Tag: Golden Star

  • ಇಸ್ಮಾರ್ಟ್ ಜೋಡಿಗೆ ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಕ

    ಇಸ್ಮಾರ್ಟ್ ಜೋಡಿಗೆ ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಕ

    ಕಿರುತೆರೆ ಜಗತ್ತಿನಿಂದಲೇ ಸಿನಿಮಾ ರಂಗಕ್ಕೆ ಪ್ರವೇಶಿಸಿರುವ ಗೋಲ್ಡನ್ ಸ್ಟಾರ್ ಗಣೇಶ್, ಇದೀಗ ಮತ್ತೆ ಕಿರುತೆರೆಯಲ್ಲೂ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆ ಜೊತೆಗೆ ಹಲವು ಜನಪ್ರಿಯ ಶೋಗಳನ್ನು ಅವರು ನಡೆಸಲು ಒಪ್ಪಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಜೀ ಕನ್ನಡ ವಾಹಿನಿಯಲ್ಲಿ ಗೋಲ್ಡನ್ ಗ್ಯಾಂಗ್ ಶೋ ನಡೆಸಿಕೊಟ್ಟಿರುವ ಅವರು ಇದೀಗ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡಿ ಬರಲಿರುವ ‘ಇಸ್ಮಾರ್ಟ್ ಜೋಡಿ’ ಕಾರ್ಯಕ್ರಮವನ್ನೂ ನಡೆಸಿಕೊಡಲಿದ್ದಾರೆ.

    ಜನಪ್ರಿಯ ನಟ ಗಣೇಶ್ ಅವರು ಇಸ್ಮಾರ್ಟ್ ಜೋಡಿ ನಡೆಸಿಕೊಡುವ ಕುರಿತಾಗಿ ಸ್ವತಃ ವಾಹಿನಿಯೇ ಪ್ರೋಮೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದೆ. ಈ ಪ್ರೊಮೋಗೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದು ಯಾವ ಬಗೆಯ ಕಾರ್ಯಕ್ರಮ? ಎಂದು ಹಲವರು ಪ್ರಶ್ನಿಸಿದ್ದಾರೆ. ಜೋಡಿ ಎನ್ನುವ ಹೆಸರು ಇರುವುದರಿಂದ ಇದೊಂದು ಫ್ಯಾಮಿಲಿ ಕಾರ್ಯಕ್ರಮನಾ ಎಂದೂ ಹಲವರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಪಿಂಕ್ ಕಲರ್ ಸೀರೆಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

    ಸೊಗಸಾದ ಪ್ರೋಮೋ ಮಾಡಿರುವ ಸ್ಟಾರ್ ಸುವರ್ಣ ವಾಹಿನಿಯು ‘ಮೊದಲು ನಿಮ್ಮ ಗಣಪಂಗೆ ಪ್ರೀತಿ ಸಿಕ್ಕಿದ್ದು ಟಿವಿಲಿ ನಮಸ್ಕಾರ ಅಂದಾಗ, ಆಮೇಲೆ ಪ್ರೀತಿ ಮಾಡ್ದಾಗ, ಪ್ರೀತಿ ಕೈ ಕೊಟ್ಟಾಗ, ಪ್ರೀತಿ ಸಿಕ್ಕಾಗ ಶಿಳ್ಳೆ ಚಪ್ಪಾಲೆ ಹೊಡೆದು ಮೆರೆಸಿ ಗೋಲ್ಡನ್ ಸ್ಟಾರ್ ಗಣೇಶ್ ಮಾಡಿದೀರಾ. ಅಂತಹ ಪ್ರೀತಿನ ಮತ್ತೆ ಸೆಲೆಬ್ರೇಟ್ ಮಾಡೋಕೆ ರೋಮ್ಯಾಂಟಿಕ್ ಜೋಡಿಗಳ ಜೊತೆ ಮನರಂಜನೆಯ ಮೋಡಿ ಮಾಡೋಕೆ ನಿಮ್ಮ ಮುಂದೆ ತರ್ತಿದೀನಿ ಇಸ್ಮಾರ್ಟ್ ಜೋಡಿ’ ಎಂದು ಬರೆದುಕೊಂಡಿದ್ದಾರೆ.

