Tag: Government Employees

  • ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ

    ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ

    ಬೆಂಗಳೂರು: ಸರ್ಕಾರಿ ನೌಕರ (Government Employees) ರಿಗೆ 17% ವೇತನ ಹೆಚ್ಚಳವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸುದ್ದಿಗಾರರೊಂದಿಗೆ ಮಾತನಾಡಿ, 17% ವತನ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಇದೀಗ ಸಿಎಂ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

    ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸರ್ಕಾರ, 1018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ: ಸಿಎಂ

    ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿರುವುದಾಗಿ ತಿಳಿಸಲಾಗಿದೆ.

  • ಸರ್ಕಾರಿ ನೌಕರರಿಗೆ 17%  ವೇತನ ಹೆಚ್ಚಳ: ಸಿಎಂ

    ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ: ಸಿಎಂ

    ಬೆಂಗಳೂರು: ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದರು.

    ಸರ್ಕಾರಿ ನೌಕರರ (Government Employees) ಮುಷ್ಕರ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದೆ. ಆಯೋಗದ ವರದಿ ಬಳಿಕ ಶೇಕಡವಾರು ಪ್ರಮಾಣದಲ್ಲಿ ಬದಲಾವಣೆ ಆಗಬಹುದು. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

    ಎನ್ ಪಿಎಸ್ ರದ್ದು ಬಗ್ಗೆ ಸಮಿತಿ ರಚನೆ ಬಳಿಕ ಸರ್ಕಾರದಿಂದ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು. ಹೊಸ ಪಿಂಚಣಿ ಯೋಜನೆ (NPS) ರದ್ದು ಮಾಡುವ ಬೇಡಿಕೆ ಪರಾಮರ್ಶೆ ಮಾಡ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಅಂತ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸ್ತೇವೆ ಎಂದರು.

    ಒಟ್ಟಿನಲ್ಲಿ 7 ನೇ ವೇತನ ಆಯೋಗದಿಂದ ಸರ್ಕಾರ ಇನ್ನೂ ವರದಿ ಪಡೆದಿಲ್ಲ. ಆದರೆ ಸರ್ಕಾರಿ ನೌಕರರ ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ 17% ಮಧ್ಯಂತರ ಪರಿಹಾರಕ್ಕೆ ಭರವಸೆ ಕೊಟ್ಟಿದೆ. ಇದನ್ನೂ ಓದಿ: ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ಚುನಾವಣೆಯ ಹೊತ್ತಲ್ಲೇ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು ಸಮರ ಸಾರಿದ್ದಾರೆ. 7ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ನೀತಿ ವಿರೋಧಿಸಿ ಹಳೇ ಪಿಂಚಣಿ ನೀತಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ (Indefinite Strike) ಕೈಗೊಂಡಿದ್ದಾರೆ.

  • ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ನವದೆಹಲಿ: ರಾಜ್ಯದಲ್ಲಿ ಚುನಾವಣೆ ಘೋಷಣೆಗೆ ದಿನಗಣನೆ ಶುರುವಾಗಿದೆ. ಈ ಹೊತ್ತಲ್ಲೇ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು (Government Employees) ಸಮರ ಸಾರಿದ್ದಾರೆ. 7ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ನೀತಿ ವಿರೋಧಿಸಿ ಹಳೇ ಪಿಂಚಣಿ ನೀತಿಗೆ ಆಗ್ರಹಿಸಿ ಮುಷ್ಕರಕ್ಕೆ (Indefinite Strike) ಮುಂದಾಗಿದ್ದಾರೆ.

    ಈ ಸಂಬಂಧ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಘದ ನಿಯೋಗದ ಜೊತೆ ಸಭೆ ನಡೆಸಿ, ಸಂಧಾನಕ್ಕೆ ಯತ್ನಿಸಿದರು. ಬೇಡಿಕೆ ಈಡೇರಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಲಿದೆ. ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆದರೆ ಸರ್ಕಾರಿ ನೌಕರರು ಒಪ್ಪದ ಕಾರಣ ಸಂಧಾನ ಸಭೆ ವಿಫಲವಾಗಿದೆ.

    ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಸರ್ಕಾರಿ ಸಂಘದ ನೌಕರರಲ್ಲಿ ಯಾವುದೇ ಒಡಕಿಲ್ಲ. ಎಲ್ಲ ಸರ್ಕಾರಿ ನೌಕರರು ಒಗ್ಗಟ್ಟಾಗಿದ್ದೇವೆ ಎಂದರು. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರಾಗುತ್ತೇವೆ ಎಂದು 40 ಸಂಘಟನೆಗಳ 10 ಲಕ್ಷ ನೌಕರರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ, ಮುಷ್ಕರ ನಡೆಯುತ್ತೆ: ಷಡಕ್ಷರಿ

    ಪರಿಸ್ಥಿತಿ ವಿಷಮ ಆಗದಂತೆ ತಡೆಯಲು ಮಂಗಳವಾರ ರಾತ್ರಿ 9:30ಕ್ಕೆ ಸಿಎಂ ಬೊಮ್ಮಾಯಿ (CM Basavaraj Bommai) ತುರ್ತುಸಭೆ ಕರೆದಿದ್ದಾರೆ. ಒಂದೊಮ್ಮೆ ಸಂಧಾನ ವಿಫಲವಾದರೆ ಬುಧವಾರದಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಬಂದ್ ಆಗಲಿವೆ.

