Tag: Government Order

  • ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಿ – ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

    ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಿ – ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

    ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವೀಡಿಯೋ ಮಾಡಬಾರದೆಂದು ಸರ್ಕಾರ ಹೊರಡಿಸಿದ್ದ  ಆದೇಶದಲ್ಲಿ ವ್ಯಾಕರಣ ದೋಷ ಹೆಚ್ಚಿದ್ದರಿಂದ ಟೀಕೆ ಕೇಳಿ ಬಂದಿದೆ. ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಬೇಕೆಂಬುದು ನಮ್ಮ ಸಲಹೆ ಎಂದು ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟ್ಟರ್ ಮೂಲಕ ಕಿಡಿಕಾರಿದೆ.

    ಟ್ವೀಟ್‍ನಲ್ಲಿ ಏನಿದೆ:
    ಭ್ರಷ್ಟ ರಕ್ಷಕ ಸರ್ಕಾರಕ್ಕೆ ರಾತ್ರೋರಾತ್ರಿ ಯೂಟರ್ನ್ ಹೊಡೆಯುವಂತೆ ಚಾಟಿಯೇಟು ಬಿದ್ದಿದೆ. ಸಾರ್ವಜನಿಕ ಟೀಕೆ, ವಿಪಕ್ಷಗಳ ವಿರೋಧವೇ ಬರಬೇಕಾ ಭ್ರಷ್ಟ ಬಿಜೆಪಿ ಸರ್ಕಾರ ಬುದ್ಧಿ ಕಲಿಯಲು? ಬಿಜೆಪಿ ಸರ್ಕಾರ ʼಮದ್ಯ’ ʼರಾತ್ರಿʼ ಕೆಲಸಗಳನ್ನು ನಿಲ್ಲಿಸಬೇಕು ಮತ್ತು ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಬೇಕೆಂಬುದು ನಮ್ಮ ಸಲಹೆ ಎಂದು ಟ್ವೀಟ್ ಮಾಡಿದೆ. ಇದನ್ನೂ ಓದಿ: ಸರ್ಕಾರದ ಆದೇಶದಲ್ಲಿ ವ್ಯಾಕರಣ ದೋಷ- ವಾಪಸ್ ಪಡೆದ ಆದೇಶಕ್ಕೆ ಮತ್ತೊಮ್ಮೆ ತಿದ್ದುಪಡಿ

    ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವೀಡಿಯೋ ಮಾಡಬಾರದೆಂದು ಸರ್ಕಾರ ಹೊರಡಿಸಿದ ಆದೇಶವನ್ನು ರಾಜ್ಯ ಸರ್ಕಾರ ಮಧ್ಯರಾತ್ರಿ ಹಿಂಪಡೆದಿದೆ. ಆದರೆ ಆ ಆದೇಶದಲ್ಲಿ ವ್ಯಾಕರಣ ದೋಷಗಳೇ ತುಂಬಿತ್ತು. ನಡಾವಳಿ ಎಂಬ ಶಬ್ದವನ್ನು ನಡವಳಿ, ಪ್ರಸ್ತಾವನೆಯನ್ನು ಪ್ರಸತ್ತಾವನೆ, ಮೇಲೆ- ಮೇಲೇ, ಭಾಗ- ಬಾಗ, ಕರ್ನಾಟಕ- ಕರ್ನಾಟಾ, ಆಡಳಿತ- ಆಡಳಿದ ಎಂದು ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಆದೇಶದಲ್ಲಿ ಆಗಿದ್ದ ವ್ಯಾಕರಣದ ಲೋಪದೋಷಗಳನ್ನು ಸರಿಪಡಿಸಿ ಮತ್ತೊಮ್ಮೆ ತಿದ್ದುಪಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಭೀತಿ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

    ಕೊರೊನಾ ಭೀತಿ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

    ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ ಬೆನ್ನಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ತೆರೆದ ಪ್ರದೇಶಗಳನ್ನು ಹೊರತುಪಡಿಸಿ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಮಾಸ್ಕ್ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

    ಆದೇಶದಲ್ಲಿ ರೈಲುಗಳು, ಬಸ್‍ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಮುಚ್ಚಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಪ್ರದೀಪ್ ವ್ಯಾಸ್ ತಮ್ಮ ಆದೇಶದಲ್ಲಿ ಹೇಳಿದರು. ಇದನ್ನೂ ಓದಿ:  ದೇವಸ್ಥಾನದಲ್ಲಿ ಮದುವೆಯಾಗಲು ಬಿಡಲ್ಲ – ಗುಜರಾತ್ ಯುವತಿ ವಿರುದ್ಧ ಸಿಡಿದ ಬಿಜೆಪಿ ನಾಯಕಿ

    mask

    ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ಈ ನಡುವೆ ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಏರಿಕೆ ಕಾಣುತ್ತಿದೆ. ಮೂರು ತಿಂಗಳ ಬಳಿಕ ಮೊದಲ ಬಾರಿ ನಿತ್ಯ ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳ ವರದಿಯಾಗುತ್ತಿದೆ. ಮುಂಬೈ, ಪುಣೆ, ಥಾಣೆಯಂತಹ ಮಹಾ ನಗರಗಳಲ್ಲಿ ಸೋಂಕು ಹೆಚ್ಚುತ್ತಿದೆ ಎಂದು ಆದೇಶದಲ್ಲಿ ತಿಳಿಸಿದರು.

    ಕಳೆದ ಎರಡು ವಾರಕ್ಕೆ ಹೋಲಿಸಿದರೇ ಕಳೆದೊಂದು ವಾರದಿಂದ ಒಂಭತ್ತು ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ಬಿಎ.4 ಮತ್ತು ಬಿಎ.5 ಉಪವಿಭಾಗಗಳನ್ನು ಹೊಂದಿರುವ ರೋಗಿಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಹಿನ್ನೆಲೆ ನಾವು ಈ ಹಂತದಲ್ಲಿ ಎಚ್ಚರಿಕೆ ವಹಿಸುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೊಮ್ಮಾಯಿ ಹೇಳಿಕೆ ಸ್ವಾಗತಾರ್ಹ, ಚಕ್ರತೀರ್ಥನನ್ನು ಬಂಧಿಸಿ: ನಾರಾಯಣಗೌಡ 

    ಶುಕ್ರವಾರ 1,134 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಹೊಸ ಪ್ರಕರಣಗಳ ಪೈಕಿ 763 ಪ್ರಕರಣಗಳು ಮುಂಬೈನಿಂದಲೇ ವರದಿಯಾಗಿದೆ.

  • ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು – ಮಡಿಕೇರಿ ಪಟ್ಟಣದಲ್ಲೇ ನಡೆಯುತ್ತಿವೆ ಎರಡೆರಡು ಅದ್ಧೂರಿ ಮದುವೆ

    ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು – ಮಡಿಕೇರಿ ಪಟ್ಟಣದಲ್ಲೇ ನಡೆಯುತ್ತಿವೆ ಎರಡೆರಡು ಅದ್ಧೂರಿ ಮದುವೆ

    ಮಡಿಕೇರಿ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಸರ್ಕಾರ ಸಾಮೂಹಿಕ ಕಾರ್ಯಕ್ರಮಗಳನ್ನು ನಿಷೇಧಿಸಿದ್ದರೂ ಮಂಜಿನ ನಗರಿ ಮಡಿಕೇರಿ ಪಟ್ಟಣದ ಕಾವೇರಿ ಹಾಲ್ ಹಾಗೂ ಗೌಡ ಸಮಾಜದಲ್ಲಿ ಅದ್ಧೂರಿ ಮದುವೆಗಳು ನಡೆಯುತ್ತಿವೆ.

    ಮದುವೆ, ಸಭೆ-ಸಮಾರಂಭಗಳಿಗೆ ನಿರ್ಬಂಧವಿದ್ದರೂ ಮಡಿಕೇರಿ ನಗರದಲ್ಲೇ ಎರಡೆರಡು ಮದುವೆಗಳು ನಡೆಯುತ್ತಿವೆ. ಕಾವೇರಿ ಹಾಲ್‍ನಲ್ಲಿ ಸುಮಾರು 1,500 ಹಾಗೂ ಗೌಡ ಸಮಾಜದಲ್ಲಿ 300ಕ್ಕೂ ಹೆಚ್ಚು ಮಂದಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಜಿಲ್ಲೆಗೆ ಈಗಾಗಲೇ 65 ಜನರು ವಿದೇಶದಿಂದ ಮರಳಿದ್ದಾರೆ. ಶನಿವಾರದವರೆಗೂ ವಿದೇಶದಿಂದ ವಾಪಸ್ ಬಂದಿರುವವರು ಆರಾಮಾಗಿ ಓಡಾಡಿಕೊಂಡೇ ಇದ್ದರು.

    ಇಷ್ಟೆಲ್ಲಾ ಆದರೂ ಅದ್ಧೂರಿ ಮದುವೆಗಳಿಗೆ ಕಡಿವಾಣ ಇಲ್ಲದಂತೆ ಆಗಿದೆ. ಸರ್ಕಾರದ ನಿಯಮಕ್ಕೂ ಕಿಮ್ಮತ್ತು ತೋರದ ಅಧಿಕಾರಿಗಳು ನಗರದಲ್ಲೇ ಮದುವೆ ನಡೆಯುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಬಗ್ಗೆ ಮದುವೆ ಮನೆಯವರು ಮಾತನಾಡಿ ನಾವು ಈ ಕೊರೊನಾ ವೈರಸ್ ಬರುವ ಮೊದಲೇ ಮದುವೆ ಹಾಲ್‍ಗಳು ಬುಕ್ ಮಾಡಿದ್ದೆವು. ಈಗ ದಿಢೀರ್ ಆಗಿ ಕೊರೊನಾ ವೈರಸ್ ರಾಜುದಲ್ಲಿ ಹರಡುತ್ತಿರುವುದಕ್ಕೆ ಸಮಸ್ಯೆ ಆಗುತ್ತಿದೆ. ಆದರೂ ಕುಟುಂಬಸ್ಥರು ಮದುವೆಗೆ ಬಂದು ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.