Tag: government

  • ಕರ್ನಾಟಕಕ್ಕೆ ಮೂರು ತಿಂಗಳು ಆಪತ್ತು- ತಜ್ಞರಿಂದ ಸ್ಫೋಟಕ ಸೀಕ್ರೆಟ್ ರಿವೀಲ್

    ಕರ್ನಾಟಕಕ್ಕೆ ಮೂರು ತಿಂಗಳು ಆಪತ್ತು- ತಜ್ಞರಿಂದ ಸ್ಫೋಟಕ ಸೀಕ್ರೆಟ್ ರಿವೀಲ್

    ಬೆಂಗಳೂರು: ಕರ್ನಾಟಕಕ್ಕೆ ಮೂರು ತಿಂಗಳು ಕಾದಿದೆ ‘ಮಹಾ’ ಆಪತ್ತು ಕಾದಿದೆ ಎಂಬ ಸ್ಫೋಟಕ ಸತ್ಯವೊಂದು ತಜ್ಞರಿಂದ ಬಹಿರಂಗವಾಗಿದೆ.

    ಶ್ರಮಿಕ್ ಟ್ರೈನ್, ಅಂತರ್ ರಾಜ್ಯ ಬಸ್ ಸೇವೆ ಇನ್ನೂ ಒಂದು ತಿಂಗಳು ಬೇಡ. ಅದರಲ್ಲೂ ಮಹಾರಾಷ್ಟ್ರಕ್ಕಂತೂ ಬಸ್ ಸೇವೆ ಬೇಡವೇ ಬೇಡ. ಒಂದು ವೇಳೆ ಕರೆತಂದರೂ ಕೊರೊನಾ ಟೆಸ್ಟ್ ಕಡ್ಡಾಯ ಮಾಡಿ. ಹಾಗೆಯೇ ಹೆಚ್ಚಿನ ಜನರನ್ನ ಒಟ್ಟಿಗೆ ಕ್ವಾರಂಟೈನ್ ಮಾಡಬೇಡಿ ಎಂದು ತಜ್ಞರು ಸರ್ಕಾರ ಹಾಗೂ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸರ್ಕಾರಕ್ಕೆ ತಜ್ಞರು ಎಚ್ಚರಿಕೆ ಕೊಟ್ಟಿದ್ಯಾಕೆ?
    ನಾನಾ ರಾಜ್ಯಗಳಿಂದ ಕರ್ನಾಟಕಕ್ಕೆ ಬರಲು 1.69 ಲಕ್ಷ ಜನ ಸೇವಾ ಸಿಂಧುವಿನಡಿ ನೋಂದಣಿ ಮಾಡಿಕೊಂಡಿದ್ದಾರೆ. 1.69 ಲಕ್ಷ ಜನರಲ್ಲಿ 43 ಸಾವಿರಕ್ಕೂ ಅಧಿಕ ಮಂದಿ ಮಹಾರಾಷ್ಟ್ರದಿಂದ ಬರುವವರಾಗಿದ್ದಾರೆ.

    ಸರ್ಕಾರ ತಾತ್ಕಾಲಿಕವಾಗಿ ಮೇ 31ರ ವರೆಗೆ ಮಹಾರಾಷ್ಟ್ರದಿಂದ ಬರಲು ನೋ ಎಂಟ್ರಿ ಅಂದಿದೆ. ಆದರೆ ಈಗಾಗಲೇ ಸೋಮವಾರದವರೆಗೆ ಸೇವಾ ಸಿಂಧುವಿನಡಿ ನೋಂದಣಿ ಮಾಡಿಕೊಂಡವರಿಗೆ ಎಂಟ್ರಿಗೆ ಅನುವು ಮಾಡಿದೆ. ಅಂದರೆ ಒಂದು ಮಾಹಿತಿಯ ಪ್ರಕಾರ 43 ಸಾವಿರ ಜನ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಲು ನೊಂದಾಣಿ ಮಾಡಿದ್ದಾರೆ. ಅಷ್ಟೂ ಜನರಿಗೆ ಅವಕಾಶ ಕೊಟ್ಟರೆ ರಾಜ್ಯಕ್ಕೆ ಕಂಟಕ ಕಟ್ಟಿಟ್ಟ ಬುತ್ತಿಯಾಗಲಿದೆ.

    ಈಗಾಗಲೇ ಮಂಡ್ಯದ ಕೆ.ಆರ್ ಪೇಟೆಯಲ್ಲಿ ಬರೋಬ್ಬರಿ ಐದು ಸಾವಿರ ಕ್ವಾರಂಟೈನ್ ಬೆಡ್ ರೆಡಿಯಾಗಿದೆ. ಅಂದರೆ ಕರ್ನಾಟಕ ಅತಿ ಹೆಚ್ಚು ನಿಗಾ ವಹಿಸಿ ಹೆಚ್ಚಿನ ಪ್ರತ್ಯೇಕ ಬೆಡ್ ಗಳ ವ್ಯವಸ್ಥೆ ಮಾಡಬೇಕು. ಬೇರೆ ರಾಜ್ಯದವರನ್ನು ಕ್ವಾರಂಟೈನ್ ಮಾಡಿದಂತೆ ಹೆಚ್ಚಿನ ಜನ್ರನ್ನು ಒಟ್ಟಿಗೆ ಹಾಕಿ ಕ್ವಾರಂಟೈನ್ ಮಾಡದಂತೆ ಸೂಚನೆ ನೀಡಲಾಗಿದೆ.

    ಕರ್ನಾಟಕಕ್ಕೆ ಈಗಾಗಲೇ ಮುಂಬೈ ಮಹಾರಾಷ್ಟ್ರದಿಂದ ಬೆಟ್ಟ ಗುಡ್ಡ ಹತ್ತಿ ಹೈವೇ ತಪ್ಪಿಸಿ ಕಳ್ಳದಾರಿಯಲ್ಲಿ ಅನೇಕರು ಬಂದಾಗಿದೆ. ಇವರ ಲೆಕ್ಕ ಇನ್ನೂ ಸಿಕ್ಕಿಲ್ಲ. ಇವರು ಕೊರೊನಾ ಹಂಚಿದರೆ ಇನ್ನೂ ಮೂರು ತಿಂಗಳು ರಾಜ್ಯಕ್ಕೆ ಅಪಾಯ ಕಾದಿದೆ. ಜೂನ್ ವೇಳೆ ಇನ್ನಷ್ಟು ಲಾಕ್ ಡೌನ್ ಸಡಿಲಿಕೆಯಾಗುತ್ತೆ. ಮತ್ತೆ ಮಹಾರಾಷ್ಟ್ರ-ಕರ್ನಾಟಕದ ಮಧ್ಯೆ ಓಡಾಟ ಶುರುವಾಗುತ್ತೆ. ಆಗ ಇನ್ನೂ ಹೆಚ್ಚಿನ ಪ್ರಕರಣಗಳು ವರದಿಯಾಗಲಿವೆ.