    ಯಾವ ಕಚೇರಿಗಳು ಬಂದ್?
    ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಎಲ್ಲಾ ಕಚೇರಿಗಳು, ಬಿಬಿಎಂಪಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯತ್‌, ಸರ್ಕಾರಿ ಶಾಲೆಗಳು, ಪುರಸಭೆ, ಸರ್ಕಾರಿ ಹಾಸ್ಟೆಲ್ ಗಳು, ಕಂದಾಯ ಇಲಾಖೆ, ಸರ್ಕಾರಿ ಕಾಲೇಜುಗಳು ಬಂದ್‌ ಆಗಲಿವೆ.

    ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಸೇವೆಯಷ್ಟೇ ಲಭ್ಯವಿದ್ದು, ಆಸ್ತಿ ನೋಂದಣಿ ಸ್ಥಗಿತವಾಗುವ ಸಾಧ್ಯತೆಯಿದೆ. ಮುಷ್ಕರಕ್ಕೆ ಜಲಮಂಡಳಿ, ಬೆಸ್ಕಾಂ ನೌಕರರ ಸಂಘ ನೈತಿಕ ಬೆಂಬಲ ನೀಡಿವೆ.

  • ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ, ಮುಷ್ಕರ ನಡೆಯುತ್ತೆ: ಷಡಕ್ಷರಿ

    ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ, ಮುಷ್ಕರ ನಡೆಯುತ್ತೆ: ಷಡಕ್ಷರಿ

    ಬೆಂಗಳೂರು: ನಮ್ಮನ್ನು ಅಮಾನತು ಮಾಡಲಿ, ಕೆಲಸದಿಂದ ವಜಾ ಮಾಡಲಿ, ಎಸ್ಮಾ ಜಾರಿಗೆ ತರಲಿ, ಆದರೆ ನಾವು ಯಾವುದಕ್ಕೂ ಹೆದರುವುದಿಲ್ಲ, ಮುಷ್ಕರ ನಡೆಯುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ (Shadakshari) ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರ (Government Employees) ಹೋರಾಟಕ್ಕೆ 40 ಸಂಘಟನೆಗಳ ಬೆಂಬಲ ನೀಡಿದೆ. ಬುಧವಾರದಿಂದ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ. ಸರ್ಕಾರದ ಯಾವುದೇ ಭರವಸೆಗಳಿಗೆ ಬಗ್ಗಲ್ಲ. ಅಧಿಕೃತ ಆದೇಶದೊಂದಿಗೆ ಬರದ ಹೊರತು ಪ್ರತಿಭಟನೆ ಕೈ ಬಿಡಲ್ಲ. ಸಿಎಂ ನಮ್ಮ ಜೊತೆ ಈಗ ಮಾತನಾಡಿಲ್ಲ. ಆದರೆ ಬಜೆಟ್ ವೇಳೆ ಪದಾಧಿಕಾರಿಗಳು ಹೋದಾಗ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು ಅಷ್ಟೇ. ಆ ಬಳಿಕ ಅವರು ನಮಗೆ ಮನವರಿಕೆ ಮಾಡಿಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮುಷ್ಕರ ಮಾಡುತ್ತೇವೆ ಎಂದು ತಿಳಿಸಿದರು.

    ಸಂಬಳದಲ್ಲಿ ರಾಜ್ಯ 30ನೇ ಸ್ಥಾನ: 2022ರಿಂದ ನೋಡುತ್ತಿದ್ದೇವೆ, ಯಾವುದೇ ಸಮಸ್ಯೆ ಬಗೆಹರಿಸಿಲ್ಲ. ಸಿಎಂ ಗಮನಕ್ಕೂ ತಂದೇ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮಿತಿ ರಚನೆ ಮಾಡಿ 4 ತಿಂಗಳಾಗಿದೆ. ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈವರೆಗೂ ಯಾವುದೇ ಕ್ರಮ ಆಗಿಲ್ಲ. ಎಲ್ಲಾ ರೀತಿ ಯೋಚನೆ ಮಾಡಿ ನಿರ್ಧಾರ ಕೈಗೊಂಡಿದ್ದೇವೆ. ಪಾಠ ಮಾಡಿದವರು ಪರೀಕ್ಷೆ ಮಾಡಲ್ವಾ? ಎಲ್ಲಾ ರೀತಿಯ ಕೆಲಸ ಆಗುತ್ತಿದೆ. ವೈದ್ಯರು ಕೂಡ ಜೊತೆಯಲ್ಲಿದ್ದಾರೆ. ಟ್ಯಾಕ್ಸ್ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಆದರೆ ಸಂಬಳದಲ್ಲಿ 30ನೇ ಸ್ಥಾನದಲ್ಲಿದ್ದೇವೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಯಾವುದೇ ಇತರೆ ಕೆಲಸ ಇರುವುದಿಲ್ಲ. ಸರ್ಕಾರದ ಬಗ್ಗೆ ನನಗೆ ಗೌರವ ಇದೆ. ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ಅವರು 7ನೇ ವೇತನ ಜಾರಿಗೆ ಸರ್ಕಾರವನ್ನು ಒತ್ತಾಯಿಸಿದ್ದರು ಎಂದು ಹೇಳಿದರು.

