ಕಾರ್ನಾಡ್ ಅವರು ನಿಧನರಾದ ಸುದ್ದಿ ಕೇಳಿ ಬಹಳ ದುಃಖವಾಯಿತು. ನಮ್ಮ ಸಾಂಸ್ಕೃತಿಕ ಜಗತ್ತು ಇಂದು ಬಡವಾಗಿದೆ. ಅವರ ಕುಟುಂಬಕ್ಕೆ ಹಾಗೂ ಅವರ ಬರಹಗಳನ್ನು ಅನುಸರಿಸುವವರಿಗೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಗಿರೀಶ್ ಕಾರ್ನಾಡ್ ಒಬ್ಬ ಒಳ್ಳೆಯ ಮನುಷ್ಯರಾಗಿದ್ದರು – ಹ್ಯಾಟ್ರಿಕ್ ಹೀರೋ

    ರಣ್‍ದೀಪ್ ಸಿಂಗ್ ಸುರ್ಜೆವಾಲ
    ಸಾಹಿತಿ, ನಟ, ಕಲಾವಿದ, ನಿರ್ದೇಶಕ, ಸಾಮಾಜಿಕ ಹೋರಾಟಗಾರ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ಭಾರತೀಯ ಸೃಜನಶೀಲ ರಂಗಕ್ಕೆ ಭರಿಸಲಾಗದ ನಷ್ಟವಾಗಿದೆ. ನನ್ನ ಆಲೋಚನೆ ಹಾಗೂ ಪಾರ್ಥನೆ ಅವರ ಕುಟುಂಬ, ಸ್ನೇಹಿತರು ಮತ್ತ ಅಭಿಮಾನಿಗಳೊಂದಿಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಅರವಿಂದ್ ಕೇಜ್ರಿವಾಲ್
    ಇಂದು ಬೆಳಗ್ಗೆ ಅನುಭವಿ ಖ್ಯಾತ ನಟ, ನಾಟಕಕಾರ ಗಿರೀಶ್ ಕಾರ್ನಾಡ್ ಅವರು ವಿಧಿವಶರಾದರೆಂಬ ದುಃಖದ ಸುದ್ದಿ ಬಂತು. ಗಿರೀಶ್ ಜಿ ಅವರ ಆಲೋಚನೆ, ಕಲಾತ್ಮಕ ಕೊಡುಗೆಯನ್ನು ನಮ್ಮ ರಾಷ್ಟ್ರ ಇನ್ನು ಮುಂದೆ ಮಿಸ್ ಮಾಡುತ್ತೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:ಗಿರೀಶ್ ಅವರನ್ನು ನೋಡ್ತಿದ್ದರೆ ವಿವೇಕಾನಂದ ನೆನಪಾಗ್ತಿದ್ರು: ಬಿ.ಟಿ ಲಲಿತಾ ನಾಯಕ್

    ಕಮಲ್ ಹಾಸನ್
    ಗಿರೀಶ್ ಕಾರ್ನಾಡ್ ಅವರ ಕೃತಿಗಳು ನನ್ನನ್ನು ವಿಶ್ಮಯಗೊಳಿಸಿದೆ ಮತ್ತು ನನಗೆ ಸ್ಫೂರ್ತಿಯಾಗಿದೆ. ಅವರು ತಮ್ಮಿಂದ ಪ್ರೇರೆಪಿತರಾಗಿ ಅಭಿಮಾನಿಗಳಾದ ಬಹಳಷ್ಟು ಬರಹಗಾರರನ್ನು ಬಿಟ್ಟುಹೋಗಿದ್ದಾರೆ. ಅವರ ಕೃತಿಗಳು, ಕೆಲಸಗಳು ಬಹುಶಃ ಕಾರ್ನಾಡ್ ಅವರ ಅಗಲಿಕೆಯಿಂದಾದ ನಷ್ಟವನ್ನು ಭಾಗಶಃ ಭರಿಸಬಲ್ಲವು ಅಂದುಕೊಂಡಿದ್ದೇನೆ ಎಂದು ಬರೆದು ಸಂತಾಪ ವ್ಯಕ್ತಪಡಿಸಿದ್ದಾರೆ.

