Tag: Gokarna Beach

  • ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆ, ಬೆಂಗಳೂರು ಮೂಲದ ನಾಲ್ವರ ರಕ್ಷಣೆ

    ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆ, ಬೆಂಗಳೂರು ಮೂಲದ ನಾಲ್ವರ ರಕ್ಷಣೆ

    ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆ ಹಾಗೂ ಬೆಂಗಳೂರು ಮೂಲದ ನಾಲ್ವರು ಪ್ರವಾಸಿಗರ ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್‌ನಲ್ಲಿ ನಡೆದಿದೆ.

    ಬೆಂಗಳೂರಿನಿಂದ ಬಂದಿದ್ದ ಇವರು ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಕ್ಕಿದ್ದು ರಕ್ಷಣೆಗಾಗಿ ಕೂಗಿದ್ದಾರೆ. ಈ ವೇಳೆ ಸ್ಥಳೀಯ ಅಡ್ವೆಂಚರ್ಸ್ ಬೋಟ್‌ನಲ್ಲಿ ಲೈಫ್‌ಗಾರ್ಡ್‌ಗಳಾದ ನಾಗೇಂದ್ರ, ಮಂಜುನಾಥ್ ಹರಿಕಾಂತ್ರ, ಶೇಖರ್ ಹರಿಕಾಂತ್ರ ಅವರು ರಕ್ಷಣೆ ಮಾಡಿದ್ದಾರೆ. ರಷ್ಯಾ ಮೂಲದ ಜೈನ್ (41) , ಬೆಂಗಳೂರಿನ ಎಬಿನ್ ಡೇವಿಡ್ (35), ಮಧುರ ಅಗರ್ವಾಲ್ (35), ರಮ್ಯ ವೆಂಕಟರಮಣ (34) ರಕ್ಷಣೆಗೊಳಗಾದವರು.

    ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
    ಸಮುದ್ರದಲ್ಲಿ ಸುಳಿಗೆ ಸಿಲುಕಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಗೋಕರ್ಣದ ಓಂ ಬೀಚ್‌ನಲ್ಲಿ ನಡೆದಿದೆ. ಆಂದ್ರ ಮೂಲದ ಚರಣ್ (23), ಶ್ರೀಕಾಂತ್ (26) ರಕ್ಷಣೆಗೆ ಒಳಗಾದ ಪ್ರವಾಸಿಗರು. ಆಂಧ್ರದ ಕಡಪ ಜಿಲ್ಲೆಯವರಾಗಿದ್ದು, ನಾಲ್ಕು ಜನ ಪ್ರವಾಸಿಗರು ಗೋಕರ್ಣ ಪ್ರವಾಸಕ್ಕೆ ಬಂದಿದ್ದರು.

    ಸಮುದ್ರದಲ್ಲಿ ಈಜಾಡುತ್ತಿರುವಾಗ ಸುಳಿಗೆ ಸಿಲುಕಿ ಇಬ್ಬರೂ ಪ್ರವಾಸಿಗರು ಮುಳುಗುತ್ತಿದ್ದುದನ್ನು ಗಮನಿಸಿ ಕರ್ತವ್ಯನಿರತ ಲೈಫ್‌ಗಾರ್ಡ್ ಸಿಬ್ಬಂದಿ ಹರೀಶ್ ಮೂಡಂಗಿ, ಮಂಜೇಶ್ ಹರಿಕಂತ್ರ, ಪ್ರಭಾಕರ ಅಂಬಿಗ ಅವರು ಪ್ರವಾಸಿಗರ ಜೀವ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

  • ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

    ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

    ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗರಲ್ಲಿ ಓರ್ವ ನೀರಿನಲ್ಲಿ ಸಿಲುಕಿ ನಾಪತ್ತೆಯಾಗಿದ್ದು, ಐವರು ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಾವಿಕೊಡ್ಲ ಕಡಲ ತೀರದಲ್ಲಿ ನಡೆದಿದೆ.

    ಕೋಲಾರದ ಶ್ರೀನಿವಾಸಪುರದ ವಿನಯ ಎಸ್.ವಿ (22) ನೀರುಪಾಲಾದ ವಿದ್ಯಾರ್ಥಿಯಾಗಿದ್ದು, ಆತನ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ.

    ಬೆಂಗಳೂರಿನ ಖಾಸಗಿ ಫಾರ್ಮಸಿ ಕಾಲೇಜಿನ ಒಟ್ಟು 48 ವಿದ್ಯಾರ್ಥಿಗಳು ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರಲ್ಲಿ ಮೋಜು ಮಸ್ತಿ ಮಾಡಲು ತೆರಳಿ ಈ ಅವಘಡ ನಡೆದಿದೆ.

    ಅಪಾಯದಲ್ಲಿದ್ದವರನ್ನ ಗಮನಿಸಿ ಸ್ಥಳೀಯರಾದ ದುಬ್ಬಸಸಿಯ ಸರ್ವೇಶ ಮೊರ್ಜೆ ಮತ್ತು ಪಂಢರಿನಾಥ ಮೂರ್ಜೆ ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಇವರಿಗೆ ಕರಾವಳಿ ಕಾವಲು ಪೊಲೀಸ್ ಪಡೆಯವರು ಸಹಕರಿಸಿ ಹರಸಾಹಸ ಪಟ್ಟು ಒಟ್ಟು ಐವರನ್ನು ದಡಕ್ಕೆ ತಂದು ಪ್ರಾಣ ಉಳಿಸಿದ್ದಾರೆ.

