Tag: Go First Flight

  • ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದ ʼGo First’ಗೆ 10 ಲಕ್ಷ ದಂಡ

    ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದ ʼGo First’ಗೆ 10 ಲಕ್ಷ ದಂಡ

    ನವದೆಹಲಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದಕ್ಕಾಗಿ ‘ಗೋ ಫಸ್ಟ್‌’ (Go First Flight) ವಿಮಾನಯಾನ ಸಂಸ್ಥೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) 10 ಲಕ್ಷ ರೂ. ದಂಡವನ್ನು ವಿಧಿಸಿದೆ.

    ಈ ಅಚಾತುರ್ಯ ಸಂಭವಿಸಿದ ಬೆನ್ನಲ್ಲೇ ಗೋ ಫಸ್ಟ್‌ಗೆ ಡಿಜಿಸಿಎ ನೋಟಿಸ್‌ ನೀಡಿತ್ತು. “ಸಂವಹನ, ಸಮನ್ವಯದ ಕೊರತೆ ಮತ್ತು ದೃಢಪಡಿಸಿಕೊಳ್ಳುವಲ್ಲಿ ಆಗಿರುವ ತಪ್ಪುಗಳಿಂದ ಈ ಲೋಪ ಸಂಭವಿಸಿದೆ. ಈ ನಿರ್ಲಕ್ಷ್ಯಕ್ಕೆ ತಮ್ಮ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು” ಎಂದು ‘ಗೋ ಫಸ್ಟ್‌’ನ ಅಕೌಂಟೆಬಲ್‌ ಮ್ಯಾನೇಜರ್‌/ ಚೀಫ್‌ ಆಪರೇಷನ್‌ ಆಫೀಸರ್‌ಗೆ ಡಿಜಿಸಿಎ ನೋಟಿಸ್‌ ನೀಡಿತ್ತು. ನೋಟಿಸ್‌ಗೆ ಉತ್ತರಿಸಲು ಎರಡು ವಾರಗಳ ಕಾಲಾವಕಾಶವನ್ನು ನೀಡಿತ್ತು. ಇದನ್ನೂ ಓದಿ: 50 ಪ್ರಯಾಣಿಕರನ್ನು ಬಿಟ್ಟುಹೋದ ವಿಮಾನ – ಗೋ ಫಸ್ಟ್‌ಗೆ DGCA ನೋಟಿಸ್

    ಏನಿದು ಘಟನೆ?
    ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಜ.9 ರಂದು ಬೆಳಗ್ಗೆ ಚಲಿಸಿದ ‘ಗೋ ಫಸ್ಟ್‌’ ಸಂಸ್ಥೆಯ ವಿಮಾನವು (ಜಿ8–116), ವಿಮಾನ ನಿಲ್ದಾಣದಲ್ಲಿ ಪ್ಯಾಸೆಂಜರ್‌ ಕೋಚ್‌ನಲ್ಲಿ (ಬಸ್‌) 55 ಪ್ರಯಾಣಿಕರನ್ನು ಬಿಟ್ಟು ಹೋಗಿತ್ತು.

    ಸಿಬ್ಬಂದಿಯಿಂದ ಆದ ಆಚಾತುರ್ಯಕ್ಕಾಗಿ ‘ಗೋ ಫಸ್ಟ್‌’ ವಿಮಾನಯಾನ ಸಂಸ್ಥೆಯು ಪ್ರಯಾಣಿಕರಲ್ಲಿ ಕ್ಷಮೆ ಕೋರಿತ್ತು. ಪ್ರಯಾಣಿಕರಿಗೆ ದೆಹಲಿ ಮತ್ತು ಇತರ ಸ್ಥಳಗಳಿಗೆ ಪರ್ಯಾಯ ವಿಮಾನಗಳಲ್ಲಿ ವ್ಯವಸ್ಥೆ ಕಲ್ಪಿಸಲಾಯಿತು ಎಂದೂ ಅದು ಹೇಳಿಕೊಂಡಿತ್ತು. ಇದನ್ನೂ ಓದಿ: ಏರ್ ಇಂಡಿಯಾದಲ್ಲಿ ಮೂತ್ರವಿಸರ್ಜನೆ ಪ್ರಕರಣ ಬಳಿಕ ಗೋ ಫಸ್ಟ್‌ನಲ್ಲಿ ಗಗನಸಖಿಗೆ ವಿದೇಶಿಗನಿಂದ ಕಿರುಕುಳ

    ಸಮಸ್ಯೆಗೆ ಒಳಗಾದ ಪ್ರಯಾಣಿಕರಿಗೆ ಮುಂದಿನ 12 ತಿಂಗಳಲ್ಲಿ ದೇಶದ ಯಾವುದೇ ಸ್ಥಳಕ್ಕೆ ಪ್ರಯಾಣಿಸಲು ಒಂದು ಉಚಿತ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಗೋ ಫಸ್ಟ್‌ ತಿಳಿಸಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತುರ್ತು ಭೂಸ್ಪರ್ಶಿಸಿದ 2 ಗೋಫಸ್ಟ್ ವಿಮಾನ

    ತುರ್ತು ಭೂಸ್ಪರ್ಶಿಸಿದ 2 ಗೋಫಸ್ಟ್ ವಿಮಾನ

    ನವದೆಹಲಿ: ಗೋಫಸ್ಟ್‌ನ 2 ವಿಮಾನಗಳು ದೇಶದ ವಿವಿಧ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

