Tag: godown

  • Kolar | ಅರಣ್ಯ ಇಲಾಖೆ ಗೋಡೌನ್ ಬೀಗ ಒಡೆದು ಕಳ್ಳತನಕ್ಕೆ ಯತ್ನ – ಇಬ್ಬರು ಅರೆಸ್ಟ್

    Kolar | ಅರಣ್ಯ ಇಲಾಖೆ ಗೋಡೌನ್ ಬೀಗ ಒಡೆದು ಕಳ್ಳತನಕ್ಕೆ ಯತ್ನ – ಇಬ್ಬರು ಅರೆಸ್ಟ್

    ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಇಲಾಖೆ (Forest Department) ಗೋಡೌನ್ (Godown) ಬೀಗ ಒಡೆದು ಕಳ್ಳತನಕ್ಕೆ (Theft) ಯತ್ನಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಕೋಲಾರ (Kolar) ಜಿಲ್ಲೆ ಮುಳಬಾಗಿಲು (Mulabagilu) ತಾಲೂಕು ಕುಮದೇನಹಳ್ಳಿ ಗ್ರಾಮದ ಬಳಿ ಇರುವ ಅರಣ್ಯ ಇಲಾಖೆ ಗೋಡೌನ್ ಬೀಗ ಒಡೆದು ಅದರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನ ದೋಚಲು ಯತ್ನಿಸಿದ ಹಿನ್ನೆಲೆ, ಆಂದ್ರದ ಮದನಪಲ್ಲಿಯ ಪವನ್ ಹಾಗೂ ಕುರುಡುಮಲೆ ಗೇಟ್‌ನ ಚೇತನ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದಿನ ಆರ್‌ಎಫ್‌ಓ ಜ್ಯೋತಿ ಅವರ ಹೆಸರು ಹೇಳಿಕೊಂಡು ಬಂದು ಬೀಗ ಒಡೆಯಲು ಯತ್ನಿಸಿದ ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಮಹಾಕುಂಭ ಮೇಳದಲ್ಲಿ ಅದಾನಿ ಗ್ರೂಪ್‌, ಇಸ್ಕಾನ್‌ ಸಹಯೋಗದಿಂದ ಮಹಾಪ್ರಸಾದ ಸೇವೆ

    ಇನ್ನೂ ಅರಣ್ಯ ಇಲಾಖೆಯಿಂದ ವಶಪಡಿಸಿಕೊಂಡಿರುವ ಶ್ರೀಗಂಧ, ರಕ್ತ ಚಂದನ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಸಂಗ್ರಹಿಸಿರುವ ಗೋಡೌನ್ ಇದಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಆರ್‌ಎಫ್‌ಓ ಶಾಲಿನಿ ಭೇಟಿ ನೀಡಿದ್ದಾರೆ. ಸದ್ಯ ಆರೋಪಿಗಳನ್ನು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಡಾ. ಶಿವಕುಮಾರ್ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

  • ಗಬ್ಬೆದ್ದು ನಾರುತ್ತಿರುವ ಹುಳಗಳಿರುವ ಜೋಳ ಪಡಿತರ ಅಂಗಡಿಗಳಿಗೆ ವಿತರಣೆ!

    ಗಬ್ಬೆದ್ದು ನಾರುತ್ತಿರುವ ಹುಳಗಳಿರುವ ಜೋಳ ಪಡಿತರ ಅಂಗಡಿಗಳಿಗೆ ವಿತರಣೆ!

    ಬಳ್ಳಾರಿ: ಜಿಲ್ಲೆಯಾದ್ಯಂತ ಪಡಿತರ ಅಂಗಡಿಗಳಿಗೆ (Ration Shop) ಗಬ್ಬೆದ್ದು ನಾರುತ್ತಿರುವ ಹುಳು ಹಿಂಡಿದ, ಹಿಟ್ಟಾದ ಜೋಳ (Milled Corn) ಸರಬರಾಜಾಗುತ್ತಿದೆ.

