Tag: Government Officer

  • ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯದ್ದು ಆತ್ಮಹತ್ಯೆ ಅಲ್ಲ, ಕೊಲೆ – ಆರ್. ಅಶೋಕ್

    ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯದ್ದು ಆತ್ಮಹತ್ಯೆ ಅಲ್ಲ, ಕೊಲೆ – ಆರ್. ಅಶೋಕ್

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ‌ ನಿಗಮದ (Karnataka Maharshi Valmiki Scheduled Tribes) ಅಧಿಕಾರಿ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಅಧಿಕಾರಿಯದ್ದು ಆತ್ಮಹತ್ಯೆಯಲ್ಲ, ಕೊಲೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashoka) ಆಗ್ರಹಿಸಿದ್ದಾರೆ.

    ತಮ್ಮ ಎಕ್ಸ್ ಖಾತೆಯಲ್ಲಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಅಶೋಕ್, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿ ಆತ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ ಕಾಂಗ್ರೆಸ್ ಸರ್ಕಾರ (Congress Govt). ಸಿಎಂ ಅವರೇ ಇದು ಆತ್ಮಹತ್ಯೆ ಅಲ್ಲ, ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು‌? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಹಾಕಲು ಅನುಮತಿ ಇಲ್ಲ, ರಸ್ತೆಯಲ್ಲಿ ನಮಾಜ್‌ ಮಾಡಲು ಅನುಮತಿ ಬೇಕಿಲ್ಲ: ಬಿಜೆಪಿ ಕಿಡಿ

    ಇನ್ನೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನ ಗ್ಯಾರಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂ. ಭ್ರಷ್ಟಾಚಾರ (Corruption) ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ. ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರನ್ನ ಸಂಪುಟದಿಂದ ವಜಾ ಮಾಡಬೇಕು. ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದು ಒತ್ತಾಯಿಸಿದ್ದಾರೆ.

    ಎಸ್ಐಟಿ ರಚಿಸಿ ಕೈತೊಳೆದುಕೊಳ್ಳಬೇಡಿ:
    ಬಿಜೆಪಿ ಶಾಸಕ ಸುನೀಲ್ ಕುಮಾರ್ (Sunil Kumar) ಅವರೂ ಸಹ ಅಧಿಕಾರಿ ಆತ್ಮಹತ್ಯೆ ಬಗ್ಗೆ ಎಕ್ಸ್‌ ನಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರಜಾಪ್ರಭುತ್ವ, ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ – ಸಿದ್ದರಾಮಯ್ಯ

    ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಶಿವಮೊಗ್ಗದಲ್ಲಿ ಶಂಕಾಸ್ಪದ ರೀತಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಈ ಸಾವಿನ ಸುತ್ತ ಭ್ರಷ್ಟಾಚಾರದ ಹುತ್ತ ಕಟ್ಟಿದ ಅನುಮಾನ ಬರುತ್ತಿದೆ. ಇಲಾಖೆಯಲ್ಲಿನ ಕಾಣದ ಕೈಗಳ ಕರಾಮತ್ತು ಯಾವುದೆಂಬುದು ಮಹದೇವನೇ ಬಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ. ಸಾಕ್ಷ್ಯ ನಾಶ ಮಾಡಿ ಎಸ್‌ಐಟಿ ತನಿಖೆ ಎಂಬ ರಾಗವನ್ನು ಸರ್ಕಾರ ಹಾಡದಿರಲಿ ಎಂದು ಸುನೀಲ್ ಕುಮಾರ್ ಎಂದು ಸಲಹೆ ನೀಡಿದ್ದಾರೆ.

  • ಅಧಿಕಾರಿಗಳ ಹೆಸರು ಉಲ್ಲೇಖಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ!

    ಅಧಿಕಾರಿಗಳ ಹೆಸರು ಉಲ್ಲೇಖಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ!

    – ಡೆತ್‌ನೋಟ್‌ನಲ್ಲಿ ಬಹುಕೋಟಿ ರಹಸ್ಯ ಬಿಚ್ಚಿಟ್ಟ ಮೃತ ಅಧಿಕಾರಿ

    ಶಿವಮೊಗ್ಗ: ಡೆತ್‌ನೋಟ್‌ನಲ್ಲಿ ಮೂವರು ಅಧಿಕಾರಿಗಳ ಹೆಸರು ಉಲ್ಲೇಖಿಸಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (Karnataka Valmiki Nigama) ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ (Shivamogga) ವಿನೋಬನಗರದಲ್ಲಿ ನಡೆದಿದೆ.

