Tag: Gorakhpur

  • ಒಳಚರಂಡಿ ವಿವಾದ- ಕುಟುಂಬಸ್ಥರ ಎದುರೇ 12ರ ಬಾಲಕಿ ಮೇಲೆ  ಗ್ಯಾಂಗ್‍ರೇಪ್

    ಒಳಚರಂಡಿ ವಿವಾದ- ಕುಟುಂಬಸ್ಥರ ಎದುರೇ 12ರ ಬಾಲಕಿ ಮೇಲೆ ಗ್ಯಾಂಗ್‍ರೇಪ್

    ಗೋರಖ್ಪುರ: ಒಳಚರಂಡಿ ವಿಚಾರವಾಗಿ ಜಗಳವಾಡಿ, ಕುಟುಂಬಸ್ಥರ ಎದುರಲ್ಲೇ 12 ವರ್ಷದ ಬಾಲಕಿ ಮೇಲೆ 6 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಶುಕ್ರವಾರ ಸಂಜೆ ಅಹಿರುಲಿ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ಶುಕ್ರವಾರ ಬೆಳಗ್ಗೆ ಒಳಚರಂಡಿ ವ್ಯವಸ್ಥೆ ನಿರ್ಮಾಣದ ಬಗ್ಗೆ ಬಾಲಕಿಯ ಕುಟುಂಬದೊಂದಿಗೆ ಜಗಳಕ್ಕಿಳಿದಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಗಳು ಕೋಪಗೊಂಡಿದ್ದರು. ಸಂಜೆ 6 ಮಂದಿ ಆರೋಪಿಗಳು ಸೇರಿಕೊಂಡು ಬಾಲಕಿಯ ಕುಟುಂಬದ ಕಣ್ಣೆದುರೇ ಆಕೆಯ ಮೇಲೆ ಅತ್ಯಾಚಾರವೆಸೆಗಿ ದುಷ್ಟತನ ಮೆರೆದಿದ್ದಾರೆ.

    ಅಲ್ಲದೆ ಈ ವೇಳೆ ಕುಟುಂಬಸ್ಥರು ಈ ಅನ್ಯಾಯವನ್ನು ತಡೆಯಲು ಪ್ರಯತ್ನಿಸಿದಾಗ ಅವರ ಮೇಲೆಯೇ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶನಿವಾರ ಬೆಳಗ್ಗೆ ಬಾಲಕಿಯ ತಾಯಿ ಈ ಘಟನೆ ಕುರಿತು ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಬಳಿಕ ಆರೋಪಿಗಳಿಗೆ ಬಲೆ ಬೀಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇನ್ನೂ ಇಬ್ಬರು ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಆರು ಮಂದಿ ಆರೋಪಿಗಳ ವಿರುದ್ಧವೂ ಕೂಡ ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಪೋಕ್ಸೋ ಮತ್ತು ಎಸ್‍ಸಿ/ಎಸ್‍ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಆರ್.ಎನ್ ಮಿಶ್ರಾ ತಿಳಿಸಿದ್ದಾರೆ.

  • ಪ್ರೇಯಸಿ ಜೊತೆ ಸೆಕ್ಸ್ ಮಾಡೋವಾಗ ಸಿಕ್ಕಿಬಿದ್ದ- ಕುಟುಂಬಸ್ಥರಿಂದ ಯುವಕನ ಕೊಲೆ

    ಪ್ರೇಯಸಿ ಜೊತೆ ಸೆಕ್ಸ್ ಮಾಡೋವಾಗ ಸಿಕ್ಕಿಬಿದ್ದ- ಕುಟುಂಬಸ್ಥರಿಂದ ಯುವಕನ ಕೊಲೆ

    ಗೋರಕ್‍ಪುರ: ಯುವಕನೊಬ್ಬ ತನ್ನ ಪ್ರೇಯಸಿ ಜೊತೆ ರೂಮಿನಲ್ಲಿ ಸೆಕ್ಸ್ ಮಾಡುವ ವೇಳೆ ಸಿಕ್ಕಿಬಿದ್ದಿದ್ದು, ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಗೋರಕ್‍ಪುರ್ ನಲ್ಲಿ ನಡೆದಿದೆ.

    ಸೂರಜ್(24) ಕೊಲೆಯಾದ ಯುವಕ. ಸೂರಜ್ ಶೇರ್ ಪುರ್ ನ ನಿವಾಸಿಯಾಗಿದ್ದು, ಭಾನುವಾರ ತನ್ನ ಪ್ರೇಯಸಿಯ ರೂಮಿನಲ್ಲಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿದ್ದ. ಈ ವೇಳೆ ಯುವತಿಯ ಸಹೋದರ ರೂಮಿಗೆ ಬಂದಾಗ ಇಬ್ಬರು ಸೆಕ್ಸ್ ನಲ್ಲಿ ತೊಡಗಿದ್ದರು.

    ಸೂರಜ್ ಯುವತಿಯ ಸಹೋದರನನ್ನು ಕಂಡ ಕೂಡಲೇ ಗಾಬರಿಯಿಂದ ಲೈಸೆನ್ಸ್ ಇಲ್ಲದ ಗನ್ ತೆಗೆದು ಗೌತಮ್ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ಗೌತಮ್‍ಗೆ ಗುಂಡು ತಗುಲಿ ಗಾಯಗೊಂಡಿದ್ದನು. ಗುಂಡಿನ ಸದ್ದು ಕೇಳಿದ ಗ್ರಾಮಸ್ಥರು ಹಾಗೂ ಕುಟುಂಬದವರು ಯುವತಿಯ ರೂಮಿಗೆ ಬಂದರು.

    ಸ್ಥಳಕ್ಕೆ ಬಂದ ಗ್ರಾಮಸ್ಥರು ಹಾಗೂ ಕುಟುಂಬದವರು ಸೂರಜ್ ಮೇಲೆ ಮರದ ತುಂಡು ಹಾಗೂ ಚೂಪಾದ ವಸ್ತುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ವೇಳೆ ಸೂರಜ್ ತಲೆಗೆ ಗಂಭೀರ ಗಾಯಗಳಾಗಿತ್ತು. ಬಳಿಕ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಸೂರಜ್ ಮೃತಪಟ್ಟಿದ್ದಾನೆ.

