Tag: Government Employees

  • ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

    ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

    ಬೆಂಗಳೂರು: ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ನನ್ನ ಇಲಾಖೆಯಲ್ಲಿ ಇಂತಹದ್ದನ್ನ ಸಹಿಸೋಕೆ ಸಾಧ್ಯವಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

    ಬೆಳಗಾವಿಯಲ್ಲಿ (Belagavi) ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸರ್ಕಾರಿ ನೌಕರರಿಗೆ ಕಾನೂನು ಇದೆ. ಇಂತಹ ಸಮಸ್ಯೆ ಇದ್ದರೆ ಇಲಾಖೆ ಗಮನಕ್ಕೆ ತರಬೇಕು. ಬಿಇಓ, ಡಿಡಿಪಿಐಗಳ ಗಮನಕ್ಕೆ ತರಬೇಕು. ಏಕಾಏಕಿ ಪ್ರತಿಭಟನೆ ಮಾಡೋದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

    ಹೀಗೆ ಅವರು ಪ್ರತಿಭಟನೆ ಮಾಡಿದರೆ ಅದನ್ನ ಸಹಿಸೋಕೆ ಆಗುವುದಿಲ್ಲ. ನನ್ನ ಇಲಾಖೆಯಲ್ಲಿ ಇದಕ್ಕೆ ಅವಕಾಶ ಇಲ್ಲ. ನಾವು ಬಿಲ್ಡಿಂಗ್ ಕೊಟ್ಟಿರೋದು ಅವರಿಗೆ ಗೊತ್ತಿದೆ. ಗೊತ್ತಿದ್ದು ಹೀಗೆ ಪ್ರತಿಭಟನೆ ಮಾಡಿದ್ದಾರೆ. ಹೀಗಾಗಿ ಬಿಇಓ ಅಮಾನತು ಮಾಡಿ ಆದೇಶ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!

    ಸರ್ಕಾರಿ ನೌಕರರು (Government Employees) ಇತಿಮಿತಿಯಲ್ಲಿ ಇರಬೇಕು. ಹೀಗೆ ಮಾಡೋದು ಸರಿಯಲ್ಲ. ಪ್ರತಿಭಟನೆ ಮಾಡೋಕೆ ಸರ್ಕಾರದಲ್ಲಿ ಅವಕಾಶ ಇಲ್ಲ. ಅವರ ಸಮಸ್ಯೆ ಬಗ್ಗೆ ಪ್ರತಿಭಟನೆ ಮಾಡಲಿ. ಅದು ಬಿಟ್ಟು ಇಂತಹ ವಿಷಯಕ್ಕೆ ಪ್ರತಿಭಟನೆ ಮಾಡೋದು ಸರಿಯಲ್ಲ. ಅನೇಕರು ನನಗೆ ಅಮಾನತು ವಾಪಸ್ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಈಗ ಅಮಾನತು ವಾಪಸ್ ಪಡೆಯಬೇಕು ಅಂತ ಕಡತ ತರಿಸಿದ್ದೇನೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

  • ಸರ್ಕಾರಿ ನೌಕರರ ಆಸ್ತಿ ವಿವರ ಬಹಿರಂಗಕ್ಕೆ `ಲೋಕಾ’ದಿಂದ ಸಿಎಸ್‍ಗೆ ಪತ್ರ – ತಿರುಗಿಬಿದ್ದ ನೌಕರರು

    ಸರ್ಕಾರಿ ನೌಕರರ ಆಸ್ತಿ ವಿವರ ಬಹಿರಂಗಕ್ಕೆ `ಲೋಕಾ’ದಿಂದ ಸಿಎಸ್‍ಗೆ ಪತ್ರ – ತಿರುಗಿಬಿದ್ದ ನೌಕರರು

    – `ಲೋಕಾ’ ನಿರ್ಧಾರಕ್ಕೆ ಸಚಿವಾಲಯದ ನೌಕರರ ಸಂಘದಿಂದ ತೀವ್ರ ವಿರೋಧ

    ಬೆಂಗಳೂರು: ಸರ್ಕಾರಿ ನೌಕರರ (Government Employees ) ಆಸ್ತಿ ವಿವರ ಬಹಿರಂಗಕ್ಕೆ ಲೋಕಾಯುಕ್ತದಿಂದ (Lokayukta) ಸಿಎಸ್‍ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಸರ್ಕಾರಿ ನೌಕರರ ಮಧ್ಯೆ ಸಂಘರ್ಷ ಶುರುವಾಗಿದೆ. ಲೋಕಾಯುಕ್ತ ನಿರ್ಧಾರಕ್ಕೆ ಸಚಿವಾಲಯದ ನೌಕರರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

