Tag: Goa Police

  • ಪತಿಗೆ ಮಗು ತೋರಿಸಲು ಇಷ್ಟವಿಲ್ಲದಿದ್ದರಿಂದ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ: ತಪ್ಪೊಪ್ಪಿಕೊಂಡ ಸೇಠ್

    ಪತಿಗೆ ಮಗು ತೋರಿಸಲು ಇಷ್ಟವಿಲ್ಲದಿದ್ದರಿಂದ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ: ತಪ್ಪೊಪ್ಪಿಕೊಂಡ ಸೇಠ್

    ಪಣಜಿ: 4 ವರ್ಷದ ಪುತ್ರನನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಬಿದ್ದ ಸಿಇಓ ಸುಚನಾ ಸೇಠ್‌ (Suchana Seth) ಇದೀಗ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ.

    ಗೋವಾ ಪೊಲೀಸರ ವಿಚಾರಣೆಯ ವೇಳೆ ಮಗುವನ್ನು (4 Year Son Murder Case) ತಾನೇ ಕೊಂದಿರುವುದಾಗಿ ಆಕೆ ಹೇಳಿದ್ದಾಳೆ. ಅಲ್ಲದೆ ಕಾರಣವನ್ನು ಕೂಡ ಸುಚನಾ ವಿವರಿಸಿದ್ದಾಳೆ.

    ಸೇಠ್‌ ಹೇಳಿದ್ದೇನು..?: ವಿಚ್ಛೇದನ (Divorce) ಕೋರ್ಟ್ ನಲ್ಲಿತ್ತು. ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನ ವಿಡೀಯೋ ಕಾಲ್ ಮೂಲಕ ತೋರಿಸಬೇಕಿತ್ತು. ಆದರೆ ಗಂಡನಿಗೆ ಮಗುವನ್ನು ತೋರಿಸುವುದಕ್ಕೆ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೂ ಕೂಡ ಬಹಳ ಪ್ರೀತಿ. ಹೀಗಾಗಿ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ. ಮಗು ಪ್ರಜ್ಞೆ ತಪ್ಪಿದೆ ಎಂದುಕೊಂಡಿದ್ದೆ. ಆದರೆ ಮಗು ಸಾವನ್ನಪ್ಪಿತ್ತು ಎಂದಿದ್ದಾಳೆ.

    ಇದೇ ನೋವಿನಲ್ಲಿ ಕೈ ಕುಯ್ದ ಆತ್ಮಹತ್ಯೆಗೆ ಯತ್ನಿಸಿದೆ, ಆದರೆ ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನು ಮಾಡಬೇಕೆಂದು ತೋಚದೆ ಸೂಟ್ ಕೇಸ್ ನಲ್ಲಿ ಮಗುವಿನ ಬಾಡಿ ಹಾಕಿ ಪರಾರಿಯಾಗಲು ಯತ್ನಿಸಿದೆ ಎಂದು ವಿವರಿಸಿದ್ದಾಳೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

    ನಡೆದಿದ್ದೇನು..?: ಬೆಂಗಳೂರು ಕಂಪನಿಯ CEO ಆಗಿರುವ ಸುಚನಾ ಸೇಠ್‌  ಗೋವಾದಲ್ಲಿ ಸರ್ವಿಸ್‌ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆಗ ಇದ್ದಳು. ಜನವರಿ 8 ರಂದು ಅಪಾರ್ಟ್‌ ಮೆಂಟ್‌ ಸಿಬ್ಬಂದಿ ಜೊತೆ ನಾನು ಬೆಂಗಳೂರು ಹೋಗಬೇಕು ಟ್ಯಾಕ್ಸ್‌ ಬುಕ್‌ ಮಾಡುವಂತೆ ಹೇಳಿದ್ದಾಳೆ. ಆಗ ಅವರು ಟ್ಯಾಕ್ಸ್‌ ಬದಲು ವಿಮಾನದಲ್ಲಿ ಪ್ರಯಾಣಿಸುವಂತೆ ಸೂಚಿಸುತ್ತಾರೆ. ಇದಕ್ಕೊಪ್ಪದ ಸೇಠ್‌ ನಾನು ಟ್ಯಾಕ್ಸಿಯಲ್ಲೇ ಹೋಗಬೇಕು ಎಂದು ಹಠಕ್ಕೆ ಬಿದ್ದಿದ್ದಾಳೆ. ಅಂತೆಯೇ ಸಿಬ್ಬಂದಿ ಟ್ಯಾಕ್ಸಿ ಬುಕ್‌ ಮಾಡುತ್ತಾರೆ.