    ಈ ಘಟನೆಯಲ್ಲಿ ಯುವತಿಯ ತಂದೆ ಹಾಗೂ ಸಹೋದರ ಸೇರಿದಂತೆ ಪೊಲೀಸರು ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಸೂರಜ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.

  • ನಮ್ಮದು ಪೇಪರ್‌ನಲ್ಲಿ ಇರೋ ಯೋಜನೆಯಲ್ಲ – ಕಿಸಾನ್ ಸಮ್ಮಾನ್ ಯೋಜನೆ ಪ್ರಧಾನಿ ಮೋದಿ ಚಾಲನೆ

    ನಮ್ಮದು ಪೇಪರ್‌ನಲ್ಲಿ ಇರೋ ಯೋಜನೆಯಲ್ಲ – ಕಿಸಾನ್ ಸಮ್ಮಾನ್ ಯೋಜನೆ ಪ್ರಧಾನಿ ಮೋದಿ ಚಾಲನೆ

    – ಮೊದಲ ಹಂತದಲ್ಲಿ 1 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ಜಮೆ

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗೋರಕ್‍ಪುರ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಿದ್ದಾರೆ.

    ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಹಿಂದಿನ ಸರ್ಕಾರದ ಯೋಜನೆಗಳು ಕೇವಲ ಪೇಪರ್‍ನಲ್ಲಿ ಮಾತ್ರ ಇತ್ತು. ಆದರೆ ನಮ್ಮ ಸರ್ಕಾರಲ್ಲಿ ಯಾವೆಲ್ಲ ಯೋಜನೆಗಳನ್ನು ಘೋಷಿಸಿದ್ದೇವೋ ಆ ಎಲ್ಲ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ ಎಂದು ಹೇಳಿದರು.

    ಇದು ಕೇವಲ ಆರಂಭವಷ್ಟೇ. ಪ್ರತಿ ವರ್ಷ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು 75 ಸಾವಿರ ಕೋಟಿ ರೂ.ವನ್ನು ಮಿಸಲಿಡಲಾಗುತ್ತದೆ. ಇಲ್ಲಿ ಯಾವುದೇ ಮಧ್ಯವರ್ತಿಗಳ ಪಾತ್ರವಿರುವುದಿಲ್ಲ. ಇದು ನಿಮ್ಮ ಹಣ. ಇದನ್ನು ಯಾರಿಂದಲೂ ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

    ರೈತರ ಬಗ್ಗೆ ಹಗುರವಾಗಿ ಮಾತನಾಡುವವರು ರಾಜಕೀಯ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಾರೆ. ಯೋಜನೆಯಲ್ಲಿ ರಾಜಕೀಯ ತಂತ್ರವಿದೆ ಎನ್ನುವವರ ಮಾತಿಗೆ ಕಿವಿ ಕೊಡಬೇಡಿ ಎಂದು ರೈತರಿಗೆ ಮನವಿ ಮಾಡಿಕೊಂಡ ಮೋದಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ ವಿರುದ್ಧ ಮಾತನಾಡಿದ್ದ ನಾಯಕರಿಗೆ ಟಾಂಗ್ ಕೊಟ್ಟರು.

    ಈ ಯೋಜನೆಯಿಂದಾಗಿ ದೇಶದ ಒಂದು ಕೋಟಿ ರೈತರ ಖಾತೆಗೆ ಇಂದು 2 ಸಾವಿರ ರೂ. ಪಾವತಿಯಾಗಲಿದೆ. ಜೊತೆಗೆ ಮುಂದಿನ ಎರಡು-ಮೂರು ದಿನಗಳಲ್ಲಿ ಮತ್ತೆ ಒಂದು ಕೋಟಿ ರೈತರ ಖಾತೆಗೆ ಹಣ ಪಾವತಿಯಾಗುತ್ತದೆ. ಈ ಮೂಲಕ ಒಟ್ಟು 12 ಕೋಟಿ ಸಣ್ಣ ಹಿಡುವಳಿದಾರ ರೈತರ ಖಾತೆಗೆ 2 ಸಾವಿರದಂತೆ ಮೂರು ಕಂತು (6,000 ರೂ.) ಪಾವತಿಯಾಗಲಿದೆ.

    ಏನಿದು ಯೋಜನೆ?:
    ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಹೆಸರಿನಲ್ಲಿ ಯೋಜನೆಯನ್ನು ಆರಂಭಿಸಿದೆ. ವರ್ಷಕ್ಕೆ 6 ಸಾವಿರ ರೂ. ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

    ಅರ್ಹತೆಗಳು ಏನು?
    2 ಹೆಕ್ಟೇರ್(4.94 ಎಕ್ರೆ) ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿಯನ್ನು ಹೊಂದಿರುವ ರೈತ ಕುಟುಂಬ ಈ ಯೋಜನೆಯ ಲಾಭವನ್ನು ಪಡೆಯಬಹುದು. 2019 ಫೆ.1ರ ಒಳಗಡೆ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಭೂ ದಾಖಲೆಗಳಲ್ಲಿ ನೊಂದಣಿಯಾದ ರೈತರು ಈ ಯೋಜನೆಗೆ ಅರ್ಹರಾಗುತ್ತಾರೆ. ಸರ್ಕಾರಿ ಉದ್ಯೋಗಿಗಳ ಪೈಕಿ ಗ್ರೂಪ್ ಡಿ/ ಬಹು ಕಾರ್ಯ ನಿರ್ವಹಿಸುವ ಸರ್ಕಾರಿ ನೌಕಕರು/ ನಾಲ್ಕನೇಯ ವರ್ಗದ ಸಿಬ್ಬಂದಿ ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು.