    ಮುಂಬೈ- ಲೇಹ್‍ಗೆ ಹೋಗುತ್ತಿದ್ದ ಗೋ ಫಸ್ಟ್ ವಿಮಾನದಲ್ಲಿ ಇಂಜಿನ್ ದೋಷದಿಂದಾಗಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶಿಸಿದೆ. ಮತ್ತೊಂದು ಘಟನೆಯಲ್ಲಿ ಶ್ರೀನಗರದಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲೂ ಇಂಜಿನ್‍ನಲ್ಲಿ ತೊಂದರೆ ಉಂಟಾದ ಕಾರಣ ಶ್ರೀನಗರಲ್ಲೇ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಇದನ್ನೂ ಓದಿ: ಜನಾಕ್ರೋಶಕ್ಕೆ ಮಣಿದ ಕೇಂದ್ರ – ಅಕ್ಕಿ, ಮೊಸರು ಸೇರಿದಂತೆ 14 ವಸ್ತುಗಳ ಮೇಲೆ ಜಿಎಸ್‍ಟಿ ವಿನಾಯಿತಿ

    ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ)ವು ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ತುರ್ತು ಭೂಸ್ಪರ್ಶ ಮಾಡಿದ ಈ ಎರಡೂ ವಿಮಾನಗಳು ಡಿಜಿಸಿಎಯಿಂದ ಅನುಮತಿ ಪಡೆದಾಗ ಮಾತ್ರ ಹಾರಾಟ ನಡೆಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ!

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಿಂದ ಹೊರಟ ಗೋ ಫಸ್ಟ್ ವಿಮಾನ ತುರ್ತು ಭೂಸ್ಪರ್ಶ

    ಬೆಂಗಳೂರಿನಿಂದ ಹೊರಟ ಗೋ ಫಸ್ಟ್ ವಿಮಾನ ತುರ್ತು ಭೂಸ್ಪರ್ಶ

    ನಾಗ್ಪುರ : ಬೆಂಗಳೂರಿನಿಂದ ಇಂದು ಬೆಳಗ್ಗೆ ಪಾಟ್ನಾಕ್ಕೆ ಹೊರಟಿದ್ದ ಗೋ ಫಸ್ಟ್ ವಿಮಾನ ನಾಗ್ಪುರ್‌ನಲ್ಲಿ ತುರ್ತು ಲ್ಯಾಡಿಂಗ್ ಮಾಡಿದೆ ಎಂದು ನಾಗ್ಪುರ್‌ ವಿಮಾನ ನಿಲ್ದಾಣ ಅಧಿಕಾರಿ ಅಭೀದ್ ರುಹಿ ತಿಳಿಸಿದ್ದಾರೆ. ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    139 ಮಂದಿ ಪ್ರಯಾಣಿಕರೊಂದಿಗೆ ಹಾರಾಟ ಆರಂಭಿಸಿದ್ದ ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಂಡು ಬಂದಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಪೈಲೆಟ್ ನಾಗ್ಪುರ್‌ನಲ್ಲಿ ತುರ್ತು ಲ್ಯಾಡಿಂಗ್ ಮಾಡಿದ್ದಾರೆ. ಇದನ್ನೂ ಓದಿ: ಹೊಸ ರೂಪಾಂತರಿ ವೈರಸ್ ಪೀಡಿತ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ – ಮೋದಿಗೆ ಕೇಜ್ರಿವಾಲ್ ಮನವಿ

    ಈ ಬಗ್ಗೆ ಗೋ ಫಸ್ಟ್ ಕೂಡಾ ಪ್ರತಿಕ್ರಿಯೆ ನೀಡಿದ್ದು, ಇಂಜಿನ್‍ನಲ್ಲಿ ದೋಷ ಕಂಡು ಬಂದಿರುವ ಬಗ್ಗೆ ಕಾಕ್‍ಪಿಟ್‍ನಲ್ಲಿ ಎಚ್ಚರಿಕೆ ಗಂಟೆ ಕೇಳಿ ಬಂದಿತ್ತು. ಈ ಹಿನ್ನಲೆ ಪೈಲೆಟ್‌ ನಾಗ್ಪುರ್‌ನಲ್ಲಿ ತುರ್ತು ಲ್ಯಾಂಡ್ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಓಮಿಕ್ರಾನ್ ಸೋಂಕಿನ ಭೀತಿ – ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟ ಪುನಾರಂಭ ಅನುಮಾನ

    ಎಲ್ಲ ಪ್ರಯಾಣಿಕರಿಗೂ ನಾಗ್ಪುರ ವಿಮಾನ ನಿಲ್ದಾಣದಲ್ಲೇ ಉಪಾಹಾರ ವ್ಯವಸ್ಥೆ ಮಾಡಿದ್ದು, ಸಂಜೆ 4:45ಕ್ಕೆ ಪಾಟ್ನಾಗೆ ತೆರಳುವ ಪ್ರಯಾಣಿಕರಿಗೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಇಂಜಿನಿಯರಿಂಗ್ ತಂಡದಿಂದ ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಎಂದು ಗೋ ಫಸ್ಟ್ ವಕ್ತಾರರು ತಿಳಿಸಿದ್ದಾರೆ.