Tag: gouramma

  • ಕೋಡಿಹಳ್ಳಿಯಲ್ಲಿ ಇಡಿಯಿಂದ ಡಿಕೆಶಿ ತಾಯಿ ಗೌರಮ್ಮ ವಿಚಾರಣೆ

    ಕೋಡಿಹಳ್ಳಿಯಲ್ಲಿ ಇಡಿಯಿಂದ ಡಿಕೆಶಿ ತಾಯಿ ಗೌರಮ್ಮ ವಿಚಾರಣೆ

    ರಾಮನಗರ: ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ, ಬೇನಾಮಿ ಆಸ್ತಿ ಹಿನ್ನೆಲೆಯಲ್ಲಿ ಅವರ ತಾಯಿ ಗೌರಮ್ಮ ಅವರ ವಿಚಾರಣೆಗೆ ಇಡಿ ಅಧಿಕಾರಿಗಳ ತಂಡ ಕನಕಪುರ ತಾಲೂಕಿನ ಕೋಡಿಹಳ್ಳಿಯ ನಿವಾಸಕ್ಕೆ ಆಗಮಿಸಿದೆ.

    ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿನ ತೋಟದ ಮನೆಗೆ ಎರಡು ಕಾರ್ ಗಳಲ್ಲಿ ಬಂದ ಐವರು ಅಧಿಕಾರಿಗಳ ತಂಡ ಡಿಕೆಶಿ ತಾಯಿ ಗೌರಮ್ಮ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಕೋಡಿಹಳ್ಳಿಯ ಹೊರವಲಯದಲ್ಲಿರುವ ತೋಟದ ಮನೆಯಲಿ ಬೆಳಗ್ಗಿನಿಂದ ಗೌರಮ್ಮರ ಆರೋಗ್ಯದ ಬಗ್ಗೆ ಅವರ ಫ್ಯಾಮಿಲಿ ಡಾಕ್ಟರ್ ರಿಂದ ತಪಾಸಣೆ ನಡೆಸಲಾಗಿದೆ.

    ವಿಚಾರಣೆಗಾಗಿ ದೆಹಲಿಗೆ ವಿಚಾರಣೆಗೆ ಬರುವಂತೆ ಇ.ಡಿ. ಅಧಿಕಾರಿಗಳು ಗೌರಮ್ಮ ಅವರಿಗೆ ನೋಟಿಸ್ ನೀಡಿದ್ದರು. ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದ ಗೌರಮ್ಮ, ಅನಾರೋಗ್ಯ ಮತ್ತು ವಯಸ್ಸಾದ ಕಾರಣ ವಿಚಾರಣೆಗೆ ವಿನಾಯಿತಿ ನೀಡಬೇಕು. ಇಲ್ಲವೇ ತಮ್ಮ ನಿವಾಸದಲ್ಲಿಯೇ ವಿಚಾರಣೆ ನಡೆಸಬೇಕು ಎಂದು ಕೋರಿದ್ದರು. ಅವರ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ ಕಾರಣ ಕೋಡಿಹಳ್ಳಿ ನಿವಾಸದಲ್ಲಿ ವಿಚಾರಣೆ ನಿಗದಿಯಾಗಿತ್ತು.

  • ಡಿಕೆಶಿಗೆ ಸಿಎಂ ಫೋನ್ ಮಾಡಿ ಹೇಳಿದ್ದು ಏನು?

    ಡಿಕೆಶಿಗೆ ಸಿಎಂ ಫೋನ್ ಮಾಡಿ ಹೇಳಿದ್ದು ಏನು?

    ಬೆಂಗಳೂರು: ಐಟಿ ದಾಳಿ ಮುಗಿದ 2 ದಿನದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಮತುಕತೆ ನಡೆಸಿದ್ದಾರೆ.

    ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಿಎಂ, ಡಿಕೆಶಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಡಿಕೆಶಿ ತಾಯಿಯ ಕುರಿತು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಬೇರೆ ಯಾರೇ ಹೇಳಿದ್ರೂ ನನಗೆ ಬೇಜಾರ್ ಆಗ್ತಿರಲಿಲ್ಲ. ಆದ್ರೆ ನಿನ್ ತಾಯಿಯೇ ನನ್ನ ಬಗ್ಗೆ ಹಿಂಗೆ ಹೇಳಿದ್ದು ಬಹಳ ಸಮಸ್ಯೆ ಆಗಿದೆ. ನಾವೆಲ್ಲಾ ಬಿಜೆಪಿ ವಿರುದ್ಧ ಹೋರಾಟ ನಡೆಸ್ತಿದ್ದೇವೆ ಅನ್ನೋದನ್ನ ಮರೀಬೇಡಿ. ತಾಯಿ ಗೌರಮ್ಮ ನೀಡಿದ ಹೇಳಿಕೆ ನ್ಯಾಷನಲ್ ಲೆವೆಲ್‍ನಲ್ಲಿ ವೈರಲ್ ಆಗಿದ್ಯಂತೆ. ಆಗಿದ್ದಾಯ್ತು ಹೋಗ್ಲಿ ಬಿಡು ಇಂದು ಸಂಜೆ ಸಂಪುಟ ಸಭೆಗೆ ಬಾ ಅಂತ ಸಿಎಂ ಹೇಳಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ.

    ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯ ಜೊತೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್

  • ಡಿಕೆಶಿ ತಾಯಿ ಮಾಧ್ಯಮಗಳಿಗೆ ಸಿಗದಂತೆ ಬೆಂಬಲಿಗರಿಂದ ಕಾವಲು!

    ಡಿಕೆಶಿ ತಾಯಿ ಮಾಧ್ಯಮಗಳಿಗೆ ಸಿಗದಂತೆ ಬೆಂಬಲಿಗರಿಂದ ಕಾವಲು!

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ತಾಯಿ ನೀಡಿರೋ ಹೇಳಿಕೆಯಿಂದ ತೀವ್ರ ಮುಜುಗರಕ್ಕೀಡಾಗಿದ್ದಾರೆ. ಇದರಿಂದ ಕಾಂಗ್ರೆಸ್‍ನೊಳಗೆ ಎಲ್ಲವು ಸರಿಯಿಲ್ಲ ಎಂಬ ಸಂದೇಶ ರವಾನೆ ಆಗ್ತಿರುವ ಬಗ್ಗೆ ಕೆಪಿಸಿಸಿಯಲ್ಲಿ ಆತಂಕ ಎದುರಾಗಿದೆ.

    ಸಚಿವ ಡಿಕೆಶಿ ತಾಯಿ ಗೌರಮ್ಮ ಮಾಧ್ಯಮಗಳ ಕೈಗೆ ಸಿಗದಂತೆ ನೋಡಿಕೊಳ್ಳಲು ಡಿ.ಕೆ. ಸುರೇಶ್ ಆಪ್ತರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಗೌರಮ್ಮ ಕಾಣದಂತೆ ಕೋಡಿಹಳ್ಳಿ ಮನೆಗೆ ಡಿ.ಕೆ ಶಿವಕುಮಾರ್ ಬೆಂಬಲಿಗರ ಕಾವಲು ಕಾಯುತ್ತಿದ್ದಾರೆ. ಮಾಧ್ಯಮಗಳಿಗೆ ಪಕ್ಷದ ನಾಯಕರ ವಿರುದ್ಧ ಯಾರೂ ಹೇಳಿಕೆ ನೀಡದಂತೆ ಡಿ.ಕೆ ಸುರೇಶ್ ಬೆಂಬಲಿಗರಿಗೆ ಸೂಚನೆಯನ್ನು ಈಗಾಗಲೇ ನೀಡಿಲಾಗಿದೆ.

    ಸಿಎಂ ವಿರುದ್ಧ ಗೌರಮ್ಮ ಹೇಳಿದ್ದು ಏನು?
    ಸಿಎಂ ಸಿದ್ದರಾಮಯ್ಯ ನನ್ನ ಮಗನಿಂದ ಮುಂದೆ ಬಂದಿದ್ದಾರೆ. ಸಿದ್ದರಾಮಯ್ಯ ನಂಬಿಸಿ ಕತ್ತು ಕುಯ್ಯುತ್ತಿದ್ದಾರೆ. ನನ್ನ ಮಕ್ಕಳನ್ನು ಕಂಡ್ರೆ ಅವರಿಗೆ ಆಗಿ ಬರೋದಿಲ್ಲ. ಅಕ್ಕಿ ಕೊಟ್ಟೆ, ಅದು ಕೊಟ್ಟೆ ಎಲ್ಲಾ ಕೊಟ್ರೂ ಅದೇನು ಅವರ ಮನೆಯಿಂದ ಕೊಟ್ಟಿಲ್ಲ. ರೈತರು ಬೆಳೆದಿದ್ದ ಅಕ್ಕಿಯನ್ನು ಕೊಟ್ಟಿದ್ದಾರೆ. ನನ್ನ ಮಕ್ಕಳ ಮನೆ ಮೇಲೆ ದಾಳಿ ನಡೆದರೂ ಸಿದ್ದರಾಮಯ್ಯ ಯಾಕೆ ಸುಮ್ಮನಿದ್ದಾರೆ? ಸಿದ್ದರಾಮಯ್ಯ ನನ್ನ ಮಕ್ಕಳ ಮೇಲೆ ಕತ್ತಿ ಮಸಿಯುತ್ತಿದ್ದಾರೆ. ಅವರಿಗೆ ಅಧಿಕಾರಿಗಳನ್ನು ಪ್ರಶ್ನಿಸುವ ಹಕ್ಕಿದ್ದರೂ ಸುಮ್ಮನಿದ್ದಾರೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

    ನಮ್ಮ ಮನೆಯ ಮೇಲೆ ಐಟಿ ದಾಳಿ ನಡೆಯೋದಕ್ಕೆ ಪ್ರಧಾನ ಮಂತ್ರಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇರ ಹೊಣೆ ಆಗುತ್ತಾರೆ. ಇದರ ಪ್ರತಿಫಲವನ್ನು ಮುಂದೊಂದು ದಿನ ಅನುಭವಿಸುತ್ತಾರೆ. ರಾಜ್ಯಾದ್ಯಂತ ನನ್ನ ಮಕ್ಕಳ ಪರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆಲ್ಲ ನನ್ನ ಧನ್ಯವಾದಗಳು. ರಾಜ್ಯದ ಬಿಜೆಪಿ, ಜನತಾದಳ ಎಲ್ಲಾ ಪಕ್ಷದವರು ನಮಗೆ ಸಹಾಯ ಮಾಡಿದ್ದಾರೆ. ಮುಂದೊಂದು ದಿನ ನನ್ನ ಮಕ್ಕಳು ನಿಮ್ಮ ಋಣ ತೀರುಸ್ತಾರೆ. ನನ್ನ ಮಕ್ಕಳು ತುಂಬಾ ಪವಿತ್ರವಾದವರು. ಅವರಿಗೆ ಮೋಸ ಮಾಡಬೇಕು ಎಂಬ ಮನಸ್ಸಿಲ್ಲ. ತಪ್ಪು ಮಾಡುವ ಮಕ್ಕಳನ್ನು ನಾನು ಹೆತ್ತಿಲ್ಲ ಅಂತ ಹೇಳಿದ್ದರು.