    Live Tv

  • ಹುಟ್ಟು ಹಬ್ಬದ ದಿನದಂದು ಈ ಬಾರಿಯೂ ಅಭಿಮಾನಿಗಳಿಗೆ ಸಿಗುವುದಿಲ್ಲ ಗೋಲ್ಡನ್ ಸ್ಟಾರ್ ಗಣೇಶ್

    ಹುಟ್ಟು ಹಬ್ಬದ ದಿನದಂದು ಈ ಬಾರಿಯೂ ಅಭಿಮಾನಿಗಳಿಗೆ ಸಿಗುವುದಿಲ್ಲ ಗೋಲ್ಡನ್ ಸ್ಟಾರ್ ಗಣೇಶ್

    ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಜು.2 ರಂದು ತಮ್ಮ ನೆಚ್ಚಿನ ನಟನ ಬರ್ತಡೇ ಆಚರಿಸಲು ನಾನಾ ರೀತಿಯಲ್ಲಿ ಅಭಿಮಾನಿಗಳು ತಯಾರಿ ಕೂಡ ನಡೆಸಿದ್ದಾರೆ. ಆದರೆ, ಈ ಬಾರಿಯೂ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಮತ್ತು ಅಭಿಮಾನಿಗಳಿಗೆ ತಾವು ಸಿಗುವುದಿಲ್ಲವೆಂದು ಅಧಿಕೃವಾಗಿ ಹೇಳಿಕೊಂಡಿದ್ದಾರೆ ಗಣೇಶ್.

    ಈ ಕುರಿತು ಸುದೀರ್ಘ ಪತ್ರ ಬರೆದಿರುವ ಗಣೇಶ್, “ನನ್ನ ಕಲಾ ಬದುಕಿನ ಆರಂಭದ ದಿನಗಳಿಂದ ಶುರುವಾಗಿ ಇಲ್ಲಿಯ ತನಕ ನನ್ನ ಈ ಬಣ್ಣದ ಹಾದಿಯ ಪ್ರತಿ ಹೆಜ್ಜೆಯಲ್ಲೂ ನನ್ನೊಂದಿಗೆ ಹೆಜ್ಜೆ ಹಾಕಿ, ನನ್ನ ಯಶಸ್ಸನ್ನು ನಿಮ್ಮದೇ ಯಶಸ್ಸು ಎನ್ನುವಂತೆ ಸಂಭ್ರಮಿಸಿ ನೀವೆಲ್ಲರೂ ಖುಷಿ ಪಟ್ಟಿದ್ದೀರಿ. ಪ್ರತಿ ವರ್ಷವೂ ನನ್ನ ಹುಟ್ಟಿದ ದಿನದಂದು ರಾಜ್ಯದ ಮೂಲೆ ಮೂಲೆಗಳಿಂದ ನನ್ನ ಮನೆಯ ಬಳಿ ಬಂದು ಅತೀವ ಅಭಿಮಾನದಿಂದ ನನ್ನನ್ನು ಆಲಂಗಿಸಿ ಹರಿಸಿದ್ದೀರಿ. ನಿಮ್ಮ ಅಭಿಮಾನದ ಸವಿಯನ್ನು ಇಡೀ ದಿನ ಖುಷಿಯಿಂದ ಸವಿಯು ಹಂಬಲ ನನಗೂ ಇದೆ. ಆದರೆ, ಕಳೆದ ಬಾರಿಯಂತೆ ಈ ಬಾರಿಯೂ ಸಮಯ ಅದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ:ಮಲಯಾಳಂ ನಟಿ ಅಂಬಿಕಾ ರಾವ್ ನಿಧನ

