Tag: govinda karjola

  • ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ್ಲೇ ಸಂಕಷ್ಟಗಳ ಸರಮಾಲೆ ಎದುರಾಗಿದೆ: ಕಾರಜೋಳ

    ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ್ಲೇ ಸಂಕಷ್ಟಗಳ ಸರಮಾಲೆ ಎದುರಾಗಿದೆ: ಕಾರಜೋಳ

    ಧಾರವಾಡ: ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಅವರು ಪ್ರಮಾಣವಚನ ಮಾಡಿದಾಗಿನಿಂದಲೂ ಸಂಕಷ್ಟಗಳ ಸರಮಾಲೆಯೇ ಎದುರಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

    ನಗರದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ನೆರವಿಗೆ ಬರುವುದಕ್ಕಾಗಿ 1250 ಕೋಟಿ ಪ್ಯಾಕೇಜ್ ನೀಡಿದ್ದಾರೆ. ದುಡಿಯುವ ವರ್ಗಕ್ಕೆ ಇದು ವಿಶೇಷವಾದ ಪ್ಯಾಕೇಜ್. ಕಳೆದ ವರ್ಷ 2,200 ಕೋಟಿ ಕೊಟ್ಟಿದ್ವಿ. ಈ ಸಲ ಅರ್ಥಿಕ ಸಂಕಷ್ಟದ ನಡುವೆಯೂ ಕೊಟ್ಟಿದ್ದೇವೆ. ನಾವು ಹೆಚ್ಚು ಕೊಟ್ಟಿದ್ದೇವೆ ಅಂತಾ ಈಗ ಹೇಳಿಕೊಳ್ಳುವ ಪರಿಸ್ಥಿತಿ ಇಲ್ಲ. ಆದರೆ ಈ ಸಂದರ್ಭದಲ್ಲಿ ನೆರವಿಗೆ ಬಂದಿದ್ದು ಬಹಳ ವಿಶೇಷ ಎಂದರು.

    ಲಾಕ್‍ಡೌನ್ ಮುಂದುವರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿತ್ಯದ ಸಾವು ನೋವಿನ ಸಂಖ್ಯೆ ನೋಡಿದಾಗ ಹಳ್ಳಿಗಳಿಗೆ ಕೊರೊನಾ ಹಬ್ಬಿದೆ. ಬಿಗಿಯಾದ ಲಾಕ್‍ಡೌನ್ ಅವಶ್ಯಕತೆ ಇದೆ ಎಂದು ತಿಳಿಸಿದರು.

    ಕಾಂಗ್ರೆಸ್ಸಿನಿಂದ ಕಿಟ್ ಹಂಚಿಕೆ ವಿಚಾರದ ಕುರಿತು ಮಾತನಾಡಿ, ಒಳ್ಳೆಯದು ಯಾರೇ ಮಾಡಿದರೂ ನಾವು ಸ್ವಾಗತಿಸಿಕೊಳ್ಳುತ್ತೇವೆ. ಸರ್ಕಾರ ಎಲ್ಲಿಯೂ ವಿಫಲವಾಗಿಲ್ಲ. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದಾಗಿನಿಂದಲೇ ಸಂಕಷ್ಟಗಳ ಸರಮಾಲೆ ಎದುರಾಗಿದೆ. ಪ್ರವಾಹ ಬಂತು, ಕೊರೊನಾ ಬಂತು. ಮತ್ತೇ ಪ್ರವಾಹ ಬಂತು ಕರೊನಾನೂ ಮತ್ತೇ ಬಂತು. ಎರಡು ವರ್ಷದ ಅವಧಿಯಲ್ಲಿ ಸರ್ಕಾರಕ್ಕೆ 60 ಸಾವಿರ ಕೋಟಿಯಷ್ಟು ಹಾನಿಯಾಗಿದೆ ಎಂದು ವಿವರಿಸಿದರು.

    ನಿಗದಿತ ಆದಾಯವೂ ಬರುತ್ತಿಲ್ಲ. ಹೀಗಾಗಿ ನಾವು ಆರ್ಥಿಕ ಸಂಕಷ್ಟದಲ್ಲಿ ಇದ್ದೇವೆ. ಅದೇನು ಮುಚ್ಚುಮರೆ ಅನ್ನೋ ಪ್ರಶ್ನೆ ಇಲ್ಲ. ಆರ್ಥಿಕ ಸಂಕಷ್ಟದ ಮಧ್ಯೆಯೂ ನಿಭಾಯಿಸಿಕೊಂಡು ಹೊರಟಿದ್ದೇವೆ ಎಂದರು.

