Tag: Gold seize

  • ಅಕ್ರಮವಾಗಿ ಸಾಗಿಸುತ್ತಿದ್ದ 9 ಕೆಜಿಗೂ ಅಧಿಕ ಚಿನ್ನ ಜಪ್ತಿ – ಇಬ್ಬರು ಪ್ರಯಾಣಿಕರು ಅರೆಸ್ಟ್‌

    ಅಕ್ರಮವಾಗಿ ಸಾಗಿಸುತ್ತಿದ್ದ 9 ಕೆಜಿಗೂ ಅಧಿಕ ಚಿನ್ನ ಜಪ್ತಿ – ಇಬ್ಬರು ಪ್ರಯಾಣಿಕರು ಅರೆಸ್ಟ್‌

    ಮುಂಬೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai International Airport) ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಮುಂಬೈ ಪೊಲೀಸರು (Mumbai Police), ಬಂಧಿತರಿಂದ 7.69 ಕೋಟಿ ರೂ. ಮೌಲ್ಯದ 9487 ಗ್ರಾಂ (9.48 ಕೆಜಿ) ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

    ಐಎಕ್ಸ್ 1762 ವಿಮಾನದಲ್ಲಿ ಜೈಪುರದಿಂದ (Jaipur) ಮುಂಬೈಗೆ (Mumbai) ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದು, 9487 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.ಇದನ್ನೂ ಓದಿ: ಕಲ್ಯಾಣಿಯಲ್ಲಿ ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವು

    ಇಬ್ಬರೂ ಪ್ರಯಾಣಿಕರು ಸ್ವತಃ ಹೇಳಿಕೆಯನ್ನು ನೀಡಿದ್ದು, ಕಳ್ಳತನ ಮಾಡಿದ್ದ ಚಿನ್ನವನ್ನು ವಿಮಾನದಲ್ಲಿ ಬಚ್ಚಿಟ್ಟಿದ್ದೇವು ಎಂದು ಒಪ್ಪಿಕೊಂಡಿದ್ದಾರೆ. ಜೊತೆಗೆ ಇಬ್ಬರು ಪ್ರಯಾಣಿಕರು ನಕಲಿ ಗುರುತಿನ ಚೀಟಿ ಉಪಯೋಗಿಸಿ ಪ್ರಯಾಣ ಮಾಡುತ್ತಿರುವುದಾಗಿ ತಿಳಿದುಬಂದಿದೆ.

    ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಮುಂಬೈ ಡಿಆರ್‌ಐ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ

  • ಕರ್ನಾಟಕದಿಂದ ಕೇರಳಕ್ಕೆ ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 4 ಬ್ಯಾಗಲ್ಲಿ ಸಾಗಾಟವಾಗ್ತಿತ್ತು 34 ಕೆಜಿ ಚಿನ್ನ!

    ಕರ್ನಾಟಕದಿಂದ ಕೇರಳಕ್ಕೆ ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 4 ಬ್ಯಾಗಲ್ಲಿ ಸಾಗಾಟವಾಗ್ತಿತ್ತು 34 ಕೆಜಿ ಚಿನ್ನ!

    ಬೆಂಗಳೂರು: ಕರ್ನಾಟಕದಿಂದ ಕೇರಳಕ್ಕೆ 34 ಕೆಜಿ ಚಿನ್ನವನ್ನು ಅಕ್ರಮವಾಗಿ ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಕೇರಳದ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಬಸ್ ನಲ್ಲಿ ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಲ್ಲಿನ ತೋಲ್ಪೆಟ್ಟಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ 11 ಕೋಟಿ ಮೌಲ್ಯದ 34 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಇಂಟೆಲಿಜೆನ್ಸ್ ಇನ್ಸ್ ಪೆಕ್ಟರ್ ಎ.ಜೆ.ಶಾಜಿ ಹೇಳಿದ್ದಾರೆ. ಅಕ್ರಮ ಚಿನ್ನ ಹಾಗೂ ಮಾದಕ ವಸ್ತುಗಳ ಸಾಗಾಟ ರಾತ್ರಿಕಾಲದಲ್ಲೇ ನಡೆಯುತ್ತವೆ. ಕೇರಳ ಹಾಗೂ ಕರ್ನಾಟಕ ಗಡಿಯಲ್ಲಿ ರಾತ್ರಿ ವೇಳೆಯಲ್ಲಿ ತೆರೆದಿರುವ ಚೆಕ್ ಪೋಸ್ಟ್ ತೋಲ್ಪೆಟ್ಟಿ ಮಾತ್ರ. ಹೀಗಾಗಿ ಯಾವುದೇ ಅಕ್ರಮ ಸಾಗಾಟ ನಡೆದರೂ ಈ ಚೆಕ್ ಪೋಸ್ಟ್ ಮೂಲಕವೇ ನಡೆಯಬೇಕು. ಮುಂಜಾನೆ 4 ಗಂಟೆಗೆ ಈ ದಾರಿಯಲ್ಲಿ ಸಂಚರಿಸುತ್ತಿದ್ದ ಲಕ್ಷುರಿ ಬಸ್ ತಪಾಸಣೆ ವೇಳೆ ನಮಗೆ 34 ಕೆಜಿ ಚಿನ್ನ ಸಿಕ್ಕಿದೆ ಎಂದು ಹೇಳಿದ್ದಾರೆ.

    ಬಂಧಿತರನ್ನು ಶಂಕೇಶ್ ಬಿ ಜೈನ್, ಅಭಯ್ ಎಂ ಜೈನ್, ಚಾಂಬರಂ ದೇವಸಿ, ಮದನ್ ಲಾಲ್ ದೇವಸಿ, ವಿಕ್ರಮ್ ಸಿ ಹಾಗೂ ಕಮಲೇಶ್ ಜೈನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ಕಾಲೇಜ್ ಬ್ಯಾಗ್ ಹಾಗೂ 2 ಟ್ರಾವೆಲ್ ಬ್ಯಾಗ್ ಸೇರಿ ಒಟ್ಟು 4 ಬ್ಯಾಗ್ ಗಳಲ್ಲಿ ಯಾರಿಗೂ ಸಂಶಯ ಬಾರದಂತೆ ಪ್ಯಾಕ್ ಮಾಡಿದ್ದರು. ಬಂಧಿತರಲ್ಲಿ ಓರ್ವ ಬೆಂಗಳೂರಿನ ಜ್ಯುವೆಲ್ಲರಿ ಮಳಿಗೆಯೊಂದರ ಮಾಲೀಕರ ಪುತ್ರ ಎಂದು ತನಿಖೆ ವೇಳೆ ಬಯಲಾಗಿದೆ ಎಂದು ಇನ್ಸ್ ಪೆಕ್ಟರ್ ಶಾಜಿ ಹೇಳಿದ್ದಾರೆ.

    ಬಂಧಿತರು ಮಾದಕ ವಸ್ತುಗಳನ್ನು ಕೂಡಾ ಅಕ್ರಮವಾಗಿ ಸಾಗಿಸುತ್ತಿದ್ದರು. ಸದ್ಯ ಬಂಧಿತರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಬೆಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕೇಂದ್ರ ಕಚೇರಿಗೂ ಮಾಹಿತಿ ನೀಡಿದ್ದೇವೆ ಎಂದು ಶಾಜಿ ಹೇಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಚಿನ್ನದ ಅಕ್ರಮ ಸಾಗಾಟ ಕೇರಳದಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಗಿದೆ. ತೆರಿಗೆಯಿಂದ ತಪ್ಪಿಸಿಕೊಳ್ಳಲು ಸಾಮಾನ್ಯವಾಗಿ ಚಿನ್ನವನ್ನು ಈ ರೀತಿ ಅಕ್ರಮವಾಗಿ ಸಾಗಾಟ ಮಾಡುತ್ತಾರೆ. 11 ಕೋಟಿ ಮೌಲ್ಯದ ಚಿನ್ನಕ್ಕೆ ಸುಮಾರು 65 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆ ಮುಂದುವರೆಸಲಿದ್ದಾರೆ.