Tag: government school

  • ಜ್ಞಾನದೀವಿಗೆ ಉಚಿತ ಟ್ಯಾಬ್ ವಿತರಿಸಿದ ಸಚಿವ ಸುಧಾಕರ್

    ಜ್ಞಾನದೀವಿಗೆ ಉಚಿತ ಟ್ಯಾಬ್ ವಿತರಿಸಿದ ಸಚಿವ ಸುಧಾಕರ್

    – ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿತರಣೆ

    ಚಿಕ್ಕಬಳ್ಳಾಪುರ: ಪಬ್ಲಿಕ್ ಟಿವಿ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಉಚಿತ ಟ್ಯಾಬ್ ವಿತರಣೆ ಮಾಡುತ್ತಿರುವ ಅಂಗವಾಗಿ ಇಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಸುಧಾಕರ್ ಟ್ಯಾಬ್ ವಿತರಣೆ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಇಂದು ಸಚಿವ ಸುಧಾಕರ್ ಸಾಂಕೇತಿಕವಾಗಿ ಟ್ಯಾಬ್ ವಿತರಿಸಿದರು. ಇಂದು ಬಿಬಿ ರಸ್ತೆಯ ಪ್ರೌಢಶಾಲೆಯ 201 ಮಂದಿ ವಿದ್ಯಾರ್ಥಿಗಳಿಗೆ 102 ಟ್ಯಾಬ್ ವಿತರಿಸಲಾಯಿತು.

    ಸಚಿವ ಸುಧಾಕರ್ ಪಬ್ಲಿಕ್ ಟಿವಿ ಸಮಾಜಮುಖಿ ಕಾರ್ಯಕ್ಕೆ ಕೈ ಜೋಡಿಸಿದ್ದು, ಇಡೀ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೂ ತಮ್ಮ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಟ್ಯಾಬ್ ವಿತರಣೆ ಮಾಡುವುದಾಗಿ ತಿಳಿಸಿದರು. ಟ್ಯಾಬ್ ವಿತರಿಸಿ ಮಾತನಾಡಿದ ಅವರು, ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್ ಆರ್ ರಂಗನಾಥ್ ಅವರ ಸಮಾಜಮುಖಿ ಕಾರ್ಯವನ್ನ ಕೊಂಡಾಡಿದರು. ಟ್ಯಾಬ್ ಪಡೆದ ವಿದ್ಯಾರ್ಥಿಗಳು, ಸಚಿವ ಸುಧಾಕರ್ ಹಾಗೂ ಪಬ್ಲಿಕ್ ಟಿವಿಗೆ ಧನ್ಯವಾದಗಳನ್ನ ಅರ್ಪಿಸಿದ್ದಾರೆ.

  • ಜ್ಞಾನದೀವಿಗೆ ಸರ್ಕಾರಿ ಮಕ್ಕಳ ದಾರಿದೀಪ- ಮಲಬಾರ್ ಗೋಲ್ಡ್ ಸಾಮಾಜಿಕ ಕಾಳಜಿಗೆ ಉಡುಪಿ ಡಿಸಿ ಮೆಚ್ಚುಗೆ

    ಜ್ಞಾನದೀವಿಗೆ ಸರ್ಕಾರಿ ಮಕ್ಕಳ ದಾರಿದೀಪ- ಮಲಬಾರ್ ಗೋಲ್ಡ್ ಸಾಮಾಜಿಕ ಕಾಳಜಿಗೆ ಉಡುಪಿ ಡಿಸಿ ಮೆಚ್ಚುಗೆ

    ಉಡುಪಿ: ಮೊಬೈಲ್, ಟಿವಿ ಇಲ್ಲದ ಸಾಕಷ್ಟು ಕುಟುಂಬಗಳು ಉಡುಪಿ ಜಿಲ್ಲೆಯಲ್ಲಿವೆ. ಸಂಕಷ್ಟದ ಸಂದರ್ಭದಲ್ಲಿ ಪಬ್ಲಿಕ್ ಟಿವಿ ಮತ್ತು ರೋಟರಿ ಸಂಸ್ಥೆ ಸಹಯೋಗದ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಮಲಬಾರ್ ಗೋಲ್ಡ್ ಸಂಸ್ಥೆ ಕೈಜೋಡಿಸಿರುವುದು ನಮಗೆ ಸಂತಸ ಮತ್ತು ಹೆಮ್ಮೆಯ ವಿಷಯ ಎಂದು ಡಿಸಿ ಜಿ. ಜಗದೀಶ್ ಸಂತಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿ ಸುದ್ದಿವಾಹಿನಿ ಮತ್ತು ರೋಟರಿ ಇಂಟರ್ ನ್ಯಾಷನಲ್ ಸಹಯೋಗದ ಜ್ಞಾನ ದೀವಿಗೆ ಉಚಿತ ಟ್ಯಾಬ್ ವಿತರಣಾ ಅಭಿಯಾನಕ್ಕೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆ ಕೈಜೋಡಿಸಿದೆ. ಉಡುಪಿ ಜಿಲ್ಲೆಯ ಎರಡು ಸರ್ಕಾರಿ ಶಾಲೆಗಳಿಗೆ 100 ಟ್ಯಾಬ್ ಗಳನ್ನು ವಿತರಣೆ ಮಾಡಿದೆ.

    ಕುಂದಾಪುರ ತಾಲೂಕು, ಸಿದ್ದಾಪುರ ಸರ್ಕಾರಿ ಶಾಲೆಯ 100 ಮಕ್ಕಳಿಗೆ, ಸರ್ಕಾರಿ ಪ್ರೌಢಶಾಲೆ ಹೆಬ್ರಿಯ 100 ಮಕ್ಕಳಿಗೆ ಉಪಯೋಗವಾಗುವ ಟ್ಯೂಬ್ ಗಳನ್ನು ಮಲಬಾರ್ ಗೋಲ್ಡ್ ಸಂಸ್ಥೆ ನೀಡಿದೆ. 3,45,000 ರೂಪಾಯಿ ಮೊತ್ತದ ಟ್ಯೂಬ್ ಗಳನ್ನು ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಣೆ ಮಾಡಲಾಯಿತು. ಮಲಬಾರ್ ಗೋಲ್ಡ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್ ಭಾಗವಹಿಸಿ ಮಾತನಾಡಿದರು.

    ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಅವರ ಸಮಾಜಮುಖಿ ಕಾರ್ಯ ಶ್ಲಾಘನೀಯ. ಮಕ್ಕಳ ಶಿಕ್ಷಣಕ್ಕೆ ದೇಣಿಗೆ ದೊಡ್ಡ ಮಟ್ಟದ ನೀಡಿದ್ದು, ತಂತ್ರಜ್ಞಾನ ಕೈಗೆಟುಕದ ಮಕ್ಕಳಿಗೆ ಬಹಳ ಉಪಯೋಗ ಆಗಲಿದೆ. ಹಳ್ಳಿಯ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ, ಮಕ್ಕಳ ಏಳಿಗೆಗಾಗಿ ಕೈಗೊಂಡ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಟ್ಯಾಬ್ ಗಳು ಪೂರಕವಾಗಲಿ. ಸಮಾಜದಲ್ಲಿ ಯಾರಿಗೆಲ್ಲಾ ಕೊಡುಗೆ ನೀಡಲು ಸಾಧ್ಯವೋ ಅವರು ಈ ಅಭಿಯಾನಕ್ಕೆ ಕೈಜೋಡಿಸಬೇಕು. ವಿದ್ಯಾದಾನ ಕೆಲಸ ಬಹಳ ಪುಣ್ಯದ ಕಾರ್ಯ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

    ಕೊರೊನಾ ಕಾಲದಲ್ಲಿ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ. ಹಳ್ಳಿಯ ಸರ್ಕಾರಿ ಬಡಮಕ್ಕಳಿಗೆ ಆನ್‍ಲೈನ್ ತರಗತಿಗಳು ಕೈಗೆಟುಕಲಿಲ್ಲ. ನಮ್ಮ ಲಾಭಾಂಶದ ಐದು ಶೇಕಡಾವನ್ನು ಸಾಮಾಜಿಕ ಚಟುವಟಿಕೆಗಳಿಗೆ ನಾವು ಆರಂಭದಿಂದಲೂ ನೀಡುತ್ತಾ ಬಂದಿದ್ದೇವೆ. ಶೈಕ್ಷಣಿಕ , ವೈದ್ಯಕೀಯ, ಪರಿಸರ, ಹೆಣ್ಣುಮಕ್ಕಳಿಗೆ ಚಿನ್ನ ಕೊಟ್ಟು ಮದುವೆ ಮಾಡಿಸುವ ಕೆಲಸದಲ್ಲಿ ಮಲಬಾರ್ ಗೋಲ್ಡ್ ತೊಡಗಿಸಿಕೊಂಡಿದೆ. ಈವರೆಗೆ ಮಲಬಾರ್ ಗೋಲ್ಡ್ ಸಂಸ್ಥೆ ಭಾರತದಲ್ಲಿ 130 ಕೋಟಿ ರೂಪಾಯಿಯಷ್ಟು ಸಹಾಯ ಮಾಡಿದ್ದೇವೆ. ಮುಂದೆಯೂ ಸಮಾಜಮುಖಿ ಕಾರ್ಯ ವಿಸ್ತರಿಸುತ್ತೇವೆ ಎಂದು ಸಂಸ್ಥೆಯ ಉಡುಪಿ ಹೆಡ್ ಹಫೀಜ್ ರೆಹಮಾನ್ ಹೇಳಿದರು.

    ಡಿಡಿಪಿಐ ಹೆಚ್‍ಎನ್ ನಾಗೂರ, ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಉಡುಪಿಯ ಅಧ್ಯಕ್ಷೆ ರಾಧಿಕಾ ಲಕ್ಷ್ಮೀನಾರಾಯಣ ಈ ಸಂದರ್ಭದಲ್ಲಿ ಮಾತನಾಡಿದರು. ಟ್ಯಾಬ್ ಪಡೆದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸುವುದಾಗಿ ಭರವಸೆ ಕೊಟ್ಟರು. ವಿದ್ಯಾರ್ಥಿಗಳಿಗೆ ಸಂಸ್ಥೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಲಬಾರ್ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಬರದಿಮಂಡಿಗೆರೆಯ ಸರ್ಕಾರಿ ಶಾಲೆಯ 61 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

    ಬರದಿಮಂಡಿಗೆರೆಯ ಸರ್ಕಾರಿ ಶಾಲೆಯ 61 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

    ನೆಲಮಂಗಲ: ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಉಚಿತ ಟ್ಯಾಬ್ ನೀಡುವ ಪಬ್ಲಿಕ್ ಟಿವಿ, ರೋಟರಿ ಕ್ಲಬ್ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ನೆಲಮಂಗಲದ ಸ್ಥಳೀಯ ದಾನಿಗಳು ಕೈಜೋಡಿಸಿದ್ದಾರೆ. ಇಂದು ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬರದಿಮಂಡಿಗೆರೆಯ ಸರ್ಕಾರಿ ಶಾಲೆಯ ಮಕ್ಕಳಿಗೆ ಅನುಕೂಲವಾಗುವಂತೆ 61 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಯಿತು.

    ರಾಜ್ಯಾದ್ಯಂತ ಯಶಸ್ವಿಯಾಗಿ ಸರ್ಕಾರಿ ಶಾಲೆಯ ಮಕ್ಕಳಿಗೆ ಟ್ಯಾಬ್ ವಿತರಣೆ ಮೂಲಕ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಬೆಂಗಳೂರು ವಿಭಾಗದ ಪ್ರೇಮಾ ಚಾಲನೆ ನೀಡಿದರು. ನಂತರ ಟ್ಯಾಬ್ ವಿತರಣೆ ಮಾಡಲಾಯಿತ್ತು.

    ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ದಾನಿಗಳಾದ ಹರ್ಷ ಶಿವಕುಮಾರ್, ದಾಸನಪುರದ ಲಕ್ಷ್ಮಣಮೂರ್ತಿ ಬೂದಿಹಾಳ್ ಗೋವಿಂದರಾಜು, ಕೃಷ್ಣಮೂರ್ತಿ, ಮಂಜುನಾಥ್ ನೆಲಮಂಗಲ ಬಿಇಓ ರಮೇಶ್ ಶಾಲೆಯ ಶಿಕ್ಷಕರು ಹಾಜರಿದ್ದು ಪಬ್ಲಿಕ್ ಟಿವಿಯ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

  • 31 ಸಾವಿರ ಕೊರೊನಾ ಪ್ರಕರಣವಿರುವ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ಓಪನ್

    31 ಸಾವಿರ ಕೊರೊನಾ ಪ್ರಕರಣವಿರುವ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ಓಪನ್

    – ಶಾಲೆಯಲ್ಲಿ ಪಾಠ ಮಾಡೋ ಶಿಕ್ಷಕರೇ ಹಾಕಿಲ್ಲ ಮಾಸ್ಕ್

    ಬಳ್ಳಾರಿ: ಕೊರೊನಾ ಮಹಾಮಾರಿ ಅಟ್ಟಹಾಸ ನಡೆಸುತ್ತಿರುವ ಈ ಸಮಯದಲ್ಲಿ ಶಾಲೆಯನ್ನು ಯಾವಾಗ ಆರಂಭ ಮಾಡಬೇಕು ಎನ್ನುವ ಬಹುದೊಡ್ಡ ಚರ್ಚೆ ನಡೆಯುತ್ತಿದೆ. ಆದರೆ ಗಣಿನಾಡು ಬಳ್ಳಾರಿಯಲ್ಲಿ ಸರ್ಕಾರಿ ಶಾಲೆಯೊಂದನ್ನು ಆರಂಭವಾಗಿದೆ.

    ಹೌದು ಸರ್ಕಾರ ವಿದ್ಯಾಗಮ ಯೋಜನೆಯನ್ನು ಜಾರಿ ಮಾಡಿ ಮಕ್ಕಳನ್ನು ಶಾಲೆಯಿಂದ ದೂರ ಉಳಿಯದಂತೆ ವಠಾರ ಶಾಲೆ ಆರಂಭ ಮಾಡಿದೆ. ಆದರೆ ಶಿಕ್ಷಣ ಇಲಾಖೆಯ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಬಳ್ಳಾರಿ ದುರ್ಗಾಮ್ಮ ದೇವಸ್ಥಾನದ ಬಳಿ ಇರುವ ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯನ್ನು ಶಿಕ್ಷಕರು ಆರಂಭ ಮಾಡಿದ್ದಾರೆ.

    ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳು ಜೀವದ ಜೊತೆಯಲ್ಲಿ ಇಲ್ಲಿನ ಶಿಕ್ಷಕರು ಚೆಲ್ಲಾಟ ಆಡುತ್ತಿದ್ದಾರೆ. ಶಾಲಾ ಕೊಠಡಿಯ ಒಳಗಡೆಯೇ ಮಕ್ಕಳನ್ನು ಕೂರಿಸಿ ಪಾಠ ಮಾಡುತಿದ್ದಾರೆ. ವಿಪರ್ಯಾಸವೆಂದರೆ ಪಾಠ ಮಾಡುವ ಶಿಕ್ಷಕರೇ ಮಾಸ್ಕ್ ಹಾಕಿಲ್ಲ. ಜೊತೆಗೆ ಹಲವಾರು ಮಕ್ಕಳು ಶಾಲೆಗೆ ಮಾಸ್ಕ್ ಧರಿಸದೇ ಬಂದಿದ್ದಾರೆ. 31 ಸಾವಿರ ಸೋಂಕಿತರು ಇರುವ ಜಿಲ್ಲೆಯಲ್ಲಿ ಇದೆಂತಾ ನಿರ್ಲಕ್ಷ್ಯ ಎಂದು ಜನರು ಪ್ರಶ್ನೆ ಮಾಡಿದ್ದಾರೆ.

  • ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆ ಕಡೆ ಪೋಷಕರ ಒಲವು

    ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆ ಕಡೆ ಪೋಷಕರ ಒಲವು

    ಮಂಡ್ಯ: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುತ್ತಿದ್ದ ಪೋಷಕರು, ಈಗ ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ.

    ನಾನು ಕೂಲಿ ಮಾಡಿ ಹೊಟ್ಟೆ ಬಟ್ಟೆಯನ್ನು ಕಟ್ಟಿಯಾದರೂ ನನ್ನ ಮಗುವನ್ನು ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲೇ ಓದಿಸ ಬೇಕೆಂದು ಹಲವು ಪೋಷಕರು ಆಸೆ ಇಟ್ಟುಕೊಂಡು, ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಆದರೆ ಇದೀಗ ಕೊರೊನಾ ವೈರಸ್‍ನಿಂದ ಇಡೀ ದೇಶದಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.

    ಇಂದರಿಂದ ಒಂದು ಉಪಯೋಗವಾಗಿದೆ. ಅದೇನೆಂದರೆ ಪೋಷಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಖಾಸಗಿ ಶಾಲೆಯಲ್ಲಿ ಸಾವಿರಾರು ರೂಪಾಯಿ ಕೊಟ್ಟು ತಮ್ಮ ಮಕ್ಕಳನ್ನು ಓದಿಸುತ್ತಿದ್ದ ಪೋಷಕರು ಲಾಕ್‍ಡೌನ್‍ನಿಂದ ಹಣವಿಲ್ಲದೇ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಶುಲ್ಕವಿಲ್ಲದೇ ಉತ್ತಮ ವಿದ್ಯಾಭ್ಯಾಸ ಸಿಗುತ್ತದೆ ಎಂದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ.

    ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾರಗೌಡನಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಇದೀಗ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು ದಾಖಲಾತಿಯಾಗಲು ತಾಮುಂದು ನಾಮುಂದು ಎಂದು ಮುಗಿ ಬೀಳುತ್ತಿದ್ದಾರೆ. ಪ್ರಸಕ್ತ ವರ್ಷದಲ್ಲಿ ಈ ಶಾಲೆಯಲ್ಲಿ ಶೇಕಡ 20ಕ್ಕೂ ಹೆಚ್ಚು ಮಕ್ಕಳು ದಾಖಲಾತಿಯಾಗಿದ್ದಾರೆ. ಈ ಶಾಲೆಯಲ್ಲಿ 8 ರಿಂದ 10 ನೇ ತರಗತಿಯ ವರೆಗೆ ಕ್ಲಾಸ್‍ಗಳು ಇವೆ. ಈ ಮೂರು ತರಗತಿಯಲ್ಲಿ ಸದ್ಯ 500ಕ್ಕೂ ಅಧಿಕ ಮಕ್ಕಳು ದಾಖಲಾತಿಯಾಗಿವೆ ಎಂದು ಶಾಲೆಯ ಶಿಕ್ಷಕರು ಮಾಹಿತಿ ನೀಡಿದ್ದಾರೆ.

    ಈ ವರ್ಷ 150ಕ್ಕೂ ಹೆಚ್ಚು ಮಕ್ಕಳು ದಾಖಲಾತಿಯಾಗಿದ್ದು, ಈ ಪೈಕಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು ಇಲ್ಲಿಗೆ ಸೇರ್ಪಡೆಯಾಗಿರುವುದೇ ಹೆಚ್ಚಿನ ಸಂಖ್ಯೆಯಾಗಿದೆ. ಈ ಶಾಲೆಯಲ್ಲಿ ನೀಡುತ್ತಿರುವ ವಿದ್ಯಾಭ್ಯಾಸ ಮತ್ತು ಲಾಕ್‍ಡೌನ್ ಹೊಡೆತವೆ ಈ ಬದಲಾವಣೆಗೆ ಕಾರಣ ಎನ್ನಲಾಗುತ್ತಿದೆ.

  • ಶಿಥಿಲಗೊಂಡು ಸೋರುತ್ತಿದೆ ಹಾಸನದ ನೇರ್ಲಿಗೆ ಸರ್ಕಾರಿ ಪ್ರಾಥಮಿಕ ಶಾಲೆ

    ಶಿಥಿಲಗೊಂಡು ಸೋರುತ್ತಿದೆ ಹಾಸನದ ನೇರ್ಲಿಗೆ ಸರ್ಕಾರಿ ಪ್ರಾಥಮಿಕ ಶಾಲೆ

    – ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕ

    ಹಾಸನ: ಕೊರೊನಾದಿಂದ ಉಂಟಾದ ಆರ್ಥಿಕ ಸಂಕಷ್ಟ ಪೋಷಕರನ್ನು ದಿಕ್ಕೆಡಿಸಿದ್ದು ಅನಿವಾರ್ಯವಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆ ಬಿಡಿಸಿ ಸರ್ಕಾರಿ ಶಾಲೆಗೆ ಸೇರಿಸುವ ನಿರ್ಧಾರಕ್ಕೆ ಬರುವಂತೆ ಮಾಡಿದೆ. ಆದರೆ ಸರ್ಕಾರಿ ಶಾಲೆಗಳ ದುಸ್ಥಿತಿ ಈಗ ಪೋಷಕರನ್ನು ಮತ್ತಷ್ಟು ಆತಂಕ್ಕೀಡು ಮಾಡುತ್ತಿದೆ.

    ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ನೇರ್ಲಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 100 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸುಮಾರು 95 ವರ್ಷಕ್ಕೂ ಹೆಚ್ಚು ಹಳೆಯದಾದ ಈ ಶಾಲೆಯು ಶಿಥಿಲವಾಗಿದ್ದು ಯಾವಾಗ ಬೇಕಾದರೂ ಬಿದ್ದು ಹೋಗುವ ಹಂತದಲ್ಲಿದೆ. ಮಳೆ ಬಂದಾಗ ಶಾಲೆ ಎಲ್ಲೆಂದರಲ್ಲಿ ಸೋರುತ್ತೆ. ಇಂತಹ ಶಾಲೆಯಲ್ಲಿ ಅನಿವಾರ್ಯವಾಗಿ ಜೀವ ಕೈಯಲ್ಲಿ ಹಿಡಿದು ಮಕ್ಕಳು ಪಾಠ ಕೇಳಬೇಕಾದ ದುಸ್ಥಿತಿ ಇದೆ.

    ವಿದ್ಯಾರ್ಥಿಗಳಿಗೆ ಸರಿಯಾದ ಶೌಚಾಲಯದ ವ್ಯವಸ್ಥೆಯೂ ಇಲ್ಲ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದರೂ ಪ್ರಯೋಜನ ಆಗುತ್ತಿಲ್ಲ ಅನ್ನೋದು ಗ್ರಾಮಸ್ಥರ ಅಳಲಾಗಿದೆ. ಕೊರೊನಾ ಸಮಯದಲ್ಲಿ ಶಾಲೆಯನ್ನು ತೆರೆದು ಪಾಠ ಆರಂಭಿಸಿದರೆ ಮಕ್ಕಳಿಗೆ ರೋಗ ಹರಡೋ ಸಾಧ್ಯತೆ ಹೆಚ್ಚಾಗಿ ಅವರ ಪ್ರಾಣಕ್ಕೆ ಸಂಕಟವಾಗಬಹುದೆಂಬ ದುಗುಡದಲ್ಲಿ ಸರ್ಕಾರ ಇದೆ. ಆದರೆ ಈ ದುಸ್ಥಿತಿಯಲ್ಲಿರುವ ಕಟ್ಟಡವೇ ಮಕ್ಕಳ ಜೀವಕ್ಕೆ ಕಂಟಕವಾಗಬಹುದು. ಈ ಬಗ್ಗೆ ಸರ್ಕಾರ ಗಮನಹರಿಸಬೇಕಿದೆ ಅನ್ನೋದು ಸ್ಥಳೀಯರ ಒತ್ತಾಯವಾಗಿದೆ.

