Tag: Girl rape

  • ಬಾಳೆಹಣ್ಣಿನ ಆಮಿಷವೊಡ್ಡಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

    ಬಾಳೆಹಣ್ಣಿನ ಆಮಿಷವೊಡ್ಡಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

    ಅಮರಾವತಿ: ಮೂರು ವರ್ಷದ ಬಾಲಕಿಗೆ ಬಾಳೆಹಣ್ಣು ಕೊಡಿಸುವ ಆಮಿಷವೊಡ್ಡಿ ಆಕೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ನಡೆದಿದೆ.

    ಸಂತ್ರಸ್ತೆಯ ಪೋಷಕರು ಆಕೆಯನ್ನು ಹಳ್ಳಿಯೊಂದರ ಸಂಬಂಧಿಕರ ಮದುವೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ದುರುಳನೊಬ್ಬ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಉಗ್ರರ ದಾಳಿಯಿಂದ 20,000 ಭಾರತೀಯರು ಸಾವು: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಭಾರತ ಕಿಡಿ

    ಬಾಲಕಿ ಹೊರಗೆ ಆಟವಾಡುತ್ತಿದ್ದಾಗ, ಆರೋಪಿ ರಹಮತ್‌-ಉಲ್ಲಾ ಬಾಳೆಹಣ್ಣಿನ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

    ಸಂತ್ರಸ್ತೆಯ ಪೋಷಕರು ಆಕೆಗಾಗಿ ಹುಡುಕಾಡಿದರೂ ಪತ್ತೆಯಾಗಲಿಲ್ಲ. ನಂತರ, ಆಕೆಯ ಶವ ಪೊದೆಯಲ್ಲಿ ಕಂಡುಬಂದಿದೆ. ನಂತರ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‌| ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ನಕ್ಸಲ್‌ ನಾಯಕರ ಎನ್‌ಕೌಂಟರ್‌

  • ಹುಕ್ಕಾ ಬಾರ್‌ನಲ್ಲಿ ವೈದ್ಯನ ಮಗಳ ಮೇಲೆ ಅತ್ಯಾಚಾರ

    ಹುಕ್ಕಾ ಬಾರ್‌ನಲ್ಲಿ ವೈದ್ಯನ ಮಗಳ ಮೇಲೆ ಅತ್ಯಾಚಾರ

    ಲಕ್ನೋ: ವೈದ್ಯ ದಂಪತಿ ಮಗಳನ್ನು ಹುಕ್ಕಾ ಬಾರ್‌ಗೆ ಕರೆಸಿಕೊಂಡು, ಪಾನಿಯಾದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ಕುಡಿಸಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ (UP Rape Case) ನಡೆದಿದೆ.

    ಉತ್ತರ ಪ್ರದೇಶದ (Uttar Pradesh) ವೈದ್ಯ ದಂಪತಿಯ 16 ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಲಾಗಿದೆ. ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಈತ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಿತನಾಗಿದ್ದ. ಆಕೆಯನ್ನು ಕೆಫೆವೊಂದಕ್ಕೆ ಕರೆಸಿಕೊಂಡು ಕೃತ್ಯ ಎಸಗಿದ್ದಾನೆ. ಇದನ್ನೂ ಓದಿ: ಐವರು ಮಕ್ಕಳಿದ್ದರೂ, ಆಸ್ತಿಯೆಲ್ಲಾ UP ಸರ್ಕಾರದ ಹೆಸರಿಗೆ ಬರೆದ ವೃದ್ಧ

    ಕಾನ್ಪುರದ ವಿನಯ್ ಠಾಕೂರ್ ಮತ್ತು ಇತರ ಏಳು ಮಂದಿ ವಿರುದ್ಧ ಸಂತ್ರಸ್ತೆ ತಂದೆ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ವಿನಯ್ ಠಾಕೂರ್, ಮಾರ್ಚ್ 4 ರಂದು ಕರ್ರಾಹಿಯ ಎಂಜಿ ಕೆಫೆಗೆ ಹುಡುಗಿಯನ್ನು ಕರೆಸಿಕೊಂಡಿದ್ದ. ನಂತರ ವಿನಯ್ ಕೆಫೆಯಲ್ಲಿ ಬಾಲಕಿಗೆ ಪಾನಿಯಾದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ಕೊಟ್ಟಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದ. ಅಲ್ಲಿ ಅವನ ಏಳು ಸ್ನೇಹಿತರು ಸೇರಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದರು ಎಂದು ಸಂತ್ರಸ್ತೆ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.

    ಆರೋಪಿ ಅತ್ಯಾಚಾರ ಎಸಗಲು ಯತ್ನಿಸಿದಾಗ ಬಾಲಕಿ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆರೋಪಿ ಆಕೆಯ ದೇಹದ ಭಾಗಗಳನ್ನು ಕಚ್ಚಿದ್ದಾನೆ. ಬಾಲಕಿ ಮನೆಗೆ ಬಂದು ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದ್ದಾಳೆ. ಆಕೆಯ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಪ್ ನಾಯಕ ಮನೀಶ್ ಸಿಸೋಡಿಯಾ ಜೈಲುಪಾಲು

    ಆರೋಪಿ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ. ಸಲುಗೆ ಬೆಳೆಸಿಕೊಂಡು ಅಶ್ಲೀಲ ವೀಡಿಯೋ ಮಾಡಿದ್ದ. ಕೆಲವು ದಿನಗಳಿಂದ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ವೀಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಕೂಡ ಹಾಕುತ್ತಿದ್ದ ಎಂದು ಸಂತ್ರಸ್ತೆ ತನ್ನ ತಂದೆಗೆ ಹೇಳಿಕೊಂಡಿದ್ದಾಳೆ.

  • 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ

    ಭೋಪಾಲ್: ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಬಟ್ಟೆಯಿಂದ ಸುತ್ತಿರುವ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಮನೆಯ ಮೇಲ್ಛಾವಣಿ ಮೇಲೆ ಪತ್ತೆಯಾಗಿದೆ ಎಂದು ಸೊಹಾಗ್‍ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ರಜಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತ್ನಿ

    ಭಾನುವಾರ ರಾತ್ರಿ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿರುವ ವಿಚಾರ ಬೆಳಕಿಗೆ ಬಂದಿದೆ. ಬಾಲಕಿಯ ನೆರೆಮನೆಯಲ್ಲಿ ವಾಸಿಸುತ್ತಿರುವ ಸಂಶಯಾಸ್ಪದ ವ್ಯಕ್ತಿಯನ್ನು ಪೊಲೀಸರು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

    POLICE JEEP

    ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದು, ಆಕೆಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕಿ ಶವ ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಪತ್ತೆಯಾದ ಹಿನ್ನೆಲೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

    ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆ ಸೆಕ್ಷನ್‍, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೋ) ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.