Tag: gold suresh

  • ‘ಗುಗ್ಗು ನನ್ನ ಮಗ’ ಎಂದ ರಜತ್- Bigg Boss ಡೋರ್ ಓಪನ್ ಮಾಡಿ ಎಂದು ಪಟ್ಟು ಹಿಡಿದ ಸುರೇಶ್

    ‘ಗುಗ್ಗು ನನ್ನ ಮಗ’ ಎಂದ ರಜತ್- Bigg Boss ಡೋರ್ ಓಪನ್ ಮಾಡಿ ಎಂದು ಪಟ್ಟು ಹಿಡಿದ ಸುರೇಶ್

    ಬಿಗ್ ಬಾಸ್‌ಗೆ (Bigg Boss Kannada 11)  ಶೋಭಾ (Shobha Shetty) ಮತ್ತು ರಜತ್ (Rajath) ವೈಲ್ಡ್ ಕಾರ್ಡ್ ಎಂಟ್ರಿ ಬೆನ್ನಲ್ಲೇ ಸ್ಪರ್ಧಿಗಳ ನಡುವಿನ ಫೈಟ್ ಇನ್ನೊಂದು ಹಂತಕ್ಕೆ ತಲುಪಿದೆ. ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಟಾಸ್ಕ್ ಆಡುವಾಗ ಗೋಲ್ಡ್ ಸುರೇಶ್‌ಗೆ ಅವಮಾನಿಸಿದ್ದಾರೆ. ಅದಕ್ಕೆ ತಾವು ಆಟ ಆಡಲ್ಲ. ಬಾಗಿಲು ತೆಗಿಯಿರಿ ಎಂದು ಬಿಗ್ ಬಾಸ್ ಬಳಿ ಸುರೇಶ್ ಮನವಿ ಮಾಡಿಕೊಂಡಿದ್ದಾರೆ.

    ಇಂದಿನ ಸಂಚಿಕೆಯಲ್ಲಿ ‘ಬಿಗ್ ಬಾಸ್’ ಟಾಸ್ಕ್ ಒಂದನ್ನು ನೀಡಿದ್ದಾರೆ. ಕೊಳವೆ ಮೂಲಕ ಬರುವ ಚೆಂಡನ್ನು ಎತ್ತಿಕೊಂಡು ತಮ್ಮ ತಂಡಕ್ಕೆ ಇರುವ ಮೀಸಲಿರುವ ಚೌಕಟ್ಟಿನಲ್ಲಿ ಇಡಬೇಕು ಎಂದು ‘ಬಿಗ್ ಬಾಸ್’ ಆಟದ ನಿಯಮದಲ್ಲಿತ್ತು. ಈ ಟಾಸ್ಕ್‌ನಲ್ಲಿ ರಜತ್ ಮತ್ತು ಗೋಲ್ಡ್ ಸುರೇಶ್ (Gold Suresh) ನಡುವೆ ಬಿಗ್ ಫೈಟ್ ನಡೆದಿದೆ. ಇದನ್ನೂ ಓದಿ:ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು: ಡಿವೋರ್ಸ್ ಬಗ್ಗೆ ಎ.ಆರ್. ರೆಹಮಾನ್ ರಿಯಾಕ್ಷನ್

    ಅಂತೆಯೇ ಆಟ ಆರಂಭವಾಗಿದೆ. ಈ ವೇಳೆ, ಗೋಲ್ಡ್ ಸುರೇಶ್ ಜೊತೆ ಉಗ್ರಂ ಮಂಜು (Ugramm Manju) ಮಾತುಕತೆ ನಡೆಸುತ್ತಿರುತ್ತಾರೆ. ಇಬ್ಬರ ನಡುವಿನ ವಾಗ್ವಾದಕ್ಕೆ ರಜತ್ ಎಂಟ್ರಿಯಾಗಿ ಕೆಲವು ಪದಗಳನ್ನು ಗೋಲ್ಡ್ ಸುರೇಶ್‌ಗೆ ಬಳಸಿದ್ದಾರೆ. ಗುಗ್ಗು ನನ್ನ ಮಗ, ವೇಸ್ಟ್ ನನ್ನ ಮಗ ಎಂಬ ಪದಗಳನ್ನು ರಜತ್ ಬಳಸಿ ಸುರೇಶ್‌ಗೆ ಕೌಂಟರ್ ಕೊಟ್ಟಿದ್ದಾರೆ. ತಮ್ಮ ಮೇಲೆ ಬಳಕೆ ಆಗಿರುವ ಪದಗಳು ನಿಂದಿಸಿರುವ ರೀತಿ ನನಗೆ ಬೇಸರ ಆಗಿದೆ. ಬಿಗ್ ಬಾಸ್ ಅವರು ನನಗೆ ಮಗನೆ, ಗಿಗನೆ ಎಂದೆಲ್ಲ ಹೇಳ್ತಾರೆ. ಇವನು ನನ್ನ ಅಪ್ಪ ಅಲ್ಲ. ಬಿಗ್ ಬಾಸ್ ನಾನು ಆಟ ಆಡಲ್ಲ. ಬಿಗ್ ಬಾಸ್ ಬಾಗಿಲು ಓಪನ್ ಮಾಡಿ ಎಂದು ಡೋರ್ ತಟ್ಟಿದ್ದಾರೆ. ಸುರೇಶ್‌ಗೆ ಶಿಶಿರ್‌, ಮೋಕ್ಷಿತಾ ಅದೆಷ್ಟೇ ಸಮಾಧಾನ ಮಾಡಿದರು ಕೇಳೋ ಪರಿಸ್ಥತಿಯಲ್ಲಿ ಅವರಿಲ್ಲ.

