Tag: Goon’s

  • ಗುಜರಾತ್‍ ಶಾಸಕ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

    ಗುಜರಾತ್‍ ಶಾಸಕ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

    ಗಾಂಧಿನಗರ: ಸಾರ್ವಜನಿಕ ಸಭೆ ವೇಳೆ ದಲಿತ ಮುಖಂಡ ( Dalit leader) ಮತ್ತು ಗುಜರಾತ್‍ನ ವಡ್ಗಾಮ್(Vadgam) ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ ( Jignesh Mevani ) ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

    ಈ ಕುರಿತಂತೆ ಜಿಗ್ನೇಶ್ ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ ಅವರ ಬೆಂಬಲಿಗರು, ಈ ದಾಳಿಯನ್ನು ರಾಜ್ಯದ ಮಾಜಿ ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಅವರಿಗೆ ಸೇರಿದ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೊಹಿನೂರ್‌ ವಜ್ರ ಜಗನ್ನಾಥ ದೇವರಿಗೆ ಸೇರಿದ್ದು; ಬ್ರಿಟನ್‌ನಿಂದ ವಾಪಸ್‌ ತರಿಸಿ – ರಾಷ್ಟ್ರಪತಿಗೆ ಮನವಿ

    ದಾಳಿ ವೇಳೆ ಅಹಮದಾಬಾದ್‍ನ ವಸ್ತ್ರಾಲ್‍ನಲ್ಲಿರುವ ನರ್ಮದಾ ಅಪಾರ್ಟ್‍ಮೆಂಟ್‍ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಜಿಗ್ನೇಶ್ ಮೇವಾನಿ ಮತ್ತು ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಹಿತೇಂದ್ರ ಪಿತಾಡಿಯಾ(Hitendra Pithadiya) ಉಪಸ್ಥಿತರಿದ್ದರು. ಇದನ್ನೂ ಓದಿ: ರಸ್ತೆ ಬದಿಯಲ್ಲಿ ಬೆಂಕಿಗಾಹುತಿಯಾದ ಕಾರು – ಸಹಾಯಕ್ಕೆ ಧಾವಿಸಿದ ಮಹಾರಾಷ್ಟ್ರ ಸಿಎಂ

    ಮತ್ತೊಂದೆಡೆ ಈ ಘಟನೆ ಸಂಬಂಧ ಹಿತೇಂದ್ರ ಪಿತಾಡಿಯಾ ಅವರು ಟ್ವೀಟ್ ಮಾಡಿದ್ದು, ಪ್ರದೀಪ್‍ಸಿನ್ಹ್ ಜಡೇಜಾ(Pradipsinh Jadeja) ಅವರ ಗೂಂಡಾ ಲಾಭು ದೇಸಾಯಿ, ಜಿಗ್ನೇಶ್ ಮೇವಾನಿ ಮೇಲೆ ದಾಳಿ ಮಾಡಿ ಸಭೆಯನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಅಲ್ಲದೇ ಪೊಲೀಸರ ಸಮ್ಮುಖದಲ್ಲಿಯೇ ದಾಳಿ ನಡೆಸಲಾಗಿದೆ ಎಂದು ಹೇಳುವ ಮೂಲಕ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಠಾಣೆಯಲ್ಲೇ ಕೇಕ್ ಕತ್ತರಿಸಿ ಆರೋಪಿಯ ಹುಟ್ಟುಹಬ್ಬ ಆಚರಿಸಿದ ಪೊಲೀಸ್- ವಿಡಿಯೋ ವೈರಲ್

    ಠಾಣೆಯಲ್ಲೇ ಕೇಕ್ ಕತ್ತರಿಸಿ ಆರೋಪಿಯ ಹುಟ್ಟುಹಬ್ಬ ಆಚರಿಸಿದ ಪೊಲೀಸ್- ವಿಡಿಯೋ ವೈರಲ್

    ಮುಂಬೈ: ಠಾಣೆಯಲ್ಲೇ ಪೊಲೀಸರು ಆರೋಪಿಯ ಹುಟ್ಟುಹಬ್ಬ ಆಚರಿಸಿದ ಘಟನೆ ಮುಂಬೈನಲ್ಲಿ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

    ಅಯಾನ್ ಖಾನ್ ಪೊಲೀಸ್ ಠಾಣೆಯಲ್ಲಿ ಜನ್ಮದಿನ ಆಚರಿಸಿಕೊಂಡ ಆರೋಪಿ. ಜುಲೈ 23ರಂದು ಈ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸ್ ಉಪ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ.

    ಆರೋಪಿ ಅಯಾನ್ ಖಾನ್ ವಿರುದ್ಧ ಅಪಹರಣ ಹಾಗೂ ಹಲ್ಲೆ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ಆದರೆ ಖಾನ್ ಜುಲೈ 23ರಂದು ಕೇಕ್ ಹಿಡಿದು ಠಾಣೆಗೆ ಬಂದ ಪೊಲೀಸರ ಜೊತೆಗೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾನೆ. ಈ ವೇಳೆ ಸಮವಸ್ತ್ರದಲ್ಲಿದ್ದ ಪೊಲೀಸ್ ಒಬ್ಬರು ಅಯಾನ್ ಖಾನ್‍ಗೆ ಕೇಕ್ ತಿನ್ನಿಸಿ ಶುಭಕೋರಿದ್ದಾರೆ.

    ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಮುಂಬೈ ಠಾಣೆಯ ಪೊಲೀಸರು, ಅಯಾನ್ ಖಾನ್ ಆರೋಪಿಯಲ್ಲ. ಅವನು ನಿರಪರಾಧಿ ಎಂದು ಸಾಬೀತಾಗಿದ್ದು, ಠಾಣೆಗೆ ಮಾಹಿತಿದಾರನಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ. ಆದರೆ ಘಟನೆ ಸತ್ಯಾಸತ್ಯತೆ ತಿಳಿಯುವ ಸಂಬಂಧ ಪೊಲೀಸ್ ಉಪ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ. ಅಷ್ಟೇ ಅಲ್ಲದೆ ಪೊಲೀಸ್ ಠಾಣೆಯಲ್ಲಿ ಯಾರೊಬ್ಬರ ಹುಟ್ಟುಹಬ್ಬವನ್ನು ಆಚರಿಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

     

    ಉತ್ತರ ಪ್ರದೇಶದ ನೈನಿ ಜೈಲಿನಲ್ಲಿ ಕಳೆದ ಜೂನ್ ತಿಂಗಳಲ್ಲಿ ಇಂತಹದ್ದೆ ಘಟನೆ ನಡೆದಿತ್ತು. ಉದ್ಯಮಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ ಜೈಲು ಸೇರಿದ್ದ ಆರೋಪಿ ಅತಿಖ್ ಅಹ್ಮದ್‍ನನ್ನು ನೈನಿ ಜೈಲಿನಿಂದ ಗುಜರಾತ್‍ನ ಸಬರಮತಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ಜೈಲಿನ ಎಲ್ಲ ಕೈದಿ ಹಾಗೂ ಪೊಲೀಸ್ ಸಿಬ್ಬಂದಿಗೆ ಆರೋಪಿ ಮದ್ಯದ ಪಾರ್ಟಿ ಆಯೋಜಿಸಿದ್ದ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.