    ಮಕ್ಕಳ ಆರೋಗ್ಯದ ಕಾರಣಕ್ಕಾಗಿ ಕೊರೊನಾ ಸಮಯದಲ್ಲಿ ಶಾಲೆ ತೆರೆಯಬೇಕೋ ಬೇಡವೋ ಎಂದು ಚಿಂತಿಸುವ ಸರ್ಕಾರಕ್ಕೆ, ಶಿಥಿಲಗೊಂಡಿರುವ ಕಟ್ಟಡಗಳು ಕೂಡ ಮಕ್ಕಳ ಪ್ರಾಣಕ್ಕೆ ಕಂಟಕವಾಗಬಹುದು ಎಂಬ ಚಿಂತನೆ ಯಾಕೆ ಬಂದಿಲ್ಲ ಎಂದು ಜನರ ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ಸರ್ಕಾರ ಗಮನಹರಿಸಿ ನೂತನ ಕಟ್ಟಡದ ನಿರ್ಮಿಸಿಕೊಡುವ ಮೂಲಕ ಸಮಸ್ಯೆ ನಿವಾರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • 8 ವಿದ್ಯಾರ್ಥಿಗಳಿಗೆ 4 ಶಿಕ್ಷಕರು – ಮುಚ್ಚುವ ಹಂತದಲ್ಲಿದೆ ಬಿಎಸ್‍ವೈ ಓದಿದ ಸರ್ಕಾರಿ ಶಾಲೆ

    8 ವಿದ್ಯಾರ್ಥಿಗಳಿಗೆ 4 ಶಿಕ್ಷಕರು – ಮುಚ್ಚುವ ಹಂತದಲ್ಲಿದೆ ಬಿಎಸ್‍ವೈ ಓದಿದ ಸರ್ಕಾರಿ ಶಾಲೆ

    ಮಂಡ್ಯ: ಆ ಶಾಲೆ ಕಳೆದ ಇಪ್ಪತ್ತು ವರ್ಷಗಳ ಹಿಂದೆ ಇಡೀ ಜಿಲ್ಲೆಗೆ ಅತೀ ಹೆಚ್ಚು ವಿದ್ಯಾರ್ಥಿಗಳು ಇದ್ದ ಶಾಲೆ. ಆ ಶಾಲೆಯಲ್ಲಿ ಸಿಎಂ ಯಡಿಯೂರಪ್ಪನವರು ಸಹ ವ್ಯಾಸಂಗ ಮಾಡಿದ್ದರು. ಸದ್ಯ ಈ ಶಾಲೆಯಲ್ಲಿ ಇರುವುದು 8 ವಿದ್ಯಾರ್ಥಿಗಳು, ಅವರಿಗೆ 4 ಮಂದಿ ಶಿಕ್ಷಕರಿದ್ದಾರೆ.

    ಮಂಡ್ಯ ನಗರದ ಆನೆಕೆರೆ ಬೀದಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ವ್ಯಾಸಂಗ ಮಾಡಿದ್ದಾರೆ. ಇಲ್ಲಿ ಬಿ.ಎಸ್.ಯಡಿಯೂರಪ್ಪ ಅವರು 1954-55ರಲ್ಲಿ ಮೂರನೇ ತರಗತಿ ದಾಖಲಾಗಿ ವ್ಯಾಸಂಗ ಮಾಡಿದ್ದಾರೆ. ಸದ್ಯ ಈ ಶಾಲೆ ಮುಚ್ಚುವ ಹಂತಕ್ಕೆ ಬಂದು ತಲುಪಿದೆ.

    ಅಂದು ಬಿಎಸ್‍ವೈ ಓದಿದ್ದ ಈ ಶಾಲೆ ಇಂದು ದುಸ್ಥಿತಿಗೆ ತಲುಪಿದೆ. ಒಂದು ಕಡೆ ಕಟ್ಟಡ ಸರಿಯಾದ ನಿರ್ವಹಣೆ ಇಲ್ಲದೆ ಶಾಲೆ ಶಿಥಿಲವಾಗಿದ್ದರೆ, ಮತ್ತೊಂದು ಕಡೆ ಶಾಲೆಗೆ ಓದಲು ಮಕ್ಕಳಿಲ್ಲದ ಪರಿಸ್ಥಿತಿ ಎದುರಾಗಿದೆ. ಸದ್ಯ ಈ ಶಾಲೆಯಲ್ಲಿ ಕೇವಲ 8 ಜನ ಮಕ್ಕಳಿದ್ದು, 4 ಜನ ಶಿಕ್ಷಕರಿದ್ದಾರೆ. ಈ ಹಿಂದೆ 800 ರಿಂದ 900 ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದರು. ಆದರೆ ಇದೀಗ ಬೆರಳೆಣಿಕೆಯಷ್ಟು ಮಕ್ಕಳು ಓದುತ್ತಿದ್ದಾರೆ.

    ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಏಕೆ ಕಡಿಮೆಯಾಗಿದೆ ಎಂದು ಕೇಳಿದರೆ, ಸದ್ಯ ಈ ಶಾಲೆ ಇರುವ ಪ್ರದೇಶ ವಾಣಿಜ್ಯ ವಹಿವಾಟು ನಡೆಯುವ ಕೇಂದ್ರವಾಗಿದೆ. ಹೀಗಾಗಿ ಇಲ್ಲಿಗೆ ಮಕ್ಕಳು ಬರುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ಶಾಲೆಗೆ ಹೆಚ್ಚು ಮಕ್ಕಳು ಬರುವಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.

