Tag: Gold Crown

  • ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ

    ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ

    ಮುಂಬೈ: ಗುರುಪೂರ್ಣಿಮೆ ಸಂದರ್ಭದಲ್ಲೇ ಶಿರಡಿಯ ಸಾಯಿಬಾಬಾ ದೇವಸ್ಥಾನಕ್ಕೆ (Shiradi Sai Baba Temple) ಅನಾಮಧೇಯ ಭಕ್ತರೊಬ್ಬರು 59 ಲಕ್ಷದ ಚಿನ್ನದ ಕಿರೀಟ (Gold Crown) ಸೇರಿ 65 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದಾನವಾಗಿ ನೀಡಿದ್ದು, ಬಾಬಾ ಕೃಪೆಗೆ ಪಾತ್ರರಾಗಿದ್ದಾರೆ.

    ದೇಣಿಗೆ ನೀಡಲಾದ 65 ಲಕ್ಷರೂ. ಮೌಲ್ಯದ ಆರಭರಣಗಳ ಪೈಕಿ 566 ಗ್ರಾಂ ತೂಕದ 59 ಲಕ್ಷ ಮೌಲ್ಯದ ಚಿನ್ನದ ಕಿರೀಟ, 54 ಗ್ರಾಂ ತೂಕದ ಚಿನ್ನದ ಹೂವುಗಳು (ಆಭರಣ), 2 ಕೆಜಿ ತೂಕದ ಬೆಳ್ಳಿಯ ಹಾರ ಸೇರಿವೆ. ಆಭರಣವನ್ನು ಬಾಬಾಗೆ ಅರ್ಪಿಸುವಾಗ ಭಕ್ತರು ತಮ್ಮ ಹೆಸರು ಅಥವಾ ವಿಳಾಸವನ್ನ ಬಹಿರಂಗಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ

    ಭಕ್ತರು ಕಾಣಿಕೆ ನೀಡಿರುವ ಬಗ್ಗೆ ಮಾತನಾಡಿರುವ ಶಿರಡಿ ಸಾಯಿ ಟ್ರಸ್ಟ್‌ನ ಸಿಇಒ ಗೋರಕ್ಷ ಗಾಡಿಲ್ಕರ್, ಇದು ಕೇವಲ ಹಣಕಾಸಿನ ದೃಷ್ಟಿಯಿಂದ ಅಮೂಲ್ಯವಾದ ದೇಣಿಗೆಯಾಗಿರದೇ, ಆಳವಾದ ಭಕ್ತಿ ಮತ್ತು ಭಕ್ತಿಯ ಸಂಕೇತವೂ ಆಗಿದೆ. ಜೊತೆಗೆ ಸಾಯಿ ಬಾಬಾ ಭಕ್ತನ ಹೃದಯದಿಂದ ಮೂಡಿದ ಭಕ್ತಿ ಮತ್ತು ಕೃತಜ್ಞತೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: 3ನೇ ಆಷಾಢ ಸಂಭ್ರಮ; ಗಜ ಲಕ್ಷ್ಮಿ, ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ ತಾಯಿ

    ಶಿರಡಿ ಸಾಯಿಬಾಬಾ ದೇವಾಲಯದಲ್ಲಿ 1908 ರಿಂದಲೂ ಗುರು ಪೂರ್ಣಿಮೆ (Guru Purnima) ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ದೇಶಾದ್ಯಂತ ಹಾಗೂ ವಿದೇಶಿ ಭಕ್ತರಿಂದ ಹತ್ತಾರು ಕೊಡುಗೆಗಳು ದೇವಸ್ಥಾನಕ್ಕೆ ಹರಿದು ಬರುತ್ತದೆ. ಈ ಬಾರಿ 61 ದೇಶಗಳಿಂದ ವಿದೇಶಿಯರು ಪ್ರಾರ್ಥನೆ ಸಲ್ಲಿಸಲು ಬಂದಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್‌ನಲ್ಲಿ ಕೆಲಸ ಗಿಟ್ಟಿಸಿಕೊಂಡ ಕನ್ನಡತಿ

    ವ್ಯಾಸ ಪೂರ್ಣಿಮೆ ಎಂದೂ ಕರೆಯಲ್ಪಡುವ ಗುರು ಪೂರ್ಣಿಮೆಯನ್ನು ಭಾರತ, ನೇಪಾಳ, ಭೂತಾನ್ ಮತ್ತು ಇತರ ಹಲವು ದೇಶಗಳಲ್ಲಿ ಹಿಂದೂ, ಬೌದ್ಧ ಮತ್ತು ಜೈನ ಸಮುದಾಯಗಳಲ್ಲಿ ಆಚರಿಸಲಾಗುತ್ತದೆ. ಇದು ಮಹರ್ಷಿ ವೇದ ವ್ಯಾಸರ ಜನ್ಮವನ್ನು ಸ್ಮರಿಸುತ್ತದೆ.