  • ರಸ್ತೆಯಲ್ಲಿ ನಿಂತು ಮಾತನಾಡುವವರ ರೀತಿ ಮಾತನಾಡಬಾರದು – ಠಾಕ್ರೆಗೆ ಕಾರಜೋಳ ತಿರುಗೇಟು

    ರಸ್ತೆಯಲ್ಲಿ ನಿಂತು ಮಾತನಾಡುವವರ ರೀತಿ ಮಾತನಾಡಬಾರದು – ಠಾಕ್ರೆಗೆ ಕಾರಜೋಳ ತಿರುಗೇಟು

    ವಿಜಯಪುರ: ರಸ್ತೆಯಲ್ಲಿ ನಿಂತು ಮಾತನಾಡುವವರ ರೀತಿ ಮಾತನಾಡಬಾರದು ಎಂದು ಡಿಸಿಎಂ ಗೋವಿಂದ ಕಾರಜೋಳ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ತಿರುಗೇಟು ನೀಡಿದ್ದಾರೆ.

     

    ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಸಿಎಂ ಆದವರಿಗೆ ಒಕ್ಕೂಟ ವ್ಯವಸ್ಥೆಯ ಪ್ರಜ್ಞೆ ಇರಬೇಕು. ಕಾಶ್ಮೀರ ಹಾಗೂ ಪಾಕ್ ಎಂಬ ಉದ್ಧಟತನದ ಹೇಳಿಕೆ ಸರಿಯಲ್ಲ. ಬೆಳಗಾವಿಯ ಒಂದಿಂಚೂ ನೆಲ ಬಿಡುವ ಮಾತೆಯಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಸಿಎಂ ಆದವರು ಮಾತನಾಡಬೇಕು ಎಂದು ಹೇಳಿದರು.

    ದೇಶದಲ್ಲಿ ಎಲ್ಲಾ ಭಾಷೆ ಕಲಿತು ಪ್ರೀತಿಸಬೇಕು. ನಮ್ಮ ನೆಲ ಜಲ ಪ್ರಶ್ನೆ ಬಂದಾಗ ರಾಜಕೀಯ ಪ್ರಶ್ನೆಯೇ ಇಲ್ಲ. 2008 ರಿಂದ 2013ರ ಅವಧಿಯಲ್ಲಿ ಬಿಜೆಪಿ ಸರ್ಕಾರವಿತ್ತು. ಆಗ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಮಾಡಿದ್ದೇವು. ಆಗ ಎಲ್ಲಾ ಮರಾಠಿಗರು ತುಂಬಾ ಸಹಕಾರ ನೀಡಿ, ಕನ್ನಡಾಂಬೆಗೆ ಕೈಮುಗಿದಿದ್ದರು. ಮರಾಠಿಗರೊಂದಿಗೆ ನಾವೆಲ್ಲ ಸಹೋದದರು ಇದ್ದ ಹಾಗೆ ಇದ್ದೇವೆ. ಮುಂದೆಯು ಹಾಗೇ ಇರಬೇಕು. ಚುನಾಯಿತ ಪ್ರತಿನಿಧಿಗಳು ಆದರ್ಶವಾಗಿರಬೇಕು ಎಂದು ಸಲಹೆ ನೀಡಿದರು.

    ಮುಂಬರುವ ಏಪ್ರಿಲ್ ನಂತರ ಸಿಎಂ ಬದಲಾಗುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ನಮ್ಮ ಪಕ್ಷದ ವಕ್ತಾರಲ್ಲ. ಅವರೇನು ಬಿಜೆಪಿಯಲ್ಲಿದ್ದಾರೆಯೇ ಎಂದು ಪ್ರಶ್ನಿಸಿ ಗೋವಿಂದ ಕಾರಜೋಳ ತಿರುಗೇಟು ಕೊಟ್ಟರು.