  • ಮೊದಲ ಗುರು ಕಳ್ಕೊಂಡ ನೋವಿನಲ್ಲಿ ಸಂಯುಕ್ತ

    ಮೊದಲ ಗುರು ಕಳ್ಕೊಂಡ ನೋವಿನಲ್ಲಿ ಸಂಯುಕ್ತ

    – ಕಾರ್ನಾಡ್ ಅವರೇ ನನಗೆ ಪ್ರೇರಣೆ – ಕಮಲ್ ಹಾಸನ್

    ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್ ನಿಧನದ ಹಿನ್ನೆಲೆಯಲ್ಲಿ ಸಿನಿಮಾರಂಗದವರು ಸಂತಾಪ ಸೂಚಿಸುತ್ತಿದ್ದಾರೆ.

    ಗಿರೀಶ್ ಕಾರ್ನಾಡ್ ಅಗಲಿಕೆಗೆ ಬಹುಭಾಷಾ ನಟ ಕಮಲ್ ಹಾಸನ್ ಮತ್ತು ಸಂಯುಕ್ತ ಹೊರನಾಡು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಸಂಯುಕ್ತ ಅವರು,” ನನ್ನ ಮೊದಲ ಸಿನಿಮಾ, ನಾಟಕ, ನಟನೆಯ ಕೋರ್ಸ್ ಮತ್ತು ಮೊದಲ ಗುರು ಗಿರೀಶ್ ಕಾರ್ನಾಡ್ ಅವರ ವಿಧಿವಶರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂತಾಪ ಸೂಚಿಸಿದ್ದಾರೆ.

    ಸಂಯುಕ್ತ ಅವರ ಸಿನಿಮಾ, ನಾಟಕ, ನಟನೆಯ ಕೋರ್ಸ್ ಎಲ್ಲದರನ್ನೂ ಗಿರೀಶ್ ಕಾರ್ನಾಡ್ ಜೊತೆಯಲ್ಲಿ ಇದ್ದರಂತೆ ಹೀಗಾಗಿ ಅವರೇ ಅವರ ಜೀವನದ ಮೊದಲ ಗುರು ಎಂದು ನೋವಿನಿಂದ ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಇನ್ನೂ ನಟ ಕಮಲ್ ಹಾಸನ್ ಕೂಡ, “ಶ್ರೀ ಗಿರೀಶ್ ಕಾರ್ನಾಡ್ ಅವರ ಬರಹಗಳು ವಿಸ್ಮಯವಾಗಿದ್ದು, ನನಗೆ ಸ್ಫೂರ್ತಿ ನೀಡಿವೆ. ಅವರ ಬರಹಗಳಿಂದ ಪ್ರೇರಣೆ ಪಡೆದ ಅನೇಕ ಅಭಿಮಾನಿಗಳನ್ನು ಇಂದು ತೊರೆದಿದ್ದಾರೆ. ಅವರ ಅಗಲಿಕೆಯಿಂದ ಬರಹಗಾರಿಗೆ ಅಪಾರ ನಷ್ಟವುಂಟುಮಾಡಿದೆ” ಎಂದು ಟ್ವೀಟ್ ಮಾಡಿ ವಿಷಾದ ವ್ಯಕ್ತಪಡಿಸಿದ್ದಾರೆ.

    ನಟ ಕಮಲ್ ಹಾಸನ್ ಮತ್ತು ಗಿರೀಶ್ ಕಾರ್ನಾಡ್ ‘ಹೇ ರಾಮ್’ ಮತ್ತು ‘ಗುಣ’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಗಿರೀಶ್ ಕಾರ್ನಾಡ್ ಅಗಲಿಕೆಗೆ ಸ್ಯಾಂಡಲ್‍ವುಡ್ ನಟ-ನಟಿಯರು ಮತ್ತು ರಾಜಕೀಯ ನಾಯಕರು ಕೂಡ ಸಂತಾಪ ಸೂಚಿಸಿದ್ದಾರೆ.