    ಇತ್ತ ಸೇಠ್‌ ರೂಂ ಖಾಲಿ ಮಾಡುತ್ತಿದ್ದಂತೆಯೇ ಸಿಬ್ಬಂದಿ ಕ್ಲೀನ್‌ ಮಾಡಲು ಹೋದಾಗ ಬಟ್ಟೆಯಲ್ಲಿ ರಕ್ತದ ಕಲೆಗಳನ್ನು ಕಂಡು ಗಾಬರಿಗೊಳ್ಳುತ್ತಾರೆ. ಕೂಡಲೇ ಪೊಲೀಸರಿಗೂ ಮಾಹಿತಿ ರವಾನಿಸುತ್ತಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸೇಠ್‌ಗೆ ಕರೆ ಮಾಡಿ ಮಗ ಹಾಗೂ ರಕ್ತದ ಕಲೆಯ ಬಗ್ಗೆ ವಿಚಾರಿಸುತ್ತಾರೆ. ಆಗ ಆಕೆ ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಯತ್ನಿಸುತ್ತಾಳೆ. ಸೇಠ್‌ ಹೇಳಿಕೆಯಿಂದ ಮತ್ತಷ್ಟು ಅನುಮಾನಗೊಂಡು ಗೋವಾ ಪೊಲೀಸರು ಟ್ಯಾಕ್ಸಿ ಚಾಲಕನಿಗೆ ಕರೆ ಮಾಡಿ ಹತ್ತಿರದ ಪೊಲೀಸ್‌ ಠಾಣೆಗೆ ತೆರಳುವಂತೆ ಸೂಚಿಸುತ್ತಾರೆ. ಹೀಗಾಗಿ ಚಿತ್ರದುರ್ಗದ ಐಮಂಗಲ ಪೊಲೀಸ್‌ ಠಾಣೆಯಲ್ಲಿ ಸೇಠ್‌ ಬಣ್ಣ ಬಯಲಾಗಿದೆ.

  • ರೆಸಾರ್ಟ್‌ ತೋರಿಸುತ್ತೇನೆ ಬಾ ಅಂತ ಕರೆದು ಮಹಿಳೆ ಮೇಲೆ ರೇಪ್‌ – ಟೆಕ್ಕಿ ಅರೆಸ್ಟ್‌

    ರೆಸಾರ್ಟ್‌ ತೋರಿಸುತ್ತೇನೆ ಬಾ ಅಂತ ಕರೆದು ಮಹಿಳೆ ಮೇಲೆ ರೇಪ್‌ – ಟೆಕ್ಕಿ ಅರೆಸ್ಟ್‌

    ಪಣಜಿ: ಗೋವಾಕ್ಕೆ (Goa) ಬನ್ನಿ ಇಲ್ಲಿನ ಪ್ರವಾಸಿ ತಾಣಗಳನ್ನ (Tourist Place) ತೋರಿಸುತ್ತೇನೆ, ಮೂಲ ಸೌಕರ್ಯಗಳನ್ನ ತೋರಿಸುತ್ತೇನೆ ಅಂತಾ ಕರೆದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗೋವಾದಲ್ಲಿ ನಡೆದಿದ್ದು, ಶುಕ್ರವಾರ (ಇಂದು) ಬೆಳಕಿಗೆ ಬಂದಿದೆ.

