Tag: gold

  • 9 ವರ್ಷದ ಬಳಿಕ 8.46 ಟನ್ ಚಿನ್ನ ಖರೀದಿಸಿದ ಆರ್‌ಬಿಐ

    9 ವರ್ಷದ ಬಳಿಕ 8.46 ಟನ್ ಚಿನ್ನ ಖರೀದಿಸಿದ ಆರ್‌ಬಿಐ

    ಮುಂಬೈ: ದೇಶದ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 9 ವರ್ಷಗಳ ಬಳಿಕ ಸುಮಾರು 8.46 ಮೆಟ್ರಿಕ್ ಟನ್ ಚಿನ್ನ ಖರೀದಿಸಿದೆ.

    ಜೂನ್ 30ಕ್ಕೆ ಅಂತಿಮವಾದ 2017-18 ಆರ್ಥಿಕ ವರ್ಷದ ವರದಿಯಲ್ಲಿ ನೀಡಿರುವ ಮಾಹಿತಿಯಂತೆ ಸದ್ಯ ಖರೀದಿಸುವ ಚಿನ್ನದೊಂದಿಗೆ ಆರ್‌ಬಿಐ ಬಳಿ ಇರುವ ಚಿನ್ನದ ಪ್ರಮಾಣ 566.23 ಮೆಟ್ರಿಕ್ ಟನ್‍ಗೆ ಏರಿಕೆಯಾಗಿದೆ.

    2009 ನವೆಂಬರ್ ನಲ್ಲಿ 200 ಮೆಟ್ರಿಕ್ ಟನ್ ಚಿನ್ನವನ್ನು ಅಂತರಾಷ್ಟ್ರಿಯ ಹಣಕಾಸು ನಿಧಿ (ಐಎಂಎಫ್)ನಿಂದ ಖರೀದಿ ಮಾಡಲಾಗಿತ್ತು. ಬಳಿಕ ಕಳೆದ 9 ವರ್ಷಗಳಿಂದ ಯಾವುದೇ ಖರೀದಿ ನಡೆದಿರಲಿಲ್ಲ. ಸದ್ಯ ಆರ್‌ಬಿಐ ಚಿನ್ನ ಖರೀದಿ ಮಾಡುವ ಮೂಲಕ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ಸಾಬೀತು ಪಡಿಸಿದೆ.

    ಉಳಿದಂತೆ ಭಾರತದ ಆರ್‌ಬಿಐ ಬಳಿ ಇರುವ ಚಿನ್ನ ಸಂಗ್ರಹದಲ್ಲಿ 292.30 ಟನ್ ಚಿನ್ನವನ್ನು ಮುದ್ರಿಸಿರುವ ನೋಟುಗಳಿಗಾಗಿ ಮೀಸಲಿಡಲಾಗಿದೆ. 273.3 ಟನ್ ಚಿನ್ನ ಬ್ಯಾಂಕಿಂಗ್ ವಿಭಾಗಕ್ಕೆ ಎಂದು ವಿಂಗಡಿಸಲಾಗಿದೆ.

    ಯಾವ ದೇಶದಲ್ಲಿ ಎಷ್ಟು ಚಿನ್ನವಿದೆ?
    ಹಲವು ರಾಷ್ಟ್ರಗಳು ತಮ್ಮ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸದೃಢಗೊಳಸಿಲು ಹಾಗೂ ತುರ್ತು ಆರ್ಥಿಕ ಸಂದರ್ಭಗಳನ್ನು ಎದುರಿಸಲು ಚಿನ್ನ ಸಂಗ್ರಹಣೆ ಮಾಡುತ್ತದೆ. ಇನ್ನು ಸಂಗ್ರಹಣ ಪ್ರಮಾಣದಂತೆ ಹೇಳುವುದಾದರೆ ವಿಶ್ವದಲ್ಲಿ ಭಾರತ 10ನೇ ಅತಿದೊಡ್ಡ ದೇಶವಾಗಿದೆ. ಅತಿ ಹೆಚ್ಚು ಚಿನ್ನ ಸಂಗ್ರಹಿಸಿದ ರಾಷ್ಟಗಳ ಪಟ್ಟಿಯಲ್ಲಿ ಅಮೆರಿಕ (8,133 ಟನ್), ಜರ್ಮನಿ (3,371), ಇಟಲಿ (2,451), ಫ್ರಾನ್ಸ್ (2,436), ರಷ್ಯಾ (1,909), ಚೀನಾ (1,842), ಸ್ವಿಜರ್ಲೆಂಡ್ (1,040), ಜಪಾನ್ (7,650), ಭಾರತ (566) ಟನ್ ಚಿನ್ನ ಸಂಗ್ರಹಿಸಿದೆ.

    ಚಿನ್ನದ ಖರೀದಿಯ ಉದ್ದೇಶವೇನು?
    ಬಹುತೇಕ ರಾಷ್ಟ್ರಗಳು ತಮ್ಮ ವಿದೇಶಿ ವಿನಿಮಯ ಸಂಗ್ರಹವನ್ನು ನಿಯಮಿತವಾಗಿ ಕಾಯ್ದುಕೊಳ್ಳುತ್ತಿರುತ್ತದೆ. ಚಿನ್ನ, ಹಣ ಅಥವಾ ಹೂಡಿಕೆ ರೂಪದಲ್ಲಿ ವಿದೇಶಿ ವಿನಿಮಯ ಸಂಗ್ರಹ ಮಾಡಲಾಗುತ್ತದೆ. ರೂಪಾಯಿ ಮೌಲ್ಯ ಕುಸಿತವಾದಾಗ ಅಥವಾ ಆರ್ಥಿಕ ಸಂಕಷ್ಟ ಬಂದಾಗ ಚಿನ್ನವನ್ನು ಒತ್ತೆಯಿಟ್ಟು ಹಣವನ್ನು ತರಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಿಟಕಿ ಸರಳು ಕತ್ತರಿಸಿ ಬ್ಯಾಂಕ್ ದರೋಡೆ- 12 ಕೆ.ಜಿ ಚಿನ್ನ, 5.14 ಲಕ್ಷ ಹಣ ಲೂಟಿ