    ಎರಡು ದಿನಗಳ ಹಿಂದೆ ಉಪ ಲೋಕಾಯುಕ್ತರು ಭೇಟಿ ಬಳಿಕವೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳದೇ ತರಾತುರಿಯಲ್ಲಿ ಯೋಗ್ಯವಲ್ಲದ ಹುಳು ಮಿಶ್ರಿತ, ಹಿಟ್ಟಾದ ಜೋಳ ವಿತರಣೆಗೆ ಮುಂದಾಗಿದ್ದಾರೆ.

    ನಗರದ ಎಪಿಎಂಸಿ ಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಮೂರು ಗೋಡಾನ್ ಗಳಲ್ಲಿ ಈ ಜೋಳದ ಚೀಲಗಳನ್ನು ಸಂಗ್ರಹಿಸಿಡಲಾಗಿದೆ. ಗೋಡಾನ್‌ನಲ್ಲಿ ಸಂಗ್ರಹಿಸಿದ ಜೋಳ ಸಂಪೂರ್ಣ ಹಾಳಾಗಿದ್ದು ಹಾಳಾಗಿರುವ ಜೋಳವನ್ನೇ ಬಡವರ ಹೊಟ್ಟೆಗೆ ಸೇರಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ರೇಪ್‌ ಕೇಸ್‌ | ಮಗನನ್ನು ಗಲ್ಲಿಗೇರಿಸಿದ್ರೂ ಬೇಸರ ಇಲ್ಲ: ಸಂಜಯ್ ತಾಯಿ

    ಜೋಳ ಸಂಗ್ರಹಿಸಿಟ್ಟಿರುವ ಗೋಡೌನ್ ಕಾಲಿಡುವುದಕ್ಕೂ ಸಾಧ್ಯ ಇಲ್ಲ. ಎಷ್ಟರ ಮಟ್ಟಿಗೆ ಅಂದರೆ ಒಳಗೆ ಕಾಲಿಟ್ಟರೆ ಘಾಟು ಹೊಡೆಯುತ್ತದೆ. ಒಂದು ಕೆಜಿ ಜೋಳದಲ್ಲಿ ಅರ್ಧ ಕೆಜಿ ಬರೀ ಹುಳು ಹಾಗೂ ಹಿಟ್ಟೇ ಸಿಗುತ್ತದೆ. ಗೋಡೌನ್ ನಲ್ಲಿ ಸಂಗ್ರಹಿಸಿಟ್ಟಿದ್ದ 40 ಸಾವಿರ ಚೀಲ ಜೋಳದ್ದು ಇದೇ ಪರಿಸ್ಥಿತಿ.

     

    ಇದೇ ಜೋಳ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ನ್ಯಾಯ ಬೆಲೆ ಅಂಗಡಿಗಳಿಗೆ ಸರಬರಾಜು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.  ಗೋಡೌನ್ ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧ ಇಲ್ಲ, ನಾವು ಬಿಡುಗಡೆ ಮಾಡುತ್ತೇವೆ ಅಷ್ಟೇ ಎಂದು ಉಡಾಫೆಯ ಉತ್ತರ ಕೊಟ್ಟು ಜಾರಿಕೊಳ್ಳುತ್ತಿದ್ದಾರೆ.

     

  • ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

    ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

    ಆನೇಕಲ್ (ಬೆಂಗಳೂರು): ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತ (Fire Cracker Tragedy In Attibele) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗೋದಾಮು ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

    ಪಟಾಕಿ ಸಂಗ್ರಹಕ್ಕೆ ಲೈಸೆನ್ಸ್ ಇರಲಿಲ್ಲ. ಕೇವಲ ಬೇರೆಡೆಗೆ ರವಾನಿಸುವ ಪ್ರೊಸೆಸಿಂಗ್ ಯೂನಿಟ್‍ಗೆ ಮಾತ್ರ ಪರವಾನಿಗೆ ನೀಡಲಾಗಿತ್ತು. ಆದರೆ ಮಾಲೀಕ ಭಾರೀ ಪ್ರಮಾಣದ ಪಟಾಕಿ ಸಂಗ್ರಹಿಸುವ ದಾಸ್ತಾನು ಮಳಿಗೆಯನ್ನಾಗಿ ಬಳಕೆ ಮಾಡ್ತಿದ್ದ. ಪ್ರೊಸೆಸಿಂಗ್ ಯೂನಿಟ್‍ಗೆ 2028ವರೆಗೆ ಪರವಾನಿಗೆ ಇದ್ದು, ಗೋದಾಮಿಗೆ ಅನುಮತಿ ಇರಲಿಲ್ಲ.

    ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಿದ್ದ ಕುರಿತು ಗೋದಾಮಿನ ಮಾಲೀಕರ ವಿರುದ್ಧ ಪ್ರತ್ಯೇಕವಾಗಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮಾಲೀಕ ರಾಮಸ್ವಾಮಿ ರೆಡ್ಡಿಯನ್ನ ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ. 2018 ರಲ್ಲಿ ಪಟಾಕಿ ಅಂಗಡಿಕಷ್ಟೇ ಅನುಮತಿ ಪಡೆದಿದ್ದಾರೆ. ಗೋದಾಮಿಗೆ ಅನುಮತಿ ನೀಡಿಲ್ಲ ಎಂದು ರಾಮಸ್ವಾಮಿ ವಿಚಾರಣೆ ಬಳಿಕ ಬೆಳಕಿಗೆ ಬಂದಿದೆ.

    ಒಟ್ಟಿನಲ್ಲಿ ಪಟಾಕಿ ಅಂಗಡಿ ಅನುಮತಿ ಪಡೆದು ಗೋಡೌನ್ ಮಾಡಿಕೊಂಡಿದ್ದ ಆರೋಪಿ ರಾಮಸ್ವಾಮಿ ವಿರುದ್ಧ ಸ್ಫೋಟಕ ಕಾಯ್ದೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ: ಬೊಮ್ಮಾಯಿ

    ಪಟಾಕಿ ದುರಂತದಲ್ಲಿ ತಮಿಳುನಡು ಮೂಲದ ಗಿರಿ ಬಿನ್ ವೇಡಿಯಪ್ಪನ್, ಸಚೀನ್ ಬಿನ್ ಲೇಟ್ ವೇಡಿಯಪ್ಪನ್, ವಿಜಯರಾಘವನ್, ವಿಳಂಬರತಿ ಬಿನ್ ಸೆಂದಿಲ್, ಆಕಾಶ ಬಿನ್ ರಾಜಾ, ವೆಡಿಯಪ್ಪನ್, ಆದಿಕೇಶವ ಬಿನ್ ಪೆರಿಯಾಸ್ವಾಮಿ, ಪ್ರಕಾಶ್ ಬಿನ್ ರಾಮು, ವಸಂತರಾಜು ಬಿನ್ ಗೋವಿಂದ ರಾಜು, ಅಬ್ಬಾಸ್ ಬಿಸ್ ಶಂಕರ್, ಪ್ರಭಾಕರನ್ ಬಿನ್ ಗೋಪಿನಾಥ್, ನಿತೀಶ್ ಬಿನ್ ಮೇಘನಾಥ್, ಸಂತೋಷ್ ಬಿನ್ ಕುಮಾರ್ ಮೃತಪಟ್ಟಿದ್ದು, ಇನ್ನೊಬ್ಬನ ಹೆಸರು ಗುರುತು ಪತ್ತೆಯಾಗಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಣೇಶ ಹಬ್ಬದ ಸಾಮಗ್ರಿ ಇಟ್ಟಿದ್ದ ಗೋಡೌನ್‌ಗೆ ಬೆಂಕಿ

    ಗಣೇಶ ಹಬ್ಬದ ಸಾಮಗ್ರಿ ಇಟ್ಟಿದ್ದ ಗೋಡೌನ್‌ಗೆ ಬೆಂಕಿ

    ಬೆಂಗಳೂರು: ಗಣೇಶ ಹಬ್ಬದ (Ganesha Festival) ಸಾಮಗ್ರಿಗಳನ್ನು (Things) ಇಟ್ಟಿದ್ದ ಗೋಡೌನ್‌ಗೆ (Godown) ಬೆಂಕಿ (Fire) ಹತ್ತಿದ್ದು, ಗೋಡೌನ್ ಹೊತ್ತಿ ಉರಿದ ಘಟನೆ ಟಿಪ್ಪುನಗರದಲ್ಲಿ (Tippu Nagara) ನಡೆದಿದೆ.

