Tag: government

  • 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ: ಯತ್ನಾಳ್

    2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ: ಯತ್ನಾಳ್

    ವಿಜಯಪುರ: 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ. ಈ ಹೋರಾಟಕ್ಕೆ ಯಾರಾದರೂ ಬರಲಿ ಬಿಡಲಿ. ನಮ್ಮ ಹೋರಾಟ ನಡೆಯುತ್ತದೆ ಎಂದು ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

    ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಾವು ಪಂಚಮಸಾಲಿ ಸಮಾಜ ಅಷ್ಟೇಯಲ್ಲಾ ಅದಿ ಬಣಜಿಗ ಕೂಡು ಒಕ್ಕಲಿಗ, ಕುರುಬ ಸಮಾಜ ಹಾಗೂ ವಾಲ್ಮೀಕಿ ಸಮಾಜ, ಮಡಿವಾಳ ಸಮಾಜಗಳ ಬೇಡಿಕೆ ಈಡೇರಿಕೆಗೆ ಬೆಂಬಲಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡಿಗರು ಎಂಬುದನ್ನು ಸಿ.ಟಿ.ರವಿ ಮರೆತು ಭಾರತೀಯರಾಗಿದ್ದಾರೆ: ಹೆಚ್‍ಡಿಕೆ

    ನಿನ್ನೆ ಹುಬ್ಬಳ್ಳಿಯ ಖಾಸಗಿ ಹೊಟೇಲಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿ ದ್ದೇವೆ. ಮೀಸಲಾತಿ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ನೀಡಿದ್ದಾರೆ. ಪ್ರಧಾನಿಗಳ ಈ ಐತಿಹಾಸಿಕ ತಿದ್ದುಪಡಿಗೆ ಸ್ವಾಗತ ಮಾಡುತ್ತೇನೆ. ಮೀಸಲಾತಿ ವಿಚಾರವಾಗಿ ನಾನು ಸಿಎಂ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡುವೆ. ಈಗಾ ಯಾವುದೇ ನೆಪ ಹೇಳಲು ಬರಲ್ಲಾ. ಆದಷ್ಟು ಬೇಗಾ ಪಂಚಮಸಾಲಿ ಸಮಾಜ, ಆದಿ ಬಣಜಿಗ, ಕೂಡು ಒಕ್ಕಲಿಗ ಸಮಾಜಗಳಿಗೆ 2ಎ ಮೀಸಲಾತಿ ನೀಡಬೇಕು. ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಕುತ್ತಿಗೆಯಲ್ಲಿ ನಿಜವಾದ ಹಾವು, ಅಮರ ಹಳೆ ನೆನಪು: ಜಗ್ಗೇಶ್

    ಎಸ್ಸಿ ಸಮಾಜದ ಮೀಸಲಾತಿಯನ್ನು ಮೂರು ಪ್ರತಿಶತದಿಂದ 7.5 ಪ್ರತಿಶತಕ್ಕೆ ಏರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಅಲ್ಲದೆ ಇವುಗಳ ಜೊತೆ ಮಡಿವಾಳ ಸಮಾಜ, ಹಡಪದ ಸಮಾಜ, ಗಂಗಾ ಮತಸ್ಥ, ತಳವಾರ, ಕೋಳಿ ಸಮಾಜಕ್ಕೂ ಎಸ್ಟಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಸಿಎಂ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಈ ಹೋರಾಟಕ್ಕೆ ಯಾರಾದರೂ ಬರಲಿ ಬಿಡಲಿ. ನಮ್ಮ ಹೋರಾಟ ನಡೆಯುತ್ತದೆ. ಆಯಾ ಸಮುದಾಯದ ನಾಯಕರು ಶಾಸಕರು ಬರದಿದ್ದರೆ ಮುಂದಿನ ಚುನಾವಣೆಯಲ್ಲಿ ಜನರು ಅವರಿಗೆ ಪಾಠ ಕಲಿಸುತ್ತಾರೆ ಎಂದಿದ್ದಾರೆ.

  • ಸರ್ಕಾರ ಸಾರ್ವಜನಿಕ ಗಣೇಶೋತ್ಸವದ ನಿಷೇಧವನ್ನು ಹಿಂಪಡೆಯಬೇಕು: ಶ್ರೀರಾಮಸೇನೆ

    ಸರ್ಕಾರ ಸಾರ್ವಜನಿಕ ಗಣೇಶೋತ್ಸವದ ನಿಷೇಧವನ್ನು ಹಿಂಪಡೆಯಬೇಕು: ಶ್ರೀರಾಮಸೇನೆ

    ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿಯಿಂದ ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿರುವ ಗಣೇಶೋತ್ಸವವನ್ನು ಈ ಬಾರಿಯೂ ಸಾರ್ವಜನಿಕವಾಗಿ ಆಚರಣೆ ಮಾಡದಂತೆ ಆದೇಶ ಹೊರಡಿಸಿದನ್ನು ಶ್ರೀರಾಮಸೇನೆ ಖಂಡಿಸಿದೆ.