    ಶ್ರಮಿಕ್ ಟ್ರೈನ್ ಸೇರಿದಂತೆ ಅಂತರ್ ರಾಜ್ಯ ಬಸ್ ಕೂಡ ಒಂದು ತಿಂಗಳು ಮಹಾರಾಷ್ಟ್ರಕ್ಕೆ ಬೇಡವೇ ಬೇಡ ಎಂದು ತಜ್ಞರು ಸಲಹೆ ನೀಡಿದ್ದಾರೆ. ಇನ್ಮುಂದೆ ಏಕಾಏಕಿ ಕರೆದುಕೊಂಡು ಬರಬೇಡಿ. ಒಬ್ಬರಿಗೆ ಕೊರೊನಾ ಇದ್ದರೂ ಇಡೀ ಬಸ್ಸಿನ ಪ್ರಯಾಣಿಕರಿಗೆ ಹಬ್ಬುತ್ತೆ. ಅಲ್ಲದೆ ಅನ್ಯ ರಾಜ್ಯದಿಂದ ಇಲ್ಲಿಗೆ ಕರೆದುಕೊಂಡು ಬರುವ ಮೊದಲು ಕೊರೊನಾ ಚೆಕ್ ಮಾಡಿಸುವಂತೆ ಕಡ್ಡಾಯ ಸೂಚನೆಗೆ ತಜ್ಞರು ಶಿಫಾರಸು ಮಾಡಿದ್ದಾರೆ.

  • ಪಿಒಕೆ ಭಾರತದ ಭಾಗವೆಂದ ಪಾಕ್

    ಪಿಒಕೆ ಭಾರತದ ಭಾಗವೆಂದ ಪಾಕ್

    ಇಸ್ಲಾಮಾಬಾದ್: ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶ ತನಗೆ ಸೇರಿದ್ದು ಎಂದು ಮೊಂಡುತನ ತೋರುತ್ತಿದ್ದ ಪಾಕಿಸ್ತಾನವು ಸದ್ಯ ಭಾರತದ ಭಾಗವೆಂದು ಘೋಷಿಸಿದೆ.

    ಇತ್ತೀಚೆಗೆ ಭಾರತದ ಹವಾಮಾನ ಬುಲೆಟಿನ್‍ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನವನ್ನು ಸೇರಿಸಿದಾಗ ಪಾಕಿಸ್ತಾನ ಸಾಕಷ್ಟು ಆಘಾತಕ್ಕೊಳಗಾಗಿತ್ತು. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತ ತನ್ನ ಹೇಳಿಕೆಯನ್ನು ಅವರು ಪುನರಾವರ್ತಿಸಲು ಪ್ರಾರಂಭಿಸಿತ್ತು. ಜೊತೆಗೆ ಪಾಕ್ ತಮ್ಮ ಹವಾಮಾನ ಬುಲೆಟಿನ್‍ನಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಕ್ ತಾಪಮಾನವನ್ನು ಹೇಳುವ ಮೂಲಕ ಆಕ್ರೋಶ ಹೊರ ಹಾಕಿತ್ತು. ಆದರೆ ಈಗ ತಾಂತ್ರಿಕ ದೋಷದಿಂದಾಗಿ ಪಾಕಿಸ್ತಾನವು ಪಿಒಕೆಯನ್ನು ಭಾರತದೊಂದಿಗೆ ಸೇರಿಸಿದೆ. ಇದನ್ನೂ ಓದಿ:  ‘ಕಾಶ್ಮೀರ ಎಂದಿಗೂ ನಮ್ಮದೇ’- ಅಫ್ರಿದಿ ಹೇಳಿಕೆಗೆ ಧವನ್ ತಿರುಗೇಟು

    ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಲು ಪಾಕಿಸ್ತಾನ ಸರ್ಕಾರವು ವೆಬ್‍ಸೈಟ್ ಆರಂಭಿದೆ. ಇದರಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತದ ಭಾಗವೆಂದು ವಿವರಿಸಲಾಗಿದೆ. ಇಲ್ಲಿಯವರೆಗೆ ಪಾಕಿಸ್ತಾನವು ಪಿಒಕೆ ಮೇಲೆ ತನ್ನ ಅಧಿಕಾರ ಚಲಾಯಿಸಲು ಯತ್ನಿಸಿ ಅಲ್ಲಿ ಚುನಾವಣೆ ನಡೆಸಲು ಆದೇಶಿಸಿತ್ತು. ಈ ಬಗ್ಗೆ ಭಾರತವು ತೀವ್ರ ಪ್ರತಿಭಟನೆ ನಡೆಸಿತ್ತು. ಈಗ ಅಧಿಕೃತ ವೆಬ್‍ಸೈಟ್‍ನಲ್ಲಿ ಪಿಒಕೆಯನ್ನು ಭಾರತದ ಭಾಗವೆಂದು ಇಮ್ರಾನ್ ಸರ್ಕಾರ ವಿವರಿಸಿದೆ.  ಇದನ್ನೂ ಓದಿ: ಆಕ್ರಮಿತ ಜಾಗ ನಮ್ಮದು, ಗಿಲ್ಗಿಟ್ ಬಾಲ್ಟಿಸ್ತಾನಲ್ಲಿ ಚುನಾವಣೆ ನಡೆಸುವಂತಿಲ್ಲ – ಪಾಕ್‍ಗೆ ಭಾರತದ ಖಡಕ್ ಎಚ್ಚರಿಕೆ

    Covid.gov.pok ಎಂಬ ವೆಬ್‍ಸೈಟ್ ಗ್ರಾಫಿಕ್ಸ್ ಮೂಲಕ ಕೊರೊನಾದ ವ್ಯಾಪ್ತಿಯನ್ನು ವಿವರಿಸಲಾಗಿದೆ. ಈ ನಕ್ಷೆಯ ಫೋಟೋ ನೋಡಿದ ತಕ್ಷಣವೇ ನೆಟ್ಟಿಗರು ಟ್ವಿಟರ್ ನಲ್ಲಿ ಪಾಕಿಸ್ತಾನ ಸರ್ಕಾರವನ್ನು ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ.