  • ಉಡುಗೊರೆ ನೀಡಿದ್ದ ಚಿನ್ನದ ಕಿರೀಟವನ್ನ ಸರ್ಕಾರಕ್ಕೆ ಹಸ್ತಾಂತರಿಸಿದ ಕಾರಜೋಳ

    ಉಡುಗೊರೆ ನೀಡಿದ್ದ ಚಿನ್ನದ ಕಿರೀಟವನ್ನ ಸರ್ಕಾರಕ್ಕೆ ಹಸ್ತಾಂತರಿಸಿದ ಕಾರಜೋಳ

    – 140 ಗ್ರಾಂದ ಏಳು ಲಕ್ಷ ಮೌಲ್ಯದ ಕಿರೀಟ

    ಬೆಂಗಳೂರು: ಉಡುಗೊರೆಯಾಗಿ ನೀಡಿದ್ದ 140 ಗ್ರಾಂ ತೂಕವುಳ್ಳ ಚಿನ್ನದ ಕಿರೀಟವನ್ನ ಡಿಸಿಎಂ ಗೋವಿಂದ ಕಾರಜೋಳ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ನೀಡಿದ್ದಾರೆ.

    ಚಿನ್ನದ ಕಿರೀಟ ಹಸ್ತಾಂತರಿಸಿದ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿಗಳು, ವಿಜಯಪುರ ಜಿಲ್ಲೆಯ ಕಾರಜೋಳ ಗ್ರಾಮದ ಜನರು ಪ್ರೀತಿಯಿಂದ ಏಳು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಿರೀಟ ನೀಡಿದ್ದರು. ಇದೀಗ ನಿಯಮಗಳ ಪ್ರಕಾರ ವಿಜಯಭಾಸ್ಕರ್ ಅವರ ಮೂಲಕ ಉಡುಗೊರೆಯನ್ನ ಸರ್ಕಾರಕ್ಕೆ ಹಸ್ತಾಂತರಿಸಿದ್ದೇನೆ ಎಂದು ತಿಳಿಸಿದರು. ಚಿನ್ನದ ಕಿರೀಟ ಹಸ್ತಾಂತರಿಸಿದ ಕುರಿತು ಟ್ವಿಟ್ಟರ್ ಮೂಲಕ ಸಹ ಮಾಹಿತಿ ನೀಡಿದ್ದಾರೆ.

    ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮಸ್ಥರು ನನಗೆ ಸಮರ್ಪಿಸಿದ್ದ ಬಂಗಾರದ ಕಿರೀಟವನ್ನು ಇಂದು ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದೆ. ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ಕಾರಜೋಳ ಗ್ರಾಮದ ಅಭಿವೃದ್ಧಿಗಾಗಿ ರೂಪಿಸಿ ಅನುಷ್ಟಾನ ಗೊಳಿಸಿದ ಯೋಜನೆಗಳು, ನೀರಾವರಿ ಯೋಜನೆಗಳ ಅನುಷ್ಟಾನ, ಗ್ರಾಮದ ಮನೆಯ ಮಗನು ಉಪಮುಖ್ಯಮಂತ್ರಿಯಾಗಿರುವುದಕ್ಕೆ ಅತ್ಯಂತ ಪ್ರೀತಿ ಗೌರವದಿಂದ ಗ್ರಾಮಸ್ಥರು ಸನ್ಮಾನಿಸಿದ್ದರು. ಕಳೆದ 6 ವರ್ಷಗಳಿಂದ ಸನ್ಮಾನ ಮಾಡಲು ಪ್ರಯತ್ನಿಸುತ್ತಿದ್ದರು.  ಇದನ್ನೂ ಓದಿ: ನಮೋ ಹುಟ್ಟುಹಬ್ಬಕ್ಕೆ ಹನುಮನಿಗೆ 1.25 ಕೆಜಿ ತೂಕದ ಚಿನ್ನದ ಕಿರೀಟ ನೀಡಿದ ಅಭಿಮಾನಿ