    ರಾಜ್ಯದಲ್ಲಿ 10 ಲಕ್ಷ ನೌಕರರು ಒಟ್ಟಾಗಿದ್ದೇವೆ. ಎಲ್ಲರೂ ನನಗೆ ಜವಾಬ್ದಾರಿ ನೀಡಿದ್ದಾರೆ. ಮುಷ್ಕರ ಮಾಡುವುದು ನಿಶ್ಚಿತವಾಗಿದ್ದು, ಎಲ್ಲಾ ಇಲಾಖೆಯ ಸಂಘಟನೆಯೂ ಒಟ್ಟಿಗೆ ಸೇರಿದ್ದೇವೆ. 27 ವರ್ಷದ ಬಳಿಕ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡುತ್ತಿದ್ದೇವೆ. ಎಸ್ಮಾ ಮಾಡಿದರೆ ಸ್ವಾಗತ ಮಾಡುತ್ತೇವೆ. ಶಿಕ್ಷಕರು, ಬಿಬಿಎಂಪಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಆದರೆ ನೌಕರರ ಮನಸ್ಥಿತಿ ವಿರುದ್ಧವಾಗಿ ನಾವು ಹೋಗಲ್ಲ. ಕಡಿಮೆ ವೇತನ ತೆಗೆದುಕೊಳ್ಳುತ್ತಿದ್ದೇವೆ. ಇದರಿಂದಾಗಿ ಯಾವ ತ್ಯಾಗಕ್ಕೂ ಕೂಡ ಸಿದ್ಧರಿದ್ದೇವೆ. ಅಮಾನತು, ವಜಾ ಸೇರಿದಂತೆ ಯಾವುದೇ ಕ್ರಮ ತೆಗೆದುಕೊಂಡರೂ ನಾವು ಸಿದ್ಧರಾಗಿದ್ದೇವೆ ಎಂದು ಎಚ್ಚರಿಕೆ ನೀಡಿದರು.

    ಉಪರಾಷ್ಟ್ರಪತಿ ಕಾರ್ಯಕ್ರಮಕ್ಕಷ್ಟೇ ಅವಕಾಶ: 12 ಸಾವಿರ ಕೋಟಿ ಹೆಚ್ಚುವರಿ ಹಣ ಬೇಕಾಗಲಿದೆ. ವೇತನ ಹೆಚ್ಚಳ ಉಳಿತಾಯದ ಹಣದ ಮೂಲಕ ಭರ್ತಿ ಮಾಡಬಹುದು. ನಾಗರಿಕರು ನಮ್ಮ ಹೋರಾಟಕ್ಕೆ ಸಹಕಾರ ನೀಡಬೇಕು ಎಂದ ಅವರು, ನಾಳೆ ಉಪರಾಷ್ಟ್ರಪತಿ ಕಾರ್ಯಕ್ರಮಕ್ಕೆ ಮಾತ್ರ ಚಾಲಕರನ್ನು ನೀಡುತ್ತೇವೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾವ ನೌಕರರು ಹೋಗಲ್ಲ. ಲಿಖಿತ ಭರವಸೆಗೆ ನಾವು ರಾಜಿಯಾಗುವುದಿಲ್ಲ. ಸರ್ಕಾರಿ ಆದೇಶ ಆದರೆ ಮಾತ್ರ ನಾವು ಕೆಲಸಕ್ಕೆ ಹಾಜರಾಗುತ್ತೇವೆ ಎಂದರು.

    40% ವೇತನ ಹೆಚ್ಚಳಕ್ಕೆ ಒತ್ತಾಯ: ಇತ್ತೀಚಿನ ಸರ್ಕಾರಿ ನೌಕರರ ಸಂಘದ ಸಮಸ್ಯೆ ನಾಗರಿಕರಿಗೆ ಗೊತ್ತಾಗಿದೆ. ಶೇ. 40ರಷ್ಟು ವೇತನ ಹೆಚ್ಚಳ ಆಗಬೇಕು. ಎನ್‍ಪಿಎಸ್, ಒಪಿಎಸ್ ಆಗಬೇಕು. ಯಾವುದೇ ಕಾರಣಕ್ಕೂ ಹೋರಾಟ ಹಿಂಪಡೆಯಲ್ಲ ಅಂತ ಹೇಳಿದ್ದೇವೆ. 5 ರಾಜ್ಯಗಳ ಮಾದರಿಯಂತೆ ಎನ್‍ಪಿಎಸ್ ರದ್ದು ಮಾಡಿ, ಒಪಿಎಸ್ ಮಾಡಿ ಅಂತಾ ಆ ಬಗ್ಗೆ ಸಿಎಂ ಮಾತೇ ಆಡುತ್ತಿಲ್ಲ. ಈ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಪಾನ್‌ಕಾರ್ಡ್ ಅಪ್ಡೇಟ್ ಮಾಡ್ಬೇಕು ಅಂತಾ ಕರೆ – ಲಿಂಕ್ ಒತ್ತಿದ ಪೊಲೀಸಪ್ಪನ 73 ಸಾವಿರ ಗುಳುಂ!

    ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತು ಬಳಕೆ ಬೆಲೆ ಹೆಚ್ಚಳ ಆಗಿದೆ. ಸರ್ಕಾರಿ ನೌಕರರ ಬಗ್ಗೆ ಮೃದು ಧೋರಣೆ ಇದೆಯಾ ಗೊತ್ತಿಲ್ಲ. ರಾಜ್ಯದ ಸರ್ಕಾರಿ ನೌಕರರಿಗೆ 12 ಸಾವಿರ ಕೋಟಿ ಖರ್ಚಾಗಲಿದೆ. ನಮಗೆ ಹೆಚ್ಚುವರಿ 16% ಪರ್ಸೆಂಟ್ ಮಾತ್ರ ವೆಚ್ಚ ಹೆಚ್ಚಾಗಲಿದೆ. ನಮಗೆ ಹೆಚ್ಚುವರಿ ಟ್ಯಾಕ್ಸ್ ಕಲೆಕ್ಟ್ ಮಾಡುವ ಜವಾಬ್ದಾರಿ ನೀಡಲಿ. ದುಡಿಯುವ ಸಮಯ ಹೆಚ್ಚಳ ಮಾಡಲಿ. ಎಲ್ಲದಕ್ಕೂ ನಾವು ಸಿದ್ಧರಾಗಿದ್ದೇವೆ ಎಂದು ಖಡಕ್ಕಾಗಿ ತಿಳಿಸಿದರು. ಇದನ್ನೂ ಓದಿ: ಹೆಚ್ಚುತ್ತಿರುವ ತಾಪಮಾನ, ಮಾರ್ಚ್‌ನಿಂದ ಮೇವರೆಗೂ ಹೈ ಅಲರ್ಟ್ 

  • 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಪ್ರತಿಭಟನೆ – ನಾಳೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ?

    7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಪ್ರತಿಭಟನೆ – ನಾಳೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ?

    ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರು (Government Employees) ಪ್ರತಿಭಟನೆಗೆ (Protest) ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳು ಹಾಗೂ ಶಾಲಾ, ಕಾಲೇಜುಗಳಿಗೂ (College) ಇದರ ಪರಿಣಾಮ ತಟ್ಟಲಿದೆ.

    ಕಳೆದ ಕೆಲವು ತಿಂಗಳಿನಿಂದ ಏಳನೇ ವೇತನ ಆಯೋಗ ಜಾರಿ ಹಾಗೂ ಎನ್‍ಪಿಎಸ್ ರದ್ದು ಮಾಡುವಂತೆ ಆಗ್ರಹಿಸಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆಯನ್ನು ತೀವ್ರವಾಗಿ ನಡೆಸಲು ನಾಳೆ ನಿರ್ಧರಿಸಿದ್ದಾರೆ. ಆದರೆ ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದರೇ ಮಾತ್ರ ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದಾರೆ. ನಾಳೆಯೊಳಗೆ ಸರ್ಕಾರ ಆದೇಶ ಹೊರಡಿಸದೇ ಇದ್ದರೆ 6 ಲಕ್ಷ ಉದ್ಯೋಗಿಗಳು ಪ್ರತಿಭಟನೆ ಮಾಡುವ ಸಾಧ್ಯತೆಯಿದೆ.

    ಈ ಪ್ರತಿಭಟನೆಗೆ ಸರ್ಕಾರಿ ಶಾಲಾ- ಕಾಲೇಜಿನ ಸರ್ಕಾರಿ ಉಪನ್ಯಾಸಕರು ಕೈಜೋಡಿಸಲಿದ್ದು, ಕೆಲಸಕ್ಕೆ ಗೈರಾಗಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ – ಕಾಲೇಜಿನಲ್ಲಿ ಪರೀಕ್ಷೆಗಳು (Exam) ಮುಂದೂಡಿಕೆ ಸಾಧ್ಯತೆಯಿದೆ. ಜೊತೆಗೆ ಸರ್ಕಾರಿ ಹಾಸ್ಟೆಲ್‍ನಲ್ಲಿಯೂ ಸಿಬ್ಬಂದಿ ಗೈರಾಗಲು ನಿರ್ಧಾರಿಸಿದ್ದಾರೆ. ಇದರ ಜೊತೆಗೆ ಆಸ್ತಿ ನೋಂದಣಿ, ವಾಹನ ನೋಂದಣಿ, ವಾಹನದ ಲೈಸೆನ್ಸ್ ವಿತರಣೆ ಎಲ್ಲವೂ ಬಂದ್ ಆಗಲಿದ್ದು, ಸಾರ್ವಜನಿಕರಿಗೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಆಗಲಿದೆ. ಕಂದಾಯ ಇಲಾಖೆ ಸಬ್ ರಿಜಿಸ್ಟರ್ ಕಚೇರಿ, ಗ್ರಾಮ ಲೆಕ್ಕಿಗ ಕಚೇರಿ ಎಲ್ಲವೂ ಬಂದ್ ಆಗಲಿದ್ದು, ಆಸ್ಪತ್ರೆಗಳಿಗೂ (Hospital) ಪ್ರತಿಭಟನೆ ಬಿಸಿ ತಟ್ಟಲಿದೆ.