    ಕಿಟಕಿ ಸರಳು ಕತ್ತರಿಸಿ ಬ್ಯಾಂಕ್ ದರೋಡೆ- 12 ಕೆ.ಜಿ ಚಿನ್ನ, 5.14 ಲಕ್ಷ ಹಣ ಲೂಟಿ

    ಮೈಸೂರು: ಜಿಲ್ಲೆಯಲ್ಲಿ ಬ್ಯಾಂಕ್ ದರೋಡೆ ನಡೆದಿದ್ದು, ಬ್ಯಾಂಕಿನಲ್ಲಿದ್ದ 3.80 ಕೋಟಿ ರೂ. ಮೌಲ್ಯದ 12 ಕೆ.ಜಿ. ಚಿನ್ನ ಮತ್ತು 5 ಲಕ್ಷದ 14 ಸಾವಿರ ನಗದನ್ನು ದರೋಡೆಕೋರರು ದೋಚಿ ಪರಾರಿಯಾಗಿದ್ದಾರೆ.

    ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿಯ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ಸೋಮವಾರ ರಾತ್ರಿ ದರೋಡೆ ನಡೆದಿದೆ. ದರೋಡೆಕೋರರು ಗ್ಯಾಸ್ ಕಟರ್ ಮೂಲಕ ಬ್ಯಾಂಕಿನ ಕಿಟಕಿ ಸರಳುಗಳನ್ನು ಕತ್ತರಿಸಿ ಒಳನುಗ್ಗಿದ್ದಾರೆ. ಬಳಿಕ ವಿದ್ಯುತ್ ಕಡಿತಗೊಳಿಸಿ, ವಿದ್ಯುತ್ ಚಾಲಿತ ಅಲಾರಾಂ, ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿ ಈ ದರೋಡೆ ನಡೆಸಿದ್ದಾರೆ.

    ಬ್ಯಾಂಕಿನಲ್ಲಿದ್ದ ಸುಮಾರು ಮೂರು ಕೋಟಿ 80ಲಕ್ಷ ರೂ. ಮೌಲ್ಯದ 12 ಕೆ.ಜಿ. ಚಿನ್ನ ಮತ್ತು 5 ಲಕ್ಷದ 14 ಸಾವಿರ ನಗದನ್ನು ದರೋಡೆಕೋರರು ದೋಚಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೆಚ್.ಡಿ.ಕೋಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

    ಸಾಮಾನ್ಯವಾಗಿ ಮನೆಯಲ್ಲಿ ದರೋಡೆ ಮಾಡುವ ರೀತಿ ಬ್ಯಾಂಕಿನಲ್ಲಿ ದರೋಡೆಕೋರರು ದೋಚಿದ್ದಾರೆ. ಈ ಬ್ಯಾಂಕಿನಲ್ಲಿ ಲಾಕರ್ ವ್ಯವಸ್ಥೆ ಕೂಡ ಇರಲಿಲ್ಲ. ದರೋಡೆ ನಡೆಯುತ್ತಿದ್ದ ಸಂದರ್ಭದಲ್ಲಿ ಸೆಕ್ಯೂರಿಟಿ ಮತ್ತು ಅಲಾರಾಂ ಕೂಡ ಶಬ್ದ ಇರಲಿಲ್ಲ. ಇದೆಲ್ಲವನ್ನು ನೋಡಿದರೆ ಬ್ಯಾಂಕಿನವರ ನಿರ್ಲಕ್ಷ್ಯದಿಂದ ಈ ದರೋಡೆ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=lUARu8ldZyg

  • ಏಷ್ಯನ್ ಗೇಮ್ಸ್‌ನಲ್ಲಿ  ಭಾರತದ ಸಾರ್ವಕಾಲಿಕಾ ದಾಖಲೆ!

    ಏಷ್ಯನ್ ಗೇಮ್ಸ್‌ನಲ್ಲಿ  ಭಾರತದ ಸಾರ್ವಕಾಲಿಕಾ ದಾಖಲೆ!

    ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಇತಿಹಾಸದಲ್ಲೇ ಅತಿಹೆಚ್ಚು ಪದಕಗಳನ್ನು ಗೆದ್ದಿದ್ದಾರೆ.

    ಕೊನೆಯ ದಿನವಾದ ಶನಿವಾರ ಪುರುಷರ ಹಾಕಿ ತಂಡ ಪಾಕಿಸ್ತಾನವನ್ನು 2-1 ಗೋಲುಗಳ ಅಂತರದಿಂದ ಸೋಲಿಸಿ ಕಂಚಿನ ಪದಕವನ್ನು ಪಡೆಯಿತು. ಮಹಿಳೆಯರ ಸ್ಕ್ವಾಶ್ ತಂಡ ಬೆಳ್ಳಿ ಪದಕ ಗೆದ್ದರೆ ಬಾಕ್ಸಿಂಗ್ ನಲ್ಲಿ ಅಮಿತ್ ಪಾಂಗಲ್ ಮತ್ತು ಬ್ರಿಡ್ಜ್ ಗೇಮ್(ಇಸ್ಪೀಟ್) ನಲ್ಲಿ ಪುರುಷರ ತಂಡ ಚಿನ್ನವನ್ನು ಗೆದ್ದುಕೊಂಡಿದೆ.

