Tag: gold Earring

  • ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ವಾರಣಾಸಿಗೆ ಪರಾರಿಯಾದ

    ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ವಾರಣಾಸಿಗೆ ಪರಾರಿಯಾದ

    ಮುಂಬೈ: ಚಿನ್ನದ ಕಿವಿಯೋಲೆಯನ್ನು (Gold Earring) ಕೊಟ್ಟಿಲ್ಲವೆಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಪತ್ನಿಯನ್ನೇ (Wife) ಕೊಂದು ಪತಿಯೊಬ್ಬ (Husband) ಪರಾರಿಯಾಗಿದ್ದಾರೆ,

    32 ವರ್ಷದ ವ್ಯಕ್ತಿಯನ್ನು ತನ್ನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಇತ್ತೀಚೆಗೆ ಆತ ತನ್ನ ತಾಯಿಯ ಅಂತ್ಯಸಂಸ್ಕಾರದ ನಂತರದ ವಿಧಿವಿಧಾನಗಳನ್ನು ಮಾಡಲು ಹಣ ಕಡಿಮೆ ಇರುವುದರಿಂದ ಪತ್ನಿ ಬಳಿ ತನ್ನ ಚಿನ್ನದ ಕಿವಿಯೋಲೆಗಳನ್ನು ನೀಡಲು ಒತ್ತಾಯಿಸಿದ್ದಾನೆ. ಅದರೆ ಚಿನ್ನದ ಕಿವಿಯೋಲೆಯನ್ನು ನೀಡಲು ಆಕೆ ನಿರಾಕರಿಸಿದ್ದಾಳೆ. ಇದನ್ನೂ ಓದಿ: ಬೇರೆಯವಳು ಕಾಲ್ ಪಿಕ್ ಮಾಡಿದ್ದಕ್ಕೆ ಬಾಯ್‍ಫ್ರೆಂಡ್ ಮನೆಗೆ ಬೆಂಕಿ ಇಟ್ಲು

    ಇದರಿಂದ ಕೋಪಗೊಂಡ ಪತಿ ನ.19ರಂದು ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿ ಮಹಾರಾಷ್ಟç ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಆರೋಪಿ ವಾರಣಾಸಿಗೆ ಪರಾರಿಯಾಗುತ್ತಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಮೀರಾ ಭಯಂದರ್ ವಸಾಯಿ ವಿರಾರ್ (ಎಂಬಿವಿವಿ) ಪೊಲೀಸರ ತಂಡವು ಲಲಿತ್‌ಪುರಕ್ಕೆ ಧಾವಿಸಿ ರೈಲಿನಲ್ಲಿ ಬಂಧಿಸಿದೆ. ಇದನ್ನೂ ಓದಿ: ಪತ್ನಿಯನ್ನು ಕೊಂದು ಆಕೆಯ ಶವವನ್ನು ತುಂಡರಿಸಿ ವಿಕೃತಿ ಮೆರೆದ ಪತಿ

    Live Tv
    [brid partner=56869869 player=32851 video=960834 autoplay=true]

  • ಬಂಗಾರದ ಕಿವಿಯೋಲೆಗಾಗಿ 4ರ ಬಾಲಕಿ ಜೀವ ತೆಗೆದ ಆಂಟಿಯರು

    ಬಂಗಾರದ ಕಿವಿಯೋಲೆಗಾಗಿ 4ರ ಬಾಲಕಿ ಜೀವ ತೆಗೆದ ಆಂಟಿಯರು

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ಜೊತೆ ಬಂಗಾರದ ಕಿವಿಯೋಲೆಗಾಗಿ ನೆರೆಮನೆಯ ಇಬ್ಬರು ಮಹಿಳೆಯರು 4 ವರ್ಷದ ಬಾಲಕಿ ಜೀವವನ್ನೇ ತೆಗೆದಿದ್ದಾರೆ.

    ಮುರ್ಷಿದಾಬಾದ್ ಜಿಲ್ಲೆಯ ಖಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. 4 ವರ್ಷದ ಬಾಲಕಿ ತನ್ನ ಕುಟುಂಬಸ್ಥರೊಂದಿಗೆ ಖಾರ್‍ಗ್ರಾಮದಲ್ಲಿ ವಾಸಿಸುತ್ತಿದ್ದಳು. ಬಾಲಕಿಯ ನೆರೆಮನೆಯಲ್ಲಿದ್ದ ಇಬ್ಬರು ಮಹಿಳೆಯರು ಆಕೆಯ ಮನೆಯವರು ಜೊತೆ ಒಳ್ಳೆಯ ಸ್ನೇಹ ಬೆಳೆಸಿದ್ದರು. ಆದರೆ ಬಾಲಕಿ ಕಿವಿಯಲ್ಲಿದ್ದ ಬಂಗಾರ ಓಲೆ ಮೇಲೆ ಮಹಿಳೆಯರಿಗೆ ಕಣ್ಣಿತ್ತು. ಹೀಗಾಗಿ ಬಂಗಾರದ ಆಸೆ ಪುಟ್ಟ ಜೀವವನ್ನೇ ಮಹಿಳೆಯರು ಬಲಿ ಪಡೆದಿದ್ದಾರೆ.

    ಮಂಗಳವಾರ ಬಾಲಕಿ ಮನೆಯಿಂದ ಕಾಣೆಯಾಗಿದ್ದಳು. ಈ ಬಗ್ಗೆ ಪೋಷಕರು ಮಗಳು ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ಕೊಟ್ಟಿದ್ದರು. ಆದರೆ ಬುಧವಾರ ರಕ್ತದ ಮಡುವಿನಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಆರೋಪಿ ಮಹಿಳೆಯರು ಸಿಕ್ಕಿಬಿದ್ದಾರೆ. ಮಹಿಳೆಯರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

    ಬಾಲಕಿ ಕಿವಿಯಲ್ಲಿದ್ದ ಬಂಗಾರದ ಓಲೆಗಾಗಿ ಆಕೆಯನ್ನು ಕೊಲೆ ಮಾಡಿದೆವು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕೃತ್ಯದಲ್ಲಿ ಬೇರೆ ಯಾರು ಭಾಗಿಯಾಗಿಲ್ಲ, ಕೇವಲ ಕಿವಿಯೋಲೆಗಾಗಿ ನಾವು ಕೊಲೆ ಮಾಡಿದ್ದೇವೆ ಎಂದು ಮಹಿಳೆಯರು ಹೇಳಿದ್ದಾರೆ.

    ಸದ್ಯ ಈ ಸಂಬಂಧ ಪೊಲೀಸರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದು, ಬುಧವಾರವೇ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.