Tag: government

  • ಸರ್ಕಾರಕ್ಕೆ ಡಿಸೆಂಬರ್‌ವರೆಗೆ ಅಗ್ನಿಪರೀಕ್ಷೆ – ಹಬ್ಬ, ರ‍್ಯಾಲಿ, ಮದುವೆಗೆ ಕಠಿಣ ನಿಯಮ

    ಸರ್ಕಾರಕ್ಕೆ ಡಿಸೆಂಬರ್‌ವರೆಗೆ ಅಗ್ನಿಪರೀಕ್ಷೆ – ಹಬ್ಬ, ರ‍್ಯಾಲಿ, ಮದುವೆಗೆ ಕಠಿಣ ನಿಯಮ

    ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ. ಅಲ್ಲದೇ ಕರ್ನಾಟಕಕ್ಕೆ ಮೂರು ತಿಂಗಳು ಕೊರೊನಾ ಮಹಾ ಗಂಡಾಂತರ ಎದುರಾಗಲಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ – ಯಾರಿಗೆ ಕೊರೊನಾ ಟೆಸ್ಟ್‌ ಕಡ್ಡಾಯ?

    ಮೂರು ತಿಂಗಳಿಗೆ ಕರ್ನಾಟಕ ಸರ್ಕಾರದಿಂದ ಟಫ್ ರೂಲ್ಸ್ ಜಾರಿ ಮಾಡಿದೆ. ಯಾಕೆಂದರೆ ಮುಂದಿನ ಮೂರು ತಿಂಗಳಲ್ಲಿ ಹಬ್ಬ, ಮದುವೆ, ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ನವರಾತ್ರಿ ಪೂಜಾ ಕಾರ್ಯಕ್ರಮ ಜಾಸ್ತಿ ನಡೆಯಲಿದೆ. ಹೀಗಾಗಿ ಈ 3 ತಿಂಗಳಲ್ಲಿ ಕಾರ್ಯಕ್ರಮ ಮಾಡಿದರೆ ಟಫ್ ರೂಲ್ಸ್ ಪಾಲನೆ ಕಡ್ಡಾಯವಾಗಿದೆ. ಇದರಿಂದ ಕರ್ನಾಟಕ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಕೊರೊನಾ ಮಹಾ ಅಗ್ನಿಪರೀಕ್ಷೆಯನ್ನ ಎದುರಿಸಬೇಕಾಗುತ್ತದೆ.

    3 ತಿಂಗಳಿಗೆ ಹೊಸ ರೂಲ್ಸ್
    * ಕಂಟೈನ್ ಮೆಂಟ್ ವಲಯದಲ್ಲಿ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ. ಕಂಟೈನ್ ಮೆಂಟ್ ಝೋನ್ ಹೊರಗೆ ಅಷ್ಟೇ ಕಾರ್ಯಕ್ರಮಗಳಿಗೆ ಅನುಮತಿ.
    * ಮದುವೆ, ಸಮಾರಂಭ, ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ರ‍್ಯಾಲಿ , ಸಾರ್ವಜನಿಕ ಸಮಾರಂಭ ಯಾವುದೇ ಕಾರ್ಯಕ್ರಮ ನಡೆಸಿದರೆ 65 ವರ್ಷ ಮೇಲ್ಪಟ್ಟವರನ್ನು, ಗರ್ಭಿಣಿಯರನ್ನು ಹಾಗೂ ಇತರೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರನ್ನು ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ವಹಿಸಬೇಕು.
    * ಮದುವೆ, ಪೂಜಾ ಕಾರ್ಯ, ರ‍್ಯಾಲಿಗಳು ವಾರಗಟ್ಟಲೇ ನಡೆಯುವಂದ್ದರೆ ಪ್ರತಿ ದಿನವೂ ಕಡಿಮೆ ಜನ ಸೇರುವಂತೆ ನೋಡಿಕೊಳ್ಳಬೇಕು. ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ
    * ಪ್ರತಿ ಸಮಾರಂಭಕ್ಕೂ ಪ್ರತ್ಯೇಕ ಎಂಟ್ರಿ ಎಕ್ಸಿಟ್ ಇರಬೇಕು.


    * ಜನ ಸೇರುವ ಕಾರ್ಯಕ್ರಮಗಳಲ್ಕಿ ಜನ ಸಾಮಾಜಿಕ ಅಂತರ ಪಾಲನೆ ಮಾಡುತ್ತಿದ್ದಾರೆಯೇ ಅಥವಾ ಮಾಸ್ಕ್ ಧರಿಸಿದ್ದಾರೆಯೇ ಅನ್ಮೋದನ್ನು ನೋಡಲು ಕ್ಯಾಮೆರಾ ಕಣ್ಗಾವಲು ಇರಬೇಕು.
    * ರ‍್ಯಾಲಿ ನಡೆಸೋದಿದ್ದರೆ ಅಂಬುಲೆನ್ಸ್ ಕಡ್ಡಾಯ ಹಾಗೂ ಸ್ಥಳೀಯ ಆಸ್ಪತ್ರೆಗೆ ಮೊದಲೇ ಮಾಹಿತಿ ಕೊಟ್ಟಿರಬೇಕು.
    * ಪ್ರತಿ ದೊಡ್ಡ ಕಾರ್ಯಕ್ರಮವನ್ನು ನಿರ್ದಿಷ್ಟ ಸ್ಥಳದಲ್ಲಿ ಆಯೋಜಿಸಿದರೆ ಅಲ್ಲಿ ಸೋಂಕು ಶಂಕಿತರನ್ನು ವೈದ್ಯರಿಗೆ ತೋರಿಸಬೇಕು. ವೈದ್ಯರು ಸ್ಥಳಕ್ಕೆ ಬರುವವರೆಗೆ ಐಸೋಲೇಟ್ ಮಾಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಕೊಂಡಿರಬೇಕು.
    * ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿನಿತಾರೆಯನ್ನು ಕರೆಸುವಂತಹ ಸಂದರ್ಭದಲ್ಲಿ ಜನಸಂದಣಿಯ ಬಗ್ಗೆ ಗಮನಹರಿಸಬೇಕು.