  • ನಿಗದಿತ ಅವಧಿಯೊಳಗೆ 1,004 ಕೋಟಿ ರೂ. ಮೊತ್ತದ 41 ಬೃಹತ್ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ಕಾರಜೋಳ ಸೂಚನೆ

    ನಿಗದಿತ ಅವಧಿಯೊಳಗೆ 1,004 ಕೋಟಿ ರೂ. ಮೊತ್ತದ 41 ಬೃಹತ್ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ಕಾರಜೋಳ ಸೂಚನೆ

    ಬೆಂಗಳೂರು : ಕರ್ನಾಟಕದ ವಿವಿಧ ಭಾಗಗಳಲ್ಲಿ 1,004 ಕೋಟಿ ರೂ. ಮೊತ್ತದ 41 ಬೃಹತ್ ಸೇತುವೆಗಳ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, ನಿಗದಿತ ಅವಧಿಯೊಳಗೆ ಸೇತುವೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಸೂಚಿಸಿದರು.

    ಬೆಂಗಳೂರಿನಲ್ಲಿಂದು ನಡೆದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಮಗದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ಯಾಕೇಜ್ 1ರಲ್ಲಿ ಒಟ್ಟು 189 ಕೋಟಿ ರೂ. ಮೊತ್ತದಲ್ಲಿ ಕಲಬುರಗಿ ಜಿಲ್ಲೆಯಲ್ಲಿ 4 ಸೇತುವೆ, ವಿಜಯಪುರ ಜಿಲ್ಲೆಯಲ್ಲಿ 1, ಬಾಗಲಕೋಟೆ ಜಿಲ್ಲೆಯಲ್ಲಿ 2 ಸೇತುವೆಗಳ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ. ಕಾಮಗಾರಿ ಅವಧಿಯು 24 ರಿಂದ 36 ತಿಂಗಳಾಗಿದ್ದು, ಈಗಾಗಲೇ ಶೇ. 12 ರಷ್ಟು ಪ್ರಮಾಣದಲ್ಲಿ ಪೂರ್ಣಗೊಂಡಿದೆ.

    ಪ್ಯಾಕೇಜ್ 2ರಲ್ಲಿ 197 ಕೋಟಿ ರೂ. ಮೊತ್ತದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 8 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶೇ. 7ರಷ್ಟು ಪ್ರಮಾಣದಲ್ಲಿ ಕಾಮಗಾರಿ ಪೂರ್ಣಗೊಂಡಿವೆ. ಪ್ಯಾಕೇಜ್ 3 ರಲ್ಲಿ 249 ಕೋಟಿ ರೂ. ಮೊತ್ತದಲ್ಲಿ ಧಾರವಾಡ ಜಿಲ್ಲೆಯಲ್ಲಿ 2, ಹಾವೇರಿ ಜಿಲ್ಲೆಯಲ್ಲಿ 2, ಶಿವಮೊಗ್ಗ ಜಿಲ್ಲೆಯಲ್ಲಿ 5, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಹಾಗೂ ಉಡುಪಿ ಜಿಲ್ಲೆಯಲ್ಲಿ 1 ಕಾಮಗಾರಿಯು ಪ್ರಗತಿಯಲ್ಲಿದ್ದು, ಕಾಮಗಾರಿಯ ಅವಧಿಯು 18 ರಿಂದ 48 ತಿಂಗಳಾಗಿದ್ದು, ಶೇ. 25 ರಷ್ಟು ಕಾಮಗಾರಿಯು ಪೂರ್ಣಗೊಂಡಿದೆ.

    ಪ್ಯಾಕೇಜ್ 4 ರಲ್ಲಿ 189 ಕೋಟಿ ರೂ. ಮೊತ್ತದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 7 ಸೇತುವೆಗಳು ಪ್ರಗತಿ ಹಂತದಲ್ಲಿದ್ದು, ಕಾಮಗಾರಿಯ ಅವಧಿಯು 15 ರಿಂದ 30 ತಿಂಗಳಾಗಿದ್ದು, ಶೇ. 30 ರಷ್ಟು ಕಾಮಗಾರಿಯು ಪೂರ್ಣಗೊಂಡಿದೆ. ಪ್ಯಾಕೇಜ್ 5 ರಲ್ಲಿ ಒಟ್ಟು 177 ಕೋಟಿ ರೂ. ಮೊತ್ತದಲ್ಲಿ ಹಾಸನ ಜಿಲ್ಲೆಯಲ್ಲಿ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ 3, ಮಂಡ್ಯ ಜಿಲ್ಲೆಯಲ್ಲಿ 2 ಹಾಗೂ ಬೆಂಗಳೂರು ಜಿಲ್ಲೆಯಲ್ಲಿ 1 ಬೃಹತ್ ಸೇತುವೆಗಳು ಪ್ರಗತಿಯಲ್ಲಿದ್ದು, ಶೇ. 22 ರಷ್ಟು ಪ್ರಮಾಣದಲ್ಲಿ ಪೂರ್ಣಗೊಂಡಿವೆ ಎಂದು ಅವರು ತಿಳಿಸಿದರು.

