Tag: Gopalya

  • ಈಶ್ವರಪ್ಪರನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ

    ಈಶ್ವರಪ್ಪರನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ

    – ಈಶ್ವರಪ್ಪ ದೊಡ್ಡ ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ

    ಚಿಕ್ಕಮಗಳೂರು/ಮೈಸೂರು: ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಅತ್ಮಹತ್ಯೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಕಾರಣ ಎಂದು ಆರೋಪಿಸಲಾಗುತ್ತಿದೆ. ಅಲ್ಲದೆ ಕೆಲವೆಡೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಆದರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಸಚಿವ ಗೋಪಾಲಯ್ಯ ಸಮರ್ಥಿಸಿಕೊಂಡಿದ್ದಾರೆ.

    ESHWARAPPA

    ಈಶ್ವರಪ್ಪ ಅವರ ಮೇಲೆ ಬಂದಿರುವ ಆರೋಪ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ರಾಜೀನಾಮೆ ಕೇಳೋದು ಸ್ವಾಭಾವಿಕ. ನಾವು ವಿಪಕ್ಷದಲ್ಲಿದ್ರೂ ಅದೇ ಮಾಡ್ತಾ ಇದ್ವಿ. ಸಿಎಂ ಬೊಮ್ಮಾಯಿ, ಈಶ್ವರಪ್ಪ ಇದ್ದಾರೆ. ಅವರು ವಯಸ್ಸು ಅನುಭವ ಎರಡರಲ್ಲೂ ದೊಡ್ಡವರು. ಸಾರ್ವಜನಿಕ ಜೀವನದಲ್ಲಿ ಅನಿರ್ವಾಯವಾಗಿ ತಲೆಕೊಡುವ ಪರಿಸ್ಥಿತಿ ಬರುತ್ತದೆ. ಸಿಎಂ ಮತ್ತು ಈಶ್ವರಪ್ಪ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

    ಸಾರ್ವಜನಿಕ ಸಂಶಯ ದೂರಾಗಿಸಲು ಸಿಎಂ, ಈಶ್ವರಪ್ಪ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಪಕ್ಷದಿಂದ ಯಾವುದೇ ಸೂಚನೆ ನೀಡಿಲ್ಲ. ಮೇಲ್ನೋಟಕ್ಕೆ ಈಶ್ವರಪ್ಪ ಅವರ ಪಾತ್ರ ಕಂಡುಬಂದಿಲ್ಲ. ನಾನು ಹೇಳಿದ್ರೆ ಯಾರೂ ನಂಬಲ್ಲ. ನಾನು ತನಿಖಾ ಏಜೆನ್ಸಿಯಲ್ಲ. ಕಾಂಗ್ರೆಸ್, ಬೇರೆಯವರು ದಾಖಲೆ ಇದ್ರೆ ತನಿಖಾ ಏಜೆನ್ಸಿ ಮುಂದೆ ಸಲ್ಲಿಸಲಿ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸ್ತಾರೆ ಎಂದು ಸವಾಲು ಹಾಕಿದರು.

    ಸಂತೋಷ್ ಪಾಟೀಲ್ ಸಾವು ದುರದೃಷ್ಟಕರ. ಯಾವುದೇ ಜೀವಕ್ಕೂ ಬೆಲೆ ಇರುತ್ತೆ. ಅವರು ಆತ್ಮಹತ್ಯೆ ದಾರಿ ಹಿಡಿಯಬಾರದಿತ್ತು. ಸಮಗ್ರ ತನಿಖೆಯಾಗಬೇಕು ಸಿಎಂಗೆ ಮನವಿ ಮಾಡ್ತೇನೆ. ಈ ಹಿಂದೆ ಪತ್ರ ಸಂಬಂಧ ಈಶ್ವರಪ್ಪ ಜೊತೆ ಮಾತನಾಡಿದ್ದೆ. ವರ್ಕ್ ಅರ್ಡರ್ ತೆಗೆದುಕೊಂಡಿಲ್ಲ, ಸ್ಯಾಂಕ್ಷನ್ ಅರ್ಡರ್ ಇಲ್ಲ. ಅಧಿಕಾರಿಗಳ ಹತ್ರ ಮಾತನಾಡಿದೆ, ಅವರು ಕೆಲಸ ಮಾಡಿದ್ದೇನೆ ಅಂತಿದ್ದಾರೆ. ವರ್ಕ್ ಅರ್ಡರ್ ಇಲ್ಲದೆ ಹೇಗೆ ಪೇಮೆಂಟ್ ಮಾಡೋದು ಅಂತಿದ್ದಾರೆ ಎಂದು ವಿವರಿಸಿದರು.

