Tag: Government of India

  • 2007ರ ನಂತ್ರ ಇದೇ ಮೊದಲ ಬಾರಿಗೆ BSNLಗೆ ಭಾರೀ ಲಾಭ

    2007ರ ನಂತ್ರ ಇದೇ ಮೊದಲ ಬಾರಿಗೆ BSNLಗೆ ಭಾರೀ ಲಾಭ

    – ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ 262 ಕೋಟಿ ರೂ. ಗಳಿಕೆ

    ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್‌ ಸಂಚಾರ್‌ ನಿಗಮ್‌ ಲಿಮಿಟೆಡ್‌ (BSNL) 2007ರ ಬಳಿಕ ಇದೇ ಮೊದಲ ಬಾರಿಗೆ ಲಾಭದತ್ತ ಮರಳಿದೆ. ಜಿಯೋ, ಏರ್‌ಟೆಲ್‌ ಸೇವೆಗಳಲ್ಲಿ ಏರಿಕೆ ಕಂಡ ಬಳಿಕ ಗ್ರಾಹಕರು ಬಿಎಸ್‌ಎನ್‌ಎಲ್‌ನತ್ತ ಮರಳುತ್ತಿದ್ದು, ಲಾಭ ಗಳಿಕೆಗೆ ಕಾರಣವಾಗಿದೆ.

    ಹೌದು. 2025ರ ಆರ್ಥಿಕ ವರ್ಷದ 3ನೇ ತ್ರೈಮಾಸಿಕದಲ್ಲಿ ಬರೋಬ್ಬರಿ 262 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆಕ್ರಮಣಕಾರಿ ನೆಟ್‌ವರ್ಕ್ ವಿಸ್ತರಣೆ ಮತ್ತು ಗ್ರಾಹಕ ಸೇರ್ಪಡೆಯಂತಹ ಕ್ರಮಗಳು ಲಾಭ ಗಳಿಕೆಗೆ ಕಾರಣವಾಗಿದೆ. ಇದರಿಂದ ಅರ್ಥಿಕ ವರ್ಷದ ಅಂತ್ಯದ ವೇಳೆಗೆ ಆದಾಯ ಬೆಳವಣಿಗೆಯು ಶೇ.20ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಸುಧಾರಣೆಯಾಗಲಿದೆ ಎಂದು ಸಂಸ್ಥೆ ಹೇಳಿದೆ.

    ಈ ಕುರಿತು ಬಿಎಸ್‌ಎನ್‌ಎಲ್‌ CMD ಎ. ರಾಬರ್ಟ್ J. ರವಿ, ಇಂತಹ ಪ್ರಯತ್ನಗಳೊಂದಿಗೆ ಅರ್ಥಿಕ ವರ್ಷಾಂತ್ಯದ ವೇಳೆಗೆ ಆದಾಯ ಬೆಳವಣಿಗೆ ಶೇ.20ಕ್ಕಿಂತ ಹೆಚ್ಚು ಸುಧಾರಿಸಲಿದೆ ಎಂದು ನಾವು ನಿರೀಕ್ಷಿಸುತ್ತೇವೆ. ಅಲ್ಲದೇ ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್‌ ತನ್ನ ಹಣಕಾಸಿನ ವೆಚ್ಚ ಮತ್ತು ಒಟ್ಟಾರೆ ವೆಚ್ಚವನ್ನು ಕಡಿಮೆ ಮಾಡಿದೆ. ಹೀಗಾಗಿ ಕಳೆದ ವರ್ಷಕ್ಕೆ ಹೋಲಿಸಿದ್ರೆ ಪ್ರಸಕ್ತ ವರ್ಷದಲ್ಲಿ 1,800 ಕೋಟಿ ರೂ. ನಷ್ಟ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

    BSNLನ ಮೊಬಿಲಿಟಿ ಸೇವೆಗಳ ಆದಾಯವು ವರ್ಷದಿಂದ ವರ್ಷಕ್ಕೆ 15% ರಷ್ಟು ಹೆಚ್ಚಾಗಿದೆ. ಆದ್ರೆ ಫೈಬರ್-ಟು-ದಿ-ಹೋಮ್ (FTTH) ಮತ್ತು ಲೀಸ್ಡ್ ಲೈನ್ ಸೇವೆಗಳ ಆದಾಯವು ಅನುಕ್ರಮವಾಗಿ 18% ಮತ್ತು 14% ವರ್ಷದಿಂದ ವರ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

    ಮುಂದುವರಿದು ಮಾತನಾಡಿರುವ ಜೆ. ರವಿ, ನಮ್ಮ ಗ್ರಾಹಕರ ಅನುಭವವನ್ನು ಹೆಚ್ಚಿಸಲು, ಬಿಎಸ್ಎನ್ಎಲ್ ಇತ್ತೀಚೆಗೆ ರಾಷ್ಟ್ರೀಯ ವೈಫೈ ರೋಮಿಂಗ್, ಎಲ್ಲಾ ಮೊಬೈಲ್ ಗ್ರಾಹಕರಿಗೆ ಉಚಿತ ಮನರಂಜನೆ ನೀಡುವ ಬಿಐಟಿವಿ ಮತ್ತು ಎಲ್ಲಾ ಎಫ್‌ಟಿಟಿಎಚ್ ಗ್ರಾಹಕರಿಗೆ ಐಎಫ್‌ಟಿವಿ ಮುಂತಾದ ನಾವೀನ್ಯತೆಗಳನ್ನು ಪರಿಚಯಿಸಿದೆ. ಸೇವೆಯ ಗುಣಮಟ್ಟ ಮತ್ತು ಸೇವಾ ಭರವಸೆಯ ಮೇಲಿನ ನಮ್ಮ ನಿರಂತರ ಗಮನವು ಗ್ರಾಹಕರ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ. ಭಾರತದಲ್ಲಿ ಪ್ರಮುಖ ಟೆಲಿಕಾಂ ಸೇವಾ ಪೂರೈಕೆದಾರರಾಗಿ ಬಿಎಸ್‌ಎನ್‌ಎಲ್‌ನ ಸ್ಥಾನವನ್ನು ಬಲಪಡಿಸಿದೆ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರವು ಟೆಲಿಕಾಂ ಕಂಪನಿಗೆ ಸಾಕಷ್ಟು ಬೆಂಬಲ ನೀಡಿದೆ. 2023ರಲ್ಲಿ ಕೇಂದ್ರ ಸರ್ಕಾರ 89,000 ಕೋಟಿ ರೂ.ಗಳ ಪ್ಯಾಕೇಜ್‌ಗೆ ಅನುಮೋದನೆ ನೀಡಿತ್ತು. ಅದಕ್ಕೂ ಮುನ್ನ 2021ರಲ್ಲಿ 1.64 ಲಕ್ಷ ಕೋಟಿ ರೂ. ಹಾಗೂ 2019ರಲ್ಲಿ 69,000 ಕೋಟಿ ರೂ. ಗಳ ಪ್ಯಾಕೇಜ್‌ ಅನ್ನು ಘೋಷಣೆ ಮಾಡಿತ್ತು ಎಂಬುದು ಗಮನಾರ್ಹ.

  • ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    – ಭಾರತ-ಪಾಕ್‌ ಇರೋದ್ರಿಂದಲೇ ಐಸಿಸಿ ಅಸ್ತಿತ್ವದಲ್ಲಿದೆ ಎಂದ ರಶೀದ್ ಲತೀಫ್

    ಇಸ್ಲಾಮಾಬಾದ್‌: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯಲ್ಲಿ‌ (hampions trophy) ಪಾಲ್ಗೊಳ್ಳುವ ವಿಚಾರದಲ್ಲಿ ಭಾರತ-ಪಾಕಿಸ್ತಾನದ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಈಗಾಗಲೇ ಪಾಕ್‌ಗೆ ಪ್ರಯಾಣಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ, ಪಿಸಿಬಿ ಮಾತ್ರ ಬರಲೇಬೇಕೆಂದು ಪಟ್ಟು ಹಿಡಿದಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಮಹತ್ವದ ಹೇಳಿಕೆಯೊಂದನ್ನು ನೀಡಿದೆ.

    ಪಾಕ್‌ ತಂಡದ ಮಾಜಿ ನಾಯಕ ರಶೀದ್ ಲತೀಫ್, ಭಾರತ ಈ ಬಾರಿ ಪಾಕಿಸ್ತಾನಕ್ಕೆ ಹೋಗದಿದ್ದರೆ, ಐಸಿಸಿ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ದೊಡ್ಡ ಹೆಜ್ಜೆಯನ್ನು ಪಿಸಿಬಿ ತೆಗೆದುಕೊಳ್ಳುತ್ತದೆ ಹೇಳಿದ್ದಾರೆ. ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಇದು ದ್ವಿಪಕ್ಷೀಯ ಸರಣಿ ಅಥವಾ ಏಷ್ಯಾ ಕಪ್ ಆಗಿದ್ದರೆ, ಭಾರತವು ಆಡಬೇಕೆ ಅಥವಾ ಬೇಡವೇ ಎಂದು ತಂಡಗಳನ್ನು ಕೇಳಬಹುದಿತ್ತು. ಇದು ದ್ವಿಪಕ್ಷೀಯ ಪಂದ್ಯವಾಗಿದ್ದರೆ, ಪಂದ್ಯವನ್ನು ರದ್ದು ಮಾಡಬಹುದಿತ್ತು. ಆದ್ರೆ ನೀವು ಈಗಾಗಲೇ ಸಹಿ ಮಾಡಿರುವುದರಿಂದ ಐಸಿಸಿ ಒಪ್ಪಂದಗಳನ್ನು ನಿರಾಕರಿಸಲಾಗುವುದಿಲ್ಲ. ಭಾರತವು ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: WPL 2025 | 3ನೇ ಆವೃತ್ತಿಗೆ ಭರ್ಜರಿ ತಯಾರಿ – ರೀಟೆನ್‌ ಪಟ್ಟಿ ರಿಲೀಸ್‌

    ಈಗಾಗಲೇ ಎಲ್ಲಾ ಪ್ರಸಾರಕರು ಮತ್ತು ಪ್ರಾಯೋಜಕರು 2024-31ರ ಅವಧಿಗೆ ಸಹಿ ಮಾಡಿದ್ದಾರೆ. ಭಾರತ ತಂಡ ಭಾಗವಹಿಸಲು ನಿರಾಕರಿಸಿದ್ರೆ ಬಲವಾದ ಕಾರಣ ಇರಬೇಕು. ಬಿಸಿಸಿಐ ಭದ್ರತೆಯ ಕಾರಣಗಳನ್ನು ನೀಡಿ ಟೂರ್ನಿ ನಿರಾಕರಿಸಲು ಮುಂದಾಗುತ್ತಿದೆ. ಹಾಗಾದರೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ತಂಡಗಳು ಪಾಕಿಸ್ತಾನಕ್ಕೆ ಬರುತ್ತಿಲ್ಲವೇ? ಭಾರತವು ಪಾಕಿಸ್ತಾನಕ್ಕೆ ಹೋಗದಿದ್ದರೆ, ಪಾಕಿಸ್ತಾನವು ಐಸಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಮುಂದುವರಿದು ಪಾಕಿಸ್ತಾನ ಮತ್ತು ಭಾರತ ಇರುವುದರಿಂದಲೇ ಐಸಿಸಿ ಅಸ್ತಿತ್ವದಲ್ಲಿದೆ. ಭಾರತದಂತೆ ಪಾಕಿಸ್ತಾನ ಸರ್ಕಾರವೂ ನಾವು ಆಡುವುದಿಲ್ಲ ಎಂದು ಹೇಳಿದರೆ, ಯಾರೂ ಕೂಡ ಪಂದ್ಯವನ್ನು ವೀಕ್ಷಿಸುವುದಿಲ್ಲ. ಬಿಸಿಸಿಐನಿಂದಲೂ ಯಾವುದೇ ಪ್ರಯೋಜನ ಆಗೋದಿಲ್ಲ ಎಂದು ಕೆಣಕಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

    ಚಾಂಪಿಯನ್ಸ್ ಟ್ರೋಫಿಯಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಹಾಲಿ ಚಾಂಪಿಯನ್ ಪಾಕಿಸ್ತಾನ ಸೇರಿದಂತೆ ತಲಾ 4 ತಂಡಗಳ ಎರಡು ಗುಂಪುಗಳನ್ನು ಒಳಗೊಂಡಿವೆ. ಈಗಾಗಲೇ ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ನಿಗದಿಯಾಗಿದ್ದು, ಪಾಕಿಸ್ತಾನದ ಮುಲ್ತಾನ್‌, ರಾವಲ್ಪಿಂಡಿ ಹಾಗೂ ಲಾಹೋರ್‌ ಕ್ರೀಡಾಂಗಣಗಳು ಆತಿಥ್ಯ ವಹಿಸಲು ಸಜ್ಜಾಗಿವೆ.