    175 ಕಿರು ಸೇತುವೆಗಳ ಕಾಮಗಾರಿಯು ಪ್ರಗತಿಯಲ್ಲಿದ್ದು, ಅದರಲ್ಲಿ 15 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಾರ್ಚ್ ಅಂತ್ಯದೊಳಗೆ 98 ಸೇತುವೆಗಳ ಕಾಮಗಾರಿಯು ಪೂರ್ಣಗೊಳ್ಳಲಿದೆ. ಉಳಿದ ಕಾಮಗಾರಿಗಳ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿವೆ. ಟೆಂಡರ್ ನಲ್ಲಿ ನಮೂದಿಸಿದಂತೆ ಕಾಮಗಾರಿಗಳ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಷರತ್ತಿನಂತೆ ಕಾಲಕಾಲಕ್ಕೆ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲನೆ ನಡೆಸಿ, ಪ್ರಗತಿ ಸಾಧಿಸದಿದ್ದವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕ್ರಮಕೈಗೊಳ್ಳಬೇಕು. ಪ್ರತಿ ವರ್ಷ ಎಸ್ ಆರ್ ದರ ಹೆಚ್ಚಾಗುತ್ತದೆ. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

    ಸಭೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಿ.ಎಸ್. ಶಿವಕುಮಾರ್, ಮುಖ್ಯ ಅಭಿಯಂತರರಾದ ವೀರಣ್ಣ ನಗರೂರು, ರವೀಂದ್ರನಾಥ್, ಕಾರ್ಯನಿರ್ವಹಕ ಅಭಿಯಂತರರು ಹಾಜರಿದ್ದರು.

  • ಸಿದ್ದರಾಮಯ್ಯನವರ ಅಹಿಂದ ವೋಟು ಒಡೆಯಲು ಬಿಜೆಪಿಯಿಂದ ಚಾಣಾಕ್ಷ ರಣತಂತ್ರ!

    ಸಿದ್ದರಾಮಯ್ಯನವರ ಅಹಿಂದ ವೋಟು ಒಡೆಯಲು ಬಿಜೆಪಿಯಿಂದ ಚಾಣಾಕ್ಷ ರಣತಂತ್ರ!

    ಬೆಂಗಳೂರು: ಈ ಬಾರಿಯ ಕರ್ನಾಟಕ ಚುನಾವಣೆ ಗೆಲ್ಲಲು ಸಿದ್ದರಾಮಯ್ಯ ಹೂಡಿದ ಅಹಿಂದ ತಂತ್ರಕ್ಕೆ ಪ್ರತಿಯಾಗಿ ಬಿಜೆಪಿ ಎಸ್‍ಟಿ, ಎಸ್‍ಸಿ ವೋಟ್ ಬ್ಯಾಂಕ್ ಅನ್ನು ತನ್ನತ್ತ ಸೆಳೆಯಲು ರಣತಂತ್ರ ರೂಪಿಸಿದೆ.

    ಸಿದ್ದರಾಮಯ್ಯ ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ದಲಿತ ಸಮುದಾಯದ ಮತಗಳ ಮೇಲೆ ಹೆಚ್ಚಿನ ಕಣ್ಣಿಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಕಾಂಗ್ರೆಸ್ ಗೆ ಬೀಳಲಿರುವ ಈ ಮತಗಳನ್ನು ಒಡೆದು ತನ್ನ ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿ ಡಿಸಿಎಂ ಕಾರ್ಡ್ ಪ್ಲೇ ಮಾಡಲು ಮುಂದಾಗಿದೆ.

