Tag: government

  • ಖಜಾನೆ ತುಂಬಿರೋ ಸರ್ಕಾರಕ್ಕೆ ಸಾರಿಗೆ ನೌಕರರ ಸಮಸ್ಯೆ ಪರಿಹರಿಸಲು ಕಷ್ಟ ಯಾಕೆ? ಆರಗ ಜ್ಞಾನೇಂದ್ರ

    ಖಜಾನೆ ತುಂಬಿರೋ ಸರ್ಕಾರಕ್ಕೆ ಸಾರಿಗೆ ನೌಕರರ ಸಮಸ್ಯೆ ಪರಿಹರಿಸಲು ಕಷ್ಟ ಯಾಕೆ? ಆರಗ ಜ್ಞಾನೇಂದ್ರ

    ಬೆಂಗಳೂರು: ಸರ್ಕಾರದ ಖಜಾನೆ ತುಂಬಿ ತುಳುಕುತ್ತಿದೆ ಅಂತಿರೋರಿಗೆ ನೌಕರರ ಸಮಸ್ಯೆ ಪರಿಹಾರ ಮಾಡೋಕೆ ಯಾಕೆ ಆಗ್ತಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಕಿಡಿಕಾರಿದ್ದಾರೆ.

    ಸಾರಿಗೆ ನೌಕರರ ಮುಷ್ಕರದ (Transport Employees Strike) ಬಗ್ಗೆ ಬೆಂಗಳೂರಿನಲ್ಲಿ (Bengaluru) ಪ್ರತಿಕ್ರಿಯೆ ನೀಡಿದ ಅವರು, ಸಾರಿಗೆ ನೌಕರರ ಜೊತೆ ಸರ್ಕಾರ ಮಾತುಕತೆ ನಡೆಸುವಲ್ಲಿ ವಿಫಲವಾಗಿದೆ. ಹಿಂದೆ ಯಡಿಯೂರಪ್ಪ ಇದ್ದಾಗ ಇದೇ ಸಿದ್ದರಾಮಯ್ಯ ನಮಗೆ ಪ್ರಶ್ನೆ ಮಾಡಿದ್ರು. ಸಾರಿಗೆ ನೌಕರರ ಮೇಲೆ ಎಸ್ಮಾ ಹಾಕಿ ಹೆದರಿಸಿದ್ರು. ನಿನ್ನ ಕುರ್ಚಿ ಎಷ್ಟು ಶಾಶ್ವತ ಎಂದು ತಿಳಿದುಕೊಂಡಿದ್ದೀಯಾ ಅಂತಾ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಈಗ ನಾನು ಸಿದ್ದರಾಮಯ್ಯಗೆ (Siddaramaiah) ಪ್ರಶ್ನೆ ಮಾಡ್ತೀನಿ.ನೀವು ಎಷ್ಟು ದಿನ ಅಧಿಕಾರದಲ್ಲಿ ಇರುತ್ತೀರಾ ಎಂದುಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕು: ಡಿಕೆಶಿ

    ನೀವು ಫ್ರೀ ಅಂತಾ ನೌಕರರಿಗೆ ಸಂಬಳವನ್ನೇ ಕೊಡುತ್ತಿಲ್ಲ. ನೌಕರರನ್ನು ಕರೆದು ಮಾತಾಡಿ ಸಮಸ್ಯೆ ಬಗೆಹರಿಸಬೇಕಿತ್ತು. ಇದರಿಂದ ಜನರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಾರಿಗೆ ಮುಷ್ಕರ | ಇದು ಪಾಪರ್‌ ಸರ್ಕಾರ, ಪರಿಹಾರ ಕೊಡದಿದ್ರೆ ಅಧಿಕಾರ ಬಿಟ್ಟು ತೊಲಗಿ – ಅಶೋಕ್‌ ವಾಗ್ದಾಳಿ

    ಖಾಸಗಿ ಬಸ್‌ನವರು ಹೆಚ್ಚು ಹಣ ವಸೂಲಿ ಮಾಡ್ತಿದ್ದಾರೆ. ಜನಸಾಮಾನ್ಯರ ಹಣ ವ್ಯರ್ಥ ಆಗ್ತಿದೆ. ಇದಕ್ಕೆ ಕಡಿವಾಣ ಹಾಕಲು ತಕ್ಷಣವೇ ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳಬೇಕು. ಎಲ್ಲದಕ್ಕೂ ನಮ್ಮ ಮೇಲೆ ಬೆರಳು ತೋರಿಸ್ತಾರೆ. ಅವರು ಮಾಡಿದನ್ನು ನಾವು ತೀರಿಸಿದ್ದೇವೆ ಎನ್ನುತ್ತಾರೆ. ಹೌದಪ್ಪ ನಾವು ಕೆಟ್ಟದನ್ನು ಮಾಡಿದ್ದೇವೆ. ಜನ ನಮ್ಮನ್ನು ಸೋಲಿಸಿದ್ದಾರೆ. ನಿಮ್ಮನ್ನು ಗೆಲ್ಲಿಸಿದ್ದಾರಲ್ಲ ನೀವು ಅವರಿಗೆ ಒಳ್ಳೆಯದು ಮಾಡಬೇಕಿತ್ತಲ್ಲ. ಖಜಾನೆ ತುಂಬಿ ತುಳುಕುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ರಿ. ಈಗ ಹಣ ಇಲ್ಲ ಅಂತೀರಲ್ಲ. ನುಡಿದಂತೆ ನಡೆದಿದ್ದೇವೆ ಅಂತೀರಲ್ಲ ಇದೇನಾ ನಿಮ್ಮ ಮಾತು. ಗ್ರಾಮೀಣ ಭಾಗದಲ್ಲಿ ತುಂಬಾ ಸಮಸ್ಯೆ ಆಗಿದೆ. ಕೂಡಲೇ ಸಮಸ್ಯೆ ಪರಿಹಾರ ಮಾಡಿ ಎಂದು ಆಗ್ರಹಿಸಿದ್ದಾರೆ.