    ಶಾಲೆಯ ಅಭಿವೃದ್ಧಿಯ ಬಗ್ಗೆ ಕೇಳಿದರೆ, ಹೀಗಾಗಲೇ ನಾವು 6 ಲಕ್ಷ ರೂಪಾಯಿಯನ್ನು ಶಾಲೆಯ ಅಭಿವೃದ್ಧಿಗೆ ನೀಡಿದ್ದು, ನಿರ್ಮಿತಿ ಕೇಂದ್ರದ ಮೂಲಕ ಅಭಿವೃದ್ಧಿ ಪಡಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಶಾಲೆಯ ಕಟ್ಟಡವನ್ನು ದುರಸ್ಥಿಗೊಳಿಸಿ, ಹೆಚ್ಚು ಮಕ್ಕಳು ಈ ಶಾಲೆ ಕಡೆ ಬರುವಂತಹ ವಾತಾವರಣವನ್ನು ಸೃಷ್ಟಿ ಮಾಡುತ್ತೇವೆ ಎನ್ನುತ್ತಾರೆ. ಸಿಎಂ ಯಡಿಯೂರಪ್ಪ ನವರು ಓದಿದ ಈ ಶಾಲೆ ಶತಮಾನದ ಶಾಲೆಯಾಗಿದೆ. ಆದರೆ ಶತಮಾನದಲ್ಲಿ ಇದ್ದ ಘನತೆ ಮಾತ್ರ ಈಗ ಶಾಲೆಗೆ ಇಲ್ಲ.

  • ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಶಿಕ್ಷಣ

    ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಶಿಕ್ಷಣ

    ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಬೇಡಿಕೆ ಹೆಚ್ಚಿರುವ ಬಗ್ಗೆ ನಿನ್ನೆಯಷ್ಟೇ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ.

    ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ 276 ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಶಿಕ್ಷಣ ನೀಡಲು ಕ್ಯಾಬಿನೆಟ್ ಸಭೆ ನಿರ್ಧರಿಸಿದೆ. ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ಲರ್ನಿಂಗ್ ಆರಂಭಿಸಲು ತೀರ್ಮಾನಿಸಿದ್ದೇವೆ. 430 ಪ್ರಥಮ ದರ್ಜೆ ಕಾಲೇಜು, 87 ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಎಂಜನಿಯರಿಂಗ್ ಕಾಲೇಜುಗಳಿದ್ದು, ಇದಕ್ಕಾಗಿ 35 ಕೋಟಿ ರೂ. ನೀಡಲು ಒಪ್ಪಿಗೆ ನೀಡಲಾಗಿದೆ. ಜೊತೆಗೆ ಬಿಬಿಎಂಪಿಯ 198 ವಾರ್ಡ್‍ಗಳನ್ನು 225ಕ್ಕೆ ಹೆಚ್ಚಿಸುವ ಚರ್ಚೆ ಆಗಿದೆ. ನಾಳೆ ಈ ಬಗ್ಗೆ ನಿರ್ಧಾರವಾಗುತ್ತೆ ಎಂದು ಸಚಿವ ಮಾಧುಸ್ವಾಮಿ ವಿವರಿಸಿದರು. ಇನ್ನೂ ಆಂಬುಲೆನ್ಸ್ ವ್ಯವಸ್ಥೆಗೆ ಇದ್ದ ಕಿಲೋ ಮೀಟರ್ ರೂಲ್ಸ್ ತೆಗೆಯಲು ಸಂಪುಟ ತೀರ್ಮಾನಿಸಿದೆ. ರಾಯಚೂರಿನ ಅರಕೇರಾವನ್ನು ಹೊಸ ತಾಲೂಕಾಗಿ ಘೋಷಿಸಲಾಗಿದೆ.

  • ರಾಜ್ಯದಲ್ಲಿ ಹೊಸ ಟ್ರೆಂಡ್ ಶುರು – ಸರ್ಕಾರಿ ಶಾಲೆಗಳಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್

    ರಾಜ್ಯದಲ್ಲಿ ಹೊಸ ಟ್ರೆಂಡ್ ಶುರು – ಸರ್ಕಾರಿ ಶಾಲೆಗಳಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್

    – ಖಾಸಗಿ ಶಾಲೆಗೆ ಟಾಟಾ, ಸರ್ಕಾರಿ ಸ್ಕೂಲಲ್ಲಿ ಪಾಠ

    ಬೆಂಗಳೂರು: ರಾಜ್ಯದಲ್ಲಿ ಹೊಸ ಟ್ರೆಂಡ್ ಶುರುವಾಗಿದೆ. ಇದು ಹೊಸ ಫ್ಯಾಷನ್, ಹೊಸ ಟೆಕ್ನಾಲಜಿ ಟ್ರೆಂಡ್ ಅಲ್ಲ. ನೂತನ ಎಜುಕೇಷನ್ ಟ್ರೆಂಡ್ ಆರಂಭವಾಗಿದೆ. ಇದೇ ಮೊದಲಿಗೆ ಖಾಸಗಿ ಶಾಲೆಗಳು ಡಿಮ್ಯಾಂಡ್ ಇಳಿಸಿಕೊಂಡಿದ್ದು, ಸರ್ಕಾರಿ ಶಾಲೆಗಳಿಗೆ ಸಖತ್ ಬೇಡಿಕೆ ಶುರುವಾಗಿದೆ.

    ಹೌದು..ಗ್ರಾಮೀಣ ಅಲ್ಲ ಬೆಂಗಳೂರಲ್ಲೂ ಖಾಸಗಿ ಶಾಲೆಗಳಿಗೆ ಡಿಮ್ಯಾಂಡ್ ಕುಗ್ಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ಶಾಲೆಗೆ ಹೆಚ್ಚಾಗಿ ಮಕ್ಕಳು ಆಗಮಿಸುತ್ತಿದ್ದಾರೆ. ತಾಲೂಕು, ಹೋಬಳಿ, ಗ್ರಾಮೀಣ ಭಾಗದಲ್ಲಿಯೂ ಹೆಚ್ಚಿನ ಮಕ್ಕಳು ಸರ್ಕಾರಿ ಶಾಲೆಗೆ ಸೇರಿಕೊಳ್ಳುತ್ತಿದ್ದಾರೆ. ಸರ್ಕಾರಿ ಶಾಲೆ ಅಂದರೆ ಸಾಕು ಮೂಗು ಮುರಿಯುತ್ತಿದ್ದವರೇ ಹೆಚ್ಚು. ಅಲ್ಲದೇ ಸರ್ಕಾರಿ ಶಾಲೆಗಂತೂ ನಮ್ಮ ಮಕ್ಕಳನ್ನು ಕಳಿಸಲ್ಲ ಎನ್ನುತ್ತಿದ್ದರು. ಆದರೆ ಈಗ ಪೋಷಕರು ತಮ್ಮ ಅಭಿಪ್ರಾಯವನ್ನೇ ಬದಲಾಯಿಸಿಕೊಂಡಿದ್ದಾರೆ.

    ಮಹಾಮಾರಿ ಕೊರೊನಾ ಪರಿಣಾಮದಿಂದ ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಾಗಿದೆ. ಇದರಿಂದ ಖಾಸಗಿ ಶಾಲೆಯ ಫೀಸ್ ಕಟ್ಟಲಾಗದೇ ಪೋಷಕರ ಪರದಾಡುತ್ತಿದ್ದಾರೆ. ಜೊತೆಗೆ ಅನ್‍ಲೈನ್ ಕ್ಲಾಸ್ ಫೀ ಕಟ್ಟಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ದೂರದೂರಿಗೆ ಮಕ್ಕಳನ್ನು ಬಸ್ಸಿನಲ್ಲಿ ಕಳಿಸಲು ಪೋಷಕರು ಭಯ ಪಡುತ್ತಿದ್ದಾರೆ. ಇದರಿಂದ ಪೋಷಕರು ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುತ್ತಿದ್ದು, ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 914 ಸರ್ಕಾರಿ ಶಾಲೆ ಇವೆ. 914 ಸರ್ಕಾರಿ ಶಾಲೆ ಪೈಕಿ 350 ಶಾಲೆಗಳಲ್ಲಿ ದಾಖಲಾತಿ ಹೆಚ್ಚಳವಾಗಿದೆ. ಖಾಸಗಿ ಶಾಲೆ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಪೋಷಕರು ಮೊರೆ ಹೋಗುತ್ತಿದ್ದಾರೆ. ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಅಡ್ಮಿಷನ್ ಹೆಚ್ಚಳವಾಗುವ ಮೂಲಕ ಸರ್ಕಾರಿ ಶಾಲೆಗಳಿಗೆ ಈಗ ಡಿಮ್ಯಾಂಡ ಶುರುವಾಗಿದೆ. ಜೊತೆಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಟಿಸಿಗಳಿಗೆ ಡಿಮ್ಯಾಂಡ್ ಶುರುವಾಗಿದೆ.

    ಹಾವೇರಿ ಜಿಲ್ಲೆಯಲ್ಲೂ ಸರ್ಕಾರಿ ಶಾಲೆಗಳಿಗೆ ಡಿಮ್ಯಾಂಡ್ ಶುರುವಾಗಿದೆ. ಸಾವಿರಾರು ಮಕ್ಕಳು ಖಾಸಗಿ ಶಾಲೆ ತೊರೆದಿದ್ದು, ಸರ್ಕಾರಿ ಶಾಲೆಗೆ ಸೇರಿಕೊಂಡಿದ್ದಾರೆ. 1ರಿಂದ 7ನೇ ಕ್ಲಾಸ್ ತರಗತಿಗಳಿಗೆ ದಾಖಲಾತಿ ಹೆಚ್ಚಳವಾಗಿದೆ. ನಮ್ಮ ಕೈಯಲ್ಲಿ ಖಾಸಗಿ ಶಾಲೆಗೆ ಶುಲ್ಕ ಕಟ್ಟಲು ಹಣ ಇಲ್ಲ. ಸಣ್ಣ ಮಕ್ಕಳನ್ನ ವಾಹನದಲ್ಲಿ ಕಳಿಸಲು ಭಯ ಆಗುತ್ತಿದೆ. ಸರ್ಕಾರಿ ಶಾಲಾ ಶಿಕ್ಷಕರಿಂದ ಉಚಿತ ಮತ್ತು ಮನೆ ಪಾಠ ಇದೆ. ಹೀಗಾಗಿ ನಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಕಳುಹಿಸುತ್ತೀವಿ ಎಂದು ಪೋಷಕರ ಹೇಳುತ್ತಿದ್ದಾರೆ.

    ‘ಸರ್ಕಾರಿ’ ಶಾಲೆಗಳ ಒಲವಿಗೆ ಕಾರಣಗಳು
    * ಡೊನೇಷನ್ ಹಾವಳಿ ತಪ್ಪಿಸಿಕೊಳ್ಳಲು ಪರ್ಯಾಯ ಮಾರ್ಗ
    * ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಬಿಸಿಯೂಟ ಸೇರಿ ಹಲವು ಸೌಲಭ್ಯ
    * ಕೊರೊನಾ ಭೀತಿ ದೂರಾಗಿಸಲು ಹತ್ತಿರದ ಸರ್ಕಾರಿ ಶಾಲೆಗೆ ಆದ್ಯತೆ
    * ಖಾಸಗಿ ಶಾಲಾ ವಾಹನ ಸೌಕರ್ಯಕ್ಕೆ ಹೆಚ್ಚುವರಿ ಶುಲ್ಕ ತೆರಬೇಕು
    * ಕೊರೊನಾದಿಂದಾಗಿ ಹಳ್ಳಿಗಳಿಗೆ ವಲಸೆ ಹೋದವರಿಂದ ಸರ್ಕಾರಿ ಶಾಲೆಗಳ ಮೊರೆ
    * ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುವ ಬಗ್ಗೆ ಮನವರಿಕೆ
    * ಆನ್‍ಲೈನ್ ಶಿಕ್ಷಣದ ಬಗ್ಗೆ ನಿರಾಸಕ್ತಿ, ವಿದ್ಯಾಗಮ ಯೋಜನೆ ಬಗ್ಗೆ ಕುತೂಹಲ

  • ಕೊಡಗು ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಸಾಲು ಸಾಲು ಸಮಸ್ಯೆಗಳು

    ಕೊಡಗು ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಸಾಲು ಸಾಲು ಸಮಸ್ಯೆಗಳು

    ಮಡಿಕೇರಿ: ಕೊರೊನಾ ಬಳಿಕ ಸರ್ಕಾರ ಘೋಷಿಸಿದ ಲಾಕ್‍ಡೌನ್ ನಂತರ ಎಲ್ಲಾ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿವೆ. ದೀರ್ಘಾವಧಿವರೆಗೆ ಪ್ರಭಾವವನ್ನು ಮುಂದುವರಿಸಿದ ಮಾರಣಾಂತಿಕ ವೈರಸ್ ತೀವ್ರತೆಯನ್ನು ಮನಗಂಡ ಸರ್ಕಾರ ಶೈಕ್ಷಣಿಕ ಚಟುವಟಿಕೆಗಳ ಸ್ವರೂಪವನ್ನೇ ಬದಲಿಸಿದೆ. ಶಾಲೆ-ಕಾಲೇಜುಗಳನ್ನು ಬಂದ್ ಮಾಡಿ, ವಿದ್ಯಾರ್ಥಿಗಳಿಗೆ ವಿನೂತನ ವಿಧಾನಗಳ ಮೂಲಕ ಪಾಠ ಭೋಧಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಆದರೆ ಪಾಠ ಭೋಧನೆಗೆ ಶಿಕ್ಷಕರಿಗೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ.

    ಕೊರೊನಾ ಮಹಾಮಾರಿ ಕಾಳ್ಗಿಚ್ಚಿನಂತೆ ವ್ಯಾಪಿಸಿದ ಬಳಿಕ ಮಕ್ಕಳ ಆರೋಗ್ಯ ಹಾಗೂ ಶೈಕ್ಷಣಿಕತೆ ಹಿತದೃಷ್ಠಿಯಿಂದ ಸರ್ಕಾರ ರಾಜ್ಯದಾದ್ಯಂತ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳ ವಿದ್ಯಾರ್ಥಿಗಳಿಗೆ ವಠಾರ ಶಾಲೆ ಮತ್ತು ವಿದ್ಯಾಗಮ ಎನ್ನುವ ಚಟುಚಟಿಕೆಗಳನ್ನು ಹಾಕಿಕೊಂಡು ಮಕ್ಕಳಿಗೆ ತರಗತಿಗಳನ್ನು ಹೇಳಿಕೊಡಲಾಗುತ್ತಿದೆ. ಶಾಲೆಗಳ ಬಾಗಿಲನ್ನು ತೆರೆಯದೇ ಹೆಚ್ಚಿನ ಮಕ್ಕಳು ಇದ್ದಲ್ಲಿಗೆ ಶಿಕ್ಷಕರು ಹೋಗಬೇಕಿದೆ. ಆದರೆ ಇದು ಮಕ್ಕಳ ಶೈಕ್ಷಣಿಕ ದೃಷ್ಠಿಯಿಂದ ಉತ್ತಮವಾಗಿದೆ. ಆದರೆ ಇದನ್ನು ಸಕಾರಗೊಳಿಸಲು ಶಿಕ್ಷಕರಿಗೆ ಕೆಲವು ಸಮಸ್ಯೆಗಳು ಎದುರಾಗಿವೆ.

    ಕೊಡಗು ಜಿಲ್ಲೆಯಲ್ಲಿ ಮುಖ್ಯವಾಗಿ ಕೊರೊನಾ ಪರಿಣಾಮದಿಂದ ಜನರ ಸಂಪರ್ಕ ಕೊಂಡಿಯಾಗಿರುವ ಖಾಸಗಿ ಬಸ್‍ಗಳ ಸಂಚಾರವಿಲ್ಲದೆ ಪರದಾಡುತ್ತಿದ್ದಾರೆ. ಅಲ್ಲದೆ ಮಕ್ಕಳನ್ನು ಸಂಪರ್ಕಿಸಲು ಸಮಸ್ಯೆಯಾಗಿದೆ. ಕೊಡಗು ದಟ್ಟ ಹಸಿರಿನಿಂದ ಕೂಡಿದೆ. ಅಲ್ಲದೆ ಮನೆಗಳೂ ಕೂಡ ದೂರದಲ್ಲಿ ಇರುವುದರಿಂದ ಶಿಕ್ಷಕರು ಮಕ್ಕಳನ್ನು ಸಂಪರ್ಕಿಸಲು ಕಷ್ಟವಾಗುತ್ತಿದೆ. ಒಂದೆಡೆ ನಾಲ್ಕೈದು ಮಕ್ಕಳನ್ನು ಸೇರಿಸುವುದೇ ಕಷ್ಟವಾಗುತ್ತಿದೆ. ಮತ್ತೊಂದೆಡೆ ಚಿಕ್ಕ ಮಕ್ಕಳನ್ನು ಒಬ್ಬೊಬ್ಬರಾಗಿಯೇ ಕಳುಹಿಸುವುದಕ್ಕೂ ಪೋಷಕರೂ ಭಯಪಡುತ್ತಿದ್ದಾರೆ. ಹೀಗಾಗಿ ಕೆಲವು ಶಿಕ್ಷಕರು ಅನುಕೂಲವಾಗಿರುವ ರಸ್ತೆ ಬದಿಯ ಬಸ್ ನಿಲ್ದಾಣಗಳಲ್ಲಿ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗಳನ್ನು ಹೇಳಿಕೊಡುತ್ತಿದ್ದಾರೆ.

    ಪೋಷಕರು ಕೂಡ ಮಕ್ಕಳೊಂದಿಗೆ ಬಂದು ಜೊತೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಟ್ಟಿನಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿ ಪರ್ಯಾಯ ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಈ ಕ್ರಮ ಎಲ್ಲಾ ಜಿಲ್ಲೆಗಳಿಗೆ ಸೂಕ್ತವಾಗಿಲ್ಲ. ಮಕ್ಕಳ ಸಂಖ್ಯೆ ಕಡಿಮೆ ಇರುವಂತಹ ಹಲವು ಶಾಲೆಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಶೈಕ್ಷಣಿಕ ಚಟುವಟಿಕೆ ನಡೆಸಲು ಸರ್ಕಾರ ಅನುಮತಿ ಕೊಟ್ಟರೆ ಒಳ್ಳೆಯದು ಎಂದು ಸ್ಥಳೀಯ ಪೋಷಕರು ಹೇಳುತ್ತಿದ್ದಾರೆ.