Tag: Goravayya

  • ಭಿಕ್ಷುಕರೆಂದು ಗೊರವಯ್ಯನವವರನ್ನು ನಿರಾಶ್ರಿತರ ಕೇಂದ್ರಕ್ಕೆ ಕರೆದೊಯ್ದ ಅಧಿಕಾರಿಗಳು

    ಭಿಕ್ಷುಕರೆಂದು ಗೊರವಯ್ಯನವವರನ್ನು ನಿರಾಶ್ರಿತರ ಕೇಂದ್ರಕ್ಕೆ ಕರೆದೊಯ್ದ ಅಧಿಕಾರಿಗಳು

    ಯಾದಗಿರಿ: ಇಲ್ಲಿನ ಮೈಲಾಪುರದ (Mylapura) ಮಲ್ಲಯ್ಯನ ಜಾತ್ರೆಯಲ್ಲಿ ಅಧಿಕಾರಿಗಳಿಂದ ಮಹಾ ಎಡವಟ್ಟು ನಡೆದಿದೆ. ಭಿಕ್ಷುಕರೆಂದು ಗೊರವಯ್ಯನವರನ್ನು (Goravayya) ನಿರಾಶ್ರಿತರ ಕೇಂದ್ರಕ್ಕೆ ಕರೆದುಕೊಂಡು ಹೋದ ಘಟನೆ ನಡೆದಿದೆ.

    ಪ್ರತಿ ವರ್ಷ ಹಾವೇರಿ (Haveri) ಹಾಗೂ ಗದಗ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಗೊರವಯ್ಯನವರು ಮೈಲಾಪುರ ಮಲ್ಲಯ್ಯನ ಸೇವೆಗೆ ಪಾದಯಾತ್ರೆ ಮೂಲಕ ಬರುತ್ತಾರೆ. ಪಾದಯಾತ್ರೆ ಮೂಲಕ ಬರುವ ಗೊರವಯ್ಯನವರ ಜಾತ್ರೆಯ ದಿನ ಮಲ್ಲಯ್ಯನ ಸೇವೆ ಸಲ್ಲಿಸುತ್ತಾರೆ. ಅದೇ ಪದ್ಧತಿಯಂತೆ ಈ ಬಾರಿಯೂ ಮೈಲಾಪುರದ ಮಲ್ಲಯ್ಯನ ದೇವಸ್ಥಾನಕ್ಕೆ ಬಂದಿದ್ದ ಐದಾರು ಗೊರವಯ್ಯನವರನ್ನ ಅಧಿಕಾರಿಗಳು ಭಿಕ್ಷುಕರೆಂದು ಭಾವಿಸಿ ರಾಯಚೂರು ನಿರಾಶ್ರಿತರ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಕರುನಾಡಿಗೆ ಬಿಗ್ ಶಾಕ್, ಡ್ಯಾಂ ನೀರಿನ ಮಟ್ಟ ಭಾರೀ ಕುಸಿತ – ಕಳೆದ ವರ್ಷ ಎಷ್ಟಿತ್ತು? ಈ ಬಾರಿ ಎಷ್ಟಿದೆ?

    ಅಧಿಕಾರಿಗಳ ಈ ನಡೆಯಿಂದ ರೊಚ್ಚಿಗೆದ್ದ ಗೊರವಯ್ಯನವರ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ. ಕರೆದುಕೊಂಡು ಹೋಗಿರುವ ಗೊರವಯ್ಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಗೊರವಯ್ಯನವರಿಂದ ಅಧಿಕಾರಿಗಳು ಹಣ ಕಟ್ಟುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರಿಂದ ಮಾಹಿತಿ ಪಡೆದು ಅಧಿಕಾರಿಗಳು ಕರೆದುಕೊಂಡು ಹೋಗಬೇಕಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಈ ಸಂಬಂಧ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿಯವರು, ಅಧಿಕಾರಿಗಳ ನಡೆಯನ್ನ ಖಂಡಿಸಿದ್ದಾರೆ. ಅಧಿಕಾರಿಗಳೇ ಕಳ್ಳರಿದ್ದಾರೆ. ಮೈಲಾಪುರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇದೀಗ ಸೇವೆಗೆ ಬಂದ ಗೊರವಯ್ಯರನ್ನು ಕೂಡಿ ಹಾಕಿದ್ದಾರೆ. ಅಧಿಕಾರಿಗಳಿಗೆ ತಾಕತ್ ಇದ್ದರೆ ಜಾತ್ರೆ ಬಂದ್ ಮಾಡಿಸಲಿ. ಗೊರವಪ್ಪರನ್ನ ಕರೆದುಕೊಂಡು ಹೋಗಿ ಹಾಲುಮತ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕುಟುಂಬಸ್ಥರೆಲ್ಲರೂ ರಾಯಚೂರಿನ ನಿರಾಶ್ರಿತರ ಕೇಂದ್ರದ ಬಳಿ ಜಮಾಯಿಸಿ, ಅಲ್ಲಿಯೇ ಅಡುಗೆ ಮಾಡಿ ಅಧಿಕಾರಿಗಳ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗೊರವಯ್ಯರವರನ್ನ ಕರೆದುಕೊಂಡು ಬಂದ ಅಧಿಕಾರಿಗಳು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಕ್ಕೆ ನಾವು ಜವಾಬ್ದಾರರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇದೀಗ ರಾಜ್ಯದ ಬೇರೆ ಬೇರೆ ಜಿಲ್ಲೆಯ ಗೊರವಯ್ಯನವರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ತಪ್ಪಿತಸ್ಥರಿಗೆ ಕ್ಷಮೆ ಇಲ್ಲ – ಹಾನಗಲ್‌ ಗ್ಯಾಂಗ್‌ರೇಪ್ ಪ್ರಕರಣ ಕುರಿತು ಸಿಎಂ ಮೊದಲ ಪ್ರತಿಕ್ರಿಯೆ

  • ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ – ಕಾರ್ಣಿಕ ನುಡಿದ ಗೊರವಯ್ಯ

    ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ – ಕಾರ್ಣಿಕ ನುಡಿದ ಗೊರವಯ್ಯ

    ಹಾವೇರಿ: ಮಾಲತೇಶ ದೇವರ (Malatesh Temple) ಕಾರ್ಣಿಕ ಎಂದರೆ ವರ್ಷದ ಭವಿಷ್ಯವಾಣಿ ಅಂತಲೆ ಫೇಮಸ್. ದಸರಾ (Dasara) ಹಬ್ಬದ ಸಮಯದಲ್ಲಿ ನಡೆಯುವ ಕಾರ್ಣಿಕವಾಣಿಯ ಆಧಾರದ ಮೇಲೆ ರೈತರ ಮಳೆ, ಬೆಳೆ ನಿರ್ಧರಿಸುತ್ತಾರೆ. ರಾಜಕೀಯವಾಗಿಯೂ ಕಾರ್ಣಿಕವನ್ನು ವಿಶ್ಲೇಷಿಸಲಾಗುತ್ತದೆ. ಈ ವರ್ಷದ ಭವಿಷ್ಯವಾಣಿ ಕೇಳಿ, ನೆರೆದಿದ್ದ ಸಾವಿರಾರು ಸಂಖ್ಯೆಯ ಜನರು ಖುಷಿ ಖುಷಿಯಿಂದಲೇ ಮನೆಯತ್ತ ಹೆಜ್ಜೆ ಹಾಕಿದ್ದಾರೆ.

    ಹೌದು, ಹಾವೇರಿ (Haveri) ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಇಂದು ಕಂಡುಬಂದ ದೃಶ್ಯಗಳಿವು. ಈ ಬಾರಿ ಸಣ್ಣ ಸಣ್ಣ ರೈತರಿಗೂ ಒಳ್ಳೆಯದಾಗಲಿದೆ, ರಾಜಕೀಯವಾಗಿ ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿಸ್ಥಾನ ದೊರೆಯಲಿದೆ ಎಂದು ಗೊರವಯ್ಯ (Goravayya) ಕಾರ್ಣಿಕ ನುಡಿದಿದ್ದಾರೆ.

    ದೇವರಗುಡ್ಡದ ಮಾಲತೇಶ ದೇವಸ್ಥಾನ ಸುಮಾರು ವರ್ಷಗಳ ಇತಿಹಾಸ ಹೊಂದಿದೆ. ದಸರಾ ಹಬ್ಬದ ಸಮಯದಲ್ಲಿ ದೇವರಗುಡ್ಡದ ಕರಿಯಾಲ ಪ್ರದೇಶದಲ್ಲಿ ನಡೆಯೋ ಮಾಲತೇಶ ದೇವರ ಕಾರ್ಣಿಕ ಕೇಳಲು ಜನರ ದಂಡೆ ನೆರೆದಿರುತ್ತೆ. 9 ದಿನಗಳ ಕಾಲ ಕಠಿಣ ಉಪವಾಸ ವೃತ ಮಾಡಿ ಗೊರವಪ್ಪ ನಾಗಪ್ಪ ಉರ್ಮಿ ಕಾರ್ಣಿಕ ನುಡಿಯುತ್ತಾರೆ. ಇದನ್ನೂ ಓದಿ: ದಸರಾ ಪೆಂಡಾಲ್ ಸೌಂಡ್ ಸಿಸ್ಟಮ್ ವಯರ್ ಕಿತ್ತು ದರ್ಪ ಮೆರೆದ KAS ಅಧಿಕಾರಿ

    ಪ್ರತಿ ಬಾರಿ ಕರಿಯಾಲ ಪ್ರದೇಶಕ್ಕೆ ಡಮರುಗ, ಚಾಟಿ ಏಟಿನ ಸದ್ದಿನ ಮೂಲಕ ಗೊರವಪ್ಪಗಳು ಕಾರ್ಣಿಕದ ಗೊರವಪ್ಪನನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಬರುತ್ತಾರೆ. ಸರಿಯಾಗಿ 6 ಗಂಟೆ ಆಗುತ್ತಿದ್ದಂತೆ ಕಾರ್ಣಿಕ ಸ್ಥಳಕ್ಕೆ ಬರುವ ಗೊರವಯ್ಯ 21 ಅಡಿ ಎತ್ತರದ ಬಿಲ್ಲನ್ನೇರಿ ಸದ್ದಲೆ ಎನ್ನುತ್ತಲೆ ಕಿಕ್ಕಿರಿದು ಸೇರಿದ ಜನರ ನಡುವೆ ಕಾರ್ಣಿಕ ನುಡಿಯುತ್ತಾರೆ. ವರ್ಷದ ಭವಿಷ್ಯವಾಣಿ ನುಡಿದ ಬಳಿಕ ಬಿಲ್ಲಿನಿಂದ ಕೆಳಕ್ಕೆ ಬೀಳುತ್ತಾರೆ.

    ಈ ವರ್ಷ ಬಿಲ್ಲನ್ನೇರಿದ ಗೊರವಪ್ಪ ನಾಗಪ್ಪ ಉರ್ಮಿ “ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್” ಎಂದು ಕಾರ್ಣಿಕ ನುಡಿದಿದ್ದಾರೆ. ಬಳಿಕ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಕಾರ್ಣಿಕ ವಾಣಿಯ ವಿಶ್ಲೇಷಣೆ ಮಾಡಿದ್ದಾರೆ. ಸಣ್ಣಸಣ್ಣ ರೈತರಿಗೂ ಈ ವರ್ಷ ಉತ್ತಮ ಆಗಲಿದೆ. ರಾಜಕೀಯವಾಗಿ ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಎಂದು ಅವರು ವಿಶ್ಲೇಷಿಸಿದ್ದಾರೆ. ಇದನ್ನೂ ಓದಿ: ನೈಜೀರಿಯಾದಿಂದ ತಂದ ಚೀತಾಗಳಿಂದ ದೇಶಾದ್ಯಂತ ಲಂಪಿ ವೈರಸ್‌ ಹರಡುತ್ತಿದೆ: ನಾಲಿಗೆ ಹರಿಬಿಟ್ಟ ಕೈ ನಾಯಕ ನಾನಾ ಪಾಟೋಲೆ

    ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಮಾಲತೇಶ ದೇವರ ಕಾರ್ಣಿಕ ವರ್ಷದ ಭವಿಷ್ಯವಾಣಿ ಎಂತಲೇ ಪ್ರಸಿದ್ಧಿ ಪಡೆದಿದೆ. ಸಾಕ್ಷಾತ್ ಮಾಲತೇಶ ದೇವರೆ ಗೊರವಪ್ಪನ ಮೈಮೇಲೆ ಅವತರಿಸಿ, ವರ್ಷದ ಭವಿಷ್ಯವಾಣಿ ನುಡಿಸುತ್ತಾನೆ ಎನ್ನುವುದು ಕಾರ್ಣಿಕವಾಣಿಯ ವಿಶಿಷ್ಟತೆಗೆ ಸಾಕ್ಷಿಯಾಗಿದೆ. ಒಟ್ಟಿನಲ್ಲಿ ಈ ವರ್ಷದ ಕಾರ್ಣಿಕವಾಣಿ ಆಲಿಸಿದ ಜನರು ಸಣ್ಣ ಸಣ್ಣ ರೈತರಿಗೆ ಉತ್ತಮವಾಗಲಿದೆ ಎನ್ನುವ ಸಂದೇಶ ಕೇಳಿ ತಮ್ಮ ತಮ್ಮ ಊರುಗಳತ್ತ ಖುಷಿಯಿಂದ ಹೆಜ್ಜೆ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]