    ಎಲ್ಲಿ ಅರ್ಜಿ ಸಲ್ಲಿಸಬೇಕು?
    ಪಿಎಂ-ಕಿಸಾನ್ ಯೋಜನೆಗೆಂದು ಕೇಂದ್ರ ಸರ್ಕಾರ pmkisan.nic.in ವೆಬ್‍ಸೈಟ್ ತೆರೆದಿದೆ. ಈ ಯೋಜನೆಗೆ ಅರ್ಹತೆ ಪಡೆದ ರೈತರು ಈ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಪಿಎಂ-ಕಿಸಾನ್ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ತಿಳಿಯಬಹುದು. ಆನ್‍ಲೈನ್ ಮೂಲಕ ಈ ವೆಬ್‍ಸೈಟ್ ನಲ್ಲಿ ರೈತರು ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ರೈತರು ತಮ್ಮ ಹೆಸರನ್ನು ಹಾಗೂ ವಿವರಗಳನ್ನು ನೊಂದಾಯಿಸಲು ಫೆಬ್ರವರಿ 25 ಕೊನೆಯ ದಿನಾಂಕವಾಗಿದೆ.

    ಯಾವ ದಾಖಲೆಗಳು ಬೇಕು?:
    ಸರ್ಕಾರದಿಂದ ಅನುಮೋದಿಸಿದ ಐಡಿ ಪುರಾವೆಗಳು, ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಮಾಹಿತಿ, ಕೃಷಿ ಭೂವಿಯ ದಾಖಲೆಗಳು ರೈತರ ಬಳಿ ಇರಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು.

    ಈ ಯೋಜನೆಯಲ್ಲಿ ಗ್ರಾಮೀಣ ಕೃಷಿ ಭೂಮಿ ಅಥವಾ ನಗರ ಕೃಷಿ ಭೂಮಿಯೆಂದು ತಾರತಮ್ಯ ಮಾಡುವುದಿಲ್ಲ. ಗ್ರಾಮೀಣ ಹಾಗೂ ನಗರ ವ್ಯಾಪ್ತಿಗೆ ಬರುವ ಎರಡು ಕೃಷಿ ಭೂಮಿಗಳ ರೈತರು ಈ ಯೋಜನೆಗೆ ಅರ್ಹರು. ನಗರದಲ್ಲಿರುವ ಕೃಷಿ ಭೂಮಿಯನ್ನು ಪ್ರಸ್ತುತ ಈಗ ಕೃಷಿಗೆ ಚಟುವಟಿಕೆಗೆ ಬಳಸುತ್ತಿದ್ದರೆ ಮಾತ್ರ ಯೋಜನೆಯ ಫಲವನ್ನು ಪಡೆಯಬಹುದು.

    ಎಷ್ಟು ಹಣ ಬರುತ್ತದೆ?
    2 ಹೆಕ್ಟೇರ್ ಜಮೀನು ಹೊಂದಿರುವ ಸಣ್ಣ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಷಕ್ಕೆ 6 ಸಾವಿರ ರೂ. ಮೊತ್ತವನ್ನು 2 ಸಾವಿರ ರೂ. ನಂತೆ ಮೂರು ಕಂತುಗಳಲ್ಲಿ ಜಮೆ ಮಾಡುವ `ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಎಂದು ಕರೆಯಲಾಗುವ ಯೋಜನೆಯನ್ನು ಹಣಕಾಸು ಸಚಿವ ಪಿಯೂಶ್ ಗೋಯಲ್ ಈ ಬಾರಿಯ ಬಜೆಟ್ ನಲ್ಲಿ ಘೋಷಿಸಿದ್ದರು.

    ಈ ಯೋಜನೆಯಿಂದ 12 ಕೋಟಿಯಷ್ಟು ಸಣ್ಣ ಮತ್ತು ಬಡರೈತರಿಗೆ ಪ್ರಯೋಜನವಾಗಲಿದ್ದು, 2019-20ರ ಸಾಲಿನಲ್ಲಿ ಸರ್ಕಾರಕ್ಕೆ 75 ಸಾವಿರ ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. ಕೃಷಿ ಸಂಬಂಧಿ ಇತರ ಚಟುವಟಿಕೆಗಳಿಗೆ ಈ ಹಣ ನೆರವಾಗಲಿದೆ. ರೈತರು ಗೌರವಯುತ ಜೀವನ ಸಾಗಿಸಲು ಇದರಿಂದ ಸಾಧ್ಯವಾಗುತ್ತದೆ. 2018-19ರ ಸಾಲಿನಲ್ಲಿ ಪರಿಷ್ಕೃತ ಅಂದಾಜು ವಿಭಾಗದಲ್ಲಿ 20 ಸಾವಿರ ಕೋಟಿ ರೂ. ನೀಡಲಾಗಿದೆ. 2018ರ ಡಿಸೆಂಬರ್ ಪೂರ್ವಾನ್ವಯದಂತೆ ಈ ಯೋಜನೆ ಜಾರಿಯಾಗಲಿದೆ ಎಂದು ಗೋಯಲ್ ತಿಳಿಸಿದ್ದರು.

    ಚುನಾವಣೆಗೆ ಮೊದಲು ಬೀಳುತ್ತೆ ಹಣ:
    ಲೋಕಸಭಾ ಚುನಾವಣೆಯ ಒಳಗಡೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರ ಖಾತೆಗಳಿಗೆ 4 ಸಾವಿರ ರೂ. ಜಮೆಯಾಗುವ ಸಾಧ್ಯತೆಯಿದೆ. ಈ ಯೋಜನೆ ಅನ್ವಯ ಮೊದಲ ಕಂತನ್ನು ಮಾರ್ಚ್ 31ರ ಒಳಗಡೆ ಹಾಕಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. ಇದರ ಜೊತೆಯಲ್ಲೇ ಎರಡನೇ ಕಂತಿನ ಹಣವನ್ನು ಲೋಕಸಭಾ ಚುನಾವಣೆಯ ಒಳಗಡೆ ಜಮೆ ಮಾಡಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಈ ಸಂಬಂಧ ವಿವಿಧ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಕೃಷಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದು, ಶೀಘ್ರವೇ ರೈತರ ಮಾಹಿತಿಯನ್ನು ನೀಡುವಂತೆ ಮನವಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪತ್ನಿಯನ್ನು ಕೊಂದ ಪ್ರಸಿದ್ಧ ವೈದ್ಯ – 7 ತಿಂಗಳು ಸಾಮಾಜಿಕ ಜಾಲತಾಣದಲ್ಲಿ ಜೀವಂತ ಇಟ್ಟ!

    ಪತ್ನಿಯನ್ನು ಕೊಂದ ಪ್ರಸಿದ್ಧ ವೈದ್ಯ – 7 ತಿಂಗಳು ಸಾಮಾಜಿಕ ಜಾಲತಾಣದಲ್ಲಿ ಜೀವಂತ ಇಟ್ಟ!