    2010ರಲ್ಲಿ ಚೀನಾದಲ್ಲಿ ನಡೆದಿದ್ದ 16ನೇ ಏಷ್ಯನ್  ಗೇಮ್ಸ್‌ನಲ್ಲಿ 65 ಪದಕಗಳನ್ನು ಗೆದ್ದಿದ್ದೇ ಭಾರತದ ಇವರೆಗಿನ ದಾಖಲೆಯಾಗಿತ್ತು. ಆದರೆ ಈ ಬಾರಿ 15 ಚಿನ್ನ, 24 ಬೆಳ್ಳಿ, 30 ಕಂಚು ಜಯಿಸುವ ಮೂಲಕ ಒಟ್ಟು 69 ಪದಕಗಳನ್ನು ಸ್ಪರ್ಧಿಗಳು ಗೆದ್ದುಕೊಂಡಿದ್ದಾರೆ. ಇದನ್ನೂ ಓದಿ: ಚಿನ್ನ ಗೆದ್ದ 16ರ ಹರೆಯದ ಶೂಟರ್ ಹಿಂದಿದೆ ಖೇಲೋ ಇಂಡಿಯಾ! ಏನಿದು ಯೋಜನೆ?

    2014ರ ಇಂಚಾನ್ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 11 ಚಿನ್ನ, 10 ಬೆಳ್ಳಿ, 36 ಕಂಚು ಸೇರಿ 57 ಪದಕ ಜಯಿಸಿತ್ತು. 1982ರಲ್ಲಿ ದೆಹಲಿಯಲ್ಲಿ ನಡೆದಿದ್ದ ಕೂಟದಲ್ಲೂ ಭಾರತ ಕ್ರೀಡಾಪಟುಗಳು 57 ಪದಕ ಜಯಿಸಿದ್ದರೂ, ಗೆದ್ದ ಚಿನ್ನದ ಪದಕಗಳ ಸಂಖ್ಯೆ 13 ಆಗಿತ್ತು. 2006ರ ದೋಹಾದಲ್ಲಿ ನಡೆದ ಕ್ರೀಡಾಕೂಟದಲ್ಲಿ 53 ಹಾಗೂ 1962ರ ಜರ್ಕಾತದಲ್ಲಿ 52 ಪದಕಗಳನ್ನು ಗೆದ್ದುಕೊಂಡಿತ್ತು.  ಇದನ್ನೂ ಓದಿ: ಹೆಪ್ಟಾಥ್ಲಾನ್ ಚಿನ್ನದ ಹುಡುಗಿ ಸ್ವಪ್ನಾ ತಾಯಿಯ ಆನಂದಭಾಷ್ಪ ವಿಡಿಯೋ ವೈರಲ್

    ಭಾರತದ ಅಥ್ಲೆಟ್ ಗಳು ಈ ಬಾರಿ ವಿಶೇಷ ಸಾಧನೆ ಮಾಡಿದ್ದು ಒಟ್ಟು 7 ಚಿನ್ನ, 10 ಬೆಳ್ಳಿ, 2 ಕಂಚನ್ನು ಗೆಲ್ಲುವ ಮೂಲಕ ಒಟ್ಟು 19 ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಅಥ್ಲೆಟಿಕ್ಸ್ ನಲ್ಲಿ ಮೂರನೇ ಸ್ಥಾನ ಸಂಪಾದಿಸಿದ್ದಾರೆ. ಶೂಟಿಂಗ್ ನಲ್ಲಿ 2 ಚಿನ್ನ ಸೇರಿ ಒಟ್ಟು 9 ಪದಕ ಗೆದ್ದಿದ್ದರೆ, ಕುಸ್ತಿಯಲ್ಲ 2 ಚಿನ್ನ ಸೇರಿ ಒಟ್ಟು 3 ಪದಕವನ್ನು ಗೆದ್ದುಕೊಂಡಿದೆ.

    ಚಿನ್ನ ನಿರೀಕ್ಷಿಸಿದ್ದ ಕಬಡ್ಡಿ, ಹಾಕಿ, ಬಾಕ್ಸಿಂಗ್ ನಲ್ಲಿ ಕಂಚು, ಬೆಳ್ಳಿ ಪದಕ ಸಿಕ್ಕಿದ್ದರೆ, ಟೇಬಲ್ ಟೆನಿಸ್, ಸೈಲಿಂಗ್ (ಹಾಯಿದೋಣಿ) ಬ್ರಿಡ್ಜ್ (ಇಸ್ಪೀಟ್), ಈಕ್ವೇಸ್ಟ್ರಿಯನ್ (ಕುದುರೆ ಸವಾರಿ), ಲ್ಲಿ ಭಾರತದ ಕ್ರೀಡಾಪಟುಗಳು ಪದಕ ಗೆದ್ದಿರುವುದು ವಿಶೇಷ.  ಇದನ್ನೂ ಓದಿ:ಚಿನ್ನ ಗೆದ್ದ ಸ್ವಪ್ನಾ ಸಾಧನೆಯ ಹಿಂದಿದೆ ದ್ರಾವಿಡ್ ಸಹಾಯಹಸ್ತ!

     289 ಪದಕ ಪಡೆಯುವ ಮೂಲಕ ಚೀನಾ ಮೊದಲ ಸ್ಥಾನ ಪಡೆದರೆ ಸಿರಿಯಾ ಕೊನೆಯ 37ನೇ ಸ್ಥಾನ ಪಡೆದಿದೆ. 4 ಕಂಚಿನ ಪದಕ ಗೆದ್ದಿರುವ ಪಾಕಿಸ್ತಾನ ಪಟ್ಟಿಯಲ್ಲಿ 34ನೇ ಸ್ಥಾನ ಪಡೆದಿದೆ.