    ಉತ್ತರ ಗೋವಾದ (North Goa) ಅಸ್ಸೋನೋರಾ ಗ್ರಾಮದ ರೆಸಾರ್ಟ್‌ನಲ್ಲಿ ಪ್ರವಾಸಕ್ಕೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗುಜರಾತ್ ಮೂಲದ ಟೆಕ್ಕಿಯನ್ನ ಗೋವಾ ಪೊಲೀಸರು (Goa Police) ಬಂಧಿಸಿದ್ದಾರೆ. ಆಗಸ್ಟ್‌ 23 ರಂದು ಘಟನೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ದೂರಿನ ಆಧಾರದ ಮೇಲೆ ಪೊಲೀಸರು 47 ವರ್ಷದ‌ ಕಾಮುಕನನ್ನ ಬಂಧಿಸಿದ್ದಾರೆ. ಆರೋಪಿಯನ್ನ ಲಕ್ಷ್ಮಣ್‌ ಶಿಯಾರ್‌ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಪಾಸ್‌ಪೋರ್ಟ್, ವೀಸಾ ಇಲ್ಲದೆ ಬೋಟ್‌ನಲ್ಲಿ ಬೆಂಗಳೂರಿಗೆ ನುಸುಳಿದ್ದ ಶ್ರೀಲಂಕಾದ ಮೋಸ್ಟ್ ವಾಂಟೆಡ್‌ ಕ್ರಿಮಿನಲ್‌ಗಳು ಅರೆಸ್ಟ್

    ರೆಸಾರ್ಟ್‌ನಲ್ಲಿ ನಡೆದಿದ್ದೇನು?
    ಸಂತ್ರಸ್ತೆ ಮತ್ತು ಆರೋಪಿ ಕೆಲವು ದಿನಗಳ ಹಿಂದೆ ವಿಮಾನದಲ್ಲಿ (Flight) ಭೇಟಿಯಾಗಿದ್ದರು. ಈ ವೇಳೆ ಆರೋಪಿ ಆಕೆಯ ಫೋನ್‌ ನಂಬರ್‌ ಪಡೆದುಕೊಂಡಿದ್ದ. ನಂತರ ಇಬ್ಬರು ಪರಸ್ಪರ ಫೋನ್‌ನಲ್ಲಿ ಸಂಪರ್ಕದಲ್ಲಿದ್ದರು. ಇತ್ತೀಚೆಗೆ ಸಂತ್ರಸ್ತ ಮಹಿಳೆ ಮತ್ತು ಆರೋಪಿ ಪ್ರತ್ಯೇಕವಾಗಿ ಗೋವಾಕ್ಕೆ ಭೇಟಿ ನೀಡಿದ್ದರು. ಆಗಸ್ಟ್‌ 23 ರಂದು ಮಹಿಳೆಗೆ ಕರೆ ಮಾಡಿದ್ದ ಆರೋಪಿ ರೆಸಾರ್ಟ್‌ನಲ್ಲಿರುವ ಸೌಕರ್ಯಗಳನ್ನು ತೋರಿಸುತ್ತೇನೆ ಎಂದು ತಾನು ಉಳಿದುಕೊಂಡಿದ್ದ ರೆಸಾರ್ಟ್‌ಗೆ ಬರಲು ಹೇಳಿದ್ದಾನೆ. ಮಹಿಳೆ ಒಂಟಿಯಾಗಿ ರೆಸಾರ್ಟ್‌ಗೆ ಹೋಗಿದ್ದಾಳೆ. ಈ ವೇಳೆ ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದ ಕಿಡಿಗೇಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್‌ ಅಧಿಕಾರಿ ದಳವಿ ತಿಳಿಸಿದ್ದಾರೆ.

    ಬಳಿಕ ನೊಂದ ಮಹಿಳೆ ನೀಡಿದ ದೂರಿನ ಆಧಾರದ ಮೇರೆಗೆ ಉತ್ತರ ಗೋವಾದ ಮಾಪುಸಾ ಪಟ್ಟಣದ ಬಳಿಯ ಥಿವಿಮ್ ಗ್ರಾಮದಲ್ಲಿ ಆರೋಪಿಯನ್ನ ಬಂಧಿಸಲಾಯಿತು. ಇದನ್ನೂ ಓದಿ: Breaking- ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ : ಅತ್ಯುತ್ತಮ ನಟ ಅಲ್ಲು ಅರ್ಜುನ್, ನಟಿ ಆಲಿಯಾ ಭಟ್ ಮತ್ತು ಕೀರ್ತಿ ಸನನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]