    ಕಾಟನ್ ಪೇಟೆಯ (Cotton Pet) ವಿನಾಯಕ ಥಿಯೇಟರ್‌ನ 10ನೇ ಕ್ರಾಸ್‌ನಲ್ಲಿ ಘಟನೆ ನಡೆದಿದ್ದು, ಗೋದಾಮಿನಲ್ಲಿದ್ದ 2 ಸಿಲಿಂಡರ್ ಬ್ಲಾಸ್ಟ್ (Cylinder Blast) ಆದ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ. ಘಟನೆಯ ಪರಿಣಾಮ ಗೋಡೌನ್ ಪಕ್ಕದಲ್ಲಿದ್ದ 3-4 ಮನೆಗಳಿಗೂ ಬೆಂಕಿ ತಗುಲಿದೆ. ಇದನ್ನೂ ಓದಿ: ಹಳೇ ದ್ವೇಷಕ್ಕೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

    ಘಟನೆ ನಡೆದ ಸ್ಥಳಕ್ಕೆ ಎರಡು ಅಗ್ನಿಶಾಮಕ (Fire Engine) ವಾಹನ ದೌಡಾಯಿಸಿದ್ದು, ಅಗ್ನಿಶಾಮಕ ಇಲಾಖೆ ಹಾಗೂ ಕಾಟನ್‌ಪೇಟೆ ಪೊಲೀಸರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ – ಅಪಘಾತದಲ್ಲಿ ಮೂವರು ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೋಡೌನ್ ಜಲಾವೃತ- ಕೇಜ್ರಿವಾಲ್ ಎಮರ್ಜೆನ್ಸಿ ಕಿಟ್ ನೀರುಪಾಲು

    ಗೋಡೌನ್ ಜಲಾವೃತ- ಕೇಜ್ರಿವಾಲ್ ಎಮರ್ಜೆನ್ಸಿ ಕಿಟ್ ನೀರುಪಾಲು

    ನವದೆಹಲಿ: ಗೋದಾಮು ಜಲಾವೃತಗೊಂಡ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೆ ಸಿಲುಕಿದ್ದವರಿಗೆ ಕೊಡುವ ರೇಷನ್ ಕಿಟ್‍ಗಳು (Ration Kit) ನೀರುಪಾಲಾದ ಘಟನೆ ದೆಹಲಿಯಲ್ಲಿ ನಡೆದಿದೆ.

    ಹೌದು. ದೆಹಲಿಯಲ್ಲಿ ಮುಂಗಾರು ಮಳೆಯ (Mansoon Rain) ಅಬ್ಬರ ಜೋರಾಗಿದೆ. ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ದೆಹಲಿಯ ಹಲವು ಭಾಗಗಳು ಜಲಾವೃತಗೊಂಡಿವೆ. ಹೀಗಾಗಿ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಪರಿಹಾರ ಕಿಟ್‍ಗಳನ್ನು ಸಿದ್ಧಪಡಿಸಿದ್ದರು. ಅಲ್ಲದೆ ಈ ಕಿಟ್‍ಗಳನ್ನು ಸರ್ಕಾರಿ ಸ್ವಾಮ್ಯದ ಗೋದಾಮಿನಲ್ಲಿ ಇರಿಸಲಾಗಿತ್ತು. ಆದರೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈ ಗೋದಾಮು ಇದೀಗ ಜಲಾವೃತಗೊಂಡಿದ್ದು, ಕಿಟ್‍ಗಳು ನಾಶವಾಗಿವೆ.

    ಪ್ರವಾಹ ಸಂತ್ರಸ್ತರಿಗಾಗಿ ತಯಾರಿಸಿದ್ದ ಕಿಟ್ ಗಳನ್ನು ಜಂಗ್ಪುರದ ವಾರ್ಡ್ ಸಮಖ್ಯೆ 142 ರಲ್ಲಿ ಸಂಗ್ರಹಿಸಡಲಾಗಿತ್ತು. ಸದ್ಯ ಕಿಟ್ ಗಳು ನೀರು ಪಾಲಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ವಿಚಿತ್ರವಾದ್ರೂ ಸತ್ಯ- ದೇವಸ್ಥಾನದ ಹೊರಗಿದ್ದ ಚಪ್ಪಲಿ ಕದ್ದವರ ವಿರುದ್ಧ FIR