    ಇದಕ್ಕೂ ಮುನ್ನ ಪಾಕಿಸ್ತಾನವು ಕೊರೊನಾ ಸೋಂಕಿತರನ್ನು ಪಿಒಕೆಗೆ ಶಿಫ್ಟ್ ಮಾಡಲು ಮುಂದಾಗಿತ್ತು. ಇದಕ್ಕೆ ಗಿಲ್ಗಿಟ್-ಬಾಲ್ಟಿಸ್ತಾನದ  ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿತ್ತು.

    ಸದ್ಯದ ವರದಿಯ ಪ್ರಕಾರ ಪಾಕಿಸ್ತಾನದಲ್ಲಿ 48 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 1,017 ಜನರು ಮೃತಪಟ್ಟಿದ್ದರೆ, 14 ಸಾವಿರ ಜನರು ಗುಣಮುಖರಾಗಿದ್ದಾರೆ.

  • ಕೋವಿಡ್ ಮಧ್ಯೆ ಖಾಸಗಿ ವಾಹನ ಮಾಲೀಕರಿಗೆ ಬಿಎಸ್‍ವೈ ಸರ್ಕಾರದಿಂದ ಸಿಹಿ ಸುದ್ದಿ

    ಕೋವಿಡ್ ಮಧ್ಯೆ ಖಾಸಗಿ ವಾಹನ ಮಾಲೀಕರಿಗೆ ಬಿಎಸ್‍ವೈ ಸರ್ಕಾರದಿಂದ ಸಿಹಿ ಸುದ್ದಿ

    ಬೆಂಗಳೂರು: ಕೋವಿಡ್-19 ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವು ಖಾಸಗಿ ವಾಹನ ಮಾಲೀಕರಿಗೆ ಬಿಎಸ್‍ವೈ ಸರ್ಕಾರದಿಂದ ಸಿಹಿ ಸುದ್ದಿ ನೀಡಿದೆ.

    ಹೌದು, ರಾಜ್ಯದ ಖಾಸಗಿ ಬಸ್, ಟೆಂಪೋ, ಟ್ಯಾಕ್ಸಿಗಳಿಗೆ ಮೋಟಾರು ವಾಹನ ತೆರಿಗೆ ವಿನಾಯ್ತಿ ನೀಡಿದೆ. ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯದ ವಿವಿಧ ಪ್ರದೇಶದಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸೇರಿಸಲು ರಸ್ತೆಗೆ ಇಳಿದಿದ್ದವು. ಈ ಹಿನ್ನೆಲೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಇಲ್ಲವೆ ಅಧಿಕೃತ ಪ್ರಾಧಿಕಾರಗಳಿಂದ ಸಂಚಾರಕ್ಕೆ ಅನುಮತಿ ಪಡೆದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

    ಈ ಮೂಲಕ ರಾಜ್ಯದ ಖಾಸಗಿ ವಾಹನಗಳಿಗೆ ಸರ್ಕಾರವು ಒಟ್ಟು ಎರಡು ತಿಂಗಳ ತೆರಿಗೆ ವಿನಾಯ್ತಿ ನೀಡಿ ಅಧಿಸೂಚನೆ ಹೊರಡಿಸಿದೆ.

    ಅಧಿಸೂಚನೆಯಲ್ಲಿ ಏನಿದೆ?:
    ಕೋವಿಡ್-19 ಹಿನ್ನೆಲೆ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್‍ಡೌನ್ ಮಾಡಲಾಗಿದೆ. ಆದರೆ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 16(1)ರ ಅನ್ವಯ ರಾಜ್ಯದಲ್ಲಿ ನೋಂದಾಯಿಸಿರು (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಪ್ರಯಾಣಿಕರು ಮತ್ತು ಸರಕು ಸಾರಿಗೆ ವಾಹನಗಳ ತೆರಿಗೆಯನ್ನು ಮಾರ್ಚ್ 24ರಿಂದ ಮೇ 23ರವರೆಗೆ ಒಟ್ಟು ಎರಡು ತಿಂಗಳ ಅವಧಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.

  • ಸರ್ಕಾರ ಟ್ಯಾಕ್ಸ್ ಮನ್ನಾ ಮಾಡಿದ್ರೆ ಉಡುಪಿಯಲ್ಲಿ ಖಾಸಗಿ ಬಸ್ ಓಡಾಟ ಶುರು

    ಸರ್ಕಾರ ಟ್ಯಾಕ್ಸ್ ಮನ್ನಾ ಮಾಡಿದ್ರೆ ಉಡುಪಿಯಲ್ಲಿ ಖಾಸಗಿ ಬಸ್ ಓಡಾಟ ಶುರು

    _ ಇಂದು 19 ಸರ್ಕಾರಿ ಬಸ್ ಸಂಚಾರ

    ಉಡುಪಿ: ರಾಜ್ಯ ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿದರೂ ಉಡುಪಿಯಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ. ಬಸ್ ಓಡಿಸಿ ಎಂದು ಸರ್ಕಾರ ಆದೇಶಿಸಿದರೂ ಖಾಸಗಿ ಬಸ್ಸುಗಳು ರಸ್ತೆಗೆ ಇಳಿಯಲಿಲ್ಲ.

    ಕಳೆದ 55 ದಿನಗಳಿಂದ ಉಡುಪಿಯ ಸಿಟಿ ಮತ್ತು ಸರ್ವಿಸ್ ಬಸ್ ನಿಲ್ದಾಣಗಳು ಸಂಪೂರ್ಣವಾಗಿ ಸ್ತಬ್ಧ ಆಗಿದೆ. ವಾರದ ಹಿಂದೆ ರೂಟ್ ಸರ್ವೆ ಮಾಡಿಸಿರುವ ಉಡುಪಿ ಡಿಸಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ಸುಗಳನ್ನು ಓಡಿಸುವಂತೆ ಆದೇಶ ಹೊರಡಿಸಿದ್ದರು. ಆದರೆ ಸಾರ್ವಜನಿಕರಿಂದ ಬೇಡಿಕೆಗಳು ಬಾರದ ಹಿನ್ನೆಲೆಯಲ್ಲಿ ಬೆರಳೆಣಿಕೆಯ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳು ಉಡುಪಿಯಲ್ಲಿ ಓಡಾಟ ನಡೆಸಿದ್ದವು.

    ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಲಾಕ್‍ಡೌನ್ ಸಡಿಲಿಕೆ ಮಾಡಿ ಅಂತರ್ ಜಿಲ್ಲೆಗಳಿಗೆ ಬಸ್ ಓಡಾಡಬಹುದು ಎಂದು ಆದೇಶಿಸಿದರು. ಆದರೂ ಉಡುಪಿಯಲ್ಲಿ ಭಾರತಿ ಕಂಪೆನಿಯ ಖಾಸಗಿ ಬಸ್ಸು ಮಾತ್ರ ಜನ ಸೇವೆಯಲ್ಲಿ ತೊಡಗಿತ್ತು. ಉಡುಪಿ ಕುಂದಾಪುರ ರೂಟ್‍ನಲ್ಲಿ ಮಾತ್ರ ಈ ಬಸ್ಸುಗಳು ಓಡಾಡಿದವು. ಕುಂದಾಪುರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಓಡಾಟ ನಡೆಸಿದೆ. ಉಡುಪಿ-ಮಣಿಪಾಲದ ನಡುವೆ ನರ್ಮ್ ಬಸ್ ಗಂಟೆಗೆ ಒಂದು ಟ್ರಿಪ್ ಮಾಡಿದೆ.

    ಬಸ್ಸನ್ನೆಲ್ಲಾ ಮಾಲೀಕರು ಆರ್‌ಟಿಒಗೆ ಒಪ್ಪಿಸಿವೆ. ಈಗ ಬಸ್ ಓಡಿಸಿದರೆ ಪ್ರತಿ ಬಸ್ಸಿಗೆ 50 ಸಾವಿರ ರೂಪಾಯಿ ಟ್ಯಾಕ್ಸ್ ಪಾವತಿಸುವ ಸ್ಥಿತಿಯಲ್ಲಿ ಮಾಲೀಕರಿಲ್ಲ. ಹಾಗಾಗಿ ಬಸ್‍ಗಳು ರಸ್ತೆಗೆ ಇಳಿದಿಲ್ಲ. ಒಂದು ತಿಂಗಳಿಗೆ ಒಂದು ಬಸ್ಸಿಗೆ 18 ಸಾವಿರ ರೂಪಾಯಿ ಟ್ಯಾಕ್ಸ್ ಆಗುತ್ತಿದೆ. ಸರ್ಕಾರ ಟ್ಯಾಕ್ಸ್ ಮನ್ನಾ ಮಾಡಿದರೆ ಬಸ್ಸನ್ನು ಹೊರಡಿಸಬಹುದು ಎಂದು ಖಾಸಗಿ ಬಸ್ ಮಾಲೀಕರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    19 ಸರ್ಕಾರಿ ಬಸ್ ಸಂಚಾರ:
    ಈ ನಡುವೆ ಕೆಎಸ್‌ಆರ್‌ಟಿಸಿ ಬೆಂಗಳೂರು, ಮೈಸೂರು ಹುಬ್ಬಳ್ಳಿಗೆ ಟ್ರಿಪ್ ಶುರು ಮಾಡಿದೆ. ಕುಂದಾಪುರ ಡಿಪೋದಿಂದ 9 ಬಸ್ಸುಗಳು ಇಂದು ಓಡಾಟ ಮಾಡಿದೆ. ಉಡುಪಿಯಲ್ಲಿ 10 ಬಸ್ ಹೊರ ಜಿಲ್ಲೆಗೆ ಹೊರಟಿವೆ. ಸಂಜೆ ಏಳು ಗಂಟೆಯ ಒಳಗೆ ಪ್ರಯಾಣಿಕರು ಗುರಿ ತಲುಪುವ ಉದ್ದೇಶವನ್ನು ಕೆಎಸ್‌ಆರ್‌ಟಿಸಿ ಇಟ್ಟುಕೊಂಡಿರುವುದರಿಂದ ಮಧ್ಯಾಹ್ನದ ನಂತರ ದೂರದ ಜಿಲ್ಲೆಗಳಿಗೆ ಬಸ್ ಹೊರಟಿಲ್ಲ.

    ಎರಡು ತಿಂಗಳು ಸಂಬಂಧಿಕರ ಮನೆಯಲ್ಲಿ ಲಾಕ್ ಆಗಿದ್ದವರು, ಲಾಕ್‍ಡೌನ್ ಸಂದರ್ಭ ಮನೆಗೆ ಬಂದವರು ವಾಹನಗಳು ಇಲ್ಲದೇ ಸಿಕ್ಕಿ ಹಾಕಿಕೊಂಡವರು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದರು. ಶೇ. 90ರಷ್ಟು ಜನ ಖಾಸಗಿ ಬಸ್ಸುಗಳನ್ನೇ ಉಡುಪಿಯಲ್ಲಿ ನೆಚ್ಚಿಕೊಂಡಿದ್ದಾರೆ. ಸರ್ಕಾರ ಟ್ಯಾಕ್ಸ್ ಮನ್ನಾ ಮಾಡಿದರೆ ಈ ವಾರದಲ್ಲಿ ಉಡುಪಿಯಲ್ಲಿ ಖಾಸಗಿ ಬಸ್ಸುಗಳನ್ನು ಹೊರಡಿಸುವ ಸಾಧ್ಯತೆ ಇದೆ.

  • ಕಾರ್ಮಿಕರ ವಿಚಾರದಲ್ಲಿ ಕೇಂದ್ರದ ಜೊತೆ ರಾಜ್ಯ ಸಮನ್ವಯತೆ ಸಾಧಿಸುತ್ತಿಲ್ಲ: ಜಾವೇಡ್ಕರ್

    ಕಾರ್ಮಿಕರ ವಿಚಾರದಲ್ಲಿ ಕೇಂದ್ರದ ಜೊತೆ ರಾಜ್ಯ ಸಮನ್ವಯತೆ ಸಾಧಿಸುತ್ತಿಲ್ಲ: ಜಾವೇಡ್ಕರ್

    ನವದೆಹಲಿ: ಲಾಕ್‍ಡೌನ್ ನಡುವೆ ಪ್ರವಾಸಿ ಕಾರ್ಮಿಕರ ಸಂಕಷ್ಟ ಬಗೆಹರಿಸುವ ಕಾರ್ಯದಲ್ಲಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರಗಳು ಸಮನ್ವಯ ಸಾಧಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಆರೋಪಿಸಿದ್ದಾರೆ.

    ಪ್ರವಾಸಿ ಕಾರ್ಮಿಕರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಕಾರ್ಮಿಕರ ನೆರವಿಗೆ ನಿಂತಿದೆ. ಆದರೆ ರಾಜ್ಯ ಸರ್ಕಾರಗಳಿಂದ ಸೂಕ್ತ ಪ್ರತಿಕ್ರಿಯೆ ಬರುತ್ತಿಲ್ಲ ಎಂದಿದ್ದಾರೆ.