    ಹೌದು. ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಈಗಾಗಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈಗ ಉಪಮುಖ್ಯಮಂತ್ರಿಯಾಗಿ ಎಸ್‍ಸಿ ಅಥವಾ ಎಸ್‍ಟಿ ಸಮುದಾಯದ ನಾಯಕರ ಹೆಸರನ್ನು ಬಿಡಲು ಚಿಂತನೆ ನಡೆಸಿದೆ ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಸದ್ಯ ಕಮಲ ಪಾಳೆಯದಲ್ಲಿ ಎಸ್‍ಟಿ ಸಮುದಾಯದಲ್ಲಿ ಶ್ರೀರಾಮುಲು, ದಲಿತ ಸಮುದಾಯದ ಗೋವಿಂದ ಕಾರಜೋಳ ಹೆಸರು ಬಿಡಲು ಚರ್ಚೆ ನಡೆಯುತ್ತಿದೆ. ಶ್ರೀರಾಮುಲು ಕಾರ್ಡ್ ಪ್ಲೇ ಮಾಡಿದ್ರೆ 4, 5 ಜಿಲ್ಲೆಗಳಲ್ಲಿ ಅನುಕೂಲವಾಗಲಿದೆ ಎನ್ನುವ ನಿರೀಕ್ಷೆಯ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ತಂತ್ರ ಹೆಣೆಯಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.

    ಎಲ್ಲ 224 ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಪೂರ್ಣಗೊಂಡ ಬಳಿಕ ರಾಜ್ಯದಲ್ಲಿ ಕೇಂದ್ರ ನಾಯಕರುಗಳು ಪ್ರಚಾರವನ್ನು ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಘೋಷಣೆ ಮಾಡುವ ಸಾಧ್ಯತೆಯಿದೆ. ಬಿಜೆಪಿ ಈ ಗೇಮ್ ಅಧಿಕೃತವಾಗಿ ಆಡದೇ ಇದ್ದರೂ ತೆರೆಯ ಹಿಂದೆ ಆಟ ಆಡುವ ಸಾಧ್ಯತೆಯಿದೆ.

  • ನೆಹರೂಮನೆತನದವರಿಂದ ದೇಶದಲ್ಲಿ ಭಯೋತ್ಪಾದನೆ ಹುಟ್ಟಿದೆ: ಗೋವಿಂದ ಕಾರಜೋಳ

    ನೆಹರೂಮನೆತನದವರಿಂದ ದೇಶದಲ್ಲಿ ಭಯೋತ್ಪಾದನೆ ಹುಟ್ಟಿದೆ: ಗೋವಿಂದ ಕಾರಜೋಳ

    ಬೆಂಗಳೂರು: ನೆಹರೂ ಮನೆತನ 37 ವರ್ಷ ದೇಶವನ್ನು ಆಳಿದ್ದು, ಇವರ ಆಡಳಿತ ದೇಶಕ್ಕೆ ಶಾಪ ಆಯ್ತು. ನೆಹರು ಮನೆತನದವರಿಂದ ದೇಶದಲ್ಲಿ ಭಯೋತ್ಪಾದನೆ ಹುಟ್ಟಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

    ಮೋದಿ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಡುಗೋಡಿ ಮುನಿಚಿನ್ನಪ್ಪ ಕ್ರೀಡಾಂಗಣದಲ್ಲಿ ಮೋದಿ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನವರು ರೈತರ ಬೆನ್ನು ಮುರಿದವರು. ದಲಿತರ ಉದ್ದಾರ ಮಾಡದೇ ಅವರನ್ನ ಹೆಸರಿಗೆ ಬಳಸಿಕೊಂಡಿದ್ದಾರೆ. ದಲಿತ ಅಭಿವೃದ್ದಿ ಮಾಡಿಲ್ಲ ಅಂತಾ ಕಾಂಗ್ರೆಸ್ ವಿರುದ್ಧ ಸಿಡಿಮಿಡಿಗೊಂಡರು.

    ಮೋದಿಯವರಿಗೆ ದೇಶದ ಬಡವರ ಕಷ್ಟ-ಸುಖ ಗೊತ್ತು. ಹೀಗಾಗಿ ದೇಶಕ್ಕೆ ಅನೇಕ ಅಭಿವೃದ್ಧಿ ಕಾರ್ಯಕ್ರಮ ಕೊಟ್ಟಿದ್ದಾರೆ. ಹಿಂದೆ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ಕಾರ್ಯಕ್ರಮ ಜಾರಿಗೆ ತಂದ್ರು. ಆದ್ರೆ ಅದನ್ನ ಅನುಷ್ಠಾನ ಮಾಡಿಲ್ಲ. ಮೋದಿ ಸೈಲೈಂಟ್ ಆಗಿ ಎಲ್ಲ ಯೋಜನೆಗಳಿಗೆ ಅನುಷ್ಠಾನ ಮಾಡ್ತಿದ್ದಾರೆ. ಕಾಂಗ್ರೆಸ್ ಮಾಡದ ಕೆಲಸವನ್ನ ಬಿಜೆಪಿಯ ಮೋದಿ ಸರ್ಕಾರ ಮಾಡ್ತಿದೆ ಅಂತಾ ಹೇಳಿದ್ರು.