    ಈ ಪ್ರೋಮೋ ನೋಡಿ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಎಪಿಸೋಡ್‌ಗಾಗಿ ಅಭಿಮಾನಿಗಳು ಎದುರು ನೋಡಿದ್ದಾರೆ. ದೊಡ್ಮನೆಗೆ ಬರುತ್ತಿದ್ದಂತೆಯೇ ವೈಲ್ಡ್ ಕಾರ್ಡ್ ಸ್ಪರ್ಧಿಗಳು ವೈಲ್ಡ್ ಆಗಿ ಆಟ ಆಡುತ್ತಿದ್ದಾರೆ.

  • BBK 11: ದೊಡ್ಮನೆಯ 4ನೇ ಸ್ಪರ್ಧಿಯಾಗಿ ಗೋಲ್ಡ್‌ ಸುರೇಶ್‌

    BBK 11: ದೊಡ್ಮನೆಯ 4ನೇ ಸ್ಪರ್ಧಿಯಾಗಿ ಗೋಲ್ಡ್‌ ಸುರೇಶ್‌

    ದೊಡ್ಮನೆಗೆ ಉದ್ಯಮಿ, ರೈತ ಗೋಲ್ಡ್‌ ಸುರೇಶ್‌ ಕಾಲಿಟ್ಟಿದ್ದಾರೆ. ಬಿಗ್‌ ಬಾಸ್‌ ಕನ್ನಡ 11ರ (Bigg Boss Kannada 11) 4ನೇ ಸ್ಪರ್ಧಿಯಾಗಿ ಗೋಲ್ಡ್‌ ಸುರೇಶ್‌ (Gold Suresh) ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:BBK 11: ದೊಡ್ಮ,ನೆ ಎಂಟ್ರಿ ಕೊಡಲಿದ್ದಾರೆ ಮೋಕ್ಷಿತಾ ಪೈ

    ಗೋಲ್ಡ್‌ ಸುರೇಶ್‌ ಅವರು ಮೂಲತಃ ಉತ್ತರ ಕರ್ನಾಟಕದ ಮೂಲದವರಾಗಿದ್ದಾರೆ. ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ಇರುವ ಗೋಲ್ಡ್‌ ಸುರೇಶ್‌ ಚಿನ್ನದ ವ್ಯಾಪಾರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇದೀಗ ಮೊದಲ ಕ್ಯಾಮೆರಾ ಮುಂದೆ ಸುರೇಶ್‌ ಬಂದಿದ್ದಾರೆ. ಈ ವಿಚಾರ ರಾಜ ರಾಣಿ ಫಿನಾಲೆಯಲ್ಲಿ ಆಗಿದೆ. ದೊಡ್ಮನೆಗೆ ಕಾಲಿಟ್ಟಿದ್ದಾರೆ. ಇವರ ಬಗ್ಗೆ ಹೆಚ್ಚಿನ ವಿವರ ಬಿಗ್‌ ಬಾಸ್‌ ಮನೆಯಲ್ಲೇ ರಿವೀಲ್‌ ಆಗಲಿದೆ.

    ಇನ್ನೂ ಈಗಾಗಲೇ ಕಿರುತೆರೆ ನಟಿ ಗೌತಮಿ ಜಾದವ್‌, ಚೈತ್ರಾ ಕುಂದಾಪುರ ದೊಡ್ಮನೆಗೆ ಎಂಟ್ರಿ ಕೊಟ್ಟಾಗಿದೆ. ಇತ್ತ ಕಿರುತೆರೆ ನಟಿ ಮೋಕ್ಷಿತಾ ಪೈ ಕೂಡ ದೊಡ್ಮನೆಗೆ ಹೋಗಿರುವುದು ಪಕ್ಕಾ ಆಗಿದೆ. ಇನ್ನೂ ಯಾರೆಲ್ಲಾ ಬರಲಿದ್ದಾರೆ ಎಂಬುದನ್ನು ಕಾಯಬೇಕಿದೆ. ಸೆ.29ರಂದು ಬಿಗ್‌ ಬಾಸ್‌ ಕನ್ನಡ 11ರ ಗ್ರ್ಯಾಂಡ್‌ ಓಪನಿಂಗ್‌ ಆಗಲಿದೆ.