     

     

  • ಏಷ್ಯನ್ ಗೇಮ್ಸ್: ಪೂವಮ್ಮ ಟೀಂಗೆ ರಿಲೇಯಲ್ಲಿ ಚಿನ್ನ

    ಏಷ್ಯನ್ ಗೇಮ್ಸ್: ಪೂವಮ್ಮ ಟೀಂಗೆ ರಿಲೇಯಲ್ಲಿ ಚಿನ್ನ

    ಜಕಾರ್ತ: ಏಷ್ಯನ್ ಕ್ರೀಡಾಕೂಟದ ಮಹಿಳೆಯರ 4*400 ಮೀಟರ್ ರಿಲೇಯಲ್ಲಿ ಭಾರತ ಚಿನ್ನವನ್ನು ಗೆದ್ದುಕೊಂಡಿದೆ. ಈ ಮೂಲಕ ಸತತ 5ನೇ ಬಾರಿ ಭಾರತ ತಂಡ ಚಿನ್ನ ಜಯಿಸಿದೆ.

    ಕರ್ನಾಟಕದ ಪೂವಮ್ಮ, ಹಿಮಾದಾಸ್, ಲಕ್ಷ್ಮಿಬಾಯ್ ಗಾಯಕ್ವಾಡ್, ವಿಸ್ಮಯ ತಂಡ 3.28.72 ಸೆಕೆಂಡಿನಲ್ಲಿ ಗುರಿಯನ್ನು ಕ್ರಮಿಸಿ ಚಿನ್ನವನ್ನು ಗೆದ್ದುಕೊಂಡಿದ್ದಾರೆ.  ಬಹರೈನ್ ಎರಡನೇ ಸ್ಥಾನವನ್ನು ಪಡೆದರೆ ವಿಯೆಟ್ನಾಂ ಮೂರನೇ ಸ್ಥಾನವನ್ನು ಪಡೆಯಿತು.

    ಪುರುಷರ 4*400 ಮೀಟರ್ ರಿಲೇಯಲ್ಲಿ ಭಾರತ ಬೆಳ್ಳಿ ಪದಕವನ್ನು ಗೆದ್ದುಕೊಂಡಿದೆ. ಕತಾರ್ ತಂಡ ಮೊದಲ ಸ್ಥಾನ ಪಡೆದರೆ ಜಪಾನ್ ಮೂರನೇ ಸ್ಥಾನ ಪಡೆದುಕೊಂಡಿದೆ.

    ಪುರುಷರ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಜಿನ್ಸನ್ ಜಾನ್ಸನ್ ಚಿನ್ನ ಗೆದ್ದಿದ್ದಾರೆ. 3.44.72 ಸೆಕೆಂಡಿನಲ್ಲಿ ಓಡಿ ಗುರಿ ತಲುಪಿದರು.

     

  • ಮಲೆ ಮಹದೇಶ್ವರಸ್ವಾಮಿ ಹುಂಡಿ ಎಣಿಕೆ – 1.14 ಕೋಟಿ ಹಣ ಸಂಗ್ರಹ

    ಮಲೆ ಮಹದೇಶ್ವರಸ್ವಾಮಿ ಹುಂಡಿ ಎಣಿಕೆ – 1.14 ಕೋಟಿ ಹಣ ಸಂಗ್ರಹ

    ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಐತಿಹಾಸಿಕ ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ಮುಗಿದಿದ್ದು, 1 ಕೋಟಿ 14 ಲಕ್ಷ ರೂ. ಹಣ ಸಂಗ್ರಹವಾಗಿದೆ.

    ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಂ ಗಾಯತ್ರಿ ಮತ್ತು ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಸಮ್ಮುಖದಲ್ಲಿ ನೂರಾರು ಸಿಬ್ಬಂದಿಗಳು ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ಎಣಿಸುವ ಕಾರ್ಯವನ್ನು ನಡೆಸಿದ್ದರು.

    ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಪ್ರತಿ ತಿಂಗಳಿಗೊಮ್ಮೆ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದೆ. ಆಗಸ್ಟ್ ತಿಂಗಳ ಹುಂಡಿ ಎಣಿಕೆ ಕಾರ್ಯದಲ್ಲಿ 1 ಕೋಟಿ 14 ಲಕ್ಷ ರೂಪಾಯಿ ನಗದು ಹಣ ಸಿಕ್ಕಿದೆ. ಹಣ ಮಾತ್ರವಲ್ಲದೇ 31 ಗ್ರಾಂ ಚಿನ್ನ ಮತ್ತು 600 ಗ್ರಾಂ ಬೆಳ್ಳಿ ವಸ್ತುಗಳು ಸಿಕ್ಕಿವೆ. ಇದೇ ತಿಂಗಳಿನಲ್ಲಿ ಶ್ರಾವಣ ಇದ್ದ ಕಾರಣ ದೇವಾಲಯಕ್ಕೆ ಅಪಾರ ಭಕ್ತರು ಆಗಮಿಸಿದ್ದರು. ಆದ್ದರಿಂದ ದೊಡ್ಡ ಮೊತ್ತದ ಹಣವು ಹುಂಡಿಯಲ್ಲಿ ಸಂಗ್ರಹವಾಗಿದೆ.

    ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಸಭೆ ವೇಳೆ ಅಧಿಕಾರಿಯೊಬ್ಬರು ಮಹದೇಶ್ವರ ಬೆಟ್ಟದಲ್ಲಿ ಒಂದು ಬೆಳ್ಳಿ ರಥವನ್ನು ನಿರ್ಮಾಣ ಮಾಡುವ ಪ್ರಸ್ತಾಪ ಮಾಡಿದ್ದರು. ಇದಕ್ಕಾಗಿ ನಮಗೆ 400 ಕೆಜಿ ಬೆಳ್ಳಿ ಬೇಕು. ಭಕ್ತರಿಂದ ನಮಗೆ ಈಗಾಗಲೇ 800 ಕೆಜಿ ಬೆಳ್ಳಿ ಸಂಗ್ರಹವಾಗಿದೆ. ರಥ ತಯಾರಿಸುವ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು ನನ್ನ ಬಳಿಯೂ ಸಾಕಷ್ಟು ಬೆಳ್ಳಿ ಇದೆ. ಕಾರ್ಯಕ್ರಮಗಳಲ್ಲಿ ಕೊಟ್ಟ ಬೆಳ್ಳಿ ಗದೆ, ಕಿರೀಟ ಇತ್ಯಾದಿ ಬೆಳ್ಳಿ ಉಡುಗೊರೆಗಳು ಇವೆ. ಅವುಗಳನ್ನು ರಥ ನಿರ್ಮಾಣಕ್ಕೆ ನಾನು ನೀಡುತ್ತೇನೆ ಎಂದು ಅಧಿಕಾರಿಗಳಿಗೆ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪ್ರಯಾಣಿಕರಿಗೆ ತಲುಪಿಸಿದ ಕೆಎಸ್ಆರ್‌ಟಿಸಿ ನಿರ್ವಾಹಕ

    2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪ್ರಯಾಣಿಕರಿಗೆ ತಲುಪಿಸಿದ ಕೆಎಸ್ಆರ್‌ಟಿಸಿ ನಿರ್ವಾಹಕ

    ಬೆಂಗಳೂರು: ಕೆಎಸ್ಆರ್‌ಟಿಸಿ ನಿರ್ವಾಹಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಸುಮಾರು 2.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಾರಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

    ಕೆಎಸ್ಆರ್‌ಟಿಸಿಯ ಚಾಮರಾಜನಗರ ವಿಭಾಗ, ಕೊಳ್ಳೇಗಾಲ ಘಟಕದ ಜಯದೇವು ಅವರು ಪ್ರಾಮಾಣಿಕತೆ ಮೆರೆದ ಚಾಲಕ ಕಂ ನಿರ್ವಾಹಕರಾಗಿದ್ದಾರೆ. ಬಸ್ಸನ್ನು ಸ್ವಚ್ಛಗೊಳಿಸುವಾಗ ಪ್ರಯಾಣಿಕರು ಬಿಟ್ಟು ಹೋಗಿದ್ದ ಸುಮಾರು 2.5 ಲಕ್ಷ ಮೌಲ್ಯದ 2 ಚಿನ್ನದ ಸರ, 2 ಕಿವಿ ಓಲೆ ಜುಮುಕಿ ಹಾಗೂ 1 ಮೂಗುತಿಯನ್ನು ಖುದ್ದು ಟಿಕೆಟ್ ಸಹಾಯದ ಮೂಲಕ ಪತ್ತೆ ಹಚ್ಚಿ ಹಿಂದಿರುಗಿಸಿದ್ದಾರೆ.

    ಶನಿವಾರ ಕೊಳ್ಳೇಗಾಲದಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಬಸ್ಸಿನಲ್ಲಿ, ಮಳವಳ್ಳಿಯಿಂದ 4 ಮಂದಿ ಪ್ರಯಾಣಿಕರು ಚನ್ನಪಟ್ಟಣಕ್ಕೆ ಪ್ರಯಾಣಿಸಿದ್ದರು. ಈ ವೇಳೆ ಪ್ರಯಾಣಿಕರು ಇಳಿಯುವ ಬರದಲ್ಲಿ ಚಿನ್ನದ ಕೈ-ಚೀಲವನ್ನು ಬಸ್ಸಿನಲ್ಲೇ ಬಿಳಿಸಿಕೊಂಡಿದ್ದಾರೆ. ಬಸ್ಸು ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಬಂದಿದ್ದು, ಜಯದೇವು ಎಂದಿನಂತೆ ಬಸ್ಸನ್ನು ಸ್ವಚ್ಛಮಾಡುವಾಗ ಚಿನ್ನಾಭರಣಗಳಿದ್ದ ಚೀಲ ಸಿಕ್ಕಿದೆ. ಕೂಡಲೇ ಜಯದೇವುರವರು ನಿಲ್ದಾಣದ ಮೇಲ್ವಿಚಾರಕರು ಮತ್ತು ಘಟಕ ವ್ಯವಸ್ಥಾಪಕರಿಗೆ ವಿಷಯ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೈತರು ಅಡವಿಟ್ಟ ಒಡವೆ ಹರಾಜು – ಕೆನರಾ ಬ್ಯಾಂಕ್‍ನಿಂದ ಬಹಿರಂಗ ನೋಟಿಸ್

    ರೈತರು ಅಡವಿಟ್ಟ ಒಡವೆ ಹರಾಜು – ಕೆನರಾ ಬ್ಯಾಂಕ್‍ನಿಂದ ಬಹಿರಂಗ ನೋಟಿಸ್

    ಮಂಡ್ಯ: ಜಿಲ್ಲೆಯ ತಳಗವಾದಿ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ನಿಂದ ರೈತರಿಗೆ ಅಡವಿಟ್ಟ ಒಡವೆಗಳನ್ನು ಹರಾಜು ಹಾಕಲಾಗುವುದು ಎಂದು ನೋಟಿಸ್ ಕಳುಹಿಸಲಾಗಿದೆ.

    2011 ರಿಂದ 2016 ರವರೆಗೆ ಒಡವೆ ಅಡವಿಟ್ಟ ಗ್ರಾಹಕರು ಅಸಲು, ಬಡ್ಡಿ ಪಾವತಿಸದೆ ಸುಸ್ತಿದಾರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ 28-08-18 ರಂದು ಒಡವೆಗಳನ್ನು ಹರಾಜು ಹಾಕಲಾಗುತ್ತದೆ ಎಂದು ಕೆನರಾ ಬ್ಯಾಂಕ್ ತನ್ನ ನೋಟಿಸ್ ನಲ್ಲಿ ತಿಳಿಸಿದೆ. ಈ ಸಂಬಂಧ ತಳಗವಾದಿ ಗ್ರಾಮದ ಹಲವೆಡೆ ಬ್ಯಾಂಕ್ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ.