    ಸರ್ಕಾರಿ ನೌಕರರ ಮೇಲೆ ಭ್ರಷ್ಟಾಚಾರ ಆರೋಪ ಬಂದಾಗ ಅಥವಾ ಲೋಕಾಯುಕ್ತ ತನಿಖೆ ವೇಳೆ ಆಸ್ತಿ ವಿವರಗಳನ್ನು ಇಲಾಖೆಯ ಮುಖ್ಯಸ್ಥರು ನೀಡುತ್ತಿಲ್ಲ. ಹೀಗಾಗಿ ಲೋಕಾಯುಕ್ತ ಸಿಎಸ್‍ಗೆ ಪತ್ರ ಬರೆದಿದೆ. ಪತ್ರದಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಆನ್‍ಲೈನ್ ಪೋರ್ಟಲ್‍ನಲ್ಲಿ ಆಸ್ತಿ ವಿವರ ಅಪ್ಲೋಡ್ ಮಾಡಬೇಕು ಎಂದು ಸೂಚಿಸಿದೆ.

    ಲೋಕಾಯುಕ್ತದ ನಿರ್ಧಾರಕ್ಕೆ ಬಿಲ್‍ಕುಲ್ ಒಪ್ಪದ ಸರ್ಕಾರಿ ನೌಕರರು, ಲೋಕಾಯುಕ್ತ ನಡೆಯ ವಿರುದ್ಧ ತಿರುಗಿಬಿದ್ದಿದ್ದಾರೆ. ತಮ್ಮ ಆಸ್ತಿ ವಿವರಗಳನ್ನು ಆನ್‍ಲೈನ್ ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡಲು ನಿರಾಕರಿಸಿದ್ದಾರೆ. ಈ ಸಂಬಂಧ ಸಚಿವಾಲಯದ ನೌಕರರ ಸಂಘ ಸಿಎಸ್‍ಗೆ ಪತ್ರ ಬರೆದಿದೆ. ಹೀಗೆ ಮಾಡಿದರೆ ಸರ್ಕಾರಿ ನೌಕರರಿಗೆ ತೊಂದರೆಯಾಗಲಿದೆ. ಕೆಲವು ಆಸ್ತಿ ವಿವರ ಮುಂದಿಟ್ಟುಕೊಡು ಬ್ಲಾಕ್‍ಮೇಲ್ ಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.‌

    ಕೇವಲ 1% ಭ್ರಷ್ಟ ಅಧಿಕಾರಿಗಳು ಇರಬಹುದು. ಇಂಥಹ ಸಂದರ್ಭದಲ್ಲಿ ಎಲ್ಲರಿಗೂ ಶಿಕ್ಷೆ ಕೊಡುವುದು ಸರಿಯಲ್ಲ. ಒಂದು ವೇಳೆ ಲೋಕಾಯುಕ್ತ ಒತ್ತಾಯಕ್ಕೆ ಮಣಿದರೇ ಪ್ರತಿಭಟನೆ ಮಾಡ್ತೀವಿ. ಸಚಿವಾಲಯ ಬಂದ್ ಮಾಡ್ತೀವಿ ಎಂದು ನೌಕರರ ಸಂಘ ಎಚ್ಚರಿಕೆ ಕೊಟ್ಟಿದೆ.

  • ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರು 1 ದಿನದ ವೇತನ ನೀಡುವಂತೆ ಮಂಡ್ಯ ಡಿಸಿ ಮನವಿ

    ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರು 1 ದಿನದ ವೇತನ ನೀಡುವಂತೆ ಮಂಡ್ಯ ಡಿಸಿ ಮನವಿ

    ಮಂಡ್ಯ: ಜಿಲ್ಲೆಯಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು (87th All India Literary Conference) ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರಿ ನೌಕರರು ಒಂದು ದಿನದ ವೇತನವನ್ನು ನೀಡುವಂತೆ ಮಂಡ್ಯ ಜಿಲ್ಲಾಧಿಕಾರಿ (Mandya DC) ಡಾ‌.ಕುಮಾರ ಅವರು ಮನವಿ ಮಾಡಿದರು.

    ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭೆ ನಡೆಸಿ ಮಾತನಾಡಿದ ಅವರು, ಒಂದು ದಿನದ ಸಂಬಳ ನೀಡುವ ಬಗ್ಗೆ ಜಿಲ್ಲಾಡಳಿತದಿಂದ ಯಾವುದೇ ಒತ್ತಾಯವಿಲ್ಲ. ಎಲ್ಲಾ ಅಧಿಕಾರಿಗಳು (Government Employees) ಹಾಗೂ ಸಿಬ್ಬಂದಿ ಪ್ರೀತಿಪೂರ್ವಕವಾಗಿ ನೀಡುವಂತೆ ಕೋರಿದರು. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾ ದಾಳಿ; 14.80 ಲಕ್ಷ ಹಣ ಜಪ್ತಿ!

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯವು ಡಿಸೆಂಬರ್ 20, 21, 22 ರಂದು ಜಿಲ್ಲೆಯಲ್ಲಿ ನಡೆಯಲಿದೆ. ಸರ್ಕಾರಿ ನೌಕರರಲ್ಲೇ ವಿವಿಧ ಸಂಘ ಸಂಸ್ಥೆಗಳು, ಕನ್ನಡ ಪರ ಹೋರಾಟ ಸಂಘಗಳು ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್‌- ಸೈಲ್‌ಗೆ ರಿಲೀಫ್‌, ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಹೈಕೋರ್ಟ್‌

    ಸಭೆಯಲ್ಲಿ ಪ್ರತಿಯೊಬ್ಬರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನವು ಕೇವಲ ವೈಯಕ್ತಿಕ ಹಬ್ಬವಾಗಿರದೇ, ಕನ್ನಡದ ಐಕ್ಯತೆಯನ್ನು ಸಾರುವ, ಪ್ರತಿಬಿಂಬಿಸುವ ಪ್ರತಿಯೊಬ್ಬ ಕನ್ನಡಿಗರ ಮನೆಯ ಹಬ್ಬವಾಗಿದೆ. ಸಾರ್ವಜನಿಕರು, ಎಲ್ಲಾ ಸರ್ಕಾರಿ ನೌಕರರು ಕೂಡ ತಮ್ಮ ಮನೆಯ ಹಬ್ಬವೆಂದು ಭಾವಿಸಿ ಸಂಭ್ರಮ, ಸಡಗರದಿಂದ ಆಚರಿಸೋಣ ಎಂದು ಕರೆ ನೀಡಿದರು.

    ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಲ್ಲಿ ವಿವಿಧ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ 10 ಮಂದಿ ಕನ್ನಡಿಗರಿಗೆ ಸನ್ಮಾನ ಮಾಡುವ ಬಗ್ಗೆ ಹಾಗೂ ಸಮ್ಮೇಳನ ನಡೆಯುವ ದಿನಗಳಂದು ರಜೆ ನೀಡುವ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳ ಪೋಷಕರೊಂದಿಗೆ ಅನುಚಿತ ವರ್ತನೆ, ಹಣ ದುರುಪಯೋಗ – ಇಬ್ಬರು ಶಿಕ್ಷಕರು ಅಮಾನತು

  • ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ ಗಿಫ್ಟ್ – 23 ಲಕ್ಷ ಉದ್ಯೋಗಿಗಳಿಗೆ ಬಂಪರ್‌!

    ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ ಗಿಫ್ಟ್ – 23 ಲಕ್ಷ ಉದ್ಯೋಗಿಗಳಿಗೆ ಬಂಪರ್‌!

    – ಕೇಂದ್ರಕ್ಕೆ ಅಂದಾಜು 10,579 ಕೋಟಿ ರೂ. ಹೊರೆ
    – ಏಕೀಕೃತ ಪಿಂಚಣಿ ಯೋಜನೆಯ ಉಪಯೋಗ ಏನು?

    ನವದೆಹಲಿ: ಕೇಂದ್ರ ಸಚಿವ ಸಂಪುಟ ಶನಿವಾರ (ಆ.24) ಮುರು ನಿರ್ಣಯ ಕೈಗೊಂಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ಸಾಮಾಜಿಕ ಭದ್ರತೆಗಾಗಿ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ.