    ಬಳಿಕ ಮಾಜಿ ಡಿಸಿಎಂ ಆರ್ ಅಶೋಕ್ ಮಾತನಾಡಿ, 10 ವರ್ಷ ಕಾಂಗ್ರೆಸ್ ಮನಮೋಹನ್ ಸಿಂಗ್ ಸರ್ಕಾರ ಇತ್ತು ಅಂತ ಯಾರಿಗೂ ಅನ್ನಿಸಿರಲಿಲ್ಲ. ಸೋನಿಯಾ ಗಾಂಧಿ ಸರ್ಕಾರ ಅಂತ ಎಲ್ಲರಿಗೂ ಅನ್ನಿಸಿತ್ತು. ಇವತ್ತು ಮೋದಿ ಸರ್ಕಾರ ಜನರ ಸರ್ಕಾರವಾಗಿದೆ. ಮೋದಿ ವಿಶ್ವಮಟ್ಟದಲ್ಲಿ ದೇಶದ ಕೀರ್ತಿ ಹಾರಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿಯೊಬ್ಬಳು ಮೋದಿಗೆ ಪತ್ರ ಬರೆದು ಫ್ಲೈ ಓವರ್ ಬೇಕು ಅಂತಾ ಕೇಳಿದ್ದಾಳೆ. ಪ್ರಧಾನಿ ಮೋದಿ ಅದಕ್ಕೆ ಸ್ಪಂದನೆಯನ್ನೂ ನೀಡಿದ್ದಾರೆ. ಮನಮೋಹನ್ ಸಿಂಗ್ ಸೀನಿಯರ್ ಸಿಟಿಜನ್ ಹೋದ್ರು ಏನು ಮಾಡ್ತಿರಲಿಲ್ಲ ಅಂತಾ ಹೇಳಿದ್ರು.

    ಕಾಳಧನಿಕರಿಗೆ ಮೋದಿ ತಕ್ಕ ಪಾಠ ಕಲಿಸಿದ್ದಾರೆ. ದೇಶಕ್ಕೆ ಮೋದಿ ಏನಾದ್ರು ಮಾಡ್ತಾರೆ ಅಂತಾ ಬಡವರು, ರೈತರಿಗೆ ಗೊತ್ತು. ಕಾಂಗ್ರೆಸ್, ಜೆಡಿಎಸ್ ಅವ್ರನ್ನ ಆಫ್ ದ ರೆಕಾರ್ಡ್ ಕೇಳಿ ಅವರೇ ಮೋದಿ ಜನರ ಮನಸ್ಸಿಗೆ ಹೋಗಿದ್ದಾರೆ ಅಂತಾರೆ. ರಾಜ್ಯದಲ್ಲಿ ನಿದ್ರೆ ಮಾಡೋ ಸಿದ್ರಾಮಯ್ಯ ಸರ್ಕಾರ ಇದೆ. 4 ವರ್ಷದಿಂದ ನಿದ್ರೆಯಿಂದ ಎದ್ದೇಳಿ ಅಂದ್ರು ಇನ್ನೂ ಸಿದ್ದರಾಮಯ್ಯ ಎದ್ದಿಲ್ಲ. ಕಾಂಗ್ರೆಸ್ ಉಸ್ತುವಾರಿ ಪಕ್ಕದಲ್ಲೇ ಸಿದ್ದರಾಮಯ್ಯ ನಿದ್ರೆ ಮಾಡ್ತಾರೆ. ಎಲ್ಲಿ ಮೋದಿ, ಎಲ್ಲಿ ಸಿದ್ದರಾಮಯ್ಯ. ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ ಅಂತಾ ಅಶೋಕ್ ತಿಳಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಶಾಸಕರಾದ ರಘು, ಬಿ.ಎನ್.ವಿಜಯಕುಮಾರ್, ವಿಧಾನಪರಿಷತ್ ಸದಸ್ಯರಾದ ವಿ.ಸೋಮಣ್ಣ, ತಾರಾ, ಲೆಹರ್ ಸಿಂಗ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.