    ಜುಲೈ 2ರಂದು ಗಣೇಶ್ ಅವರು ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಅಭಿಮಾನಿಗಳಿಗೆ ಅವರು ಕ್ಷಮೆ ಕೇಳಿದ್ದಾರೆ. ಅಭಿಮಾನದ ಹಾರು, ತುರಾಯಿ, ಕೇಕ್ ಇತ್ಯಾದಿ ಬದಲಿಗೆ ಅಗತ್ಯ ಇರುವವರಿಗೆ ನಿಮ್ಮ ಕೈಲಾದಷ್ಟು ನೆರವು ನೀಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಅರ್ಥಪೂರ್ಣಗೊಳಿಸಲು ಅವರು ವಿನಂತಿಸಿದ್ದಾರೆ.

    Live Tv

  • ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ಸಿನಿಮಾ ಶೀರ್ಷಿಕೆ ಮೂಲಕ ಅಪ್ಪುನ ನೆನಪಿಸಿಕೊಂಡ ಗೋಲ್ಡನ್ ಸ್ಟಾರ್ : ಗಣಿ-ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಟೈಟಲ್

    ಯುಗಾದಿ ಹಬಕ್ಕೆ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಡುವುದಾಗಿ ಗೋಲ್ಡನ್ ಸ್ಟಾರ್ ಗಣೇಶ್ ಹೇಳಿಕೊಂಡಿದ್ದರು. ಅದರಂತೆ ಅವರು ಹೊಸ ಸಿನಿಮಾದ ಟೈಟಲ್ ಅನ್ನು ಸೋಷಿಯಲ್ ಮೀಡಿಯಾ ಮೂಲಕ ಅನಾವರಣ ಮಾಡಿದ್ದಾರೆ ಗಣೇಶ್. ತಮ್ಮ ತಮ್ಮ ಗೆಳೆಯ ಪ್ರೀತಮ್ ಗುಬ್ಬಿ ಕಾಂಬಿನೇಷನ್ ಚಿತ್ರಕ್ಕೆ ‘ಬಾನದಾರಿಯಲ್ಲಿ.’ ಎಂದು ಟೈಟಲ್ ಇಟ್ಟಿದ್ದಾರೆ. ಇದು 1981ರಲ್ಲಿ ತೆರೆಕಂಡ ಪುನೀತ್ ರಾಜ್ ಕುಮಾರ್ ನಟನೆಯ ‘ಭಾಗವಂತ’ ಸಿನಿಮಾದ ಪಾಪ್ಯುಲರ್ ಹಾಡು. ಬಾಲ್ಯದ ಅಪ್ಪು ತಮ್ಮ ತೊದಲ ನುಡಿಗಳಲ್ಲಿ ‘ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ’ ಎಂದು ಹಾಡಿದ್ದರು. ಈಗ ಅದನ್ನೇ ತಮ್ಮ ಶೀರ್ಷಿಕೆಯನ್ನಾಗಿ ಇಟ್ಟುಕೊಂಡು ಕುತೂಹಲ ಮೂಡಿಸಿದ್ದಾರೆ ನಿರ್ದೇಶಕ ಪ್ರೀತಮ್ ಗುಬ್ಬಿ.  ಇದನ್ನೂ ಓದಿ : ಜುಲೈ 28ರಂದು ಗುಮ್ಮನ ಕಥೆ – ಯುಗಾದಿ ದಿನ ಡಬಲ್ ಖುಷಿ ಕೊಟ್ಟ ‘ವಿಕ್ರಾಂತ್ ರೋಣ’ ಟೀಮ್

