Tag: Goravanahalli Mahalakshmi

  • ಕೊರೊನಾ ವೇಳೆಯಲ್ಲೂ ಗೊರವನಹಳ್ಳಿ ಮಹಾಲಕ್ಷ್ಮಿ ಹುಂಡಿಯಲ್ಲಿ ಭರ್ಜರಿ ಕಾಣಿಕೆ

    ಕೊರೊನಾ ವೇಳೆಯಲ್ಲೂ ಗೊರವನಹಳ್ಳಿ ಮಹಾಲಕ್ಷ್ಮಿ ಹುಂಡಿಯಲ್ಲಿ ಭರ್ಜರಿ ಕಾಣಿಕೆ

    ತುಮಕೂರು: ಕೊರಟಗೆರೆ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಅಪಾರ ಪ್ರಮಾಣದಲ್ಲಿ ಹಣ ಹಾಗೂ ಆಭರಣಗಳು ಕಾಣಿಕೆ ರೂಪದಲ್ಲಿ ಹರಿದು ಬಂದಿದೆ.

    ಕಳೆದ 4 ತಿಂಗಳಿನಿಂದ 8 ಹುಂಡಿಗಳಲ್ಲಿ ಸಂಗ್ರಹವಾಗಿದ್ದ ಹಣವನ್ನು ಎಣಿಕೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 49,89,780ರೂ. ನಗದು ಹಾಗೂ ಲಕ್ಷಾಂತರ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಕಾಣಿಕೆ ರೂಪದಲ್ಲಿ ಲಭಿಸಿದೆ. ಆಭರಣಗಳ ಪೈಕಿ ಬಂಗಾರದ ತಾಳಿ 6, ನತ್ತು 3, ಬೆಳ್ಳಿಯ ಲಕ್ಷ್ಮೀ ಮುಖವಾಡ 1, ಬಳೆ 1, ಬಿಸ್ಕತ್ತು 2, ಕಾಲುಚೈಲು 4, ಲಕ್ಷ್ಮಿನಾಣ್ಯ 1, ಕಾಲುಂಗರ 2, ತಾಳಿ 2, ಕಣ್ಣು 2, ನಾಗಪ್ಪ ವಿಗ್ರಹ 1 ಸೇರಿ ಲಕ್ಷಾಂತರ ರೂ. ಮೌಲ್ಯದ ಒಡವೆಗಳು ಕಾಣಿಕೆ ಹುಂಡಿಯಲ್ಲಿ ದೊರೆತಿವೆ.

    ಕೊರೋನಾ ಹಿನ್ನೆಲೆಯಲ್ಲಿ ಮಾರ್ಚ್‍ನಿಂದ ಜುಲೈ 07ರವರಗೆ ದೇವಸ್ಥಾನ ಬಂದ್ ಮಾಡಲಾಗಿತ್ತು. ಜುಲೈ 08ರಿಂದ ಪುನಃ ಭಕ್ತಾದಿಗಳ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಅಲ್ಲಿಂದ ನವೆಂಬರ್ ಅಂತ್ಯದವರೆಗೆ ಬರೋಬ್ಬರಿ 50 ಲಕ್ಷ ರೂ ಸಂಗ್ರವಾಗಿದೆ.

    ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ನಡೆದ ಹುಂಡಿ ಹಣ ಎಣಿಕೆಯನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಗಿದೆ. ಎಣಿಕೆ ವೇಳೆ ಕೋಳಾಲ ಉಪತಹಶೀಲ್ದಾರ್ ಮಧುಸೂಧನ್, ಆಹಾರ ಶಿರಸ್ತೆದಾರ್ ನರಸಿಂಹಮೂರ್ತಿ ಹಾಜರಿದ್ದರು. 40ಕ್ಕೂ ಅಧಿಕ ಗ್ರಾಮ ಸಹಾಯಕರು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಮಹಾಲಕ್ಷ್ಮಿ ದೇವಾಲಯದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗಿಯಗಿದ್ದರು.

  • ಶುಕ್ರವಾರ ಮಧ್ಯಾಹ್ನದ ನಂತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನ ಬಂದ್

    ಶುಕ್ರವಾರ ಮಧ್ಯಾಹ್ನದ ನಂತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನ ಬಂದ್

    ತುಮಕೂರು: ಚಂದ್ರಗ್ರಹಣದಿಂದಾಗಿ ಕೊರಟಗೆರೆ ತಾಲೂಕಿನ ಸುಪ್ರಸಿದ್ಧ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯವನ್ನು ಶುಕ್ರವಾರ ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

    ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಗೊರವನಹಳ್ಳಿಯ ಮಹಾಲಕ್ಷ್ಮೀ ದೇವಾಲಯವು ಬಂದ್ ಆಗಲಿದ್ದು, ಶುಕ್ರವಾರ ಮಧ್ಯಾಹ್ನ 12.30 ರಿಂದ ಶನಿವಾರ ಮುಂಜಾನೆಯವರೆಗೂ ದೇವಸ್ಥಾನವನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

    ನಾಳೆ ಆಷಾಢ ಮಾಸದ ಶುಕ್ರವಾರ ನಿಮಿತ್ತ ಭಕ್ತರು ಹೆಚ್ಚಾಗಿ ದೇವಾಲಯಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಭಕ್ತರಿಗೆ ದೇವರ ದರ್ಶನ ಸಿಗದೇ ತೊಂದರೆಯುಂಟಾಗಬಾರದೆಂದು ಆಡಳಿತ ಮಂಡಳಿಯು, ಮುಂಜಾನೆಯಿಂದ ಮಧ್ಯಾಹ್ನ 12-30ರವರೆಗೆ ದೇವಿಯ ದರ್ಶನಕ್ಕೆ ಅನುವುಮಾಡಿಕೊಟ್ಟಿದೆ. ಬಳಿಕ ಮಧ್ಯಾಹ್ನದ ಮಹಾಮಂಗಳಾರತಿಯ ನಂತರ ದೇವಸ್ಥಾನವನ್ನು ಸಂಪೂರ್ಣವಾಗಿ ಮುಚ್ಚಿ, ರಾತ್ರಿ ನಡೆಯಬೇಕಿದ್ದ ಪೂಜೆಗಳನ್ನು ನಾಳಿನ ಮಟ್ಟಿಗೆ ನಿಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

    ಶನಿವಾರ ಮುಂಜಾನೆ 5 ಗಂಟೆಗೆ ಎಂದಿನಂತೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ. ಗ್ರಹಣ ದೋಷ ಮುಕ್ತಿಗೆ ದೇವಾಲಯದ ಶುಚಿತ್ವ ಬಳಿಕ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಈಗಾಗಲೇ ಆಡಳಿತ ಮಂಡಳಿಯಿಂದ ಶುಕ್ರವಾರ ದೇವಾಲಯ ಮುಚ್ಚುವ ಕುರಿತು ಪ್ರಕಟಣೆಯನ್ನ ದೇವಾಲಯದ ಆವರಣದ ಅಂಟಿಸಿದೆ. ಶನಿವಾರ ಶುಚಿತ್ವ ಬಳಿಕ ಎಂದಿನಂತೆ ದೇವಿಗೆ ಅಭಿಷೇಕ, ಅಷ್ಟೋತ್ತರ, ಸಹಸ್ರನಾಮ ಹಾಗೂ ಅಷ್ಟಾವಧಾನ ಸೇವೆಗಳು ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.