    ಆಸ್ಪತ್ರೆ ಹೊರರೋಗಿ ವಿಭಾಗದಲ್ಲಿ ಕೆಲಸ ನಿರ್ವಹಿಸದೇ ಇರಲು ಸರ್ಕಾರಿ ಆರೋಗ್ಯ ನೌಕರರ ಸಂಘ ನಿರ್ಧರಿಸಿದ್ದಾರೆ. ಓಪಿಡಿ ಹೊರತುಪಡಿಸಿ ಉಳಿದಂತೆ, ಐಸಿಯು, ಎಮರ್ಜೆನ್ಸಿ ಸೇವೆಗಳು ಮಾತ್ರ ಲಭ್ಯವಾಗಲಿದೆ. ಅತಿ ತುರ್ತು ಸೇವೆಗಳು ಮಾತ್ರ ನಾಳೆಯಿಂದ ಲಭ್ಯವಾಗಿದೆ. ಸದ್ಯ ರಾಜ್ಯದಲ್ಲಿ 45 ಸಾವಿರಕ್ಕೂ ಹೆಚ್ಚು ಸರ್ಕಾರಿ ವೈದ್ಯಕೀಯ ಸಿಬ್ಬಂದಿಯಿದ್ದಾರೆ. ಏಕಕಾಲದಲ್ಲಿ ಓಪಿಡಿ ಬಂದ್ ಮಾಡಲು ನೌಕರರ ಸಂಘ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಉಗ್ರನನ್ನು ಹತ್ಯೆಗೈದ ಭದ್ರತಾ ಪಡೆ

    ನಾಳೆ ಯಾವೆಲ್ಲ ಇಲಾಖೆಗಳು ಬಂದ್?: ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಎಲ್ಲಾ ಕಚೇರಿಗಳು ಬಂದ್ ಆಗುವ ಸಾಧ್ಯತೆಯಿದೆ. ಬಿಬಿಎಂಪಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್‍ಗಳು, ತಾಲೂಕು ಕಚೇರಿ, ಜಿಲ್ಲಾ ಕಚೇರಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆಗಳಲ್ಲಿ ಸೇವೆಗಳಿರುವುದಿಲ್ಲ. ಇದನ್ನೂ ಓದಿ: ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್

  • ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

    ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

    ಬೆಂಗಳೂರು: ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ಇನ್ನೂ 15 ದಿನಗಳಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRP)  ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ಹೇಳಿದ್ದಾರೆ.

    ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಎನ್‌ಪಿಎಸ್ (ನೂತನ ಪಿಂಚಣಿ ಯೋಜನೆ) ವಿರೋಧಿಸಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಎಲ್ಲರೂ ಹೊಸ ವರ್ಷದ ಸಂಭ್ರಮ ಮಾಡುತ್ತಿದ್ದರೆ, ನೀವು ನಿಮ್ಮ ಕುಟುಂಬದ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಎನ್ನುವುದನ್ನು ತಿಳಿದೇ ನಾನಿಲ್ಲಿಗೆ ಬಂದಿದ್ದೇನೆ. ಸರ್ಕಾರಿ ನೌಕರರ ಪರಿಸ್ಥಿತಿ ನನಗೂ ಗೊತ್ತು. ನನ್ನ ತಂದೆ ಕೂಡ ಪೊಲೀಸ್ ಇಲಾಖೆಯಲ್ಲಿದ್ದು ನಿವೃತ್ತರಾಗಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲು- ಹರಿಯಾಣದ ಕ್ರೀಡಾ ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜೀನಾಮೆ

    ರಾಜ್ಯ ಸರ್ಕಾರ (Government of Karnataka) ಮನಸ್ಸು ಮಾಡಿದ್ರೆ ಯಾವುದೂ ದೊಡ್ಡ ವಿಚಾರ ಅಲ್ಲ. ತಮ್ಮೆಲ್ಲರ ಆಶೀರ್ವಾದದಿಂದ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ನಿಮ್ಮ ಹಾಗೆಯೇ ನಾನು ಕೂಡ ಹಿಂದೆ ಸರಿಯಲ್ಲ. ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ಹೆಜ್ಜೆ ಇಟ್ಟಿದ್ದೇನೆ. 15 ದಿನದಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ. ಪ್ರಣಾಳಿಕೆಯಲ್ಲಿ ನಿವೃತ್ತ ನೌಕರರ ವಿಚಾರವನ್ನೂ ಇಟ್ಟಿದ್ದೇನೆ. ಸರ್ಕಾರ ನಿಮ್ಮ ಹೋರಾಟಕ್ಕೆ ತಲೆ ಬಾಗಲೇಬೇಕು. ಯಾವುದೇ ಕಾರಣಕ್ಕೂ ಹಿಂದೆ ಸರಿಯಬೇಡಿ ಎಂದು ಕರೆ ನೀಡಿದ್ದಾರೆ.

    ರಾಜ್ಯ ಸರ್ಕಾರಿ ಎನ್‌ಪಿಎಸ್ (NPS) ನೌಕರರ ಸಂಘದ ಪ್ರತಿಭಟನೆ 14ನೇ ದಿನಕ್ಕೆ ಕಾಲಿಟ್ಟಿದೆ. ಹೊಸ ಪಿಂಚಿಣಿ ಯೋಜನೆ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಸರ್ಕಾರಿ ನೌಕರರಿಗೆ ವರ್ಕ್ ಫ್ರಮ್ ಹೋಂ – ಖಾಸಗಿ ಕಂಪನಿಗಳು ಅಳವಡಿಸಿ: ಗೋಪಾಲ್ ರೈ