    ಸ್ಯಾಂಡಲ್‌ವುಡ್‌ನ ಗೋಲ್ಡ್ನ್ ಸ್ಟಾರ್ ಗಣೇಶ್ ಮತ್ತೆ ಮಳೆ ಹುಡುಗನಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ..ಯುಗಾದಿ ಹಬ್ಬದ ಪ್ರಯುಕ್ತ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡೋದಾಗಿ ನಟ ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಅನೌನ್ಸ್ ಮಾಡಿದ್ರು..ಅದರಂತೆಯೇ ಹೊಸ ಚಿತ್ರದ ಟೈಟಲ್ ಲಾಂಚ್ ಮಾಡಿದ್ದಾರೆ. ಮುಂಗಾರು ಮಳೆಯಿಂದ ಶುರುವಾದ ಈ ಜೋಡಿಯ ಪಯಣ, ‘ಮಳೆಯಲಿ ಜೊತೆಯಲಿ’, ‘ದಿಲ್ ರಂಗೀಲಾ’, `೯೯’ ಚಿತ್ರದವರೆಗೂ ಸಾಗಿದೆ. ಅಷ್ಟೂ ಸಿನಿಮಾಗಳು ಸಿನಿಪ್ರಿಯರನ್ನು ಮೋಡಿ ಮಾಡಿವೆ. ಇದೀಗ `ಬಾನದಾರಿಯಲ್ಲಿ’ ಈ ಕಾಂಬಿನೇಷನ್ ನ ನಾಲ್ಕನೇ ಸಿನಿಮಾ. ಇದನ್ನೂ ಓದಿ: ಏ. 2 ರಂದು ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ : ತೆಲುಗಿನಲ್ಲಿ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ ಲಾಲ್

    `ಬಾನದಾರಿಯಲ್ಲಿ’ ಅನ್ನೋ ಕ್ಯಾಚಿ ಟೈಟಲ್ ಜೊತೆಗೆ `ನೋಡು ಎಂಥ ಚೆಂದ’ ಅನ್ನೋ ಅಡಿ ಬರಹ ಕೂಡ ಇದೆ. ಅದನ್ನು ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಹೊಸ ಚಿತ್ರದ ಟೈಟಲ್ ರಿವೀಲ್ ಮಾಡುವುದರ ಜೊತೆಗೆ ಯುಗಾದಿ ಹಬ್ಬದ ಶುಭಾಶಯಗಳು ಹರೆಯದ ಹೃದಯಗಳೇ ಹರಸಿ ಅಂತಾ ಬರೆದುಕೊಂಡಿದ್ದಾರೆ.  ಅಪ್ಪು, ಗಣೇಶ್ ಮತ್ತು `ಬಾನದಾರಿಯಲ್ಲಿ’ ಎಂಬ ಡಿಫರೆಂಟ್ ಟೈಟಲ್  ಸಿನಿಪ್ರಿಯರಿಗೆ ಕನೆಕ್ಟ್ ಆಗುವುದರ ಜೊತೆಗೆ ಮೋಡಿ ಮಾಡುವುದಂತೂ ಸುಳ್ಳಲ್ಲ. ಇದನ್ನೂ ಓದಿ: ದೆಹಲಿಯಲ್ಲಿ ರಾಕಿಬಾಯ್ ನೋಡಲು ಮುಗಿಬಿದ್ದ ಅಭಿಮಾನಿಗಳು

    ಸಿನಿಮಾದ ಟೈಟಲ್ ನಲ್ಲಿರುವ ಅಂಶಗಳನ್ನು ಗಮನಿಸಿದರೆ ಗಣೇಶ್ ನಟನೆಯ ಈ ಹಿಂದಿನ ಸಿನಿಮಾಗಳಂತೆ ಈ ಚಿತ್ರ ಕೂಡ ಒಂದು ಅದ್ಭುತ ಲವ್ ಸ್ಟೋರಿ ಆಗಿರಲಿದೆ. ಈಗಾಗಲೇ ಭಿನ್ನ ಲವ್ ಸ್ಟೋರಿ, ಮತ್ತು ಬಗೆ ಬಗೆಯ ಪಾತ್ರಗಳ ಮೂಲಕ ಕಮಾಲ್ ಮಾಡಿರುವ ಗಣೇಶ್, ಹೊಸ ಸಿನಿಮಾದಲ್ಲೂ ಮುಂದುವರೆಸಲಿದ್ದಾರೆ. ಈ ಚಿತ್ರವನ್ನು ಪ್ರತಿಭಾವಂತ ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶನ ಮಾಡುತ್ತಿದ್ದರೆ, ಶ್ರೀವಾರಿ ಟಾಕೀಸ್ ಬಂಡವಾಳ ಹೂಡುತ್ತಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿವೆ.

  • ಗೋಲ್ಡನ್ ಸ್ಟಾರ್ ಗಣೇಶ್‍ಗೆ ಪಿತೃ ವಿಯೋಗ

    ಗೋಲ್ಡನ್ ಸ್ಟಾರ್ ಗಣೇಶ್‍ಗೆ ಪಿತೃ ವಿಯೋಗ

    ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಗೋಲ್ಡನ್ ಸ್ಟಾರ್ ಗಣೇಶ್ ರವರ ತಂದೆ ಕಿಶನ್ (82) ರವರು ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

    ನೆಲಮಂಗಲ ಸಮೀಪದ ಅಡಕಿ ಮಾರನಹಳ್ಳಿಯಲ್ಲಿ ವಾಸವಿದ್ದ ಕಿಶನ್ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಿಶನ್ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.

    ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ  ಕಿಶನ್ ನಿಧನರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬ- ಆರೇಂಜ್ ಚಿತ್ರದ ಲೋಗೋ ರಿಲೀಸ್

    ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬ- ಆರೇಂಜ್ ಚಿತ್ರದ ಲೋಗೋ ರಿಲೀಸ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್‍ಗೆ ಹುಟ್ಟುಹಬ್ಬದ ಸಂಭ್ರಮ, 38ನೇ ವಸತಂತಕ್ಕೆ ಕಾಲಿಟ್ಟ ಗಣೇಶ್ ತಮ್ಮ ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡ್ರು.

    ಈ ತಿಂಗಳಲ್ಲಿ ಮುಗುಳ್ನಗೆ ಚಿತ್ರ ಆಡಿಯೋ ರಿಲೀಸ್ ಆಗಲಿದ್ದು, ಇಂದಿನ ಹುಟ್ಟುಹಬ್ಬಕ್ಕೆ `ಆರೇಂಜ್’ ಚಿತ್ರದ ಲೋಗೋ ಬಿಡುಗಡೆ ಮಾಡಿದ್ದಾರೆ. ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಟ ಗಣೇಶ್, ನನ್ನ ಅಭಿಮಾನಿ ಹಾಗೂ ಗೆಳೆಯರ ಜೊತೆ ಸೇರಲು ಪ್ರತಿ ವಷ್ಧ ಹುಟ್ಟುಹಬ್ಬ ನನಗೊಂದು ಅವಕಾಶ ಮಾಡಿಕೊಡುತ್ತದೆ. ಈ ಒಂದು ದಿನವನ್ನು ಅಭಿಮಾನಿ, ಗೆಳೆಯರಿಗೋಸ್ಕರವೇ ನೀಡುತ್ತಿದ್ದು, ಅವರ ಜೊತೆನೇ ಇರುತ್ತೇವೆ. ಹುಟ್ಟು ಹಬ್ಬ ಆಚರಿಸಕೊಳ್ಳೆಮದು ಬೇರೆ ಊರುಗಳಿಂದ ಅಭಿಮಾನಿಗಳು ಆಗಮಿಸುತ್ತಾರೆ ಅವರಿಗೆಲ್ಲರಿಗೂ ನನ್ನ ಧನ್ಯವಾದಗಳು ಅಂತಾ ಹೇಳಿದ್ರು.

    ಹುಟ್ಟುಹಬ್ಬದ ಜೊತೆಗೆ ಆರೇಂಜ್ ಚಿತ್ರದ ಲೋಗೋವನ್ನು ಬಿಡುಗಡೆ ಮಾಡಿದ್ದೇವೆ. ಸದ್ಯ ನಾನು ಚಮಕ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದೇನೆ. ಒಂದು ವಾರದ ಬಳಿಕ ಮುಗುಳ್ನಗೆ ಆಡಿಯೋ ರಿಲೀಸ್ ಕೂಡ ಮಾಡಬೇಕೆಂದಿದ್ದೇವೆ.

     

  • ಹೊಸ ಲುಕ್‍ನಲ್ಲಿ ಗೋಲ್ಡನ್ ಸ್ಟಾರ್ ‘ಮುಗುಳು ನಗೆ’

    ಹೊಸ ಲುಕ್‍ನಲ್ಲಿ ಗೋಲ್ಡನ್ ಸ್ಟಾರ್ ‘ಮುಗುಳು ನಗೆ’

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ‘ಮುಗುಳುನಗೆ’ಯಲ್ಲಿ ಹೊಸ ಲುಕ್‍ನಿಂದ ಗಮನ ಸೆಳೆಯುತ್ತಿದ್ದಾರೆ. ಫಸ್ಟ್ ಟೈಂ ಗಣೇಶ್ ವಿಭಿನ್ನ ಹೇರ್ ಸ್ಟೈಲ್‍ನಲ್ಲಿ ಕಾಣಿಸಿಕೊಳ್ತಿದ್ದಾರೆ.

    ಇದೊಂದು ಟ್ರೆಂಡಿ ಹೇರ್ ಸ್ಟೈಲ್ ಆಗಿದ್ದು ಈ ಲುಕ್ ಅವ್ರ ಮುಂದಿನ ಚಿತ್ರ ಮುಗುಳು ನಗೆಯಲ್ಲಿ ನೋಡಬಹುದು. ಇತ್ತೀಚೆಗೆ ಸ್ಟಾರ್ ನಟರು ಪ್ರತಿಯೊಂದು ಸಿನಿಮಾಕ್ಕೂ ಹೇರ್ ಸ್ಟೈಲ್ ಬದಲಾಯಿಸೋ ಪದ್ಧತಿ ಜಾರಿಯಲ್ಲಿದೆ. ಆದ್ರೆ ಗಣೇಶ್ ಹೆಚ್ಚಾಗಿ ಹೇರ್ ಸ್ಟೈಲ್ ಮೇಲೆ ಪ್ರಯೋಗ ಮಾಡ್ತಿರಲಿಲ್ಲ. ಇದೀಗ ಫಸ್ಟ್ ಟೈಂ ಇಂಥದ್ದೊಂದು ಲುಕ್‍ನಲ್ಲಿ ಗಣೇಶ್ ಕಾಣಿಸಿಕೊಡು ಆಶ್ಚರ್ಯ ಮೂಡಿಸಿದ್ದಾರೆ.

    ಇತ್ತೀಚೆಗೆ ಬಿಡುಗಡೆಯಾದ ಕಿಚ್ಚ ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರದಲ್ಲಿ ಸುದೀಪ್ ತಮ್ಮ ವಿಭಿನ್ನ ಹೇರ್ ಸ್ಟೈಲ್ ಮೂಲಕ ಗಮನ ಸೆಳೆದಿದ್ದರು. ಸುದೀಪ್ ಅಭಿಮಾನಿಗಳಂತೂ ಇದೇ ಹೇರ್ ಸ್ಟೈಲ್ ಮಾಡಿಸಿಕೊಂಡು ಕಿಚ್ಚ ಸುದೀಪ್ ಮೇಲಿನ ಅಭಿಮಾನವನ್ನು ಮೆರೆದಿದ್ದರು