    ಪಶ್ಚಿಮ ಬಂಗಾಳಕ್ಕೆ ನಾವು 105 ರೈಲುಗಳನ್ನು ಬಿಡಲು ಸಿದ್ಧವಿದ್ದೇವೆ. ಆದರೆ ಮಮತಾ ಬ್ಯಾನರ್ಜಿಯವರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು. ಮಹಾರಾಷ್ಟ್ರ, ಜಾರ್ಖಂಡ್, ಪಂಜಾಬ್, ಛತ್ತೀಸ್‍ಗಢನಂತಹ ರಾಜ್ಯಗಳು ಕೂಡ ಸರಿಯಾಗಿ ಸಮನ್ವಯ ಸಾಧಿಸುತ್ತಿಲ್ಲ ಎಂದು ಜಾವೇಡ್ಕರ್ ಆರೋಪಿಸಿದ್ದಾರೆ.

    ಕಾಂಗ್ರೆಸ್ ಅಧಿಕಾರದಲ್ಲಿಲ್ಲ ಎನ್ನುವ ದುಃಖವಿದೆ. ಅದು ಮೋದಿ ಸರ್ಕಾರವನ್ನು ನಂಬುವುದಿಲ್ಲ, ಹೀಗಾಗಿ ಆರೋಪ ಮಾಡುತ್ತಾರೆ. ಪರಿಹಾರ ಕಾರ್ಯಗಳು ರಾಜ್ಯ ಸರ್ಕಾರದ ನೆಲಗಳ ಮೇಲೆ ಮಾಡಬೇಕಾದ ಕಾರಣ ಹೆಚ್ಚು ಕೇಂದ್ರ ರಾಜ್ಯ ಸರ್ಕಾರಗಳ ಮೇಲೆ ಅವಲಂಬಿತವಾಗಿರುತ್ತದೆ ಇಲ್ಲಿ ಸಮನ್ವಯ ಮುಖ್ಯ ಎಂದರು.

    ಜನರು ಈಗ ವೈರಸ್‍ನೊಂದಿಗೆ ಬದುಕಲು ಪ್ರಾರಂಭಿಸಬೇಕು. ಅವರ ಜೀವನ ಶೈಲಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆರ್ಥಿಕ ಚಟುವಟಿಕೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿ ಎಂದು ನಾನು ಆಶಿಸುತ್ತೇನೆ. ಕೆಂಪು ವಲಯಗಳಲ್ಲಿ ಕೆಲವು ನಿರ್ಬಂಧಗಳಿವೆ. ಆದರೆ ಕಿತ್ತಳೆ ಮತ್ತು ಹಸಿರು ವಲಯಗಳಲ್ಲಿ ಚಟುವಟಿಕೆಗಳು ಪ್ರಾರಂಭವಾಗಿವೆ. ಆತ್ಮನಿರ್ಭಾರ ಭಾರತ್ ಮಹಾತ್ಮ ಗಾಂಧಿಯವರ ವಿಚಾರಗಳಿಗೆ ಅನುಗುಣವಾಗಿದೆ. ಆದರೆ ಸ್ವಾವಲಂಬಿಗಳಾಗುವುದಿಲ್ಲ, ಪ್ರಪಂಚದೊಂದಿಗೆ ಸಂಬಂಧವನ್ನು ಕಡಿತಗೊಳಿಸುವುದು ಎಂದರ್ಥವಲ್ಲ ಎಂದು ಹೇಳಿದರು.

  • ಸರ್ಕಾರಕ್ಕೆ ಉಪ್ಪಿ ಟಿಪ್ಸ್- ರಾಜಕೀಯ ಪಕ್ಷಗಳ ವಿರುದ್ಧ ಫುಲ್ ಗರಂ

    ಸರ್ಕಾರಕ್ಕೆ ಉಪ್ಪಿ ಟಿಪ್ಸ್- ರಾಜಕೀಯ ಪಕ್ಷಗಳ ವಿರುದ್ಧ ಫುಲ್ ಗರಂ

    ಬೆಂಗಳೂರು: ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ರಿಯಲ್ ಸ್ಟಾರ್, ಸರ್ಕಾರವು ಬಿಪಿಎಲ್, ರಸ್ತೆ ಬದಿಯ ವ್ಯಾಪಾರಸ್ಥರು, ಕಟ್ಟಡ-ವಲಸೆ ಕೂಲಿ ಕಾರ್ಮಿಕರು, ವಿಕಲಾಂಗಚೇತನರು, ವಯೋವೃದ್ಧರು, ಆಟೋ-ಕ್ಯಾಬ್ ಚಾಲಕರು ಇತರೆ ಎಲ್ಲ ವರ್ಗದ ಜನರ ಸಂಪೂರ್ಣ ಮಾಹಿತಿಗಳನ್ನು ಪಾರದರ್ಶಕವಾಗಿ ಸಂಗ್ರಹಿಸಬೇಕು. ಈ ಮೂಲಕ ಅಗತ್ಯವಸ್ತುಗಳು ತಲುಪ ಬೇಕಾದವರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಿತ್ರರಂಗದ ದಿನಗೂಲಿ ಕಾರ್ಮಿಕರಿಗೆ 4.50 ಲಕ್ಷ ದೇಣಿಗೆ ನೀಡಿದ ಉಪೇಂದ್ರ

    ರಾಜಕೀಯ ಪಕ್ಷಗಳ ವಿರುದ್ಧ ಉಪೇಂದ್ರ ಫುಲ್ ಗರಂ ಆಗಿದ್ದಾರೆ. “ಎಲ್ಲಾ ರೀತಿಯ ಜನಸಾಮಾನ್ಯರ ವಿವರಗಳನ್ನು ಸಂಗ್ರಹಿಸಿ ಅವುಗಳನ್ನು ಪಾರದರ್ಶಕವಾಗಿ ಪ್ರಕಟಿಸಬೇಕು. ಇದರಿಂದಾಗಿ ಇಷ್ಟು ವರ್ಷ ಅದನ್ನು ಮಾಡಿದ್ವಿ, ಇದನ್ನ ಮಾಡಿದ್ವಿ ಎನ್ನುವ ರಾಜಕೀಯ ಪಕ್ಷಗಳ ಮಾತು ಸತ್ಯವೋ? ಸುಳ್ಳೋ? ಅನ್ನೊದು ತಿಳಿಯುತ್ತದೆ” ಎಂದು ಸವಾಲು ಹಾಕಿದ್ದಾರೆ.

