Tag: girl baby

  • ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾ ಹೈದರ್‌ಗೆ ಹೆಣ್ಣು ಮಗು ಜನನ!

    ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾ ಹೈದರ್‌ಗೆ ಹೆಣ್ಣು ಮಗು ಜನನ!

    ನೋಯ್ಡಾ: ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾಗಿ, ಸ್ನೇಹ ಪ್ರೀತಿಗೆ ತಿರುಗಿ, ಪ್ರಿಯಕರನಿಗಾಗಿ ಗಂಡನನ್ನು ಬಿಟ್ಟು 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ (Seema Haider) ಹೆಣ್ಣು ಮಗುವಿಗೆ (Girl Baby) ಜನ್ಮ ನೀಡಿದ್ದಾರೆ.

    ಗ್ರೇಟರ್ ನೋಯ್ಡಾದಲ್ಲಿರುವ (Greater Noida) ಆಸ್ಪತ್ರೆಯೊಂದರಲ್ಲಿ ಸೀಮಾ ಹೈದರ್ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ದಂಪತಿಯ ವಕೀಲ ಎ.ಪಿ.ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ| ಪೊಲೀಸರ ಕಾರ್ಯಾಚರಣೆ – ಅಕ್ರಮ ಕಬ್ಬಿಣ ಸಾಗಣೆ ದಂಧೆಯಲ್ಲಿ ತೊಡಗಿದ್ದ 6 ಮಂದಿಯ ಬಂಧನ

    ಸೀಮಾ ಹೈದರ್ ಆನ್‌ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು. ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು. ಇದನ್ನೂ ಓದಿ: ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ರಾ ಪ್ರಭಾವಿ ಸಚಿವ?- ಸಿಡಿ ರಾಜಕಾರಣಕ್ಕೆ ಕಾಂಗ್ರೆಸ್ ನಾಯಕರ ಆಕ್ರೋಶ

    ಸೀಮಾಗೆ ಆಗಲೇ ಮದುವೆಯಾಗಿ ನಾಲ್ಕು ಮಕ್ಕಳಿದ್ದರು. ಪ್ರೀತಿಸಿದವನಿಗಾಗಿ ಸೀಮಾ ಗಂಡನನ್ನು ಬಿಟ್ಟು ಮಕ್ಕಳನ್ನು ಕರೆದುಕೊಂಡು ಭಾರತಕ್ಕೆ ಬಂದು ಸಚಿನ್ ಮೀನಾರನ್ನು ಮದುವೆಯಾಗಿದ್ದರು. ಕಳೆದ ವರ್ಷ ತಾನು ಗರ್ಭಿಣಿಯಾಗಿರುವ ಬಗ್ಗೆ ಸೀಮಾ ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದನ್ನೂ ಓದಿ: ತುಮಕೂರು| ಜಯಮಂಗಲಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

  • ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ-ಸ್ಕ್ಯಾನಿಂಗ್ ಸೆಂಟರ್ ಸೀಜ್

    ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ-ಸ್ಕ್ಯಾನಿಂಗ್ ಸೆಂಟರ್ ಸೀಜ್

    ಕೋಲಾರ: ಹೆಣ್ಣು ಮಗುವೆಂದು ಭಾವಿಸಿ, ಮಾತ್ರೆ ಸೇವಿಸಿ ಗಂಡು ಮಗುವಿನ ಗರ್ಭಪಾತವಾದ ಘಟನೆ ಕೋಲಾರ (Kolar) ಜಿಲ್ಲೆಯ ಮಾಲೂರು ನಗರದಲ್ಲಿ ನಡೆದಿದೆ.

    ಕೆಜಿಎಫ್ ತಾಲೂಕಿನ ಆಡಂಪಲ್ಲಿ ನಿವಾಸಿ ಮುರುಗೇಶ್ ಹಾಗೂ ಅನಿತಾ ದಂಪತಿಯ 3 ತಿಂಗಳ ಮಗು ಮೃತಪಟ್ಟಿದೆ.

    ನಡೆದಿದ್ದೇನು..?: ಕಳೆದ ಸೋಮವಾರ ದಂಪತಿ ಮಾಲೂರು ನಗರದ ಸಂಜನಾ ಖಾಸಗಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಗೆಂದು ತೆರಳಿದ್ದರು. ಈ ಹಿಂದಿನ 2 ಮಕ್ಕಳು ಹೆಣ್ಣಾಗಿದ್ದು, ಮೂರನೇಯದ್ದು ಗಂಡು ಮಗುವಾಗಲಿ ಎಂದು ದಂಪತಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಹೊಟ್ಟೆಯಲ್ಲಿರುವ ಹೆಣ್ಣು ಮಗುವನ್ನು ಗಂಡಾಗಿ ಪರಿವರ್ತನೆ ಮಾಡಿಸುವುದಾಗಿ ಹೇಳಿ ವೈದ್ಯರು ಮಾತ್ರೆಗಳನ್ನು ಕೊಟ್ಟಿದ್ದಾರೆ ಎಂದು ಇದೀಗ ಪೋಷಕರು ಆರೋಪ ಮಾಡುತ್ತಿದ್ದಾರೆ.