    ಮಾನ್ಯ ಮುಖ್ಯಮಂತ್ರಿಗಳೇ ಸ್ವಾತಂತ್ರ್ಯಪೂರ್ವದಲ್ಲಿ ಸ್ವಾತಂತ್ರ್ಯ ಸೇನಾನಿ ಬಾಲ ಗಂಗಾಧರನಾಥ್ ತಿಲಕರು ಸಾರ್ವಜನಿಕರನ್ನು ಒಟ್ಟುಗೂಡಿಸುವ ದೂರದೃಷ್ಟಿಯಿಂದ ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಈ ಮುಖಾಂತರ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೆಚ್ಚಿಸಿದ್ದರು. ಇಂತಹ ಐತಿಹಾಸಿಕ ಮಹತ್ವವುಳ್ಳ ಸಾರ್ವಜನಿಕ ಗಣೇಶೋತ್ಸವವನ್ನು ನಿಷೇಧಿಸಿರುವುದು ಖಂಡನೀಯ. ಈ ವಿಷಯವನ್ನು ಹಿಂದೂಗಳು ಮತ್ತು ಹಿಂದೂ ಸಂಘಟನೆಗಳು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಕೂಡಲೇ ಸಾರ್ವಜನಿಕ ಗಣೇಶೋತ್ಸವದ ನಿರ್ಬಂಧವನ್ನು ದಯವಿಟ್ಟು ತೆರವು ಮಾಡಬೇಕು ಎಂದು ಶ್ರೀರಾಮಸೇನೆಯ ರಾಜ್ಯ ಕಾರ್ಯದರ್ಶಿ ಹರೀಶ್ ಒತ್ತಾಯ ಮಾಡಿದ್ದಾರೆ.ಇದನ್ನೂ ಓದಿ: ಗಣೇಶ ಚತುರ್ಥಿ, ಮೊಹರಂ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ

    ಒಂದು ಕಡೆ ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದು ಶಾಲೆಗಳನ್ನು ಪ್ರಾರಂಭಮಾಡಿ ಮಕ್ಕಳನ್ನು ಗೊಂದಲಕ್ಕೀಡು ಮಾಡಿದ್ದೀರಿ. ಇನ್ನೊಂದು ಕಡೆ ಹಲವು ಮಾರ್ಗಸೂಚಿಗಳನ್ನು ಹೊರಡಿಸುತ್ತಿದ್ದಿರಿ, ಈ ನಿಮ್ಮ ಗೊಂದಲದ ನಿರ್ಧಾರದಿಂದ ದಯವಿಟ್ಟು ಹಿಂದೆ ಸರಿಯಿರಿ. ಇಲ್ಲದೆ ಇದ್ದಲ್ಲಿ ರಾಜ್ಯಾದ್ಯಂತ ಹಿಂದೂ ಸಂಘಟನೆಗಳಿಂದ ಭಾರೀ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.

  • ಮಹಾರಾಷ್ಟ್ರದ ಶಾಲಾ ಶುಲ್ಕದಲ್ಲಿ ಶೇ.15ರಷ್ಟು ಕಡಿತ

    ಮಹಾರಾಷ್ಟ್ರದ ಶಾಲಾ ಶುಲ್ಕದಲ್ಲಿ ಶೇ.15ರಷ್ಟು ಕಡಿತ

    ಮುಂಬೈ: ಕೊರೊನಾದಿಂದಾಗಿ ಮುಚ್ಚಿದ್ದ ಶಾಲಾ ಕಾಲೇಜುಗಳು ಮತ್ತೆ ಪುನರಾರಂಭವಾಗುತ್ತಿದೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ ಮಕ್ಕಳ ಶುಲ್ಕದಲ್ಲಿ ಶೇ.15 ಕಡಿತಗೊಳಿಸುವಂತೆ ಆದೇಶ ಹೊರಡಿಸಿದೆ.

    ಈಗಾಗಲೇ ಶಾಲಾ, ಕಾಲೇಜುಗಳು ವಿದ್ಯಾರ್ಥಿಗಳಿಂದ ಶುಲ್ಕವನ್ನು ಪಾವತಿ ಮಾಡಿಸಿಕೊಂಡಿದ್ದರೆ, ಅದರಲ್ಲಿ ಶೇ.15 ಶುಲ್ಕವನ್ನು ಮರುಪಾವತಿ ಮಾಡುವಂತೆ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇದನ್ನೂ ಓದಿ: ಗುಜರಾತ ರಾಜಕಾರಣದಲ್ಲಿ ಸೆಕ್ಸ್ ಸಿಡಿ ಸದ್ದು – ಬಿಜೆಪಿ ಸಂಸದನ ಪುತ್ರರಿಂದ ದೂರು ದಾಖಲು

    ಶಾಲೆಗಳಲ್ಲಿ ಕಟ್ಟಿಸಿಕೊಂಡಿರುವ ಶುಲ್ಕವನ್ನು ಶೇ.15 ಕಡಿತಗೊಳಿಸಿದ್ದು, ಖಾಸಗಿ ಶಾಲೆಗಳು ಮತ್ತು ಸರ್ಕಾರದ ಅನುದಾನ ರಹಿತ ಶಾಲೆಗಳು ಕೂಡ ಸರ್ಕಾರದ ಆದೇಶವನ್ನು ಪಾಲಿಸಬೇಕಾಗಿ ತಿಳಿಸಿದ್ದು, ಈ ಆದೇಶದಿಂದಾಗಿ ಹಲವಾರು ಮಕ್ಕಳ ಪೋಷಕರಿಗೆ ವರದಾನವಾಗಿದೆ. ಕೊರೊನಾ ಕಷ್ಟಕಾಲದಲ್ಲಿ ಶಾಲಾ ಶುಲ್ಕ ಕಟ್ಟಲು ಪರದಾಡುತ್ತಿದ್ದ ಮಕ್ಕಳ ಪೋಷಕರು ಈ ಆದೇಶವನ್ನು ಸ್ವಾಗತಿಸಿದ್ದಾರೆ.