    ಅಷ್ಟೇ ಅಲ್ಲದೆ ಸರಿ ಸುಮಾರು ಶೇ.40ರಷ್ಟು ಜನರ ತೆರಿಗೆ ಹಣದಲ್ಲಿ ಸಂಬಳ, ಭತ್ಯೆಗಳನ್ನೆಲ್ಲಾ ಪಡೆಯುವ ದೊಡ್ಡ ಆಡಳಿತ ವ್ಯವಸ್ಥೆ ಹೊಂದಿರುವ ಸರ್ಕಾರಕ್ಕೆ ಇದು ಅಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ರಾಜಕೀಯ ಬೆಂಬಲಿಗರು ಇದಕ್ಕೆ ಉತ್ತರಿಸಬೇಕು ಎಂದು ಕೇಳಿಕೊಂಡಿದ್ದಾರೆ.

  • ಮದ್ವೆಗೆ 17 ರೂಲ್ಸ್ – ಪಾಲಿಸಬೇಕಾದ ನಿಯಮ ಯಾವುದು? ನಿರ್ಬಂಧ ಏನು?

    ಮದ್ವೆಗೆ 17 ರೂಲ್ಸ್ – ಪಾಲಿಸಬೇಕಾದ ನಿಯಮ ಯಾವುದು? ನಿರ್ಬಂಧ ಏನು?

    ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟಲು ಮಾಡಲಾಗಿದ್ದ ಲಾಕ್‍ಡೌನ್ ಅನ್ನು ಸರ್ಕಾರ ಕೆಲ ನಿಯಮವನ್ನು ಜಾರಿಗೆ ತರುವ ಮೂಲಕ ಹಂತ ಹಂತವಾಗಿ ಸಡಿಲಗೊಳಿಸುತ್ತಿದೆ. ಈ ಹಿನ್ನೆಲೆ ಮದುವೆ ಸಮಾರಂಭಗಳಿಗೂ ಕೆಲ ನಿಯಮಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಇದನ್ನು ಮದುವೆ ಆಗೋರು ಹಾಗೂ ಸಮಾರಂಭದಲ್ಲಿ ಭಾಗಿಯಾಗುವ ಮಂದಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ.

    ಸರ್ಕಾರ 17 ನಿಯಮಗಳನ್ನು ಪಟ್ಟಿ ಮಾಡಿದ್ದು, ಈ ನಿಯವನ್ನು ಮದುವೆ ಆಗೋರು ಹಾಗೂ ಸಮಾರಂಭದಲ್ಲಿ ಭಾಗಿಯಾಗುವ ಮಂದಿ ಪಾಲಿಸಬೇಕು ಎಂದು ತಿಳಿಸಿದೆ. ಮುಂಜಾಗೃತಾ ಕ್ರಮವಾಗಿ ಸರ್ಕಾರ ಈ 17 ನಿಯಮಗಳನ್ನು ರೂಪಿಸಿದ್ದು, ಸಾಮೂಹಿಕವಾಗಿ ಕೊರೊನಾ ವೈರಸ್ ಹಬ್ಬಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿಯಮ ಜಾರಿಗೆ ತಂದಿದೆ.

    17 ನಿಯಮಗಳು ಯಾವುದು?
    – ಮದುವೆಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಅನುಮತಿ ಕಡ್ಡಾಯ.
    – ಒಂದು ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರುವ ಹಾಗಿಲ್ಲ.
    – ಸೂಕ್ತ ಸಾರ್ವಜನಿಕ ಸ್ಥಳ ಮತ್ತಿ ನೈಸರ್ಗಿಕ ವಾತಾವರಣ ಇರುವೆಡೆ ಮದುವೆ.
    – ಮದುವೆಗಳಲ್ಲಿ ಎಸಿಗಳು ನಿರ್ಬಂಧ.


    – ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ನಿರ್ಬಂಧ.
    – ಕಂಟೈನ್ಮೆಂಟ್ ವಲಯದವರಿಗೆ ನಿರ್ಬಂಧ.
    – ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ.
    – ಮದುವೆಗೆ ಬರೋರಿಗೆ ಮಾಸ್ಕ್ ಕಡ್ಡಾಯ.
    – ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. 99.5 ಸೆಲ್ಸಿಯಸ್ ಉಷ್ಣತೆ, ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರೋರನ್ನು       ನಿರ್ಬಂಧಿಸಲಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ಕಳಿಸಬೇಕು.


    – ಒಂದು ಮೀಟರ್ ಸಾಮಾಜಿಕ ಅಂತರ.
    – ಸಾಬೂನಿನಲ್ಲಿ ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಇರಬೇಕು.
    – ಸಾರ್ವಜನಿಕವಾಗಿ ಉಗುಳುವಂತಿಲ್ಲ.
    – ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿಯಿರುವುದು ಕಡ್ಡಾಯ.


    – ಮದುವೆಗೆ ಬಂದವರ ಲಿಸ್ಟ್ ನೋಡಲ್ ಅಧಿಕಾರಿಗೆ ಸಲ್ಲಿಸಬೇಕು.
    – ಮದುವೆಗೆ ಬರೋರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು.
    – ಮದುವೆ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು.
    – ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.

  • ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮುತಾಲಿಕ್

    ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮುತಾಲಿಕ್

    ಧಾರವಾಡ: ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ, ಮದ್ಯ ನಿಷೇಧಿಸಬೇಕೆಂದು ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಧಾರವಾಡದಲ್ಲಿ ಹಲವು ಸಂಘಟನೆಗಳು ಸೇರಿ ರಾಜ್ಯ ಸರ್ಕಾರ ಮದ್ಯ ನಿಷೇಧ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ಮಾಡಿವೆ. ಈ ವೇಳೆ ಮಾತನಾಡಿದ ಮುತಾಲಿಕ್, ಲಾಕ್‍ಡೌನ್ ಸಡಿಲಗೊಳಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾದ ಮದ್ಯಪಾನ ಮಾರಾಟಕ್ಕೆ ಅನುಮತಿ ಕೊಟ್ಟಿದ್ದು ನಿರ್ಲಜ್ಜತನದ ಸಂಗತಿ, ಇದು ನಿಷೇಧ ಆಗಬೇಕು. ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

    ವೈನ್ ಲಾಬಿಗೆ ಸರ್ಕಾರ ಬಲಿಯಾಗಿದೆ. ಮದ್ಯಪಾನ ಬಡವರನ್ನು ಅನಾಹುತದತ್ತ ತೆಗೆದುಕೊಂಡು ಹೋಗುತ್ತದೆ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರದಿಂದ ನರಕಕ್ಕೆ ತಳ್ಳುವ ಕೆಲಸ ನಡೆದಿದೆ. ಸರ್ಕಾರಕ್ಕೆ ಇದರ ಶಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಡೀ ದೇಶಾದ್ಯಂತ ಮದ್ಯಪಾನ ಆರಂಭಕ್ಕೆ ವಿರೋಧ ವ್ಯಕ್ತವಾಗಿದೆ. ಶಾಸಕರು, ಸ್ವಾಮೀಜಿಗಳು ಕೂಡಾ ಇದಕ್ಕೆ ವಿರೋಧ ಮಾಡಿದ್ದಾರೆ. ಇದರ ಪರಿಣಾಮ ಸರ್ಕಾರ ಅನುಭವಿಸಲಿದೆ. ಈ ಬಗ್ಗೆ ಅಭಿಯಾನ ನಡೆಸುವುದಾಗಿ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

  • ಕಂಠಪೂರ್ತಿ ಕುಡಿದವ್ರ ಕಿಕ್ಕಿಳಿಸಿದ ರಾಜ್ಯ ಸರ್ಕಾರ – ಇಂದಿನಿಂದ ‘ಎಣ್ಣೆ’ ಪಾರ್ಟಿಗಳ ಜೇಬು ಬಲುಭಾರ

    ಕಂಠಪೂರ್ತಿ ಕುಡಿದವ್ರ ಕಿಕ್ಕಿಳಿಸಿದ ರಾಜ್ಯ ಸರ್ಕಾರ – ಇಂದಿನಿಂದ ‘ಎಣ್ಣೆ’ ಪಾರ್ಟಿಗಳ ಜೇಬು ಬಲುಭಾರ

    – ಮೂರನೇ ದಿನ ಬರೋಬ್ಬರಿ 231 ಕೋಟಿ ವ್ಯಾಪಾರ

    ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಒಂದೂವರೆ ತಿಂಗಳ ಬಳಿಕ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ಕೊಟ್ಟಿತ್ತು. ಇದೀಗ ಎಣ್ಣೆ ಮತ್ತಿನಲ್ಲಿ ತೇಲಾಡುತ್ತಿದ್ದ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ನೀಡಿದೆ. ಮದ್ಯದ ಮೇಲೆ ಕೋವಿಡ್ -19 ಸೆಸ್ ವಿಧಿಸಲಾಗಿದೆ. ಇಂದಿನಿಂದ ಮದ್ಯದ ಹೊಸದರ ಜಾರಿಗೆ ಬರಲಿದೆ.

    ಸರ್ಕಾರ ಅವಕಾಶ ಕೊಟ್ಟಿದ್ದೆ ತಡ ವೈನ್ ಶಾಪ್, ಎಂಆರ್‌ಪಿ ಶಾಪ್ ಎದುರು ಅಪಾರ ಜನರು ಸೇರುತ್ತಿದ್ದಾರೆ. ಮಧ್ಯಾಹ್ನ ಎನ್ನದೇ ಮದ್ಯಪ್ರಿಯರು ಕಾದುನಿಂತು ಎಣ್ಣೆ ತೆಗೆದುಕೊಂಡು ಹೋಗಿದ್ದಾರೆ. ಸಂಜೆಯಾಗುತ್ತಲೇ ಕುಡಿದು ತೂರಾಡಿ, ಡ್ಯಾನ್ಸ್ ಮಾಡಿ, ಟ್ರಾಫಿಕ್ ಕಂಟ್ರೋಲ್ ಕೂಡ ಮಾಡಿದ್ದಾರೆ. ಇದೀಗ ಲಾಕ್‍ಡೌನ್ ರಿಲೀಫ್ ಆದ ಬಳಿಕ ಕಳೆದ 2 ದಿನಗಳಿಂದ ಕಂಠಪೂರ್ತಿ ಕುಡಿದು ತೇಲಾಡುತ್ತಿದ್ದ ಎಣ್ಣೆಪ್ರಿಯರಿಗೆ ಸರ್ಕಾರ ಬಿಗ್‍ಶಾಕ್ ಕೊಟ್ಟಿದೆ.

    ದೆಹಲಿ, ಆಂಧ್ರ ಬೆನ್ನಲ್ಲೇ ಕರ್ನಾಟಕದಲ್ಲೂ ಮದ್ಯ ದುಬಾರಿಯಾಗಿದೆ. ಸರ್ಕಾರ ಕೂಡ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ. 17ರಷ್ಟು ಹೆಚ್ಚಿಸಿದೆ. ಬಜೆಟ್‍ನಲ್ಲಿ ಶೇ. 6ರಷ್ಟು ಅಬಕಾರಿ ಸುಂಕ ವಿಧಿಸಲಷ್ಟೇ ತೀರ್ಮಾನಿಸಲಾಗಿತ್ತು. ಆದರೆ ಇದೀಗ ಮದ್ಯದ ಮೇಲೆ ಶೇ. 11ರಷ್ಟು ಕೊರೊನಾ ಸೆಸ್ ವಿಧಿಸಲಾಗಿದೆ.

    ಯಾವ ಬ್ರ್ಯಾಂಡ್‍ಗೆ ಎಷ್ಟು ಶುಲ್ಕ?
    ಶೇ. 17ರಿಂದ ಶೇ. 25ರವರೆಗೂ ಮದ್ಯದ ಬೆಲೆಯನ್ನು ಬ್ರ್ಯಾಂಡ್‍ಗಳ ಆಧಾರದ ಮೇಲೆ ಹೆಚ್ಚಿಸಲಾಗಿದೆ. ಹೈಬ್ರ್ಯಾಂಡ್‍ಗಳಿಗೆ ಶೇ.25ರವರೆಗೆ ಸುಂಕ ವಿಧಿಸಲಾಗಿದೆ. ಮಿಡಲ್ ಮದ್ಯಗಳಿಗೆ ಶೇ. 21ರಷ್ಟು ಸುಂಕ ವಿಧಿಸಲಾಗಿದ್ದು, ಚೀಪ್ ಲಿಕ್ಕರ್‌ಗಳಿಗೆ ಶೇ. 17ರಷ್ಟು ಅಬಕಾರಿ ಸುಂಕ ಏರಲಾಗಿದೆ. ಆದರೆ ಬೀರ್, ಫೆನಿ, ವೈನ್, ನೀರಾ ಮೇಲೆ ಶುಲ್ಕ ವಿಧಿಸಲಾಗಿಲ್ಲ. ಗೆಜೆಟ್‍ನಲ್ಲಿ ಅಧಿಕೃತವಾಗಿ ಪ್ರಕಟಿಸಿ ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ಮದ್ಯದ ಹೊಸ ದರ ಜಾರಿಗೆ ಬರಲಿದೆ.

