Tag: Governor Thavar Chand Gehlot

  • ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

    ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದ್ದಾರೆ. ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾದ ನಂತರ ಇದೇ ಮೊದಲ ಬಾರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ – ಇಂದು ಪಿಎಂ ಉದ್ಘಾಟನೆ

    ರಾಜ್ಯಪಾಲರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ಅವರನ್ನು ಸ್ವಾಗತಿಸಿದ್ದಾರೆ. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರ ನೀಡಿ ರಾಜ್ಯಪಾಲರನ್ನು ಗೌರವಿಸಿದ್ದಾರೆ. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ಗೌರವಾನ್ವಿತ ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಿದ್ದಾರೆ. ಇದನ್ನೂ ಓದಿ: ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ

    ಈ ಸಂದರ್ಭದಲ್ಲಿ ತಿರುಪತಿ ಜಿಲ್ಲೆಯ ಬಿಜೆಪಿ ಮುಖಂಡ ಭಾನುಪ್ರಕಾಶ್ ರೆಡ್ಡಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

  • ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

    ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

    ಉಡುಪಿ: ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ಕಡೆಗೋಲು ಶ್ರೀಕೃಷ್ಣನ ವಿಶೇಷ ದರ್ಶನ ಪಡೆದರು.

    ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲರು ಇಂದು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಈ ವೇಳೆ ಮಠದಲ್ಲೇ ಸ್ವಲ್ಪ ಸಮಯ ಸ್ವಾಮೀಜಿ ಹಾಗೂ ರಾಜ್ಯಪಾಲರು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಪರ್ಯಾಯ ಅದಮಾರು ಮಠದಿಂದ ಗೌರವಿಸಲಾಯಿತು. ರಾಜ್ಯಪಾಲರು ಸ್ವಾಮೀಜಿಯನ್ನು ಸನ್ಮಾನಿಸಿದರು.

    ಈ ಸಂದರ್ಭದಲ್ಲಿ ಪರ್ಯಾಯ ಈಶಪ್ರೀಯ ತೀರ್ಥಶ್ರೀಪಾದರ ಭೇಟಿಯಾದರು. ಶಾಸಕ ರಘುಪತಿ ಭಟ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ನಂತರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರು ಮೂಕಾಂಬಿಕೆಯ ದರ್ಶನ ಪಡೆದರು. ದೇಗುಲದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್

    ಕೊಲ್ಲೂರು ಮೂಕಾಂಬಿಕಾ ದೇವಳ ವತಿಯಿಂದ ರಾಜ್ಯಪಾಲರಿಗೆ ಗೌರವ ಸಲ್ಲಿಸಲಾಯಿತು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ರಾಜ್ಯಪಾಲರು ತೆರಳಿದರು. ಇದನ್ನೂ ಓದಿ: ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

  • ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್

    ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್

    ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

    ಈ ಭೇಟಿಯ ವೇಳೆ, ಸ್ಪೀಕರ್ ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಧಾನಸಭಾ ಸಚಿವಾಲಯ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತಂತೆ ವಿವರಿಸಿದ್ದಾರೆ. ಅಲ್ಲದೆ ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.

    ಭೇಟಿ ವೇಳೆ ಒಂದು ರಾಷ್ಟ್ರ ಒಂದು ಚುನಾವಣೆ, ಭಾರತದ ಸಂವಿಧಾನ ಕುರಿತ ಚರ್ಚೆ, ಸಂಸದೀಯ ನಡೆವಳಿಕೆಯಲ್ಲಿ ಮೌಲ್ಯಗಳು ಮತ್ತು ತತ್ವ, ಸಿದ್ಧಾಂತಗಳು ಕುಸಿಯುತ್ತಿರುವ ಕುರಿತು ಚರ್ಚಿಸಿದ್ದಾರೆ ಎಂದು ವಿಧಾನಸಭಾಧ್ಯಕ್ಷರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.