    ಬಿಸಿಸಿಐ ಷರತ್ತು ಏನು?
    ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 6,6,6,6,6,W,6 – ಒಂದೇ ಓವರ್‌ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ!

  • ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

    ಮುಂಬೈ: 2025ರ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ಪುರುಷರ ಕ್ರಿಕೆಟ್‌ ತಂಡ (Team India) ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಹೊಸ ಷರತ್ತು ಮುಂದಿಟ್ಟಿದೆ.

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಈಗಾಗಲೇ ವೇಳಾಪಟ್ಟಿ ಸಹ ನಿಗದಿಯಾಗಿದ್ದು, ಭಾರತದ ಪಂದ್ಯಗಳಿಗೆ ಲಾಹೋರ್‌ ಕ್ರೀಡಾಂಗಣ ಆತಿಥ್ಯ ವಹಿಸಲು ಸಜ್ಜಾಗಿವೆ. ಈ ಸಂಬಂಧ ಬಿಸಿಸಿಐ ಪ್ರತಿಕ್ರಿಯೆ ನೀಡಿದ್ದು, ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಆದ್ರೆ ವರದಿಗಳನ್ನು ತಳ್ಳಿಹಾಕಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪಾಕಿಸ್ತಾನ ನೆಲದಲ್ಲೇ ಭಾರತ ತನ್ನ ಪಂದ್ಯಗಳನ್ನಾಡಲಿದೆ ಎಂದು ಹೇಳಿಕೊಂಡಿದೆ.

    ಪಾಕ್‌ ಆಶ್ವಾಸನೆ ಏನು?
    ಭಾರತಕ್ಕೆ ಭದ್ರತೆಯ ಕೊರತೆ ಇದೆ ಅನ್ನಿಸಿದ್ರೆ, ಲಾಹೋರ್‌ನಲ್ಲಿ ಪಂದ್ಯಗಳನ್ನು ಆಡಿದ ಬಳಿಕ ಅದೇ ದಿನ ಭಾರತಕ್ಕೆ ಪ್ರಯಾಣಿಸಬಹುದು. ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾಡಲಿದೆ. ಇದರೊಂದಿಗೆ ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ವಿಶೇಷ ಕೋಟಾ, ವೀಸಾ ವ್ಯವಸ್ಥೆ ಮಾಡುತ್ತೇವೆ ಎಂದು ಪಿಸಿಬಿ ಅಧ್ಯಕ್ಷ ನಖ್ವಿ ಹೇಳಿದ್ದಾರೆ.

    ಹೈಬ್ರಿಡ್‌ ಮಾದರಿಯಲ್ಲೇ ಟೂರ್ನಿ?
    ಕಳೆದ ವರ್ಷ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸುವುದು ಬಹುತೇಕ ಖಚಿತವಾಗಿದೆ. ಆದ್ರೆ ಈ ಬಗ್ಗೆ ಪಿಸಿಬಿ ಹಾಗೂ ಐಸಿಸಿ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

    ಪಾಕ್‌ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡ ಪಾಲ್ಗೊಂಡಿತ್ತು.

  • ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಇಸ್ಲಾಮಾಬಾದ್‌: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಹೇಳಿದೆ. ಭಾರತ ಸರ್ಕಾರ ಭದ್ರತಾ ಕಾರಣಗಳಿಗಾಗಿ ಭಾರತ ತಂಡವನ್ನು ಕಳುಹಿಸಲು ಅನುಮತಿ ನಿರಾಕರಿಸಿದ್ದರೆ. ಬಿಸಿಸಿಐ (BCCI) ಲಿಖಿತ ರೂಪದಲ್ಲಿ ಬರೆದುಕೊಡಬೇಕು ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಒತ್ತಾಯಿಸಿದೆ.

    ಭಾರತ ಕ್ರಿಕೆಟ್‌ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ಸರ್ಕಾರ ಅನುಮತಿ ನಿರಾಕರಿಸಿದರೆ, ಅದನ್ನು ಲಿಖಿತ ರೂಪದಲ್ಲಿ ಬರೆದುಕೊಡಬೇಕು. ಜೊತೆಗೆ ಆ ಪತ್ರವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ (ಐಸಿಸಿ) ಸಲ್ಲಿಸಬೇಕು. ಈಗಾಗಲೇ ಕರಡು ವೇಳಾಪಟ್ಟಿ ಸಿದ್ಧಗೊಂಡಿರುವುದರಿಂದ ಟೂರ್ನಿ ಪ್ರಾರಂಭವಾಗುವ 5-6 ತಿಂಗಳಿಗೆ ಮುಂಚಿತವಾಗಿಯೇ ಐಸಿಸಿಗೆ ತಿಳಿಸಬೇಕು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಹೇಳಿದೆ. ಇದನ್ನೂ ಓದಿ: ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಯಾದ್ರೆ ಮಾರ್ಚ್‌ 10 ರಂದು ಮೀಸಲು ದಿನ ಇರಲಿದೆ. ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಇದನ್ನೂ ಓದಿ: IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    ಈಗಾಗಲೇ ಪಿಸಿಬಿ ತನ್ನ ಕರಡು ವೇಳಾಪಟ್ಟಿಯನ್ನ ಐಸಿಸಿಗೆ ಸಲ್ಲಿಸಿದೆ. ಸಂಭವನೀಯ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ಸೇರಿದಂತೆ ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ನಿಗದಿಪಡಿಸಲಾಗಿದೆ. ಪಾಕಿಸ್ತಾನದ ಹೊರಗೆ ಕೆಲವು ಪಂದ್ಯಗಳನ್ನು ಆಡುವ ಅಗತ್ಯವಿದ್ದಲ್ಲಿ ಐಸಿಸಿ ಮ್ಯಾನೇಜ್‌ಮೆಂಟ್ ಹೆಚ್ಚುವರಿ ವೆಚ್ಚವನ್ನು ಶಿಫಾರಸು ಮಾಡಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Paris Olympics | ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಿ

  • Champions Trophy 2025: ಭಾರತ ಕ್ರಿಕೆಟ್‌ ತಂಡವು ಪಾಕ್‌ಗೆ ಹೋಗಲ್ಲ – ಬಿಸಿಸಿಐ ಖಡಕ್‌ ನಿರ್ಧಾರ!