    ಸತತ ಬರಗಾಲದಿಂದ ಬಿತ್ತನೆ ಕಾರ್ಯಕ್ಕಾಗಿ ಒಡವೆಗಳನ್ನು ಅಡವಿಟ್ಟು ಸಾಲ ಪಡೆಯಲಾಗಿತ್ತು. ಈ ವರ್ಷ ಚೆನ್ನಾಗಿ ಮಳೆಯಾಗಿದ್ದು, ಸಾಲ ತೀರಿಸಿ ಒಡವೆ ಬಿಡಿಸಿಕೊಳ್ಳೋಣ ಎಂದು ಯೋಚಿಸಲಾಗಿತ್ತು. ಒಂದು ಬ್ಯಾಂಕ್ ನಮ್ಮ ಒಡವೆಗಳನ್ನು ಹರಾಜು ಹಾಕಿದ್ರೆ ವಿಷ ಕುಡಿಯದೇ ಬೇರೆ ಮಾರ್ಗ ನಮ್ಮ ಮುಂದಿಲ್ಲ ಎಂದು ನೋಟಿಸ್ ಪಡೆದಿರುವ ರೈತರು ಅಳಲು ತೋಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವರಮಹಾಲಕ್ಷ್ಮಿ ಹಬ್ಬದಂದೇ ಆನೇಕಲ್‍ನಲ್ಲಿ ಕಳ್ಳರ ಕೈಚಳಕ!

    ವರಮಹಾಲಕ್ಷ್ಮಿ ಹಬ್ಬದಂದೇ ಆನೇಕಲ್‍ನಲ್ಲಿ ಕಳ್ಳರ ಕೈಚಳಕ!

    ಆನೇಕಲ್: ವರಮಹಾಲಕ್ಷ್ಮಿ ಹಬ್ಬದಂದೇ ಮುಸುಕುದಾರಿ ಕಳ್ಳರು ಬಾಗಿಲು ಮುರಿದು ನಗದು, ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಸರ್ಜಾಪುರದ ಎಸ್.ಎನ್.ಆರ್. ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ.

    ಮುನಿಸ್ವಾಮಿ ಎನ್ನುವವರ ಮನೆಯಲ್ಲಿ ನಾಲ್ವರು ಮುಸುಕುದಾರಿ ಕಳ್ಳರಿಂದ ಕೃತ್ಯ ಎಸಗಿದ್ದು, ನಾಲ್ಕು ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಲೂಟಿ ಮಾಡಲಾಗಿದೆ. ಖತರ್ನಾಕ್ ಕಳ್ಳರು ಕೆಲ ಮನೆಗಳ ಬಳಿ ಬಂದು ಸಿಸಿಟಿವಿ ಇರುವುದು ನೋಡಿ ವಾಪಾಸ್ ಆಗಿದ್ದಾರೆ. ಕೊನೆಗೆ ಸಿಸಿಟಿವಿ ಇಲ್ಲದ ಮನೆ ನೋಡಿ ಕಳ್ಳತನ ಮಾಡಿದ್ದಾರೆ.

    ಈ ಘಟನೆ ಪಕ್ಕದ ಮನೆಯಲ್ಲಿದ್ದ ಸಿಸಿಟಿವಿಯಲ್ಲಿ ಗೇಟ್ ತೆಗೆದು ಒಳನುಗ್ಗುತ್ತಿರುವ ದೃಶ್ಯ ಸೆರೆಯಾಗಿದೆ. ಇದೇ ರೀತಿ ಎಸ್ ಎನ್ ಆರ್ ಬಡಾವಣೆಯಲ್ಲಿ ಸತತ ನಾಲ್ಕನೇ ಬಾರಿ ಕಳ್ಳತನ ನಡೆದಿದ್ದು, ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಅಂತ ಬಡಾವಣೆಯ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗಳ ಮದುವೆಗೆ ಕೂಡಿಟ್ಟಿದ್ದ ಚಿನ್ನ, ಹಣ ಕೊನೆಗೂ ಪತ್ತೆ!

    ಮಗಳ ಮದುವೆಗೆ ಕೂಡಿಟ್ಟಿದ್ದ ಚಿನ್ನ, ಹಣ ಕೊನೆಗೂ ಪತ್ತೆ!

    – ಮಣ್ಣಿನಡಿ ಸಿಲುಕಿತ್ತು ಮಾಂಗಲ್ಯ ಸರ

    ಮಡಿಕೇರಿ: ಭೂಕುಸಿತಕ್ಕೆ ಸಿಲುಕಿ ಮನೆಯೇ ಧರೆಗುರುಳಿದ ಪರಿಣಾಮ ಮಗಳ ಮದುವೆಗೆ ಕೂಡಿಟ್ಟ ಚಿನ್ನ, ಹಣ ಹಾಗೂ ಬಟ್ಟೆಗಳು ಮಣ್ಣುಪಾಲಾಗಿದ್ದು, ಕೊನೆಗೂ ಅವುಗಳು ಮನೆ ಮಾಲೀಕನ ಕೈ ಸೇರಿದೆ.

