Tag: governments

  • ಈ ನಡುವೆ ಸರ್ಕಾರಗಳು ನ್ಯಾಯಾಂಗವನ್ನು ನಿಂದಿಸುವ ಪ್ರವೃತ್ತಿ ಆರಂಭಿಸಿವೆ: ಸಿಜೆಐ ಆಕ್ರೋಶ

    ಈ ನಡುವೆ ಸರ್ಕಾರಗಳು ನ್ಯಾಯಾಂಗವನ್ನು ನಿಂದಿಸುವ ಪ್ರವೃತ್ತಿ ಆರಂಭಿಸಿವೆ: ಸಿಜೆಐ ಆಕ್ರೋಶ

    ನವದೆಹಲಿ: ಈ ಹಿಂದೆ ನ್ಯಾಯಂಗ ಮತ್ತು ನ್ಯಾಯಾಧೀಶರನ್ನು ಖಾಸಗಿ ವ್ಯಕ್ತಿಗಳು ನಿಂದಿಸುತ್ತಿದ್ದರು. ಈ ನಡುವೆ ಈ ಪ್ರವೃತ್ತಿಯನ್ನು ಸರ್ಕಾರಗಳು ಆರಂಭಿಸಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಬೇಸರ ವ್ಯಕ್ತಪಡಿಸಿದ್ದಾರೆ.

    ಭ್ರಷ್ಟಾಚಾರ ಕಾಯಿದೆಯಡಿ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿದ ಛತ್ತೀಸ್‌ಗಢ ಹೈಕೋರ್ಟ್ ತೀರ್ಪಿನ ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ನ್ಯಾ. ಎನ್‌.ವಿ.ರಮಣ ಕೆಲವು ಸರ್ಕಾರಗಳ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಸುಪ್ರಿಯಾ ಮೆಲು ಧ್ವನಿಯಲ್ಲಿ ಮಾತನಾಡುತ್ತಿದ್ದರು, ಕೇಳಿಸಿಕೊಳ್ಳಲು ನಾನು ಡೆಸ್ಕ್ ಮೇಲೆ ಒರಗಿದೆ

    SUPREME COURT

    ʻಹಿಂದೆ ನ್ಯಾಯಾಧೀಶರ ವಿರುದ್ಧ ಖಾಸಗಿ ವ್ಯಕ್ತಿಗಳು ಅಪಪ್ರಚಾರ ಮಾಡುತ್ತಿದ್ದರು. ಈ ನಡುವೆ ಇದರಲ್ಲಿ ಸರ್ಕಾರವೂ ಸೇರಿಕೊಂಡಿದೆ. ಇದೊಂದು ಟ್ರೆಂಡ್ ಆಗಿದ್ದು ದುರದೃಷ್ಟಕರ ಬೆಳವಣಿಗೆಯಾಗಿದೆʼ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

  • ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ: ಶ್ರೀನಿವಾಸ್ ಬಿ.ವಿ

    ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ: ಶ್ರೀನಿವಾಸ್ ಬಿ.ವಿ

    ನವದೆಹಲಿ: ಕೇಂದ್ರ ಸರ್ಕಾರ ಕೃಷಿ ಕಾನೂನು ವಾಪಸ್ ಪಡೆದುಕೊಂಡಿರುವುದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಹೇಳಿದ್ದಾರೆ.

    ದೆಹಲಿಯಲ್ಲಿ ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ಅವರು, ಗಾಂಧಿಯ ಶಾಂತಿಯ ತತ್ವ ಮತ್ತೊಮ್ಮೆ ಸಾಬೀತಾಗಿದೆ. ಶಾಂತಿಯುತ ಹೋರಾಟದಿಂದ ಎಲ್ಲವನ್ನೂ ಗೆಲ್ಲಬಹುದಾಗಿದೆ, ಅನ್ನದಾತರು ಇದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದಿದ್ದಾರೆ.  ಇದನ್ನೂ ಓದಿ: ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

    ನೂರಾರು ರೈತರು ಹುತಾತ್ಮರಾದರೂ ಅನ್ನದಾತರು ಶಾಂತಿಯುತ ಪ್ರತಿಭಟನೆ ನಡೆಸಿದರು. ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಬಿಜೆಪಿ ತೆಗೆದುಕೊಂಡಿದೆ. ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆತಂರಿಕ ವರದಿಯಲ್ಲಿ ನೆಗೆಟಿವ್ ರಿಪೋರ್ಟ್ ಬಂದಿದೆ. ಇದಕ್ಕೆ ಬೆದರಿರುವ ಮೋದಿ ಸರ್ಕಾರ ಕಾನೂನು ವಾಪಸ್ ಪಡೆದಿದೆ. ಇದು ರೈತರ ಹೋರಾಟಕ್ಕೆ ಸಂದ ಅತಿದೊಡ್ಡ ಜಯವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