    ಗೋರಖ್‍ಪುರ: ನಗರದ ಪ್ರಸಿದ್ಧ ವೈದ್ಯನೊಬ್ಬ ತನ್ನ ಮಾಜಿ ಪತ್ನಿಯನ್ನು ಕೊಂದು, ಆಕೆ ಬದುಕಿದ್ದಾಳೆ ಎಂದು ಬಿಂಬಿಸಲು ತಿಂಗಳುಗಟ್ಟಲೆ ಆಕೆಯ ಫೇಸ್‍ಬುಕ್ ಖಾತೆಯನ್ನು ಬಳಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಆರೋಪಿ ಧರ್ಮೇಂದ್ರ ಪ್ರತಾಪ್ ಸಿಂಗ್ ಬ್ಲಾಕ್‍ಮೇಲ್ ಮಾಡುತ್ತಿದ್ದಳು ಎನ್ನುವ ಕಾರಣಕ್ಕೆ ಕಳೆದ ಜೂನ್ ತಿಂಗಳಲ್ಲಿ ತನ್ನ ಮಾಜಿ ಪತ್ನಿ ರಾಖಿ ಅಲಿಯಾಸ್ ರಾಜೇಶ್ವರಿಯನ್ನು ನೇಪಾಳದ ಪ್ರೋಖ್ರಾ ಪರ್ವತದ ತುದಿಯಿಂದ ದೂಡಿ ಕೊಂದಿದ್ದ. ಬಳಿಕ ಅವಳು ಅಸ್ಸಾಂನಲ್ಲಿ ಇದ್ದಾಳೆ ಎಂದು ಬಿಂಬಿಸಲು ಆಕೆ ಬಳಸುತ್ತಿದ್ದ ಫೇಸ್‍ಬುಕ್ ಖಾತೆಯನ್ನು ಸಕ್ರಿಯವಾಗಿಟ್ಟಿದ್ದ.

    ಕಳೆದ ಜೂನ್ ತಿಂಗಳಲ್ಲಿ ರಾಖಿ ತನ್ನ ಎರಡನೇ ಪತಿ ಮನೀಶ್ ಜೊತೆ ನೇಪಾಳಕ್ಕೆ ತೆರಳಿದ್ದಳು. ಆದರೆ ಅಲ್ಲಿಂದ ಮನೀಶ್ ಮಾತ್ರ ವಾಪಾಸ್ ಬಂದಿದ್ದ. ಬಳಿಕ ರಾಖಿ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದನು. ಆದರೆ ರಾಖಿಯ ಫೇಸ್‍ಬುಕ್ ಖಾತೆಯಲ್ಲಿ ಆಕೆ ಅಸ್ಸಾಂನಲ್ಲಿ ಇರುವ ಹಾಗೆ ಅಪ್‍ಡೇಟ್ ಇದ್ದಿದ್ದರಿಂದ ಅವಳು ಅಲ್ಲಿಯೇ ಇದ್ದಾಳೆ ಎಂದು ಕುಟುಂಬಸ್ಥರು ಭಾವಿಸಿದ್ದರು.

    ನಾಪತ್ತೆ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಲೇ ಇದ್ದರು. ಈ ವೇಳೆ ರಾಖಿ ಎರಡನೇ ಪತಿ ಮನೀಶ್ ಸಿನ್ಹಾನನ್ನು ವಶಕ್ಕೆ ಪಡೆದು ನಿರಂತರ ವಿಚಾರಣೆ ನಡೆಸಿದಾಗ, ತಾನೋಬ್ಬನೆ ಊರಿಗೆ ವಾಪಸ್ ಬಂದೆ. ರಾಖಿ ನೇಪಾಳದಲ್ಲಿಯೇ ಉಳಿದುಕೊಂಡಳು ಎಂದು ಹೇಳಿದ್ದಾನೆ. ಬಳಿಕ ಈ ಕುರಿತು ದೀರ್ಘ ತನಿಖೆಗಳನ್ನು ನಡೆಸಿ ರಾಖಿಯ ಮೊಬೈಲ್ ಟ್ರಾಕ್ ಮಾಡಿದಾಗ ಆರೋಪಿಗಳ ಸುಳಿವು ಪೊಲೀಸರಿಗೆ ಸಿಕ್ಕಿದೆ.

    ಹಣ ಹಾಗೂ ಆಸ್ತಿಗಾಗಿ ಬ್ಲಾಕ್‍ಮೇಲ್ ಮಾಡುತ್ತಿದ್ದಳು ಎಂಬ ಕಾರಣಕ್ಕೆ ಆಕೆಯ ಮೊದಲ ಪತಿಯೇ ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿ ಆಕೆಯನ್ನು ಕೊಂದಿರುವುದು ಬಯಲಾಗಿದೆ. ರಾಖಿ ಕುಡಿಯುತ್ತಿದ್ದ ಜ್ಯೂಸ್‍ಗೆ ಪ್ರಜ್ಞೆ ತಪ್ಪುವ ಮಾತ್ರೆ ಸೇರಿಸಿ ಬಳಿಕ ಆಕೆಯನ್ನು ಪರ್ವತದಿಂದ ದೂಡಿ ಕೊಲೆ ಮಾಡಿರುವ ಸತ್ಯಾಂಶ ಹೊರಬಿದ್ದಿದೆ.

    ಅಷ್ಟೇ ಅಲ್ಲದೆ ರಾಖಿ ಸಾವನ್ನಪ್ಪಿರುವ ವಿಷಯ ಮುಚ್ಚಿಡಲು ಆಕೆಯ ಮೊಬೈಲ್ ಬಳಸಿಕೊಂಡು ನಿರಂತರವಾಗಿ ಅವಳ ಫೇಸ್‍ಬುಕ್ ಖಾತೆಯಿಂದ ಅಪ್‍ಡೇಟ್ ಮಾಡುತ್ತಿದ್ದ ವಿಷಯವನ್ನು ಕೂಡ ಆರೋಪಿ ಬಾಯಿಬಿಟ್ಟಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಗಳ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ತಂದೆ- ಸಾವು ಬದುಕಿನ ಮಧ್ಯೆ ಯುವಕ ಹೋರಾಟ

    ಮಗಳ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ತಂದೆ- ಸಾವು ಬದುಕಿನ ಮಧ್ಯೆ ಯುವಕ ಹೋರಾಟ

    ಗೋರಖ್‍ಪುರ: ಮಗಳ ಜತೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಯುವಕನನ್ನು ನೋಡಿದ ತಂದೆಯೊಬ್ಬ ಆತನನ್ನು ಥಳಿಸಿ ಮರ್ಮಾಂಗವನ್ನು ಕತ್ತರಿಸಿದ ಘಟನೆ ಉತ್ತರಪ್ರದೇಶದ ಗೋರಖ್‍ಪುರದಲ್ಲಿ ನಡೆದಿದೆ.