    ‘ಮದ್ಯ’ ಭರ್ಜರಿ ಮಾರಾಟ:
    ಇನ್ನೂ ರಾಜ್ಯದಲ್ಲಿ ಮೂರನೇ ದಿನವು ಭರ್ಜರಿ ಮದ್ಯ ಮಾರಾಟವಾಗಿದೆ. ಬಾರ್ ಓಪನ್ ಆಗಿ ಮೂರನೇ ದಿನವಾದ ಬುಧವಾರ ಬರೋಬ್ಬರಿ 231 ಕೋಟಿಯ ವ್ಯಾಪಾರ ನಡೆಸಿದೆ ಕೆಎಸ್‍ಬಿಸಿಎಲ್. ಬಾರ್‌ಗಳು ಮೊನ್ನೆಯ ದಾಖಲೆ ಮುರಿದು ಮದ್ಯ ಖರೀದಿ ಮಾಡಿವೆ. ನಿನ್ನೆ ಒಂದೇ ದಿನ 195 ಕೋಟಿಯಷ್ಟು ಮದ್ಯ ಖರೀದಿ ಮಾಡಲಾಗಿತ್ತು. 7 ಲಕ್ಷ ಲೀಟರ್ ಬೀರ್ ಮಾರಾಟವಾಗಿ 15.6 ಕೋಟಿ ರೂಪಾಯಿ ಬಂದಿದರೆ, 39 ಲಕ್ಷ ಲೀಟರ್ ಐಎಮ್‍ಎಲ್ ಲಿಕ್ಕರ್ ಸೇಲ್ ಆಗಿ 216 ಕೋಟಿ ರೂಪಾಯಿ ಬಂದಿದೆ.

    ಮೂರು ದಿನಗಳಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಎಷ್ಟೆಷ್ಟು ಗಳಿಕೆ:
    ಎಣ್ಣೆ ಮಾರಾಟದಿಂದ ಸರ್ಕಾರದ ಬೊಕ್ಕಸ ತುಂಬುತ್ತಿದೆ. ವೈನ್‍ಶಾಪ್ ಓಪನ್ ಮಾಡಿದ ಮೊದಲನೇ ದಿನ 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿತ್ತು. ಎರಡನೇ ದಿನ 197 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ. ಮೂರನೇ ದಿನ ಅಂದರೆ ನಿನ್ನೆ ಬರೋಬ್ಬರಿ 231 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ.

  • ರಾಜ್ಯದಲ್ಲೇ ಅತ್ಯುತ್ತಮ ಕೋವಿಡ್ ಪ್ರಯೋಗಾಲಯ ಚಾಮರಾಜನಗರದಲ್ಲಿ ಸ್ಥಾಪನೆ: ಸುರೇಶ್ ಕುಮಾರ್

    ರಾಜ್ಯದಲ್ಲೇ ಅತ್ಯುತ್ತಮ ಕೋವಿಡ್ ಪ್ರಯೋಗಾಲಯ ಚಾಮರಾಜನಗರದಲ್ಲಿ ಸ್ಥಾಪನೆ: ಸುರೇಶ್ ಕುಮಾರ್

    ಚಾಮರಾಜನಗರ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 1.79 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕೋವಿಡ್-19 ಪರೀಕ್ಷಾ ಪಿಸಿಆರ್ ಪ್ರಯೋಗಾಲಯ ರಾಜ್ಯದಲ್ಲಿಯೇ ಅತ್ಯುತ್ತಮ ಪ್ರಯೋಗಾಲಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಕೋವಿಡ್-19 ಪಿಸಿಆರ್ ಪ್ರಯೋಗಾಲಯಕ್ಕೆ 1.79 ಕೋಟಿ ರೂ. ಬಿಡುಗಡೆಯಾಗಿದೆ. ಐಸಿಎಂಆರ್ ನಿಯಮಾವಳಿಯ ಅನುಗುಣವಾಗಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಿರ್ಮಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

    ಒಂದು ಬಾರಿಗೆ ಸುಮಾರು 96 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯ ವಿರುವ ಈ ಪಿಸಿಆರ್ ಪ್ರಯೋಗಾಲಯದಲ್ಲಿ ಒಂದು ದಿನಕ್ಕೆ 300 ಮಾದರಿಗಳನ್ನು ಪರೀಕ್ಷಿಸಬಹುದಾಗಿದ್ದು, 6 ರಿಂದ 8 ಗಂಟೆಯ ಒಳಗೆ ಅವುಗಳ ಫಲಿತಾಂಶ ಹೊರಬಲಿದೆ. ಇದು ಸಂಪೂರ್ಣವಾಗಿ ಸ್ವಯಂ ಚಾಲಿತ ಯಂತ್ರವಾಗಿದ್ದು, ಇದಕ್ಕಾಗಿ ಹೆಚ್ಚಿನ ಸಿಬ್ಬಂದಿಯೂ ಬೇಕಿಲ್ಲ ಎಂದು ಮಾಹಿತಿ ನೀಡಿದರು.

    ಕೊವಿಡ್-19 ಸಮಯದಲ್ಲಿ ಕೊರೊನಾ ವೈರಸ್ ಸಂಬಂಧಿತ ಪರೀಕ್ಷೆಗಳನ್ನು ಮಾಡಲು ಅನುಕೂಲವಾದರೆ, ಕೋವಿಡ್-19 ನಂತರದ ದಿನಗಳಲ್ಲಿ ಅನ್ಯ ಪರೀಕ್ಷೆಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಚಾಮರಾಜನಗರದಲ್ಲಿ ಲೋಕಾರ್ಪಣೆ ಮಾಡಲಾಗಿದೆ ಎಂದ ಅವರು, ಪಿಸಿಆರ್ ಟೆಸ್ಟ್ ಯಾವುದೇ ರೋಗವನ್ನು ಹಾಗೂ ಕಾಯಿಲೆಯನ್ನು ನಿಖರವಾಗಿ ಪತ್ತೆ ಹಚ್ಚುವ ಕಾರ್ಯವನ್ನು ಮಾಡಲಿದೆ ಎಂದರು.