  • ಬಿಬಿಎಂಪಿ ಚುನಾವಣೆ; ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

    ಬಿಬಿಎಂಪಿ ಚುನಾವಣೆ; ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

    ನವದೆಹಲಿ: ಬಿಬಿಎಂಪಿಗೆ (BBMP) ಶೀಘ್ರ ಚುನಾವಣೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ (Supreme Court) ನವೆಂಬರ್ 3ಕ್ಕೆ ಮುಂದೂಡಿದೆ. ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.

    ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ, ಸರ್ಕಾರ ನೆಪಗಳನ್ನೊಡ್ಡಿ ಚುನಾವಣೆಯನ್ನು ಮುಂದೂಡುತ್ತಿದೆ. ಉದ್ದೇಶಪೂರ್ವಕವಾಗಿ ಇದನ್ನು ಮಾಡಲಾಗುತ್ತಿದೆ. ಎಲ್ಲವನ್ನು ಬದಿಗಿರಿಸಿ ಶೀಘ್ರ ಚುನಾವಣೆ ನಡೆಸಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್; ಸಚಿವ ಶಿವಾನಂದ ಪಾಟೀಲ್‌ಗೆ ಸುಪ್ರೀಂ ಚಾಟಿ

    ಸರ್ಕಾರ ಪರ ವಾದ ಮಂಡಿಸಿದ ವಕೀಲರು, ನವೆಂಬರ್ ವೇಳೆಗೆ ಪುನರ್ ವಿಂಗಡನೆ, ಮೀಸಲಾತಿ ಪ್ರಕ್ರಿಯೆ ಮುಗಿಸಲಾಗುವುದು. ಇದಕ್ಕೆ ಸಮಯ ಬೇಕು ಈ ಬಗ್ಗೆ ಈಗಾಗಲೇ ಅಫಿಡವಿಟ್ ಸಲ್ಲಿಸಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠ, ನವೆಂಬರ್ 1ರ ವೇಳೆ ಸರ್ಕಾರ ಏನು ಮಾಡಲಿದೆ ಎಂದು ವಿಸ್ತೃತ ಮಾಹಿತಿಯನ್ನು ನೀಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

  • ಆ.5ರಂದು ಸಾರಿಗೆ ನೌಕರರ ಮುಷ್ಕರ; 40% ಖಾಸಗಿ ಬಸ್ ರಸ್ತೆಗಿಳಿಸಲು ಸರ್ಕಾರ ನಿರ್ಧಾರ

    ಆ.5ರಂದು ಸಾರಿಗೆ ನೌಕರರ ಮುಷ್ಕರ; 40% ಖಾಸಗಿ ಬಸ್ ರಸ್ತೆಗಿಳಿಸಲು ಸರ್ಕಾರ ನಿರ್ಧಾರ

    ಬೆಂಗಳೂರು: ಆ.5ರಂದು ಸಾರಿಗೆ ನೌಕರರ ಮುಷ್ಕರ (Transport Employees Strike) ನಡೆದರೆ ಸರ್ಕಾರದ ಬಳಿ ಪರ್ಯಾಯ ವ್ಯವಸ್ಥೆಯಿದ್ದು, 32 ಸಾವಿರ ಖಾಸಗಿ ವಾಹನಗಳ ಪೈಕಿ 40%ರಷ್ಟು ವಾಹನಗಳನ್ನ ಓಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.

    ಬೆಂಗಳೂರು (Bengaluru) ನಗರದಲ್ಲಿ ಒಟ್ಟು 32,582 ಖಾಸಗಿ ವಾಹನಗಳಿವೆ. ಇದರಲ್ಲಿ ಖಾಸಗಿ ಬಸ್, ಟೆಂಪೋ ಟ್ರಾವಲ್ಸ್, ಮ್ಯಾಕ್ಸಿ ಕ್ಯಾಬ್‌ಗಳು ಸೇರಿವೆ. ಇದೀಗ 32 ಸಾವಿರ ಖಾಸಗಿ ವಾಹನಗಳ ಪೈಕಿ 40%ರಷ್ಟು ವಾಹನಗಳನ್ನ ಓಡಿಸಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

    ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟುಕೊಂಡು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಸಿಎಂ ನೇತೃತ್ವದಲ್ಲಿ ಸಾರಿಗೆ ನೌಕರರ ಜೊತೆ ಸಭೆ ನಡೆಯುತ್ತಿದ್ದು, ಸಂಧಾನ ಸಭೆ ಯಶಸ್ವಿ ಆಗದಿದ್ದರೆ ಬಸ್ ಬಂದ್ ಗ್ಯಾರಂಟಿ. ಇದನ್ನೂ ಓದಿ: ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು – ಸಾರಿಗೆ ಇಲಾಖೆ ಆದೇಶ

    ಈ ಮುಷ್ಕರ ಆರಂಭವಾದರೆ ಸಹಜವಾಗಿಯೇ ಸಾರ್ವಜನಿಕರು ತೊಂದರೆಗೆ ಒಳಗಾಗುತ್ತಾರೆ. ಬಿಎಂಟಿಸಿಯಿಂದ (BMTC) 7 ಸಾವಿರ ಬಸ್‌ಗಳು, ಕೆಎಸ್‌ಆರ್‌ಟಿಯಿಂದ 8 ಸಾವಿರ ಬಸ್‌ಗಳು ಮುಷ್ಕರದಲ್ಲಿ ಭಾಗಿಯಾಗಲಿವೆ. 1.2 ಲಕ್ಷ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದು, ನಾಳೆ ಸಾರ್ವಜನಿಕರಿಗೆ ಬಸ್ ಸಮಸ್ಯೆ ಎದುರಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರವು ಪರ್ಯಾಯ ವ್ಯವಸ್ಥೆಯಾಗಿ ಖಾಸಗಿ ವಾಹನಗಳನ್ನು ರಸ್ತೆಗಿಳಿಸಲು ಪ್ಲ್ಯಾನ್ ಮಾಡಿದೆ.

  • ಅಂಧರಿಗೆ ಸರ್ಕಾರದಿಂದ ಗುಡ್‌ನ್ಯೂಸ್ – ಒಂದೇ ಪಾಸ್‌ನಲ್ಲಿ 4 ನಿಗಮಗಳ ಬಸ್‌ನಲ್ಲಿ ಒಡಾಟಕ್ಕೆ ಅವಕಾಶ

    ಅಂಧರಿಗೆ ಸರ್ಕಾರದಿಂದ ಗುಡ್‌ನ್ಯೂಸ್ – ಒಂದೇ ಪಾಸ್‌ನಲ್ಲಿ 4 ನಿಗಮಗಳ ಬಸ್‌ನಲ್ಲಿ ಒಡಾಟಕ್ಕೆ ಅವಕಾಶ

    ಬೆಂಗಳೂರು: ಮಹಿಳೆಯರಿಗೆ ಫ್ರೀ ಬಸ್ (Free Bus) ನೀಡಿದ್ದ ಸರ್ಕಾರ ಈಗ ಅಂಧತ್ವ ಹೊಂದಿರೋ ವಿಶೇಷ ಚೇತನರಿಗಾಗಿ ಗುಡ್ ನ್ಯೂಸ್ ನೀಡಿದ್ದು, ಈ ಮೂಲಕ ರಾಜ್ಯ ಸಾರಿಗೆ 4 ನಿಗಮಗಳಲ್ಲಿ ಉಚಿತವಾಗಿ ಓಡಾಡಲು ಅವಕಾಶ ಮಾಡಿಕೊಟ್ಟಿದೆ.

    ಶಕ್ತಿ ಯೋಜನೆ (Shakthi Scheme ಸರ್ಕಾರದ ಮಹತ್ವದ ಗ್ಯಾರಂಟಿಯು ಸರ್ಕಾರಕ್ಕೆ ಅತಿ ಹೆಚ್ಚು ಹೆಸರು ತಂದ ಯೋಜನೆ ಕೂಡ. ಮಹಿಳೆಯರಿಗೆ ಯೋಜನೆ ಫ್ರೀ ಮಾಡಿದ್ದ ಸರ್ಕಾರ, ಈಗ ಅಂಧತ್ವ ಹೊಂದಿರೋ ವಿಶೇಷ ಚೇತನರಿಗಾಗಿ (Blind People) ಮಹತ್ವದ ಆದೇಶ ಹೊರಡಿಸಿದ್ದು, ಈ ಮೂಲಕ ಅಂಧರು ರಾಜ್ಯವ್ಯಾಪಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಿದೆ. ಇದನ್ನೂ ಓದಿ: ಕಸಬ್ ಗಲ್ಲಿಗೇರಲು ಕಾರಣರಾಗಿದ್ದ ವಕೀಲ ಉಜ್ವಲ್ ನಿಕಮ್‌, ಸದಾನಂದನ್ ಮಾಸ್ಟರ್ ಸೇರಿದಂತೆ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

    ಹೌದು, ಈ ಹಿಂದೆ 4 ನಿಗಮಗಳ ಪೈಕಿ ಯಾವ ನಿಗಮದ ಬಸ್‌ಪಾಸ್ ಇತ್ತೋ ಆ ಬಸ್‌ನಲ್ಲಿ ಮಾತ್ರ ಅಂಧತ್ವ ಇದ್ದವರು ಓಡಾಡಲು ಅವಕಾಶ ಇತ್ತು. ಇದು ಅನೇಕರಿಗೆ ಸಮಸ್ಯೆ ಕೂಡ ಆಗುತ್ತಿತ್ತು. ಅದರಲ್ಲೂ ಬೆಂಗಳೂರಿನಲ್ಲಿರೋ ಹಲವರು ಬಿಎಂಟಿಸಿ ಬಸ್‌ನಲ್ಲಿ ಓಡಾಡಲು ಅವಕಾಶ ಇದ್ದವರು ಕೆಎಸ್‌ಆರ್‌ಟಿಸಿಯಲ್ಲಿ ಓಡಾಡಬೇಕಾದ್ರೆ ಹಣ ಪಾವತಿ ಮಾಡಿಯೇ ಓಡಾಡಬೇಕಿತ್ತು. ಇದನ್ನೂ ಓದಿ: ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ: ಬಿಬಿಎಂಪಿ ಸ್ಪಷ್ಟನೆ

    ಆದರೆ ಈಗ ಅಂಧರ ಅನೂಕೂಲಕ್ಕಾಗಿ ಸರ್ಕಾರ ಹೊಸ ಆದೇಶ ಮಾಡಿದೆ. ಆ ಪ್ರಕಾರ ಯಾವುದಾದರೂ 1 ನಿಗಮದ ಪಾಸ್ ಇದ್ದರೆ, 4 ನಿಗಮಗಳ ಬಸ್‌ಗಳಲ್ಲಿ ಉಚಿತವಾಗಿ ಸಂಚಾರ ಮಾಡಬಹುದು. ಸದ್ಯ ಈ ಬಗ್ಗೆ ಖುದ್ದು ಸಾರಿಗೆ ಸಚಿವರೇ ನಿಗಮಗಳಿಗೆ ಸೂಚಿಸಿದ್ದು, ಶೀಘ್ರ ಈ ಕ್ರಮಕ್ಕೆ ಆದೇಶಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲೊಂದು ‘ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ – ಒಂದೂವರೆ ತಿಂಗಳ ಬಳಿಕ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ

    ಇನ್ನೂ ಬೆಂಗಳೂರು ಒಂದರಲ್ಲೇ ಸುಮಾರು 20 ಸಾವಿರಕ್ಕೂ ಹೆಚ್ಚು ಅಂಧರಿದ್ದಾರೆ. ರಾಜ್ಯವ್ಯಾಪಿ ಲಕ್ಷದಷ್ಟು ಅಂಧ ವಿಶೇಷ ಚೇತನರಿದ್ದು, ಎಲ್ಲರಿಗೂ ಸರ್ಕಾರ ಉಚಿತ ಪಾಸ್ ನೀಡುತ್ತಿದೆ. ಆದರೆ ಸದ್ಯ ರಾಜ್ಯ ಸರ್ಕಾರವು ಹೊಸದಾಗಿ ಕೈಗೊಳ್ಳಲು ಹೊರಟಿರುವ ಈ ನಿರ್ಧಾರ ಎಲ್ಲಾ ಅಂಧ ವಿಶೇಷ ಚೇತನರಿಗೆ ಅನೂಕೂಲ ಆಗಲಿದೆ.

  • ಬೇಕರಿ, ಕಾಫಿ, ಟೀ ಶಾಪ್‌ಗಳಿಗೂ ಟ್ಯಾಕ್ಸ್ ಬ್ರಹ್ಮಾಸ್ತ್ರ – ಅಂಗಡಿ ಮಾಲೀಕರಿಗೆ ಬಿಗ್ ಶಾಕ್!

    ಬೇಕರಿ, ಕಾಫಿ, ಟೀ ಶಾಪ್‌ಗಳಿಗೂ ಟ್ಯಾಕ್ಸ್ ಬ್ರಹ್ಮಾಸ್ತ್ರ – ಅಂಗಡಿ ಮಾಲೀಕರಿಗೆ ಬಿಗ್ ಶಾಕ್!

    ಬೆಂಗಳೂರು: ಬೇಕರಿ, ಕಾಂಡಿಮೆಂಟ್ಸ್, ಕಾಫಿ-ಟೀ ವ್ಯಾಪಾರ ಮಾಡ್ತಿರೋ ಅಂಗಡಿಗಳ ಕಳೆದ 4 ವರ್ಷದ ವಹಿವಾಟನ್ನ ಗಮಿನಿಸಿರೋ ವಾಣಿಜ್ಯ ತೆರಿಗೆ ಇಲಾಖೆಯು, ಜಿಎಸ್‌ಟಿ ಟ್ಯಾಕ್ಸ್ (GST Tax) ಕಟ್ಟಬೇಕು ಎಂದು ಸಾವಿರಾರು ಮಾಲೀಕರಿಗೆ ನೋಟಿಸ್ ನೀಡುವ ಮೂಲಕ ಬಿಗ್ ಶಾಕ್ ನೀಡಿದೆ.

    ದೂರದೂರುಗಳಿಂದ ಅಪ್ಪ ಅಮ್ಮನನ್ನ ಬಿಟ್ಟು ನಗರಗಳಿಗೆ ಹೋಗಿ ಹೇಗಾದ್ರೂ ಒಂದು ಬಿಸಿನೆಸ್ ಮಾಡಿ ಕುಟುಂಬದವರನ್ನ ನೋಡಿಕೊಳ್ಳೋಣ ಅನ್ನೋ ಸಣ್ಣ ಆಸೆಯಿಂದ ಸಾವಿರಾರು ಜನ ಇಂದು ಬೇಕರಿ (Bakery), ಟೀ ಶಾಪ್, ಪಾನ್ ಶಾಪ್, ಕಾಂಡಿಮೆಂಟ್ ಅಂತಾ ಮಾಡಿಕೊಂಡು ಜೀವನ ಮಾಡ್ತಿದ್ದಾರೆ. ಇತಂಹ ಶಾಪ್‌ಗಳಲ್ಲಿ ಇವತ್ತಿನ ಡಿಜಿಟಲ್ ದುನಿಯಾದಲ್ಲಿ ಅತಿಹೆಚ್ಚು ವ್ಯವಹಾರ ಆಗ್ತಿರೋದು ಆನ್‌ಲೈನ್ ಪೇಮೆಂಟ್ ಅಂದರೆ ಗೂಗಲ್‌ಪೇ, ಪೆಟಿಎಂ, ಪೋನ್ ಪೇ ಮೂಲಕವೇ ಟೀ, ಸಿಗರೇಟ್, ಕಾಫಿ, ತಿಂಡಿ, ಬೀಡಾ ಅಂತಾ ಗ್ರಾಹಕರು ಸಣ್ಣ ಪುಟ್ಟ ಖರೀದಿಗೂ ಡಿಜಿಟಲ್ ಪೇಮೆಂಟ್ ಮಾಡ್ತಿದ್ದಾರೆ. ಇದನ್ನೂ ಓದಿ: ಯಶ್ ತಾಯಿ ನಿರ್ಮಾಣದ ʻಕೊತ್ತಲವಾಡಿʼ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

    ಹೀಗೆ ವ್ಯಾಪಾರ ಮಾಡ್ತಿರೋ ಅಂಗಡಿಗಳ ಕಳೆದ ನಾಲ್ಕು ವರ್ಷದ ವಹಿವಾಟನ್ನು ಗಮಿನಿಸಿರೋ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ನಿಮ್ಮ ವ್ಯಾಪಾರ ವಹಿವಾಟು ಲಕ್ಷದಿಂದ ಕೋಟಿವರೆಗೆ ಆಗಿದೆ. ಅದಕ್ಕೆ ಜಿಎಸ್‌ಟಿ ಟ್ಯಾಕ್ಸ್ ಕಟ್ಟಬೇಕು ಅಂತಾ ಸಾವಿರಾರು ಮಾಲೀಕರಿಗೆ ನೋಟಿಸ್ ನೀಡಿದೆ. ಹೀಗೆ ನೋಟಿಸ್ ಪಡೆದವರು ಅಯ್ಯೋ ನಾವು ವರ್ಷ ಪೂರ್ತಿ ದುಡಿದರೂ 2-3 ಲಕ್ಷ ರೂ. ಉಳಿತಾಯ ಆಗೋಲ್ಲ. ಈಗ ಇಷ್ಟೊಂದು ಟ್ಯಾಕ್ಸ್ ಎಲ್ಲಿಂದ ಕಟ್ಟೋದು ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಗೃಹಮಂಡಳಿಯಿಂದ ಲಾಟರಿ – ಅಗ್ಗದ ದರದಲ್ಲಿ ಡ್ಯುಪ್ಲೆಕ್ಸ್ ಮನೆ: ಬೆಲೆ ಎಷ್ಟು ಗೊತ್ತಾ?

    ಈ ನೋಟಿಸ್ ಪಡೆದವರೆಲ್ಲ, ಕಾರ್ಮಿಕ ಪರಿಷತ್ತಿ ಸಂಘದ ಅಧ್ಯಕ್ಷ ರವಿ ಶೆಟ್ಟಿ ಅವರ ಬಳಿ ಹೋಗಿ ತಮಗೆ ನೋಟಿಸ್ ಬಂದಿರೋ ಬಗ್ಗೆ ಹೇಳಿಕೊಂಡಿದ್ದಾರೆ. ಸರ್ಕಾರ ಗ್ಯಾರಂಟಿ ಯೋಜನೆ ನೀಡಿ, ಈಗ ಈ ರೀತಿ ವಸೂಲಿಗೆ ನಿಂತಿದೆ. ಇದು ಸರಿಯಾದ ಕ್ರಮವಲ್ಲ. ಇಡೀ ರಾಜ್ಯದಲ್ಲಿ 60 ಸಾವಿರಕ್ಕೂ ಹೆಚ್ಚು ಸಣ್ಣ ಬೇಕರಿ, ಕಾಂಡಿಮೆಂಟ್ಸ್ ಇದೆ. ಅವರೆಲ್ಲ ನಮ್ಮನ್ನ ಸಂಪರ್ಕ ಮಾಡ್ತಿದ್ದಾರೆ. ಸರ್ಕಾರ ಈ ಟ್ಯಾಕ್ಸ್ ಹಿಂಪಡೆಯಬೇಕು ಎಂದು ನಾವು ಸಿಎಂಗೆ ಮನವಿ ಮಾಡುತ್ತೇವೆ. ಇಲ್ಲವಾದಲ್ಲಿ 1 ಲಕ್ಷಕ್ಕೂ ಅಧಿಕ ಜನರು ಸೇರಿ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೊನೆಗೂ ಭಾರತಕ್ಕೆ ಬಂತು ಟೆಸ್ಲಾ| ಮುಂದಿನ ವಾರ ಶೋರೂಂ ಓಪನ್‌ – EV ಕಾರಿನ ಬೆಲೆ ಎಷ್ಟು?

    ಒಟ್ಟಿನಲ್ಲಿ, ವಾಣಿಜ್ಯ ತೆರಿಗೆ ನೋಟಿಸ್ ಸಾವಿರಾರು ಜನರ ನಿದ್ದೆಗೆಡಿಸಿದೆ. ನಾವು ಇಡೀ ಜೀವಮಾನದಲ್ಲಿ ಸಂಪಾದನೆ ಮಾಡದಷ್ಟು ಹಣವನ್ನ ಟ್ಯಾಕ್ಸ್ ಮೂಲಕ ಕಟ್ಟಿ ಅಂತಿದ್ದಾರೆ. ಅದು ಹೇಗೆ ಸಾಧ್ಯ, ನಮ್ಮ ಜೀವನ ಬೀದಿಗೆ ತರೋದಕ್ಕೆ ಸರ್ಕಾರ ಮುಂದಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆ ಸರ್ಕಾರ ಈಗ ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾದುನೋಡಬೇಕಿದೆ.

  • 50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ಇಲ್ಲ – 230 ಕೋಟಿ ವಂಚನೆ!

    50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ಇಲ್ಲ – 230 ಕೋಟಿ ವಂಚನೆ!

    ಭೋಪಾಲ್: 50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ನೀಡದೇ 230 ಕೋಟಿ ರೂ. ವಂಚಿಸಿದ ಬೃಹತ್ ಹಗರಣ ಮಧ್ಯಪ್ರದೇಶದಲ್ಲಿ (Madhya Pradesh) ತಡವಾಗಿ ಬೆಳಕಿಗೆ ಬಂದಿದೆ.

    ಮಧ್ಯಪ್ರದೇಶ ಸರ್ಕಾರದಲ್ಲಿನ ಒಟ್ಟಾರೆ ಸರ್ಕಾರಿ ನೌಕರರ ಪೈಕಿ 9% ರಷ್ಟು ಮಂದಿಗೆ ವೇತನವೇ ನೀಡದೇ ವಂಚಿಸಲಾಗಿದೆ. ದಾಖಲೆಗಳ ಪ್ರಕಾರ ನೌಕರರ ಹೆಸರು, ಗುರುತು ಪತ್ರ, ಗುರುತಿನ ಸಂಖ್ಯೆ ಎಲ್ಲವೂ ನಮೂದಾಗಿದೆ. ಆದರೆ ಕೆಲವು ಕಾರಣ ನೀಡಿ ನೌಕರರಿಗೆ ವೇತನವೇ ನೀಡದಿರುವುದು ದೃಢಪಟ್ಟಿದೆ. ಇದನ್ನೂ ಓದಿ: ಬೆಂಗ್ಳೂರು ಕಾಲ್ತುಳಿತ ಪ್ರಕರಣ – ನಾಲ್ವರಿಗೆ 14 ದಿನ ನ್ಯಾಯಾಂಗ ಬಂಧನ

    ಈ ನೌಕರರು ವೇತನ ರಹಿತ ರಜೆ ಪಡೆದಿದ್ದರೋ, ಅಮಾನತು ಮಾಡಲಾಗಿದೆಯೋ, ಮತ್ಯಾಕೆ ವೇತನ ಕೊಟ್ಟಿಲ್ಲ ಅನ್ನೋದು ನಿಗೂಢವಾಗಿಯೇ ಇದೆ. ಮಧ್ಯಪ್ರದೇಶ ಮುಖ್ಯ ಕಾರ್ಯದರ್ಶಿ ಪ್ರಕರಣದ ಕುರಿತು ಹಣಕಾಸು ಇಲಾಖೆಗೆ ತನಿಖೆಗೆ ಆದೇಶಿಸಿದ್ದಾರೆ. 6000 ಡಿಡಿಒಗಳ ಕೆಲಸದ ಮೇಲೆ ನಿಗಾ ವಹಿಸಲಾಗಿದ್ದು, ಅವರ ಸೇವೆ ಮೇಲೆ ತೂಗುಗತ್ತಿ ಬೀಳುವ ಸಾಧ್ಯತೆ ಇದೆ.

    6000 ಡಿಡಿಓಗಳಿಗೆ 15 ದಿನಗಳಲ್ಲಿ 230 ಕೋಟಿ ರೂ. ವೇತನ ಬಿಡುಗಡೆ ಆಗಿದ್ದರೂ, ನೌಕರರಿಗೆ ನೀಡದೇ ಇರುವ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: KSCA ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

  • ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಪ್ರಹ್ಲಾದ್ ಜೋಶಿ ಆಗ್ರಹ

    ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಪ್ರಹ್ಲಾದ್ ಜೋಶಿ ಆಗ್ರಹ

    – ಸರ್ಕಾರದ ಬಿಗಿ ಆಡಳಿತ ಇಲ್ಲದಿರುವುದೇ ಇಂಥ ಘಟನೆಗಳಿಗೆ ಕಾರಣ

    ಹುಬ್ಬಳ್ಳಿ: ದತ್ತಾತ್ರೇಯ ವಿಗ್ರಹವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಜಿಲ್ಲೆಯ ದೇಶಪಾಂಡೆ ನಗರದಲ್ಲಿ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ನಗರ ಪೊಲೀಸ್ ಕಮಿಷನರ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಸೂಚಿಸಿದ್ದಾರೆ.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ನಗರದ (Deshapande Nagar) ದತ್ತಾತ್ರೇಯ ದೇವಸ್ಥಾನದಲ್ಲಿನ ವಿಗ್ರಹವನ್ನು ಭಗ್ನಗೊಳಿಸಿರುವುದು ಅಕ್ಷಮ್ಯ ಅಪರಾಧ ಎಂದು ಘಟನೆ ಖಂಡಿಸಿದರು. ಇತ್ತೀಚೆಗೆ ಹಲವೆಡೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವಂತಹ ದುಷ್ಕೃತ್ಯಗಳು ಘಟಿಸುತ್ತಲಿವೆ. ಸರ್ಕಾರದ ಬಿಗಿ ಆಡಳಿತ ಇಲ್ಲದಿರುವುದು ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರ್ತಾರೋ ಗೊತ್ತಿಲ್ಲ – ಸಂಚಲನ ಮೂಡಿಸಿದ ಸತೀಶ್ ಜಾರಕಿಹೊಳಿ

    ಸಮಾಜಘಾತಕರನ್ನು ತಕ್ಷಣ ಬಂಧಿಸಿ:
    ದತ್ತಾತ್ರೇಯ ಮೂರ್ತಿಯ ಕೈಗಳನ್ನು ಕತ್ತರಿಸಿ ದುಷ್ಕೃತ್ಯ ಎಸಗಿರುವ ಸಮಾಜಘಾತಕರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕ್ಕೆ ಗುರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

    ನಾಡಿನೆಲ್ಲೆಡೆ ದಸರಾ ಮಹೋತ್ಸವ ಆಚರಿಸುತ್ತಿದ್ದು, ಜನತೆ ವಿಶೇಷ ಪೂಜೆ-ಪುನಸ್ಕಾರ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿದ್ದಾರೆ. ಆದರೆ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿ ಹಬ್ಬಗಳಲ್ಲಿ ಧಾರ್ಮಿಕ ಆಚರಣೆಗೆ ಭಂಗ ತಂದು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ. ಹೀಗಾಗಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.ಇದನ್ನೂ ಓದಿ: 70th National Film Awards: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಿಕ್ರವರ್ತಿ

  • ಒಳಮೀಸಲಾತಿಗೆ ಆಗ್ರಹಿಸಿ ರಾಯಚೂರು ಬಂದ್: ಬಸ್ ಸಂಚಾರ ಸಂಪೂರ್ಣ ಸ್ಥಗಿತ

    ಒಳಮೀಸಲಾತಿಗೆ ಆಗ್ರಹಿಸಿ ರಾಯಚೂರು ಬಂದ್: ಬಸ್ ಸಂಚಾರ ಸಂಪೂರ್ಣ ಸ್ಥಗಿತ

    ರಾಯಚೂರು: ಒಳಮೀಸಲಾತಿಗೆ ಆಗ್ರಹಿಸಿ ಇಂದು (ಅ.03) ರಾಯಚೂರು (Raichuru) ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ.

    ವಿವಿಧ ಸಂಘಟನೆ ಹಾಗೂ ರಾಜಕೀಯ ಪಕ್ಷಗಳನ್ನೊಳಗೊಂಡ ಒಳಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿ ನೀಡಿರುವ ಬಂದ್ ಕರೆ ಹಿನ್ನೆಲೆ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ.ಇದನ್ನೂ ಓದಿ: ಬ್ರಾಹ್ಮಣ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು: ದಿನೇಶ್ ಗುಂಡೂರಾವ್

    ನಗರದಲ್ಲಿ ಅಂಗಡಿ ಮುಗ್ಗಟ್ಟು, ತರಕಾರಿ ಮಾರುಕಟ್ಟೆ, ಹೋಟೆಲ್, ಪೆಟ್ರೋಲ್ ಬಂಕ್ ಸಂಪೂರ್ಣ ಬಂದ್ ಆಗಿವೆ. ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿ ಜಾರಿಗೆ ತರಲು ಪರಮಾಧಿಕಾರ ನೀಡಿದ್ದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ ಮೀಸಲಾತಿ ಜಾರಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕಾರಣದಿಂದಾಗಿ ಬಂದ್ ಮಾಡಲಾಗಿದೆ. ಬೆಳಿಗ್ಗೆಯಿಂದ ಜಿಲ್ಲೆ ಹಾಗೂ ಹೊರಜಿಲ್ಲೆಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಬಂದ್ ಹಿನ್ನೆಲೆ ರಾಯಚೂರು ನಗರ ಬಹುತೇಕ ಸ್ತಬ್ದವಾಗಿದೆ.

    ಕಳೆದ ಕೆಲ ದಶಕಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸಿದ್ದೇವೆ. ಸುಪ್ರೀಂಕೋರ್ಟ್ (Supreme Court) ನೀಡಿರುವ ಪರಮಾಧಿಕಾರವನ್ನು ಸಿಎಂ ಸಿದ್ದರಾಮಯ್ಯ ಸದ್ಬಳಕೆ ಮಾಡಿ ಹಿಂದುಳಿದವರಿಗೆ ಅನುಕೂಲ ಮಾಡಬೇಕು. ಈ ಹಿಂದೆ ಸಿದ್ದರಾಮಯ್ಯನವರೇ ಕೊಟ್ಟ ಮಾತನ್ನು ಅವರು ಉಳಿಸಿಕೊಳ್ಳಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಕೆಂದ್ರದಿಂದ ತರೋದನ್ನು ರಾಜ್ಯಕ್ಕೆ ತನ್ನಿ, ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ – ಹೆಚ್‌ಡಿಕೆ ವಿರುದ್ಧವೇ ಜಿಟಿಡಿ ಕಿಡಿ

  • ಯಾದಗಿರಿ | ವಿಷಕಾರಿ ನೀರು ಸೇವಿಸುತ್ತಿರುವ ತಾಂಡಾ ಗ್ರಾಮಸ್ಥರು – ಇಲ್ಲಿನ ಜನಕ್ಕಿಲ್ಲ ಶುದ್ಧ ಕುಡಿಯುವ ನೀರು

    ಯಾದಗಿರಿ | ವಿಷಕಾರಿ ನೀರು ಸೇವಿಸುತ್ತಿರುವ ತಾಂಡಾ ಗ್ರಾಮಸ್ಥರು – ಇಲ್ಲಿನ ಜನಕ್ಕಿಲ್ಲ ಶುದ್ಧ ಕುಡಿಯುವ ನೀರು

    – ಗ್ರಾಮಸ್ಥರು ಒತ್ತಾಯಿಸಿದರೂ ಸರ್ಕಾರದ ನಿರ್ಲಕ್ಷ್ಯ

    ಯಾದಗಿರಿ: ಇಲ್ಲಿಯ ಜನರು ಜೀವಕ್ಕೆ ಕಂಟಕವಾಗುವ ವಿಷಕಾರಿ ನೀರು ಸೇವಿಸುತ್ತಿದ್ದಾರೆ. ಜನರಿಗೆ ಶುದ್ಧ ನೀರನ್ನು ಪೂರೈಕೆ ಮಾಡಬೇಕಿರುವ ಸರ್ಕಾರವೇ ಯೋಗ್ಯವಲ್ಲದ ಅಪಾಯಕಾರಿ ನೀರು ಪೂರೈಕೆ ಮಾಡುತ್ತಿದೆ. ಕೇವಲ ಕಲುಷಿತ ನೀರಲ್ಲ ಆರ್ಸೆನಿಕ್ (Arsenic) ಹಾಗೂ ಫ್ಲೋರೈಡ್‌ (Fluoride) ಮಿಶ್ರಿತ ನೀರನ್ನು ಸೇವಿಸುತ್ತಿದ್ದಾರೆ. ಈ ದೃಶ್ಯ ಕಂಡು ಬಂದಿರುವುದು ಜಿಲ್ಲೆಯ ಸುರುಪುರ (Surupura) ತಾಲೂಕಿನ ಕೀರದಳ್ಳಿ ತಾಂಡಾ ಗ್ರಾಮದಲ್ಲಿ.

    ಕಳೆದ ಮೂರು ತಿಂಗಳಿನಿಂದ ವಿಷಕಾರಿ ನೀರನ್ನು ಸೇವಿಸುತ್ತಿದ್ದು, 12 ವರ್ಷಗಳ ಹಿಂದೆ ಆರ್ಸೆನಿಕ್ ಮುಕ್ತ ಮಾಡಲು ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಳವಡಿಕೆ ಮಾಡಿತ್ತು. ಆದರೆ, ಶುದ್ಧ ಕುಡಿಯುವ ನೀರಿನ ಘಟಕ ಈಗ ಬಂದ್ ಆಗಿದೆ. ಜನರ ಆರೋಗ್ಯ ಕಾಪಾಡಬೇಕಾದ ನೀರು ಇದೀಗ ತಾಂಡಾದ ಜನರು ಅನಾರೋಗ್ಯಕ್ಕೆ ತುತ್ತಾಗುವಂತೆ ಮಾಡಿದೆ. ಇದರಿಂದಾಗಿ ತಾಂಡಾದ ಜನರು ಬೋರ್‌ವೆಲ್‌ನೀರು ಸೇವಿಸುವಂತಾಗಿದೆ.ಇದನ್ನೂ ಓದಿ: ಪೇಜರ್‌ ಸ್ಫೋಟ ಬೆನ್ನಲ್ಲೇ ಚೀನಿ ಸಿಸಿಟಿವಿ ಬಳಕೆ ನಿಯಂತ್ರಿಸಲು ಮುಂದಾದ ಕೇಂದ್ರ

    ತಾಲೂಕಿನ 19 ಗ್ರಾಮಗಳು ಆರ್ಸೆನಿಕ್ ಪೀಡಿತ ಗ್ರಾಮಗಳಾಗಿವೆ. ಇದನ್ನು ನಿವಾರಿಸಲು ಈ ಹಿಂದಿನ ಸರ್ಕಾರ ಅರ್ಸೆನಿಕ್ ಅಂಶವಿರುವ ನೀರು ಪೂರೈಕೆ ಮಾಡುವುದನ್ನು ಸ್ಥಗಿತ ಮಾಡಿತ್ತು. 12 ವರ್ಷಗಳ ಹಿಂದೆ ಜನರ ಆರೋಗ್ಯ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ ಮಾಡಿತ್ತು. ಇದರಿಂದ ಜನರ ಆರೋಗ್ಯ ಕಾಪಾಡಲು ಅನುಕೂಲವಾಗಿತ್ತು. ಆದರೆ, ಈಗ ತಾಂಡಾದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿ ಬಂದ್ ಆಗಿದೆ.

    ಗ್ರಾಮಕ್ಕೆ ಈಗ ಬೋರ್‌ವೆಲ್‌ನಿಂದ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಕುಡಿಯಲು ಯೋಗ್ಯವಿಲ್ಲವಂತೆ. ಅನಿವಾರ್ಯವಾಗಿ ತಾಂಡಾದ ಜನರು ವಿಷಕಾರಿ ನೀರು ಸೇವಿಸುತ್ತಿದ್ದಾರೆ. ಇದರಿಂದ ಅನಾರೋಗ್ಯಕ್ಕೆ ತುತ್ತಾಗುವ ಆತಂಕ ಎದುರಿಸುವಂತಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡುವಂತೆ ಗ್ರಾಮದ ಜನರು ಒತ್ತಾಯಿಸಿದ್ದಾರೆ. ಆದರೆ ಜನರಿಗೆ ಶುದ್ಧ ನೀರು ಪೂರೈಕೆ ಮಾಡಬೇಕಾದ ಪಂಚಾಯಿತಿ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.

    ರಾಜ್ಯ ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ ಮಾಡಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡುತ್ತದೆ. ಆದರೆ, ಈ ತಾಂಡಾದಲ್ಲಿ ಮಾತ್ರ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ ಮಾಡಿ ಕೈತೊಳೆದುಕೊಂಡಿದೆ. ಈಗಲಾದರೂ, ಸರ್ಕಾರ ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿ ಜನರಿಗೆ ಶುದ್ಧ ಜೀವಜಲ ಪೂರೈಕೆ ಮಾಡಬೇಕಿದೆ.ಇದನ್ನೂ ಓದಿ: ಕೋಲಾರ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾರಾಮಾರಿ- ಪರಸ್ಪರ ಕೈ ಮಿಲಾಯಿಸಿದ ಮುಖಂಡರು

  • ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಸರ್ಕಾರ ಬ್ರೇಕ್

    ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಸರ್ಕಾರ ಬ್ರೇಕ್

    ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಾಲಾ-ಕಾಲೇಜುಗಳಲ್ಲಿ (Residential School and Colleges) ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡದಂತೆ ಆದೇಶ ಹೊರಡಿಸಲಾಗಿದೆ.

    ಸರ್ಕಾರದ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನ ಇನ್ನು ಮುಂದೆ ವಸತಿ ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡದಂತೆ ಸುತ್ತೋಲೆ ಹೊರಡಿಸಿದೆ.

    ಯುಗಾದಿ, ರಂಜಾನ್, ಕ್ರಿಸ್ಮಸ್, ಸಂಕ್ರಾಂತಿ, ಈದ್ ಮಿಲಾದ್ ಸೇರಿ ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು. ಕೇವಲ ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಮತ್ತು ಆಯ್ದ ಮಹಾ ಪುರುಷರು ಜಯಂತಿ ಸೇರಿ 10 ಆಚರಣೆಗಳನ್ನ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಭರತ್ ಶೆಟ್ಟಿ ವಿರುದ್ಧ ಕೇಸ್ – ಇನ್ಸ್‌ಪೆಕ್ಟರ್‌ ಫೋನ್‌ಕಾಲ್ ಡಿಟೇಲ್ಸ್ ಚೆಕ್ ಮಾಡಿ: ಸದನದಲ್ಲಿ ಅಶೋಕ್ ಆಗ್ರಹ

    ಆದೇಶದ ಪ್ರಕಾರ, ಗಣರಾಜ್ಯೋತ್ಸವ ಸ್ವಾತಂತ್ರ್ಯ ದಿನಾಚರಣೆ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ, ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸರ ಜಯಂತಿ, ಬಸವ ಜಯಂತಿ, ಸಂವಿಧಾನ ದಿನಾಚರಣೆ ಹಾಗೂ ಯೋಗ ದಿನಾಚರಣೆ ಮಾತ್ರ ಆಚರಣೆ ಮಾಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಒಂದು ವೇಳೆ ನಿಯಮ ಮೀರಿ ಧಾರ್ಮಿಕ ಹಬ್ಬಗಳು‌ ಆಚರಣೆ ಮಾಡಿದರೆ ಶಾಲಾ-ಕಾಲೇಜುಗಳ ಮುಖ್ಯಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳೋದಾಗಿ ಆದೇಶದಲ್ಲಿ ತಿಳಿಸಲಾಗಿದೆ.