    11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ದೀಪಚಂದ ಗುಪ್ತಾ ಹಲ್ಲೆಗೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಲಖ್ನೋದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದು, ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ ಎಂದು ವರದಿಯಾಗಿದೆ.

    ಐಪಿಸಿ ಸೆಕ್ಷನ್ 323 (ಸ್ವ ಇಚ್ಚೆಯಿಂದ ಗಾಯ ಉಂಟುಮಾಡುವುದು) ಹಾಗೂ 326 (ಮಾರಕಾಸ್ತ್ರಗಳಿಂದ ಹಲ್ಲೆ)ರ ಅಡಿ ಪ್ರಕರಣ ದಾಖಲಾಗಿದ್ದು, ಯುವತಿಯ ತಂದೆ ಗುಡ್ಡು ನಿಶಾದ್ ಮತ್ತು ಸೋದರರಾದ ಸಂದೀಪ್ ಪ್ರದೀಪ್‍ನನ್ನು ಪೊಲೀಸರು ಬಂಧಿಸಿದ್ದಾರೆ.

     

    ಮನೆಯಲ್ಲಿ ತನ್ನ ಪುತ್ರಿ ಜತೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಯುವಕನನ್ನು ನೋಡಿದ ಹಾಗೂ ಇಬ್ಬರು ಪುತ್ರರು ಈ ಕೃತ್ಯವನ್ನು ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ಬಳಿಕ ಸಂತ್ರಸ್ತ ಯುವಕ ನೋವಿನಿಂದ ನರಳಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ ಎಂದು ಖಜ್ನಿ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ರೈ ಮಾಹಿತಿ ನೀಡಿದ್ದಾರೆ.

    11ನೇ ತರಗತಿ ಓದುತ್ತಿದ್ದ ಯುವಕ ಮತ್ತು ಯುವತಿ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಸಾಕಷ್ಟು ಬಾರಿ ಇಬ್ಬರಿಗೂ ಬುದ್ಧಿವಾದ ಹೇಳಿದ್ದರೂ ಇಬ್ಬರು ಪ್ರೀತಿ ಮುಂದುವರಿಸಿದ್ದರು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಂದೇ ಒಂದು ಟ್ವೀಟ್‍ನಿಂದ 26 ಅಪ್ರಾಪ್ತ ಬಾಲಕಿಯರ ರಕ್ಷಣೆ!

    ಒಂದೇ ಒಂದು ಟ್ವೀಟ್‍ನಿಂದ 26 ಅಪ್ರಾಪ್ತ ಬಾಲಕಿಯರ ರಕ್ಷಣೆ!

    ಲಖ್ನೋ: ಒಂದೇ ಒಂದು ಟ್ವೀಟ್‍ನಿಂದಾಗಿ 26 ಅಪ್ರಾಪ್ತ ಬಾಲಕಿಯರನ್ನು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್​ಪಿ) ಮತ್ತು ರೈಲ್ವೆ ರಕ್ಷಣಾ ದಳ (ಆರ್​ಪಿಎಫ್) ರಕ್ಷಣೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಜುಲೈ 5ರಂದು 26 ಬಾಲಕಿಯರನ್ನು ಮುಜಾಫರ್ ಪುರ-ಬಾಂದ್ರಾ ಔದ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಬಾಲಕಿಯರು ಅಳುತ್ತಿರವುದನ್ನು ಕೇಳಿಸಿಕೊಂಡಿದ್ದ ಪ್ರಯಾಣಿಕರೊಬ್ಬರು ಅಪಹರಣ ಶಂಕೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಇದನ್ನು ನೋಡಿದ ರೈಲ್ವೆ ಅಧಿಕಾರಿಗಳು, ಕಳ್ಳ ಸಾಗಾಣಿಕೆ ಪತ್ತೆ ಘಟಕಕ್ಕೆ ಬಾಲಕಿಯರನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದರು. ತಕ್ಷಣವೇ ಜಾಗೃತರಾದ ಇಬ್ಬರು ಪೊಲೀಸರು ಕಪತ್ ಗಂಜ್‍ನಿಂದ ಗೋರಖಪುರವರೆ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು.

    ಗೋರಕ್‍ಪುರಗೆ ರೈಲು ಬರುತ್ತಿದ್ದಂತೆ ಜಿಆರ್​ಪಿ ಮತ್ತು ಆರ್​ಪಿಎಫ್ ಪೊಲೀಸರು ಬಾಲಕಿಯರನ್ನು ರಕ್ಷಣೆ ಮಾಡಿದ್ದು, ಅವರನ್ನು ಕರೆದೊಯ್ಯುತ್ತಿದ್ದ 22 ವರ್ಷದ ಯುವಕ ಹಾಗೂ 55 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡಿದಿದ್ದಾರೆ.

    ಬಾಲಕಿಯರು 10 ರಿಂದ 14 ವರ್ಷದವರಾಗಿದ್ದು, ಬಿಹಾರದ ಪಶ್ಚಿಮ ಚಂಪಾರಣ್ ಪ್ರದೇಶದವರು. ಅವರನ್ನು ನರಕ್ತಿಯಾಗಂಜ್ ನಿಂದ ಇದ್ಗಾಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ಕುರಿತು ಸದ್ಯ ಬಾಲಕಿರ ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಆರ್‍ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.