    ಭೂ ಕುಸಿತವಾದ ಪರಿಣಾಮ ಮನೆ ಸಂಪೂರ್ಣ ಕುಸಿದು ಬಿದ್ದಿತ್ತು. ಹೀಗಾಗಿ ಮಗಳ ಮದುವೆಗಾಗಿ ಇಟ್ಟಿದ್ದ ಚಿನ್ನ ಹಾಗೂ ಹಣವನ್ನು ಬುಧವಾರದಿಂದ ಅಪ್ಪ-ಅಮ್ಮ ಹುಡುಕಾಡಿದ್ದು, ಇದೀಗ ಮನೆಮಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಮಗಳ ಮದ್ವೆಗಾಗಿ ಕೂಡಿಟ್ಟ ಹಣ, ಚಿನ್ನಕ್ಕಾಗಿ ಮನೆಯ ಅವಶೇಷದಡಿ ಹುಡುಕಾಟ!

    ಹಟ್ಟಿಹೊಳೆಯ ಉಮೇಶ್ ಶೆಟ್ಟಿ ದಂಪತಿಯ ಹಿರಿಯ ಪುತ್ರಿ ನವ್ಯಾ ಶೆಟ್ಟಿಯ ಮದುವೆ ಇದೇ ತಿಂಗಳು 30 ರಂದು ಫಿಕ್ಸ್ ಆಗಿದೆ. ಗುಡ್ಡ ಕುಸಿತದಿಂದ ಮನೆ ಕುಸಿದು ಹೋಗಿತ್ತು. ಪರಿಣಾಮ ಮಗಳ ಮದುವೆಗೆಂದು ಚಿನ್ನ, ಹಣ ಹಾಗೂ ಬಟ್ಟೆಬರೆಗಳನ್ನು ತುಂಬಿದ್ದ ಬೀರು ಮಣ್ಣಿನಡಿ ಸಿಲುಕಿತ್ತು. ಇದನ್ನು ಹೊರತೆಗೆಯಲು ಉಮೇಶ್ ಹಾಗೂ ಸ್ಥಳೀಯರು ಹರಸಾಹಸಪಟ್ಟಿದ್ದರು. ಕಡೆಗೆ ಶಾಸಕ ಅಪ್ಪಚ್ಚು ರಂಜನ್ ಜೆಸಿಬಿ ಕಳುಹಿಸಿ ಬೀರು ತೆಗಿಸಿದ್ರು. ಇದನ್ನೂ ಓದಿ: ಭಾರೀ ಶಬ್ಧದಿಂದ ಹೆದರಿ ಬಾಣಂತಿ, 2 ತಿಂಗ್ಳ ಮಗುವನ್ನು ಎತ್ತಿಕೊಂಡು ಓಡಿದ್ವಿ- ಜೋಡುಪಾಲದ ಮಹಿಳೆ ಕಣ್ಣೀರು

    ಮಗಳ ಎಲ್ಲಾ ಚಿನ್ನ ಸಿಕ್ಕಿದೆ:
    ದೇವರು ಎಲ್ಲವನ್ನು ಕಳೆದುಕೊಂಡು ಇಷ್ಟನ್ನಾದ್ರೂ ಕೊಟ್ಟಿದ್ದಾನಲ್ಲ ಅಂತ ಸ್ವಲ್ಪ ಸಮಾಧಾನವಾಯಿತು. ಮಗಳ ಮದುವೆಯಾದ್ರೂ ಚೆನ್ನಾಗಿ ಮಾಡೋಣ ಅಂತ ಇದ್ದೇವೆ. ತುಂಬಾ ಚೆನ್ನಾಗಿ ಮಾಡಕ್ಕಾಗಲ್ಲ. ಹೀಗಾಗಿ ದೇವಸ್ಥಾನದಲ್ಲಿ ಧಾರೆಯೆರೆದು ಮದುವೆ ಮಾಡಿಕೊಡುವುದಾಗಿ ನಿರ್ಧರಿಸಿದ್ದೇವೆ. ಒಡವೆ ಸಿಕ್ಕಿದೆ. ಆದ್ರೆ 15 ಸಾವಿರದಷ್ಟು ಹಣ ಸಿಗಬೇಕಷ್ಟೆ. ನನ್ನದೊಂದು ಉಂಗುರವನ್ನು ಬೇರೆಯೇ ಒಂದು ಪರ್ಸ್ ನಲ್ಲಿಟ್ಟಿದ್ದೆ. ಅದು ಕೂಡ ಈವಾಗ ಕಾಣ್ತಿಲ್ಲ. ಅದು ಈಗಾಗಲೇ ಮಣ್ಣಿನೊಳಗೆ ಹೋಗಿರಬಹುದು. ಹೀಗಾಗಿ ಆ ಉಂಗುರ ಸಿಗಲ್ಲ ಅನಿಸತ್ತೆ. ಒಟ್ಟಿನಲ್ಲಿ ಮಗಳ ಮದುವೆಗೆ ಇಟ್ಟಿರುವ ಎಲ್ಲಾ ಚಿನ್ನ ಸಿಕ್ಕಿದೆ ಅಂತ ಉಮೇಶ್ ಪತ್ನಿ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

    ಒಡವೆ, ಹಣದ ಜೊತೆಗೆ ಮಕ್ಕಳ ಶಾಲಾ ಅಂಕಪಟ್ಟಿ, ಪ್ರಮಾಣಪತ್ರಗಳು ಕೂಡ ಪತ್ತೆಯಾಗಿದೆ. ಇದನ್ನೂ ಓದಿ: ಅನ್ನಾಹಾರವಿಲ್ಲದೇ ಕುಸಿದ ಮನೆಯನ್ನೇ ಕಾವಲು ಕಾಯುತ್ತಿದೆ ಶ್ವಾನ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗಳ ಮದ್ವೆಗಾಗಿ ಕೂಡಿಟ್ಟ ಹಣ, ಚಿನ್ನಕ್ಕಾಗಿ ಮನೆಯ ಅವಶೇಷದಡಿ ಹುಡುಕಾಟ!

