Tag: Gold Mines

  • KGF ಚಿನ್ನದ ಗಣಿಯಲ್ಲಿ ಮತ್ತೆ ಹೊಳೆಯುವ ಚಿನ್ನ – ಟೆಂಡರ್ ಕರೆದ ಕೇಂದ್ರ

    KGF ಚಿನ್ನದ ಗಣಿಯಲ್ಲಿ ಮತ್ತೆ ಹೊಳೆಯುವ ಚಿನ್ನ – ಟೆಂಡರ್ ಕರೆದ ಕೇಂದ್ರ

    ಕೋಲಾರ: 22 ವರ್ಷಗಳ ನಂತರ ವಿಶ್ವ ಪ್ರಸಿದ್ಧ ಕೆಜಿಎಫ್ (KGF) ಚಿನ್ನದ (Gold) ಗಣಿಯಲ್ಲಿ ಮತ್ತೆ ಚಿನ್ನ ಹೊಳೆಯುವ ಸಾಧ್ಯತೆ ಗೋಚರವಾಗುತ್ತಿದೆ. ಕೆಜಿಎಫ್‍ನಲ್ಲಿ ಚಿನ್ನ ತೆಗೆಯಲು ಮನಸ್ಸು ಮಾಡಿರುವ ಕೇಂದ್ರ ಸರ್ಕಾರ ಎರಡು ದಶಕಗಳ ನಂತರ ಕೆಜಿಎಫ್ ಚಿನ್ನದ ಗಣಿಯ ಬಗ್ಗೆ ಆಸಕ್ತಿ ವಹಿಸಿರುವುದು ಸಂತಸ ತಂದಿದೆ. ಆದ್ರೆ ಸರ್ಕಾರ ಕಾರ್ಮಿಕರ ಹಿತಾಸಕ್ತಿ ಮರೆತಿದ್ದು ಬೇಸರ ಮೂಡಿಸಿದೆ.

    ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಹೆಗ್ಗಳಿಗೆ ಕೋಲಾರದ ಕೆಜಿಎಫ್ ಚಿನ್ನದ ಗಣಿಗೆ ಸಲ್ಲುತ್ತದೆ. ಆದರೆ 2001ರಲ್ಲಿ ಚಿನ್ನದ ಗಣಿಗೆ ಬೀಗ ಹಾಕಿದ ನಂತರ, ಕೇಂದ್ರ ಸರ್ಕಾರ ಕೆಜಿಎಫ್ ಚಿನ್ನದ ಗಣಿಯನ್ನು ಇಲ್ಲಿನ ಕಾರ್ಮಿಕರನ್ನು ಅವರ ಸಂಕಷ್ಟಗಳು ಎಲ್ಲವನ್ನೂ ಮರೆತು ಹೋಗಿತ್ತು. ಚಿನ್ನದ ಗಣಿಗೆ ಬೀಗ ಹಾಕಿದ್ದ ಸರ್ಕಾರ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ ಯಾವುದೇ ಪರಿಹಾರ ನೀಡದೇ, ನಿವೃತ್ತಿ ಪರಿಹಾರವನ್ನೂ ನೀಡಿರಲಿಲ್ಲ. ಸುಮಾರು 3,500 ಜನ ಕಾರ್ಮಿಕರಿಗೆ 52 ಕೋಟಿ ರೂಪಾಯಿ ಪರಿಹಾರ ನೀಡಬೇಕಿತ್ತು. ಯಾವುದನ್ನೂ ನೀಡದೆ ಚಿನ್ನದ ಗಣಿಗೆ ಬೀಗ ಹಾಕಿ ಸುಮ್ಮನಾಗಿತ್ತು. ಅತ್ತ ಕಾರ್ಮಿಕ ಸಂಘಟನೆಗಳು ಹತ್ತಾರು ವರ್ಷಕಾಲ ನ್ಯಾಯಕ್ಕಾಗಿ ಸರ್ಕಾರಗಳ ಬಳಿ, ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಲೇ ಇದ್ದಾರೆ. ಇನ್ನು ಕಾರ್ಮಿಕರಿಗೆ ಪರಿಹಾರ ಸಿಕ್ಕಿಲ್ಲ. ಇದನ್ನೂ ಓದಿ: ತುರಹಳ್ಳಿ ಫಾರೆಸ್ಟ್‌ನಲ್ಲಿ ಆಪರೇಷನ್ ಚಿರತೆ- ಬೆಂಗ್ಳೂರಿನಲ್ಲೂ `ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ

    ಏಕಾಏಕಿ ಸರ್ಕಾರ ಈಗ ಕೆಜಿಎಫ್‍ನಲ್ಲಿ ಇರುವ ಚಿನ್ನವನ್ನು ತೆಗೆದ ನಂತರ ಹೊರ ಹಾಕಿರುವ ಮಣ್ಣಿನಲ್ಲಿ ಅಂದರೆ ಕೆಜಿಎಫ್‍ನಲ್ಲಿರುವ 13 ಸೈನೈಡ್ ಗುಡ್ಡಗಳಲ್ಲಿ ಚಿನ್ನವನ್ನು ಮತ್ತೊಮ್ಮೆ ಶೋಧಿಸುವ ಕೆಲಸಕ್ಕೆ ಟೆಂಡರ್ ಕರೆದಿದೆ. ಕೆಜಿಎಫ್ ನಗರದ ಸುತ್ತಮುತ್ತ 13 ಸೈನೈಡ್ ಗುಡ್ಡಗಳಿದ್ದು ಅದರಲ್ಲಿ ಸುಮಾರು 35 ಲಕ್ಷ ಮಿಲಿಯನ್ ಟನ್ ಮಣ್ಣಿದೆ. ಸಂಶೋಧನೆಗಳ ಪ್ರಕಾರ ಒಂದು ಟನ್ ಮಣ್ಣಿನಲ್ಲಿ ಸರಾಸರಿ ಒಂದು ಗ್ರಾಮ್ ಚಿನ್ನ ಸಿಗುತ್ತದೆ. ಅದರಂತೆ 25 ಟನ್ ಚಿನ್ನ ಸಿಗುವ ನಿರೀಕ್ಷೆ ಇದೆ. ಸದ್ಯ ಆ ಮಣ್ಣಿನಲ್ಲಿ ಚಿನ್ನವನ್ನು ಹೊರತೆಗೆಯುವ ಕೆಲಸ ಆರಂಭಿಸಿದ್ದು ಮೊದಲ ಹಂತದ ಟೆಂಡರ್ ಪ್ರಕ್ರಿಯೆ ಶುರುಮಾಡಿದೆ. ಇದನ್ನೂ ಓದಿ: ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ

    22 ವರ್ಷಗಳ ಹಿಂದೆ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕೆಲಸ ಕಳೆದುಕೊಂಡ ನಂತರ ಸಾವಿರಾರು ಕಾರ್ಮಿಕರು ಕೆಲಸವಿಲ್ಲದೆ ಬೀದಿಗೆ ಬಿದ್ದರು. ಕಾರ್ಮಿಕರ ಕುಟುಂಬಗಳು ಬೀದಿಗೆ ಬಿದ್ದ ಪರಿಸ್ಥಿತಿಯಲ್ಲಿ ಸರ್ಕಾರ ಕಾರ್ಮಿಕರಿಗೆ ಯಾವುದೇ ರೀತಿಯ ಪರಿಹಾರ ರೂಪಿಸಲಿಲ್ಲ. ಕೊನೆ ಪಕ್ಷ ಕಾರ್ಮಿಕರಿಗೆ ಆರೋಗ್ಯ, ಶಿಕ್ಷಣ, ಉದ್ಯೋಗ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಲಿಲ್ಲ. ಚಿನ್ನದ ಗಣಿಗೆ ಬೀಗ ಹಾಕಿದ ನಂತರ ಕೆಜಿಎಫ್‍ನ್ನು ಮರೆತೇ ಹೋಗಿತ್ತು. ಆದರೆ ಈಗ ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಇರುವ ಕಾರಣದಿಂದಾಗಿ ಕೇಂದ್ರ ಸರ್ಕಾರ ಇಷ್ಟು ದಿನ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸಿ ಈಗ ಏಕಾಏಕಿ ಚಿನ್ನಕ್ಕಾಗಿ ಕೆಜಿಎಫ್ ಮೇಲೆ ಪ್ರೀತಿ ತೋರಿಸುವ ನಾಟಕ ಆಡುತ್ತಿದೆ ಎಂದು ಕೆಜಿಎಫ್ ಶಾಸಕಿ ರೂಪಕಲಾ ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೋಲಾರದ ಚಿನ್ನದ ಕಳ್ಳನಿಗೂ ಕೊರೊನಾ- ಬಂಧಿಸಿದ ಪೊಲೀಸರಿಗೂ ಸೋಂಕಿನ ಭೀತಿ