    ಮಳೆಯಿಂದ ತತ್ತರಿಸಿದ ದೆಹಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಇದು ಒಬ್ಬರು ಮತ್ತೊಬ್ಬರನ್ನು ದೂಷಿಸಿ ಮಾತನಾಡುವ ಸಮಯವಲ್ಲ. ಎಲ್ಲಾ ಪ್ರವಾಹ ಪೀಡಿತ ರಾಜ್ಯಗಳ ಸರ್ಕಾರಗಳು ಪರಿಹಾರ ನೀಡಲು ಒಟ್ಟಾಗಿ ಕೆಲಸ ಮಾಡುವುದು ಅಗತ್ಯವಿದೆ ಎಂದು ಕರೆ ಕೊಟ್ಟರು.

    ಅಲ್ಲದೆ ಜುಲೈ 8 ಮತ್ತು 9 ರಂದು ದೆಹಲಿಯಲ್ಲಿ 153 ಮಿ.ಮೀ ಮಳೆಯಾಗಿದೆ. ಈ ಮೂಲಕ ದಶಕಗಳ ದಾಖಲೆಯನ್ನು ಮುರಿದಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ 206 ಮೀಟರ್ ದಾಟಿದ ನಂತರ ನದಿ ಪಾತ್ರದ ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಟಾಕಿ ಸಂಗ್ರಹಿಸಿದ್ದ ಗೋಡೌನ್‌ನಲ್ಲಿ ಸ್ಫೋಟ – 4 ಸಾವು, 7 ಜನ ಗಂಭೀರ

    ಪಟಾಕಿ ಸಂಗ್ರಹಿಸಿದ್ದ ಗೋಡೌನ್‌ನಲ್ಲಿ ಸ್ಫೋಟ – 4 ಸಾವು, 7 ಜನ ಗಂಭೀರ

    ಭೋಪಾಲ್: ಅಕ್ರಮವಾಗಿ ಪಟಾಕಿಗಳನ್ನು (Fireworks) ಸಂಗ್ರಹಿಸಿದ್ದ ಗೋಡೌನ್‌ನಲ್ಲಿ (Godown) ಸ್ಫೋಟ (Explosion) ಉಂಟಾಗಿ 4 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಮೊರೆನಾ ಜಿಲ್ಲೆಯ ಬನ್ಮೋರ್ ನಗರದಲ್ಲಿ ಗುರುವಾರ ನಡೆದಿದೆ.

    ದೀಪಾವಳಿ ಹಿನ್ನೆಲೆ ಅಕ್ರಮವಾಗಿ ಪಟಾಕಿ ತುಂಬಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿ ಹೋಗಿರುವ ಶಂಕೆ ವ್ಯಕ್ತವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಲು ಗನ್ ಪೌಡರ್ ಅಥವಾ ಗ್ಯಾಸ್ ಸಿಲಿಂಡರ್ ಕಾರಣವಾಗಿರುವ ಸಾಧ್ಯತೆಯಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಗಾಯಗೊಂಡ 7 ಜನರ ಸ್ಥಿತಿಯೂ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 23ನೇ ಮಹಡಿಯಿಂದ ಬಿದ್ದು ಮುಂಬೈನ ಖ್ಯಾತ ಬಿಲ್ಡರ್ ಸಾವು

     

    ಅವಶೇಷಗಳನ್ನು ತೆರವುಗೊಳಿಸಲು ಯಂತ್ರಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ರಾಜೇಶ್ ಚಾವ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

    3 ವರ್ಷಗಳ ಹಿಂದೆ ಇದೇ ರೀತಿಯ ಘಟನೆ ಪಂಜಾಬ್‌ನಲ್ಲಿ ನಡೆದಿತ್ತು. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

    Live Tv
    [brid partner=56869869 player=32851 video=960834 autoplay=true]

  • ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ

    ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಓಖ್ಲಾ 2ನೇ ಹಂತದ ಹರ್ಕೇಶ್ ನಗರದಲ್ಲಿರುವ ಫ್ಯಾಬ್ರಿಕ್ ಗೋಡೌನ್‍ನಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ದೆಹಲಿ ಅಗ್ನಿ ಶಾಮಕ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.

    ಬೆಳಗಿನ ಜಾವ ಸುಮಾರು 4 ಗಂಟೆಗೆ ಗೋಡೌನ್‍ನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಗೋಡೌನ್‍ನ ಫಸ್ಟ್ ಫ್ಲೋರ್ ಹಾಗೂ ಬೇಸ್‍ಮೆಂಟ್‍ನಲ್ಲಿರುವ ಕಾಟನ್, ದಾರ ಮತ್ತು ಬಟ್ಟೆಗಳು ಸುಟ್ಟು ಕರಕಲಾಗಿದೆ. ಘಟನೆ ಕುರಿತಂತೆ ಕರೆ ಬರುತ್ತಿದ್ದಂತೆ ಸ್ಥಳಕ್ಕೆ 18 ಅಗ್ನಿ ಶಾಮಕ ವಾಹನಗಳನ್ನು ಕಳುಹಿಸಲಾಯಿತು ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಬಾಡಿಬಿಲ್ಡರ್ ಸ್ಪರ್ಧೆಯಲ್ಲಿ ಗಿನ್ನೆಸ್ ರೆಕಾರ್ಡ್ ಪಡೆದ ಕುಬ್ಜ ವ್ಯಕ್ತಿ

    ಇದೀಗ ಅಗ್ನಿ ಶಾಮಕ ದಳ ಬೆಂಕಿ ನಾಂದಿಸುವ ಕಾರ್ಯ ನಡೆಸುತ್ತಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಲ್ಲದೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಇದೀಗ ಈ ವಿಚಾರವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ನುಡಿದಿದ್ದಾರೆ.  ಇದನ್ನೂ ಓದಿ: ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

  • ಸಿಲಿಂಡರ್ ಸ್ಪೋಟ – ನಾಲ್ವರಿಗೆ ಗಂಭೀರ ಗಾಯ

    ಸಿಲಿಂಡರ್ ಸ್ಪೋಟ – ನಾಲ್ವರಿಗೆ ಗಂಭೀರ ಗಾಯ

    ಮುಂಬೈ: ಎಲ್‍ಪಿಜಿ ಸಿಲಿಂಡರ್ ಗಳನ್ನು ಇರಿಸಲಾಗಿದ್ದ ಗೋಡೌನ್‍ನಲ್ಲಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಬುಧವಾರ ಬೆಳಿಗ್ಗೆ ಮುಂಬೈನ ಅಂಧೇರಿಯಲ್ಲಿ ನಡೆದಿದೆ.

    ಈ ಕುರಿತಂತೆ ಪೊಲೀಸರು, ಪಶ್ಚಿಮ ಉಪನಗರ ವರ್ಸೋವಾ ಪ್ರದೇಶದ ಯಾರಿ ರಸ್ತೆಯಲ್ಲಿರುವ ಗೋಡೌನ್‍ನಲ್ಲಿ ಬೆಳಗ್ಗೆ ಸುಮಾರು 9:40ಕ್ಕೆ ಸಿಲಿಂಡರ್ ಸ್ಪೋಟದಿಂದ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಬೆಂಕಿ ನಂದಿಸಲು ಅಗ್ನಿಶಾಮಕ ವಾಹನ ಮತ್ತು 7 ನೀರಿನ ಜೆಟ್ಟಿಗಳನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ತಿಳಿದರು.

    ಘಟನೆಯಲ್ಲಿ ಗಾಯಗೊಂಡ ನಾಲ್ವರನ್ನು ಸ್ಥಳೀಯ ಕೂಪರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • 1 ಕ್ವಿಂಟಾಲ್ ಒಣ ಗಾಂಜಾ ಗಿಡ ನಾಶ – 13 ವರ್ಷದ ದಾಸ್ತಾನಿಗೆ ಅಬಕಾರಿ ಇಲಾಖೆ ಮುಕ್ತಿ

    1 ಕ್ವಿಂಟಾಲ್ ಒಣ ಗಾಂಜಾ ಗಿಡ ನಾಶ – 13 ವರ್ಷದ ದಾಸ್ತಾನಿಗೆ ಅಬಕಾರಿ ಇಲಾಖೆ ಮುಕ್ತಿ

    ಶಿವಮೊಗ್ಗ: ಅಬಕಾರಿ ಇಲಾಖೆಯಲ್ಲಿ ಕಳೆದ 13 ವರ್ಷದಿಂದ ದಾಸ್ತಾನು ಮಾಡಲಾಗಿದ್ದ ಒಂದು ಕ್ವಿಂಟಾಲ್‍ಗೂ ಅಧಿಕ ಒಣ ಗಾಂಜಾ ಗಿಡಗಳನ್ನು ಇಲಾಖೆ ನಾಶಪಡಿಸಿದೆ.

    ಮಾದಕ ವಸ್ತು ಸಾಮಾಗ್ರಿಗಳ ವಿಲೇವಾರಿ ಸಮಿತಿ ಶಿಫಾರಸು ಅನ್ವಯ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಶುಶೃತ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಗಾಂಜಾ ಗಿಡಗಳನ್ನು ನಾಶಪಡಿಸಲಾಯಿತು.

    ಶಿವಮೊಗ್ಗ ಅಬಕಾರಿ ಇಲಾಖೆಯಲ್ಲಿ 2007ರಿಂದ ಇಲ್ಲಿಯವರೆಗೆ ಒಟ್ಟು 56 ಪ್ರಕರಣಗಳಲ್ಲಿ 1,07,835 ಕೆ.ಜಿ ತೂಕದ 11,358 ಗಿಡಗಳನ್ನು ವಶಪಡಿಸಿಕೊಂಡು ಇಲಾಖೆಯ ಗೋದಾಮಿನಲ್ಲಿ ಸಂಗ್ರಹಿಸಿ ಇಡಲಾಗಿತ್ತು.

    ಮಾದಕ ಸಾಮಾಗ್ರಿಗಳ ವಿಲೇವಾರಿ ಸಮಿತಿ ನಿರ್ಧಾರದಂತೆ ಅಬಕಾರಿ ಇಲಾಖೆ ಮಂಗಳೂರು ವಿಭಾಗದ ಜಂಟಿ ಆಯುಕ್ತರಾದ ಶೈಲಜಾ ಎ.ಕೋಟೆ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಹಾಗೂ ಶಿವಮೊಗ್ಗ ಜಿಲ್ಲೆಯ ಅಬಕಾರಿ ಉಪ ಆಯಕ್ತ ವೈ.ಆರ್ ಮೋಹನ್ ಸಮ್ಮುಖದಲ್ಲಿ ವೈಜ್ಞಾನಿಕವಾಗಿ ನಾಶಪಡಿಸಲಾಯಿತು.

  • ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಳಸಬೇಕಿದ್ದ 350 ಕ್ವಿಂಟಾಲ್ ಗೋಧಿ ಗೋದಾಮಿನಲ್ಲಿ ವೇಸ್ಟ್

    ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಳಸಬೇಕಿದ್ದ 350 ಕ್ವಿಂಟಾಲ್ ಗೋಧಿ ಗೋದಾಮಿನಲ್ಲಿ ವೇಸ್ಟ್

    ಮಡಿಕೇರಿ: ಕೊಡಗು ಜಿಲ್ಲೆಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಚಪಾತಿ, ಉಪ್ಪಿಟ್ಟು ಸೇರಿದಂತೆ ವಿವಿಧ ಆಹಾರಕ್ಕಾಗಿ ಖರೀದಿಸಿದ್ದ 350 ಕ್ವಿಂಟಾಲ್‍ಗೂ ಹೆಚ್ಚು ಗೋಧಿ ಗೋದಾಮಿನಲ್ಲಿ ವೇಸ್ಟ್ ಆಗಿ ಬಿದ್ದಿದೆ.

    ಆರ್ಥಿಕವಾಗಿ ಹಿಂದುಳಿದ ಮತ್ತು ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಸರ್ಕಾರ ಹಾಸ್ಟೆಲ್‍ಗಳನ್ನು ತೆರೆದಿದೆ. ಈ ಮೂಲಕ ಅವರ ಶಿಕ್ಷಣದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರವನ್ನು ಒದಗಿಸುತ್ತಿದ್ದು, ಅದಕ್ಕಾಗಿ ಸಾವಿರಾರು ಕೋಟಿ ವೆಚ್ಚ ಮಾಡುತ್ತದೆ. ಕೊಡಗಿನ ಎಲ್ಲಾ ಹಾಸ್ಟೆಲ್‍ಗಳಿಗಾಗಿ 400 ಕ್ವಿಂಟಾಲ್ ಗೋಧಿಯನ್ನು ಖರೀದಿಸಿ ವಿರಾಜಪೇಟೆಯ ಎಪಿಸಿಎಂಎಸ್ ಗೋದಾಮಿನಲ್ಲಿ ಸಂಗ್ರಹಿಸಲಾಗಿದೆ. ಗೋಧಿಯನ್ನು ಸಂಗ್ರಹಿಸಿ ಮೂರು ತಿಂಗಳಾದರೂ ಇದುವರೆಗೂ ಹಾಸ್ಟೆಲ್‍ಗಳಿಗೆ ಅಧಿಕಾರಿಗಳು ಅಥವಾ ವಾರ್ಡನ್‍ಗಳು ಎತ್ತುವಳಿ ಮಾಡಿಲ್ಲ.

    ಮೂರು ತಿಂಗಳಲ್ಲಿ ಕೇವಲ 35 ಕ್ವಿಂಟಾಲ್‍ನಷ್ಟು ಗೋಧಿಯನ್ನು ಮಾತ್ರ ಬಳಕೆ ಮಾಡಲಾಗಿದೆ. ಉಳಿದ 365 ಕ್ವಿಂಟಾಲ್ ಗೋಧಿ ಗೋದಾಮಿನಲ್ಲೇ ಕೊಳೆಯುತ್ತಿದೆ. ಒಮ್ಮೆ ಗೋಧಿಯನ್ನು ಸಂಗ್ರಹಿಸಿದರೆ ಅದನ್ನು ಹೆಚ್ಚೆಂದರೆ 6 ತಿಂಗಳವರೆಗೆ ಮಾತ್ರವೇ ಸಂಗ್ರಹಿಸಿಡಬಹುದು. ನಂತರ ಅದು ಹಾಳಾಗಿ ಹುಳುಹಿಡಿಯುತ್ತದೆ. ಆದರೆ ಈಗಾಗಲೇ ಸಂಗ್ರಹಿಸಿ ಮೂರು ತಿಂಗಳು ಪೂರೈಸಿದರೂ ಗೋದಾಮಿನಲ್ಲಿರುವ ಗೋಧಿ ಇನ್ನೂ ಒಂದು ವರ್ಷಕ್ಕೆ ಆಗುವಷ್ಟು ಸಂಗ್ರಹವಾಗಿದೆ.

    ಒಂದು ಕೆ.ಜಿ. ಗೋಧಿಗೆ 26 ರೂಪಾಯಿಯಂತೆ ಲೆಕ್ಕ ಹಾಕಿದರೂ, 350 ಕ್ವಿಂಟಾಲ್ ಗೋಧಿಗೆ ಸರ್ಕಾರದ ಸುಮಾರು 10 ಲಕ್ಷ ರೂ. ನಷ್ಟವಾಗಲಿದೆ. ಅದಕ್ಕಿಂತ ಮುಖ್ಯವಾಗಿ ವಿದ್ಯಾರ್ಥಿಗಳು ಪೌಷ್ಠಿಕಾಂಶಯುಕ್ತ ಆಹಾರದಿಂದ ವಂಚಿತರಾಗಲಿದ್ದಾರೆ. ಕೊಡಗಿನ ಬಡ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೂ ಶಿಕ್ಷಣದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಬೇಕಾಗಿದ್ದ ಅಧಿಕಾರಿಗಳು, ನೂರಾರು ಕ್ವಿಂಟಾಲ್ ಗೋಧಿಯನ್ನು ಹಾಳು ಮಾಡುತ್ತಿರುವುದು ಮಾತ್ರ ವಿಪರ್ಯಾಸ ಎಂದು ಸ್ಥಳೀಯರು ಅಸಮಾಧಾನ ಹೊರ ಹಾಕಿದ್ದಾರೆ.