  • ರಾಮ, ಅಯೋಧ್ಯೆ, ಹಿಂದುತ್ವ ಅಂದ್ರೆ ರಾಜಕಾರಣಿಗಳು ನೆಟ್ಟಗಾಗ್ತಾರೆ ಅಷ್ಟೇ – ದತ್ತ

    ರಾಮ, ಅಯೋಧ್ಯೆ, ಹಿಂದುತ್ವ ಅಂದ್ರೆ ರಾಜಕಾರಣಿಗಳು ನೆಟ್ಟಗಾಗ್ತಾರೆ ಅಷ್ಟೇ – ದತ್ತ

    – ನಮ್ಮ ಅಕ್ಕ ತಂಗಿಯರನ್ನು ಕಳೆದುಕೊಳ್ತೇವೆ

    ಚಿಕ್ಕಮಗಳೂರು: ರಾಮ, ಅಯೋಧ್ಯೆ, ಹಿಂದುತ್ವ ಅಂದ್ರೆ ಪ್ರಪಂಚ ನೆಟ್ಟಗೆ ಆಗುತ್ತೆ ಅಂತ ನಮ್ಮ ಯುವ ಸಮೂಹ ತಿಳಿದಿದೆ. ಆದರೆ ಪ್ರಪಂಚ ನೆಟ್ಟಗೆ ಆಗುತ್ತೊ ಇಲ್ವೋ ರಾಜಕಾರಣಿಗಳು ನೆಟ್ಟಗಾಗುತ್ತಾರೆ ಎಂದು ವೈ.ಎಸ್.ವಿ.ದತ್ತ ಆತಂಕ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಕಡೂರು ತಾಲೂಕಿನ ಹೋಚಿಹಳ್ಳಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನದ ಬಳಿಕ ಮಾತನಾಡಿದ ಅವರು, ಹೀಗೆ ನಮ್ಮ ಅಕ್ಕತಂಗಿಯರನ್ನು ಕಳೆದುಕೊಳ್ಳಬೇಕಾಗುತ್ತೆ ಎಂದು ನಮ್ಮ ಯುವಕರಿಗೆ ತಿಳುವಳಿಕೆ ಕೊಡಬೇಕಿದೆ ಎಂದು ತಿಳಿಸಿದರು.

    ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು. ರಾಮರಾಜ್ಯ ಅಂತಾರೆ, ಮರ್ಯಾದೆ ಪುರುಷೋತ್ತಮ ರಾಮ ಅಂತಾರೆ. ರಾಮನಿಗೆ ದೇವಸ್ಥಾನ ಕಟ್ಟಿಸಿದ್ದಕ್ಕೆ ಸಂಭ್ರಮಿಸ್ತಾರೆ. ರಾಮ ದೇವಾಲಯ ಬಿಡುಗಡೆಯಾಗಿದ್ದಕ್ಕೆ ಸಿಹಿ ಹಂಚುತ್ತಾರೆ. ಆದರೆ ಓರ್ವ ದಲಿತ ಹೆಣ್ಣು ಮಗಳನ್ನು ರಾತ್ರಿ ಆತ್ಯಾಚಾರ ಮಾಡಿ ಅವಳನ್ನು ಕೊಂದು ಶಿಕ್ಷೆಯನ್ನು ತಪ್ಪಿಸೋದಕ್ಕೆ ರಾತ್ರೋರಾತ್ರಿ ಗುಟ್ಟಾಗಿ ಕುಟುಂಬಕ್ಕೂ ಹೇಳದೇ ಅಂತ್ಯಕ್ರಿಯೆ ಮಾಡುತ್ತಾರೆ ಎಂದು ಕಿಡಿಕಾರಿದರು.

    ಈ ರೀತಿಯ ಕೆಲಸಕ್ಕೆ ಸರ್ಕಾರವೇ ಬೆಂಬಲವಾಗಿ ನಿಲ್ಲುತ್ತೆ ಅಂದ್ರೆ ಇಂತಹಾ ಸರ್ಕಾರವನ್ನ ಮನುಷ್ಯ ಸರ್ಕಾರ ಅನ್ನಬೇಕೋ ಅಥವ ಮೃಗಿಯ ಸರ್ಕಾರ ಅನ್ನಬೇಕೋ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಅಂಗಡಿ ಓರ್ವ ಮಂತ್ರಿಯಾಗಿದ್ರೂ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಆಗಿಲ್ಲ: ಡಿಕೆಶಿ

    ಅಂಗಡಿ ಓರ್ವ ಮಂತ್ರಿಯಾಗಿದ್ರೂ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಆಗಿಲ್ಲ: ಡಿಕೆಶಿ

    – ಯೋಗಿ ಸರ್ಕಾರ ಇಡೀ ಪ್ರಪಂಚಕ್ಕೆ ಕಪ್ಪು ಚುಕ್ಕೆ

    ಬೆಳಗಾವಿ: ಸುರೇಶ್ ಅಂಗಡಿ ಕೇಂದ್ರದ ಮಂತ್ರಿ. ಅಲ್ಲದೇ ಬೆಳಗಾವಿಯಲ್ಲಿ ಮಿಲಿಟರಿ ಬೇಸ್ ಇದೆ. ಆದರೂ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಕ್ಕೆ ಆಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರ ಸಚಿವ ಸುರೇಶ್ ಅಂಗಡಿ ದೆಹಲಿಯಲ್ಲಿ ನಿಧನ ವಿಚಾರವಾಗಿ ನಗರದಲ್ಲಿ ಮಾತನಾಡಿದ ಡಿಕೆಶಿ, ಸುರೇಶ್ ಅಂಗಡಿಯವರ ಪಾರ್ಥಿವ ಶರೀರ ಬೆಳಗಾವಿಗೆ ತರಬೇಕಿತ್ತು. ಬೆಳಗಾವಿಯಲ್ಲಿ ಅಂತಿಮ ದರ್ಶನಕ್ಕೆ ಕ್ಷೇತ್ರದ ಜನರಿಗೆ ಅವಕಾಶ ಕೊಡಬಹುದಾಗಿತ್ತು. ಎರಡು ತಿಂಗಳ ಹಿಂದೆ ಏನೇನೂ ರಾಜಕಾರಣ ನಡೆಯಿತು ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ. ಆದರೆ ಈ ಸಂದರ್ಭದಲ್ಲಿ ನೊಂದ ಕುಟುಂಬಕ್ಕೆ ಸರ್ಕಾರ ನ್ಯಾಯ ಒದಗಿಸಲು ಆಗಲಿಲ್ಲ ಎಂದರು.