  • ‘ದಯವಿಟ್ಟು ಈ ರೀತಿ ಶಿಕ್ಷೆ ನೀಡಬೇಡಿ’ ಅಂತ ಬರೆದು 5ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ

    ‘ದಯವಿಟ್ಟು ಈ ರೀತಿ ಶಿಕ್ಷೆ ನೀಡಬೇಡಿ’ ಅಂತ ಬರೆದು 5ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ

    ಗೋರಖ್‍ಪುರ್: ಶಾಲೆಯಲ್ಲಿ ಶಿಕ್ಷಕಿ ಕಠಿಣ ಶಿಕ್ಷೆ ಕೊಟ್ಟಿದ್ದಕ್ಕೆ 5ನೇ ತರಗತಿಯ ಹುಡುಗ ಡೆತ್ ನೋಟ್ ಬರೆದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಗೋರಖ್‍ಪುರ್‍ನಲ್ಲಿ ನಡೆದಿದೆ.

    ಸೆಂಟ್ ಆಂಟೋನಿ ಕಾನ್ವೆಂಟ್ ಶಾಲೆಯಲ್ಲಿ ಓದುತ್ತಿದ್ದ ನವನೀತ್ ಪ್ರಕಾಶ್(8) ಆತ್ಮಹತ್ಯೆಗೆ ಶರಣಾದ ಬಾಲಕ. ವಿಷ ಸೇವಿಸಿದ ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

    ‘ದಯವಿಟ್ಟು ನನ್ನ ಶಿಕ್ಷಕರಿಗೆ ಹೇಳಿ ಯಾರಿಗೂ ಈ ತರಹ ಕಠಿಣ ಶಿಕ್ಷೆ ನೀಡಬಾರದು’ ಎಂದು ತನ್ನ ಕೊನೆಯ ಆಸೆಯನ್ನು ನವನೀತ್ ಡೆತ್‍ನೋಟ್‍ನಲ್ಲಿ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಸೆಪ್ಟಂಬರ್ 15 ರಂದು ನವನೀತ್ ಪರೀಕ್ಷೆಯನ್ನು ಬರೆಯಲು ಶಾಲೆಗೆ ಹೋಗಿದ್ದನು. ಶಾಲೆಯಿಂದ ಮನೆಗೆ ಬಂದ ಬಳಿಕ ನವನೀತ್ ಬಹಳ ಬೇಸರಗೊಂಡಿದ್ದ ಬಳಿಕ ವಿಷ ಸೇವಿಸಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ.

    ಶಾಲೆಯಲ್ಲಿ ನನ್ನನ್ನು 3 ಪಿರಿಯಡ್‍ಗಳ ಕಾಲ ಬೆಂಚ್ ಮೇಲೆ ನಿಲ್ಲಿಸಿದ್ದರು ಮತ್ತು ನನ್ನ ಹತ್ತಿರ ಕೆಟ್ಟದಾಗಿ ವರ್ತಿಸಿದ್ದರು ಎಂದು ನವನೀತ್ ಡೆತ್‍ನೋಟ್ ನಲ್ಲಿ ಬರೆದಿದ್ದಾನೆ.

    ಮಗನಿಗೆ ಶಾಲೆಯ ಶಿಕ್ಷಕರು ಮಾನಸಿಕವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಶಾಲೆ ಹಾಗೂ ಶಿಕ್ಷಕಿಯ ವಿರುದ್ಧ ನವನೀತ್ ಪೋಷಕರು ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲಾ ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಗೋರಖ್‍ಪುರ್‍ನಲ್ಲಿ ಆಗಸ್ಟ್ 31 ರಂದು ಎಷ್ಟು ಮಕ್ಕಳು ಸಾವನ್ನಪ್ಪಿದ್ದಾರೆ ಗೊತ್ತಾ?

    ಗೋರಖ್‍ಪುರ್‍ನಲ್ಲಿ ಆಗಸ್ಟ್ 31 ರಂದು ಎಷ್ಟು ಮಕ್ಕಳು ಸಾವನ್ನಪ್ಪಿದ್ದಾರೆ ಗೊತ್ತಾ?

    ಗೋರಖ್‍ಪುರ್: ಗುರುವಾರ ಒಂದೇ ದಿನದಲ್ಲಿ 16 ಮಕ್ಕಳು ಸಾವನ್ನಪ್ಪಿರುವ ಘಟನೆ ಗೋರಖ್‍ಪುರ್‍ನ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

    16 ಮಕ್ಕಳಲ್ಲಿ ಒಂದು ಮಗು ಎನ್ಸೆಫಾಲಿಟಿಸ್‍ನಿಂದ ಸಾವನ್ನಪ್ಪಿದ್ದರೆ ಆಗಸ್ಟ್ 2017ರಲ್ಲಿ 415 ಮಕ್ಕಳು ಸಾವನ್ನಪ್ಪಿದೆ.

    ಜನವರಿ 2017 ರಿಂದ ಬಿಆರ್‍ಡಿ ಮೆಡಿಕಲ್ ಕಾಲೇಜಿನಲ್ಲಿ ಒಟ್ಟು 1,256 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬುಧವಾರ ಬಿಆರ್‍ಡಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ. ಸಿಂಗ್ ತಿಳಿಸಿದ್ದರು. ಜನವರಿಯಲ್ಲಿ 152, ಫೆಬ್ರವರಿಯಲ್ಲಿ 122, ಮಾರ್ಚ್‍ನಲ್ಲಿ 159, ಜೂನ್‍ನಲ್ಲಿ 137 ಮತ್ತು ಜುಲೈನಲ್ಲಿ 128 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು.

    ಬಿಆರ್‍ಡಿ ಮೆಡಿಕಲ್ ಕಾಲೇಜ್‍ನಲ್ಲಿ ಒಂದು ವಾರದೊಳಗೆ ಹಲವು ಮಕ್ಕಳು ಹಾಗೂ ನವಜಾತ ಶಿಶುಗಳು ಸಾವನ್ನಪ್ಪುತ್ತಿರುವುದು ದೇಶದ ಗಮನವನ್ನು ಸೆಳೆಯುತ್ತಿದೆ. ಅಮ್ಲಜನಕ ಪೂರೈಕೆದಾರರಿಗೆ ಸರಿಯಾಗಿ ಹಣವನ್ನು ಪಾವತಿ ಮಾಡದ ಕಾರಣ ಮಕ್ಕಳ ಸಾವಿನ ಸಂಖ್ಯೆ ಹೆಚ್ಚಳವಾಗಿದೆ.

    ಬಿಆರ್‍ಡಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ರಾಜೀವ್ ಮಿಶ್ರಾ ಹಾಗೂ ಅವರ ಪತ್ನಿ ಪೂರ್ಣಿಮಾ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು, ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

  • ಉತ್ತರಪ್ರದೇಶ ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳ ಸಾವು – ತನಿಖೆಗೆ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶ

    ಉತ್ತರಪ್ರದೇಶ ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳ ಸಾವು – ತನಿಖೆಗೆ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶ

    ಲಕ್ನೋ: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥರ ಸ್ವಕ್ಷೇತ್ರದವಾದ ಗೋರಖ್‍ಪುರ್‍ನಲ್ಲಿ ಭಾರೀ ದುರಂತವೊಂದು ನಡೆದಿದೆ. ಕಳೆದ 5 ದಿನಗಳಲ್ಲಿ ಇಲ್ಲಿನ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಅದರಲ್ಲೂ ಕಳೆದ 48 ಗಂಟೆಗಳಲ್ಲಿ 30 ಮಕ್ಕಳು ಮೃತಪಟ್ಟಿವೆ. ಇದರಲ್ಲಿ ಬಹುತೇಕ ನವಜಾತ ಶಿಶುಗಳಾಗಿವೆ ಎಂದು ವರದಿಯಾಗಿದೆ.

    ಇಷ್ಟೊಂದು ಸಂಖ್ಯೆಯಲ್ಲಿ ಮಕ್ಕಳು ಸಾವನ್ನಪ್ಪಿರುವುದರ ಕುರಿತು ಉತ್ತರಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಆದರೆ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರಿಂದ ಮಕ್ಕಳು ಸಾವನ್ನಪ್ಪಿವೆ ಎಂಬ ವರದಿಯನ್ನ ಸರ್ಕಾರ ತಳ್ಳಿಹಾಕಿದೆ.

    ಕಳೆದೊಂದು ದಿನದಲ್ಲಿ ಈ ಆಸ್ಪತ್ರೆಯಲ್ಲಿ 7 ಮಕ್ಕಳು ಸಾವನ್ನಪ್ಪಿವೆ. ಆಗಸ್ಟ್ 10ರಂದು 23 ಮಕ್ಕಳು ಸಾವನ್ನಪ್ಪಿವೆ. ಇದೇ ದಿನದಂದು ಬಾಕಿ ಹಣ ನೀಡದ ಕಾರಣಕ್ಕೆ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದ ಸಂಸ್ಥೆ ಅದನ್ನ ಸ್ಥಗಿತಗೊಳಿಸಿತ್ತು ಎಂದು ವರದಿಯಾಗಿದೆ. ಆದ್ರೆ ಆಸ್ಪತ್ರೆಗೆ ಬೇರೆ ಸ್ಥಳಗಳಿಂದ ಆಮ್ಲಜನಕ ಸಿಗುತ್ತಿತ್ತು. ಹೀಗಾಗಿ ಆಮ್ಲಜನಕ ಪೂರೈಕೆಯ ಕೊರತೆಯಿಂದ ಮಕ್ಕಳು ಸಾವನ್ನಪ್ಪಿರಲು ಸಆಧ್ಯವಿಲ್ಲ ಎಂದು ಸರ್ಕಾರ ಹೇಳಿಕೆ ನೀಡಿದೆ.

    ಆಮ್ಲಜನಕ ಪೂರೈಕೆ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ. ಈ ಬಗ್ಗೆ ಗೋರಖ್‍ಪುರ್‍ನ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆಗ್ರಹಿಸಿದೆ. 24 ಗಂಟೆಗಳಲ್ಲಿ ತನಿಖಾ ವರದಿ ಹೊರಬರಲಿದೆ ಎಂದು ಉತ್ತರಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ಅಶುತೋಷ್ ಟಂಡನ್ ಹೇಳಿದ್ದಾರೆ.

    ಈ ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಆರೋಗ್ಯ ಸಚಿವ ಸಿದ್ದಾರ್ಥ್‍ನಾಥ್ ಸಿಂಗ್ ಹೇಳಿದ್ದಾರೆ. ಅಲ್ಲದೆ ಆಗಸ್ಟ್ 9ರಂದು ಮುಖ್ಯಮಂತ್ರಿಗಳು ಬಿಎಂಡಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಆ ವೇಳೆ ಆಮ್ಲಜನಕ ಕೊರತೆಯ ಬಗ್ಗೆ ಆಸ್ಪತ್ರೆಯವರು ತಿಳಿಸಲಿಲ್ಲ ಎಂದು ಅವರು ಹೇಳಿದ್ದಾರೆ.

    ಫೈಜಾಬಾದ್‍ನ ಇಂದ್ರಪ್ರಸ್ತ ಗ್ಯಾಸ್ ಲಿಮಿಟೆಡ್‍ನಿಂದ ತಡರಾತ್ರಿ ಆಸ್ಪತ್ರೆಗೆ ಸುಮಾರು 300 ಆಮ್ಲಜನಕ ಸಿಲಿಂಡರ್‍ಗಳು ಆಗಮಿಸಿವೆ.

    ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೀವ್ ರೌಟೆಲಾ ಶುಕ್ರವಾರದಂದು ಈ ಬಗ್ಗೆ ಹೇಳಿಕೆ ನೀಡಿದ್ದು, ಬದಲಿ ಆಮ್ಲಜನಕ ವ್ಯವಸ್ಥೆಯನ್ನ ಮಾಡಲಾಗಿತ್ತು. ಆದ್ದರಿಂದ ಆಮ್ಲಜನಕ ಕೊರತೆಯ ಆರೋಪವನ್ನ ಪರಿಗಣಿಸಲು ಸಾಧ್ಯವಿಲ್ಲ ಎಂದು ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಹೇಳಿದ್ದಾಗಿ ತಿಳಿಸಿದ್ದಾರೆ.

    ಘಟನೆ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ಬೆಳಿಗ್ಗೆ ಪ್ರತಿಕ್ರಿಯಿಸಿದ್ದು, ಮಕ್ಕಳು ಸಾವನ್ನಪಿರುವದಕ್ಕೆ ನನಗೆ ತುಂಬಾ ನೋವಾಗಿದೆ ಎಂದಿದ್ದಾರೆ. ರಾಹುಲ್ ಗಾಂಧಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಘಟನೆಯಿಂದ ತುಂಬಾ ನೋವಾಗಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ವಿಷಾದವಿದೆ. ಇದಕ್ಕೆ ಬಿಜೆಪಿ ಸರ್ಕರವೇ ಹೊಣೆ. ಈ ದುರಂತಕ್ಕೆ ಕಾರಣವಾದವರನ್ನ ಶಿಕ್ಷಿಸಬೇಕು ಎಂದಿದ್ದಾರೆ.

     

  • ಮಿತಿ ಮೀರಬೇಡ ಎಂದು ಬಿಜೆಪಿ ಶಾಸಕ ಅವಾಜ್ – ಕಣ್ಣೀರಿಟ್ಟ ಮಹಿಳಾ ಐಪಿಎಸ್ ಅಧಿಕಾರಿ

    ಮಿತಿ ಮೀರಬೇಡ ಎಂದು ಬಿಜೆಪಿ ಶಾಸಕ ಅವಾಜ್ – ಕಣ್ಣೀರಿಟ್ಟ ಮಹಿಳಾ ಐಪಿಎಸ್ ಅಧಿಕಾರಿ

    ಲಕ್ನೋ: ಉತ್ತರ ಪ್ರದೇಶದಲ್ಲಿ ಗೋರಖ್‍ಪುರದ ಹಿರಿಯ ಬಿಜೆಪಿ ಶಾಸಕ ಡಾ. ರಾಧಾ ಮೋಹನ್ ಅಗರ್‍ವಾಲ್ ಮಹಿಳಾ ಪೊಲೀಸ್ ಅಧಿಕಾರಿಗೆ ಕಣ್ಣೀರು ಹಾಕಿಸಿದ್ದಾರೆ.

    ಇಲ್ಲಿನ ಕೋಯಿಲ್ವಾ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಸಂಬಂಧ ಮಹಿಳೆಯರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಹಾಗೂ ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾನಿರತ ಮಹಿಳೆಯರು ಕಲ್ಲು ತೂರಾಟ ನಡೆಸಿದ ಕಾರಣ ಲಾಠಿ ಚಾರ್ಜ್ ಮಾಡಿದ್ದು, ಕೆಲವು ಮಹಿಳೆಯರು ಗಾಯಗೊಂಡರು ಎಂದು ಪೊಲೀಸರು ಹೇಳಿದ್ದಾರೆ.

    ನಂತರ ಸ್ಥಳಕ್ಕೆ ಆಗಮಿಸಿದ ಹಿರಿಯ ಶಾಸಕ ಅಗರ್‍ವಾಲ್, ಸದ್ಯ ಗೋರಖ್‍ಪುರ್‍ನಲ್ಲಿ ತರಬೇತಿಯಲ್ಲಿರುವ 2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿ ಚಾರು ನಿಗಮ್ ಅವರೊಂದಿಗೆ ವಾದಕ್ಕೆ ಇಳಿದರು. ಬೆರಳು ತೋರಿಸಿ ಎಚ್ಚರಿಕೆ ನೀಡಿದರು. ನಾನು ನಿನ್ನೊಂದಿಗೆ ಮಾತಾಡ್ತಿಲ್ಲ, ನನಗೆ ಏನೂ ಹೇಳಬೇಡ, ನೀನು ಸುಮ್ಮನಿರು, ನಿನ್ನ ಮಿತಿ ಮೀರಬೇಡ ಅಂತಾ ಅವಾಜ್ ಹಾಕಿದ್ರು.

    ಆಗ ಚಾರು ನಿಗಮ್, ನಾನು ಇಲ್ಲಿನ ಅಧಿಕಾರಿ. ನಾನು ಏನು ಮಾಡ್ತಿದ್ದೀನಿ ಎಂಬುದು ನನಗೆ ಗೊತ್ತು ಎಂದಿದ್ದಾರೆ. ನಂತರ ಹಿರಿಯ ಅಧಿಕಾರಿಯೊಬ್ಬರು ಸ್ಥಳಕ್ಕೆ ಬಂದಿದ್ದು, ಈ ವೇಳೆ ಚಾರು ನಿಗಮ್ ಕಣ್ಣೀರು ಹಾಕಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ರಾಧಾ ಮೋಹನ್, ನಾನು ಅಧಿಕಾರಿಯೊಂದಿಗೆ ಕೆಟ್ಟದಾಗಿ ನಡೆದಕೊಂಡಿಲ್ಲ ಎಂದಿದ್ದಾರೆ. ನಾವು ಮದ್ಯದಂಗಡಿಗಳ ಚಟುವಟಿಕೆಯ ವಿರುದ್ಧ ಇದ್ದೇವೆ. ಮಹಿಳೆಯರು ಶಾಂತಿಯುತವಾಗಿ ಮದ್ಯದಂಗಡಿಗಳ ವರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಆದ್ರೆ ಮಹಿಳಾ ಪೊಲೀಸ್ ಅಧಿಕಾರಿ ಬಲವಂತವಾಗಿ ಅವರನ್ನ ಚದುರಿಸಿದ್ರು. 80 ವರ್ಷದ ವೃದ್ಧೆಯೊಬ್ಬರನ್ನು ಎಳೆದಾಡಿ ಹೊಡೆದಿದ್ದಾರೆ. ಇದನ್ನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಮದ್ಯ ಮಾಫಿಯಾದವರೊಂದಿಗೆ ಪೊಲೀಸರು ಶಾಮೀಲಾಗಿದ್ದಾರೆ. 15 ದಿನಗಳ ಹಿಂದೆ ಮುಚ್ಚಲಾಗಿದ್ದ ಮದ್ಯದಂಗಡಿಗಳು ಈಗ ಇದ್ದಕ್ಕಿದಂತೆ ಮತ್ತೆ ಕಾರ್ಯಾರಂಭ ಮಾಡಿವೆ ಎಂದು ಅಗರ್‍ವಾಲ್ ಆರೋಪಿಸಿದ್ದಾಗಿ ರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ.