Tag: gopalakrishna

  • ತಪ್ಪು ಮಾಡಿದ್ದರೆ ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ : ಡಿಕೆ. ಶಿವಕುಮಾರ್

    ತಪ್ಪು ಮಾಡಿದ್ದರೆ ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ : ಡಿಕೆ. ಶಿವಕುಮಾರ್

    ಬೆಂಗಳೂರು: ಎಲೆಕ್ಷನ್ ಟೈಂನಲ್ಲಿ ಹೀಗೆ ಹೆದರಿಸುವುದಕ್ಕೆ ಯಾವುದೋ ಆಡಿಯೋ ಬಿಡುಗಡೆ ಮಾಡಿ ಹೆದರಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ಆಗಲಿ. ತಪ್ಪು ಮಾಡಿದ್ದರೆ ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಶಾಸಕ ಎಸ್. ಆರ್ ವಿಶ್ವನಾಥ್ ಕೊಲೆಗೆ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣರಿಂದ ಯತ್ನ ನಡೆದಿದೆ ಎಂಬ ಆರೋಪದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲೆಕ್ಷನ್ ಟೈಂನಲ್ಲಿ ಹೀಗೆ ಹೆದರಿಸುವುದಕ್ಕೆ ಯಾವುದೋ ಆಡಿಯೋ ಬಿಡುಗಡೆ ಮಾಡಿ ಹೆದರಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ಆಗಲಿ. ತಪ್ಪು ಮಾಡಿದ್ದರೆ ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ. ಚುನಾವಣೆಯಲ್ಲಿ ಅವರ ವಿರುದ್ಧ ಹೋದವರನ್ನು ಹೆದರಿಸುವ ಕೆಲಸ ಆಗುತ್ತಿದೆ. ತನಿಖೆ ಆಗಲಿ ಎಲ್ಲಾ ಗೊತ್ತಾಗುತ್ತದೆ. ನಮ್ಮ ಪಕ್ಷದಲ್ಲಿ ಯಾರು ಅಂತಹ ಕೆಲಸ ಮಾಡುವವರು ಇಲ್ಲ. ರಾಜಕೀಯವಾಗಿ ಅವರನ್ನು ಹೆದರಿಸುವುದಕ್ಕೆ ಇಂತಹ ಆರೋಪ ಮಾಡಿರಬಹುದು ಎಂದು ಗೋಪಾಲಕೃಷ್ಣ ಪರ ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಸ್ಯಾಂಪಲ್‌ ಕಳುಹಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

    ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸರ್ಕಾರಿ ಅಧಿಕಾರಿಗಳು ಮತಯಾಚನೆ ಮಾಡುತ್ತಿದ್ದಾರೆ ಎಂಬ ಆರೋಪ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಸೇರಿದಂತೆ ಅನೇಕ ಕಡೆ ಇದೇ ಆಗುತ್ತಿದೆ. ಸರ್ಕಾರ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸರ್ಕಾರಿ ಅಧಿಕಾರಿಗಳೇ ಅನೇಕ ಕಡೆ ಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್‌ – ಸುಪಾರಿ ಕೊಡ್ತಿರೋ ವೀಡಿಯೋ, ಆಡಿಯೋ ವೈರಲ್‌

    ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಕೆಜಿಎಫ್ ಬಾಬುಗೆ ಕಾಂಗ್ರೆಸ್‍ನಲ್ಲಿ ಟಿಕೆಟ್ ಕೊಟ್ಟಿದ್ದಾರೆ ಎಂಬ ಸಹಕಾರ ಸಚಿವ ಸೋಮಶೇಖರ್ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸೋಮಶೇಖರ್ ಯಾರನ್ನು ಜೊತೆಯಲ್ಲಿ ಇಟ್ಟುಕೊಂಡಿದ್ದಾರೆ. ಎಂತ, ಎಂತ ಆರೋಪ ಇರುವವರು ಅವರ ಜೊತೆ ಇದ್ದಾರೆ ಅಂತ ಎಲ್ಲಾ ಗೊತ್ತಿದೆ. ಮೊದಲು ಅವರ ತಟ್ಟೆ ಕ್ಲೀನ್ ಮಾಡಿಕೊಳ್ಳಲಿ ಆಮೇಲೆ ನಮ್ಮ ಬಗ್ಗೆ ಮಾತಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯದಿಂದ ಇಸ್ರೋ ಸಂಸ್ಥೆ ಗುಜರಾತ್‍ಗೆ ಶಿಫ್ಟ್ ಮಾಡುತ್ತಿರುವ ಬಗ್ಗೆ, ಕೇಂದ್ರ ಸರ್ಕಾರ ಈ ನಿರ್ಧಾರ ಬದಲಿಸಬೇಕು. ಗುಜರಾತ್‍ಗೆ ಬೇಕಿದ್ದರೆ ಬೇರೊಂದು ಪ್ರಾಜೆಕ್ಟ್ ನೀಡಲಿ. ಆದರೆ ಇದು ನಮ್ಮ ರಾಜ್ಯದ ಹೆಮ್ಮೆಯ ವಿಚಾರ. ಕೇಂದ್ರ ಸರ್ಕಾರ ಈ ತೀರ್ಮಾನ ಕೈಬಿಡಬೇಕು. ಇದು ನಮ್ಮ ಕಾಂಗ್ರೆಸ್ ಹಾಗೂ ರಾಜ್ಯದ ಜನರ ಒತ್ತಾಯವಾಗಿದೆ ಎಂದು ಹೇಳಿದ್ದಾರೆ.

  • ಸೂಲಿಬೆಲೆ, ತೇಜಸ್ವಿ ವಿರುದ್ಧ ಕೆಟ್ಟ ಪದ ಬಳಸಿ ಬೇಳೂರು ವಾಗ್ದಾಳಿ

    ಸೂಲಿಬೆಲೆ, ತೇಜಸ್ವಿ ವಿರುದ್ಧ ಕೆಟ್ಟ ಪದ ಬಳಸಿ ಬೇಳೂರು ವಾಗ್ದಾಳಿ

    ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕೆಟ್ಟ ಪದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದಾರೆ.

    ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಜೊತೆಗೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದರು ಕೂಡ ಪ್ರತಿಕ್ರಿಯಿಸದ ತೇಜಸ್ವಿ ಸೂರ್ಯ ಮತ್ತು ಚಕ್ರವರ್ತಿ ಸೂಲಿಬೆಲೆ ಕೇವಲ ಬಿಜೆಪಿ ಸರ್ಕಾರವನ್ನು ಹೊಗಳುವುದೇ ಕೆಲಸವಾಗಿದೆ ಎಂದು ಟೀಕಿಸಿದ್ದಾರೆ.

    ಜನರನ್ನು ಪ್ರಚೋದನೆ ಮಾಡುವುದು ಇವರ ಕೆಲಸವಾಗಿದೆ. ಮೋದಿ, ಮೋದಿ ಎನ್ನುವ ಇವರು ಮೋದಿ ಅಧಿಕಾರಕ್ಕೆ ಬಂದ ನಂತರ ಯಾವುದೇ ಸೈನಿಕ ಸಾವನ್ನಪ್ಪಿಲ್ಲವೇ ಎಂದು ಚಕ್ರವರ್ತಿ ಸೂಲಿಬೆಲೆಗೆ ಪ್ರಶ್ನಿಸಿದ್ದಾರೆ. ಅನಂತ್ ಕುಮಾರ್ ಅವರಂತಹ ದಿಟ್ಟ ನಾಯಕನ ಕ್ಷೇತ್ರದಲ್ಲಿ ಆಯ್ಕೆಯಾಗಿ ಬಂದ ತೇಜಸ್ವಿ ಸೂರ್ಯ ಏನಾದರೂ ಸಾಧಿಸುತ್ತಾರೆ ಎಂದುಕೊಂಡಿದ್ದೆವು. ಆದರೆ ಈರುಳ್ಳಿ ಬೆಲೆ ಗಗನಕ್ಕೇರಿದ್ದರು ತುಟಿ ಬಿಚ್ಚದ ಸಂಸದರು ಇವರು ಎಂದು ಟೀಕಿಸಿದ್ದಾರೆ.

    ಇದೇನಾ ಮೋದಿಯವರ ಅಚ್ಚೇದಿನ್, ನಿಮ್ಮದು ಉತ್ತಮ ಸರ್ಕಾರನಾ ಎಂದು ಪ್ರಶ್ನಿಸಿದ್ದಾರೆ. ನಿಮ್ಮದು ಕೂಡ ದರಿದ್ರ ಸರ್ಕಾರನೇ ಎಂದು ಬೇಳೂರು ಹೇಳಿದ್ದಾರೆ. ಇನ್ನು ನಲಪಾಡ್ ಅಪಘಾತ ಮಾಡಿದರೆ ಜೈಲಿಗೆ ಹಾಕಿ ಎನ್ನುವ ಇವರು ಸಚಿವ ಆರ್. ಅಶೋಕ್ ಪುತ್ರ ಅಪಘಾತ ಮಾಡಿದರೆ ಏನು ಹೇಳುತ್ತಾರೆ. ಅಶೋಕ್ ಮತ್ತು ಸಿ.ಟಿ. ರವಿ ಈಗೇನು ಹೇಳುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.