    ಸುರೇಶ್ ಅಂಗಡಿ ಕೇಂದ್ರದ ಮಂತ್ರಿ. ಅಲ್ಲದೇ ಬೆಳಗಾವಿಯಲ್ಲಿ ಮಿಲಿಟರಿ ಬೇಸ್ ಇದೆ. ಆದರೂ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಕ್ಕೆ ಆಗಲಿಲ್ಲ. ಹೀಗಾಗಿ ಈ ಕ್ಷೇತ್ರದ ಜನರು ಸುರೇಶ್ ಅಂಗಡಿಯವರ ಆತ್ಮ ಮತ್ತು ಅವರ ಕುಟುಂಬ ಈ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಹತ್ರಾಸ್ ಗ್ಯಾಂಗ್‍ರೇಪ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಯೋಗಿ ಆದಿತ್ಯನಾಥ್ ಸರ್ಕಾರ ಇಡೀ ದೇಶಕ್ಕೆ ರೋಗ ತಂದು ಕೊಡಲಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಇಡೀ ನಮ್ಮ ದೇಶದ ಗೌರವ, ಸ್ವಾಭಿಮಾನ, ಸಮುದಾಯ ಎಲ್ಲರಿಗೂ ಇಡೀ ಪ್ರಪಂಚಕ್ಕೆ ಭಾರತದ ಬಗ್ಗೆ ಕಪ್ಪು ಚುಕ್ಕೆ. ಇಡೀ ಮನುಕುಲಕ್ಕೆ ಅವಮಾನವಾಗಿದೆ ಎಂದು ಡಿಕೆಶಿ ವಾಗ್ದಾಳಿ ಮಾಡಿದರು.

    ಪ್ರವಾಹ ಸಂತ್ರಸ್ತರಿಗೆ ನ್ಯಾಯ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ. ಬೆಳಗಾವಿಯಲ್ಲಿ ಇಷ್ಟು ಜನ ಸಚಿವರು, ಎಂಪಿಗಳು ಇದ್ದರೂ ನ್ಯಾಯ ಕೊಡಲು ಆಗಿಲ್ಲ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಜನರೇ ನಿರ್ಧರಿಸಬೇಕು ಎಂದರು. ಇನ್ನೂ ಇಂದು ಸಂಜೆ ಜಿಲ್ಲಾ ಕಾಂಗ್ರೆಸ್ ಕಮೀಟಿ ಜತೆ ಸಭೆ ಕರೆದಿದ್ದೇವೆ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ ಎಂದು ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದರು.

    ರಮೇಶ್ ಜಾರಕಿಹೊಳಿ ತವರು ಜಿಲ್ಲೆಯಲ್ಲಿ ಪ್ರಭಾವ ಬೀರಲು ಡಿಕೆಶಿ ಯತ್ನಿಸುತ್ತಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಗೆಲ್ಲಲು ಕಸರತ್ತು ಮಾಡುತ್ತಿದ್ದಾರೆ. ಬೆಳಗಾವಿಗೆ ಬಂದ ವೇಳೆಯೇ ನವದೆಹಲಿಯಲ್ಲಿ ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ ವಿಚಾರವಾಗಿ ಮಾತನಾಡಿದ್ದಾರೆ. ಸುರೇಶ್ ಅಂಗಡಿ ಪಾರ್ಥಿವ ಶರೀರ ಬೆಳಗಾವಿಗೆ ತರದ ವಿಚಾರದ ಬಗ್ಗೆ ಡಿಕೆಶಿ ಪ್ರಸ್ತಾಪ ಮಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ರಸ್ತೆ ಬದಿಯ ಹಳ್ಳಕ್ಕೆ ಕಾರು ಪಲ್ಟಿ – ವಾರಕ್ಕೊಂದು ಗಾಡಿ ಪಲ್ಟಿಯಾದ್ರೂ ಸರ್ಕಾರ ಡೋಂಟ್ ಕೇರ್

    ರಸ್ತೆ ಬದಿಯ ಹಳ್ಳಕ್ಕೆ ಕಾರು ಪಲ್ಟಿ – ವಾರಕ್ಕೊಂದು ಗಾಡಿ ಪಲ್ಟಿಯಾದ್ರೂ ಸರ್ಕಾರ ಡೋಂಟ್ ಕೇರ್

    ಚಿಕ್ಕಮಗಳೂರು: ರಸ್ತೆ ತಿರುವಿನಲ್ಲಿ ತಡೆಗೋಡೆಗಳಿಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮೂಲೆಮನೆ ಗ್ರಾಮದಲ್ಲಿ ನಡೆದಿದೆ.

    ಶಿಫ್ಟ್ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೆಳಗಿನ ಜಾವ ಸುಮಾರು 4 ಗಂಟೆಗೆ ಮೂಲೆಮನೆ ಗ್ರಾಮದ ಬಳಿ ರಸ್ತೆ ತಿರುವಿನಲ್ಲಿ ಕಾರು ಹಳ್ಳಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಶಿಫ್ಟ್ ಕಾರಿನ ಹಿಂದೆ ಸಂಚರಿಸುತ್ತಿದ್ದ ವಾಹನ ಸವಾರರು ಹಾಗೂ ಸ್ಥಳೀಯರು ಕಾರಿನಲ್ಲಿದ್ದವರನ್ನ ರಕ್ಷಿಸಿದ್ದಾರೆ. ರಸ್ತೆ ಬದಿಯ ಹಳ್ಳಕ್ಕೆ ತಡೆಗೋಡೆ ಇಲ್ಲದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ವಾರಕ್ಕೊಂದು ಅಪಘಾತ: ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ಪ್ರವಾಸಿ ವಾಹನಗಳು ಓಡಾಡುತ್ತವೆ. ಈ ತಿರುವಿನಲ್ಲಿ ವಾರಕ್ಕೊಂದು ಅಪಘಾತಗಳು ನಡೆಯುತ್ತಿವೆ. ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ಗಮನಕ್ಕೆ ತಂದರೂ ಉಪಯೋಗವಿಲ್ಲ ಎಂದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಕಿಡಿ ಕಾರಿದ್ದಾರೆ. ಈಗ ಸಣ್ಣ-ಪುಟ್ಟ ಅಪಘಾತಗಳಾಗಿವೆ. ನಾಳೆ ದೊಡ್ಡ ಅನಾಹುತವಾದರೆ ಅದಕ್ಕೆ ಜವಾಬ್ದಾರಿ ಯಾರೆಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