  • ಸಾಹಿತಿಗಳ ಜೊತೆ ನಮ್ಮದೇನಿದೆ, ನಾಡಿನ ಶ್ರೇಷ್ಠ ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಸಿಕ್ಕಿಲ್ಲ: ಯತ್ನಾಳ್

    ಸಾಹಿತಿಗಳ ಜೊತೆ ನಮ್ಮದೇನಿದೆ, ನಾಡಿನ ಶ್ರೇಷ್ಠ ಸಾಹಿತಿಗಳಿಗೆ ಜ್ಞಾನಪೀಠ ಪ್ರಶಸ್ತಿ ಸಿಕ್ಕಿಲ್ಲ: ಯತ್ನಾಳ್

    ವಿಜಯಪುರ: ನಾನೇನು ಸಾಹಿತಿ ಅಲ್ಲ, ಕವಿಯೂ ಅಲ್ಲ. ಹೀಗಾಗಿ ಸಾಹಿತಿಗಳ ಜೊತೆ ನಮ್ಮದೇನಿದೆ. ನಾನೊಬ್ಬ ರಾಜಕಾರಣಿ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

    ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಗಿರೀಶ್ ಕಾರ್ನಾಡ್ ನಿಧನಕ್ಕೆ ಸಂತಾಪ ಸೂಚಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ಜೊತೆ ಅವರ ಒಡನಾಟವಿಲ್ಲ. ನಾವು ಅವರಿಗಿಂತ ಬಹಳ ಸಣ್ಣವರು, ಅವರು ನಮಗಿಂತ ಬಹಳ ಹಿರಿಯರಾಗಿದ್ದಾರೆ. ಅವರ ಫೋಟೋ ಇಲ್ಲೆಲ್ಲ ಇದೆ ನೋಡಿ ಎಂದರು.

    ಜ್ಞಾನಪೀಠ ಪ್ರಶಸ್ತಿ ಅವರಿಗೆ ಕೊಟ್ಟಿದ್ರು. ಬಹಳ ಜನಕ್ಕೆ ಕೊಟ್ಟಿದ್ದಾರೆ. ಹೆಚ್ಚಾಗಿ ದೇಶದ ಬಗ್ಗೆ ಚಿಂತನೆ ಮಾಡುವವರಿಗೆ ಸಿಗಬೇಕಿತ್ತು, ಪಾಪ ಸಿಕ್ಕಿಲ್ಲ. ಅಂಥವರು ಕರ್ನಾಟಕದಲ್ಲಿ ಬಹಳ ಜನ ಇದ್ದಾರೆ. ಅವರಿಗೆ ಸಿಗಲಿ ಎಂದು ಹಾರೈಸುವುದಾಗಿ ತಿಳಿಸಿದ  ಅವರು,  ಅತ್ಯಂತ ಶ್ರೇಷ್ಠ ಸಾಹಿತಿಗಳಿಗೆ ಇನ್ನೂ ಜ್ಞಾನಪೀಠ ಸಿಕ್ಕಿಲ್ಲ. ಅರ್ಹತೆ ಹೊಂದಿದವರಿಗೂ ನೀಡಲಿ ಎಂದು ಮೋದಿ ಅವರ ಬಳಿ ಮನವಿ ಮಾಡುತ್ತೇನೆ ಎಂದು ಹೇಳಿದರು.

    ಕಳೆದ ಒಂದು ತಿಂಗಳಿನಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಇಂದು ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಸಾಹಿತಿಯ ನಿಧನಕ್ಕೆ ಕನ್ನಡ ಚಿತ್ರರಂಗ, ರಾಜಕಾರಣಿಗಳು ಸೇರಿದಂತೆ ಹಲವು ಮಂದಿ ಸಂತಾಪ ಸೂಚಿಸುತ್ತಿದ್ದಾರೆ.

  • ಗಿರೀಶ್ ಕಾರ್ನಾಡ್ ಬರೆದ ಪತ್ರ ಬಹಿರಂಗ ಪಡಿಸಿದ ಪ್ರಕಾಶ್ ರಾಜ್

    ಗಿರೀಶ್ ಕಾರ್ನಾಡ್ ಬರೆದ ಪತ್ರ ಬಹಿರಂಗ ಪಡಿಸಿದ ಪ್ರಕಾಶ್ ರಾಜ್

    ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಇಂದು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಹುಭಾಷ ನಟ ಪ್ರಕಾಶ್ ರಾಜ್ ತಮಗೆ ಗಿರೀಶ್ ಕಾರ್ನಾಡ್ ಅವರು ಬರೆದ ಪತ್ರವನ್ನು ಬಹಿರಂಗಗೊಳಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.

    ಪ್ರಕಾಶ್ ರಾಜ್ ಅವರ 50ನೇ ಹುಟ್ಟುಹಬ್ಬಕ್ಕೆ ಗಿರೀಶ್ ಕಾರ್ನಾಡ್ ಅವರು ಪ್ರೀತಿಯಿಂದ ಪತ್ರ ಬರೆದು ಶುಭಕೋರಿದ್ದರು. ಆ ಪತ್ರದ ಪ್ರತಿಯನ್ನು ಇಂದು ನಟ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡು ನೆನೆದು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ:ಗಿರೀಶ್ ಕಾರ್ನಾಡ್ ಒಬ್ಬ ಒಳ್ಳೆಯ ಮನುಷ್ಯರಾಗಿದ್ದರು – ಹ್ಯಾಟ್ರಿಕ್ ಹೀರೋ

    ಕನ್ನಡವನ್ನು, ಕನ್ನಡಿಗರನ್ನು, ಕರ್ನಾಟಕವನ್ನು ಶ್ರೀಮಂತಗೊಳಿಸುತ್ತಾ ಬಾಳಿ ಬದುಕಿದ ಅದಮ್ಯ ಚೇತನ ಕಾರ್ನಾಡರಿಗೆ ನಮನ. ನೀವು ಸಮೃದ್ಧವಾದ, ಸೂರ್ತಿದಾಯಕ ಜೀವನವನ್ನು ನಡೆಸಿದ್ದಕ್ಕೆ ಗಿರೀಶ್ ಕಾರ್ನಾಡ್ ಜಿ ನಿಮಗೆ ಧನ್ಯವಾದಗಳು. ನಿಮ್ಮ ಜೊತೆ ನಾನು ಕಳೆದ ಪ್ರತಿ ಕ್ಷಣವೂ ಜೀವಂತಾವಾಗಿದೆ. ನಿಮ್ಮನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ, ಆದರೆ ನನ್ನ ಜೀವನದಲ್ಲಿ ನಿಮ್ಮ ಆದರ್ಶ ಸದಾ ಪಾಲಿಸುತ್ತೇನೆ ಎಂದು ಬರೆದು ಅವರು ಬರೆದ ಪತ್ರವನ್ನು ಹಾಕಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಒಂದೇ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದಿದ್ವಿ: ಕಾರ್ನಾಡ್‍ರನ್ನ ನೆನೆದ ಪಾಪು

    ಪತ್ರದಲ್ಲಿ ಏನಿದೆ?
    ಪ್ರೀತಿಯ ಪ್ರಕಾಶ್ ರಾಜ್, ನಿಮಗೆ ಇಂದು ಐವತ್ತು ತುಂಬಿತೇ? ನಂಬಲಾಗುತ್ತಿಲ್ಲ. ಐವತ್ತು ತಲುಪುವುದು ಕಠಿಣ ಮಾತಲ್ಲ ನಿಜ, ಆರೋಗ್ಯವಾಗಿದ್ದರೆ ಯಾರಾದರೂ ಆ ಅಂಕಿಯನ್ನು ಮುಟ್ಟಬಹುದು. ಆದರೆ ನೀವು ಮಾತ್ರ ಈ ಐವತ್ತರಲ್ಲಿ ಎಷ್ಟೇಲ್ಲಾ ಯಶಸ್ಸನ್ನು, ಪ್ರತಿಭೆಯನ್ನು ತುಂಬಿದ್ದೀರಿ! ನೀವು ದಿನೇದಿನೇ ಬೆಳೆಯುತ್ತ ಭಾರತದುದ್ದಕ್ಕೂ ರೆಂಬೆ-ಕೊಂಬೆಗಳನ್ನು ಚಾಚುತ್ತಿರುವುದನ್ನ ನಿಮ್ಮ ಮಿತ್ರರಾದ ನಾವು ದೂರದಿಂದ ನೋಡಿ ನಲಿದಿದ್ದೇವೆ, ಹೆಮ್ಮೆಯಿಂದ ಬೀಗಿದ್ದೇವೆ.

    ಹೀಗೆಯೇ ಮತ್ತು ಎತ್ತರ ಬೆಳೆಯುತ್ತಿರಿ, ಬೆಳಗುತ್ತಿರಿ. ಬೆಳಗುತ್ತಲೇ ನೂರನ್ನು ದಾಟಿ ಹೋಗಿರಿ. ನಿಮ್ಮ ಗಿರೀಶ್ ಕಾರ್ನಾಡ್ ಎಂದು ಪತ್ರ ಬರೆದು ಶುಭಕೋರಿದ್ದರು.

    ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಅವರ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಇದನ್ನೂ ಓದಿ:ಕನ್ನಡಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದುಕೊಟ್ಟ ಕೆಲವೇ ಗಣ್ಯರಲ್ಲಿ ಕಾರ್ನಾಡ್ ಒಬ್ಬರು: ಚಂಪಾ

    ಸಂಜೆ ಮೇಲೆ ಬೈಯಪ್ಪನಹಳ್ಳಿಯಲ್ಲಿರುವ ಕಲ್ಲಪಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರು ಬರುವುದು ಬೇಡ. ಸಾರ್ವಜನಿಕ ದರ್ಶನ ಇರುವುದಿಲ್ಲ. ಯಾವುದೇ ವಿಧಿ ವಿಧಾನ ಇರುವುದಿಲ್ಲ ಎಂದು ನಿರ್ದೇಶಕ ಕೆ.ಎಂ ಚೈತನ್ಯ ತಿಳಿಸಿದ್ದಾರೆ.

    ಮಧ್ಯಾಹ್ನ ನಾವು ಅಂತ್ಯ ಸಂಸ್ಕಾರದ ಸಮಯದ ನಿಗದಿ ಮಾಡುತ್ತೇವೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ ಎಂದು ಪತ್ನಿ ಸರಸ್ವತಿ ಕಾರ್ನಾಡ್ ಮನವಿ ಮಾಡಿಕೊಂಡಿದ್ದಾರೆ.

  • ಗಿರೀಶ್ ಕಾರ್ನಾಡ್ ಒಬ್ಬ ಒಳ್ಳೆಯ ಮನುಷ್ಯರಾಗಿದ್ದರು – ಹ್ಯಾಟ್ರಿಕ್ ಹೀರೋ

    ಗಿರೀಶ್ ಕಾರ್ನಾಡ್ ಒಬ್ಬ ಒಳ್ಳೆಯ ಮನುಷ್ಯರಾಗಿದ್ದರು – ಹ್ಯಾಟ್ರಿಕ್ ಹೀರೋ

    ಬೆಂಗಳೂರು: ಸಾಹಿತಿ ಗಿರೀಶ್ ಕಾರ್ನಾಡ್ ವೃತ್ತಿ ಏನೇ ಇದ್ದರೂ ಅವರು ಒಳ್ಳೆಯ ಸಾಹಿತಿ, ನಟ, ನಿರ್ದೇಶಕ, ನಿರ್ಮಾಪಕರಾಗಿದ್ದು, ಅದಕ್ಕಿಂತಲೂ ಅವರು ಒಬ್ಬ ಒಳ್ಳೆಯ ಮನುಷ್ಯರಾಗಿದ್ದರು ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಸಂತಾಪ ಸೂಚಿಸಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಅವರೊಂದಿಗಿನ ಒಳ್ಳೆಯ ನೆನಪುಗಳು ಸಾಕಷ್ಟಿವೆ. ಎಕೆ 47, ಜನ್ಮದಾತ ಹೀಗೆ ಅವರ ಜೊತೆ ಮಾಡಿದ ಸಿನಿಮಾಗಳು ನೆನಪುಗಳನ್ನು ನೀಡಿವೆ. ಅವರು ಅಭಿನಯಿಸುವ ಮಾಡುವ ಶೈಲಿ ತುಂಬಾನೇ ಅದ್ಭುತವಾಗಿತ್ತು. ಇಷ್ಟು ಮಾತ್ರವಲ್ಲದೆ ಅವರಿಗೆ ಭಾಷೆಯಲ್ಲೂ ಹಿಡಿತವಿತ್ತು. ಇವೆಲ್ಲವನ್ನೂ ಕೇಳಲು ಚಂದ. ಆದರೆ ಇಂದು ಅವರು ನಮ್ಮಿಂದ ದೂರವಾಗಿರುವುದು ಸ್ಯಾಂಡಲ್‍ವುಡ್ ಗೆ ಮಾತ್ರವಲ್ಲ, ಇಡೀ ಭಾರತದ ಚಿತ್ರತಂಡಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.

    ನಟನೆಯ ಸಂದರ್ಭದಲ್ಲಿ ಅವರು ಅತ್ಯಂತ ಆತ್ಮೀಯರಾಗಿರುತ್ತಿದ್ದರು. ಅವರಿಗೆ ನಾನೊಬ್ಬ ಹಿರಿಯವನು ಎಂಬ ಅಹಂಕಾರ ಇರಲಿಲ್ಲ. ಜೊತೆ ಇರುವಾಗ ತಮಾಷೆ ಮಾಡುತ್ತಿದ್ದರು ಎಂದರು.

    ನಾನು ಅವರನ್ನು ಭೇಟಿಯಾಗದೇ ಹಲವು ವರ್ಷಗಳೇ ಕಳೆದಿವೆ. ಸದ್ಯ ನಾನು ಚೆನ್ನೈನಲ್ಲಿದ್ದೇನೆ. ಹೀಗಾಗಿ ಇಲ್ಲಿ ಬಂದ ಬಳಿಕ ಈ ವಿಚಾರ ತಿಳಿಯಿತು. ಒಟ್ಟಿನಲ್ಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಹಾಗೆಯೇ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶಿವರಾಜ್ ಕುಮಾರ್ ಆಶಿಸಿದರು.

    ಅವರು ಯಾವತ್ತೂ ನಮ್ಮ ಜೊತೆ ಇರುತ್ತಾರೆ. ಎಲ್ಲರಿಗೂ ಅವರ ಮಾರ್ಗದರ್ಶನ ಇರಲಿ ಎಂದು ಭಾವಿಸುವುದಾಗಿ ತಿಳಿಸಿದರು. ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ಇಂದು ನಿಧನ ಹೊಂದಿದ್ದಾರೆ.

    ಸಾಹಿತಿಯ ನಿಧನಕ್ಕೆ ಸುದೀಪ್, ಪುನೀತ್ ರಾಜ್ ಕುಮಾರ್, ಉಪೇಂದ್ರ, ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ ನ ಎಲ್ಲಾ ನಟರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

    https://www.youtube.com/watch?v=yF-htwgaLuA

  • ಗಿರೀಶ್ ಕಾರ್ನಾಡ್ ವಿಧಿವಶ ಹಿನ್ನೆಲೆ – ಸರ್ಕಾರಿ ಶಾಲಾ, ಕಾಲೇಜಿಗೆ ರಜೆ

    ಗಿರೀಶ್ ಕಾರ್ನಾಡ್ ವಿಧಿವಶ ಹಿನ್ನೆಲೆ – ಸರ್ಕಾರಿ ಶಾಲಾ, ಕಾಲೇಜಿಗೆ ರಜೆ

    ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿ ಗಿರೀಶ್ ಕಾರ್ನಾಡ್ ಅವರ ವಿಧಿವಶದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಫೋಷಣೆ ಮಾಡಲಾಗಿದೆ.

    ಗಿರೀಶ್ ಕಾರ್ನಾಡ್ ಅವರಿಗೆ ಗೌರವ ನೀಡುವ ಉದ್ದೇಶದಿಂದ ಸರ್ಕಾರಿ ಶಾಲೆ-ಕಾಲೇಜುಗಳಿಗೆ ರಜೆಯನ್ನು ಫೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಜೊತೆಗೆ ಮೂರು ದಿನಗಳ ರಾಜ್ಯದಲ್ಲಿ ಶೋಕಾಚರಣೆ ಮಾಡಲಾಗುತ್ತದೆ. ಇದನ್ನೂ ಓದಿ: ಗಿರೀಶ್ ಕಾರ್ನಾಡ್ ಕೊನೆಯ ಆಸೆಯಂತೆ ಅಂತ್ಯಕ್ರಿಯೆ

    ಅವರ ಕೊನೆಯ ಆಸೆಯಂತೆ ಸರ್ಕಾರಿ ಗೌರವಿಲ್ಲದೇ ಅಂತ್ಯಕ್ರಿಯೆ ಮಾಡಲಾಗುತ್ತದೆ. ಮಧ್ಯಾಹ್ನ ಸುಮಾರು 1 ಗಂಟೆಗೆ ಗಿರೀಶ್ ಅವರು ಮನೆಯಿಂದ ಆಂಬುಲೆನ್ಸ್ ನಲ್ಲಿ ಟ್ರಾಫಿಕ್‍ನಲ್ಲೇ ಕಾರ್ನಾಡ್ ಅವರ ಪಾರ್ಥೀವ ಶರೀರ ಲ್ಯಾವೆಲ್ಲಾ ರಸ್ತೆಯಿಂದ ಬೈಯಪ್ಪನಹಳ್ಳಿಯ ಚಿತಾಗಾರಕ್ಕೆ ಸಾಗಲಿದೆ.

    ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

  • ಗಿರೀಶ್ ಕಾರ್ನಾಡ್ ಕೊನೆಯ ಆಸೆಯಂತೆ ಅಂತ್ಯಕ್ರಿಯೆ

    ಗಿರೀಶ್ ಕಾರ್ನಾಡ್ ಕೊನೆಯ ಆಸೆಯಂತೆ ಅಂತ್ಯಕ್ರಿಯೆ

    ಬೆಂಗಳೂರು: ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ.

    ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು.

    ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ ಆಸೆಯನ್ನು ವ್ಯಕ್ತಪಡಿಸಿದ್ದರು. ಮಧ್ಯಾಹ್ನ ನಾವು ಅಂತ್ಯ ಸಂಸ್ಕಾರದ ಸಮಯದ ನಿಗದಿ ಮಾಡುತ್ತೇವೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ ಎಂದು ಪತ್ನಿ ಸರಸ್ವತಿ ಕಾರ್ನಾಡ್ ಮನವಿ ಮಾಡಿಕೊಂಡಿದ್ದಾರೆ.

    ಸಾಹಿತಿಗಳನ್ನು ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸುವ ಬಗ್ಗೆ ಈ ಹಿಂದೆ ಭಾರೀ ಟೀಕೆ ವ್ಯಕ್ತವಾಗಿತ್ತು. ಜಿ ಎಸ್ ಶಿವರುದ್ರಪ್ಪ, ಅನಂತಮೂರ್ತಿ ಅಂತ್ಯಕ್ರಿಯೆ ವೇಳೆ ಕಲಾಗ್ರಾಮದಲ್ಲಿ ಸ್ಥಳ ನೀಡುವ ಬಗ್ಗೆ ಭಿನ್ನ ಅಭಿಪ್ರಾಯ ಗಳು ಹೊರಬಿದ್ದಿತ್ತು. ಈ ಸಂದರ್ಭದಲ್ಲಿ ಸಾವಿನಲ್ಲೂ ರಾಜಕೀಯ ಬೇಡ ಎಂಬ ಅಭಿಪ್ರಾಯವನ್ನ ತಮ್ಮ ಪತ್ನಿ ಬಳಿ ತಿಳಿಸಿ ಸರ್ಕಾರಿ ಗೌರವ, ಸರ್ಕಾರಿ ಜಾಗ ಬೇಡ ಎಂದು ತಿಳಿಸಿದ್ದರು.

    https://www.youtube.com/watch?v=rjR2qIhqevM