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಯುಪಿಎಸ್, ಸರ್ಕಾರಿ ನೌಕರರಿಗೆ ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

    ವೇತನದ ಶೇ.50ರಷ್ಟನ್ನ ಪಿಂಚಣಿ ರೂಪದಲ್ಲಿ ನೀಡಲು ಸಂಪುಟ ನಿರ್ಧರಿಸಿತು. ಇದರಿಂದ 23 ಲಕ್ಷ ಉದ್ಯೋಗಿಗಳಿಗೆ ಅನುಕೂಲ ಆಗಲಿದೆ. ಇದಕ್ಕಾಗಿ ಕೇಂದ್ರಕ್ಕೆ ಹೆಚ್ಚುವರಿಯಾಗಿ 10,579 ಕೋಟಿ ರೂ. ಹೊರೆಯಾಗುತ್ತದೆ ಎಂದು ಅಂದಾಜಿಸಲಾಗಿದೆ. 2025ರ ಏಪ್ರಿಲ್‌ 1ರಿಂದ ಈ ಯೋಜನೆ ಜಾರಿಗೆ ಬರಲಿದೆ. ಅಲ್ಲದೇ ಮುಂಬರುವ ಉದ್ಯೋಗಿಗಳು ಎನ್‌ಪಿಎಸ್‌ (ಹೊಸ ಪೆನ್ಶನ್‌ ಯೋಜನೆ) ಮತ್ತು ಯುಪಿಎಸ್‌ (ಏಕೀಕೃತ ಪಿಂಚಣಿ ಯೋಜನೆ) ಆಯ್ಕೆ ಮಾಡುವ ಅವಕಾಶವನ್ನು ಹೊಂದಿರುತ್ತಾರೆ ಎಂದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

    ಇದೇ ವೇಳೆ, ಬಯೋ ಇ-3 ವಿಧಾನದ ಜೊತೆಗೆ ವಿಜ್ಞಾನಧಾರಾ ಯೋಜನೆಗೆ ತರಲು ಸಂಪುಟ ಒಪ್ಪಿಗೆ ಸೂಚಿಸಿದೆ. 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಕಲ್ಪನೆಗೂ ಅನುಮೋದನೆ ನೀಡಿದೆ.

    ಏಕೀಕೃತ ಪಿಂಚಣಿ ಯೋಜನೆಯ ಉಪಯೋಗ ಏನು?
    ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ.

    1. ಖಚಿತವಾದ ಪಿಂಚಣಿ: ಕನಿಷ್ಠ 25 ವರ್ಷಗಳ ಸೇವೆ ಪೂರ್ಣಗೊಳಿಸುವ ಸರ್ಕಾರಿ ನೌಕರರಿಗೆ ನಿವೃತ್ತಿಯ ಮೊದಲು ಕಳೆದ 12 ತಿಂಗಳ ಸರಾಸರಿ ಮೂಲ ವೇತನದ 50% ನಷ್ಟು ಈ ಯೋಜನೆಯು ಖಾತರಿಪಡಿಸುತ್ತದೆ. ಕನಿಷ್ಠ 10 ವರ್ಷಗಳ ಸೇವೆಯವರೆಗಿನ ಕಡಿಮೆ ಸೇವಾ ಅವಧಿಗೆ ಇದು ಅನುಪಾತದಲ್ಲಿರುತ್ತದೆ.

    2. ಖಚಿತವಾದ (ಸ್ಥಿರ) ಕುಟುಂಬ ಪಿಂಚಣಿ: ಉದ್ಯೋಗಿಯ ಮರಣದ ಸಂದರ್ಭದಲ್ಲಿ ನೀಡಲಾಗುವ ಪಿಂಚಣಿ ವ್ಯವಸ್ಥೆಯಾಗಿದೆ. ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತದಷ್ಟು ಪಡೆಯಬಹುದಾಗಿದೆ.

    3. ಖಚಿತವಾದ ಕನಿಷ್ಠ ಪಿಂಚಣಿ: ಕನಿಷ್ಠ 10 ವರ್ಷಗಳ ಸೇವೆ ಸಲ್ಲಿದ ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರ ತಿಂಗಳಿಗೆ 10,000 ರೂ.ನಂತೆ ಖಚಿತವಾದ ಕನಿಷ್ಠ ಪಿಂಚಣಿ ಒದಗಿಸುತ್ತದೆ
    ಭರವಸೆ ನೀಡುತ್ತದೆ.

    ಪ್ರಸ್ತುತ ಪಿಂಚಣಿ ಯೋಜನೆಯ ಪ್ರಕಾರ, ನೌಕರರು ಶೇ.10 ರಷ್ಟು ಕೊಡುಗೆ ನೀಡಿದರೆ, ಕೇಂದ್ರ ಸರ್ಕಾರವು ಶೇ.14 ರಷ್ಟು ಕೊಡುಗೆ ನೀಡುತ್ತದೆ, ಇದನ್ನು ಯುಪಿಎಸ್‌ನೊಂದಿಗೆ ಶೇ.18ಕ್ಕೆ ಹೆಚ್ಚಿಸಲಾಗುತ್ತದೆ.

  • ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಚಾಟೀ ಬೀಸಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು (Government Employees) ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.

    ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು (Public Work) ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.

    ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ (Biometric) ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.

    ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಾಕೀತು ಮಾಡಿದೆ. ಹಿರಿಯ ಅಧಿಕಾರಿಗಳು ನೌಕರರ ಹಾಜರಾತಿ ಮತ್ತು ಸಮಯಪ್ರಜ್ಞೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸುತ್ತೊಲೆಯಲ್ಲಿ ಹೇಳಲಾಗಿದೆ.

    GOVT EMPLOYEES
    ಸಾಂದರ್ಭಿಕ ಚಿತ್ರ

    2014 ರಲ್ಲಿ ನರೇಂದ್ರ ಮೋದಿ ಮೊದಲ ಬಾರಿ ಪ್ರಧಾನಿಯಾದ ಬಳಿಕ ಕಚೇರಿ ಸಮಯವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಪ್ರಯತ್ನಿಸಿತು‌. ಇದನ್ನು ನೌಕರರು ವಿರೋಧಿಸಿದ್ದರು. ಅವರಲ್ಲಿ ಹಲವರು ದೂರದ ಪ್ರಯಾಣ ಮಾಡುತ್ತಾರೆ ಎಂದು ವಾದಿಸಿದ್ದರು. ಬಳಿಕ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ, ಹಾಜರಾತಿ ಖಚಿತಪಡಿಸಿಕೊಳ್ಳಲು, ಮೇಲ್ವಿಚಾರಣೆ ಮಾಡಲಾಯಿತು ಸೂಚಿಸಿತ್ತು. ಕೋವಿಡ್ ಬಳಿಕ ಈ ವ್ಯವಸ್ಥೆ ಮತ್ತೆ ಹಾದಿ ತಪ್ಪಿದೆ ಎನ್ನಲಾಗಿದೆ‌.

  • 2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ

    2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ

    -ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಬೆಂಗಳೂರು: 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರರಿಗೆ (Government Employees) ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಚುನಾವಣೆ (Election) ವೇಳೆ ಪ್ರಣಾಳಿಕೆಯಲ್ಲಿ ಎನ್‌ಪಿಎಸ್ (NPS) ರದ್ದು ಮಾಡಿ ಓಪಿಎಸ್ (OPS) ಜಾರಿ ಮಾಡುವುದಾಗಿ ಕಾಂಗ್ರೆಸ್ (Congress) ಭರವಸೆ ನೀಡಿತ್ತು. ಓಪಿಎಸ್‌ಗಾಗಿ ನಡೆದ ಹೋರಾಟದ ವೇಳೆ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕರು ಓಪಿಎಸ್ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು.

    2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ 13,000 ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಓಪಿಎಸ್ ಜಾರಿಗೆ ಸರ್ಕಾರ ಷರತ್ತು ವಿಧಿಸಿದ್ದು, ಷರತ್ತಿಗೆ ಒಳಪಟ್ಟಿವರಿಗೆ ಮಾತ್ರ ಓಪಿಎಸ್ ಅನ್ವಯ ಎಂದು ಆದೇಶ ನೀಡಿದೆ.

    ಸರ್ಕಾರದ ಷರತ್ತುಗಳೇನು?
    * 01-04-2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30.06.2024 ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
    * ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
    * ಮೇಲಿನ 1ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
    * ನೌಕರರ ಆಯ್ಕೆಗನುಸಾರ ಅವರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31-7-2024ರೊಳಗೆ ಅಂತಹ ನೌಕರರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೂಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.
    * ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ 31-8-2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.
    * ದಿನಾಂಕ 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ನ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ 30-06-2014ರೊಳಗೆ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅದನ್ನ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು.