    ಕೋಲಾರದ ಚಿನ್ನದ ಕಳ್ಳನಿಗೂ ಕೊರೊನಾ- ಬಂಧಿಸಿದ ಪೊಲೀಸರಿಗೂ ಸೋಂಕಿನ ಭೀತಿ

    – ಜೈಲಿನ 20 ಖೈದಿಗಳಿಗೂ ಕ್ವಾರಂಟೈನ್

    ಕೋಲಾರ: ಚಿನ್ನದ ಕಳ್ಳರು ನೂರಾರು ಅಡಿ ಆಳದ ಗಣಿ ಪ್ರದೇಶದಲ್ಲಿ ಸಿಲುಕಿ ಭಾರೀ ಸುದ್ದಿಯಾಗಿದ್ದರು. ಗಣಿಗೆ ಇಳಿದಿದ್ದ ಐವರಲ್ಲಿ ಇಬ್ಬರು ಮಣ್ಣಾದರೆ, ಮತ್ತೋರ್ವನ ಶವ ಪಾತಾಳ ಸೇರಿದೆ. ಇದೀಗ ಗಣಿಯಿಂದ ಪಾರಾಗಿ ಬಂದ ಕಳ್ಳನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಕೆಜಿಎಫ್ ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಇಳಿದ 5 ಜನರಲ್ಲಿ 3 ಜನ ಮೃತಪಟ್ಟರೆ, ಮತ್ತೊಬ್ಬನಿಗೆ ಕೊರೊನಾ ವಕ್ಕರಿಸಿದೆ. ಕೋಲಾರದ ಕೆಜಿಎಫ್ ನಲ್ಲಿ ಮೇ-13 ರಂದು ರಾತ್ರಿ ಕೆಜಿಎಫ್ ನಗರದ ಮಾರಿಕುಪ್ಪಂನ ಮೈಸೂರು ಮೈನ್ಸ್? ನಲ್ಲಿ ಕೆಜಿಎಫ್‍ನ ಐವರು ನಿವಾಸಿಗಳು ಚಿನ್ನದ ಗಣಿಯಲ್ಲಿ ಚಿನ್ನ ಕಳ್ಳತನ ಮಾಡಲು ತೆರಳಿದ್ದರು, ಈ ಪೈಕಿ ಮೂವರು ಚಿನ್ನದ ಗಣಿ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಕೆಜಿಎಫ್ ನಗರದ ಬೀರ್ ಶಾಪ್‍ನ ದೊಡ್ಡಿಯ ನಿವಾಸಿ ಗಳಾದ ಪಡಿಯಪ್ಪ, ಜೊಸೆಫ್, ಕಂದ, ಮೃತಪಟ್ಟಿದ್ದಾರೆ.

    ವಿಕ್ಟರ್ ಹಾಗೂ ಕಾರ್ತಿಕ್‍ರನ್ನು ಬಂಧಿಸಲಾಗಿದೆ. ಆದರೆ ಕಿಂಗ್‍ಪಿನ್ ರಿಚರ್ಡ್ ತಲೆ ಮರೆಸಿಕೊಂಡಿದ್ದ, ಮೇ-14ರ ಸಂಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆತನಿಗೆ ಉಸಿರಾಟದ ತೊಂದರೆ ಇದೆ ಎಂದು ಹೇಳಿಕೊಂಡಿದ್ದ. ಇದಕ್ಕೆ ನ್ಯಾಯಾಧೀಶರ ಆದೇಶದ ಮೇರೆಗೆ ರಿಚರ್ಡ್‍ಗೆ ಕೊರೊನಾ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ರೋಗಿ ನಂ.1146 ರಿಚರ್ಡ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ರಿಚರ್ಡ್‍ನನ್ನು ಬಂಧಿಸಲು ಹೋಗಿದ್ದ, ಬಂಧಿಸಿ ಕರೆ ತಂದಿದ್ದ 9 ಜನ ಪೊಲೀಸರಿಗೂ ಇದೀಗ ಕೊರೊನಾ ಭಯ ಉಂಟಾಗಿದೆ. ಆಘಾತಗೊಂಡಿದ್ದ 9 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಬಂಧಿಸಿ ಕಳಿಸಿದ್ದ ವೇಳೆ ಕಾರಾಗೃಹದಲ್ಲೂ ಪ್ರತ್ಯೇಕ ಸೆಲ್‍ನಲ್ಲಿ ಇರಿಸಲಾಗಿತ್ತು. ಆದರೂ ಜೈಲಿನಲ್ಲಿದ್ದ ಸುಮಾರು 20 ಜನ ಖೈದಿಗಳನ್ನು ಜೈಲಿನಲ್ಲೇ ಕ್ವಾರಂಟೈನ್ ಮಾಡಿ, ನಿಗಾ ವಹಿಸಲಾಗಿದೆ.