    Champions Trophy 2025: ಭಾರತ ಕ್ರಿಕೆಟ್‌ ತಂಡವು ಪಾಕ್‌ಗೆ ಹೋಗಲ್ಲ – ಬಿಸಿಸಿಐ ಖಡಕ್‌ ನಿರ್ಧಾರ!

    ಮುಂಬೈ: 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಟೂರ್ನಿಗಾಗಿ ಭಾರತ ಕ್ರಿಕೆಟ್‌ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. ಭಾರತದ ಪಂದ್ಯಗಳನ್ನು ಶ್ರೀಲಂಕಾ ಅಥವಾ ದುಬೈನಲ್ಲಿ ನಡೆಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ಕೇಳಿದೆ ಎಂದು ಬಿಸಿಸಿಐ (BCCI) ಮೂಲಗಳು ತಿಳಿಸಿವೆ.

    2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಯಾದ್ರೆ ಮಾರ್ಚ್‌ 10 ರಂದು ಮೀಸಲು ದಿನ ಇರಲಿದೆ. ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಸದ್ಯ ಭಾರತ ಮತ್ತು ಪಾಕ್‌ ನಡುವಿನ ಪಂದ್ಯ ಲಾಹೋರ್‌ನಲ್ಲಿ ನಿಗದಿಯಾಗಿದೆ. ಆದ್ರೆ ಪಾಕಿಸ್ತಾನಕ್ಕೆ ತೆರಳಲು ಬಿಸಿಸಿಐ ಹಿಂದೇಟು ಹಾಕಿದೆ. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    ತನ್ನ ಎಲ್ಲಾ ಪಂದ್ಯಗಳನ್ನು ಒಂದೇ ನಗರದಲ್ಲಿ ಆಡುವಂತೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಭಾರತಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕಾಗಿ ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ ಮೈದಾನದಲ್ಲೇ ನಿಗದಿಪಡಿಸಲಾಗಿತ್ತು. ಆದ್ರೆ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ. ದುಬೈ ಅಥವಾ ಶ್ರೀಲಂಕಾದಲ್ಲಿ ತನ್ನ ಪಂದ್ಯಗಳನ್ನು ಆಯೋಜಿಸುವಂತೆ ಐಸಿಸಿಗೆ ಕೇಳಿಕೊಂಡಿದೆ ಎಂದು ಬಿಸಿಸಿಐ ಖಚಿತಪಡಿಸಿದೆ. ಕಳೆದ ಮೇ ತಿಂಗಳಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆ ಎಂದು ಹೇಳಿದ್ದರು. ಇದೀಗ ಪಾಕ್‌ಗೆ ತೆರಳುವುದಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ.

    ಹೈಬ್ರಿಡ್‌ ಮಾದರಿಯಲ್ಲಿ ಆಯೋಜನೆಯಾಗುತ್ತಾ?
    ಕಳೆದ ವರ್ಷ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಗಿಲ್‌, ಗಾಯಕ್‌ವಾಡ್‌ ಸ್ಫೋಟಕ ಆಟ – ಟೀಂ ಇಂಡಿಯಾಗೆ 23 ರನ್‌ಗಳ ಜಯ

    ಪಾಕ್‌ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡ ಪಾಲ್ಗೊಂಡಿತ್ತು. ಇದನ್ನೂ ಓದಿ: ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು? 

  • Champions Trophy: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಭಾರತ ತಂಡವನ್ನು ಪಾಕ್‌ಗೆ ಕಳುಹಿಸುತ್ತೇವೆ: ಬಿಸಿಸಿಐ

    Champions Trophy: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಭಾರತ ತಂಡವನ್ನು ಪಾಕ್‌ಗೆ ಕಳುಹಿಸುತ್ತೇವೆ: ಬಿಸಿಸಿಐ

    ಮುಂಬೈ: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ, ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ (Rajeev Shukla) ಹೇಳಿದ್ದಾರೆ.

    2025ರ ಏಪ್ರಿಲ್‌ 7ರಿಂದ ಮೇ 20ರ ವರೆಗೆ ಪಾಕ್‌ ಆತಿಥ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ನಡೆಯಲಿದ್ದು, ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಪಾಕಿಸ್ತಾನಕ್ಕೆ ಟೀಂ ಇಂಡಿಯಾ ತೆರಳಲಿದೆಯೇ ಅನ್ನೋ ಬಗ್ಗೆ ಮಾತನಾಡಿದ ರಾಜೀವ್ ಶುಕ್ಲಾ, ಕೇಂದ್ರ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಅನುಮತಿ ನೀಡಿದರೆ ಭಾರತ ತಂಡವನ್ನು (Team India) ಪಾಕಿಸ್ತಾನಕ್ಕೆ ಕಳುಹಿಸುತ್ತೇವೆ ಎಂದು ತಿಳಿಸಿದ್ದಾರೆ.

    ಚಾಂಪಿಯನ್ಸ್‌ ಟ್ರೋಫಿಯ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗೆ ಕಳುಹಿಸಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ. ಇದನ್ನೂ ಓದಿ: PublicTV Explainer: ಇಂಡೋ-ಪಾಕ್‌ ಕದನ ಯಾಕಿಷ್ಟು ರಣರೋಚಕ – ನೀವು ತಿಳಿಯಲೇಬೇಕಾದ ಸಂಗತಿಗಳಿವು..