  • ಸರ್ಕಾರಿ ನೌಕರರು 2ನೇ ಮದುವೆಯಾಗುವಂತಿಲ್ಲ – ಅಸ್ಸಾಂ ಸರ್ಕಾರ ಆದೇಶ

    ಸರ್ಕಾರಿ ನೌಕರರು 2ನೇ ಮದುವೆಯಾಗುವಂತಿಲ್ಲ – ಅಸ್ಸಾಂ ಸರ್ಕಾರ ಆದೇಶ

    ದಿಸ್ಪುರ್: ಸರ್ಕಾರಿ ನೌಕರರು (Government Employees) 2ನೇ ಮದುವೆಯಾಗುವುದನ್ನು ಅಸ್ಸಾಂ (Assam) ಸರ್ಕಾರ ನಿರ್ಬಂಧಿಸಿದೆ. ಸರ್ಕಾರಿ ನೌಕರನ ಧರ್ಮ 2ನೇ ಮದುವೆಗೆ (2nd Marriage) ಅನುಮತಿಸಿದರೂ ಸರ್ಕಾರದ ಅನುಮತಿ ಇಲ್ಲದೇ 2ನೇ ಮದುವೆ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

    2 ಮದುವೆಗಳಿಂದ ಸರ್ಕಾರಿ ನೌಕರನ ಪಿಂಚಣಿಗಾಗಿ ಇಬ್ಬರು ಪತ್ನಿಯರು ಹೋರಾಟ ಮಾಡುವುದನ್ನು ನಾವು ಗಮನಿಸಿದ್ದೇವೆ. ಅಸ್ಸಾಂನಲ್ಲಿ ಈ ಕಾನೂನು ಮೊದಲೇ ಇತ್ತು. ಅದನ್ನು ಕಠಿಣವಾಗಿ ಜಾರಿಗೆ ನಿರ್ಧಾರ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

    ಬಹುಪತ್ನಿತ್ವವನ್ನು ನಿಷೇಧಿಸುವ ಕಾನೂನು 58 ವರ್ಷಗಳ ಹಿಂದೆ ಅಸ್ಸಾಂನಲ್ಲಿ ಜಾರಿ ಮಾಡಲಾಗಿತ್ತು. ಮೊದಲ ಸಂಗಾತಿಯು ಜೀವಂತವಾಗಿರುವವರೆಗೆ ಸರ್ಕಾರದ ಒಪ್ಪಿಗೆಯಿಲ್ಲದೆ 2ನೇ ಮಹಿಳೆಯನ್ನು ಮದುವೆಯಾಗುವುದನ್ನು ಕಾನೂನು ನಿರ್ಬಂಧಿಸುತ್ತದೆ.

    ಮುಸ್ಲಿಮರನ್ನು ಉಲ್ಲೇಖಿಸದೆ ವೈಯಕ್ತಿಕ ಕಾನೂನಿನಿಂದ ಅನುಮತಿ ಪಡೆದ ಪುರುಷರಿಗೂ ಈ ನಿಯಮ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಅದೇ ರೀತಿ ಮಹಿಳಾ ನೌಕರರು ಈ ಮೊದಲು ಮದುವೆಯಾಗಿರುವ ವ್ಯಕ್ತಿಯನ್ನು 2ನೇ ಮದುವೆಯಾಗಬಾರದು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾ

    ಅಕ್ಟೋಬರ್ 20 ರಂದು ಸಿಬ್ಬಂದಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀರಜ್ ವರ್ಮಾ ಅವರು ಅಧಿಸೂಚನೆ ಹೊರಡಿಸಿದ್ದು, ಇದು ಗುರುವಾರ ಬೆಳಕಿಗೆ ಬಂದಿದೆ. ಅಸ್ಸಾಂ ನಾಗರಿಕ ಸೇವೆಗಳ (ನಡತೆ) ನಿಯಮಗಳು 1965 ರ ನಿಯಮ 26 ರ ನಿಬಂಧನೆಗಳ ಪ್ರಕಾರ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅದು ಹೇಳಿದೆ. ಮೇಲಿನ ನಿಬಂಧನೆಗಳ ಅನ್ವಯ ಶಿಸ್ತು ಸಮಿತಿ ಪ್ರಾಧಿಕಾರವು ತಕ್ಷಣದ ಇಲಾಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಬಹುದು. ಕಡ್ಡಾಯ ನಿವೃತ್ತಿ ಸೇರಿದಂತೆ ಪ್ರಮುಖ ದಂಡವನ್ನು ವಿಧಿಸಲು ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: IPL 2024 – ದುಬೈನಲ್ಲಿ ಹರಾಜು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಕೆಲಸಕ್ಕೆ iPhone ಬಳಕೆ ನಿಷೇಧಿಸಿದ ರಷ್ಯಾ