  • ನಮ್ಮ ಅನ್ನದ ಪಾಲು ನಮ್ಗೆ ಕೊಡಿ, ಶೋಕಾಸ್ ನೋಟಿಸ್‍ಗೆ ಬಗ್ಗಲ್ಲ – ಎನ್‍ಎಚ್‍ಎಂ ಸಿಬ್ಬಂದಿ ಆಕ್ರೋಶ

    ನಮ್ಮ ಅನ್ನದ ಪಾಲು ನಮ್ಗೆ ಕೊಡಿ, ಶೋಕಾಸ್ ನೋಟಿಸ್‍ಗೆ ಬಗ್ಗಲ್ಲ – ಎನ್‍ಎಚ್‍ಎಂ ಸಿಬ್ಬಂದಿ ಆಕ್ರೋಶ

    ಉಡುಪಿ: ಕೊರೊನಾ ಸಾಂಕ್ರಾಮಿಕ ರೋಗದ ನಡುವೆಯೇ ರಾಜ್ಯಾದ್ಯಂತ 30 ಸಾವಿರ ಮಂದಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‍ಎಚ್‍ಎಂ) ಸಿಬ್ಬಂದಿ ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಗಮನವನ್ನೇ ಕೊಡದೆ ಅಸಡ್ಡೆ ಮೆರೆಯುತ್ತಿದೆ.

    ಉಡುಪಿ ಜಿಲ್ಲೆಯಲ್ಲಿ 512 ಜನ ಎನ್‍ಎಚ್‍ಎಂ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ವರ್ಷದಿಂದ ಮುಷ್ಕರ, ಹೋರಾಟ, ಅಸಹಕಾರ ಚಳುವಳಿ ಮಾಡುತ್ತಿದ್ದೇವೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಷನಲ್ ಹೆಲ್ತ್ ಮಿಷನ್ ಜಿಲ್ಲಾಧ್ಯಕ್ಷ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಗಲಿರುಳು ಕೊರೊನಾ ವಾರಿಯರ್ಸ್ ಗಳಾಗಿ ನಾವು ದುಡಿಯುತ್ತಿದ್ದೇವೆ. ಹೊರ ಗುತ್ತಿಗೆ ನೌಕರರಿಗೆ ಅತೀ ಹೆಚ್ಚು ಪಾಸಿಟಿವ್ ಬಂದಿದೆ. ಕಾಲ್ ಸೆಂಟರ್, ಗಡಿ ಪ್ರದೇಶದಲ್ಲಿ ಹಗಲಿರುಳು ಕೆಲಸ ಮಾಡಿದರೂ ನಮ್ಮನ್ನು ಗುರುತಿಸುವವರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೂನ್ ತಿಂಗಳಲ್ಲಿ ರಾಜ್ಯ ಸಂಘ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೆವು. ಗೌರವಾಧ್ಯಕ್ಷ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಮಾತುಕತೆ ಆಗಿತ್ತು. ಸರ್ಕಾರ ಸಮಯ ಕೇಳಿದ್ದಕ್ಕೆ ಪ್ರತಿಭಟನೆ ಹಿಂದಕ್ಕೆ ತೆಗದುಕೊಂಡಿದ್ದೆವು ಎಂದರು.

    ರಾಜ್ಯದ 30,000 ಎನ್‍ಎಚ್‍ಎಂ ಸಿಬ್ಬಂದಿ ಸೆಪ್ಟೆಂಬರ್ 24 ರಿಂದ ಮನೆಯಲ್ಲಿ ಇದ್ದಾರೆ. ಸರ್ಕಾರ ಶೋಕಾಸ್ ನೋಟಿಸ್ ಕೊಟ್ಟಿದೆ. ನಾವು ಇಂತಹ ನೋಟಿಸ್ ಗಳಿಗೆ ಬಗ್ಗುವುದಿಲ್ಲ. ನಮ್ಮ ಅನ್ನದ ಪಾಲು ನಮಗೆ ಕೊಡಿ ಎಂಬ ಹೆಸರಲ್ಲಿ ಅಭಿಯಾನ ನಡೆಯುತ್ತಿದೆ.

    ಸಮಾನ ಸಂಭಾವನೆ, ಕನಿಷ್ಠ ವೇತನ, ಬೋನಸ್ ಕಾಯ್ದೆ ಯಾವುದನ್ನೂ ಸರ್ಕಾರ ಪಾಲಿಸುತ್ತಿಲ್ಲ. ಬೀದಿಗಿಳಿಯದೆ ಮನೆಯಲ್ಲೇ ಕುಳಿತು ಅಸಹಕಾರ ಚಳುವಳಿ ಮಾಡುತ್ತಿದ್ದೇವೆ. ಶಿಕ್ಷಣ ಆರೋಗ್ಯ ಬಹಳಷ್ಟು ಮುಖ್ಯ. ನಮ್ಮ ಬೇಡಿಕೆ ನ್ಯಾಯಯುತ ಸಂವಿಧಾನ ಬದ್ಧವಾಗಿದೆ. ಹೋರಾಟ ಉಗ್ರ ರೂಪಕ್ಕೆ ಬದಲಾಗುವ ಬದಲು ಬೇಡಿಕೆ ಈಡೇರಿಸಿ ಎಂದು ಸಂಘಟನೆ ಮುಖಂಡ ಗಿರೀಶ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಗುರುರಾಜ್, ರೂಪಕ್ ನಾಗರಾಜ್, ಗಿರೀಶ್, ರೇಷ್ಮಾ ಪೈ ಇದ್ದರು.

  • ಚಿನ್ನದ ನಾಡಿನಲ್ಲಿ 2 ದಶಕಗಳ ನಂತ್ರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತಯಾರಿ

    ಚಿನ್ನದ ನಾಡಿನಲ್ಲಿ 2 ದಶಕಗಳ ನಂತ್ರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತಯಾರಿ

    – ಕೋಲಾರ ಚಿನ್ನದ ಗಣಿ ಪುನಾರಂಭದ ನಿರೀಕ್ಷೆ
    – ಪರೀಕ್ಷೆಗೆ ಸೈನೈಡ್ ಮಣ್ಣು ಹೊತ್ತೊಯ್ದ ಅಧಿಕಾರಿಗಳು

    ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ.

    ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ ಎರಡು ದಶಕಗಳೇ ಕಳೆದಿವೆ. ಇದರಿಂದ ಸಾವಿರಾರು ಮಂದಿ ಕೆಲಸ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಸರ್ಕಾರಗಳು ನಾನಾ ಯೋಜನೆಗಳನ್ನ ಜಾರಿ ಮಾಡುವ ಭರವಸೆಗಳನ್ನ ನೀಡುತ್ತಾ ಕಣ್ಣೊರೆಸುವ ತಂತ್ರ ಮಾಡಿಕೊಂಡು ಬಂದಿವೆ. ಆದರೆ ಇದುವರೆಗೂ ಕೆಜಿಎಫ್ ಗಣಿ ಪುನಾರಂಭ ಆಗಲಿಲ್ಲ.

    ಸದ್ಯ ಸರ್ಕಾರ ಕೈಗಾರಿಕಾ ಟೌನ್ ಶಿಪ್ ಮತ್ತು ಚಿನ್ನದ ಗಣಿ ಮತ್ತೆ ಓಪನ್ ಮಾಡಲು ಮುಂದಾಗಿದೆ. ಈಗಾಗಲೇ ಚಿನ್ನದ ನಿಕ್ಷೇಪಗಳು ಎಲ್ಲೆಲ್ಲಿ ಇದೆ, ಅದರಲ್ಲಿ ಚಿನ್ನದ ಸಾಂದ್ರತೆ ಎಷ್ಟಿದೆ ಅನ್ನೋದನ್ನು ಪರೀಕ್ಷೆ ನಡೆಸಿದ್ದ ಗಣಿ ಇಲಾಖೆ ಈಗ ಮತ್ತೆ ಚಿನ್ನವನ್ನು ಬೇರ್ಪಡಿಸಿ ಹಾಕಲಾಗಿದ್ದ ಸೈನೈಡ್ ಗುಡ್ಡಗಳಲ್ಲಿ ಚಿನ್ನದ ಅಂಶ ಎಷ್ಟಿದೆ ಅನ್ನೋದನ್ನ ಪರೀಕ್ಷೆ ನಡೆಸಲು ಮುಂದಾಗಿದೆ. ಮೂರನೇ ಹಂತದ ಸೈನೈಡ್ ಗುಡ್ಡದ ಮಣ್ಣನ್ನು ಹೈದರಾಬಾದ್‍ನಲ್ಲಿ ರಾಷ್ಟ್ರೀಯ ಮಣ್ಣು ಮತ್ತು ಖನಿಜ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ.

    ಕೆಜಿಎಫ್ ಭೂಮಿಯ ಮಣ್ಣಿನಲ್ಲಿ ಇರುವ ಖನಿಜದ ಅಂಶ ಹಾಗೂ ಚಿನ್ನದ ಅಂಶ ಎಷ್ಟಿದೆ ಅನ್ನೋದರ ಬಗ್ಗೆ ಪರೀಕ್ಷೆ ನಡೆಸಿ 6 ತಿಂಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈಗಾಗಲೇ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕೆಜಿಎಫ್ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಾಪಸ್ಸಾಗಿದ್ದಾರೆ. ಒಂದು ವೇಳೆ ಚಿನ್ನದ ನಿಕ್ಷೇಪ ವಿರುವುದು ಖಚಿತವಾದರೆ ಚಿನ್ನದ ಗಣಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

    ನಗರದಲ್ಲಿ ಇರುವ ಸೈನೈಡ್ ಗುಡ್ಡಗಳಲ್ಲಿ ಟಂಗ್ ಸ್ಟನ್, ಪೊಲಾಡಿಯಂ ಮತ್ತು ಚಿನ್ನದ ಅಂಶ ಇರುವ ಮಾಹಿತಿ ಇದೆ. ಸುಮಾರು ಇಪ್ಪತ್ತೈದು ಸಾವಿರ ಕೋಟಿ ಬೆಲೆ ಬಾಳುವಷ್ಟಿದೆ ಅನ್ನೋ ಮಾತು ಕೂಡ ಕೇಳಿ ಬರ್ತಿದೆ. ಸದ್ಯ ಶೀಘ್ರದಲ್ಲಿಯೇ ಕೆಜಿಎಫ್ ನಗರ ಮತ್ತೆ ಹಿಂದಿನ ಗತವೈಭವಕ್ಕೆ ಮರಳುತ್ತದೆ ಅನ್ನೋದು ಸಾವಿರಾರು ಗಣಿ ಕಾರ್ಮಿಕರು ಹಾಗೂ ಕುಟುಂಬಗಳ ನಿರೀಕ್ಷೆಯಾಗಿದೆ. 2 ದಶಕಗಳ ನಂತರ ಈಗ ಮತ್ತೆ ಕೆಜಿಎಫ್‍ನಲ್ಲಿ ಚಿನ್ನದ ನೆಲದ ಗತವೈಭವ ಮರುಕಳಿಸುವ ಕುರಿತು ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿದೆ.

  • ಪೇಟ ತೊಟ್ಟು ಕತ್ತೆ ಮೇಲೆ ಬಂದ ವಾಟಾಳ್

    ಪೇಟ ತೊಟ್ಟು ಕತ್ತೆ ಮೇಲೆ ಬಂದ ವಾಟಾಳ್

    ಬೆಂಗಳೂರು: ರೈತ ವಿರೋಧಿ ಮಸೂದೆಗಳ ವಿರುದ್ಧ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಪ್ರತಿಭಟನೆ ಮಾಡಲಾಗಿದೆ.

    ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಮೆಜೆಸ್ಟಿಕ್ ಮುಂಭಾಗ ಪೇಟ ತೊಟ್ಟು ಕತ್ತೆಯ ಮೇಲೆ ಮೆರವಣಿಗೆ ಬರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ ವಾಟಾಳ್ ಮಂಗಳವಾದ್ಯಗಳ ದೊಡ್ಡ ತಂಡದೊಂದಿಗೆ ಆಗಮಿಸಿದ್ದರು. ಇವರ ಜೊತೆಗೆ ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು.

    ಮಂಗಳವಾದ್ಯಗಳ ಮಧ್ಯೆ ಕತ್ತೆಯ ಮೇಲೆ ಕುಳಿತುಕೊಂಡು ವಾಟಾಳ್ ನಾಗರಾಜ್ ಇಡೀ ಮೆಜೆಸ್ಟಿಕ್ ರೌಂಡ್ಸ್ ಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ವಾಟಾಳ್, ಇದು ಒಂದು ಅಪರೂಪದ ಚಳುವಳಿ. ವಿಶ್ವದಲ್ಲೇ ಇಂತಹ ಚಳುವಳಿ ನಡೆದಿಲ್ಲ. ಕತ್ತೆಯ ಮೇಲೆ ಕುಳಿತುಕೊಂಡು ಮೆರವಣಿಗೆ ಮಾಡುವ ಮೂಲಕ ರಾಜ್ಯ ಸರ್ಕಾರದ ನೀತಿಯನ್ನ ವಿರೋಧಿಸುತ್ತಿದ್ದೇವೆ. ಇಂತಹ ಪ್ರತಿಭಟನೆ ನೂರು ವರ್ಷಗಳಾದರೂ ಬರುವುದಿಲ್ಲ ಎಂದರು.

    ನಾವೆಲ್ಲರೂ ಪ್ರಾಮಾಣಿಕ ಕನ್ನಡ ಒಕ್ಕೂಟದ ಮುಖಂಡರು ಬಹಳ ನಿರಂತರವಾಗಿ ಹೋರಾಟ ಮಾಡಿದ್ದೇವೆ. ರೈತರಿಗಾಗಿ ನಾವು 50 ವರ್ಷಗಳಿಂದ ಹೋರಾಟ ಮಾಡಿದ್ದೇವೆ. ಇನ್ಮುಂದೆ ಮುಂದೇಯೂ ನಮ್ಮ ಉಸಿರು ಇರುವವರೆಗೂ ರೈತರ ಪರವಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

  • ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ – ರಸ್ತೆಗಿಳಿದ್ರೆ ತಗ್ಲಾಕೊಳ್ಳೋದು ಗ್ಯಾರೆಂಟಿ!

    ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ – ರಸ್ತೆಗಿಳಿದ್ರೆ ತಗ್ಲಾಕೊಳ್ಳೋದು ಗ್ಯಾರೆಂಟಿ!

    – ಏನಿರತ್ತೆ..?, ಏನಿರಲ್ಲ..?

    ಬೆಂಗಳೂರು: ಅನ್ನದಾತರ ಕಿಚ್ಚಿಗೆ ಸೋಮವಾರ ಕರುನಾಡು ಸಂಪೂರ್ಣ ಬಂದ್ ಆಗಲಿದೆ. ರೈತರ ಈ ಹೋರಾಟ ಸರ್ಕಾರದ ವಿರುದ್ಧದಾಗಿದೆ. ರೈತ ವಿರೋಧಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ನಾಳೆ ರೈತರು ಕರ್ನಾಟಕ ಬಂದ್ ಮಾಡಲಿದ್ದಾರೆ.

    ಬಂದ್ ಗೆ ಯಾರೆಲ್ಲಾ ಬೆಂಬಲ ಕೊಡ್ತಾರೆ?
    ಐಕ್ಯ ಹೋರಾಟ ಸಮಿತಿ, ರೈತ ಹೋರಾಟ ಸಂಘಟನೆಗಳು, ಕನ್ನಡಪರ ಹೋರಾಟ ಸಂಘಟನೆಗಳು, ನಾರಾಯಣಗೌಡರ ಕರವೇ ಸಂಘಟನೆ, ಪ್ರವೀಣ್ ಶೆಟ್ಟಿ ಕರವೇ ಬಣ, 25ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು, 35 ರೈತ ಪರ ಸಂಘಟನೆಗಳು, ದಲಿತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕದ ವಿವಿಧ ಸಂಘಟನೆಗಳು, ಮಹಾದಯಿ ಹೋರಾಟ ಸಂಘಟನೆ, ಓಲಾ, ಊಬರ್, ಕ್ಯಾಬ್, ಆಟೋ,ಟ್ಯಾಕ್ಸಿ ಅಸೋಸಿಯೇಶನ್, ಆಟೋ ಮಿತ್ರ, ಪೀಸ್ ಆಟೋ ಸಂಘಟನೆ, ಖಾಸಗಿ ಟೂರಿಸ್ಟ್ ಮತ್ತು ಟ್ಯಾಕ್ಸಿ ಮಾಲೀಕರ ಸಂಘಗಳು ಹೋರಾಟಕ್ಕೆ ಬೆಂಬಲ ಕೊಡುತ್ತವೆ. ಇನ್ನು ಸಾರಿಗೆ ಕಾರ್ಮಿಕರ ಒಕ್ಕೂಟ ಹಾಗೂ ರಾಜ್ಯ ಬೀದಿ ಬದಿ ವ್ಯಾಪಾರ ಸಂಘ ರಾಜ್ಯ ಲಾರಿ ಮಾಲೀಕರ ಅಸೋಸಿಯೇಶನ್‍ನಿಂದ ನೈತಿಕ ಬೆಂಬಲ ಸಿಗಲಿದೆ.

    ಏನಿರುತ್ತೆ?:
    ಕರ್ನಾಟಕ ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ. ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿದ್ದು, ಕೆಎಸ್‍ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.

    ಏನಿರಲ್ಲ?:
    ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ. ಅಂಗಡಿ ಮುಂಗಟ್ಟು ಕ್ಲೋಸ್, ಮಾಲ್ ಗಳು ಓಪನ್ ಆಗಲ್ಲ, ಪ್ರತಿಭಟನೆಯ ತೀವ್ರತೆ ನೋಡಿಕೊಂಡು ಕೈಗಾರಿಕೆಗಳು, ಕಂಪನಿಗಳು ಮುಚ್ಚುವ ಬಗ್ಗೆ ನಿರ್ಧಾರ.

    ಈ ಮಧ್ಯೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ, ಸೋಮವಾರದ ಬಂದ್ ಗೆ ಕರವೇ ಸಂಪೂರ್ಣ ಬೆಂಬಲಕ್ಕೆ ನಿಲ್ಲುತ್ತೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕರವೇ ಬಣ ಬಂದ್ ನಲ್ಲಿ ಪಾಲ್ಗೊಳ್ಳುತ್ತೆ. ಸೋಮವಾರದ ಬಂದ್‍ನಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಬೇಕು. ಹಾಗಾಗಿ ಬಂದ್ ಯಾವ ಸ್ವರೂಪ ಬೇಕಾದರೂ ಪಡೆಯಬಹುದು ಎಂದು ಹೇಳಿದ್ದಾರೆ.

    ರೈಲು, ವಿಮಾನ, ಹೆದ್ದಾರಿ, ಸಾರಿಗೆ ಓಡಾಟದಲ್ಲಿ ಏನು ಬೇಕಾದ್ರು ಆಗಬಹುದು. ಭೂಸುಧಾರಣಾ, ಎಪಿಎಂಪಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲಲ್ಲ. ಈ ಎರಡು ಕಾಯ್ದೆಗಳು, ರೈತರಿಗೆ ಮರಣ ಶಾಸನ ಬರೆದಂತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಂಡ ಸರ್ಕಾರಗಳು. ರೈತರನ್ನು ಉದ್ದಾರ ಮಾಡ್ತೀವಿ ಅಂತಾರೆ. ಒಳ್ಳೆ ಬೆಲೆ ಸಿಗುತ್ತೆ ಅಂತಿದ್ದಾರೆ ಅದೆಲ್ಲಾ ಸುಳ್ಳು. ರೈತನ ಭೂಮಿಯನ್ನು ಹಣವಂತರು, ನೂರಾರು, ಸಾವಿರಾರು ಎಕರೆ ಜಮೀನು ತಗೋತಾರೆ. ರೈತರು ಅವರ ಅಧೀನರಾಗ್ತಾರೆ ಎಂದು ಸರ್ಕಾರಗಳ ವಿರುದ್ಧ ಕಿಡಿಕಾರಿದ್ರು.

    ರೈತರ ಬಗ್ಗೆ ಕಾಳಜಿ ಇರುವ ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ತಾರೆ. ಕೊರೊನಾದಿಂದ ಜನ ತುಂಬಾ ಕಷ್ಟಪಟ್ಟಿದ್ದಾರೆ. ಇಂತಹ ಸಮಯದಲ್ಲಿಯೂ ನಾವು ರೈತರ ಪರ ನಿಲ್ಲುತ್ತೇವೆ. ಸೋಮವಾರ ಸಾರ್ವಜನಿಕರಿಗೆ ತೊಂದರೆ ಆಗುತ್ತೆ, ಈ ಮೂಲಕ ಅವರ ಕ್ಷೇಮೆ ಕೇಳ್ತೀನಿ ಅಂದರು.

  • ಹೋರಾಟ ಮಾಡಿ ಸಾಕಾಗಿದೆ, ಆದ್ರೆ ಶಸ್ತ್ರ ತ್ಯಾಗ ಮಾಡಿಲ್ಲ: ಕುಮಾರಸ್ವಾಮಿ

    ಹೋರಾಟ ಮಾಡಿ ಸಾಕಾಗಿದೆ, ಆದ್ರೆ ಶಸ್ತ್ರ ತ್ಯಾಗ ಮಾಡಿಲ್ಲ: ಕುಮಾರಸ್ವಾಮಿ

    ಬೆಂಗಳೂರು: ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕೃಷಿ ಮಸೂದೆ ವಿರುದ್ಧ ನಾನು ಹೋರಾಟ ಮಾಡಿ ಸಾಕಾಗಿದೆ. ಆದರೆ ನಾನು ಶಸ್ತ್ರ ತ್ಯಾಗ ಮಾಡಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭೂ ಸುಧಾರಣ ಕಾಯ್ದೆ, ಎಪಿಎಂಸಿ ಕಾಯ್ದೆ ವಿರುದ್ಧ ಜೆಡಿಎಸ್ ಈಗಾಗಲೇ ಪ್ರತಿಭಟನೆ ಮಾಡಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ನಾವು ಪ್ರತಿಭಟನೆ ಮಾಡಿದ್ದೇವೆ. ಆದರೆ ಆತುರವಾಗಿ ಈ ಕಾಯ್ದೆ ಸುಗ್ರಿವಾಜ್ಞೆ ತರುವ ಅವಶ್ಯಕತೆ ಏನಿತ್ತು? ಎಂದು ಪ್ರಶ್ನಿಸಿದರು.

    ಇದರಲ್ಲಿರುವ ಸಾಧಕ-ಬಾಧಕಗಳ ಬಗ್ಗೆ ರೈತರು, ಶಾಸಕರು ಜೊತೆ ಚರ್ಚೆಮಾಡಬೇಕಿತ್ತು. ಜೊತೆಗೆ ಇದರಿಂದ ರೈತರಿಗೆ ಯಾವ ರೀತಿ ಅನುಕೂಲವಾಗುತ್ತದೆ. ಯಾವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ ಎಂಬುದನ್ನು ಪ್ರಸ್ತಾಪ ಮಾಡಬೇಕಿತ್ತು. ಆದರೆ ಸರ್ಕಾರ ಯಾವುದೇ ರೀತಿ ಚರ್ಚೆಯನ್ನು ಮಾಡಿಲ್ಲ. ಹೀಗಾಗಿ ಸರ್ಕಾರ ಈ ಕಾಯ್ದೆಯಿಂದ ಹಿಂದೆ ಸರಿಬೇಕು. ನಾನು ಹೋರಾಟ ಮಾಡಿ ಸಾಕಾಗಿದೆ. ಆದರೆ ನಾನು ಶಸ್ತ್ರ ತ್ಯಾಗ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

    ಇನ್ನೂ ಕಾಂಗ್ರೆಸ್ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸಪೋರ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದೂವರೆಗೂ ಕಾಂಗ್ರೆಸ್ ನವರು ನಮ್ಮ ಜೊತೆ ಚರ್ಚೆ ಮಾಡಿಲ್ಲ. ಆ ವಿಷಯ ಬಂದಾಗ ನಾನು ಚರ್ಚೆ ಮಾಡುತ್ತೀನಿ. ಇವತ್ತು ನನ್ನ ವಿಶ್ವಾಸಕ್ಕಿಂತ ರಾಜ್ಯದ ಜನತೆಯ ವಿಶ್ವಾಸ ಮುಖ್ಯವಾಗಿದೆ. ಇಂದಿನ ಕೊರೊನಾ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ವಿಪತ್ತು ಇರುವ ಈ ಸಮಯದಲ್ಲಿ ಗೊಂದಲ ಮೂಡಿಸುವ ನಡೆಗಳು ಬೇಕಾ? ಎಂದರು.

    ಸಿಎಂ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ವಿಚಾರವಾಗಿ ಮಾತನಾಡಿ, ಯಾವ ಕುಟುಂಬದ ವಿರುದ್ಧ ಆರೋಪ ಇಲ್ಲ ಹೇಳಿ. ಎಲ್ಲರ ಮೇಲೂ ಆರೋಪಗಳು ಕೇಳಿ ಬರುತ್ತವೆ ಎಂದರು. ಭ್ರಷ್ಟಾಚಾರ ವಿಷಯಗಳು ತಾರ್ಕಿಕ ಅಂತ್ಯ ಎಲ್ಲಿಗೆ ಹೋಗಿ ಅಂತ್ಯ ಕಾಣುತ್ತೆ ಎಂಬುದೂ ನನಗೆ ಗೊತ್ತು ಎಂದು ಕುಮಾರಸ್ವಾಮಿ ಹೇಳಿದರು.

  • ಸರ್ಕಾರದಿಂದ ದೇವೇಗೌಡರ ಓಡಾಟಕ್ಕೆ 60 ಲಕ್ಷ ಬೆಲೆಯ ಕಾರು

    ಸರ್ಕಾರದಿಂದ ದೇವೇಗೌಡರ ಓಡಾಟಕ್ಕೆ 60 ಲಕ್ಷ ಬೆಲೆಯ ಕಾರು

    ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ರಾಜ್ಯ ಸರ್ಕಾರ ದುಬಾರಿ ಬೆಲೆಯ ಕಾರನ್ನು ನೀಡಿದೆ.

    ದೇವೇಗೌಡರ ಓಡಾಟಕ್ಕೆ ಸರ್ಕಾರ ಸುಮಾರು 60 ಲಕ್ಷ ಬೆಲೆಯ ವೋಲ್ವೋ ಹೊಸ ಕಾರನ್ನ ನೀಡಿದೆ. ದೇವೇಗೌಡರು ರಾಜ್ಯಸಭಾ ಸದಸ್ಯರಾದ ನಂತರ ಪ್ರೋಟೊ ಕಾಲ್ ಪ್ರಕಾರ ಕಾರು ನೀಡಬೇಕಿತ್ತು. ಈ ಹಿನ್ನೆಲೆ ಹೊಸ ವೋಲ್ವೋ ಕಾರನ್ನ ಸರ್ಕಾರ ನೀಡಿದೆ. 15 ದಿನಗಳ ಹಿಂದಷ್ಟೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೆಸರಿನಲ್ಲಿ ಕಾರು ಖರೀದಿ ಮಾಡಲಾಗಿದೆ.

    ದೇವೇಗೌಡರ ಈ ಹೊಸ ಕಾರಿಗೆ ನೋಂದಣಿ ಕೆಎ 53 ಜಿ 3636 ನೀಡಲಾಗಿದೆ. ಈ ಮೂಲಕ ದೇವೇಗೌಡರು ರಾಜ್ಯದಲ್ಲಿ ಅತಿ ದುಬಾರಿ ಸರ್ಕಾರಿ ಕಾರು ಹೊಂದಿರುವ ಜನಪ್ರತಿನಿಧಿ ಎನಿಸಿಕೊಂಡಿದ್ದಾರೆ. Volvo XC60 D5 ಮಾಡೆಲ್ ಕಾರಿನ ಮೂಲ ಬೆಲೆ 59.90 ಲಕ್ಷ ರೂಪಾಯಿ ಆಗಿದೆ. ತೆರಿಗೆ, ವಿಮೆ ಮೊತ್ತ ಸೇರಿದರೆ 74.90 ಲಕ್ಷ ರೂಪಾಯಿ ಆಗುತ್ತದೆ. ಆದರೆ ಸರ್ಕಾರದ ಹೆಸರಿನಲ್ಲಿ ಖರೀದಿಸುವಾಗ ತೆರಿಗೆ ಇಲ್ಲದಿರುವುದರಿಂದ ಸುಮಾರು 60 ಲಕ್ಷ ರೂಪಾಯಿ ಆಗಿದೆ.

    ಈಗಾಗಲೇ ಸಿಎಂ ಯಡಿಯೂರಪ್ಪ ಬಳಿ ಎರಡು ಫಾರ್ಚೂನರ್ ಕಾರುಗಳಿವೆ. ಇನ್ನೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ವಿಧಾನಸಭಾ ಸಚಿವಾಲಯದಿಂದ ಫಾರ್ಚೂನರ್ ಕಾರು ನೀಡಲಾಗಿದೆ. ದೇವೇಗೌಡರು ಇನ್ನೂ ಸರ್ಕಾರದ ಕಾರನ್ನು ಪಡೆಯಲಿಲ್ಲ. ಹೀಗಾಗಿ ಸದ್ಯಕ್ಕೆ ಕಾರು ಕುಮಾರಕೃಪದಲ್ಲಿದೆ.