    ಕಾರಜೋಳ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಒತ್ತಾಯ ಪೂರ್ವಕವಾಗಿ ಸನ್ಮಾನಿಸಿ, ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ಶಾಸಕ, ಸಚಿವರಾಗಿ ಸಲ್ಲಿಸಿದ ಸೇವೆಗಾಗಿ ಮಾಡಿದ ಸನ್ಮಾನ ಸರ್ಕಾರಕ್ಕೆ ಸಲ್ಲಬೇಕು. ಹೀಗಾಗಿ ಈ ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗೋವಿಂದ್ ಕಾರಜೋಳ, ಎಂ.ಬಿ ಪಾಟೀಲ್, ಶಿವಾನಂದ್ ಪಾಟೀಲ್‍ಗೆ ಚಿನ್ನದ ಕಿರೀಟ

  • ನಮೋ ಹುಟ್ಟುಹಬ್ಬಕ್ಕೆ ಹನುಮನಿಗೆ 1.25 ಕೆಜಿ ತೂಕದ ಚಿನ್ನದ ಕಿರೀಟ ನೀಡಿದ ಅಭಿಮಾನಿ

    ನಮೋ ಹುಟ್ಟುಹಬ್ಬಕ್ಕೆ ಹನುಮನಿಗೆ 1.25 ಕೆಜಿ ತೂಕದ ಚಿನ್ನದ ಕಿರೀಟ ನೀಡಿದ ಅಭಿಮಾನಿ

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ 69ನೇ ಹುಟ್ಟುಹಬ್ಬ ಆಚರಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ವಾರಣಾಸಿಯ ಸಂಕಟ ಮೋಚನ ದೇಗುಲದ ಹನುಮನಿಗೆ ಬರೋಬ್ಬರಿ 1.25 ಕೆಜಿ ತೂಕದ ಚಿನ್ನದ ಕಿರೀಟ ಕೊಟ್ಟು ಮೋದಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದಾರೆ.

    ವಾರಣಾಸಿ ನಿವಾಸಿ ಅರವಿಂದ್ ಸಿಂಗ್ ಅವರು ಮೋದಿ ಅವರ ಕಟ್ಟಾ ಅಭಿಮಾನಿ. ಆದ್ದರಿಂದ ಮೋದಿ ಅವರು ವಾರಣಾಸಿಯಿಂದ ಲೋಕಸಭಾ ಚುನಾವಣೆಗೆ ನಿಂತಾಗ ಗೆಲ್ಲಲಿ ಎಂದು ದೇವರಲ್ಲಿ ಹರಕೆ ಹೊತ್ತಿದ್ದರು. ಅಲ್ಲದೆ ಮೋದಿ ಅವರ ಜೊತೆ ಬಿಜೆಪಿ ಕೂಡ ಗೆದ್ದು, ಎರಡನೇ ಬಾರಿ ಅವರು ಪ್ರಧಾನಿ ಆಗಬೇಕು ಎಂದು ದೇವರಲ್ಲಿ ಬೇಡಿಕೊಂಡಿದ್ದರು. ಅಲ್ಲದೆ ಮೋದಿ ಅವರು ಎರಡನೇ ಬಾರಿ ಗೆದ್ದು, ಪ್ರಧಾನಿ ಪಟ್ಟ ಏರಿದರೆ ಬರೋಬ್ಬರಿ 1.25 ಕೆಜಿ ತೂಕದ ಚಿನ್ನದ ಕಿರೀಟ ಮಾಡಿಸಿ ಹನುಮನಿಗೆ ಅರ್ಪಿಸುವುದಾಗಿ ಹರಕೆ ಹೊತ್ತಿದ್ದರು. ಇದನ್ನೂ ಓದಿ:ಸ್ಪಚ್ಛತಾ ಅಭಿಯಾನ ನಡೆಸಿ ‘ನಮೋ’ಗೆ ಶುಭಕೋರಿದ ಈಶ್ವರಪ್ಪ

    ಅಭಿಮಾನಿ ಆಸೆಯಂತೆ ಮೋದಿ ಅವರು ಚುನಾವಣೆಯಲ್ಲಿ ಜಯಭೇರಿ ಭಾರಿಸಿ, ಎರಡನೇ ಬಾರಿ ಪ್ರಧಾನಿ ಆಗಿ ಅಧಿಕಾರ ಸ್ವೀಕರಿಸಿದರು. ಆದ್ದರಿಂದ ಮೋದಿ ಅವರ ಹುಟ್ಟುಹಬ್ಬದ ಹಿಂದಿನ ದಿನ ತಮ್ಮ ಹರಕೆ ತೀರಿಸಲು ಅರವಿಂದ್ ನಿರ್ಧರಿಸಿದ್ದರು. ಅದರಂತೆ ಸೋಮವಾರ ಸಂಕಟ ಮೋಚನ ದೇಗುಲಕ್ಕೆ ಬಂದು ಹನುಮನಿಗೆ ಚಿನ್ನದ ಕಿರೀಟ ಸಮರ್ಪಿಸಿದ್ದಾರೆ. ಈ ಮೂಲಕ ಮೋದಿ ಅವರಿಗೆ ಶುಭವಾಗಲಿ, ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಅಭಿಮಾನ ಮೆರೆದಿದ್ದಾರೆ. ಇದನ್ನೂ ಓದಿ:ಚಾಮುಂಡಿ ಬೆಟ್ಟದಲ್ಲಿ ಮೋದಿ, ಯಡಿಯೂರಪ್ಪ, ಬಿಜೆಪಿ ಹೆಸರಿನಲ್ಲಿ ಜಿಟಿಡಿ ಅರ್ಚನೆ