    ಇಲ್ಲಿನ ವಿನೋಬನಗರದ ಕೆಂಚಪ್ಪ ಬಡಾವಣೆಯ ನಿವಾಸಿ ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರನ್ ಬೆಂಗಳೂರಿನ ಕಚೇರಿಯಲ್ಲಿ (Bengaluru Office) ಕೆಲಸ ನಿರ್ವಹಿಸುತ್ತಿದ್ದರು. ಅವಮಾನ ಸಹಿಸದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಅಲ್ಲದೇ ಡೆತ್‌ನೋಟ್‌ನಲ್ಲಿ ಮೂವರು ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿ, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ ಬಿಚ್ಚಿಟ್ಟಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವ, ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ – ಸಿದ್ದರಾಮಯ್ಯ

    ಡೆತ್‌ನೋಟ್‌ನಲ್ಲಿ ಬಹುಕೋಟಿ ಭ್ರಷ್ಟಾಚಾರ ರಹಸ್ಯ:
    ನನ್ನ ಸಾವಿಗೆ ನಿಗಮದ ಅಧಿಕಾರಿಗಳು ಕಾರಣ. ನಿಗಮದ ವ್ಯವಸ್ಥಾಪಕ ನಿದೇರ್ಶಕರಾದ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ.ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ. ಈ ಅವ್ಯವಹಾರದಲ್ಲಿ ನನ್ನ ಪಾತ್ರವಿಲ್ಲ. ಆದರೆ ಕೆಲಸದ ಒತ್ತಡದಲ್ಲಿ ಸದರಿ ಖಾತೆಯ ಚೆಕ್ ಪುಸ್ತಕ ಪಡೆಯದಿರುವುದು ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು ನನ್ನ ತಪ್ಪಾಗಿದೆ. ಈ ಹಗರಣದಲ್ಲಿ ನಾನು ಕಾರಣ ನಲ್ಲ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

    ಸದ್ಯ ಘಟನಾ ಸ್ಥಳಕ್ಕೆ ಶಾಸಕ ಎಸ್.ಎನ್ ಚನ್ನಬಸಪ್ಪ ಭೇಟಿ ನೀಡಿದ್ದು, ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಹಾಕಲು ಅನುಮತಿ ಇಲ್ಲ, ರಸ್ತೆಯಲ್ಲಿ ನಮಾಜ್‌ ಮಾಡಲು ಅನುಮತಿ ಬೇಕಿಲ್ಲ: ಬಿಜೆಪಿ ಕಿಡಿ 

  • ಎಲ್ಲರೆದುರೇ ಮಹಿಳಾ ಸಿಬ್ಬಂದಿ ಜೊತೆ ಲೆಕ್ಕ ಅಧೀಕ್ಷಕ ರೋಮ್ಯಾನ್ಸ್!

    ಎಲ್ಲರೆದುರೇ ಮಹಿಳಾ ಸಿಬ್ಬಂದಿ ಜೊತೆ ಲೆಕ್ಕ ಅಧೀಕ್ಷಕ ರೋಮ್ಯಾನ್ಸ್!

    – ಬೇಸತ್ತ ಸಿಬ್ಬಂದಿಯಿಂದ ವೀಡಿಯೋ
    – ಬಳ್ಳಾರಿ ಜಿ.ಪಂ ಕಚೇರಿಯಲ್ಲಿ ಕಿಸ್ಸಾಯಣ

    ಬಳ್ಳಾರಿ: ಸಾರ್ವಜನಿಕರ ಸೇವೆ ನಡೆಯುವ ಸರ್ಕಾರಿ ಕಚೇರಿಯಲ್ಲೇ ಅಧಿಕಾರಿಯೋರ್ವ ಮಹಿಳಾ ಸಿಬ್ಬಂದಿಯೊಂದಿಗೆ ರೋಮ್ಯಾನ್ಸ್ ಮಾಡಿ, ನಿತ್ಯ ಖುಲ್ಲಂ ಖುಲ್ಲಾ ನಡೆಸುತ್ತಿದ್ದ ಘಟನೆ ಬಳ್ಳಾರಿಯ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಬೆಳಕಿಗೆ ಬಂದಿದೆ.

    ಜಿಲ್ಲಾ ಪಂಚಾಯ್ತಿಯಲ್ಲಿ ಲೆಕ್ಕ ಅಧೀಕ್ಷಕ ಸಂಪತ್ ಕುಮಾರ್ ಮೇಲೆ ಗಂಭೀರ ಆರೋಪ ಕೇಳಿ ಬಂದಿದ್ದು, ಆತನ ಮತ್ತೊಂದು ಮುಖದ ವೀಡಿಯೋ ವೈರಲ್ ಆಗಿದೆ. ಕಳೆದ ಒಂದು ವರ್ಷದಿಂದಲೂ ಈತ ಕಚೇರಿಯ ಅವಧಿಯ ಸಮಯದಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಕಿಸ್ಸಾಯಾಣ ನಡೆಸುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈತನ ಕೃತ್ಯದ ವೀಡಿಯೋ ಕಳೆದ 6 ರಿಂದ 7 ತಿಂಗಳಿಂದ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮಹಿಳಾ ಸಿಬ್ಬಂದಿ ಹಾಗೂ ಅಧಿಕಾರಿಯ ಇಬ್ಬರ ರೋಮ್ಯಾನ್ಸ್ ಕಾಟಕ್ಕೆ ಕಚೇರಿಯ ಸಿಬ್ಬಂದಿ ಕೂಡ ಬೇಸತ್ತಿದ್ದಾರೆ ಎನ್ನಲಾಗಿದೆ.