    ಹೈಬ್ರಿಡ್‌ ಮಾದರಿಯಲ್ಲಿ ಆಯೋಜನೆಯಾಗುತ್ತಾ?
    2023ರ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: T20 World Cup: ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕ್ರಿಕೆಟಿಗರಿಗೆ ಲಕ್ಷ ಲಕ್ಷ ಬಹುಮಾನ ಘೋಷಿಸಿದ ಪಾಕ್‌!

    ಪಾಕ್‌ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
    ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

    2008ರ ನವೆಂಬರ್ 26 ರಂದು ಪಾಕ್‌ ಭಯೋತ್ಪಾದಕರು ಮುಂಬೈನಲ್ಲಿ ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ರಾಜತಾಂತ್ರಿಕ ಸಂಬಂಧಗಳು ಮತ್ತಷ್ಟು ಹದಗೆಟ್ಟಿತು. ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡ ಪಾಲ್ಗೊಂಡಿತ್ತು. ಇದನ್ನೂ ಓದಿ: ನೋವಿನಿಂದ ಬಳಲುತ್ತಿದ್ದರೂ ಸಿಎಸ್‌ಕೆಗಾಗಿ ಆಡ್ತಿದ್ದಾರೆ ಧೋನಿ – ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?

  • ವಿಮಾನ ನಿಲ್ದಾಣಗಳಿಗೆ ಹೆಚ್ಚಿನ ಭದ್ರತೆ – ಅತ್ಯಾಧುನಿಕ ಸ್ಕ್ಯಾನರ್ ಖರೀದಿಗೆ ಕೇಂದ್ರ ನಿರ್ಧಾರ

    ವಿಮಾನ ನಿಲ್ದಾಣಗಳಿಗೆ ಹೆಚ್ಚಿನ ಭದ್ರತೆ – ಅತ್ಯಾಧುನಿಕ ಸ್ಕ್ಯಾನರ್ ಖರೀದಿಗೆ ಕೇಂದ್ರ ನಿರ್ಧಾರ

    ನವದೆಹಲಿ: ದೇಶದ ವಿಮಾನ ನಿಲ್ದಾಣಗಳಲ್ಲಿ (Airport) ಹೆಚ್ಚಿನ ಭದ್ರತೆ ಒದಗಿಸಲು ಅತ್ಯಾಧುನಿಕ ತಂತ್ರಜ್ಞಾನದ ಹೊಸ ಸ್ಕ್ಯಾನರ್‌ಗಳನ್ನು ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 131 ಫುಲ್ ಬಾಡಿ ಸ್ಕ್ಯಾನರ್‌ಗಳು ಮತ್ತು 600 ಹ್ಯಾಂಡ್ ಬ್ಯಾಗೇಜ್ ಸ್ಕ್ಯಾನರ್‌ಗಳ ಖರೀದಿಗೆ ಕೇಂದ್ರ (Government of India) ಪ್ರಕ್ರಿಯೆ ಆರಂಭಿಸಿದೆ.

    1,000 ಕೋಟಿ ರೂ. ವೆಚ್ಚದಲ್ಲಿ ಹೊಸ ಸ್ಕ್ಯಾನರ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಫುಲ್-ಬಾಡಿ ಸ್ಕ್ಯಾನರ್‌ಗಳ ಖರೀದಿಗೆ 788 ಕೋಟಿ ರೂ. ವೆಚ್ಚವಾಗಲಿದೆ. ಹ್ಯಾಂಡ್ ಬ್ಯಾಗೇಜ್ ಸ್ಕ್ಯಾನರ್‌ಗಳ (Baggage Scanners) ಖರೀದಿಗೆ 246 ಕೋಟಿ ರೂ. ವೆಚ್ಚವಾಗುತ್ತಿದೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಸಾಧ್ಯವಿದೆ.ಇದನ್ನೂ ಓದಿ: ಚಳ್ಳಕೆರೆ DRDO ಬಳಿ ಚಿರತೆ ಓಡಾಟದ ವಿಡಿಯೋ ವೈರಲ್ – ಗ್ರಾಮಸ್ಥರಲ್ಲಿ ಆತಂಕ

    ಹೊಸ ಸ್ಕ್ಯಾನರ್‌ಗಳನ್ನು ಶ್ರೀನಗರ, ಅಮೃತಸರ, ಚೆನ್ನೈ ಕೋಲ್ಕತ್ತಾ, ದೆಹಲಿ ಮತ್ತು ಮುಂಬೈನ ವಿಮಾನ ನಿಲ್ದಾಣಗಳಲ್ಲಿ ಮೊದಲ ಹಂತದಲ್ಲಿ ಅಳವಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಟ್ಟು 43 ವಿಮಾನ ನಿಲ್ದಾಣದಲ್ಲಿ ಹೊಸ ಸ್ಕ್ಯಾನರ್‌ಗಳನ್ನು ಅಳವಡಿಸಲು ಚಿಂತನೆ ನಡೆದಿದೆ.

    ಈಗಿರುವ ವಾಕ್‍ಥ್ರೂ ಮೆಟಲ್ ಡಿಟೆಕ್ಟರ್‌ಗಳು ಮತ್ತು ಹ್ಯಾಂಡ್‍ಹೆಲ್ಡ್ ಮೆಟಲ್ ಡಿಕ್ಟೇಟರ್‌ಗಳಿಗೆ ಲೋಹವಲ್ಲದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಪತ್ತೆಹಚ್ಚಲು ಸಾಧ್ಯವಿಲ್ಲ. ನೂತನವಾಗಿ ಅಳವಡಿಸುತ್ತಿರುವ ಸ್ಕ್ಯಾನರ್‌ಗಳ ಮೂಲಕ ಅಂತಹ ಸ್ಫೋಟಕಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಫುಲ್ ಬಾಡಿ ಸ್ಕ್ಯಾನರ್‌ಗಳು ದೇಹದಲ್ಲಿ ಅಡಗಿರುವ ಲೋಹ ಮತ್ತು ಲೋಹವಲ್ಲದ ವಸ್ತುಗಳನ್ನು ಪತ್ತೆ ಮಾಡುತ್ತವೆ. ಇದನ್ನೂ ಓದಿ: ಅಮರನಾಥ ಯಾತ್ರೆ ಪುನರಾರಂಭ – ಯಾತ್ರಾರ್ಥಿಗಳಿಗೆ ಹೆಲಿಕಾಪ್ಟರ್ ಸೌಲಭ್ಯವೂ ಲಭ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಆಗಿದ್ದ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ

    ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಆಗಿದ್ದ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ

    ಒಟ್ಟಾವಾ: ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಆಗಿದ್ದ ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಬಲಿಯಾಗಿದ್ದಾನೆ.