  • ಸಿಕ್ಕ ಖಾತೆಯಲ್ಲಿ ‘ಆನಂದ’ವಿಲ್ಲ – ಸಚಿವ ಆನಂದ್ ಸಿಂಗ್ ಅಸಮಾಧಾನ

    ಸಿಕ್ಕ ಖಾತೆಯಲ್ಲಿ ‘ಆನಂದ’ವಿಲ್ಲ – ಸಚಿವ ಆನಂದ್ ಸಿಂಗ್ ಅಸಮಾಧಾನ

    ಬಳ್ಳಾರಿ: ನಾನು ಕೇಳಿದ ಖಾತೆ ಬೇರೆ ನನಗೆ ಕೊಟ್ಟಿರುವ ಖಾತೆ ಬೇರೆ ಎಂದು ಖಾತೆ ಹಂಚಿಕೆ ಬೆನ್ನಲ್ಲೇ ಪ್ರವಾಸೋದ್ಯಮ ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಅಸಮಾಧಾನ ಹೊರ ಹಾಕಿದ್ದಾರೆ.

    ಖಾತೆ ಹಂಚಿಕೆ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ್ ಸಿಂಗ್ ಅವರು, ಬಿಜೆಪಿ ಸರ್ಕಾರ ಬರಲು ಮೊದಲು ರಾಜೀನಾಮೆ ನೀಡಿದ್ದು ನಾನು, ಆ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರ. ಮೇ ಒಂದರಂದು ನಾನು ರಾಜೀನಾಮೆ ನೀಡಿದ್ದೆ. ನನ್ನಿಂದಲೇ ಬಿಜೆಪಿ ಸರ್ಕಾರ ಬಂದಿದೆ ಅನ್ನೋದಲ್ಲ. ನನ್ನಂತೆ ಹಲವು ಜನರು ರಾಜೀನಾಮೆ ನೀಡಿದ ಬಳಿಕ ಸರ್ಕಾರ ರಚನೆಯಾಗಿದೆ. ಆದರೆ ಇದೀಗ ಖಾತೆ ಹಂಚಿಕೆಯಲ್ಲಿ ನಾನು ಕೇಳಿರೋದೇ ಒಂದು ಕೊಟ್ಟಿರೋದೇ ಒಂದು ಇದನ್ನು ಬದಲಾವಣೆ ಮಾಡಬೇಕೆಂದು ಯಡಿಯೂರಪ್ಪ ಮತ್ತು ಸಿಎಂ. ಬೊಮ್ಮಯಿ ಅವರನ್ನು ಕೇಳುತ್ತೇನೆ ಎಂದು ಅಸಮಾಧಾನ ಹೊರಹಾಕಿದರು.

    ಯಡಿಯೂರಪ್ಪ ಸರ್ಕಾರದ ವೇಳೆಯೂ ಎರಡು ದಿನದಲ್ಲಿ ಮೂರು ಖಾತೆ ಬದಲಾಯಿಸಿದ್ದರು. ಇದು ಅವಮಾನ ಅಲ್ಲ ಆದರೆ ನಿರಾಸೆ ಮಾಡಿರೋದಕ್ಕೆ ಸಾಕಷ್ಟು ಬೇಸರವಾಗಿದೆ. ಕೇಳಿದ ಖಾತೆ ಕೊಡದೇ ಇದ್ದರೆ ಶಾಸಕನಾಗಿ ಉಳಿಯುವುದು ಒಳಿತು ಎನ್ನುವದು ನನ್ನ ನಿಲುವು. ಮತ್ತೊಮ್ಮೆ ಸಿಎಂಗೆ ಮನವಿ ಮಾಡುತ್ತೇನೆ ಕೊಡದೆ ಇದ್ದರೆ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ನೂತನ ಸಚಿವರಿಗೆ ಖಾತೆ ಹಂಚಿಕೆ – ಪಟ್ಟಿ ಪ್ರಕಟ

    ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಆನಂದ್ ಸಿಂಗ್ ನನ್ನ ಆತ್ಮೀಯ ಮಿತ್ರರು. ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

  • ರಾಷ್ಟ್ರದ ಮಹಾಮಂತ್ರಿ ಇರೋದು ಕಾಫಿನಾಡಲ್ಲಿ, ಸಿ.ಟಿ.ರವಿಯಿಂದ ಜಿಲ್ಲೆಯಲ್ಲಿ ಏನು ಬೇಕಾದ್ರು ಆಗಬಹುದು: ಬೆಳ್ಳಿ ಪ್ರಕಾಶ್

    ರಾಷ್ಟ್ರದ ಮಹಾಮಂತ್ರಿ ಇರೋದು ಕಾಫಿನಾಡಲ್ಲಿ, ಸಿ.ಟಿ.ರವಿಯಿಂದ ಜಿಲ್ಲೆಯಲ್ಲಿ ಏನು ಬೇಕಾದ್ರು ಆಗಬಹುದು: ಬೆಳ್ಳಿ ಪ್ರಕಾಶ್

    ಚಿಕ್ಕಮಗಳೂರು: ಇಡೀ ರಾಷ್ಟ್ರದ ಮಹಾಮಂತ್ರಿ ಇರೋದು ನಮ್ಮ ಜಿಲ್ಲೆಯಲ್ಲಿ. ಅವರಿಂದ ಇಡೀ ಜಿಲ್ಲೆಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಗ್ಗೆ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹಾಡಿ ಹೊಗಳಿದ್ದಾರೆ.

    ಕಡೂರು ತಾಲೂಕಿನ ಸಖರಾಯಪಟ್ಟಣದ ಐತಿಹಾಸಿಕ ಅಯ್ಯನಕೆರೆ ಕೆರೆಗೆ ಬಾಗಿಣ ಅರ್ಪಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಬೆಳ್ಳಿ ಪ್ರಕಾಶ್ ಅವರು, ಇಡೀ ರಾಷ್ಟ್ರದ ಮಹಾಮಂತ್ರಿ ಇರೋದೆ ನಮ್ಮ ಜಿಲ್ಲೆಯಲ್ಲಿ. ಆ ಮಹಾಮಂತ್ರಿ ಜಿಲ್ಲೆ, ರಾಜ್ಯ, ರಾಷ್ಟ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುತ್ತಾರೆ. ಸಿ.ಟಿ.ರವಿ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ. ಅವರ ವಿಶೇಷ ಪ್ರಯತ್ನದಿಂದ ಜಿಲ್ಲೆಯಲ್ಲಿ ಏನು ಬೇಕಾದರೂ ಆಗಬಹುದು ಅನ್ನೋ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಾರ್ ಬೇಕು, ಬೇಡ -ಡಿಸಿ ಕಚೇರಿ ಮುಂದೆ ಮಹಿಳೆಯರು, ಪುರುಷರ ಹೈಡ್ರಾಮಾ

    ರಾಜ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆ ಬಲಿಷ್ಠ ಜಿಲ್ಲೆಯಾಗುತ್ತಿದೆ. ಸಂಪುಟ ರಚಿಸುವಾಗ ಚಿಕ್ಕಮಗಳೂರು ಜಿಲ್ಲೆಯನ್ನು ಕಡೆಗಣಿಸಿಲ್ಲ. ನಾನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಿದ್ದೇನೆ. ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಎಂ.ಕೆ. ಪ್ರಾಣೇಶ್ ವಿಧಾನ ಪರಿಷತ್ ಉಪ ಸಭಾಪತಿಗಳಾಗಿದ್ದಾರೆ. ಮೂಡಿಗೆರೆ ಶಾಸಕ ಕುಮಾರಸ್ವಾಮಿಗೂ ಅಧಿಕಾರ ಸಿಗುತ್ತದೆ. ಸಚಿವ ಸಂಪುಟ ರಚನೆ ವೇಳೆ ಸಹಜವಾಗಿ ಕೆಲವರಿಗೆ ಅಸಮಾಧಾನ ಆಗಿದೆ. ಅವರೆಲ್ಲರನ್ನು ಸಮಾಧಾನ ಮಾಡುವ ಶಕ್ತಿ ಪಕ್ಷ ಹಾಗೂ ಮುಖ್ಯಮಂತ್ರಿಗಳಿಗಿದೆ. ಚಿಕ್ಕಮಗಳೂರು ಜಿಲ್ಲೆಗೆ ಸಂಪುಟದಲ್ಲಿ ಅನ್ಯಾಯವಾಗಿಲ್ಲ ಎಂದು ಬೆಳ್ಳಿ ಪ್ರಕಾಶ್ ಪಕ್ಷವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

  • ಮೇಕೆದಾಟು ಯೋಜನೆಯ ತ್ವರಿತಗತಿಗೆ ಆಗ್ರಹಿಸಿ ಎಎಪಿಯಿಂದ ಉಪವಾಸ ಸತ್ಯಾಗ್ರಹ

    ಮೇಕೆದಾಟು ಯೋಜನೆಯ ತ್ವರಿತಗತಿಗೆ ಆಗ್ರಹಿಸಿ ಎಎಪಿಯಿಂದ ಉಪವಾಸ ಸತ್ಯಾಗ್ರಹ

    ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್ ಎಸ್.ವಿ ಅವರು, ಬೆಂಗಳೂರಿನಲ್ಲಿ ಈಗಾಗಲೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ಭವಿಷ್ಯದಲ್ಲಿ ಭಾರೀ ತೊಂದರೆ ಎದುರಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಮೇಕೆದಾಟು ಯೋಜನೆ ಶೀಘ್ರದಲ್ಲೇ ಪೂರ್ಣಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ರಾಜ್ಯವನ್ನಾಳಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರಗಳು ಕುಂಟುನೆಪ ಹೇಳಿ ಯೋಜನೆಯನ್ನು ಮುಂದೂಡುವ ಮೂಲಕ ಜನರನ್ನು ವಂಚಿಸಿದವು. ಈಗ ಕೇಂದ್ರ ಪರಿಸರ ಇಲಾಖೆಯ ಅನುಮೋದನೆ ಸಿಕ್ಕಿದ್ದರೂ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ಹೊಂದಿರುವ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ವಿಳಂಬನೀತಿ ಅನುಸರಿಸುತ್ತಿದೆ. ಕ್ಷುಲ್ಲಕ ರಾಜಕೀಯ ಹಾಗೂ ಆಡಳಿತ ಪಕ್ಷದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಮೇಕೆದಾಟು ಎಂಬ ಅತ್ಯುತ್ತಮ ಯೋಜನೆ ನೆನೆಗುದಿಗೆ ಬಿದ್ದಿರುವುದು ವಿಪರ್ಯಾಸ ಎಂದು ಫಣಿರಾಜ್ ಎಸ್ ವಿ ರವರು ಆಕ್ರೋಶ ವ್ಯಕ್ತಪಡಿಸಿದರು.

    2021ರ ಆಗಸ್ಟ್ 5, ಗುರುವಾರದಂದು ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಸಮೀಪದ ಮೌರ್ಯ ಹೋಟೆಲ್ ಹತ್ತಿರವಿರುವ ಗಾಂಧಿ ಪ್ರತಿಮೆ ಎದುರು ನಮ್ಮ ಹೋರಾಟ ನಡೆಯಲಿದೆ. ಪಕ್ಷದ ಸಂಚಾಲಕರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಎಎಪಿಯ ನೂರಾರು ಕಾರ್ಯಕರ್ತರು ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ. 12 ತಿಂಗಳ ಡೆಡ್‍ಲೈನ್ ಇಟ್ಟುಕೊಂಡು ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂಬುದು ನಮ್ಮ ಆಗ್ರಹ. ನಾಡಿನ ಒಳಿತಿಗಾಗಿ ನಡೆಯುತ್ತಿರುವ ಹೋರಾಟವನ್ನು ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬೇಕು” ಎಂದು ಮನವಿ ಮಾಡಿದರು. ಇದನ್ನೂ ಓದಿ: ಆಗಸ್ಟ್ 10 ರಂದು ದೇಶಾದ್ಯಂತ ವಿದ್ಯುತ್ ನೌಕರರ ಮುಷ್ಕರ

    ಮೇಕೆದಾಟುಗೆ ಅವಕಾಶ ನೀಡುವುದೇ ಇಲ್ಲವೆಂದು ತಮಿಳುನಾಡಿನ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಎರಡೂ ಪಕ್ಷಗಳಿಗೆ ಮೇಕೆದಾಟು ಯೋಜನೆಯ ಅಗತ್ಯವಿಲ್ಲವೆಂದು ಇದರಿಂದಲೇ ತಿಳಿಯುತ್ತದೆ. ದ್ವಂದ್ವನೀತಿಯನ್ನು ಬಿಟ್ಟು, ಮೇಕೆದಾಟು ವಿಷಯದಲ್ಲಿ ತಮ್ಮ ನಿಲುವು ಏನೆಂದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸ್ಪಷ್ಟಪಡಿಸಬೇಕು. ಇದೊಂದು ಕೇವಲ ಕುಡಿಯುವ ನೀರಿನ ಯೋಜನೆ ಆಗಿರುವುದರಿಂದ ತಮಿಳುನಾಡಿಗೆ ಯಾವುದೇ ತೊಂದರೆ ಆಗುವುದಿಲ್ಲ. ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ತಮಿಳುನಾಡಿನ ತಮ್ಮ ಪಕ್ಷದ ಮುಖಂಡರಿಗೆ ಇದನ್ನು ಮನವರಿಕೆ ಮಾಡಿಕೊಡಲಿ ಎಂದು ಪಕ್ಷದ ಮಹಿಳಾ ಘಟಕದ ನಾಯಕಿ ಉಷಾ ಮೋಹನ್ ಹೇಳಿದರು.

  • ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ- ಸಸಿ ನೆಟ್ಟು ಆಕ್ರೋಶ

    ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ- ಸಸಿ ನೆಟ್ಟು ಆಕ್ರೋಶ

    ಗದಗ: ಹದಗೆಟ್ಟ ರಾಜ್ಯ ಹೆದ್ದಾರಿ ಮಧ್ಯೆ ಸಸಿಗಳನ್ನು ನೆಡುವ ಮೂಲಕವಾಗಿ ಪ್ರತಿಭಟನೆ ಮಾಡಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರು ಬಳಿ ನಡೆದಿದೆ.

    ಲಕ್ಷ್ಮೇಶ್ವರ ಘಟಕದ ಕರವೆ ಕಾರ್ಯಕರ್ತರು ರಸ್ತೆ ದುರಸ್ತಿಗಾಗಿ ವಿಭಿನ್ನವಾದ ಪ್ರತಿಭಟನೆ ಮಾಡಿದರು. ಇದು ಲಕ್ಷ್ಮೇಶ್ವರ, ಬೆಳ್ಳಟ್ಟಿ ಮಾರ್ಗವಾಗಿ ಶಿಗ್ಗಾಂವಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಸಾಕಷ್ಟು ತಗ್ಗು ಗುಂಡಿಗಳಿಂದ ಕೂಡಿರುವುದರಿಂದ ಯಮಸ್ವರೂಪಿ ರಸ್ತೆಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಸಾಕಷ್ಟು ಅಪಘಾತಗಳಾಗಿದ್ದು, ಸಾವು ನೋವುಗಳು ನಿತ್ಯ ಸಂಭವಿಸುತ್ತಿವೆ. ರಾಜ್ಯ ಹೆದ್ದಾರಿ ಹಾಳಾದರೂ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬ ಆರೋಪ ಸ್ಥಳಿಯರದ್ದಾಗಿದೆ.ಇದನ್ನೂ ಓದಿ:  ಹಳೆಯ ಎಸಿ ಬಸ್‍ಗಳಲ್ಲಿ ಹಣ್ಣು, ತರಕಾರಿ ಸಾಗಾಟಕ್ಕೆ ಕೆಎಸ್‌ಆರ್‌ಟಿಸಿಯಿಂದ ಚಿಂತನೆ

    ಸಾರ್ವಜನಿಕರು ಹಾಗೂ ಸಂಘಟಿಕರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ನಡುರಸ್ತೆನಲ್ಲಿ ಸಸಿಗಳನ್ನು ನೆಟ್ಟು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ರಸ್ತೆ ಬಂದ್ ಮಾಡಿದರು. ಶೀಘ್ರದಲ್ಲೇ ರಸ್ತೆ ದುರಸ್ತಿಗೊಳ್ಳದೇ ಹೊದಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಸಂಘಟಕರು ಎಚ್ಚರಿಕೆ ನೀಡಿದರು.

  • ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಸೂಚನೆಯಿದೆ: ವಾಟಾಳ್ ನಾಗರಾಜ್

    ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಸೂಚನೆಯಿದೆ: ವಾಟಾಳ್ ನಾಗರಾಜ್

    ಚಾಮರಾಜನಗರ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಸೂಚನೆಯಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಚಾಮರಾಜಗರದಲ್ಲಿ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೇರಳದೊಂದಿಗೆ ಗಡಿ ಹೊಂದಿರುವ ಚಾಮರಾಜನಗರಕ್ಕೆ ಕೊರೊನಾ ಆತಂಕ ಎದುರಾಗಿದೆ. ಒಂದು ವೇಳೆ ಕೊರೊನಾ ಹೆಚ್ಚಾದರೆ ರಾಜ್ಯ ಮತ್ತೆ ಲಾಕ್‍ಡೌನ್ ಆಗುವ ಸೂಚನೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್‍ಗೇಮ್ 40 ಸಾವಿರ ಕಳ್ಕೊಂಡು ಪ್ರಾಣ ಬಿಟ್ಟ ಬಾಲಕ

    ಕೇರಳದಲ್ಲಿ ಸೋಂಕು ಹೆಚ್ಚಾಗಿದ್ದು, ಕೇಂದ್ರ ಸರ್ಕಾರ ಸೋಂಕು ತಡೆಯುವ ನಿಟ್ಟಿನಲ್ಲಿ ಕೇರಳಕ್ಕೂ ನೆರವು ನೀಡಬೇಕಿದೆ. ಚಾಮರಾಜನಗರದ ಚೆಕ್ ಪೋಸ್ಟ್ ನಲ್ಲಿ‌ ಸಮಗ್ರ ಕೋವಿಡ್ ಪರೀಕ್ಷೆ ಮಾಡುವಂತೆ ಎಚ್ಚರಿಸಿದ್ದಾರೆ.

    ಸರ್ಕಾರ ಕೊರೊನಾ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆಯಿಡಬೇಕು. ರಾಜ್ಯ ಮತ್ತೆ ಲಾಕ್‍ಡೌನ್ ಆಗುವ ಸೂಚನೆಯಿದೆ. ಈಗಾಗ್ಲೇ ಒಂದು ವರ್ಷ ಲಾಕ್‍ಡೌನ್ ಆಗಿದ್ದು, ಜನ ನೆಲಕಚ್ಚಿ ಹೋಗಿದ್ದಾರೆ. ಜನರು ನೋವಿನಲಿದ್ದು, ಕಣ್ಣೀರಿಡುತ್ತಿದ್ದಾರೆ. ಸರ್ಕಾರ ಇತ್ತ ಗಮನಹರಿಸುವಂತೆ ಎಚ್ಚರಿಸಿದ್ದಾರೆ.

  • ಬೆಂಗ್ಳೂರಲ್ಲಿ ಮತ್ತೆ ರಾರಾಜಿಸಲಿದೆ ಜಾಹೀರಾತು ಫಲಕಗಳು- ಸರ್ಕಾರದಿಂದ ಅಧಿಸೂಚನೆ

    ಬೆಂಗ್ಳೂರಲ್ಲಿ ಮತ್ತೆ ರಾರಾಜಿಸಲಿದೆ ಜಾಹೀರಾತು ಫಲಕಗಳು- ಸರ್ಕಾರದಿಂದ ಅಧಿಸೂಚನೆ

    ಬೆಂಗಳೂರು: ಮೂರು ವರ್ಷಗಳ ಬಳಿಕ ನಗರದಲ್ಲಿ ಮತ್ತೆ ವಾಣಿಜ್ಯ ಜಾಹೀರಾತು ಪ್ರದರ್ಶನಕ್ಕೆ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರ ಜುಲೈ 26 ರಂದು ಎಲ್ಲಾ ಬಗೆಯ ಜಾಹೀರಾತು ಹೋಡಿರ್ಂಗ್ಸ್ ಗಳ ಅಳವಡಿಕೆಗೆ ಅನುಮತಿ ನೀಡುವ ಪ್ರಸ್ತಾವನೆಗೆ ಅಂಕಿತ ಹಾಕಿದೆ.

    ಬಿಬಿಎಂಪಿ ಕಾಯಿದೆ -2020 ರನ್ನೇ ಬಳಸಿಕೊಂಡು, ಬಿಬಿಎಂಪಿ ಜಾಹೀರಾತು ನಿಯಮಗಳು-2019 ಅನ್ನು ಬದಲಾಯಿಸಿ, ಜಾಹೀರಾತು ಏಜೆನ್ಸಿಗಳ ಒತ್ತಡಕ್ಕೆ ಮಣಿದು ನಗರದಲ್ಲಿ ಮತ್ತೆ ಜಾಹೀರಾತು ಹಾವಳಿಗೆ ಅವಕಾಶ ಕಲ್ಪಿಸಿದಂತಾಗಿದೆ. ಹೊಸ ನಿಯಮದಂತೆ ಜಾಹೀರಾತು ಏಜೆನ್ಸಿಗಳು ಕಡ್ಡಾಯವಾಗಿ ಪರವಾನಗಿ ಪಡೆದು, ಮೂರು ವರ್ಷಕ್ಕೊಮ್ಮೆ ನವೀಕರಣಗೊಳಿಸಬೇಕು. ಪಾಲಿಕೆ ಮುಖ್ಯ ಆಯುಕ್ತರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಮೂರು ವರ್ಷಗಳ ಅವಧಿಯ ಪರವಾನಗಿಗೆ 50 ಸಾವಿರ ರೂ ಶುಲ್ಕ ಪಾವತಿಸಬೇಕು. ಖಾಸಗಿ ನಿವೇಶನ, ಕಟ್ಟಡ ಅಥವಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜಾಗದಲ್ಲಿ ಜಾಹೀರಾತು ಪ್ರದರ್ಶಿಸಲು ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಇಲ್ಲವಾದಲ್ಲಿ ಶೇ.150 ರಷ್ಟು ಹೆಚ್ಚುವರಿ ಶುಲ್ಕ ಪಾವತಿಸಬೇಕಿದೆ ಎಂಬ ಹೊಸ ನಿಯಮವನ್ನು ಸರ್ಕಾರ ತಿಳಿಸಿದೆ.

    ಅನುಮತಿ ಪಡೆಯದೇ ಜಾಹೀರಾತು ಪ್ರದರ್ಶಿಸಿದರೆ, ನೋಟೀಸ್ ನೀಡದೆ ಪಾಲಿಕೆ ತೆರವು ಮಾಡಬಹುದಾಗಿದೆ. 100 ಚ.ಮೀ ಕಡಿಮೆ ವಿಸ್ತೀರ್ಣವಿದ್ದರೆ 5 ಸಾವಿರ, ಇದಕ್ಕಿಂತ ಹೆಚ್ಚಿನ ವಿಸ್ತೀರ್ಣಕ್ಕೆ 7 ಸಾವಿರ ರೂ. ದಂಡ ನಿಗದಿಪಡಿಸಲಾಗಿದೆ. ನಿಯಮ ಪಾಲನೆ ಮಾಡದ ಕಂಪನಿಗಳಿಗೆ ದಿನಕ್ಕೆ ಕೇವಲ ಒಂದು ಸಾವಿರದಂತೆ ದಂಡ ವಿಧಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: 21 ಸಚಿವರ ಪಟ್ಟಿಗೆ ಇನ್ನೂ ಹೈಕಮಾಂಡ್‍ನಿಂದ ಸಿಕ್ಕಿಲ್ಲ ಗ್ರೀನ್‍ಸಿಗ್ನಲ್

    ವಿಧಾನಸೌಧ ಸುತ್ತಮುತ್ತ ನಿರ್ಬಂಧ
    ಹೊಸ ನಿಯಮದಂತೆ, ಕುಮಾರಕೃಪಾ ರಸ್ತೆ, ವಿಂಡ್ಸರ್ ಮ್ಯಾನರ್-ಶಿವಾನಂದ ವೃತ್ತ, ರಾಜಭವನ ರಸ್ತೆ, ಹೈಗ್ರೌಂಡ್ಸ್ ನಿಂದ ಮಿನ್ಸ್ಕ್ ಚೌಕ, ಸ್ಯಾಂಕಿ ರಸ್ತೆ, ಹೈಗ್ರೌಂಡ್ಸ್ ನಿಂದ ವಿಂಡ್ಸರ್‍ಸಿಗ್ನಲ್, ಅಂಬೇಡ್ಕರ್ ವೀದಿ, ಕೆ.ಆರ್ ವೃತ್ತದಿಂದ ಇನ್ ಫೆಂಟ್ರಿ ರಸ್ತೆ ಜಂಕ್ಷನ್, ಅಂಚೆ ಕಚೇರಿ ರಸ್ತೆ, ಕೆ.ಆರ್ ವೃತ್ತದಿಂದ ಮೈಸೂರು ಬ್ಯಾಂಕ್ ವೃತ್ತ, ಚಾಲುಕ್ಯ ವೃತ್ತ, ಮಹಾರಾಣಿ ಕಾಲೇಜು ರಸ್ತೆ, ಕೆ.ಆರ್ ವೃತ್ತ, ಕಬ್ಬನ್ ಪಾರ್ಕ್, ಲಾಲ್ ಭಾಗ್, ನೃಪತುಂಗ ರಸ್ತೆಗಳಲ್ಲಿ ಜಾಹೀರಾತು ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ. ಇದರೊಂದಿಗೆ ದೇವಾಲಯ, ಮಸೀದಿ, ಗುರುದ್ವಾರ, ಚರ್ಚ್ ಹಾಗೂ ಧಾರ್ಮಿಕ ಸ್ಥಳಗಳಿಂದ ಐವತ್ತು ಮೀಟರ್, ವ್ಯಾಪ್ತಿಯಲ್ಲಿ ಜಾಹಿರಾತು ಪ್ರದರ್ಶನ ನಿಬರ್ಂಧಿಸಲಾಗಿದೆ.

    ಮೇಲ್ಸೇತುವೆ, ರೈಲ್ವೇ ಮೇಲ್ಸೇತುವೆ, ಎಲಿವೇಟೆಡ್ ಕಾರಿಡಾರ್, ಟೆಲಿಕಾಂ ಟವರ್ ನ ಅಂಚಿನಿಂದ 3.5 ಮೀಟರ್ ಪರಿಧಿ ಹಾಗೂ ಜಲಮಂಡಳಿಯ ವಾಟರ್ ಟ್ಯಾಂಕರ್ ನಿಂದ 15 ಮೀಟರ್ ವ್ಯಾಪ್ತಿಯಲ್ಲಿ ಜಾಹಿರಾತು ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದ್ದು. ಇದರೊಂದು ಜಾಹೀರಾತು ಫಲಕಗಳ ಅಳತೆಗಳ ಬಗ್ಗೆಯೂ ನಿಯಮ ಜಾರಿ ಮಾಡಿದೆ.