    ಈಗಾಗಲೇ ಈತನ ವಿರುದ್ಧ ಕೆಲ ಮಹಿಳಾ ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಈತನ ಇಲಾಖೆಯಲ್ಲಿ ಉನ್ನತ ಹಂತದಲ್ಲಿ ಪ್ರಭಾಗಿಯಾಗಿದ್ದಾನೆ ಎನ್ನಲಾಗಿದ್ದು, ಮೇಲಾಧಿಕಾರಿಗಳು ಕೂಡ ಈತನ ಮೇಲೆ ಕ್ರಮಕೈಗೊಳ್ಳದೆ ಇರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.

    ಚಪಲ ಚನ್ನಿಗರಾಯನ ಕೃತ್ಯದ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಪಂಚಾಯ್ತಿ ಅಧ್ಯಕ್ಷೆ ಭಾರತಿ, ಮಹಿಳಾ ಸಿಬ್ಬಂದಿಯ ಮೇಲೆ ಲೆಕ್ಕ ಅಧೀಕ್ಷಕ ಸಂಪತ್ ಕುಮಾರ್ ನಡೆಸುತ್ತಿದ್ದ ಕೃತ್ಯದ ಬಗ್ಗೆ ಮಾಹಿತಿ ಇತ್ತು. ಆತನ ವಿರುದ್ಧ ಈಗಾಗಲೇ 3 ಬಾರಿ ದೂರು ನೀಡಿದ್ದೇವೆ. ಅಲ್ಲದೇ ಕ್ರಮಕೈಗೊಳ್ಳಲು ಮೇಲಾಧಿಕಾರಿಗಳಿಗೆ ಮನವಿಯನ್ನು ಮಾಡಿದ್ದೇವೆ. ಆದರೆ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಇದನ್ನು ನೋಡಿದರೆ ಅಧಿಕಾರಿಗಳಿಗೆ ಆತನ ಪರ ಒಲವು ಇದೆಯಾ ಎಂಬ ಅನುಮಾನ ಮೂಡುತ್ತಿದೆ. ಜಿಲ್ಲಾಧಿಕಾರಿಗಳು ವರ್ಗಾವಣೆಯಾದ ಕಾರಣ ಆತನ ಮೇಲೆ ಕ್ರಮಕೈಗೊಳ್ಳಲು ಆಗಲಿಲ್ಲ ಎನ್ನಲಾಗಿದ್ದು, ಈಗ ಹೊಸದಾಗಿ ಬಂದಿರುವ ಅಧಿಕಾರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದ್ದರಿಂದ ಅವರು ಚೇತರಿಸಿಕೊಂಡು ಕಚೇರಿಗೆ ಆಗಮಿಸಿದ ಬಳಿಕ ಮತ್ತೆ ಅವರ ಮೇಲೆ ಕ್ರಮಕೈಗೊಳ್ಳಲು ಒತ್ತಡ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

    ಇನ್ನು ಈ ಬಗ್ಗೆ ಮಾತನಾಡಿದ ಜಿಪಂ ಸದಸ್ಯೆ ಉಮಾದೇವಿ, ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಿಮ್ಮ ವರದಿ ನೋಡಿದ ಬಳಿಕ ನನ್ನ ಗಮನಕ್ಕೆ ಬಂದಿದೆ. ಸರ್ಕಾರಿ ಕಚೇರಿಯಲ್ಲಿ ಈ ರೀತಿ ವರ್ತನೆ ಮಾಡುವುದು ಖಂಡನೀಯ. ಸರ್ಕಾರಿ ಕೆಲಸ ಸಮಯದಲ್ಲಿ ಇಂತಹ ಕೃತ್ಯ ಎಸಗಿರುವುದು ಈಗ ನಮ್ಮ ಗಮನಕ್ಕೆ ಬಂದಿದೆ. ಅಧಿಕಾರಿಗಳಿಗೆ ಕೂಡಲೇ ಕರೆ ಮಾಡಿ ಕ್ರಮಕೈಗೊಳ್ಳಲು ತಿಳಿಸುತ್ತೇವೆ ಎಂದು ಹೇಳಿದ್ದರು.

  • ದ್ವಿತೀಯ ದರ್ಜೆ ಸಹಾಯಕನಿಗೆ 2 ಕೋಟಿ ದಂಡ, 6 ವರ್ಷ ಜೈಲು ಶಿಕ್ಷೆ

    ದ್ವಿತೀಯ ದರ್ಜೆ ಸಹಾಯಕನಿಗೆ 2 ಕೋಟಿ ದಂಡ, 6 ವರ್ಷ ಜೈಲು ಶಿಕ್ಷೆ

    – ದುಡ್ಡಿನಾಸೆಗೆ ಹೆಂಡ್ತಿ ಕೊಂದು ಜೈಲಲ್ಲಿದ್ದಾನೆ

    ಚಿಕ್ಕಮಗಳೂರು: ಮೇಲಾಧಿಕಾರಿಯ ನಕಲಿ ಸಹಿ ಮಾಡಿ ಸರ್ಕಾರದ 1.29 ಕೋಟಿಗೂ ಅಧಿಕ ಹಣವನ್ನ ಗುಳುಂ ಮಾಡಿದ್ದ ದ್ವಿತೀಯ ದರ್ಜೆ ಸಹಾಯಕನಿಗೆ ಜಿಲ್ಲೆಯ ತರೀಕೆರೆ ತಾಲೂಕಿನ ಜೆ.ಎಂ.ಎಫ್.ಸಿ. ನ್ಯಾಯಾಲಯ ಎರಡು ಕೋಟಿ ದಂಡ ಹಾಗೂ ಆರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

    ಶಿವಮೊಗ್ಗ ಮೂಲದ ಮೋಹನ್‍ನಿಗೆ ಶಿಕ್ಷೆ ವಿಧಿಸಲಾಗಿದೆ. 2009ರಲ್ಲಿ ತರೀಕೆರೆ ತಾಲೂಕಿನ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಅಧಿಕಾರಿಗಳ ಸಹಿಯನ್ನ ನಕಲಿ ಮಾಡಿ 1 ಕೋಟಿ 29 ಲಕ್ಷ 8 ಸಾವಿರದ 451 ರೂಪಾಯಿ ಹಣವನ್ನ ವಂಚಿಸಿ ಮೋಸ ಮಾಡಿದ್ದನು. ಈ ಹಣವನ್ನ ತನ್ನ ಹೆಂಡತಿ ಅಕೌಂಟ್‍ಗೆ ಟ್ರಾನ್ಸ್ ಫರ್ ಮಾಡಿದ್ದ.

    ಪತ್ನಿ ಸರ್ಕಾರದ ಹಣವನ್ನ ಹೀಗೆ ದುರುಪಯೋಗ ಮಾಡಿಕೊಳ್ಳಬಾರದೆಂದು ಪತಿಯ ವಿರುದ್ಧವೇ ತಿರುಗಿ ಬಿದ್ದಿದ್ದರು. ಆದರೆ ಸರ್ಕಾರದ ಹಣದ ಆಸೆಗೆ ಪತ್ನಿಯ ಕೊಲೆ ಮಾಡಿದ್ದನು. ಮೋಹನ್ ಪತ್ನಿಯನ್ನ ಕೊಲೆ ಮಾಡಿದ್ದ ಕೇಸಲ್ಲಿ ಈಗಾಗಲೇ ಶಿವಮೊಗ್ಗದ ಜೈಲಿನಲ್ಲಿದ್ದಾನೆ. ಯಾವಾಗ ಸರ್ಕಾರದ ಹಣ ದುರುಪಯೋಗವಾಯ್ತೋ ಆಗ ಅರಣ್ಯ ಇಲಾಖೆಯ ಆರ್‌ಎಫ್ಓ ತರೀಕೆರೆ ಠಾಣೆಯಲ್ಲಿ ದೂರು ನೀಡಿದ್ದರು.

    ಪ್ರಕರಣ ದಾಖಲಿಸಿಕೊಂಡ ತರೀಕೆರೆ ಪೊಲೀಸರು ಮೋಹನ್ ಬಗ್ಗೆ ಮಾಹಿತಿ ಕಲೆ ಹಾಕಿದ ಸಬ್ ಇನ್ಸ್‌ಪೆಕ್ಟರ್ ಶರಣಪ್ಪ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನಪ್ಪ ಆರೋಪಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದರು. 2009 ರಿಂದ ಸುದೀರ್ಘ ವಿಚಾರಣೆ ನಡೆಸಿದ ತರೀಕೆರೆ ಜೆಎಂಎಫ್‍ಸಿ ನ್ಯಾಯಾಲಯ ಮೋಹನ್ ಗೆ ಎರಡು ಕೋಟಿ ದಂಡ ಹಾಗೂ ಆರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಮೋಹನ್ ಸರ್ಕಾರಕ್ಕೆ ದಂಡದ ರೂಪವಾಗಿ ಎರಡು ಕೋಟಿ ಹಣವನ್ನ ನೀಡದ್ದಿದ್ದರೆ ಮತ್ತೆ ಮೂರು ವರ್ಷಗಳ ಕಾಲ ಹೆಚ್ಚಿನ ಜೈಲು ಶಿಕ್ಷೆ ವಿಧಿಸುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ಜೆಎಂಎಫ್‍ಸಿ ನ್ಯಾಯಾಲಯದ ಹಿರಿಯ ಸಿಜೆಎಂಸಿ ನಂಜೇಗೌಡರವರು ಆರೋಪಿಗೆ ಎರಡು ಕೋಟಿ ದಂಡ ಹಾಗೂ ಆರು ವರ್ಷ ಜೈಲು ಶಿಕ್ಷೆಯನ್ನ ಪ್ರಕಟಿಸಿದ್ದಾರೆ.

    ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಗೋವಿಂದರಾಜ್ ಅವರು ವಾದ ಮಂಡಿಸಿದ್ದರು. ಸರ್ಕಾರದ ಕಣ್ಣಿಗೆ ಮಣ್ಣೆರಚಿ ಹಣ ಮಾಡೋ ಭ್ರಷ್ಟ ಅಧಿಕಾರಿಗಳಿಗೆ ಈ ತೀರ್ಪು ಚಳಿ-ಜ್ವರ ತರಿಸುವಂತದ್ದಾಗಿರೋದರಲ್ಲಿ ಯಾವುದೇ ಅನುಮಾನವಿಲ್ಲ. ನಾಲ್ಕು ಜನರಿಗೆ ಇಂತಹ ತೀರ್ಪು ಕೊಟ್ಟರೆ ಉಳಿದವರು ನೆಟ್ಟಗಾಗುತ್ತಾರೆ ಅನ್ನೋದು ಸ್ಥಳೀಯರ ಅಭಿಪ್ರಾಯವಾಗಿದೆ.

  • ಝೂಮ್ ಆ್ಯಪ್ ಮೀಟಿಂಗ್ – ಕ್ಯಾಮೆರಾ ಆಫ್ ಮಾಡದೆ ಮಹಿಳಾ ಕಾರ್ಯದರ್ಶಿಯ ಜೊತೆ ಅಧಿಕಾರಿ ಸೆಕ್ಸ್

    ಝೂಮ್ ಆ್ಯಪ್ ಮೀಟಿಂಗ್ – ಕ್ಯಾಮೆರಾ ಆಫ್ ಮಾಡದೆ ಮಹಿಳಾ ಕಾರ್ಯದರ್ಶಿಯ ಜೊತೆ ಅಧಿಕಾರಿ ಸೆಕ್ಸ್

    – ಕ್ಯಾಮೆರಾ ಆಫ್ ಮಾಡಲು ಹೋಗಿ ಬೇರೆ ಬಟನ್ ಒತ್ತಿದ
    – ಲೈವ್ ಮೀಟಿಂಗ್‍ನಲ್ಲೇ ಸೆಕ್ಸ್ ಮಾಡಿ ಮತ್ತೆ ಸಭೆಗೆ ಹಾಜರಾದ

    ಮಲಿನಾ: ಸರ್ಕಾರಿ ಅಧಿಕಾರಿಯೊಬ್ಬ ಕೆಲಸದ ನಿಮಿತ್ತ ಝೂಮ್ ಆ್ಯಪ್ ಮೂಲಕ ಆನ್‍ಲೈನ್‍ ಮೀಟಿಂಗ್‍ನಲ್ಲಿ ಭಾಗಿಯಾಗಿದ್ದ ವೇಳೆಯೇ ತನ್ನ ಕಾರ್ಯದರ್ಶಿಯೊಂದಿಗೆ ಸೆಕ್ಸ್ ಮಾಡಿರುವ ಘಟನೆ ಫಿಲಿಪ್ಪೀನ್ಸ್‌‌ನಲ್ಲಿ ನಡೆದಿದೆ.

    ಕ್ಯಾವೈಟ್ ಪ್ರಾಂತ್ಯದ ಫಾತಿಮಾ ಡಾಸ್ ಗ್ರಾಮ ಸದಸ್ಯ ಕ್ಯಾಪ್ಟನ್ ಜೀಸಸ್ ಎಸ್ಟಿಲ್ ಕ್ಯಾಮೆರಾ ಆನ್ ಆಗಿರುವುದನ್ನು ತಿಳಿಯದೆ ತನ್ನ ಕಾರ್ಯದರ್ಶಿಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದನು. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಆನ್‍ಲೈನ್‍ನಲ್ಲಿ ಮೀಟಿಂಗ್ ನಡೆಯುತ್ತಿದ್ದರೂ ಸರ್ಕಾರಿ ಅಧಿಕಾರಿ ತನ್ನ ಕಾರ್ಯದರ್ಶಿಯ ಜೊತೆ ಸೆಕ್ಸ್ ಮಾಡಿರುವುದನ್ನು ಕಾಣಬಹುದಾಗಿದೆ.

    ಝೂಮ್ ವಿಡಿಯೊ ಕಾನ್ಫರೆನ್ಸ್ ಆ್ಯಪ್ ಆಗಿದ್ದು, ಕೆಲಸಕ್ಕೆ ಸಂಬಂಧಿಸಿದಂತೆ ಆನ್‍ಲೈಲ್ ಮೂಲಕ ಮೀಟಿಂಗ್ ನಡೆಸಲಾಗುತ್ತದೆ. ಅದೇ ರೀತಿ ಆಗಸ್ಟ್ 26 ರಂದು ಕ್ಯಾಪ್ಟನ್ ಜೀಸಸ್ ಎಸ್ಟಿಲ್ ಕೆಲಸದ ನಿಮಿತ್ತ ಝೂಮ್ ಆ್ಯಪ್ ಮೂಲಕ ಮೀಟಿಂಗ್‍ನಲ್ಲಿ ಭಾಗವಹಿಸಿದ್ದನು. ಸ್ವಲ್ಪ ಸಮಯದ ನಂತರ ಎಸ್ಟಿಲ್ ಬ್ರೇಕ್ ತೆಗೆದುಕೊಂಡಿದ್ದಾನೆ. ಆಗ ಆತನ ಕಾರ್ಯದರ್ಶಿ ರೂಮಿಗೆ ಬಂದಿದ್ದಾಳೆ.

    ಈ ವೇಳೆ ಎಸ್ಟಿಲ್ ಝೂಮ್ ಕ್ಯಾಮೆರಾ ಆಫ್ ಮಾಡಲು ಹೋಗಿ ಬೇರೆ ಬಟನ್ ಒತ್ತಿದ್ದಾನೆ. ಹೀಗಾಗಿ ಕ್ಯಾಮೆರಾ ಆನ್ ಆಗಿತ್ತು. ಆದರೆ ಎಸ್ಟಿಲ್ ಕ್ಯಾಮೆರಾ ಆನ್ ಆಗಿದೆ ಎಂದು ತಿಳಿಯದೆ ಮಹಿಳೆಯೊಂಧಿಗೆ ಸೆಕ್ಸ್ ಮಾಡಿದ್ದಾನೆ. ಮೀಟಿಂಗ್‍ನಲ್ಲಿ ಭಾಗವಹಿಸಿದ್ದ ಇತರರು ಸಭೆಯಲ್ಲಿ ಚರ್ಚೆ ಮಾಡುತ್ತಿದ್ದರು. ಕಾರ್ಯದರ್ಶಿಯ ಜೊತೆ ಸೆಕ್ಸ್ ಮಾಡಿದ ನಂತರ ಎಸ್ಟಿಲ್ ಮತ್ತೆ ಆನ್‍ಲೈನ್ ಮೀಟಿಂಗ್‍ಗೆ ಸೇರಿಕೊಂಡಿದ್ದಾನೆ.

    ಇದೇ ವೇಳೆ ಮೀಟಿಂಗ್‍ನಲ್ಲಿ ಹಾಜರಾಗಿದ್ದ ಸಿಬ್ಬಂದಿಯೊಬ್ಬರು ಎಸ್ಟಿಲ್ ಸೆಕ್ಸ್ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ನಂತರ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗ್ರಾಮ ಸದಸ್ಯನ ವಿರುದ್ಧ ಕೆಲ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆತನ ವಿರುದ್ಧ ದೂರು ದಾಖಲಿಸಿದ್ದಾರೆ.

    ವಿಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರು ಕ್ಷಮೆ ಕೇಳಿದ್ದಾರೆ. ಆದರೂ ಗ್ರಾಮಸ್ಥರು ದೂರಿನ ಅನ್ವಯ ದೇಶದ ಆಂತರಿಕ ಮತ್ತು ಸ್ಥಳೀಯ ಸರ್ಕಾರದ ಇಲಾಖೆ ಎಸ್ಟಿಲ್‍ನಲ್ಲಿ ಆತನ ಕೆಲಸದಿಂದ ವಜಾಗೊಳಿಸಲಾಗಿದೆ.

  • ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ: ವಿಡಿಯೋ ವೈರಲ್

    ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ: ವಿಡಿಯೋ ವೈರಲ್

    – ಪರಸ್ಪರ ದೂರು ದಾಖಲು

    ಚಂಡೀಗಢ: ಬಿಜೆಪಿ ಮುಖಂಡೆ, ಟಿಕ್‍ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರು ಸರ್ಕಾರಿ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಫೋಗಟ್ ಶುಕ್ರವಾರ ಹಿಸಾರ್ ನ ಬಾಲ್ಸಮಂದ್ ಮಂಡಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹಿಸಾರ್ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಲ್ತಾನ್ ಸಿಂಗ್‍ರನ್ನು ಫೋಗಟ್ ಥಳಿಸಿದ್ದಾರೆ. ಕೆಲವು ರೈತರು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸುವ ವಿಚಾರದಲ್ಲಿ ಸಮಸ್ಯೆಗಳಿವೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಫೋಗಟ್ ಮಂಡಿಯ ಪರಿಶೀಲನೆಗೆ ಹೋಗಿದ್ದರು. ಆಗ ಸುಲ್ತಾನ್ ಸಿಂಗ್ ನಿಮ್ಮಂಥ ಸುಂದರ ಚೆಲುವೆ, ಸ್ಟಾರ್ ಬಿಸಿಲಿನಲ್ಲಿ ಹೀಗೆ ಮಂಡಿಗೆ ಬರಬಾರದು ಎಂದು ಹೇಳಿದ್ದರು ಎನ್ನಲಾಗಿದೆ.

    ಇದರಿಂದ ಕೋಪಗೊಂಡ ಫೋಗಟ್, ಸಿಂಗ್ ಜೊತೆ ತೀವ್ರವಾಗಿ ಮಾತುಕತೆ ನಡೆಸಿದ್ದಾರೆ. ನಂತರ ಚಪ್ಪಲಿ ತೆಗೆದುಕೊಂಡು ಥಳಿಸಿದ್ದಾರೆ. ಈ ವಿಡಿಯೋವನ್ನು ಸ್ಥಳದಲ್ಲಿದ್ದವರು ರೆಕಾರ್ಡ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. “ನಿಮ್ಮಂತಹ ಜನರಿಂದ ನಿಂದನೆಗಳನ್ನು ಕೇಳಲು ನಾನು ಕೆಲಸ ಮಾಡುತ್ತಿದ್ದೇನೆ? ಗೌರವಾನ್ವಿತವಾಗಿ ಬದುಕಲು ನನಗೆ ಹಕ್ಕಿಲ್ಲವೇ?” ಎಂದು ಫೋಗಟ್ ವೀಡಿಯೊದಲ್ಲಿ ಹೇಳಿದ್ದಾರೆ.

    ಪರಸ್ಪರ ಪೊಲೀಸರಿಗೆ ದೂರು:
    ಈ ಘಟನೆ ನಡೆದ ನಂತರ ಫೋಗಟ್ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ, ಸುಲ್ತಾನ್ ಸಿಂಗ್ ಅಸಭ್ಯವಾಗಿ ಮಾತನಾಡಿ ನನ್ನನ್ನು ಅವಮಾನಿಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಇತ್ತ ಸುಲ್ತಾನ್ ಸಿಂಗ್ ಕೂಡ ಒಬ್ಬ ಸರ್ಕಾರಿ ಅಧಿಕಾರಿಯ ಮೇಲೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಫೋಗಟ್ ವಿರುದ್ಧ ದೂರು ದಾಖಲಿಸಿದ್ದಾರೆ.

    ಸುಲ್ತಾನ್ ಸಿಂಗ್ ಮತ್ತು ಫೋಗಟ್ ಇಬ್ಬರು ಪರಸ್ಪರ ದೂರು ದಾಖಲಿಸಿದ್ದಾರೆ. ನಾವು ಇಬ್ಬರ ಹೇಳಿಕೆಗಳು ಮತ್ತು ವಿಡಿಯೋಗಳನ್ನು ಪರಿಶೀಲಿಸುತ್ತಿದ್ದೇವೆ. ನಂತರ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಫೋಗಟ್ ವಿರುದ್ಧ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ಕೃತ್ಯಗಳನ್ನು ಬಿಜೆಪಿ ಮುಖಂಡೆ ಮಾಡಿದ್ದಾರೆ. ಸರ್ಕಾರಿ ಕೆಲಸ ಮಾಡುವುದು ಅಪರಾಧವೇ? ಸಿಎಂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಫೋಗಟ್ ವಿರುದ್ಧ ಕ್ರಮ ತೆಗೆದುಕೊಳ್ಳುವರೇ” ಎಂದು ಪ್ರಶ್ನೆ ಮಾಡಿದ್ದಾರೆ.

    ಕಳೆದ ವರ್ಷ ಅದಂಪುರದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋನಾಲಿ ಫೋಗಟ್ ಸ್ಪರ್ಧಿಸಿದ್ದರು. ಆಗ ಕಾಂಗ್ರೆಸ್‍ನ ಕುಲದೀಪ್ ಬಿಶ್ನೋಯಿ ವಿರುದ್ಧ ಸೋತಿದ್ದರು.

  • ಕೊರೊನಾದಿಂದ ಸರ್ಕಾರಿ ಸಿಬ್ಬಂದಿಗೆ ಸಂಬಳ ಕೊಡೋಕೆ ಯೋಚನೆ ಮಾಡಬೇಕಿದೆ: ಸಚಿವ ಈಶ್ವರಪ್ಪ

    ಕೊರೊನಾದಿಂದ ಸರ್ಕಾರಿ ಸಿಬ್ಬಂದಿಗೆ ಸಂಬಳ ಕೊಡೋಕೆ ಯೋಚನೆ ಮಾಡಬೇಕಿದೆ: ಸಚಿವ ಈಶ್ವರಪ್ಪ

    ಚಿಕ್ಕಬಳ್ಳಾಪುರ: ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದೆ. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಳ ನೀಡಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಬಗ್ಗೆ ಸಭೆ ನಡೆಸಿ ಮಾತನಾಡುತ್ತಿದ್ದ ಸಚಿವವರು, ಸಭೆ ನಡುವೆ ಕೊರೊನಾದಿಂದ ಸರ್ಕಾರಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಸಂಬಳ ಕೊಡೋಕೆ ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ. ಒಂದು ಕಡೆ ನಾವು ಜನರನ್ನು ಮನೆಯಲ್ಲಿರುವಂತೆ ಮನವಿ ಮಾಡುತ್ತೇವೆ. ಅಧಿಕಾರಿಗಳನ್ನು ಮನೆಯಲ್ಲೇ ಇರುವಂತೆ ಹೇಳುತ್ತೇವೆ. ಮತ್ತೊದೆಡೆ ಹಣಕಾಸಿನ ಸಮಸ್ಯೆ ಇದೆ. ಯಾವುದೇ ಹಳ್ಳಿಗಳಿಗೂ ಹೋದರೂ ದಾನ ಧರ್ಮ ಮಾಡುವವರ ಸಂಖ್ಯೆ ಬಹಳ ಇದೆ. ನಮ್ಮ ಸಂಸ್ಕೃತಿಯೇ ನಮ್ಮನ್ನ ಉಳಿಸುತ್ತಿದೆ. ಅಕ್ಕಿಯನ್ನು ಇಲ್ಲ ಅಂತಿದ್ದವರು ಈಗ ಮನೆಯಲ್ಲಿ ಸ್ಟಾಕ್ ಮಾಡಿಕೊಂಡಿದ್ದಾರೆ. ಬಡವರಿಗೆಲ್ಲರಿಗೂ ಸರ್ಕಾರ ಸ್ಪಂದಿಸುತ್ತಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರು ಕುಡಿಯುವ ನೀರು ಪೂರೈಕೆಯ ಟ್ಯಾಂಕರ್ ಗಳ ಹಣ ಸೇರಿದಂತೆ ಕೆಲ ಯೋಜನೆಗಳ ಹಣ ಇನ್ನೂ ಬಿಡುಗಡೆಯಾಗಬೇಕಿದೆ ಎಂದು ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಮಾತನಾಡಿದ ಈಶ್ವರಪ್ಪ, ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆಯಿದೆ. ಹಲವು ಯೋಜನೆಗಳಿಗೆ ಸಕಾಲಕ್ಕೆ ಹಣ ಬಿಡುಗಡೆಯಾಗಿಲ್ಲ. ಸರ್ಕಾರದಲ್ಲಿ ಹಣ ಇದ್ದಿದ್ದರೇ ಒಂದು ವಾರದೊಳಗೆ ಹಣ ಬಿಡುಗಡೆ ಮಾಡಿಕೊಡಿಸುತ್ತಿದೆ. ಆದರೆ ಈಗ ಆ ರೀತಿ ಮಾಡಲು ಆಗುತ್ತಿಲ್ಲ. ಆದರೂ ಕೇಂದ್ರ ಸರ್ಕಾರದಿಂದ ಈ ಬಾರಿ ಒಂದೇ ಕಂತಿನಲ್ಲಿ ಮೊದಲ ಬಾರಿಗೆ 1,861 ಕೋಟಿ ನರೇಗಾ ಹಣ ಬಿಡುಗಡೆಯಾಗಿದೆ. ಹೀಗಾಗಿ ಬಂದ ಹಣವನ್ನು ನಿಮಗೆ ಕೊಡುತ್ತೇವೆ. ಇನ್ನೂ ಇಲ್ಲ ಅಂದಾಗಲೂ ನಿಮಗೆ ಹೇಳಬೇಕಲ್ವಾ ಎಂದು ಹೇಳುತ್ತಿರುವುದಾಗಿ ತಿಳಿಸಿದರು. ನಂತರ ಇದೇ ಮಾತಿಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರ್ಥಿಕ ಸಮಸ್ಯೆ ಇರೋದು ನಿಜವಾದ್ರೂ, ಸರ್ಕಾರ ಈ ಸಮಸ್ಯೆಯನ್ನ ಬಗೆಹರಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಪತ್ನಿ ಕೊಲ್ಲಲು ಯತ್ನಿಸಿದ ಸರ್ಕಾರಿ ಅಧಿಕಾರಿ- ಪೋಷಕರ ಆರೋಪ

    ಪತ್ನಿ ಕೊಲ್ಲಲು ಯತ್ನಿಸಿದ ಸರ್ಕಾರಿ ಅಧಿಕಾರಿ- ಪೋಷಕರ ಆರೋಪ

    ಮೈಸೂರು: ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ.

    ನಾಗವೇಣಿ (41) ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಪತಿಯೇ ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

    ವೆಂಕಟಪ್ಪಗೆ 1997ರಲ್ಲಿ ನಾಗವೇಣಿಯನ್ನು ಮದುವೆ ಮಾಡಿಕೊಡಲಾಗಿತ್ತು. ನಾಗವೇಣಿ  ಪತಿ ವೆಂಕಟಪ್ಪ, ಹುಣಸೂರು ತಾಲೂಕಿನಲ್ಲಿ ಸಹಾಯಕ ಶಿಶುಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಮೈಸೂರು ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ಈ ದಂಪತಿ ವಾಸವಿದ್ದರು.

    ಆದರೆ ಈಗ ನಾಗವೇಣಿ ಪೋಷಕರು, ಅಳಿಯ ವೆಂಕಟಪ್ಪ ಕೆಲ ತಿಂಗಳಿನಿಂದ ಕುಡಿದು ಬಂದು ಮಗಳಿಗೆ ಹೊಡೆದು ಕಿರುಕುಳ ಕೊಡುತ್ತಿದ್ದನು. ಅಲ್ಲದೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಈ ಬಗ್ಗೆ ನಮ್ಮ ಮಗಳು ನಮಗೆ ಹೇಳಿದ್ದಳು. ನಂತರ ನಾವು ಅಳಿಯನಿಗೆ ಬುದ್ಧಿವಾದ ಹೇಳಿದ್ದೆವು. ಆದರೆ ಆತ ನಮಗೆ ಅವಾಚ್ಯ ಪದದಿಂದ ಬೈದಿದ್ದನು. ಈಗ ಆತನೇ ಮಗಳಿಗೆ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.