    ಇತ್ತೀಚೆಗೆ ಭಾರತ ಸರ್ಕಾರ (Government Of India) ಬಿಡುಗಡೆ ಮಾಡಿದ 40 ಉಗ್ರರ ಪಟ್ಟಿಯಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಮುಖ ಉಗ್ರನಾಗಿದ್ದ.

    2022 ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲು ಸಕಲ ಪ್ರಯತ್ನ ನಡೆದಿತ್ತು. ಆದ್ರೆ ಆರೋಪಿ ಎಸ್ಕೇಪ್‌ ಆಗಿದ್ದರಿಂದ ನಿಜ್ಜರ್‌ ಬಗ್ಗೆ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು. ಇದನ್ನೂ ಓದಿ: ಭಯಾನಕ ಅಣ್ವಸ್ತ್ರ ಹೊರತೆಗೆದ ರಷ್ಯಾ – ಕೀವ್‌ನಿಂದ 200 ಕಿಮೀ ದೂರದಲ್ಲಿರೋ ಬೆಲಾರಸ್‌ಗೆ ರವಾನೆ!

    ಈ ಹಿಂದೆ ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನ ಎಸಗಿದ್ದ ಪ್ರಕರಣದಲಿ ನಿಜ್ಜರ್ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು. ಭಾರತದಿಂದ ಪರಾರಿಯಾಗಿದ್ದ ನಿಜ್ಜರ್‌ ಕೆನಡಾದಲ್ಲಿ ನೆಲೆಸಿದ್ದ, ಖಲಿಸ್ತಾನಿ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನೂ ಆಗಿದ್ದ ಅನ್ನೋದು ತಿಳಿದುಬಂದಿದೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ತ್ರಿವರ್ಣ ಧ್ವಜ ತೆಗೆದಿದ್ದ ಖಲಿಸ್ತಾನಿ ಉಗ್ರ ಅವತಾರ್ ಸಿಂಗ್ ನಿಗೂಢ ಸಾವು

    ಇತ್ತೀಚೆಗಷ್ಟೇ ಖಲಿಸ್ತಾನಿ ಉಗ್ರ ಅಮೃತಪಾಲ್ ಸಿಂಗ್ ಆಪ್ತ, ಬ್ರಿಟನ್ ಮೂಲದ ಖಲಿಸ್ತಾನ್ ಲಿಬರೇಷನ್ ಫೋರ್ಸ್ (KLF) ಮುಖ್ಯಸ್ಥ ಅವತಾರ್ ಸಿಂಗ್ ಖಂಡಾ ನಿಗೂಢವಾಗಿ ಸಾವನ್ನಪ್ಪಿದ್ದ. ಈತನನ್ನ ವಿಷ ಉಣಿಸಿ ಸಾಯಿಸಲಾಗಿದೆ ಎಂದು ಶಂಕೆ ವ್ಯಕ್ತವಾದರೂ ವೈದ್ಯಕೀಯ ದಾಖಲೆಗಳು ರಕ್ತ ಕ್ಯಾನ್ಸರ್ ಎಂದು ಹೇಳಿದ್ದವು.

    ಯಾರು ಅವತಾರ್ ಸಿಂಗ್?
    2007ರಲ್ಲಿ ಶಿಕ್ಷಣ ವೀಸಾದಡಿ ಬ್ರಿಟನ್‌ಗೆ ತೆರಳಿದ್ದ ಅವತಾರ್ ಸಿಂಗ್ 2012ರಿಂದ ಅಲ್ಲಿಯೇ ನೆಲೆಸಿದ್ದ. ಬಾಂಬ್ ತಜ್ಞನಾಗಿದ್ದ ಖಂಡಾ, ಲಂಡನ್‌ನಲ್ಲಿರುವ ಭಾರತೀಯ ದೂತವಾಸ ಕಚೇರಿಯ ಮೇಲೆ ಆಕ್ರಮಣ ಮಾಡಿಸಿದವರ ಪೈಕಿ ಈತ ಪ್ರಮುಖ ಆರೋಪಿಯಾಗಿದ್ದ. ದೂತವಾಸ ಕಚೇರಿ ಮೇಲಿದ್ದ ತ್ರಿವರ್ಣ ಧ್ವಜ ತೆಗೆದು ಖಲಿಸ್ತಾನ್‌ ಧ್ವಜ ಹಾರಿಸಿದ್ದ.

    ಪಂಜಾಬ್ ಪೊಲೀಸರು ಮಾರ್ಚ್‌ ಮತ್ತು ಏಪ್ರಿಲ್‌ ಅವಧಿಯಲ್ಲಿ ಖಲಿಸ್ತಾನಿ ಮುಖಂಡ ಅಮೃತಪಾಲ್ ಸಿಂಗ್‌ ಬಂಧನಕ್ಕೆ ತೀವ್ರ ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆತ ತಲೆಮರೆಸಿಕೊಳ್ಳಲು ಅವತಾರ್ ಖಾಂಡಾ ನೆರವಾಗಿದ್ದ. ಅಮೃತಪಾಲ್‌ನನ್ನು ಪೊಲೀಸರು ಬೆನ್ನಟ್ಟಿದಾಗ ಆತ ಲಂಡನ್‌ನಲ್ಲಿದ್ದ ಅವತಾರ್ ಜತೆ ಸಂಪರ್ಕದಲ್ಲಿದ್ದ ವಿಚಾರ ಪೊಲೀಸ್‌ ತನಿಖೆಯಿಂದ ಬೆಳಕಿಗೆ ಬಂದಿತ್ತು.

  • ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕು, ಕೇಂದ್ರ ಕೊಡಲ್ಲ ಅಂತಾ ಹೇಳ್ತಿದೆ – ಸಿಎಂ ಕಿಡಿ

    ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕು, ಕೇಂದ್ರ ಕೊಡಲ್ಲ ಅಂತಾ ಹೇಳ್ತಿದೆ – ಸಿಎಂ ಕಿಡಿ

    – ಎಫ್‌ಸಿಐ ಅಕ್ಕಿ ಕೊಡಲು ಕೇಂದ್ರ ಅಡ್ಡಗಾಲು
    – ಕೇಂದ್ರ ಬಿಜೆಪಿ ಬಡವರ ವಿರೋಧಿ ಸರ್ಕಾರ
    – ಛತ್ತಿಸ್‌ಗಡ, ತೆಲಂಗಾಣ ವಿವಿಧ ರಾಜ್ಯಗಳೊಂದಿಗೆ ಮಾತುಕತೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿದೆ. ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸುತ್ತೇವೆ ಅಂತಾ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್‌ಸಿಐ) ಒಪ್ಪಿಕೊಂಡು, ಈಗ ಕೇಂದ್ರ ಸರ್ಕಾರದ ಕೊಡದಂತೆ ತಡೆಹಿಡಿದಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಎಫ್‌ಸಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಜಾರಿ ಮಾಡೋದಕ್ಕೆ ನಮ್ಮ ಎಫ್‌ಸಿಎ ಜತೆ ನಮ್ಮ ಅಧಿಕಾರಿಗಳು ಮಾತಾಡಿದ್ದರು. ನಾನೂ ಕೂಡ ನೇರವಾಗಿ ಮಾತನಾಡಿದ್ದೆ. 10 ಕೆಜಿ ಅಕ್ಕಿ ಕೊಡಲು ನಮಗೆ ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು ಅಂತಾ ಹೇಳಿದ್ದೆ. ಪ್ರತಿ ಕೆಜಿಗೆ 34 ರೂ. + 2 ರೂ. 60 ಪೈಸೆ ಟ್ರಾನ್ಸ್‌ಪೋರ್ಟ್‌ ಶುಲ್ಕ ಸೇರಿ ಒಂದು ಕೆಜಿ ಅಕ್ಕಿಗೆ 36.60 ರೂ.ಗೆ ಖರೀದಿ ಮಾಡಲು ತೀರ್ಮಾನ ಮಾಡಿದ್ದೆವು. ಎಫ್‌ಸಿಐ ಸಹ ಒಪ್ಪಿಕೊಂಡಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ತಿಂಗಳಿಗೆ 840 ಕೋಟಿ ರೂ.ನಂತೆ ವರ್ಷಕ್ಕೆ 10,092 ಕೋಟಿ ರೂ. ನಮಗೆ ಬೇಕಾಗುತ್ತದೆ. ನಮ್ಮ ಕ್ಯಾಬಿನೆಟ್‌ನಲ್ಲೂ ಕೊಡೋದಕ್ಕೆ ತೀರ್ಮಾನ ಮಾಡಿದ್ದೇವೆ ಎಂದು ನುಡಿದರು.

    ನಾವು ಜೂನ್ 9 ರಂದು ಅಕ್ಕಿ ಕೋರಿ ಪತ್ರ ಬರೆದಿದ್ದೆವು. ಅಕ್ಕಿ ಕೊಡುತ್ತೇವೆ ಅಂತಾ ಒಪ್ಪಿ ಜೂನ್ 12 ರಂದು ಎಫ್‌ಸಿಐ ನಮಗೆ ಪತ್ರ ಬರೆದಿದ್ದರು. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡೋದಕ್ಕೆ ಒಪ್ಪಿ ಪತ್ರ ಕಳಿಸಿದ್ರು. 13,819.485 ಮೆಟ್ರಿಕ್ ಟನ್ ಅಕ್ಕಿ ಕಳಿಸುವ ಬಗ್ಗೆ ಮತ್ತೊಂದು ಪತ್ರವನ್ನೂ ಬರೆದಿದ್ರು. ಒಟ್ಟು ಎರಡು ಒಪ್ಪಿಗೆ ಪತ್ರ ಬರೆದಿದ್ದರು. ಅದಾದ ಮೇಲೆ ಕೇಂದ್ರ ಸರ್ಕಾರ ಜೂನ್ 13 ರಂದು ಎಫ್‌ಸಿಐ ನವರಿಗೆ ಕೇಂದ್ರ ಸರ್ಕಾರದ ಗ್ರಾಹಕರ ಸರಬರಾಜು ಇಲಾಖೆ ಪತ್ರ ಬರೆದಿದೆ. ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ, ಗೋದಿ ಮಾರಾಟ ನಿಲ್ಲಿಸುವ ಬಗ್ಗೆ ಕೇಂದ್ರ ಪತ್ರ ಬರೆದಿದೆ. ಗ್ರಾಹಕರ ಸರಬರಾಜು ಇಲಾಖೆಯಿಂದ ಎಫ್‌ಸಿಐಗೆ ಬರೆದ ಪತ್ರದಲ್ಲಿ ಅಕ್ಕಿ, ಗೋಧಿ ಮಾರಾಟ ಸ್ಥಗಿತ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಪ್ರಸ್ತಾಪಿಸಿದರು.