    ESHWARAPPA

    ಅಧಿಕಾರಿಗಳು ಹೇಳಿದ್ದಾರೆ ಎಂದು ಈಶ್ವರಪ್ಪ ಅವರು ನನ್ನ ಗಮನಕ್ಕೆ ತಂದಿದ್ದರು. ಜನರ ಪ್ರೀತಿಗಳಿಸಲು ಜಾತ್ರೆ ಎಂದು ಕೆಲಸ ಮಾಡಿರುವ ಸಾಧ್ಯತೆಯಿದೆ. ಆದರೆ ಸರ್ಕಾರ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸಬೇಕು. ವರ್ಕ್ ಆರ್ಡರ್ ಇಲ್ಲದೆ ಬಿಲ್ ಕೊಡೋಕೆ ಸಾಧ್ಯವಿಲ್ಲ. ಯಾರ ಮಾತು ಕೇಳಿ ಕೆಲಸ ಮಾಡಿದ ತನಿಖೆಯಿಂದ ಗೊತ್ತಾಗಬೇಕು. ಕೋಟ್ಯಂತರ ರೂ. ಕೆಲಸವನ್ನು ಪಿಸ್ ವರ್ಕ್ ಕೆಲಸ ಮಾಡಿಸಿದ್ದಾರೆ ಎಂದು ಹೇಳೋಕಾಗಲ್ಲ. ವರ್ಕ್ ಆರ್ಡರ್ ಇಲ್ಲದೆ ಕೆಲಸ ಯಾಕೆ ಮಾಡಿದ್ರು ಹೇಗೆ ಮಾಡಿದ್ರು. ಈ ಸಮಗ್ರ ತನಿಖೆಗೆ ಆಗ್ರಹಿಸ್ತೇನೆ ಎಂದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ

    ಜೆಡಿಎಸ್ ಭದ್ರಕೋಟೆ ಹಾಸನ‌ ಜಿಲ್ಲೆಯ ಉಸ್ತುವಾರಿ ಯಾಗಿ ಸಚಿವ ಕೆ.ಗೋಪಾಲಯ್ಯ ನೇಮಕ | Minister K Gopalya Appointedn as a in charge of Hassan– News18 Kannada

    ಇತ್ತ ಮೈಸೂರಿನಲ್ಲಿ ಸಚಿವ ಸಚಿವ ಗೋಪಾಲಯ್ಯ ಅವರು ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಅವರು ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ. ಅವರ ವಿರುದ್ಧ ದೊಡ್ಡ ಪಿತೂರಿ ನಡೆಸಲಾಗಿದೆ. ಈಶ್ವರಪ್ಪ ಜೊತೆ ನಾವೆಲ್ಲರೂ ಇರ್ತೀವಿ. ಅವನಿಗೆ ಯಾರು ಫ್ಲೈಟ್ ಟಿಕೆಟ್ ಮಾಡಿಕೊಟ್ಟಿದ್ದು. ಉಡುಪಿಗೆ ಹೋಗಿ ಯಾಕೆ ಆತ್ಮಹತ್ಯೆ ಮಾಡಿಕೊಂಡ. ಕಂಟ್ರಾಕ್ಟರ್ ಸಂತೋಷ್ ದೆಹಲಿಗೆ ಯಾಕೆ ಹೋದ ಎಂದು ಪ್ರಶ್ನೆ ಕೇಳಿದ್ದು, ಅವನ ಜೊತೆ ಯಾರ್ಯಾರು ಇದ್ರು ಹೀಗೆ ಎಲ್ಲವೂ ಬಯಲಿಗೆ ಬರುತ್ತೆ. ಒಂದಂತೂ ಸ್ಪಷ್ಟ ಈಶ್ವರಪ್ಪ ದೊಡ್ಡ ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ ಎಂದು ಈಶ್ವರಪ್ಪ ಪರ ಅವರು ಬ್ಯಾಟಿಂಗ್ ಮಾಡಿದರು.

  • ಹಾಸನದಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ : ಗೋಪಾಲಯ್ಯ

    ಹಾಸನದಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ : ಗೋಪಾಲಯ್ಯ

    ಹಾಸನ: ಹಾಸನದಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ ಉಸ್ತುವಾರಿ ಸಚಿವ ಗೋಪಾಲಯ್ಯ ಘೋಷಣೆ ಮಾಡಿದ್ದಾರೆ.

    ಪ್ರಧಾನಿ ಜೊತೆ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾರದಲ್ಲಿ ಮೂರು ದಿನ ಮಾತ್ರ ಬೆಳಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸ್ತು ಕೊಳ್ಳಲು ಅವಕಾಶ ಇರುತ್ತದೆ. ಸೋಮವಾರ, ಬುಧವಾರ, ಶುಕ್ರವಾರ ಬಿಟ್ಟು ಉಳಿದ ದಿನ ಸಂಪೂರ್ಣ ಲಾಕ್‍ಡೌನ್ ಇರುತ್ತದೆ ಎಂದು ಹೇಳಿದ್ದಾರೆ.

    ಕೊರೊನಾ ಹೆಚ್ಚಾಗಿರುವುದರಿಂದ ಲಾಕ್‍ಡೌನ್ ಮಾಡುವುದದಾಗಿ ನಿರ್ಧರವನ್ನು ತೆಗೆದುಕೊಂಡಿದ್ದೇವೆ. ಜಿಲ್ಲೆಯ ಜನತೆ ಸಂಪೂರ್ಣ ಸಹಕಾರವನ್ನು ಕೊಡಬೇಕು ಎಂದು ಗೋಪಾಲಯ್ಯ ಅವರು ಮನವಿ ಮಾಡಿದ್ದಾರೆ.

    ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ, ಲಾಕ್‍ಡೌನ್ ನಿರ್ಧಾರವನ್ನು ಜಿಲ್ಲಾಡಳಿತದ ಹೆಗಲಿಗೆ ವಹಿಸಿದ್ದಾರೆ. ಜಿಲ್ಲೆಯ ಸ್ಥಿತಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ನೀವೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಮೋದಿ ತಿಳಿಸಿದ್ದಾರೆ. ಇದರ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಢಳಿತ ಲಾಕ್‍ಡೌನ್ ನಿರ್ಧಾರವನ್ನು ತೆಗೆದುಕೊಂಡಿದೆ.

  • ಸಣ್ಣ ರಾಜಕೀಯ ಮಾಡಿಲ್ಲ – ವೇದಿಕೆ ಮೇಲೆ ಬಾಲಣ್ಣ, ಗೋಪಾಲಸ್ವಾಮಿ ವಾಕ್ಸಮರ

    ಸಣ್ಣ ರಾಜಕೀಯ ಮಾಡಿಲ್ಲ – ವೇದಿಕೆ ಮೇಲೆ ಬಾಲಣ್ಣ, ಗೋಪಾಲಸ್ವಾಮಿ ವಾಕ್ಸಮರ

    – 21 ಕೋಟಿ ವೆಚ್ಚದ ವಿವಿಧ ಕಾಮಗಾರಿ ಶಂಕುಸ್ಥಾಪನೆ

    ಹಾಸನ: ಅಧಿಕಾರಿಗಳು ಎಂಎಲ್‍ಎ ಮಾತು ಕೇಳಿ ಆಹ್ವಾನ ಪತ್ರಿಕೆಯನ್ನು ಮನೆಗೆ ತಂದು ಎಸೆದು ಹೋಗುತ್ತಾರೆ ಎಂದು ವೇದಿಕೆ ಮೇಲೆಯೇ ಕಾಂಗ್ರೆಸ್ ಎಂಎಲ್‍ಸಿ ಗೋಪಾಲಸ್ವಾಮಿ ಆರೋಪ ಮಾಡಿದ್ದು, ಅಲ್ಲೇ ಇದ್ದ ಜೆಡಿಎಸ್ ಪಕ್ಷದ ಶಾಸಕ ಬಾಲಕೃಷ್ಣ ನಾನು ಆ ರೀತಿ ನಡೆದುಕೊಂಡಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