  • ಸಂಕ್ರಾಂತಿಯೊಳಗೆ ರಾಷ್ಟ್ರದಲ್ಲಿ ದೊಡ್ಡ ಅವಘಡ- ಕೋಡಿ ಮಠದ ಶ್ರೀ ಭವಿಷ್ಯ

    ಸಂಕ್ರಾಂತಿಯೊಳಗೆ ರಾಷ್ಟ್ರದಲ್ಲಿ ದೊಡ್ಡ ಅವಘಡ- ಕೋಡಿ ಮಠದ ಶ್ರೀ ಭವಿಷ್ಯ

    ಕೋಲಾರ: ಆಶ್ವೀಜ ಮಾಸದ ನಂತರ ಸಂಕ್ರಾಂತಿ ಒಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದರು.

    ಕೋಲಾರ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ನೆಲೆಸಿರುವ ಚಾಮುಂಡೇಶ್ವರಿ ದೇವಿ ಜನ್ಮ ದಿನೋತ್ಸವದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.

    ಯಡಿಯೂರಪ್ಪ ರಾಜೀನಾಮೆ ವಿಚಾರದಲ್ಲಿ ಮಠಾಧೀಶರು ಬೀದಿಗೆ ಬಂದು ಹೋರಾಟ ಮಾಡಿದರು. ಆದರೆ ಕೇಂದ್ರದ ನಾಯಕರು ಮಠಾಧೀಶರಿಗೆ ಅಗೌರವ ತೋರಿದ್ದಾರೆ ಗುರುಗಳಿಗೆ ನೋವಾಗುವಂತೆ ನಡೆದುಕೊಂಡಿದ್ದು ಸರಿಯಲ್ಲ ಎಂದರು.

    ರಾಜ ಮಹರಾಜರಿಂದ ಗುರುಗಳಿಗೆ ಬೆಲೆ ಇದೆ, ಕೆಂದ್ರದ ನಾಯಕರು ಬಂದು ಗುರುಗಳಿಗೆ ಆಶ್ವಾಸನೆ ಕೊಡಬಹುದಿತ್ತು. ಯಾವುದೇ ಸಲಹೆ ಪಡೆಯದೆ ಮಠಾಧೀಶರಿಗೆ ಅಗೌರವ ತೋರಿದ್ದಾರೆ. ಮಠಾಧೀಶರು ರಾಜಕಾರಣ ಮಾಡಿಲ್ಲ, ಬದಲಾಗಿ ಮುಖ್ಯಮಂತ್ರಿ ಬದಲಾಯಿಸುವ ಸಂದರ್ಭ ಇದಲ್ಲ ಎಂದಿದ್ದರು. ಆದರೆ ಹೈಕಮಾಂಡ್ ಗುರುಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಹಿಂದೆ ರಾಜರ ಕಾಲದಲ್ಲಿ ಸ್ವಾಮೀಜಿಗಳು ಸಿಂಹಾಸನದ ಪಕ್ಕ ಕೂರುತ್ತಿದ್ದರು. ರಾಮಚಂದ್ರ, ಪಾಂಡವರು, ಅತಿರಥ ಮಹಾರಾಜರು ಗುರುಗಳ ಸಲಹೆ ಪಡೆಯುತ್ತಿದ್ದರು. ಇನ್ನೂ ಸಾಕಷ್ಟು ಹೇಳುವ ವಿಚಾರ ಇದೆ. ಇದು ಸಂದರ್ಭ ಅಲ್ಲ, ಮೇಕೆ ಚರ್ಮದಿಂದ ಮಾಡಿದ ತಬಲ ಕೂಡ ಪಂಜರವನ್ನ ಕರಗಿಸುತ್ತೆ, ಆದರೆ ಮಠಾದೀಶರ ಅಹವಾಲನ್ನು ಆಲಿಸಲೇ ಇಲ್ಲ ಇದು ಬೇಸರ ತಂದಿದೆ. ಹಿಂದೂ ರಾಷ್ಟ್ರ ಎಂದರೆ ಖಾವಿ, ಅದಕ್ಕೆ ಬೆಲೆ ಇಲ್ಲದಹಾಗೆ ಮಾಡಿದರು ಎಂದರು.

    ಹೋರಾಟ ಮಾಡಿದ ಮಠಾಧೀಶರಿಗೆ ಅಗೌರವ ತೋರಿದಿರಿ, ನೀವು ಕೊಟ್ಟ ದುಡ್ಡೇ ಖಾಯಂ ಆಯ್ತಾ, ಈ ಸಂಸ್ಕೃತಿ ಬೆಳೆಯಬಾರದು ಮತ್ತಷ್ಟು ಮಾತನಾಡುವುದಿದೆ. ಕೇಂದ್ರದ ನಾಯಕರು, ಅಮಿತ್ ಶಾ ನಮ್ಮ ಬಳಿ ಬಂದಿದ್ದರು. ಈಗ ಬಂದರೆ ಈ ಎಲ್ಲಾ ವಿಚಾರವನ್ನು ಕೇಳುತ್ತೇವೆ, ಖಾವಿಗಳಿಗೆ ಈ ದೇಶದಲ್ಲಿ ಏನು ಬೆಲೆ ಇದೆ ಎಂದು ಪ್ರಶ್ನೆ ಮಾಡಿದರು.