    ಎಫ್‌ಸಿಐ ನಮ್ಮ ರಾಜ್ಯಕ್ಕೆ ಅಕ್ಕಿ ಕೊಡೋದಾಗಿ ಒಪ್ಪಿದ್ದರಿಂದ ನಾವು ಅಕ್ಕಿ ಜುಲೈ 1 ರಿಂದ ಕೊಡೋದಾಗಿ ಘೋಷಣೆ ಮಾಡಿದ್ವಿ. ಇವರ ಮೇಲೆ ನಂಬಿಕೆಯಿಟ್ಟು ಅಕ್ಕಿ ಕೊಡೋದಾಗಿ ಘೋಷಣೆ ಮಾಡಿದ್ದವು. ಈ ಕೇಂದ್ರ ಸರ್ಕಾರ ಈ ರೀತಿ ತೀರ್ಮಾನ ಮಾಡ್ತಿರೋದು ರಾಜಕೀಯ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದಿತ್ತು. ಅಕ್ಕಿ ಇಟ್ಟುಕೊಂಡು ಕೊಡೋದಿಲ್ಲ ಅಂತಾ ಹೇಳ್ತಿರೋದು ಜನವಿರೋಧಿ ನೀತಿಯಾಗಿದೆ. ಈ ಯೋಜನೆಯಿಂದ ಕಾಂಗ್ರೆಸ್ ಸರ್ಕಾರದಕ್ಕೆ ಒಳ್ಳೆಯ ಹೆಸರು ಬರುತ್ತದೆ. ಅವರು ಜನಕಲ್ಯಾಣ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂಬ ಅಸೂಯೆಯಿಂದ ಮಹಾತ್ವಾಕಾಂಶಿ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುವ ಪ್ರಯತ್ನ ಮಾಡ್ತಿದೆ ಎಂದು ಆಕ್ರೋಶ ಹೊರಹಾಕಿದರು.

    ಬೇರೆ ರಾಜ್ಯಗಳೊಂದಿಗೆ ಮಾತುಕತೆ: ನಮ್ಮ ಅನ್ನಭಾಗ್ಯ ಯೋಜನೆಯನ್ನ ನಿಲ್ಲಿಸೋದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ನಮಗೆ ಅಕ್ಕಿ ಸಿಗದಂತೆ ಮಾಡ್ತಿದೆ. ನಾವು ಈಗ ತೆಲಂಗಾಣ, ಛತ್ತೀಸ್‌ಗಡ, ತೆಲಂಗಾಣ ಸರ್ಕಾರದವರ ಜತೆ ಅಕ್ಕಿ ಕೊಡುವಂತೆ ಮಾತುಕತೆ ಮಾಡ್ತಿದೀವಿ. ಪಂಜಾಬ್‌ನಲ್ಲಿ ಅಕ್ಕಿ ಇಲ್ಲ ಅಂದಿದ್ದಾರೆ. ನಮ್ಮ ಸರ್ಕಾರ ಬಡವರ ಕಲ್ಯಾಣ ಮಾಡಲು ಹೊರಟರೇ ಕೇಂದ್ರದವರು ಅದಕ್ಕೆ ಅಡ್ಡಗಾಲು ಹಾಕ್ತಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಬಡವರ ವಿರೋಧಿಗಳು. ಅಕ್ಕಿ ಇಟ್ಟುಕೊಂಡು ಇಲ್ಲಾ ಅಂತಿದ್ದಾರೆ. ಅವರೇನು ಪುಕ್ಕಟ್ಟೆ ಕೊಡಲ್ಲ. ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಇಲ್ಲ ಅಂತಿದ್ದಾರೆ ಎಂದಿ ಕಿಡಿ ಕಾರಿದರು.

  • ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ

    ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ

    ನವದೆಹಲಿ: ಯುಗಾದಿ ಹಬ್ಬದ ನಂತರ ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಟ್ಟಿದೆ. ತುಟ್ಟಿ ಭತ್ಯೆ (Dearness Allowance) ಶೇ.4ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

    ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಘೋಷಣೆ ಮಾಡಿದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ (Central Pay Commission) ಶಿಫಾರಸುಗಳ ಆಧಾರದ ಮೇಲೆ ಅಂಗೀಕರಿಸಲ್ಪಟ್ಟ ಸೂತ್ರಕ್ಕೆ ಅನುಗುಣವಾಗಿದೆ. ಇದನ್ನೂ ಓದಿ: PSI ಅಕ್ರಮ ನೇಮಕಾತಿ ಪ್ರಕರಣ- ವಿಚಾರಣೆ ಎದುರಿಸಿದ್ದ ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ

    ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿ ನೀಡಲಾಗಿದ್ದು, ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರವು ತನ್ನ ವ್ಯಾಪ್ತಿಯ 1 ಕೋಟಿಗೂ ಹೆಚ್ಚು ಉದ್ಯೋಗಿಗಳಿಗೆ ತುಟ್ಟಿಭತ್ಯೆ ಶೇ.4.ರಷ್ಟು ಹೆಚ್ಚಿಸಿದೆ. ಒಟ್ಟಾರೆಯಾಗಿ ತುಟ್ಟಿಭತ್ಯೆ ಹೆಚ್ಚಳ ಶೇ.38 ರಿಂದ ಶೇ.42ಕ್ಕೆ ಹೆಚ್ಚಾಗಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು..!

    ತುಟ್ಟಿಭತ್ಯೆ ಹೆಚ್ಚಳವನ್ನು 2023ರ ಜನವರಿಯಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ತುಟ್ಟಿಭತ್ಯೆ ಹೆಚ್ಚಳವನ್ನು ಪೂರೈಸಲು ಕೇಂದ್ರವು 12,815.60 ಕೋಟಿ ರೂ.ಗಳನ್ನ ಖರ್ಚು ಮಾಡಲಿದೆ. ಇದರಿಂದ ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

    ತುಟ್ಟಿಭತ್ಯೆ ಹೇಗೆ ಲೆಕ್ಕ ಹಾಕಲಾಗುತ್ತದೆ?
    ತುಟ್ಟಿಭತ್ಯೆಯನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬ ಮಾಹಿತಿಯನ್ನೂ ಅಧಿಸೂಚನೆಯಲ್ಲಿ ನೀಡಲಾಗಿದೆ. ಪರಿಷ್ಕೃತ ಮೂಲ ವೇತನ ಮತ್ತು ಭತ್ಯೆ ರಹಿತರ ಪ್ರಕಾರ ಡಿಎ ಲೆಕ್ಕಾಚಾರ ನಡೆಯಲಿದೆ. ಬೇರೆ ಯಾವುದೇ ಭತ್ಯೆ ಇಲ್ಲದಿದ್ದರೆ ಮೂಲ ವೇತನ ಮತ್ತು ಡಿಎ ಲೆಕ್ಕ ಹಾಕಲಾಗುತ್ತದೆ. ಈ ಹೆಚ್ಚಿದ ಡಿಎ, ಶಿಕ್ಷಕರು ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳ ಇತರ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಅನ್ವಯಿಸುತ್ತದೆ.