    ಅಸ್ವಸ್ಥಗೊಂಡ 5 ವಿದ್ಯಾರ್ಥಿಗಳನ್ನು ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸ ಕೊಡಲಾಗಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಕುಮಟಾಕ್ಕೆ ಸಾಗಿಸಲಾಗಿದೆ.

    ಪಿ.ಐ. ವಸಂತ್ ಆಚಾರ್, ಪಿ.ಎಸ್.ಐ. ಖಾದರ್ ಬಾಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

  • ಗೋಕರ್ಣದ ತೀರದಲ್ಲಿ ಯುವಕರ ಕ್ರಿಕೆಟ್ – ಫೋಟೋ ಹಂಚಿಕೊಂಡ ಐಸಿಸಿ

    ಗೋಕರ್ಣದ ತೀರದಲ್ಲಿ ಯುವಕರ ಕ್ರಿಕೆಟ್ – ಫೋಟೋ ಹಂಚಿಕೊಂಡ ಐಸಿಸಿ

    ಕಾರವಾರ: ಕೊರೊನಾ ಲಾಕ್‍ಡೌನ್ ಹಾಗೂ ವೈರಸ್‍ನ ಹರಡುವಿಕೆಯ ಭಯದಿಂದಾಗಿ ಕ್ರಿಕೆಟ್ ಸೇರಿದಂತೆ ಹಲವು ಕ್ರೀಡಾಕೂಟಗಳು ರದ್ದಾಗಿವೆ. ಜನ ಕೂಡ ಮನೆಗಳಿಂದ ಅನಾವಶ್ಯಕವಾಗಿ ಹೊರ ಬರುವುದನ್ನು ಕಡಿಮೆ ಮಾಡಿದ್ದಾರೆ. ಈ ನಡುವೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹಂಚಿಕೊಂಡಿರುವ ಫೋಟೋವೊಂದು ಉತ್ತರ ಕನ್ನಡಿಗರ ಮನ ಗೆದ್ದಿದೆ.

    ಹೌದು, ಲಾಕ್‍ಡೌನ್ ನಿಂದಾಗಿ ಎಲ್ಲವೂ ಸ್ತಬ್ಧಗೊಂಡಿದೆ. ಕೆಲವರು ಮನೆಯಲ್ಲೇ ಒಳಾಂಗಣ ಕ್ರೀಡೆಗಳಲ್ಲಿ ತೊಡಗಿಕೊಂಡು ಟೈಮ್ ಪಾಸ್ ಮಾಡಿದರೆ, ಇನ್ನು ಕೆಲವರು ಸಾಮಾಜಿಕ ಅಂತರ ಕಾಯ್ದುಕೊಂಡು ಇತ್ತೀಚೆಗೆ ಹೊರಾಂಗಣ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ.

    https://www.facebook.com/icc/photos/a.163728620312909/3481082031910868

    ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಕೂಡ ಆರಂಭವಾಗದೇ ಕ್ರಿಕೆಟ್ ಪ್ರಿಯರಿಗೆ ಬೇಸರ ಮೂಡಿಸಿದೆ. ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 15ರವರೆಗೆ ಈ ಹಿಂದೆ ಐಪಿಎಲ್ ಅನ್ನು ಮುಂದೂಡಲಾಗಿತ್ತು. ಆದರೆ ಏಪ್ರಿಲ್‍ನಲ್ಲೂ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬರದಿದ್ದ ಕಾರಣ ಅನಿರ್ದಿಷ್ಟಾವಧಿಗೆ ಟೂರ್ನಿಯನ್ನು ರದ್ದು ಮಾಡುವುದಾಗಿ ಬಿಸಿಸಿಐ ಘೋಷಿಸಿದ್ದು ಹಲವರಿಗೆ ಬೇಸರ ಮೂಡಿಸಿದೆ. ಇದನ್ನು ಓದಿ: ಕಾರವಾರದಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರೀಡಾಂಗಣ – ಉ.ಕದಲ್ಲೇ ಏಕೆ?

    ಈ ನಡುವೆ ಇಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತನ್ನ ಫೇಸ್‍ಬುಕ್ ಖಾತೆಯಲ್ಲಿ ಗೋಕರ್ಣದ ಫೋಟೋವನ್ನು ಹಂಚಿಕೊಂಡಿದೆ. ಬಾಂಗ್ಲಾದೇಶ ಮೂಲದ, ಬೆಂಗಳೂರಿನಲ್ಲಿ ಉದ್ಯೋಗದ ನಿಮಿತ್ತ ನೆಲೆಸಿರುವ ಪೊರಗ್ ಸರ್ಕೆರ್ ಎಂಬ ಹವ್ಯಾಸಿ ಫೋಟೋಗ್ರಾಫರ್ ಕ್ಲಿಕ್ಕಿಸಿರುವ ಫೋಟೋವೊಂದನ್ನು ಐಸಿಸಿ ತನ್ನ ಫೇಸ್‍ಬುಕ್ ಪುಟದಲ್ಲಿ ಹಂಚಿಕೊಂಡಿದೆ. ಈ ಫೋಟೋದಲ್ಲಿ ಗೋಕರ್ಣದ ಕಡಲತೀರದಲ್ಲಿ ಒಂದಷ್ಟು ಯುವಕರು ಕ್ರಿಕೆಟ್ ಆಡುತ್ತಿರುವುದು ಸೆರೆಯಾಗಿದೆ.