Tag: government

  • ರಾತ್ರಿ 10 ರಿಂದ ಬೆಳಗ್ಗೆ 5 ವರೆಗೆ ದೆಹಲಿಯಲ್ಲಿ ನೈಟ್ ಕರ್ಫ್ಯೂ!

    ರಾತ್ರಿ 10 ರಿಂದ ಬೆಳಗ್ಗೆ 5 ವರೆಗೆ ದೆಹಲಿಯಲ್ಲಿ ನೈಟ್ ಕರ್ಫ್ಯೂ!

    ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳದಿಂದಾಗಿ ಎಚ್ಚೆತ್ತುಕೊಂಡಿರುವ ದೆಹಲಿ ಸರ್ಕಾರ ಇದೀಗ ನೈಟ್ ಕರ್ಫ್ಯೂ ಹಾಕಲು ಮುಂದಾಗಿದೆ.

    ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಬೀಸಲು ಆರಂಭಿಸಿದೆ. ಆದರೆ ಲಾಕ್‍ಡೌನ್ ಹೇರಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ.

    ಕೊರೊನಾ ಪ್ರಕರಣಗಳ ಸಂಖ್ಯೆ ದೆಹಲಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವುದರಿಂದಾಗಿ ಲಾಕ್‍ಡೌನ್ ಬದಲಾಗಿ ನೈಟ್‍ ಕರ್ಫ್ಯೂ ಹಾಕಲು ದೆಹಲಿ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

    ಸದ್ಯದ ಪರಿಸ್ಥಿತಿಯನ್ನು ಗಮನಿಸುತ್ತಿದ್ದಂತೆ, ದೆಹಲಿಯಲ್ಲಿ ಲಾಕ್‍ಡೌನ್ ಅವಶ್ಯಕತೆ ಇಲ್ಲ. ಆದರೆ ಸ್ಥಿತಿಗತಿಯ ಕುರಿತು ಸರ್ಕಾರ ಸೂಕ್ಷ್ಮ ಕಣ್ಣಿಟ್ಟಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.

    ಈಗಾಗಲೇ ದೆಹಲಿಯಲ್ಲಿ ನೈಟ್‍ ಕರ್ಫ್ಯೂ ಕುರಿತಾಗಿ ಸರ್ಕಾರ ಚಿಂತನೆ ನಡೆಸುತ್ತಿದ್ದು, ಸಮಯವನ್ನು ನಿಗದಿಪಡಿದೆ. ರಾತ್ರಿ 10 ರಿಂದ ಬೆಳಗ್ಗೆ 5 ವರೆಗೆ ನೈಟ್‍ ಕರ್ಫ್ಯೂ ಇರಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ದೆಹಲಿಯಲ್ಲಿ ಕಳೆದ ಒಂದೇ ದಿನ 3,548 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿತ್ತು. ಇದರೊಂದಿಗೆ ಒಂದೇ ದಿನದಲ್ಲಿ ಕೊರೊನಾದಿಂದಾಗಿ 15 ಸಾವುಕೂಡ ಸಂಭವಿಸಿತ್ತು.

  • ರಾಜಕಾರಣಿಗಳಿಗೆ, ಸಾರ್ವಜನಿಕರಿಗೆ ಒಂದೇ ರೂಲ್ಸ್ ಮಾಡಿ: ಪುಟ್ಟರಾಜು

    ರಾಜಕಾರಣಿಗಳಿಗೆ, ಸಾರ್ವಜನಿಕರಿಗೆ ಒಂದೇ ರೂಲ್ಸ್ ಮಾಡಿ: ಪುಟ್ಟರಾಜು

    ಮಂಡ್ಯ: ಕೊರೊನಾ ವಿಚಾರದಲ್ಲಿ ಸಾರ್ವಜನಿಕರಿಗೊಂದು, ರಾಜಕಾರಣಿಗಳಿಗೊಂದು ರೂಲ್ಸ್ ನ್ನು ಸರ್ಕಾರ ಮಾಡಬಾರದು. ಎಲ್ಲರಿಗೂ ಒಂದೇ ನಿಯಮ ರೂಪಿಸಿ ಅವುಗಳನ್ನು ಸರಿಯಾಗಿ ಜಾರಿಗೆ ಬರುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಮಾಜಿ ಸಚಿವ ಪುಟ್ಟರಾಜು ಆಗ್ರಹಿಸಿದ್ದಾರೆ.

    ಜಿಲ್ಲೆಯ ಪಾಂಡವಪುರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೋವಿಡ್ ನಿಯಮಗಳ ವಿಚಾರದಲ್ಲಿ ಜನರಿಗೊಂದು, ರಾಜಕಾರಣಿಗೊಂದು ರೂಲ್ಸ್ ಎಂಬಂತೆ ನಡೆದುಕೊಳ್ಳುತ್ತಿದೆ. ಈ ಧೋರಣೆಯನ್ನು ತೊರೆದು ಎಲ್ಲರಿಗೂ ಒಂದೇ ನಿಯಮ ಜಾರಿಗೆ ತರಬೇಕು. ಮದುವೆ ಸೇರಿದಂತೆ ರಾಜಕೀಯ ಸಮಾವೇಶ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರು ಸೇರುತ್ತಿದ್ದಾರೆ. ಕೇವಲ ಬಾಯಲ್ಲಿ ಮಾತ್ರ ಜನ ಸೇರಬಾರದು ಎಂದು ಹೇಳಿದರೆ ಆಗಲ್ಲ. ಕೊರೊನಾ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುವಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

    ಈಗಾಗಲೇ ಎರಡನೇ ಅಲೆ ನಾವು ಊಹಿಸಲು ಸಾಧ್ಯವಾಗದ ಮಟ್ಟಿಗೆ ಹರಡುತ್ತಿದೆ. ಮಹಾರಾಷ್ಟ್ರ ನೋಡಿದರೆ ಮೈ ಜುಮ್ ಎನ್ನುತ್ತಿದೆ, ಇದೀಗ ಕರ್ನಾಟಕವು ಅದೇ ಸಾಲಿನಲ್ಲಿ ಹೋಗುತ್ತಿದೆ. ಮುಂದೆ ಏನು ಕೇಡು ಕಾದಿದೆಯೋ ಎನ್ನುವುದು ಗೋತ್ತಾಗುತ್ತಿಲ್ಲ. ಇಷ್ಟಾದರೂ ಜನರಲ್ಲಿ ಭಯ ಮೂಡುತ್ತಿಲ್ಲ. ಸರ್ಕಾರ ಕೊರೊನಾ ನಿಯಮಗಳನ್ನು ಸರಿಯಾಗಿ ಜಾರಿಗೆ ತರುವಲ್ಲಿ ಎಡವಿದರೆ. ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಸರಿಯಾಗಿ ಅನುಸರಿಸುವಲ್ಲೇ ಬೇಜವಾಬ್ದಾರಿ ತೋರುತ್ತಿದ್ದಾರೆ. ಸರ್ಕಾರ ತನ್ನ ಕೆಲಸವನ್ನು ಸರಿಯಾಗಿ ಮಾಡಬೇಕು. ಅದೇ ರೀತಿ ಸಾರ್ವಜನಿಕರೂ ಸರ್ಕಾರದ ಜೊತೆ ಕೈ ಜೋಡಿಸಿ ಕೊರೊನಾ ವಿರುದ್ಧ ಹೋರಾಡಿ, ಕೊರೊನಾ ಮುಕ್ತರಾಗಬೇಕು ಎಂದರು.

  • ಜಿಮ್ ಆರಂಭಕ್ಕೆ ಗ್ರೀನ್ ಸಿಗ್ನಲ್ – ಕಂಡಿಷನ್ ಅಪ್ಲೈ

    ಜಿಮ್ ಆರಂಭಕ್ಕೆ ಗ್ರೀನ್ ಸಿಗ್ನಲ್ – ಕಂಡಿಷನ್ ಅಪ್ಲೈ

    ಬೆಂಗಳೂರು: ಜಿಮ್ ಬಂದ್ ಆದೇಶವನ್ನ ಸರ್ಕಾರ ಹಿಂಪಡೆದಿದ್ದು, ಕೆಲವು ಷರತ್ತುಗಳನ್ನ ವಿಧಿಸಿ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

    ಜಿಮ್ ಕೇಂದ್ರಗಳಿಗೆ ಷರತ್ತುಬದ್ಧ ನಿಯಮಗಳೊಂದಿಗೆ ಸರ್ಕಾರ ಜಿಮ್ ತೆರೆಯಲು ಅನುಮತಿ ನೀಡಿದೆ. ಜಿಮ್, ಫಿಟ್ನೆಸ್ ಕೇಂದ್ರಗಳ ಮನವಿಗೂ ಸ್ಪಂದಿಸಿದ ಸರ್ಕಾರ ಕೆಲವು ಮಾರ್ಗಸೂಚಿಯನ್ನು ಹೊರಡಿಸಿ ಜಿಮ್ ತೆರೆಯಲು ಅನುಮತಿ ನೀಡಿದೆ. ಸಿಎಸ್ ರವಿಕುಮಾರ್ ಮಾರ್ಗಸೂಚಿ ಇರುವ ಆದೇಶವನ್ನು ಹೊರಡಿಸಿದ್ದಾರೆ.

    ಜಿಮ್ ತೆರೆಯಲು ಇರುವ ಮಾರ್ಗಸೂಚಿಗಳು

    * ಶೇ.50 ರಷ್ಟು ಗ್ರಾಹಕರಿಗೆ ಅವಕಾಶ ಕಲ್ಪಿಸಬೇಕು.
    * ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ.
    * ಜಿಮ್‍ನಲ್ಲಿ ಪ್ರತೀ ಸಲ ಬಳಕೆ ಮಾಡಿದ ಬಳಿಕ ಜಿಮ್ ಸಲಕರಣೆಗಳನ್ನು ಸ್ಯಾನಿಟೈಸ್ ಮಾಡಬೇಕು.
    * ನಿಯಮ ಉಲ್ಲಂಘಿಸಿದರೆ ಜಿಮ್ ಬಂದ್ ಮಾಡಿಸುವ ಎಚ್ಚರಿಕೆಯನ್ನು ನೀಡಿದೆ.

    ಕೊರೊನಾ 2ನೇ ಅಲೆ ಪ್ರಾರಂಭವಾಗಿದೆ. ಹೀಗಾಗಿ ಕೊರೊನಾ ಕುರಿತಾದ ಕೆಲವು ಮುಂಜಾಗೃತಾ ಕ್ರಮಗಳ ಪಾಲನೆಗಾಗಿ ಜಿಮ್‍ನ್ನು ಕೆಲ ದಿನ ಮುಚ್ಚುವಂತೆ ಹೇಳಿತ್ತು. ಇದೀಗ ಜಿಮ್ ಮಾಲೀಕರ ಮನವಿಗೆ ಸ್ಪಂದಿಸಿರುವ ಸರ್ಕಾರ ಆರಂಭಕ್ಕೆ ಕೆಲವು ಷರತ್ತಿನ ಮೇಲೆ ಗ್ರೀನ್ ಸಿಗ್ನಲ್ ನೀಡಿದೆ.

  • ಚಿತ್ರರಂಗದ ಆಕ್ರೋಶಕ್ಕೆ ಮಣಿದ ಸರ್ಕಾರ- ಥಿಯೇಟರ್‌ಗಳಲ್ಲಿ ಹೌಸ್‍ಫುಲ್‍ಗೆ ಗ್ರೀನ್ ಸಿಗ್ನಲ್

    ಚಿತ್ರರಂಗದ ಆಕ್ರೋಶಕ್ಕೆ ಮಣಿದ ಸರ್ಕಾರ- ಥಿಯೇಟರ್‌ಗಳಲ್ಲಿ ಹೌಸ್‍ಫುಲ್‍ಗೆ ಗ್ರೀನ್ ಸಿಗ್ನಲ್

    – ಏ.7ರಿಂದ ರೂಲ್ಸ್ ಜಾರಿ

    ಬೆಂಗಳೂರು: ಕೊನೆಗೂ ಚಿತ್ರರಂಗದ ಆಕ್ರೋಶಕ್ಕೆ ಮಣಿದ ಸರ್ಕಾರ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

    ಹೌದು. ನಿನ್ನೆಯಷ್ಟೇ ಸರ್ಕಾರ ರಾಜ್ಯದ 8 ಜಿಲ್ಲೆಗಳ ಥಿಯೇಟರ್ ಗಳಲ್ಲಿ ಶೇ.50ರಷ್ಟು ವೀಕ್ಷಕರಿಗೆ ಮಾತ್ರ ಅವಕಾಶಕ್ಕಾಗಿ ಆದೇಶ ನೀಡಿತ್ತು. ಸರ್ಕಾರದ ಆದೇಶದ ಬೆನ್ನಲ್ಲೇ ನಟ ಪುನೀತ್ ರಾಜ್ ಕುಮಾರ್, ಯಶ್, ಸುದೀಪ್ ಸೇರಿದಂತೆ ಇಡೀ ಚಿತ್ರರಂಗವೇ ಸರ್ಕಾರದ ವಿರುದ್ಧ ತಿರುಗಿ ಬಿತ್ತು. ಸರ್ಕಾರದ ಆದೇಶಕ್ಕೆ ಖಂಡನೆ ವ್ಯಕ್ತವಾಗಿತ್ತು.

    ಕನ್ನಡ ಸಿನಿಮಾಗಳ ಟಿಕೆಟ್ ಮುಂಗಡ ಬುಕಿಂಗ್ ಆಗಿತ್ತು. ಹೀಗಾಗಿ ನಿರ್ಬಂಧ ಸಡಿಲಿಕೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಯುವರತ್ನ ಚಿತ್ರತಂಡ ಇಂದು ಸಂಜೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿತ್ತು. ಎಲ್ಲ ಮಾರ್ಗಸೂಚಿಗಳನ್ನೂ ಪಾಲಿಸುತ್ತೇವೆ. ಆದರೆ ಶೇ.100ರಷ್ಟು ಭರ್ತಿಗೆ ಅವಕಾಶ ಮಾಡಿಕೊಡಿ. ಇಲ್ಲವಾದಲ್ಲಿ ತುಂಬಾ ನಷ್ಟವಾಗಲಿದೆ ಎಂದು ಪುನೀತ್ ರಾಜ್ ಕುಮಾರ್ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಥಿಯೇಟರ್‌ಗಳಲ್ಲಿ ಶೇ.100 ಭರ್ತಿಗೆ ಅವಕಾಶ ನೀಡಿ- ಸಿಎಂಗೆ ಪುನೀತ್ ಮನವಿ

    ಈ ಹಿನ್ನೆಲೆಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಮನವಿ ಪುರಸ್ಕರಿಸಿದ ಸರ್ಕಾರ, ಸಿನಿಮಾ ಥಿಯೇಟರ್ ಗಳಲ್ಲಿ ಏಪ್ರಿಲ್ 7 ರ ವರೆಗೆ ನಿರ್ಬಂಧ ಸಡಿಲಿಕೆ ಮಾಡಿದೆ. ಈ ಮೂಲಕ ಮೂರು ದಿನಗಳ ಕಾಲ ನಿರ್ಬಂಧ ಸಡಿಲಿಕೆ ಮಾಡಿರುವ ಸರ್ಕಾರ, ಏಪ್ರಿಲ್ 6 ರ ಮಧ್ಯರಾತ್ರಿವರೆಗೆ ನಿರ್ಬಂಧ ಸಡಿಲಿಕೆ ಮಾಡಿ ಸಿಎಸ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

  • ರಾಜಕೀಯ ಸಮಾವೇಶಗಳಲ್ಲಿ ಇಲ್ಲದ ನಿರ್ಬಂಧ ಸಿನಿಮಾ ಥಿಯೇಟರ್‌ಗೆ ಏಕೆ..?: ದುನಿಯಾ ವಿಜಿ

    ರಾಜಕೀಯ ಸಮಾವೇಶಗಳಲ್ಲಿ ಇಲ್ಲದ ನಿರ್ಬಂಧ ಸಿನಿಮಾ ಥಿಯೇಟರ್‌ಗೆ ಏಕೆ..?: ದುನಿಯಾ ವಿಜಿ

    – ಟಫ್ ರೂಲ್ಸ್ ಗಳನ್ನು ಸಡಿಲಿಸುವಂತೆ ಮನವಿ

    ದಾವಣಗೆರೆ: ರಾಜಕೀಯ ಸಮಾವೇಶಗಳಲ್ಲಿ ಸಾವಿರಾರು ಜನ ಸೇರ್ತಾರೆ. ಅದಕ್ಕೆ ನಿರ್ಬಂಧ ಇಲ್ಲ. ಎಲ್ಲೂ ಇಲ್ಲದ ನಿಯಮಗಳು ಸಿನಿಮಾ ಥಿಯೇಟರ್‌ಗೆ ಏಕೆ ಎಂದು ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ಪ್ರಶ್ನಿಸಿದ್ದಾರೆ.

    ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಿಹರದ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಥಿಯೇಟರ್‌ಗಳಿಗೆ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಸರ್ಕಾರದ ಅದೇಶಕ್ಕೆ ಪ್ರತಿಕ್ರಿಯಿಸಿದರು. ಅಲ್ಲದೆ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

    ಎಲ್ಲೂ ಇಲ್ಲದ ನಿಯಮಗಳು ಸಿನಿಮಾ ಥಿಯೇಟರ್‌ಗೆ ಏಕೆ ಎಂದು ಪ್ರಶ್ನಿಸಿದ ಅವರು, ರಾಜಕೀಯ ಸಮಾವೇಶಗಳಲ್ಲಿ ಸಾವಿರಾರು ಜನ ಸೇರ್ತಾರೆ, ಆದರೆ ಅದಕ್ಕೆ ನಿರ್ಬಂಧ ಇಲ್ಲ. ಪುನೀತ್ ರಾಜಕುಮಾರ್ ಒಂದೊಳ್ಳೆ ಸಿನಿಮಾ ಮಾಡಿದ್ದಾರೆ. ಎರಡು ದಿನ ಮೊದಲು ಹೇಳಿದ್ದರೆ ಅವರು ಸಿನಿಮಾ ರಿಲೀಸ್ ಮಾಡುತ್ತಿರಲಿಲ್ಲ. ಬಿಗ್ ಬಜೆಟ್ ಗಳ ಸಿನಿಮಾಗಳಿಗೆ ಈ ರೀತಿ ಆದ್ರೆ ಸಿನಿಮಾ ಇಂಡಸ್ಟ್ರಿ ಉಳಿಯುವುದು ಹೇಗೆ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಪುನಿತ್ ಸಿನಿಮಾ ನೋಡಲು ಫ್ಯಾಮಿಲಿ ಗಳು ಬರ್ತಾ ಇದೆ. ದಯವಿಟ್ಟು ಟಫ್ ರೂಲ್ಸ್‍ಗಳನ್ನು ಸಡಿಲಿಸಿ ಎಂದು ವಿಜಿ ಸರ್ಕಾರಕ್ಕೆ ಮನವಿ ಮಾಡಿದರು. ಕೋವಿಡ್ ಸಂದರ್ಭದಲ್ಲಿ ಪುನೀತ್ ಅವರು ಸರ್ಕಾರಕ್ಕೆ ನಿಧಿ ನೀಡಿದರು. ಅದಕ್ಕೆ ಅಂತ ನಾವು ಕೇಳ್ತಾ ಇಲ್ಲ, ಕನ್ನಡ ಸಿನಿಮಾ ರಂಗ ಉಳಿಯಲು ಕೇಳುತ್ತಿದ್ದೇವೆ ಎಂದರು.

    ಎಲ್ಲಾ ಮಠಗಳ ಮೇಲೆ ಅಭಿಮಾನ ಇದೆ. ನಾನು ಒಂದು ಸಮುದಾಯಕ್ಕೆ ಸೇರಿಲ್ಲ. ನನಗೆ ಎಲ್ಲಿ ಹೋಗಬೇಕು ಅನ್ನಿಸುತ್ತೋ ಅಲ್ಲಿ ಹೋಗುತ್ತೇನೆ. ‘ದುನಿಯಾ’ವನ್ನು ಎಲ್ಲಾ ಜಾತಿ ಧರ್ಮದವರು ನೋಡಿ ಬೆಳೆಸಿದ್ದೀರಿ ಎಂದು ಇದೇ ವೇಳೆ ವಿಜಯ್ ಹೇಳಿದರು.

  • ಸರ್ಕಾರದ ನಿರ್ಧಾರವನ್ನು ಗೌರವಿಸುವುದು ನಮ್ಮ ಕರ್ತವ್ಯ: ಕಿಚ್ಚ ಸುದೀಪ್

    ಸರ್ಕಾರದ ನಿರ್ಧಾರವನ್ನು ಗೌರವಿಸುವುದು ನಮ್ಮ ಕರ್ತವ್ಯ: ಕಿಚ್ಚ ಸುದೀಪ್

    – ಗೆದ್ದು ಬೀಗುವಂತೆ ಯುವರತ್ನಗೆ ಶುಭ ಹಾರೈಕೆ

    ಬೆಂಗಳೂರು: ಥಿಯೇಟರ್ ಗಳಲ್ಲಿ ಶೇ.50ರಷ್ಟು ಭತೀಗೆ ಅವಕಾಶ ನೀಡಿರುವ ಸರ್ಕಾರದ ನಿರ್ಧಾರವನ್ನು ನಾವು ಗೌರವಿಸಬೇಕಾಗಿದೆ ಎಂದು ಸ್ಯಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ನಟ, ಥಿಯೇಟರ್ ಗಳಲಿ ಮತ್ತೆ ಶೇ.50ರಷ್ಟು ಆಸನಗಳನ್ನು ಭರ್ತಿ ಮಾಡಬೇಕು ಎಂದರೆ ನಿಜಕ್ಕೂ ಇದೊಂದು ಶಾಕಿಂಗ್ ಬೆಳವಣಿಗೆಯಾಗಿದೆ. ಸರ್ಕಾರದ ನಿರ್ಧಾರದಿಂದ ಈಗ ತಾನೇ ಬಿಡುಗಡೆ ಆದ ಚಿತ್ರಕ್ಕೆ ಆತಂಕ ಎದುರಾಗಿದೆ. ಸರ್ಕಾರದ ನಿಯಮಗಳನ್ನು ಗೌರವಿಸುವುದು ಕೂಡ ನಮ್ಮ ಕರ್ತವ್ಯವಾಗುತ್ತದೆ. ಆದರೂ ಇಂತಹ ಸಂದರ್ಭವನ್ನು ಎದುರಿಸಿ ಗೆದ್ದು ಬರುವ ಶಕ್ತಿ ಯುವರತ್ನ ತಂಡಕ್ಕೆ ಸಿಗಲಿ ಎಂದು ಆಶಿಸುವುದಾಗಿ ಅವರು ತಿಳಿಸಿದರು.

    ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ವೈರಸ್ ಅಬ್ಬರ ಮತ್ತೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಬೀದರ್ ಹಾಗೂ ಧಾರವಾಡ ಜಿಲ್ಲೆಗಳ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಆಸನ ಭರ್ತಿಗೆ ಸರ್ಕಾರ ಆದೇಶ ಹೊರಡಿಸಿತ್ತು.

    ಸರ್ಕಾರದ ಈ ನಿರ್ಧಾರಕ್ಕೆ ನಟ ಪುನೀತ್ ರಾಜ್ ಕುಮಾರ್ ತೀವ್ರ ಆಕ್ಷೇಪ ಹಾಗೂ ಬೇಸರ ಹೊರಹಾಕಿದ್ದರು. ಯಾಕಂದರೆ ಪುನೀತ್ ನಟನೆಯ ಯುವರತ್ನ ಚಿತ್ರ ಬಿಡುಗಡೆಯಾಗಿ ಕೇವಲ 2 ದಿನಕ್ಕೆ ಸರ್ಕಾರ ಈ ನಿರ್ಬಂದ ಹೇರಿದ್ದ ಕಾರಣ ನಟ ಆಕ್ರೋಶ ಹೊರಹಾಕಿದ್ದರು. ಕೇವಲ ಪುನೀತ್ ರಾಜ್ ಕುಮಾರ್ ಮಾತ್ರವಲ್ಲದೆ ಚಂದನವನದ ಇತರರು ಕೂಡ ಸರ್ಕಾರದ ನಿರ್ಧಾರವನ್ನು ಖಂಡಿಸಿದರು.

  • ಕಾಡಿ, ಬೇಡಿ ಕೊರೊನಾ ಲಸಿಕೆ ಹಾಕಲಾಗುತ್ತಿದೆ: ಸಚಿವ ಸುಧಾಕರ್

    ಕಾಡಿ, ಬೇಡಿ ಕೊರೊನಾ ಲಸಿಕೆ ಹಾಕಲಾಗುತ್ತಿದೆ: ಸಚಿವ ಸುಧಾಕರ್

    – ಲಸಿಕೆ ಪಡೆಯಲು ಜನ ಹಿಂದೇಟು

    ಚಿಕ್ಕಬಳ್ಳಾಪುರ: ಜನ ಲಸಿಕೆ ತೆಗೆದುಕೊಳ್ಳೋಕೆ ಹಿಂದೇಟು ಹಾಕ್ತಿದ್ದಾರೆ. ಜನರಿಗೆ ಕಾಡಿ ಬೇಡಿ ಲಸಿಕೆ ಹಾಕಲಾಗುತ್ತಿದೆ. ಜನರೇ ದಯ ಮಾಡಿ ಲಸಿಕೆ ಹಾಕಿಸಿಕೊಳ್ಳಿ ಅಂತ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

    ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5.500 ಕೋವಿಡ್ ಲಸಿಕಾ ಕೇಂದ್ರಗಳನ್ನ ಸಿದ್ಧಪಡಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಪ್ರತಿ ದಿನ 100 ಜನರಂತೆ ವ್ಯಾಕ್ಸಿನ್ ಹಾಕಿದರೂ 5 ಲಕ್ಷದ 50 ಸಾವಿರ ಮಂದಿ ಲಸಿಕೆ ಪಡೆದುಕೊಳ್ಳಬಹುದಾಗಿದೆ. ಅದರೆ ಪ್ರತಿದಿನ ಕೇವಲ 1 ರಿಂದ ಒಂದೂವರೆ ಲಕ್ಷ ಜನ ಮಾತ್ರ ಲಸಿಕೆ ಪಡೆದುಕೊಳ್ತಿದ್ದಾರೆ ಎಂದು ಹೇಳಿದ್ದಾರೆ.

    ಕೋವಿಡ್ ಲಸಿಕೆ ರಾಮಬಾಣವಿದ್ದಂತೆ 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಿ. ಕೊರೊನಾ ನ್ಯೂ ರೂಲ್ಸ್‍ಗೆ ಕೆಲವರ ಆಕ್ಷೇಪಾರ್ಹಗಳು ಬರ್ತವೆ. ಆದರೆ ಆರೂವರೆ ಕೋಟಿ ಜನರ ಹಿತದೃಷ್ಟಿಯಿಂದ ನಿಬರ್ಂಧಗಳನ್ನ ಹೇರಲಾಗಿದೆ. ಕೊರೊನಾ ಕಡಿಮೆ ಆಗುವವರೆಗೆ ನಿಯಮ ಪಾಲನೆ ಮಾಡಿ. ಸೋಂಕು ಕಡಿಮೆ ಮಾಡುವ ದೃಷ್ಟಿಯಿಂದ ಕೆಲವು ಮಾರ್ಗ ಸೂಚಿಗಳನ್ನು ಹಾಕಿದ್ದೇವೆ. ಒಬ್ಬ ವ್ಯಕ್ತಿಯ ಒಂದು ಚಟುವಟಿಕೆಗಾಗಿ ನಿಬರ್ಂಧ ಮಾಡಿಲ್ಲ. ಕೊರೊನಾ ಕಡಿವಾಣ ಮಾಡುವ ಉದ್ದೇಶದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಟಕೊರೊನಾ ನಿಯಮಗಳನ್ನ ಜನ ಪಾಲನೆ ಮಾಡುವಂತೆ ಮನವಿ ಮಾಡಿದ್ದಾರೆ.

  • ಬೇಡಿಕೆಗಳ ಈಡೇರಿಕೆಗೆ ಬೋಂಡಾ, ಬಜ್ಜಿ ಮಾರಿ ಸಾರಿಗೆ ನೌಕರರ ಪ್ರತಿಭಟನೆ

    ಬೇಡಿಕೆಗಳ ಈಡೇರಿಕೆಗೆ ಬೋಂಡಾ, ಬಜ್ಜಿ ಮಾರಿ ಸಾರಿಗೆ ನೌಕರರ ಪ್ರತಿಭಟನೆ

    ಹಾವೇರಿ: ಒಂಬತ್ತು ಬೇಡಿಕೆಗಳ ಈಡೇರಿಕೆಗಾಗಿ ಬೋಂಡಾ, ಬಜ್ಜಿ, ಮಿರ್ಚಿ, ಟೀ ಮಾರಾಟ ಮಾಡಿ ಸಾರಿಗೆ ನೌಕರರು ರಾಣೇಬೆನ್ನೂರು ನಗರದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಬಳಿ ವಿನೂತನವಾಗಿ ಪ್ರತಿಭಟಿಸಿದ್ದಾರೆ.

    ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗ ಜಾರಿ, ಆರೋಗ್ಯ ಭಾಗ್ಯ ವಿಮಾ ಯೋಜನೆ, ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ಜಾರಿ ಸೇರಿದಂತೆ ವಿವಿಧ ಒಂಬತ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

    ಈ ವೇಳೆ ಸಾರಿಗೆ ನೌಕರರು ಬೋಂಡಾ, ಬಜ್ಜಿ, ಮಿರ್ಚಿ, ಟೀ ತಯಾರಿಸಿ ಮಾರಾಟ ಮಾಡುವ ಮೂಲಕ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸಾರಿಗೆ ನೌಕರರ ಬೇಡಿಕೆ ಈಡೇರಿಸುವವರೆಗೆ ದಿನಕ್ಕೊಂದು ರೀತಿಯಲ್ಲಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ನಿರ್ಧಾರ ಮಾಡಿದ್ದು, ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

  • ಕೊರೊನಾ ಸ್ಫೋಟ – ಮದುವೆ, ಅಂತ್ಯಕ್ರಿಯೆಗಳಿಗೆ ಹೊಸ ನಿಯಮ ಜಾರಿ

    ಕೊರೊನಾ ಸ್ಫೋಟ – ಮದುವೆ, ಅಂತ್ಯಕ್ರಿಯೆಗಳಿಗೆ ಹೊಸ ನಿಯಮ ಜಾರಿ

    – ಏಪ್ರಿಲ್ 30ರವರೆಗೆ ಜಾರಿ

    ನವದೆಹಲಿ: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ದೆಹಲಿ ಸರ್ಕಾರ ಮದುವೆ ಸಮಾರಂಭ ಹಾಗೂ ಅಂತ್ಯಕ್ರಿಯೆಗಳಲ್ಲಿ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಕೆಲವು ನಿರ್ಬಂಧಗಳನ್ನು ಹಾಕಿದೆ.

    ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಶನಿವಾರ ಹೊಸ ಆದೇಶಗಳನ್ನು ಹೊರಡಿಸಿದ್ದು, ಮದುವೆ ಹಾಗೂ ಇತರ ಸಮಾರಂಭಗಳಲ್ಲಿ 200 ಪಾಲ್ಗೊಳ್ಳಬಹುದೆಂದು ಸೂಚಿಸಿದೆ. ನಗರದ ತೆರೆದ ಸ್ಥಳಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ 100 ಮಂದಿ ಹಾಗೂ ಅಂತ್ಯಕ್ರಿಯೆಯಲ್ಲಿ ಕನಿಷ್ಠ 50 ಮಂದಿ ಭಾಗವಹಿಸಬೇಕೆಂದು ತಿಳಿಸಿದೆ.

    ಈ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರಗಳನ್ನು ಕಾಯ್ದುಕೊಳ್ಳುವುದು ಮುಂತಾದ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಲಾಗಿದೆ. ಈ ಹೊಸ ಆದೇಶ ಏಪ್ರಿಲ್ 30ರವರೆಗೂ ಜಾರಿಯಲ್ಲಿರಲಿದ್ದು, ಅಲ್ಲಿಯವರೆಗೂ 200ಕ್ಕೂ ಹೆಚ್ಚು ಮಂದಿ ಸಮಾರಂಭಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸೂಚಿಸಿದೆ.

    ದೆಹಲಿಯಲ್ಲಿ ಶನಿವಾರ 1,558 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಇಲ್ಲಿಯವರೆಗೂ 6,55,834 ಕೊರೊನಾ ಪ್ರಕರಣ ದಾಖಲಾಗಿದೆ. ಶನಿವಾರ 974 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

    ಒಟ್ಟಾರೆ ಇಲ್ಲಿಯವರೆಗೂ ದೆಹಲಿಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 6,38,212 ಮಂದಿಯಾಗಿದ್ದು, ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 6,625 ಆಗಿದೆ.

  • ಖಾಸಗೀಕರಣ ವಿರೋಧಿಸಿ ಬಿಇಎಲ್, ಹೆಚ್‍ಎಎಲ್ ನೌಕರರ ಪ್ರತಿಭಟನೆ

    ಖಾಸಗೀಕರಣ ವಿರೋಧಿಸಿ ಬಿಇಎಲ್, ಹೆಚ್‍ಎಎಲ್ ನೌಕರರ ಪ್ರತಿಭಟನೆ

    ಬೆಂಗಳೂರು: ಖಾಸಗೀಕರಣ ವಿರೋಧಿಸಿ, ಖಾಸಗೀಕರಣ ವಿರೋಧಿ ವೇದಿಕೆ ಬೆಂಗಳೂರಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರ ಭಾಗವಾಗಿ ಜಾಲಹಳ್ಳಿಯ ಬಿಇಎಲ್ ಹಾಗೂ ಹೆಚ್‍ಎಎಲ್ ನೌಕರರು ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.

    ದೇಶದ ನಿರ್ಮಾಣಕ್ಕೆ ಹಾಗೂ ಕೃಷಿ ಕೇತ್ರಗಳ ಬೆಳವಣಿಗೆಗೆ ಮೂಲ ಕಾರಣವಾಗಿರುವ ಸಾರ್ವಜನಿಕ ಸಂಸ್ಥೆಗಳ ಉಳಿವಿಗಾಗಿ ಹಾಗೂ ಉದ್ದಿಮೆಗಳ ಖಾಸಗೀಕರಣ ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಹೆಚ್‍ಎಎಲ್, ಬಿಇಎಂಎಲ್, ಬಿಇಎಲ್, ಬಿಹೆಚ್‍ಇಎಲ್, ವಿಐಎಸ್‍ಎಲ್, ಎಲ್‍ಐಸಿ ಸೇರಿದಂತೆ ಹಲವು ಕಂಪನಿಗಳು ಸಹ ಕೇಂದ್ರದ ಖಾಸಗೀಕರಣ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.

    ಲಾಕ್ ಡೌನ್ ಸಂದರ್ಭದಲ್ಲಿ ಬಿಇಎಲ್, ಬೆಮಲ್, ಹೆಚ್‍ಎಎಲ್ ಜನರ ಪರವಾಗಿ ಕೆಲಸ ಮಾಡಿ ತಮ್ಮ ಸಾಮರ್ಥ್ಯ ತೋರಿವೆ. ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಸಲಕರಣೆ ಸೇರಿದಂತೆ ಜನರಿಗೆ ಬದುಕಲು ಬೇಕಾದ ಎಲ್ಲಾ ಸಹಕಾರವನ್ನು ನೀಡಿವೆ. ಅಷ್ಟೇ ಅಲ್ಲ ಈ ಸಾರ್ವಜನಿಕ ಉದ್ದಿಮೆಗಳು ಕೋಟ್ಯಂತರ ಹಣವನ್ನು ಕೇಂದ್ರಕ್ಕೆ ಸಾಲ ಕೊಡುವಷ್ಟು ಲಾಭ ತಂದರೂ ಕೂಡ ಇವುಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿರುವುದು ಎಷ್ಟು ಸರಿ ಎಂದು ಸಂಘಟಕರು ಪ್ರಶ್ನೆ ಮಾಡಿದರು.

    ಭಾರತ್ ಎಲೆಕ್ಟ್ರಾನಿಕ್ಸ್ ಯುನಿಯನ್‍ನ ಪ್ರಧಾನ ಕಾರ್ಯದರ್ಶಿ ಆಂಟೋನಿ ಪಿಂಟೋ ಮಾತನಾಡಿ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ನಾವು ಒಪ್ಪುವುದಿಲ್ಲ ಎಂದರು. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗಿದ್ದರು.