    ದೆಹಲಿಯಲ್ಲಿ ಸರ್ಕಾರಿ ನೌಕರರಿಗೆ ವರ್ಕ್ ಫ್ರಮ್ ಹೋಂ – ಖಾಸಗಿ ಕಂಪನಿಗಳು ಅಳವಡಿಸಿ: ಗೋಪಾಲ್ ರೈ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ದಿನದಿಂದ ದಿನಕ್ಕೆ ವಾಯುಮಾಲಿನ್ಯ ಮಿತಿ ಮೀರುತ್ತಿದೆ. ಹಾಗಾಗಿ ಸರ್ಕಾರಿ ಕಚೇರಿಯಲ್ಲಿ 50% ನೌಕರರು ಮಾತ್ರ ಕೆಲಸ ನಿರ್ವಹಿಸಿ, ಉಳಿದ 50% ನೌಕರರು ವರ್ಕ್ ಫ್ರಮ್ ಹೋಂ (Work From Home) ಮಾಡುವಂತೆ ದೆಹಲಿ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

    ದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಸರ್ಕಾರಿ ನೌಕರರು 50% ರಷ್ಟು ಕಚೇರಿಗೆ ಆಗಮಿಸಿ ಉಳಿದ 50% ನೌಕರರು ಮನೆಯಿಂದ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದೇನೆ. ಈ ನಿಯಮವನ್ನು ಖಾಸಗಿ ಕಂಪನಿಗಳು ಕೂಡ ಅಳವಡಿಕೆ ಮಾಡಿಕೊಂಡಲ್ಲಿ ಸಹಕಾರವಾಗಲಿದೆ ಎಂದು ಸಲಹೆ ನೀಡಿದ್ದಾರೆ. ಇದರೊಂದಿಗೆ ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳು ಮತ್ತು ಡೀಸೆಲ್, ಲಘು-ಮಧ್ಯಮ ವಾಹನಗಳ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮಿತಿ ಮೀರುತ್ತಿರುವ ವಾಯು ಮಾಲಿನ್ಯ- ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಮಸ್ಯೆ

    ನಿರ್ಬಂಧ:
    ಕಟ್ಟಡ ನಿರ್ಮಾಣಗಳು, ಥರ್ಮಲ್ ಪ್ಲಾಂಟ್‍ಗಳನ್ನು ಮುಚ್ಚಲಾಗಿದೆ. ಡೀಸೆಲ್ ಲಘು-ಮಧ್ಯಮ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಸರ್ಕಾರಿ ನೌಕರರಿಗೆ 50% ವರ್ಕ್ ಫ್ರಮ್ ಹೋಂ. ಖಾಸಗಿ ಸಂಸ್ಥೆಗಳಿಗೂ ವರ್ಕ್ ಫ್ರಮ್ ಹೋಂಗೆ ಸಲಹೆ. ಶಾಲೆಗಳನ್ನು ಮುಚ್ಚಲಾಗಿದೆ. ಹೊರಾಂಗಣ, ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ.

    5ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಹೊರಾಂಗಣ ಮತ್ತು ಕ್ರೀಡಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ವೃದ್ಧರ ಆರೋಗ್ಯದ ಬಗ್ಗೆಯೂ ಸರ್ಕಾರ ಕಾಳಜಿ ವಹಿಸುತ್ತಿದೆ. ದೆಹಲಿಯಲ್ಲಿ ಆಡ್‌, ಇವನ್‌ (ಸಮ ಮತ್ತು ಬೆಸ ಸಂಖ್ಯೆ ವಾಹನಗಳ ಓಡಾಟ) ಮತ್ತೆ ಜಾರಿ ಮಾಡುವ ಬಗ್ಗೆ ಚಿಂತನೆ ನಡೆದಿದ್ದು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ ಪ್ರಮಾಣ – ಸಮ, ಬೆಸ ವ್ಯವಸ್ಥೆ ಜಾರಿಗೆ ಚಿಂತನೆ

    ಆಡ್‌, ಇವನ್‌ ಎಂದರೇನು?
    ಸಮ ಮತ್ತು ಬೆಸ ಸಂಖ್ಯೆ ವಾಹನಗಳ ಓಡಾಟ ಅಂದರೆ ಒಂದು ದಿನ 1, 3, 5, 7, 9ರಲ್ಲಿ ಕೊನೆಯಾಗುವ ನಂಬರ್‌, ಇನ್ನೊಂದು ದಿನ 2, 4, 6, 8ರಲ್ಲಿ ಕೊನೆಯಾಗುವ ನಂಬರ್‌ಗಳ ವಾಹನಗಳು ರಸ್ತೆಗೆ ಇಳಿಯಲು ಅನುಮತಿ ನೀಡುವ ವ್ಯವಸ್ಥೆ.

    Live Tv
    [brid partner=56869869 player=32851 video=960834 autoplay=true]

  • ಪಡಿತರ ಚೀಟಿ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ

    ಪಡಿತರ ಚೀಟಿ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ

    ಧಾರವಾಡ: ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಆದ್ರೆ ಅಂತಹ ಸರ್ಕಾರಿ ನೌಕರರೇ (Government Employees) ಸರ್ಕಾರಕ್ಕೆ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.

    ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ನೀಡುತ್ತಿದೆ. ಆದರೆ ಸರ್ಕಾರಿ ಕೆಲಸವಿದ್ದವರೂ ಬಡವರಿಗೆ ನೀಡುವ ಸೌಲಭ್ಯವನ್ನು ಪಡೆದು ಮೋಸ ಮಾಡಿದ್ದಾರೆ. ಅಂತಹವರಿಗೆ ಬುದ್ಧಿ ಕಲಿಸಲು ಸರ್ಕಾರ ದಂಡದ ಬಿಸಿ ಮುಟ್ಟಿಸಿದೆ. ಕೂಡಲೇ ಎಚ್ಚೆತ್ತ ಆಹಾರ ಇಲಾಖೆ (Food Department), ಸುಳ್ಳು ಮಾಹಿತಿ ನೀಡಿ ಪಡಿತರ (Ration Card) ದುರ್ಬಳಕೆ ಮಾಡಿಕೊಂಡ 339 ಸರ್ಕಾರಿ ನೌಕಕರರಿಂದ 36.73 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ. ಇದನ್ನೂ ಓದಿ: ವ್ಯಕ್ತಿ ಹೊಟ್ಟೆಯಲ್ಲಿತ್ತು 62 ಚಮಚ – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

    ಮತ್ತೊಂದು ಕಡೆ ಆದಾಯ ತೆರಿಗೆ ಪಾವತಿಸುತ್ತಿದ್ದರೂ ಬಿಪಿಎಲ್ ಕಾರ್ಡ್ ಹೊಂದಿರುವವರ ಮೇಲೆ ಕ್ರಮಕ್ಕೆ ಮುಂದಾಗಿದೆ. 1945ರ ಕಾಯ್ದೆಯ ಅನ್ವಯ ಆದಾಯ ತೆರಿಗೆ ಪಾವತಿಸುವವರ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದೆ. ಜೊತೆಗೆ ಸ್ವಂತ ಕಾರು ಇದ್ದವರ ಬಗ್ಗೆ ಆರ್‌ಟಿಒನಿಂದ ಮಾಹಿತಿ ಪಡೆದು ಅಂತಹ ಕಾರ್ಡ್‌ಗಳನ್ನು ಅಮಾನ್ಯ ಮಾಡಲು ಮುಂದಾಗಿದ್ದಾರೆ. ಸದ್ಯ ಅಧಿಕಾರಿಗಳು, 4 ಅಂತಸ್ತಿನ ಮನೆ ಇದ್ದವರು ಹಾಗೂ 10 ರಿಂದ 12 ಎಕರೆ ನೀರಾವರಿ ಜಮೀನು ಇದ್ದವರು ಕೂಡಾ ಆಹಾರ ಇಲಾಖೆ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ. ಇಂಥವರನ್ನ ಮಟ್ಟಹಾಕುವಂತೆಯೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಎಪಿ ಅಧಿಕಾರಕ್ಕೇರಿದ ರಾಜ್ಯಗಳಲ್ಲಿ ಗುತ್ತಿಗೆ ನೌಕರರ ಹುದ್ದೆ ಖಾಯಂ: ಕೇಜ್ರಿವಾಲ್

    ಎಎಪಿ ಅಧಿಕಾರಕ್ಕೇರಿದ ರಾಜ್ಯಗಳಲ್ಲಿ ಗುತ್ತಿಗೆ ನೌಕರರ ಹುದ್ದೆ ಖಾಯಂ: ಕೇಜ್ರಿವಾಲ್

    ನವದೆಹಲಿ: ಎಎಪಿ(AAP) ನೇತೃತ್ವ ಪಂಜಾಬ್ ಸರ್ಕಾರ ರಾಜ್ಯದ 8,736 ಶಿಕ್ಷಕರನ್ನು ಖಾಯಂಗೊಳಿಸಿರುವುದಕ್ಕೆ ದೆಹಲಿ(Delhi) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ಎಲ್ಲಾ ರಾಜ್ಯ ಸರ್ಕಾರಗಳೂ ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿ ಮನವಿ ಮಾಡಿದ್ದಾರೆ.

    ರಾಷ್ಟ್ರ ರಾಜಧಾನಿಯಲ್ಲಿ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ದೆಹಲಿ ಸರ್ಕಾರ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದೆ. ಆದರೆ ಕೇಂದ್ರ ಅದನ್ನು ಅಂಗೀಕರಿಸಿಲ್ಲ. ಆದರೆ ಎಎಪಿ ಅಧಿಕಾರಕ್ಕೆ ಬರುವ ಎಲ್ಲಾ ರಾಜ್ಯಗಳಲ್ಲೂ ಗುತ್ತಿಗೆ ಸರ್ಕಾರಿ ನೌಕರರನ್ನು ಖಾಯಂಗೊಳಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ ಇರುವವರೆಗೂ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಬಿಡಲ್ಲ, ಇದು ನಮ್ಮ ಶಪಥ – ಬಿಎಸ್‌ವೈ

    ಅತಿಥಿ ಮತ್ತು ತಾತ್ಕಾಲಿಕ ಶಿಕ್ಷಕರ ಶ್ರಮದಿಂದ ದೆಹಲಿಯಲ್ಲಿ ಶಿಕ್ಷಣ ಕ್ರಾಂತಿಯಾಗಿದೆ. ನಮ್ಮ ಸಾಮಾನ್ಯ ಆಸ್ಪತ್ರೆಯ ಸಿಬ್ಬಂದಿ ದೆಹಲಿಯ ಆಸ್ಪತ್ರೆಗಳು ಮತ್ತು ಸ್ಥಳೀಯ ಚಿಕಿತ್ಸಾಲಯಗಳಲ್ಲಿ ಅದ್ಭುತವಾದ ಕೆಲಸಗಳನ್ನೇ ಮಾಡಿದ್ದಾರೆ. ದೆಹಲಿಯ ಈ ತಾತ್ಕಾಲಿಕ ಶಿಕ್ಷಕರು ಮತ್ತು ವೈದ್ಯರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕ್ರಾಂತಿಯನ್ನು ಮಾಡಲು ನಮಗೆ ಸಹಾಯ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ಸಿನವರಿಗೆ ತಾಕತ್ ಇದ್ದರೆ, ಧಮ್ ಇದ್ದರೇ ನಮ್ಮನ್ನು ತಡೆಯಲಿ: ಬೊಮ್ಮಾಯಿ ಸವಾಲು

    ಒಪ್ಪಂದದ ಉದ್ಯೋಗ ವ್ಯವಸ್ಥೆ ಅತ್ಯಂತ ಶೋಚನೀಯ. ನಮ್ಮಲ್ಲಿ ಆರ್ಥಿಕತೆ ಬೆಳೆಯುತ್ತಿದ್ದರೂ ಸರ್ಕಾರಿ ಉದ್ಯೋಗಗಳನ್ನು ರಾಜ್ಯ ಹಾಗೂ ಕೇಂದ್ರಗಳು ಏಕೆ ಕಡಿತಗೊಳಿಸುತ್ತಿವೆ? ಎಲ್ಲಾ ರಾಜ್ಯ ಸರ್ಕಾರಗಳು ತಮ್ಮ ತಾತ್ಕಾಲಿಕ ಉದ್ಯೋಗಿಗಳನ್ನು ಖಾಯಂಗೊಳಿಸುವಂತೆ ನಾನು ಒತ್ತಾಯಿಸುತ್ತೇನೆ. ಆಮ್ ಆದ್ಮಿ ಪಕ್ಷದ ಕಡೆಯಿಂದ, ನಮ್ಮ ಸರ್ಕಾರ ರಚನೆಯಾದಲ್ಲೆಲ್ಲಾ ನಾವು ತಾತ್ಕಾಲಿಕ ಉದ್ಯೋಗಿಗಳನ್ನು ಖಾಯಂಗೊಳಿಸುತ್ತೇವೆ ಎಂದು ಕೇಜ್ರಿವಾಲ್ ಭರವಸೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಹೆರಿಗೆ ಸಮಯದಲ್ಲಿ ಮಗು ಸಾವನ್ನಪ್ಪಿದರೆ ಸರ್ಕಾರಿ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ

    ಹೆರಿಗೆ ಸಮಯದಲ್ಲಿ ಮಗು ಸಾವನ್ನಪ್ಪಿದರೆ ಸರ್ಕಾರಿ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ

    ನವದೆಹಲಿ: ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ನಂತರ ಮಗು ಮರಣ ಹೊಂದಿದರೆ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ಕಾಲ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ)  ಆದೇಶ ಹೊರಡಿಸಿದೆ.

    ಹೆರಿಗೆಯ ನಂತರ ಮಗುವಿನ ಮರಣದ ಸಂದರ್ಭದಲ್ಲಿ ರಜೆ ಮಾತೃತ್ವ ರಜೆ ಮಂಜೂರು ಮಾಡುವ ಕುರಿತಾಗಿ ಹಲವು ಪ್ರಶ್ನೆಗಳು ಸಿಬ್ಬಂದಿಗಳಿಂದ ಬಂದಿತ್ತು. ಹಾಗಾಗಿ ಸರ್ಕಾರಿ ಮಹಿಳಾ ನೌಕರಿಗೆ ಅನ್ವಯವಾಗುವಂತೆ ಮಗುವಿನ ಮರಣದ ಕಾರಣದಿಂದ ಉಂಟಾಗುವ ಸಂಭಾವ್ಯ ಭಾವನಾತ್ಮಕ ಆಘಾತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಡಿಒಪಿಟಿ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: KGF ಸಿನಿಮಾ ಸ್ಫೂರ್ತಿ – ದಿಢೀರ್ ಫೇಮಸ್ ಆಗಲು ನಾಲ್ವರನ್ನು ಚಚ್ಚಿಕೊಂದ ಯುವಕ

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ವಿಶೇಷ ಹೆರಿಗೆ ರಜೆಯ ಪ್ರಯೋಜನವು ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳಾ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ದೊರಕುತ್ತದೆ. ಇದಲ್ಲದೆ ಅಧಿಕೃತ ಆಸ್ಪತ್ರೆಯಲ್ಲಿ ಮಗುವಿನ ಹೆರಿಗೆಗೆ ಮಾತ್ರ ರಜೆ ಸ್ವೀಕಾರಾರ್ಹವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

    ಈ ಆದೇಶಗಳು ಕೇಂದ್ರ ನಾಗರಿಕ ಸೇವೆಗಳ ರಜೆ ನಿಯಮಗಳು 1972ರ ನಿಯಮ 2ರ ಪ್ರಕಾರ ಭಾರತದ ಒಕ್ಕೂಟದ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಾಗರಿಕ ಸೇವೆಗಳು ಮತ್ತು ಹುದ್ದೆಗಳಿಗೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಈ ಆದೇಶ ಬಿಡುಗಡೆಯ ದಿನಾಂಕದಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಅಂತರ್ಜಾತಿ ವಿವಾಹ – ದಲಿತನೆಂದು ಅಳಿಯನನ್ನೇ ಕೊಂದ ಅತ್ತೆ

    Live Tv
    [brid partner=56869869 player=32851 video=960834 autoplay=true]