    ಸರ್ಕಾರಿ ಕೆಲಸಕ್ಕೆ iPhone ಬಳಕೆ ನಿಷೇಧಿಸಿದ ರಷ್ಯಾ

    ಮಾಸ್ಕೋ: ರಷ್ಯಾದ ಡಿಜಿಟಲ್ ಅಭಿವೃದ್ಧಿ ಸಚಿವಾಲಯವು ಸರ್ಕಾರಿ ಉದ್ಯೋಗಿಗಳು (Government Employees) ಕೆಲಸದ ಉದ್ದೇಶಗಳಿಗೆ ಆಪಲ್ ಐಫೋನ್ (iPhones) ಅಥವಾ ಐಪ್ಯಾಡ್ (iPads) ಬಳಸುವುದನ್ನ ನಿಷೇಧಿಸಿದೆ ಎಂದು ಸಚಿವ ಮಕ್ಸುತ್ ಶಾದೇವ್ ಹೇಳಿದ್ದಾರೆ.

    ಸರ್ಕಾರಿ ಕೆಲಸದ ಅಪ್ಲಿಕೇಷನ್‌ಗಳನ್ನ ಬಳಸಲು, ಇಮೇಲ್ ವಿನಿಮಯ ಮಾಡಿಕೊಳ್ಳುವುದಕ್ಕಾಗಿ ಐಫೋನ್ ಮತ್ತು ಐಪ್ಯಾಡ್ ಬಳಸದಂತೆ ಎಚ್ಚರಿಸಿದೆ. ಅಮೆರಿಕದ ಬೇಹುಗಾರಿಕೆ ಕಾರ್ಯಾಚರಣೆಯ ಪರಿಣಾಮವಾಗಿ ಆಪಲ್ ರಾಜಿ ಮಾಡಿಕೊಂಡಿದೆ ಎಂದು ರಷ್ಯಾದ ಭದ್ರತಾ ಸಂಸ್ಥೆ FSB ಹೇಳಿದ ಎರಡು ತಿಂಗಳ ನಂತರ ಈ ಬೆಳವಣಿಗೆ ಕಂಡುಬಂದಿದೆ. ಆದ್ರೆ ರಷ್ಯಾ ಭದ್ರತಾ ಸಂಸ್ಥೆಯ ಆರೋಪವನ್ನ ಅಮೆರಿಕ ತಳ್ಳಿಹಾಕಿದೆ.

    ಬೇಕಿದ್ದರೆ ವೈಯಕ್ತಿಕ ಅಗತ್ಯಗಳಿಗಾಗಿ ಐಫೋನ್ ಬಳಸಬಹುದು. ಆದ್ರೆ ಯಾವುದೇ ಕಾರಣಕ್ಕೂ ಸರ್ಕಾರಿ ಕೆಲಸಗಳಿಗೆ ಐಫೋನ್ ಬಳಸುವಂತಿಲ್ಲ ಎಂದು ಆದೇಶಿಸಿರುವುದಾಗಿ ಶಾವೇದ್ ತಿಳಿಸಿದ್ದಾರೆ. ಇದನ್ನೂ ಓದಿ: ರಕ್ಷಣಾ ಸಚಿವಾಲದ ಕಂಪ್ಯೂಟರ್‌ಗಳಲ್ಲಿ ಇನ್ನು Windows ಬದಲು ದೇಶೀ ನಿರ್ಮಿತ Maya OS

    ಈ ಹಿಂದೆ ಅಮೆರಿಕ ಬೇಹುಗಾರಿಕೆ ನಡೆಸುತ್ತಿದೆ, ಐಫೋನ್ ಮೂಲಕ ಕದ್ದಾಲಿಕೆ ಮಾಡುತ್ತಿದೆ ಎಂಬ ಸಂಶಯದ ಮೇಲೆ ಸರ್ಕಾರಿ ಉದ್ಯೋಗಿಗಳು ಐಫೋನ್ ಬಳಸದಂತೆ ಸಂಪೂರ್ಣ ನಿಷೇಧಿಸಿತ್ತು. ಇದೀಗ ವೈಯಕ್ತಿಕ ಬಳಕೆಗೆ ಅನುಮತಿ ನೀಡಿದೆ. ಇದನ್ನೂ ಓದಿ: ಭಾರತದ ಚಂದ್ರಯಾನ-3 ಉಡಾವಣೆ ಬೆನ್ನಲ್ಲೇ ಚಂದ್ರನೆಡೆಗೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ ರಷ್ಯಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳು ಹೆರಿಗೆ ರಜೆ – ಸಿಕ್ಕಿಂ ಸಿಎಂ ಘೋಷಣೆ

    ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳು ಹೆರಿಗೆ ರಜೆ – ಸಿಕ್ಕಿಂ ಸಿಎಂ ಘೋಷಣೆ

    ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಮ್ಮ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 12 ತಿಂಗಳ ಹೆರಿಗೆ ರಜೆ ಹಾಗೂ ಮಗುವಿನ ತಂದೆಗೆ 1 ತಿಂಗಳ ರಜೆ ನೀಡುವ ಹೊಸ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವುದಾಗಿ ಬುಧವಾರ ತಿಳಿಸಿದ್ದಾರೆ.

    ಸಿಕ್ಕಿಂ ರಾಜ್ಯ ನಾಗರಿಕ ಸೇವಾ ಅಧಿಕಾರಿಗಳ ಸಂಘದ (SSCSOA) ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರಿ ಉದ್ಯೋಗಿಗಳಿಗೆ ಈ ಹೊಸ ಪ್ರಯೋಜನವನ್ನು ಶೀಘ್ರವೇ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ಇದು ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಮತ್ತು ಕುಟುಂಬವನ್ನು ಉತ್ತಮವಾಗಿ ನೋಡಿಕೊಳ್ಳಲು ಸಹಾಯ ಮಾಡಲಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

    ಹೆರಿಗೆ ಪ್ರಯೋಜನ ಕಾಯಿದೆ 1961ರ ಪ್ರಕಾರ ಕೆಲಸ ಮಾಡುವ ಮಹಿಳೆ 6 ತಿಂಗಳು ಅಥವಾ 26 ವಾರಗಳ ವೇತನ ಸಹಿತ ಹೆರಿಗೆ ರಜೆಗೆ ಅರ್ಹಳಾಗಿರುತ್ತಾಳೆ. ಹಿಮಾಲಯದ ತಪ್ಪಲಿನಲ್ಲಿರುವ ಸಿಕ್ಕಿಂ, ಭಾರತದಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ರಾಜ್ಯವಾಗಿದೆ. ಇಲ್ಲಿ ಸುಮಾರು 6.32 ಲಕ್ಷ ಜನರು ನೆಲೆಸಿದ್ದಾರೆ. ಇದನ್ನೂ ಓದಿ: ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

    ಸಿಕ್ಕಿಂ ಮತ್ತು ರಾಜ್ಯದ ಜನರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿರುವ ಅಧಿಕಾರಿಗಳು ರಾಜ್ಯದ ಆಡಳಿತದ ಬೆನ್ನೆಲುಬು. ನಾಗರಿಕ ಸೇವಾ ಅಧಿಕಾರಿಗಳಿಗೆ ಬಡ್ತಿ ಪ್ರಕ್ರಿಯೆ ಚುರುಕುಗೊಳಿಸುವತ್ತ ಗಮನ ಹರಿಸಲಾಗಿದ್ದು, ಬಡ್ತಿ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ತಮಾಂಗ್ ಹೇಳಿದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆ ಕೇಸ್‌ – ಅಲಹಾಬಾದ್ ಹೈಕೋಟ್‌ನಲ್ಲಿ ಇಂದು ವಿಚಾರಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೇತನ ಹೆಚ್ಚಳ- ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು

    ವೇತನ ಹೆಚ್ಚಳ- ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು

    ಬೆಂಗಳೂರು: ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ (Shadakshari) ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರಧಾನಿ ಮೋದಿಯವರ ಆರೋಗ್ಯ ಚೆನ್ನಾಗಿರಲಿ: ಸಿದ್ದರಾಮಯ್ಯ

    ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದರು. ಸರ್ಕಾರಿ ನೌಕರರ (Government Employees) ಮುಷ್ಕರ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದೆ. ಆಯೋಗದ ವರದಿ ಬಳಿಕ ಶೇಕಡವಾರು ಪ್ರಮಾಣದಲ್ಲಿ ಬದಲಾವಣೆ ಆಗಬಹುದು. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?