    ಮಗಳ ಮದ್ವೆಗಾಗಿ ಕೂಡಿಟ್ಟ ಹಣ, ಚಿನ್ನಕ್ಕಾಗಿ ಮನೆಯ ಅವಶೇಷದಡಿ ಹುಡುಕಾಟ!

    ಮಡಿಕೇರಿ: ಜಲಪ್ರಳಯಕ್ಕೆ ಕೊಡಗು ತತ್ತರಿಸಿಹೋಗಿದ್ದು, ಇದೀಗ ಅಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿದೆ. ಹೀಗಾಗಿ ಸದ್ಯ ಕೊಡಗಿನಲ್ಲಿ ನಡೆದ ಒಂದೊಂದು ಕರುಣಾಜನಕದ ಕಥೆ ಹೊರಗೆ ಬರುತ್ತಿದೆ. ಕೆಲವೊಂದು ದಾರುಣ ಘಟನೆಗಳು ಮನಕಲಕುವಂತಿದೆ.

    ಕೊಡಗು ಜಿಲ್ಲೆಯ ಪ್ರವಾಹ ಪೀಡತ ಪ್ರದೇಶವಾದ ಹಟ್ಟಿಹೊಳೆಯಲ್ಲಿ ಇದೇ ಆಗಸ್ಟ್ 30ರಂದು ಮದುವೆ ಕಾರ್ಯಕ್ರಮವೊಂದು ನಡೆಯುವುದಿತ್ತು. ಹೀಗಾಗಿ ಮಗಳ ಮದುವೆಗೆಂದು ಚಿನ್ನ ಹಾಗೂ ಹಣವನ್ನು ತಂದೆ ಬೀರಿನಲ್ಲಿಟ್ಟಿದ್ದರು. ಈ ಬೀರು ಇದೀಗ ನೆಲಸಮವಾಗಿದ್ದು, ಇದನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.  ಇದನ್ನೂ ಓದಿ:  20 ದಿನದ ಹಸುಗೂಸಿಗಾಗಿ ಮಳೆಯಲ್ಲೇ ಓಡಿ, ಬದುಕಿಸಿಕೊಳ್ಳಲಾಗದೇ ನರಳಾಡುತ್ತಿರುವ ತಾಯಿ!

    ಹೌದು. ಹಟ್ಟಿಹೊಳೆ ನಿವಾಸಿ ಉಮೇಶ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳು. ಇದರಲ್ಲಿ ಹಿರಿಯ ಮಗಳಿಗೆ ಮದುವೆ ಫಿಕ್ಸ್ ಆಗಿದೆ. ಹೀಗಾಗಿ ಆಕೆಯ ಮದುವೆಗೆಂದು ಉಮೇಶ್ ಅವರು ಚಿನ್ನ ಹಾಗೂ ಹಣವನ್ನು ಬೀರಿನಲ್ಲಿಟ್ಟಿದ್ದರು. ಈ ಬೀರು ಇದೀಗ ನೆಲಕಚ್ಚಿದೆ. ಸದ್ಯ ರಕ್ಷಣಾ ಸಿಬ್ಬಂದಿಯ ಸಹಾಯ ಪಡೆದು ಮನೆಯ ಅವಶೇಷದಡಿ ಚಿನ್ನಕ್ಕಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ:  ಹಸೆಮಣೆ ಏರಬೇಕಿದ್ದ ಯುವತಿಯರು ಇಂದು ನಿರಾಶ್ರಿತರ ಕೇಂದ್ರದಲ್ಲಿ!

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಮೇಶ್, ಮಡಿಕೇರಿಯ ಕೊಡವ ಸಮಾಜದಲ್ಲಿ ಮಗಳ ಮದುವೆ ನಿಗದಿಯಾಗಿತ್ತು. ಆದ್ರೆ ಇದೀಗ ಅಲ್ಲಿ ಮದುವೆ ಕಾರ್ಯಕ್ರಮ ಮಾಡಲು ಸಾಧ್ಯವಿಲ್ಲ ಅಂತ ಹೇಳುತ್ತಿದ್ದಾರೆ. ಹೀಗಾಗಿ ಮಡಿಕೇರಿ ಓಂಕಾರೇಶ್ವರ ದೇವಸ್ಥಾನದಲ್ಲಿ ಮದುವೆ ಮುಹೂರ್ತವಿಟ್ಟು ಹೋಟೆಲಿನಲ್ಲಿ ಮುಂದಿನ ಕಾರ್ಯಕ್ರಮ ಮಾಡುವುದೆಂದು ನಿರ್ಧರಿಸಿದ್ದೇವೆ ಅಂತ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕೊಡಗಿನ ಸಂತ್ರಸ್ತರೇ, ಪರಿಹಾರ ವೆಬ್‍ಸೈಟಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ!

    ಗುರುವಾರ ಬೆಳಗ್ಗೆ ಇಲ್ಲಿಂದ ಹೊರಟೋಗಿದ್ದೇವೆ. ಮನೆಯಲ್ಲಿ ಒಡವೆ, ಹಣ ಹಾಗೂ ಬಟ್ಟೆಗಳಿವೆ. ಒಟ್ಟಿನಲ್ಲಿ 30ರಂದು ಕಷ್ಟಪಟ್ಟಾದ್ರೂ ಮಗಳ ಮದುವೆ ಮಾಡಿಸಿಯೇ ಬಿಡುವುದು ಅಂತ ಉಮೇಶ್ ಹೇಳಿದ್ದಾರೆ. ಇದನ್ನೂ ಓದಿ: ಕೋಟ್ಯಾಧಿಪತಿಯಾಗಿದ್ದ ತಂದೆ ಒಂದು ಪ್ಯಾಂಟು ಶರ್ಟಿಗೆ ಕೈ ಚಾಚಿದ್ದನ್ನು ಕಂಡು ಕಣ್ಣೀರಿಟ್ಟ ಮಗಳು!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv