Tag: Government College

  • ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

    ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

    ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ (Guest Lecturers) ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ (Idugantu Facility) ನೀಡುವುದಾಗಿ ಸರ್ಕಾರ ಆದೇಶಿಸಿದೆ.

    ಇಡುಗಂಟು ಯೋಜನೆಯು 2024ರ ಜನವರಿ 1 ರಿಂದಲೇ ಜಾರಿಗೆ ಬರಲಿದ್ದು, ಕನಿಷ್ಠ 1 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಯೋಜನೆ ಅನ್ವಯವಾಗಲಿದೆ. ಇದನ್ನೂ ಓದಿ: ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

    ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ 5 ವರ್ಷಗಳಲ್ಲಿ ಕನಿಷ್ಠ 1 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರೂ ಈ ಯೋಜನೆಗೆ ಒಳಪಡಲಿದ್ದಾರೆ. ಈ ಯೋಜನೆಗೆ ಒಟ್ಟಾರೆ 44.15 ಕೋಟಿ ರೂ. ಹಣವನ್ನು ಸರ್ಕಾರ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗರ್ಭಿಣಿಯರೂ ಸೇರಿ 4 ಮಂದಿಗೆ ಕೊರೊನಾ

    ಇದೀಗ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಅತಿಥಿ ಉಪನ್ಯಾಸಕರಿಗೆ ಇಡುಗಂಟು ಸೌಲಭ್ಯ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ.

  • ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿ ಭಾವಚಿತ್ರ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ

    ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿ ಭಾವಚಿತ್ರ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ

    ಚಾಮರಾಜನಗರ: ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಮುದ್ರಿಸುವ ಮೂಲಕ ಚಾಮರಾಜನಗರ (Chamarajanagara) ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

    ಇತ್ತೀಚಿಗೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ತಾಲೂಕು ಮಟ್ಟದ ಪ.ಪೂ. ಕಾಲೇಜುಗಳ ಕ್ರೀಡಾಕೂಟದಲ್ಲಿ ಈ ಘಟನೆ ನಡೆದಿದೆ. ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಹನೂರಿನ ಕ್ರಿಸ್ತರಾಜ ಪ.ಪೂ. ಕಾಲೇಜು ಹಾಗೂ ಮಾರ್ಟಳ್ಳಿಯ ಸೇಂಟ್ ಮೇರಿಸ್, ಪ.ಪೂ. ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿತ್ತು. ಪ್ರಶಸ್ತಿ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಮುದ್ರಣ ಮಾಡಲಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ಹಗರಣ – ನಾಗೇಂದ್ರ ಆಪ್ತರ ಮನೆ ಮೇಲೆ ED ದಾಳಿ

    ಗಣೇಶ, ಸರಸ್ವತಿ ಪೂಜೆ ಮಾಡಿದರೆ ಕೋಮುವಾದ ಅನ್ನುವವರಿಗೆ ಇದು ಕಾಣಿಸುವುದಿಲ್ಲವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಬೈರತಿ ಸುರೇಶ್ ಪುತ್ರನೊಂದಿಗೆ ಎಸ್ ವಿಶ್ವನಾಥ್ ಪುತ್ರಿ ನಿಶ್ಚಿತಾರ್ಥ -ಊಟದಲ್ಲಿ ಜೊತೆಯಾದ ಡಿಕೆಶಿ, ಗೆಹ್ಲೋಟ್

  • ಸರ್ಕಾರಿ ಕಾಲೇಜಿಗೆ ಉಚಿತವಾಗಿ 30 ಕಂಪ್ಯೂಟರ್ ವಿತರಿಸಿದ ರೋಟರಿ ಕ್ಲಬ್

    ಸರ್ಕಾರಿ ಕಾಲೇಜಿಗೆ ಉಚಿತವಾಗಿ 30 ಕಂಪ್ಯೂಟರ್ ವಿತರಿಸಿದ ರೋಟರಿ ಕ್ಲಬ್

    ಬೀದರ್: ಕಾಂಗ್ನಿಜೆಂಟ್ ತಂತ್ರಜ್ಞಾನವು ಉಚಿತವಾಗಿ ನೀಡಿರುವ 30 ಕಂಪ್ಯೂಟರ್‌ಗಳನ್ನು ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವಿತರಿಸಿತು.

    ಕಾಲೇಜಿನ ಗಣಿತಶಾಸ್ತ್ರ ಪ್ರಯೋಗಾಲಯ ಹಾಗೂ ಗಣಕ ವಿಜ್ಞಾನ ಪ್ರಯೋಗಾಲಯದಲ್ಲಿ ಅಳವಡಿಸಿದ ಕಂಪ್ಯೂಟರ್‍ಗಳ ಸೇವೆಗೆ ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಗರ್ವನರ್ ತಿರುಪತಿ ನಾಯ್ಡು ಚಾಲನೆ ನೀಡಿದರು. ಕಾಂಗ್ನಿಜೆಂಟ್ ತಂತ್ರಜ್ಞಾನ ಸಂಸ್ಥೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಉಚಿತವಾಗಿ ಕಂಪ್ಯೂಟರ್‌ಗಳನ್ನು ಕೊಟ್ಟಿದೆ. ಸರ್ಕಾರ ಕಂಪ್ಯೂಟರ್‌ಗಳ ಸಾಗಣೆ ಹಾಗೂ ಅನುಷ್ಠಾನದ ಹೊಣೆಯನ್ನು ರೋಟರಿ ಸಂಸ್ಥೆಗೆ ವಹಿಸಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಎಸಿಬಿ ಅಧಿಕಾರಿಗಳ ಭರ್ಜರಿ ರಣಬೇಟೆ – 503 ಅಧಿಕಾರಿಗಳು 68 ಕಡೆ ದಾಳಿ..! 

    ಉಚಿತ ಕಂಪ್ಯೂಟರ್ ವಿತರಣೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ರೋಟರಿ ಸಂಸ್ಥೆಯು ಸಾಮಾಜಿಕ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಂಡಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದೆ. ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದರು.

    ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಸಹಾಯಕ ಗವರ್ನರ್ ಶಿವಕುಮಾರ್ ಯಲಾಲ್ ಮಾತನಾಡಿ, ಬೀದರ್‌ನಲ್ಲಿ ಇನ್ನಷ್ಟು ರೋಟರಿ ಕ್ಲಬ್‍ಗಳನ್ನು ರಚಿಸುವ ಉದ್ದೇಶ ಇದೆ. ಹೊಸ ತಾಲೂಕು ಚಿಟಗುಪ್ಪದಲ್ಲೂ ಕ್ಲಬ್ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ತಾನು ನೆಟ್ಟ ಗಿಡದಲ್ಲಿ ಹಣ್ಣು ಕೀಳಲು ಮುಂದಾದ ಅತ್ತೆಯತ್ತ ಚಾಕು ಬಿಸಿದ ಸೋಸೆ

  • ಒಂದು ತಿಂಗ್ಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ

    ಒಂದು ತಿಂಗ್ಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ

    ಮಂಡ್ಯ: ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

    ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ಮತ್ತು ಇತಿಹಾಸ ಉಪನ್ಯಾಸಕ ಸುರೇಶ್ (29) ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ. ಮೇ 11ರಂದು ಕೋಕಿಲ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೂ ಜೂನ್ 4 ರಂದು ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿದ್ದಾರೆ.

    ಸರ್ಕಾರಿ ಕೆಲಸ ಸಿಕ್ಕಿಲ್ಲ ಜೊತೆಗೆ ಲಾಕ್‍ಡೌನ್‍ನಿಂದ ಎದುರಾದ ಆರ್ಥಿಕ ಸಂಕಷ್ಟದಿಂದ ಇಬ್ಬರು ಉಪನ್ಯಾಸಕರು ಖಿನ್ನತೆಗೆ ಒಳಗಾಗಿದ್ದರು. ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ.

    ಈ ಘಟನೆ ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಸರ್ಕಾರಿ ಪ್ರಾಧ್ಯಾಪಕರಿಗೆ ಗುಡ್ ನ್ಯೂಸ್

    ಸರ್ಕಾರಿ ಪ್ರಾಧ್ಯಾಪಕರಿಗೆ ಗುಡ್ ನ್ಯೂಸ್

    ಬೆಂಗಳೂರು: ರಾಜ್ಯದ ವಿಶ್ವ ವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಯುಜಿಸಿ ವೇತನ ಪಡೆಯುತ್ತಿರುವ ಸರ್ಕಾರಿ ಪ್ರಾಧ್ಯಾಪಕರುಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಮಾನದಂಡದಡಿ ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

    ವಿಧಾನಸಭೆಯಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವಿಧೇಯಕ ಮಂಡಿಸಿದ್ದಾರೆ. ವಿವಿಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಧ್ಯಾಪಕರು ಯುಜಿಸಿ ವೇತನ ಪಡೆಯುತ್ತಿದ್ದು, ಅದೇ ಮಾದರಿಯಲ್ಲಿ ಪಿಂಚಣಿಯನ್ನೂ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಿಂಚಣಿ ಸೌಲಭ್ಯ ಕಲ್ಪಿಸಲು ಸರ್ಕಾರ ವಿಧೇಯಕ ಮಂಡಿಸಿದೆ.

    ಅಂದಹಾಗೆ ಪಿಂಚಣಿ ವ್ಯವಸ್ಥೆಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡುವುದರಿಂದ ರಾಜ್ಯ ಸರ್ಕಾರ ತನ್ನ ನೌಕರರಿಗೆ ನೀಡುವ ಪಿಂಚಣಿ ಮಾದರಿಯಲ್ಲಿಯೇ ಯುಜಿಸಿ ವೇತನ ಪಡೆಯುತ್ತಿರುವ ಪ್ರಾಧ್ಯಾಪಕರಿಗೂ ಅನ್ವಯವಾಗುವಂತೆ ಸೂಕ್ತ ಕಾನೂನು ರೂಪಿಸಲು ವಿಧೇಯಕ ಮಂಡಿಸಿದೆ. ಇದೇ ಬಜೆಟ್ ಅಧಿವೇಶನದಲ್ಲಿ ವಿಧೇಯಕ ಬಹುತೇಕ ಅಂಗೀಕಾರವಾಗುವ ಸಾಧ್ಯತೆ ಇದೆ. ವಿಧೇಯಕ ಅಂಗೀಕಾರವಾದ್ರೆ ಯುಜಿಸಿ ವೇತನ ಪಡೆಯುತ್ತಿರುವ ಪ್ರಾಧ್ಯಾಪಕರು ಪಿಂಚಣಿ ಪಡೆಯುತ್ತಾರೆ.

  • ಅಂದು ಮಕ್ಕಳಿಲ್ಲದೇ ಮುಚ್ಚಿದ್ದ ಸರ್ಕಾರಿ ಕಾಲೇಜು ಇಂದು ರಾಜ್ಯಕ್ಕೆ ಮಾದರಿ

    ಅಂದು ಮಕ್ಕಳಿಲ್ಲದೇ ಮುಚ್ಚಿದ್ದ ಸರ್ಕಾರಿ ಕಾಲೇಜು ಇಂದು ರಾಜ್ಯಕ್ಕೆ ಮಾದರಿ

    ಕಾರವಾರ: ಇಂದಿನ ದಿನಗಳಲ್ಲಿ ಪೋಷಕರು ಖಾಸಗಿ ಕಾಲೇಜಿಗೆ ಲಕ್ಷ ಲಕ್ಷ ಡೊನೇಷನ್ ನೀಡಿ ತಮ್ಮ ಮಕ್ಕಳನ್ನು ಸೇರಿಸುವ ಮೂಲಕ ಅವರ ಉಜ್ವಲ ಭವಿಷ್ಯದ ಕನಸು ಕಾಣುತ್ತಾರೆ. ಆದರೆ ಕೆಲ ಖಾಸಗಿ ಸಂಸ್ಥೆಗಳು ಹಣ ಮಾಡುವ ಉದ್ಯಮವಾದರೆ ಸರ್ಕಾರಿ ಕಾಲೇಜುಗಳು ಸಂಬಳ ಪಡೆಯುವ ಸಂಸ್ಥೆಯಾಗಿ ಮಾತ್ರ ನಿಂತಿದೆ. ಇಂತಹ ದಿನಗಳಲ್ಲಿ ಶಿರಸಿಯ ವೆಂಕಟರಾವ್ ನಿಲೇಕಣಿ ಸರ್ಕಾರಿ ಪದವಿಪೂರ್ವ ಕಾಲೇಜು ವಿಶೇಷ ಮುತುವರ್ಜಿಯಿಂದ ಖಾಸಗಿ ಕಾಲೇಜಗಳನ್ನು ಹಿಂದಿಕ್ಕಿದೆ.

    ಈ ಹಿಂದೆ ವಿದ್ಯಾರ್ಥಿಗಳಿಲ್ಲದೇ ಚಿಕ್ಕಮಗಳೂರಿನ ಕುದುರೆಮುಖದಲ್ಲಿದ್ದ ಈ ಕಾಲೇಜು ಶಿರಸಿಯ ನೀಲಕಣಿಗೆ ಸ್ಥಳಾಂತರಿಸಲಾಯಿತು. ಇನ್ಫೋಸಿಸ್‍ನ ನಂದನ್ ನೀಲಕಣಿಯವರ ಕುಟುಂಬ ಎರಡು ಎಕರೆ ಜಮೀನನ್ನು ದಾನವಾಗಿ ನೀಡಿತು. ಇದರಿಂದ ಅತ್ಯಲ್ಪ ಕಡಿಮೆ ವಿದ್ಯಾರ್ಥಿಗಳಿಂದ ಒಂಬತ್ತು ವರ್ಷಗಳ ಹಿಂದೆ ಪ್ರಾರಂಭವಾಗಿ ಇಂದು 500 ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

    ಕಾಲೇಜಿನ ವಿಶೇಷತೆ: ಈ ಕಾಲೇಜಿನಲ್ಲಿ 500 ವಿದ್ಯಾರ್ಥಿಗಳು ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬಹುತೇಕರು ಬಡ ಹಾಗೂ ದಲಿತ, ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಸರ್ಕಾರಿ ಕಾಲೇಜ್ ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಿ ರಾತ್ರಿ 8ರವರೆಗೆ ತೆರೆದಿರುತ್ತದೆ. ಕಾಲೇಜಿನ ಸಮಯ ಮುಗಿದರೂ ವಿದ್ಯಾರ್ಥಿಗಳ ಭವಿಷ್ಯ ಮುಂದಿಟ್ಟುಕೊಂಡು ಇಲ್ಲಿನ ಸಿಬ್ಬಂದಿಒ ವಿಶೇಷ ಮುತುವರ್ಜಿ ವಹಿಸಿ ರಾತ್ರಿ ಕೂಡ ಪಾಠ ಮಾಡುತ್ತಾರೆ.

    ರಾತ್ರಿ ಸಹ ಪಾಠ ಕೇಳುವುದರಿಂದ ಸಿಬ್ಬಂದಿಯೇ ಖರ್ಚು ಮಾಡಿ ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ದೂರದ ಹಳ್ಳಿಗಳಿಗೆ ತೆರಳಲು ತಡವಾದ್ರೆ ವಸತಿ ವ್ಯವಸ್ಥೆಯನ್ನು ಸಹ ಕಾಲೇಜು ಸಿಬ್ಬಂದಿ ಕಲ್ಪಿಸಿದ್ದಾರೆ. ಪಿಯು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಸ್ಮಾರ್ಟ್ ಕ್ಲಾಸ್, ವೃತ್ತಿ ಕೌಶಲ್ಯ ತರಬೇತಿ, ಸ್ಪರ್ಧಾತ್ಮಕ ಪರೀಕ್ಷೆಗಾಗಿ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರತಿ ವರ್ಷ ಈ ಕಾಲೇಜು ಶೇಕಡ 80 ರಿಂದ 90 ಫಲಿತಾಂಶ ಬರುವ ಮೂಲಕ ರಾಜ್ಯದ ಗಮನ ಸೆಳೆದಿದೆ.

    ನಾಗರಾಜ್ ಗಾವಂಕ್ಕರ್ ಈ ಕಾಲೇಜಿನ ಪ್ರಾಚಾರ್ಯರಾಗಿದ್ದು, ಖಾಯಂ-ಅರೆಕಾಲಿಕ ಸೇರಿದಂತೆ 19 ಉಪನ್ಯಾಸಕರು ಪಾಠ ಮಾಡುತ್ತಾರೆ. ಈ ಕಾಲೇಜಿನ ಗುಣಮಟ್ಟದ ಶಿಕ್ಷಣ ನೋಡಿ ಜಿಲ್ಲೆಯ ಹೊರಗಿನ ವಿದ್ಯಾರ್ಥಿಗಳು ಸಹ ಇಲ್ಲಿ ಕಲಿಯುತ್ತಿದ್ದಾರೆ. ಈ ಕಾಲೇಜಿಗೆ ಮಕ್ಕಳನ್ನು ಸೇರಿಸಲು ಪೋಷಕರು ಸಹ ಮುಗಿಬೀಳುತಿದ್ದು ಯಾವ ಖಾಸಗಿ ಕಾಲೇಜಿಗೂ ಕಡಿಮೆ ಇಲ್ಲ ಎನ್ನುವಂತಿದೆ.

    ವಿಶೇಷ ತರಬೇತಿ: ಪಿ.ಯು ವಿಜ್ಞಾನ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆಯ ವಿಶೇಷ ತರಬೇತಿ ನೀಡಲಾಗುತ್ತದೆ. ಕೌಶಲ್ಯ, ವೃತ್ತಿಪರ ತರಬೇತಿಗಳು ಉಚಿತವಾಗಿ ನೀಡುತ್ತಿದ್ದು ಇದಕ್ಕೆ ತಗಲುವ ಎಲ್ಲಾ ಖರ್ಚನ್ನು ಸಿಬ್ಬಂದಿ ನೋಡಿಕೊಳ್ಳುವ ಮೂಲಕ ಪೋಷಕರಿಗೆ ಯಾವುದೇ ಪ್ರತ್ಯೇಕ ಶುಲ್ಕ ಬಾರದಂತೆ ನೋಡಿಕೊಳ್ಳುತ್ತಾರೆ.

    ಸಮಯ ಮೀಸಲಿಟ್ಟ ಸಿಬ್ಬಂದಿ: ಸರ್ಕಾರಿ ಕಾಲೇಜು ಅಂದರೆ ದಿನದ ಕೊನೆಯ ಬೆಲ್ ಹೊಡೆದರೆ ಸಾಕು ಶಿಕ್ಷಕರು ಮನೆಗೆ ಹೋಗಿಬಿಡುತ್ತಾರೆ. ಆದರೆ ಇಲ್ಲಿ ಶಿಕ್ಷಕರು ಮನೆಗೆ ಹೋಗುವುದಿಲ್ಲ. ಮಕ್ಕಳೊಂದಿಗೆ ಇದ್ದು ಅವರಿಗೆ ಕಷ್ಟವಾದ ಪಾಠವನ್ನು ಮತ್ತೆ ಹೇಳಿಕೊಡುತ್ತಾರೆ. ಯಾವ ಮಕ್ಕಳೂ ಶಿಕ್ಷಣದಲ್ಲಿ ಹಿಂದೆ ಬೀಳಬಾರದು ಎಂಬ ಕಾರಣಕ್ಕೆ ದೃಶ್ಯದ ಮೂಲಕವೂ ಸ್ಮಾರ್ಟ್ ಕ್ಲಾಸ್ ನಡೆಸುತ್ತಾರೆ.ಪ್ರತಿ ದಿನ ಇಲ್ಲಿನ ಉಪನ್ಯಾಸಕರು ಮನೆಯ ಮುಖ ನೋಡುವುದು ರಾತ್ರಿ ಹತ್ತರ ನಂತರ, ಅಲ್ಲಿಯವರೆಗೂ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ಇರುತ್ತಾರೆ.

    ನಮ್ಮ ಕಾಲೇಜಿನಲ್ಲಿ ಕಲಿಯುವ ಬಹುತೇಕ ಮಕ್ಕಳು ಬಡವರಾಗಿದ್ದಾರೆ. ಪಿಯು ಶಿಕ್ಷಣ ಇವರ ಮುಂದಿನ ಭವಿಷ್ಯಕ್ಕೆ ಅತೀ ಮುಖ್ಯ. ಹೀಗಾಗಿ ಮುತವರ್ಜಿವಹಿಸಿ ಮಕ್ಕಳಿಗೆ ಕಾಲೇಜಿನ ಸಮಯದ ನಂತರವೂ ಅವರಿಗೆ ಶಿಕ್ಷಣ ನೀಡುತಿದ್ದೇವೆ. ಇಲ್ಲಿ ಕಲಿತ ಮಕ್ಕಳು ವೈದ್ಯಕೀಯ, ಇಂಜಿನಿಯರಿಂಗ್ ನಂತಹ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಸ್ಥಾನಕ್ಕೆ ಹೋಗಿದ್ದಾರೆ. ನಮ್ಮ ಶ್ರಮಕ್ಕೆ ಇಲ್ಲಿನ ಮಕ್ಕಳು ಪ್ರತಿಫಲವಾಗಿ ಉತ್ತಮ ಫಲಿತಾಂಶ ಕೊಡುತ್ತಿದ್ದಾರೆ. ಈ ಬಾರಿ 100% ಫಲಿತಾಂಶವನ್ನು ತರುವ ಗುರಿ ನಮ್ಮದು ಎಂದು ಪ್ರಾಚಾರ್ಯ ನಾಗರಾಜ್ ಗಾಂವ್ಕರ್ ಹೇಳುತ್ತಾರೆ.

    ಇನ್ನು ತಾವು ಬಡವರಾಗಿದ್ದೇವೆ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿ ಇಂಜಿನಿಯರಿಂಗ್ ಮಾಡಬೇಕು ಎನ್ನುವ ಆಸೆಯಿದೆ. ಮನೆಯ ಬಡತನ ಹೊರಗೆ ಟ್ಯೂಷನ್ ಕೊಡಿಸಲು ಸಾಧ್ಯವಿಲ್ಲ. ಆದ್ರೆ ಇಲ್ಲಿ ಉಚಿತವಾಗಿ ವಸತಿ ಕೊಟ್ಟು ನಮಗೆ ತರಬೇತಿ ನೀಡುತತ್ತಿದ್ದಾರೆ. ಇದರಿಂದ ತಮಗೆ ಅನುಕೂಲವಾಗಿದೆ ಎಂದು ದ್ವಿತೀಯ ಪಿಯು ವಿದ್ಯಾರ್ಥಿನಿ ಐಶ್ವರ್ಯ ಹೇಳುತ್ತಾಳೆ.

    ಸರ್ಕಾರಿ ಕಾಲೇಜು ಆಗಿದ್ದರೂ ತಮ್ಮ ವಿಶೇಷ ಕಾಳಜಿ ಮತ್ತು ಹಣ ಖರ್ಚು ಮಾಡಿ ಇಲ್ಲಿನ ಮಕ್ಕಳ ಮುಂದಿನ ಉಜ್ವಲ ಭವಿಷ್ಯ ಕಟ್ಟಲು ಇಲ್ಲಿನ ಉಪನ್ಯಾಸಕರು ಮುಂದಾಗಿರುವುದು ನಿಜವಾಗಿಯೂ ಶ್ಲಾಘನೀಯವಾಗಿದ್ದು ರಾಜ್ಯಕ್ಕೆ ಮಾದರಿಯಾಗಿದೆ.

  • ಸೈಕಲ್ ಸ್ಟ್ಯಾಂಡ್‍ನಲ್ಲಿ ಪದವಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

    ಸೈಕಲ್ ಸ್ಟ್ಯಾಂಡ್‍ನಲ್ಲಿ ಪದವಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

    ದಾವಣಗೆರೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ಕೊಠಡಿಗಳ ಸಂಖ್ಯೆ ಕಡಿಮೆ ಇದ್ದ ಕಾರಣ ಹೊರಗಡೆ ಸೈಕಲ್ ಸ್ಟ್ಯಾಂಡ್‍ನಲ್ಲಿ ಕುಳಿತು ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಇಂಗ್ಲೀಷ್ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೊಠಡಿಗಳ ಸಂಖ್ಯೆ ಕಡಿಮೆಯಾಗಿದೆ. ಆದರಿಂದ ಕಾಲೇಜ್ ಆವರಣದಲ್ಲಿದ್ದ ಸೈಕಲ್ ಸ್ಟ್ಯಾಂಡ್ ಹಾಗೂ ಗೋದಾಮ್‍ನಲ್ಲಿ ಕುಳಿತು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೊಠಡಿಗಳ ಕೊರತೆಯಿಂದ ಕಾಲೇಜ್ ಉಪನ್ಯಾಸಕರು ಬಾಡಿಗೆ ನೀಡಿ ಶಾಮಿಯಾನದ ಡೈನಿಂಗ್ ಟೇಬಲ್ ಬಾಡಿಗೆಗೆ ತರಲಾಗಿತ್ತು.

    ಈ ಹಿಂದೆ ದಾವಣಗೆರೆಯ ಹರಪ್ಪನಹಳ್ಳಿಯಲ್ಲಿ ಶಾಮಿಯಾನ ಹಾಗೂ ಊಟದ ಟೇಬಲ್ ಬಾಡಿಗೆಗೆ ತಂದು ಕಾಲೇಜಿನ ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿದ್ದರು. ಈಗ ಮತ್ತೆ ಅದೇ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಠಡಿಗಳ ಸಂಖ್ಯೆ ಕಡಿಮೆ ಇದ್ದುದರಿಂದ ಮತ್ತೆ ಸೈಕಲ್ ಸ್ಟಾಂಡ್‍ನಲ್ಲಿ ಕೂರಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿದ್ದಾರೆ.

    ಸರಿಯಾಗಿ ಕೂರಲು ವ್ಯವಸ್ಥೆಯಿಲ್ಲದಿದ್ದರೂ ಕಷ್ಟದ ನಡುವೆಯೇ ವಿದ್ಯಾಥಿಗಳು ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳು ಇಷ್ಟೆಲ್ಲ ಕಷ್ಟ ಪಡುತ್ತಿದ್ದರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತ್ತಿದ್ದಾರೆ.

    https://www.youtube.com/watch?v=dePLWc11H_M

  • ಕುಂದಾಪುರದ ಸರ್ಕಾರಿ ಕಾಲೇಜನ್ನು ದತ್ತು ಪಡೆದ ರಾಮಿ ಗ್ರೂಪ್!

    ಕುಂದಾಪುರದ ಸರ್ಕಾರಿ ಕಾಲೇಜನ್ನು ದತ್ತು ಪಡೆದ ರಾಮಿ ಗ್ರೂಪ್!

    ಉಡುಪಿ: ಸರ್ಕಾರಿ ಶಾಲೆಗಳು ಮುಚ್ಚುವ ವಿರುದ್ಧ ಎಲ್ಲರೂ ಮಾತನಾಡುತ್ತಾರೆ. ಸರ್ಕಾರದ ನೀತಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿರುತ್ತಾರೆ. ಮಕ್ಕಳಿಲ್ಲದೆ ಮುಚ್ಚುವ ಶಾಲೆಗಳನ್ನು ಹೇಗೆ ಉಳಿಸಬಹುದು ಎಂಬ ಬಗ್ಗೆ ಯಾರೂ ಆಲೋಚನೆ ಮಾಡೋದೇ ಇಲ್ಲ. ವಿಶ್ವದ ಅತೀ ದೊಡ್ಡ ಉದ್ಯಮ ಸಂಸ್ಥೆ ರಾಮಿ ಫೌಂಡೆಶನ್ ಕುಂದಾಪುರದಲ್ಲಿ ಕಾಲೇಜನ್ನೇ ದತ್ತು ಪಡೆದು ಸಾವಿರ ಮಕ್ಕಳಿಗೆ ವಿದ್ಯಾಭ್ಯಾಸ ಕೊಡುತ್ತಿದೆ. ಈ ಮೂಲಕ ಸರ್ಕಾರಿ ಕಾಲೇಜು ಖಾಸಗಿ ಸಂಸ್ಥೆಗಳಿಗೆ ಸಡ್ಡು ಹೊಡೆಯುತ್ತಿದೆ.

    ಖಾಸಗಿ ಕಾಲೇಜಿನಂತೆ ಕಂಡರೂ ಇದು ಸರ್ಕಾರಿ ಪದವಿ ಪೂರ್ವ ಕಾಲೇಜು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದ ಶ್ರೀ ಕಾಳಾವರ ವರದರಾಜ್ ಶೆಟ್ಟಿ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇದು. ರಾಮಿ ಗ್ರೂಪ್ಸ್ ಆಫ್ ಹೋಟೆಲ್ಸ್ ಮತ್ತು ಚಾರಿಟೇಬಲ್ ಟ್ರಸ್ಟ್ ಈ ಕಾಲೇಜನ್ನು ದತ್ತು ಪಡೆದಿದೆ. 1,050 ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಕೊಡುತ್ತಿದೆ. ರಾಮಿ ಗ್ರೂಪ್ ಆಫ್ ಹೋಟೆಲ್ಸ್- ಅಪಾರ್ಟ್ ಮೆಂಟ್ ಮತ್ತು ರೆಸಾರ್ಟ್ ಅಧ್ಯಕ್ಷ ಕಳಾವರ ವರದರಾಜ ಶೆಟ್ಟಿಯವರು ತಮ್ಮ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಆಚರಿಸಿದರು. ಪ್ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೆ 15 ಲಕ್ಷ ರೂಪಾಯಿಯ ಪ್ರೋತ್ಸಾಹ ಧನ ನೀಡಿದರು. ಈ ಮೂಲಕ ಉದ್ಯಮದಲ್ಲಿರುವವರು, ಸಿರಿವಂತರು ಸರ್ಕಾರಿ ಶಾಲೆಯನ್ನು ಉಳಿಸಲು ಸಹಾಯ ಮಾಡಬೇಕು ಎಂದು ಸಲಹೆ ನೀಡಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಮಿ ಗ್ರೂಪ್ ಅಧ್ಯಕ್ಷ ಕಾಳಾವರ ವರದರಾಜ್ ಶೆಟ್ಟಿ ಮಾತನಾಡಿ, ನಾನು 9 ನೇ ಕ್ಲಾಸಿಗೆ ವಿದ್ಯಾಭ್ಯಾಸ ಕಡಿದುಕೊಂಡು ಮುಂಬೈ ಸೇರಿದೆ. ನಾನು ವಿದ್ಯಾವಂತನಾಗಿದ್ದರೆ ಬೇರೆಯೇ ತರದಲ್ಲಿ ಬೆಳೆಯುತ್ತಿದ್ದೆ. ನನ್ನಂತೆ ಯಾರಿಗೂ ಆಗಬಾರದು ಅನ್ನೋದು ಕನಸು. ನನ್ನೆರಡು ಮಕ್ಕಳಂತೆಯೇ ಕಾಲೇಜಿನ 1,050 ಮಕ್ಕಳನ್ನು ಪ್ರೀತಿಸುತ್ತೇನೆ. ನಾನು ವಿದೇಶದಲ್ಲಿದ್ದರೂ ನನ್ನ ಊರಿಗೇನಾದರೂ ಮಾಡಬೇಕು ಅನ್ನೋದು ನನ್ನ ಆಸೆ ಅಂತ ಹೇಳಿದರು.

    ಅಂತಾರಾಷ್ಟ್ರೀಯ ಟೇಬಲ್ ಟೆನ್ನಿಸ್ ಆಟಗಾರ್ತಿ ನೈನಾ ಜೈಸ್ವಾಲ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ತನ್ನ 8 ನೇ ವಯಸ್ಸಿನಲ್ಲಿ ಎಸ್‍ಎಸ್‍ಎಲ್‍ಸಿ ಮುಗಿಸಿರುವ ನೈನಾ ಜೈಸ್ವಾಲ್, ಜರ್ನಲಿಸಂ ಡಿಗ್ರೀ, 15ನೇ ವಯಸ್ಸಿಗೆ ಪಿಜಿ ಮುಗಿಸಿರುವ ಏಷ್ಯಾದ ಏಕೈಕ ಸಾಧಕಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ನೈನಾ ಸಾವಿರಾರು ವಿದ್ಯಾರ್ಥಿಗಳಿಗೆ ತನ್ನ ಸಾಧನೆ ಬಗ್ಗೆ ಕಿವಿಮಾತುಗಳನ್ನು ಹೇಳಿದರು. ಅತೀ ಚಿಕ್ಕ ವಯಸ್ಸಿನಲ್ಲಿ ಪದವಿ ಮುಗಿಸಿದ ನೈನಾ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ- ಪೋಷಕರು ಶಿಕ್ಷಕರ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಮಾಹಿತಿಗಳನ್ನು ನೀಡಿದರು. ಜೀವನದಲ್ಲಿ ಮತ್ತು ಪಠ್ಯದಲ್ಲಿ ಅಳವಡಿಸಬೇಕು, ರಾಮಾಯಣ-ಪುರಾಣಗಳನ್ನು ಮೈಗೂಡಿಸಬೇಕು ಎಂದು ಹೇಳಿದರು.

    ಕುಂದಾಪುರದ ಕೋಟೇಶ್ವರದ ಸರ್ಕಾರಿ ಪಿಯು ಕಾಲೇಜಿಗೆ ಕಳೆದ 10 ವರ್ಷಗಳಿಂದ ವರದರಾಜ್ ಶೆಟ್ಟಿ ಕೋಟ್ಯಾಂತರ ರೂಪಾಯಿ ಸಹಾಯಧನ ನೀಡಿದ್ದಾರೆ. ಈ ಸಂದರ್ಭ ವರದರಾಜ್ ಶೆಟ್ಟಿ ಸೇರಿದಂತೆ ಸಾಧಕರನ್ನು ಸನ್ಮಾನಿಸಲಾಯಿತು. ವರದರಾಜ್ ಶೆಟ್ಟಿ ಮಕ್ಕಳಾದ ರಾಮಿ ಮತ್ತು ರಜತ್ ಸಹಾಯಧನಗಳನ್ನು ವಿತರಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಒಟ್ಟಿನಲ್ಲಿ ವಿದೇಶದಲ್ಲಿ ಸಾವಿರಾರು ಕೋಟಿಯ ಉದ್ಯಮ ಇದ್ದರೂ ಕಾಳಾವರ ವರದರಾಜ್ ಶೆಟ್ಟಿ ತಾನು ಹುಟ್ಟಿದ ಊರಿಗೆ ಕೊಡುಗೆ ಕೊಡುವುದನ್ನು ಮರೆತಿಲ್ಲ. ಎಲ್ಲರಿಗೂ ಆದರ್ಶಮಯ ಕೆಸಲ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಾಸನದ ಕಾಲೇಜಿನಲ್ಲಿಯೂ ಸಿಗುತ್ತೆ ಬಿಸಿಯೂಟ – ಎಲ್ಲರಿಗೂ ಮಾದರಿಯಾದ ಉಪನ್ಯಾಸಕರು

    ಹಾಸನದ ಕಾಲೇಜಿನಲ್ಲಿಯೂ ಸಿಗುತ್ತೆ ಬಿಸಿಯೂಟ – ಎಲ್ಲರಿಗೂ ಮಾದರಿಯಾದ ಉಪನ್ಯಾಸಕರು

    ಹಾಸನ: ನಗರದ ಪ್ರತಿಷ್ಠಿತ ಸರ್ಕಾರಿ ವಿಜ್ಞಾನ ಪದವಿ ಕಾಲೇಜಿನಲ್ಲಿ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

    ಹಾಸನದ ಪ್ರತಿಷ್ಟಿತ ಸರ್ಕಾರಿ ವಿಜ್ಞಾನ ಪದವಿ ಕಾಲೇಜು ಬೇರೆ ಎಲ್ಲಾ ಕಾಲೇಜುಗಳಿಗಿಂತಲೂ ವಿಭಿನ್ನವಾಗಿ ನಿಂತಿದ್ದು, ವಿದ್ಯಾರ್ಥಿಗಳ ಪ್ರೀತಿಯ ಕಾಲೇಜಾಗಿ ಪರಿಣಮಿಸಿದೆ. ಕಾರಣ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಎಲ್ಲರೂ ಸೇರಿ ‘ಸಂವೇದನಾ ಬಳಗ’ ರಚಿಸಿಕೊಂಡಿದ್ದು, ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸಲು ಮುಂದಾಗಿದ್ದಾರೆ.

    ಪ್ರತಿದಿನ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ಕಾಲೇಜಿನಲ್ಲಿಯೇ ಉಚಿತವಾಗಿ ನೀಡಲಾಗುತ್ತಿದೆ. ಗ್ರಾಮೀಣ ಭಾಗಗಳಿಂದ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಇಲ್ಲಿ ಮಧ್ಯಾಹ್ನ ಬಿಸಿ ಊಟದ ವ್ಯವಸ್ಥೆಯನ್ನು ಮಾಡಿರುವುದು ನಿಜಕ್ಕೂ ಪ್ರಶಂಸನೀಯವಾಗಿದೆ. ಕಾಲೇಜಿನಲ್ಲಿ ಪ್ರತಿದಿನ 180 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಿಸಿ ಊಟ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಸಂವೇದನಾ ಬಳಗದಿಂದ ಪ್ರತಿ ತಿಂಗಳು 30 ಸಾವಿರ ಹಣ ಸಂಗ್ರಹವಾಗುತ್ತಿದ್ದು, ಕಾಲೇಜು ತರಗತಿ ಇರುವ ದಿನಗಳಲ್ಲಿ ಊಟವನ್ನು ನೀಡಲಾಗುತ್ತಿದೆ. ಸಂವೇದನಾ ಬಳಗದಲ್ಲಿರುವ ಎಲ್ಲರೂ ತಮ್ಮ ಕೈಲಾದಷ್ಟು ಹಣವನ್ನು ವಿದ್ಯಾರ್ಥಿಗಳಿಗಾಗಿ ನೀಡಿ ಮಾದರಿಯಾಗಿದ್ದಾರೆ.

    ಪ್ರತಿದಿನ ಬೆಳಗ್ಗೆಯಿಂದ ಸಂಜೆಯವರೆಗೂ ತರಗತಿಗಳು ನಡೆಯುವುದರಿಂದ ವಿದ್ಯಾರ್ಥಿಗಳು ಹೊರಗಡೆ ಹೋಗಲೂ ಸಾಧ್ಯವಾಗದೆ, ಸಮಸ್ಯೆ ಎದುರಿಸುತ್ತಿದ್ದರು. ಇಂತಹ ವಿದ್ಯಾರ್ಥಿಗಳಿಗೆ ಕಾಲೇಜಿನ ಸಂವೇದನಾ ಬಳಗದ ಬಿಸಿ ಊಟದ ಕಾರ್ಯಕ್ರಮ ಸಾಕಷ್ಟು ಅನುಕೂಲ ಕಲ್ಪಿಸಿದೆ. ಸದ್ಯ ಕಾಲೇಜು ಯುಜಿಸಿ ಯಿಂದ ಉತ್ತಮ ಗುಣಮಟ್ಟದ ಪ್ರಮಾಣ ಪತ್ರವನ್ನು ಕೂಡ ಪಡೆದುಕೊಂಡಿದೆ. ವಿದ್ಯಾರ್ಥಿಗಳ ಸಂಖ್ಯೆಯೂ ವರ್ಷದಿಂದ ಹೆಚ್ಚಾಗುತ್ತಿದೆ. ಕಾಲೇಜು ವಾತಾವರಣ ಕೂಡ ಉತ್ತಮವಾಗಿದೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದು, ಉಪನ್ಯಾಸಕರು ಸಹ ತಮ್ಮ ಕಾರ್ಯದಲ್ಲಿ ಸಂತೃಪ್ತಿಯನ್ನು ಕಾಣುತ್ತಿದ್ದಾರೆ.

  • ಮಂಡ್ಯ: ಸಿಎಂ ಸುಗಮ ಸಂಚಾರಕ್ಕಾಗಿ 2 ಬಾರಿ ಸರ್ಕಾರಿ ಕಾಲೇಜಿನ ಕಾಂಪೌಂಡ್ ಒಡೆದ್ರು

    ಮಂಡ್ಯ: ಸಿಎಂ ಸುಗಮ ಸಂಚಾರಕ್ಕಾಗಿ 2 ಬಾರಿ ಸರ್ಕಾರಿ ಕಾಲೇಜಿನ ಕಾಂಪೌಂಡ್ ಒಡೆದ್ರು

    ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುಗಮ ಸಂಚಾರಕ್ಕಾಗಿ ಮಂಡ್ಯದಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ಸರ್ಕಾರಿ ಕಾಲೇಜಿನ ಕಾಂಪೌಂಡ್ ಒಡೆಯಲಾಗಿದೆ.

    ಅಕ್ಟೋಬರ್ 29ರಂದು ಒಳನಾಡು ಮೀನುಗಾರರ ರಾಜ್ಯಮಟ್ಟದ ಸಮಾವೇಶಕ್ಕೆಂದು ಸಿಎಂ ಸಿದ್ದರಾಮಯ್ಯ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ ಮೈದಾನದಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಭಾಗವಹಿಸುವುದರಿಂದ ಅವರ ಸುಗಮ ಸಂಚಾರಕ್ಕೆ ಜಿಲ್ಲಾಡಳಿತ ಕಾಲೇಜಿನ ಕಾಂಪೌಂಡ್ ಗೋಡೆಯನ್ನು ಒಡೆದು ಹಾಕಿದೆ.

    ಕಳೆದ ಸೆಪ್ಟೆಂಬರ್ 8ರಂದು ಇದೇ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆಂದು ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆಯೂ ಕಾಲೇಜಿನ ಎರಡು ಕಡೆ ಕಾಂಪೌಂಡ್ ಗೋಡೆಯನ್ನು ಧ್ವಂಸ ಮಾಡಲಾಗಿತ್ತು. ಜಿಲ್ಲಾಡಳಿತದ ಈ ಕ್ರಮದ ವಿರುದ್ಧ ಅಂದು ಸಾಕಷ್ಟು ಟೀಕೆ ಕೂಡ ವ್ಯಕ್ತವಾಗಿತ್ತು.

    ಇಪ್ಪತ್ತು ದಿನಗಳ ಹಿಂದೆಯಷ್ಟೇ ಧ್ವಂಸಗೊಳಿಸಲಾಗಿದ್ದ ಕಾಂಪೌಂಡ್ ಗೋಡೆಯನ್ನು ಹೊಸದಾಗಿ ನಿರ್ಮಿಸಲಾಗಿತ್ತು. ಆದರೆ ಇದೀಗ ಮತ್ತೆ ಎರಡು ಕಡೆ ಕಾಂಪೌಂಡ್ ಒಡೆದು ಹಾಕಿರೋದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಜಿಲ್ಲಾಡಳಿತದ ಧೋರಣೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ರೀತಿ ಸಾರ್ವಜನಿಕ ತೆರಿಗೆ ಹಣವನ್ನು ದುಂದು ವೆಚ್ಚ ಮಾಡುವ ಬದಲು ಸಿಎಂ ಸಿದ್ದರಾಮಯ್ಯನವರು ಮಂಡ್ಯಕ್ಕೆ ಬರುವುದೇ ಬೇಡ ಎಂಬ ಅಭಿಪ್ರಾಯವು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.