    ಹೆಣ್ಣು ಮಗುವೆಂದು ಸುಳ್ಳು ಹೇಳಿ 25 ಸಾವಿರ ಹಣ ಪಡೆದು ವಂಚಿಸಿದ್ದಾರೆಂದು ತಂದೆ ಮುರುಗೇಶ್ ಆರೋಪ ಮಾಡಿದ್ದಾರೆ. ಇತ್ತ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರು, ನಾವು ಗರ್ಭಪಾತಕ್ಕೆ ಮಾತ್ರೆ ಕೊಟ್ಟೆ ಇಲ್ಲ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ – ಕಾರಣ ನಿಗೂಢ!

    ಆಸ್ಪತ್ರೆಯಲ್ಲಿ ಭ್ರೂಣ ಲಿಂಗದ ಸ್ಕ್ಯಾನಿಂಗ್ ಮಾಡಿಸಿ ಸಾವಿರಾರು ಹಣ ಪೀಕುತ್ತಿರುವ ಆರೋಪ ಕೂಡ ಕೇಳಿಬಂದಿದೆ. ಹೀಗಾಗಿ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಾಲೂರು ತಾಲೂಕು ವೈದ್ಯಾದಿಕಾರಿಗೆ ಮುರುಗೇಶ್ ದೂರು ನೀಡಿದ್ದಾರೆ. ಈ ಬೆನ್ನಲ್ಲೇ ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಲಾಗಿದೆ. ಡಿಹೆಚ್‍ಓ ಜಗದೀಶ್ ನೇತೃತ್ವದಲ್ಲಿ ಮಾಲೂರು ಪಟ್ಟಣದ ಸಂಜನಾ ಆಸ್ಪತ್ರೆ ಸ್ಕ್ಯಾನಿಂಗ್ ಸೆಂಟರ್ ಸೀಜ್ ಮಾಡಲಾಗಿದೆ.

    ಘಟನೆ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಎರಡೂ ಹೆಣ್ಣುಮಗು ಅಂತ ಸಿಟ್ಟಿಗೆದ್ದ ಪತಿ- 2ನೇ ಮಗುವನ್ನು ಮಾರಲು ಮುಂದಾದ ಪಾಪಿ

    ಎರಡೂ ಹೆಣ್ಣುಮಗು ಅಂತ ಸಿಟ್ಟಿಗೆದ್ದ ಪತಿ- 2ನೇ ಮಗುವನ್ನು ಮಾರಲು ಮುಂದಾದ ಪಾಪಿ

    ಹಾವೇರಿ: ಅವರಿಬ್ಬರಿಗೂ ಮದುವೆಯಾಗಿ ಸುಮಾರು ಆರು ವರ್ಷ ಕಳೆದಿವೆ. ಅದರೆ ಆ ದಂಪತಿಗೆ ಮೊದಲ ಮಗು ಹೆಣ್ಣು, ಕಳೆದ ನಾಲ್ಕು ದಿನಗಳ ಹಿಂದೆ ಜನಿಸಿದ ಮಗು ಕೂಡಾ ಹೆಣ್ಣು. ಎರಡು ಮಕ್ಕಳು ಹೆಣ್ಣುಮಕ್ಕಳು ಹುಟ್ಟಿದ್ದಕ್ಕೆ, ಮಗುವನ್ನೇ ಕಿಡ್ನಾಪ್ ಮಾಡಿ ಮಾರಾಟಕ್ಕೆ ಮುಂದಾಗಿದ್ದ ಪತಿ ಮಾಹಾಶಯ. ಪತಿ ಮಹಾಶಯನಿಂದ ಮಗುವನ್ನ ಕಾಪಾಡಿದ ಪತ್ನಿ ಪರಿಚಯಸ್ಥರ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿಸಿದ್ದಾನೆ. ಬಾಣಂತಿಯ ಮಹಿಳೆ ಹಸಗೂಸು ಕರೆದುಕೊಂಡು ಎಸ್‍ಪಿ ಕಚೇರಿಗೆ ಆಗಮಿಸಿದಳು.

    ಮೊದಲನೇಯದು ಹೆಣ್ಣು ಮಗು, ಎರಡನೇಯದು ಹೆಣ್ಣು ಮಗು ಅಂತ ಸಿಟ್ಟಿಗೆದ್ದ ಪಾಪಿ ಪತಿರಾಯ ಹಸುಗೂಸನ್ನೇ ಮಾರಾಟ ಮಾಡಲು ಮುಂದಾಗಿದ್ದಾನೆ. ಕಳೆದ 4 ದಿನಗಳ ಹಿಂದೆ ಹಾವೇರಿ (Haveri) ಜಿಲ್ಲೆ ಬ್ಯಾಡಗಿ ತಾಲೂಕು ಆಸ್ಪತ್ರೆಯಿಂದ ಬಾಣಂತಿ ಗೀತಾ ಪತಿ ಸಿದ್ದಲಿಂಗಪ್ಪ ಹಸುಗೂಸನ್ನ ಕಿಡ್ನಾಪ್ ಮಾಡಿ ಮಾರಲು ಯತ್ನಿಸಿದ್ದಾನೆ. ವಿಷಯ ತಿಳಿದ ಪತ್ನಿ ಹಸುಗೂಸು ಸಮೇತ ಅಂಬುಲೆನ್ಸ್ ನಲ್ಲಿ ಎಸ್‍ಪಿ ಕಚೇರಿಗೆ ಆಗಮಿಸಿ ಪತಿ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ:ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ- 44 ಯುವತಿಯರ ರಕ್ಷಣೆ

    ಮಗು ರಕ್ಷಿಸಿದವರ ವಿರುದ್ಧವೇ ಕಿಡ್ನಾಪ್ ದೂರು: ಮತ್ತೊಂದೆಡೆ ಹಸುಗೂಸನ್ನು ಮಾರಲು ಮುಂದಾಗಿದ್ದ ಸಿದ್ದಲಿಂಗಪ್ಪನ ಕೈಯಿಂದ ಪರಿಚಯಸ್ಥ ಯುವಕರು ಮಗುವನ್ನು ಕಾಪಾಡಿದ್ದರು. ಅವರ ವಿರುದ್ಧವೇ ಸಿದ್ಧಲಿಂಗಪ್ಪ ಕಿಡ್ನಾಪ್ ಆರೋಪ ಮಾಡಿ ದೂರು ನೀಡಿದ್ದಾನೆ. ಪ್ರಕರಣ ಸಂಬಂಧ ಓರ್ವ ಜೈಲುಪಾಲಾಗಿದ್ದಾನೆ. ಹೀಗಾಗಿ ಸಹಾಯ ಮಾಡಲು ಬಂದವರದ್ದು ತಪ್ಪಿಲ್ಲಾ ಅವರಿಕೇಗೆ ಶಿಕ್ಷೆ. ಅವರನ್ನು ಬಿಟ್ಬಿಡಿ. ನನ್ನ ಪತಿರಾಯನೆ ತನಗೆ ಹುಟ್ಟಿದ ಮಕ್ಕಳನ್ನ ಕದ್ದು ಮಾರಲು ಯತ್ನಿಸಿದ್ದಾನೆ. ಅವರಿಗೆ ಗಂಡು ಹುಟ್ಟಿಲ್ಲಾ ಎಂದು ಬೇಸರವಿದೆ. ಬೇರೆ ಮಹಿಳೆಯರ ಜೊತೆ ಅನೈತಿಕ ಸಂಬಂಧವಿದೆ ಅಂತ ಪತ್ನಿ ಗೀತಾ ಆರೋಪಿಸಿದ್ದಾರೆ.

    ಸದ್ಯ ಸಿದ್ದಲಿಂಗಪ್ಪ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಒಟ್ಟಿನಲ್ಲಿ ಎರಡು ಹೆಣ್ಣುಮಕ್ಕಳು ಜನಿಸಿದ ಕಾರಣಕ್ಕಾಗಿ ಪಾಪಿ ತಂದೆ ಮಗಳನ್ನ ಮಾರಾಟ ಮಾಡಲು ಮುಂದಾಗಿದ್ದು ದುರಂತವೇ ಸರಿ.

  • ವರಮಹಾಲಕ್ಷ್ಮಿ ಹಬ್ಬದಂದೇ ಯುವರಾಜ್ ಸಿಂಗ್ ಮನೆಗೆ ‘ಲಕ್ಷ್ಮಿ’ಯ ಆಗಮನ

    ವರಮಹಾಲಕ್ಷ್ಮಿ ಹಬ್ಬದಂದೇ ಯುವರಾಜ್ ಸಿಂಗ್ ಮನೆಗೆ ‘ಲಕ್ಷ್ಮಿ’ಯ ಆಗಮನ

    ನವದೆಹಲಿ: ವರಮಹಾಲಕ್ಷ್ಮಿ ಹಬ್ಬದಂದೇ (Varamahalakshmi Festival) ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್, ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವರಾಜ್ ಸಿಂಗ್ (Yuvraj Singh) ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ.

    ಹೌದು, ಯುವಿ ಪತ್ನಿ ಹೇಜಲ್ ಕೀಚ್ (Hazel Keech) ಅವರು ಆಗಸ್ಟ್ 25ರಂದು (ಇಂದು) ಹೆಣ್ಣು ಮಗುವಿಗೆ (Girl Baby) ಜನ್ಮ ನೀಡಿದ್ದಾರೆ. ಈ ಮೂಲಕ ದಂಪತಿ ಹಬ್ಬದಂದೇ ಲಕ್ಷ್ಮಿಯನ್ನು ಸ್ವಾಗತಿಸಿದ್ದಾರೆ. ಈ ಸಂಬಂಧ ಸ್ವತಃ ಯುವಿ ಅವರೇ ತಮ್ಮ ಟ್ವಿಟ್ಟರ್ ಅಕೌಂಟ್‍ನಿಂದ ತಿಳಿಸಿದ್ದಾರೆ. ಪತ್ನಿ ಹಾಗೂ ಮಗುವಿನ ಜೊತೆಗಿನ ಫೋಟೋ ಶೇರ್ ಮಾಡಿ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

    ಫೋಟೋ ಜೊತೆಗೆ ನಿದ್ದೆಯಿಲ್ಲದ ರಾತ್ರಿಗಳು ಹೆಚ್ಚು ಸಂತೋಷಕರವಾಗಿದ್ದು, ನಮ್ಮ ಪುಟ್ಟ ರಾಜಕುಮಾರಿ ಔರಾಳನ್ನು ನಾವು ಸ್ವಾಗತಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಯುವಿ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

    2016ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಯುವರಾಜ್ ಸಿಂಗ್ ಹಾಗೂ ಹೇಜಲ್ ಕೀಚ್ ದಂಪತಿಗೆ ಈಗಾಗಲೇ ಒಂದೂವರೆ ವರ್ಷದ ಮಗನಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 6 ತಿಂಗಳ ಹೆಣ್ಣು ಮಗು ಕೊಳೆತ ಸ್ಥಿತಿಯಲ್ಲಿ ಪತ್ತೆ

    6 ತಿಂಗಳ ಹೆಣ್ಣು ಮಗು ಕೊಳೆತ ಸ್ಥಿತಿಯಲ್ಲಿ ಪತ್ತೆ

    ತಿರುವನಂತಪುರ: ಸುಮಾರು 6 ತಿಂಗಳ ಹೆಣ್ಣು ಮಗು (Girl Baby) ಭಾಗಶಃ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೇರಳದ (Kerala) ತಿರುವಲ್ಲಾ ಬಳಿ ನಡೆದಿದೆ.

    ತಿರುವಲ್ಲಾ (Thiruvalla) ಬಳಿಯ ರಸ್ತೆ ಪಕ್ಕದ ಜೌಗು ಪ್ರದೇಶದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆ ಶನಿವಾರ ಸಂಜೆ ಸಮೀಪದ ಅಂಗಡಿಯ ಕೆಲಸದವರೊಬ್ಬರು ಇದರ ಮೂಲವನ್ನು ಹುಡುಕಿಕೊಂಡು ಹೋದಾಗ ಕೊಳೆತ ಸ್ಥಿತಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಫ್ರೀ ಚಿಕನ್ ಕೊಟ್ಟಿಲ್ಲವೆಂದು ಯುವಕನಿಗೆ ಚಪ್ಪಲಿಯೇಟು!

    ಈ ಕುರಿತು ಸ್ಥಳೀಯರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತದೇಹವು ಕೈಕಾಲುಗಳನ್ನು ಕಳೆದುಕೊಂಡಿದೆ. ಗುರುತಿಸಲು ಸಾಧ್ಯವಾಗದಷ್ಟರ ಮಟ್ಟಿಗೆ ಮುಖ ಕೊಳೆತಿದೆ ಎಂದರು. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮಧ್ಯರಾತ್ರಿ ಸಮೀಪದ ವೈದ್ಯಕೀಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಇದನ್ನೂ ಓದಿ: ಉಡುಪಿ ಮಾದರಿ ಮತ್ತೊಂದು ಕೇಸ್‌; ಹಾಸ್ಟೆಲ್‌ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್‌ಗೆ ಕಳಿಸ್ತಿದ್ದ ವಿದ್ಯಾರ್ಥಿನಿ

    ಅಸ್ವಾಭಾವಿಕ ಮತ್ತು ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಘಟನೆಯ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪೊಲೀಸರು ಆ ಪ್ರದೇಶದಲ್ಲಿನ ಅಂಗಡಿಗಳು ಮತ್ತು ಮನೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೌಟುಂಬಿಕ ದ್ವೇಷ – ಚಾಕುವಿನಿಂದ ಇರಿದು ನರ್ಸ್ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 4 ಲಕ್ಷಕ್ಕೆ 21 ದಿನದ ಹೆಣ್ಣು ಶಿಶುವನ್ನು ಮಾರಿದ ತಾಯಿ!

    4 ಲಕ್ಷಕ್ಕೆ 21 ದಿನದ ಹೆಣ್ಣು ಶಿಶುವನ್ನು ಮಾರಿದ ತಾಯಿ!

    ಕೋಲ್ಕತ್ತಾ: ಇತ್ತೀಚಿನ ದಿನಗಳಲ್ಲಿ ಹಣಕ್ಕಾಗಿ ಜನ ಏನು ಮಾಡಲು ತಯಾರು ಇರುತ್ತಾರೆ. ಅಂತೆಯೇ ಇಲ್ಲೊಬ್ಬ ನಿರ್ದಯಿ ತಾಯಿ ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

    ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಈಕೆ ಇನ್ನೊಬ್ಬ ಮಹಿಳೆಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದಾಳೆ. ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ.

    ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರು ರೂಪಾಲಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕೆ ಸ್ಪಷ್ಟ ಕಾರಣ ಕೊಡುವಲ್ಲಿ ಎಡವಿದ್ದಾಳೆ. ಈ ಹಿನ್ನೆಲೆಯಲ್ಲಿ ಆಕೆಯ ಮೇಲೆ ಅನುಮಾನಗೊಂಡ ಪೊಲೀಸರು ರೂಪಾಲಿಯನ್ನು ಬಂಧಿಸಿದ್ದಾರೆ. ಬಳಿಕ ತನಿಕೆಗೆ ಒಳಪಡಿಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಈಕೆಯ ಜೊತೆ ರೂಪ ದಾಸ್ ಹಾಗೂ ಸ್ವಪ್ನಾ ಸರ್ದಾರ್ ಎಂಬ ಇನ್ನಿಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಟೊಮೆಟೋ ಕಳ್ಳತನದ ವೇಳೆ ರೈತನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳ

    ರೂಪಾಲಿ ಅವರ ಪಕ್ಕದ ಮನೆಯವರಾದ ಪ್ರತಿಮಾ ಭುವಿನ್ಯಾ ಅವರ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಆರೋಪಿಗಳ ಮೇಲೆ 317 (ಮಗುವನ್ನು ತ್ಯಜಿಸುವುದು), 370 (ಖರೀದಿ- ಮಾರಾಟ), 372 (ಅಪ್ರಾಪ್ತರ ಮಾರಾಟ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಇಬ್ಬರೂ ಆರೋಪಿಗಳ ತೀವ್ರ ವಿಚಾರಣೆಯ ನಂತರ, ಅವರು ಮಿಡ್ನಾಪುರದ ಕಲ್ಯಾಣಿ ಗುಹಾ ಹೆಸರನ್ನು ಹೇಳಿದ್ದಾರೆ. ಹೀಗಾಗಿ ಪರ್ನಶ್ರ್ರೀ ಪೊಲೀಸ್ ಠಾಣೆಯ ಅಧಿಕಾರಿಗಳು ಗುಹಾನನ್ನು ಕೂಡ ಬಂಧಿಸಿದ್ದಾರೆ. ಇತ್ತ ಶಿಶುವನ್ನು ರಕ್ಷಣೆ ಮಾಡಿದ್ದು, ಶಿಶುಪಾಲನಾ ಘಟಕಕ್ಕೆ ಹಸ್ತಾಂತರಿಸಲಾಗಿದೆ. ಕಲ್ಯಾಣಿ ಗುಹಾಗೆ ಮದುವೆಯಾಗಿ 15 ವರ್ಷಗಳಾಗಿದ್ದು, ಮಕ್ಕಳಿಲ್ಲ. ಹೀಗಾಗಿ ಕಲ್ಯಾಣಿ ಮಗುವನ್ನು 4 ಲಕ್ಷ ಕೊಟ್ಟು ತೆಗೆದುಕೊಂಡಿದ್ದಾಳೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡೆಲಿವರಿಯಾದ ತಕ್ಷಣ ಹೆಣ್ಣು ಶಿಶುವನ್ನು ಕೊಂದ 15ರ ಬಾಲಕಿ

    ಡೆಲಿವರಿಯಾದ ತಕ್ಷಣ ಹೆಣ್ಣು ಶಿಶುವನ್ನು ಕೊಂದ 15ರ ಬಾಲಕಿ

    ಮುಂಬೈ: 15 ವರ್ಷದ ಬಾಲಕಿಯೊಬ್ಬಳು ಯೂಟ್ಯೂಬ್ ವೀಡಿಯೋ (Youtube Video) ಗಳನ್ನು ನೋಡಿದ ಬಳಿಕ ಮನೆಯಲ್ಲಿಯೇ ಹೆಣ್ಣು ಮಗು (Girl Baby) ವಿಗೆ ಜನ್ಮ ನೀಡಿದ್ದಾಳೆ. ನಂತರ ಆಕೆ ನವಜಾತ ಶಿಶುವನ್ನು ಕೊಂದ ಘಟನೆ ಮಹಾರಾಷ್ಟ್ರ (Maharastra) ದ ನಾಗ್ಪುರ (Nagpur) ನಗರದಲ್ಲಿ ನಡೆದಿದೆ.

    ಬಾಲಕಿ ಅಂಬಾಜಾರಿ ಪ್ರದೇಶದ ನಿವಾಸಿ. ಈಕೆಗೆ ಸಾಮಾಜಿಕ ಜಾಲತಾಣ (Social Media) ದಲ್ಲಿ ವ್ಯಕ್ತಿಯೊಬ್ಬ ಪರಿಚಯವಾಗಿದ್ದಾನೆ. ಪರಿಚಯ ಸಲುಗೆಗೆ ತಿರುಗಿ ಆತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೇವಸ್ಥಾನ ಪ್ರವೇಶ ವಿಚಾರಕ್ಕೆ ಹಲ್ಲೆ- ಕಲ್ಲು ತೂರಾಟ, ಬೈಕ್ ಜಖಂ, 30 ಮಂದಿ ವಿರುದ್ಧ ದೂರು

    ವ್ಯಕ್ತಿಯ ಕಾಮತೃಷೆಗೆ ಬಾಲಕಿ ಗರ್ಭಿಣಿಯಾಗಿದ್ದಾಳೆ. ಆದರೆ ತಾಯಿ ಬಳಿ ಮಾತ್ರ ತನಗೆ ಆರೋಗ್ಯ ಸಮಸ್ಯೆಗಳಿವೆ ಎಂದು ಹೇಳುತ್ತಾ ತಾನು ಗರ್ಭಿಣಿ (Girl Pregnant) ಎಂಬ ವಿಚಾರವನ್ನು ಮುಚ್ಚಿಟ್ಟಳು. ಅಲ್ಲದೆ ಗೌಪ್ಯತೆ ಕಾಪಾಡಿಕೊಳ್ಳಲು ಆಕೆ ಯೂಟ್ಯೂಬ್ ಮೊರೆ ಹೋಗಿದ್ದಾಳೆ. ಮಾರ್ಚ್ 2 ರಂದು ಅವಳು ತನ್ನ ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಹುಟ್ಟಿದ ತಕ್ಷಣವೇ ಆಕೆ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿದಳು. ನಂತರ ಶವವನ್ನು ತನ್ನ ಮನೆಯ ಪೆಟ್ಟಿಗೆಯಲ್ಲಿ ಬಚ್ಚಿಟ್ಟಿದ್ದಾಳೆ.

    ಇತ್ತ ಕೆಲಸದ ನಿಮಿತ್ತ ಹೊರಗಡೆ ತೆರಳಿದ್ದ ಮನೆಗೆ ಮರಳಿದ ಬಳಿಕ ಮಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನವಜಾತ ಶಿಶುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

    ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಕೊಲೆ ಆರೋಪ ಹೊರಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

     

  • ಸರ್ಕಾರಿ ಹುದ್ದೆ ಉಳಿಸಿಕೊಳ್ಳಲು ಹೆಣ್ಣು ಮಗುವನ್ನು ಕಾಲುವೆಗೆ ಎಸೆದ ದಂಪತಿ!

    ಸರ್ಕಾರಿ ಹುದ್ದೆ ಉಳಿಸಿಕೊಳ್ಳಲು ಹೆಣ್ಣು ಮಗುವನ್ನು ಕಾಲುವೆಗೆ ಎಸೆದ ದಂಪತಿ!

    ಜೈಪುರ: ಸರ್ಕಾರಿ ಕೆಲಸವನ್ನು ಉಳಿಸಿಕೊಳ್ಳಲು ತಮ್ಮ ಪುಟ್ಟ ಕಂದಮ್ಮನನ್ನು ದಂಪತಿ ಕಾಲುವೆ‌ (Canal) ಗೆ ಎಸೆದ ಪ್ರಕರಣವೊಂದು ನಡೆದಿರುವ ಬಗ್ಗೆ ರಾಜಸ್ಥಾನ (Rajasthan) ದಲ್ಲಿ ಬೆಳಕಿಗೆ ಬಂದಿದೆ.

    ಹೌದು. 5 ತಿಂಗಳ ಹೆಣ್ಣು ಮಗು (Girl Baby) ವನ್ನು ಕಾಲುವೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

    ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಕಾಲುವೆಗೆ ಎಸೆದ ಪಾಪಿ ತಂದೆಯನ್ನು ಜವಾಹರ್ ಲಾಲ್ ಎಂದು ಗುರುತಿಸಲಾಗಿದೆ. ಈತ ಚಂದಾಸರ್ ಗ್ರಾಮದಲ್ಲಿ ಶಾಲಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದನು. ಇದನ್ನೂ ಓದಿ: ಬೆಂಗ್ಳೂರಲ್ಲಿ `ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಶೈಲಿಯಲ್ಲಿ ಮರ್ಡರ್ – ಫ್ಲೈಟ್‌ ಟಿಕೆಟ್ ಬುಕ್ ಮಾಡಿ ಸಿಕ್ಕಿಬಿದ್ದ ಆರೋಪಿ!

    ಕಳೆದ ವರ್ಷ ಡಿಸೆಂಬರ್ ನಲ್ಲಿ ತಾನು ನೀಡಿದ ದಾಖಲೆಯಲ್ಲಿ ಝನ್ವರ್‍ಲಾಲ್ ತಾನು ಇಬ್ಬರು ಮಕ್ಕಳನ್ನು ಹೊಂದಿರುವುದಾಗಿ ತಿಳಿಸಿದ್ದನು. ಆದರೆ ಇತ್ತೀಚೆಗೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ, ಆ ವ್ಯಕ್ತಿ ಕೆಲಸ ಕಳೆದುಕೊಳ್ಳುವ ಆತಂಕ ಆತನಿಗೆ ಎದುರಾಗಿತ್ತು.

    ಬಿಕಾನೇರ್ ನ ಛತ್ತರ್ ಗಢದಲ್ಲಿ ಪುರುಷ ಮತ್ತು ಮಹಿಳೆಯೊಬ್ಬರು ಹೆಣ್ಣು ಮಗುವನ್ನು ಕಾಲುವೆಗೆ ಎಸೆದಿದ್ದಾರೆ ಎಂಬ ಮಾಹಿತಿಯನ್ನು ನಾವು ಪಡೆದುಕೊಂಡಿದ್ದೇವೆ. ನಂತರ ಮಗುವಿನ ದೇಹವನ್ನು ಪೊಲೀಸರು ವಶಪಡಿಸಿಕೊಂಡರು. ಇದೀಗ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಈ ಇಬ್ಬರೂ ಮೃತ ಹೆಣ್ಣು ಮಗುವಿನ ಪೋಷಕರು ಎಂದು ತಿಳಿದುಬಂದಿದೆ ಎಂದು ಸರ್ಕಲ್ ಆಫೀಸರ್ ವಿನೋದ್ ಕುಮಾರ್ ತಿಳಿಸಿದ್ದಾರೆ.

    ಬಂಧಿತರನ್ನು ತನಿಖೆ ನಡೆಸಿದಾಗ, ಸರ್ಕಾರಿ ಕೆಲಸವನ್ನು ಉಳಿಸಿಕೊಳ್ಳುವ ಸಲುವಾಗಿ ಆರೋಪಿಯು ತನ್ನ ಮಗಳನ್ನು ಕಾಲುವೆಗೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 1 ಲಕ್ಷ ಖರ್ಚು ಮಾಡಿ ಹೆಣ್ಣುಮಗುವನ್ನು ಚಾಪರ್‌ನಲ್ಲಿ ಮನೆಗೆ ಕರೆತಂದ್ರು!

    1 ಲಕ್ಷ ಖರ್ಚು ಮಾಡಿ ಹೆಣ್ಣುಮಗುವನ್ನು ಚಾಪರ್‌ನಲ್ಲಿ ಮನೆಗೆ ಕರೆತಂದ್ರು!

    ಮುಂಬೈ: ಹುಟ್ಟಿದ ಮಗು ಹೆಣ್ಣು ಅಂದ್ರೆ ಮೂಗು ಮುರಿಯುವವರೇ ಹೆಚ್ಚು. ಆದರೆ ಇಲ್ಲೊಂದು ದಂಪತಿ ತಮಗೆ ಹೆಣ್ಣು ಮಗು ಹುಟ್ಟಿದ ಸಂತಸದಲ್ಲಿ ಆ ಆಗುವನ್ನು ವಿಶೇಷವಾಗಿ ತಮ್ಮ ಕುಟುಂಬಕ್ಕೆ ಬರಮಾಡಿಕೊಂಡ ಘಟನೆ ಪುಣೆಯ ಶೆಲ್ಗಾಂವ್‍ನಲ್ಲಿ ನಡೆದಿದೆ.

    ಹಲವು ವರ್ಷಗಳ ಬಳಿಕ ವಿಶಾಲ್ ಝರೇಕರ್ ಕುಟುಂಬದಲ್ಲಿ ಹೆಣ್ಣು ಮಗು ಜನಿಸಿದೆ. ಹುಟ್ಟಿದ ಮಗು ಹೆಣ್ಣು ಅಂತ ಗೊತ್ತಾದ ಕೂಡಲೇ ವಿಶಾಲ್ ಕುಟುಂಬಸ್ಥರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಇದೇ ಖುಷಿಯಲ್ಲಿ ವಿಶಾಲ್ ದಂಪತಿ ತಮ್ಮ ಮಗಳನ್ನು ವಿಶೇಷವಾಗಿ ಚಾಪರ್ ಮೂಲಕ ಮನೆಗೆ ಕರೆದುಕೊಂಡು ಬರಲು ತೀರ್ಮಾನಿಸಿದ್ದಾರೆ.

    ನಮ್ಮ ಇಡೀ ಕುಟುಂಬದಲ್ಲಿ ಹೆಣ್ಣು ಮಗುವಿರಲಿಲ್ಲ. ಆದರೆ ಇದೀಗ ನಮಗೆ ಹೆಣ್ಣು ಮಗು ಜನಿಸಿದೆ. ಹೀಗಾಗಿ ನಮಗೆ ಹುಟ್ಟಿದ ಮಗುವನ್ನು ವಿಶೇಷವಾಗಿ ಮನೆಗೆ ಬರಮಾಡಿಕೊಳ್ಳಬೇಕೆಂದು ನಿರ್ಧಾರ ಮಾಡಿದೆವು. ಅಂತೆಯೇ 1 ಲಕ್ಷ ನೀಡಿ ಚಾಪರ್ ನಲ್ಲಿ ಕರೆದುಕೊಂಡು ಬಂದೆವು ಎಂದು ಮಗುವಿನ ತಂದೆ ವಿಶಾಲ್ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಮುಸ್ಲಿಂ ಏರಿಯಾಗಳಿಗೆ ದಿನದ 24 ಗಂಟೆ ನಿರಂತರ ವಿದ್ಯುತ್

    ವಿಶಾಲ್ ತಮ್ಮ ಮಗಳನ್ನು ಚಾಪರ್‍ನಲ್ಲಿ ಕರೆದುಕೊಂಡು ಬಂದು ಇಳಿಯುತ್ತಿರುವ ದೃಶ್ಯವನ್ನು ಸೆರೆ ಹಿಡಿಯಲಾಗಿದೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಕೆಲವರು ತಂದೆಯ ಕಾರ್ಯಕ್ಕೆ ಹೆಮ್ಮೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಅಷ್ಟು ಚಿಕ್ಕ ಮಗುವನ್ನು ಹೆಲಿಕಾಪ್ಟರ್ ನಲ್ಲಿ ಯಾಕೆ ಕರೆದುಕೊಂಡು ಬಂದ್ರಿ..?, ಜೋರಾದ ಶಬ್ಧದಿಂದ ಮಗುವಿಗೆ ತೊಂದರೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಹೀಗೆ ಹಲವಾರು ಪರ- ವಿರೋಧ ಕಾಮೆಂಟ್ ಗಳು ಬರುತ್ತಿವೆ.

  • ಪತ್ನಿ ಮೇಲಿನ ಸಿಟ್ಟಿನಿಂದ 8 ತಿಂಗಳ ಮಗಳನ್ನು ನೆಲಕ್ಕೆ ಹೊಡೆದು ಕೊಂದ!

    ಪತ್ನಿ ಮೇಲಿನ ಸಿಟ್ಟಿನಿಂದ 8 ತಿಂಗಳ ಮಗಳನ್ನು ನೆಲಕ್ಕೆ ಹೊಡೆದು ಕೊಂದ!

    ಲಕ್ನೋ: ಪತ್ನಿ ಮೇಲಿನ ಸಿಟ್ಟಿನಿಂದ ವ್ಯಕ್ತಿಯೊಬ್ಬ ತನ್ನ 8 ತಿಂಗಳ ಮಗಳನ್ನು ಸಾಯುವವರೆಗೆ ನೆಲಕ್ಕೆ ಹೊಡೆದು ಕೊಂದ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.

    ಈ ಘಟನೆ ಬಿಜ್ನೋರ್ ಜಿಲ್ಲೆಯ ರಹ್ತಾಪುರ್ ಖುರ್ಡ್ ಗ್ರಾಮದಲ್ಲಿ ನಡೆದಿದೆ. ಕೃತ್ಯ ನಡೆದ ಕೂಡಲೇ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

    ಕಳೆದ ಒಂದೂವರೆ ವರ್ಷದ ಹಿಂದೆ ಆರೋಪಿ ಮೊಹಮ್ಮದ್ ನಝೀಂ ಮೆಹ್ತಾಬ್ ಜಹಾನ್ ನನ್ನು ಮದುವೆಯಾಗಿದ್ದನು. ಈ ದಂಪತಿಗೆ 8 ತಿಂಗಳ ಹೆಣ್ಣು ಮಗುವೊಂದಿತ್ತು. ಕ್ಲುಲ್ಲಕ ಕಾರಣಕ್ಕಾಗಿ ದಂಪತಿ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿತ್ತು.

    ಹೀಗೆ ಇಬ್ಬರ ಮಧ್ಯೆ ಆಗಾಗ ವಾಗ್ವಾದ ನಡೆಯುತ್ತಿತ್ತು. ಹೀಗೆ ಜಗಳವಾಗಿ ಕೆಲ ದಿನಗಳ ಹಿಂದೆಯಷ್ಟೇ ಪತ್ನಿ ತವರು ಮನೆ ಸೇರಿದ್ದಳು. ಇತ್ತ ಒಂದು ದಿನ ಕಂಠಪೂರ್ತಿ ಕುಡಿದು ಬಂದ ನಝೀಂ, ಮಗಳನ್ನು ಮನೆಗೆ ವಾಪ್ಸ ಕಳುಹಿಸುವಂತೆ ಪತ್ನಿಯ ಪೋಷಕರನ್ನು ಪೀಡಿಸಿದ್ದಾನೆ. ಈ ವೇಳೆ ಮೆಹ್ತಾಬ್ ಮತ್ತು ನಝೀಂ ಮತ್ತೆ ಜಗಳವಾಗಿದೆ. ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಅಂತ್ಯಸಂಸ್ಕಾರವನ್ನೂ ಮುಗಿಸಿದ್ರು!

    ಜಗಳ ತಾರಕಕ್ಕೇರುತ್ತಿದ್ದಂತೆಯೇ ನಝೀಂ ತನ್ನ 8 ತಿಂಗಳ ಮಗಳನ್ನು ಪತ್ನಿ ಕೈಯಿಂದ ಎಳೆದುಕೊಂಡಿದ್ದಾನೆ. ಬಳಿಕ ನೆಲಕ್ಕೆ ಹಲವು ಬಾರಿ ಹೊಡೆದಿದ್ದಾನೆ. ಪರಿಣಾಮ ಪುಟ್ಟ ಕಂದಮ್ಮ ಸಾವನ್ನಪ್ಪಿದೆ. ಇತ್ತ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಮಗು ಸಾವನ್ನಪ್ಪಿದ್ದ ವಿಚಾರ ತಿಳೀಯುತ್ತಿದ್ದಂತೆಯೇ ಮೆಹ್ತಾಬ್ ಕೂಡ ಠಾಣೆಗೆ ತೆರಳಿ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ನಝೀಂ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.