    ಈ ಬಗ್ಗೆ ಮಾತನಾಡಿ ಖುಷಿಯನ್ನು ಹಂಚಿಕೊಂಡ ಅರವಿಂದ್ ಅವರು, ಮೋದಿ ಅವರಿಗಾಗಿ ಹರಕೆ ಕಟ್ಟಿಕೊಂಡಿದ್ದೆ. ಅದನ್ನು ದೇವರು ನೆರವೇರಿಸಿದ್ದಾನೆ. ಆದ್ದರಿಂದ ದೇವರಿಗೆ ಚಿನ್ನದ ಕಿರೀಟ ಕೊಟ್ಟಿದ್ದೇನೆ ಎಂದರು. ಕಳೆದ 75 ವರ್ಷದಲ್ಲಿ ಭಾರತ ಕಾಣದ ಅಭಿವೃದ್ಧಿಯನ್ನು ಮೋದಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ್ದಾರೆ, ಮಾಡುತ್ತಿದ್ದಾರೆ. ಆದ್ದರಿಂದ ಮೋದಿ ಅವರ ಹುಟ್ಟುಹಬ್ಬದ ಹಿಂದಿನ ದಿನ ದೇವರಿಗೆ ಚಿನ್ನದ ಕಿರೀಟ ನೀಡಲು ನಿರ್ಧರಿಸಿದೆ. ಚಿನ್ನದಂತೆ ಮೋದಿ ಹಾಗೂ ಭಾರತದ ಭವಿಷ್ಯ ಹೊಳೆಯಲಿ. ಇದು ಕಾಶಿ ಜನತೆಯ ಪರವಾಗಿ ನಾನು ಮೋದಿ ಅವರಿಗೆ ನೀಡುತ್ತಿರುವ ಉಡುಗೊರೆ ಎಂದು ಹೇಳಿದ್ದಾರೆ.

    ಸೋಮವಾರ ತಡರಾತ್ರಿಯೇ ಮೋದಿ ಅವರು ಅಹಮದಾಬಾದ್‍ಗೆ ಆಗಮಿಸಿದ್ದರು. ಗುಜರಾತ್ ರಾಜ್ಯಪಾಲ ಆಚಾರ್ಯ ದೇವರಾತ್ ಹಾಗೂ ಅಲ್ಲಿನ ಸಿಎಂ ವಿಜಯ್ ರೂಪಾನಿ ಅವರು ಪ್ರಧಾನಿ ಅವರನ್ನು ವಿಮಾನ ನಿಲ್ದಾಣದಲ್ಲಿ ಭರಮಾಡಿಕೊಂಡರು. ಮೋದಿ ಅವರು ಇಂದು ಹುಟ್ಟುಹಬ್ಬದ ಪ್ರಯುಕ್ತ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ನರ್ಮದಾ ನದಿಯ ಯೋಜನೆ ಕಾರ್ಯಕ್ರಮಗಳನ್ನು ಪರಿಶೀಲಿಸಲಿದ್ದಾರೆ.

    ನಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಬಿಜೆಪಿ ನಾಯಕರು ಹಾಗೂ ಅಭಿಮಾನಿಗಳು ಸಡಗರ ಸಂಭ್ರಮದಿಂದ ದೇಶದೆಲ್ಲೆಡೆ ಆಚರಿಸುತ್ತಿದ್ದಾರೆ. ನಮೋ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ‘ಸೇವಾ ಸಂಪ್ತಾಹ’ ಕಾರ್ಯಕ್ರಮವನ್ನು ಸೆ. 14 ರಿಂದ 20ರವರೆಗೆ ಆಯೋಜಿಸಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಹಲವು ಸಾಮಾಜಮುಖಿ ಕೆಲಸವನ್ನು ಮಾಡುತ್ತಿದ್ದಾರೆ.