    ಇಂದು ಹಾಸನ ಜಿಲ್ಲೆಯ ಶ್ರವಣಬೆಳಗೂಳ ಕ್ಷೇತ್ರದಲ್ಲಿ ಸುಮಾರು 21 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಗೋಪಾಲಯ್ಯ ಪಾಲ್ಗೊಂಡಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ತಾಲೂಕಿನ ಅಭಿವೃದ್ಧಿಗೆ ತಾವು ಮಾಡಿರುವ ಹೋರಾಟದ ಬಗ್ಗೆ ಪ್ರಸ್ತಾಪಿಸಿದ ಎಂಎಲ್‍ಸಿ ಗೋಪಾಲಸ್ವಾಮಿ, ಅಧಿಕಾರಿಗಳು ಸಚಿವರ ಕಾರ್ಯಕ್ರಮಕ್ಕೆ ತಮ್ಮನ್ನು ಸರಿಯಾಗಿ ಕರೆದಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.

    ಈ ವೇಳೆ ಅಧಿಕಾರಿಗಳಿಗೆ ಬಹಿರಂಗ ಎಚ್ಚರಿಕೆ ನೀಡಿದ ಗೋಪಾಲಸ್ವಾಮಿ, ನಾನು ಕೂಡ ಒಬ್ಬ ವಿಧಾನಪರಿಷತ್ ಸದಸ್ಯ ಎಂಬ ಗೌರವ ಇರಲಿ. ನನಗೆ ಟಿಪಿ ನೋಡಿದ ನಂತರ ಉಸ್ತುವಾರಿ ಸಚಿವರು ಬರುತ್ತಿರುವುದು ಗೊತ್ತಾಯಿತು. ಇದು ಸಚಿವರೆದುರು ಅಧಿಕಾರಿಗಳಿಗೆ ಕೊನೆ ಎಚ್ಚರಿಕೆ. ಎಂಎಲ್‍ಎಯವರು ಹೇಳಿದರು ಎಂದು ಆಹ್ವಾನ ಪತ್ರಿಕೆಯನ್ನು ಎಸೆದು ಹೋಗುವ ಪರಿಸ್ಥಿತಿ ನಿರ್ಮಾಣ ಆಗಬಾರದು ಎಂದು ಬೇಸರ ಹೊರಹಾಕಿದರು.

    ನಂತರ ಮಾತನಾಡಿದ ಶಾಸಕ ಬಾಲಕೃಷ್ಣ ಇಂದಿನ ಕಾರ್ಯಕ್ರಮ ನಡೆಯಲು ತಾವು ಪಟ್ಟ ಶ್ರಮದ ಬಗ್ಗೆ ಸಾರ್ವಜನಿಕರಿಗೆ ತಿಳಿಸಿದರು. ನಂತರ ಗೋಪಾಲಸ್ವಾಮಿ ಅವರ ಆರೋಪಕ್ಕೆ ವೇದಿಕೆ ಮೇಲೆ ಸಮಜಾಯಿಷಿ ನೀಡಿದ ಅವರು, ಎಂಎಲ್‍ಸಿ ಹೇಳಿದ ರೀತಿ ನಾನು ಸಣ್ಣ ರಾಜಕಾರಣ ಮಾಡಿಲ್ಲ. ಮಂತ್ರಿಗಳು ಬರುತ್ತಿದ್ದಾರೆ ಎಂದು ನಾನೇ ನಿಮಗೆ ಹೇಳಿದ್ದೆ. ಆದರೆ ನಿಮಗೆ ಆಹ್ವಾನ ಪತ್ರಿಕೆಯನ್ನು ತಡವಾಗಿ ನೀಡಿ ಎಂದು ನಾನು ಹೇಳಿಲ್ಲ. ಈ ಬಗ್ಗೆ ದಯಮಾಡಿ ತಪ್ಪಾಗಿ ತಿಳಿಯಬೇಡಿ ಎಂದು ಮನವಿ ಮಾಡಿದರು.

  • ಮಹಾಲಕ್ಷ್ಮಿಲೇಔಟ್‍ನಿಂದ ರಾಜ್ಯಾದ್ಯಂತ ಕೆಲಸ ಮಾಡ್ತೀನಿ- ಸಚಿವ ಗೋಪಾಲಯ್ಯ

    ಮಹಾಲಕ್ಷ್ಮಿಲೇಔಟ್‍ನಿಂದ ರಾಜ್ಯಾದ್ಯಂತ ಕೆಲಸ ಮಾಡ್ತೀನಿ- ಸಚಿವ ಗೋಪಾಲಯ್ಯ

    – ಹಾಸನ ಜಿಲ್ಲೆಯ ಅಭಿವೃದ್ಧಿ ನನ್ನ ಗುರಿ

    ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‍ನಿಂದ ಇದೀಗ ರಾಜ್ಯಾದ್ಯಂತ ಕೆಲಸ ಮಾಡುತ್ತೀನಿ. ಅಲ್ಲದೇ ಕೋವಿಡ್-19 ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೂ ಪಡಿತರ ಸಿಗುವಂತೆ ಮಾಡುವುದೇ ನಮ್ಮ ಉದ್ದೇಶ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದರು.

    ಸಚಿವ ಗೋಪಾಲಯ್ಯ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯಲ್ಲಿ ನಾಗರಿಕರಿಗೆ ಸುಮಾರು 3 ಸಾವಿರ ಆಹಾರ ಕಿಟ್ ವಿತರಣೆ ಮಾಡಿದರು. ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಎಸ್.ಮುನಿರಾಜು ನೇತೃತ್ವದಲ್ಲಿ ಬಿಜೆಪಿ ಮುಖಂಡ ನರಸಿಂಹಮೂರ್ತಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಕಿಟ್ ವಿತರಣೆ ಮಾಡಿದರು.

    ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಗೋಪಾಲಯ್ಯ, ರಾಜ್ಯ ಸರ್ಕಾರ ಹಾಸನಕ್ಕೆ ಉಸ್ತವಾರಿಯಾಗಿ ನೇಮಕ ಮಾಡಿ ನನ್ನನ್ನು ಹಾಸನಕ್ಕೆ ಕಳುಹಿಸಿದ್ದು ಕೆಲಸ ಮಾಡಲಿಕ್ಕೆ. ಹಾಸನ ಕ್ಷೇತ್ರದಲ್ಲಿ ರೈತಾಪಿ ಕುಟುಂಬ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಕೆಲಸ ಮಾಡುತ್ತೀನಿ. ಪ್ರಾಮಾಣಿಕವಾಗಿ ನಾನು ಮಹಾಲಕ್ಷ್ಮಿ ಲೇಔಟ್‍ನಿಂದ ಇದೀಗ ರಾಜ್ಯಾದ್ಯಂತ ಕೆಲಸ ಮಾಡುತ್ತೀನಿ ಎಂದರು.

    ನನಗೆ ಗೊತ್ತಿರೋದು ಕೆಲಸ ಮಾಡೋದು ಅದನ್ನೆ ಅಲ್ಲಿಯೂ ಮಾಡುತ್ತೀನಿ. ಹಾಸನದಲ್ಲಿ ಎಲ್ಲ ಶಾಸಕರು, ಸಂಸದರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೀನಿ. ಆ ಶಕ್ತಿಯನ್ನ ಹಾಸನಾಂಬೆ ನನಗೆ ಕೊಡುತ್ತಾಳೆ. ಜಿಲ್ಲೆಯ ಅಭಿವೃದ್ಧಿ ಮಾಡಲು ನನ್ನನ್ನು ಕಳುಹಿಸಿದ್ದಾರೆ. ಹೀಗಾಗಿ ಅಭಿವೃದ್ಧಿಯೇ ನನ್ನ ಗುರಿ ಎಂದು ಹೇಳಿದರು.

    ಈ ವೇಳೆ ಮಾಜಿ ಶಾಸಕ ಎಸ್. ಮುನಿರಾಜು, ಬಿಜೆಪಿ ಮುಖಂಡ ನರಸಿಂಹಮೂರ್ತಿ, ಗೋಪಾಲಕೃಷ್ಣ, ನಾರಾಯಣ ಸ್ವಾಮಿ, ನರಸಿಂಹಮೂರ್ತಿ, ವಿಜಯ್ ಕುಮಾರ್, ಕೃಷ್ಣ ಮೂರ್ತಿ ಮತ್ತಿತರು ಉಪಸ್ಥಿತರಿದ್ದರು.