Tag: Govinde Gowda

  • ಚಿಕ್ಕಮಗಳೂರು | ಮಾಜಿ ಸಚಿವರ ಮನೆಯಲ್ಲಿ 7 ಲಕ್ಷ ನಗದು, ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    ಚಿಕ್ಕಮಗಳೂರು | ಮಾಜಿ ಸಚಿವರ ಮನೆಯಲ್ಲಿ 7 ಲಕ್ಷ ನಗದು, ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    ಚಿಕ್ಕಮಗಳೂರು: ಮಲೆನಾಡ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಸಚಿವ ದಿ.ಹೆಚ್.ಜಿ. ಗೋವಿಂದೇಗೌಡರ (Govinde Gowda) ಮನೆಯಲ್ಲಿ 7 ಲಕ್ಷ ರೂ. ನಗದು (Money) ಹಾಗೂ ಚಿನ್ನಾಭರಣ (Gold) ಕಳವಾಗಿದೆ.

    ನೇಪಾಳ ಮೂಲದ ಮನೆಗೆಲಸದವರಿಂದಲೇ ಕಳ್ಳತನ ನಡೆದಿದೆ. ಗೋವಿಂದೇಗೌಡರ ಪುತ್ರ ವೆಂಕಟೇಶ್ ವಾಸವಿರುವ ಕೊಪ್ಪ (Koppa) ತಾಲೂಕಿನ ಮಣಿಪುರ ಎಸ್ಟೇಟ್‍ನಲ್ಲಿ ಈ ಕಳ್ಳತನ ನಡೆದಿದೆ. ಈ ಮನೆಗೆ ಕಳೆದ 15 ದಿನಗಳ ಹಿಂದಷ್ಟೇ ನೇಪಾಳ ಮೂಲದ ದಂಪತಿ ಕೆಲಸಕ್ಕೆ ಸೇರಿದ್ದರು. ಕಳೆದ ರಾತ್ರಿ ಮನೆಯಲ್ಲಿ ಎಲ್ಲರೂ ನಿದ್ರೆಗೆ ಜಾರಿದ್ದಾಗ, ದಂಪತಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: 

    ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ – ಪೊಲೀಸರಿಂದ ಪುಂಡನಿಗೆ ದಂಡದ ರುಚಿ!

  • ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಕಾಮಿಡಿ ಕಿಲಾಡಿ ಜೋಡಿ

    ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಕಾಮಿಡಿ ಕಿಲಾಡಿ ಜೋಡಿ

    ಪುನೀತ್ ರಾಜ್ ಕುಮಾರ್ ನಿಧನಾ ನಂತರ ಅವರ ಸಾವಿರಾರು ಅಭಿಮಾನಿಗಳು ನೇತ್ರದಾನ ಮಾಡುವ ಮೂಲಕ ಮಾದರಿಯಾಗಿದ್ದರು. ನೇತ್ರದಾನದಂತಹ ಪವಿತ್ರ ಕಾರ್ಯ ಮುಂದುವರೆಯುತ್ತಲೇ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಆದರ್ಶವಾಗಿ ತಗೆದುಕೊಂಡಿದ್ದ ಕಾಮಿಡಿ ಕಿಲಾಡಿಗಳು ಶೋ ಖ್ಯಾತಿಯ ಜೋಡಿಯೊಂದು ಸೀಮಂತ ಕಾರ್ಯಕ್ರಮದಲ್ಲೇ ನೇತ್ರದಾನ ಮಾಡಿದೆ. ಇದನ್ನೂ ಓದಿ : ನಟ ಧನ್ವೀರ್ ಮೇಲೆ ನಿಲ್ಲುತ್ತಿಲ್ಲ ದಾಳಿ : ದಾಳಿ ಹಿಂದೆ ಸ್ಟಾರ್ ನಟರ ಕೈವಾಡ?


    ಕಾಮಿಡಿ ಕಿಲಾಡಿಗಳು ಅಂದಾಕ್ಷಣ ಥಟ್ಟನೆ ನೆನಪಾಗುವ ಜೋಡಿ ಗೋವಿಂದೇಗೌಡ ಮತ್ತು ದಿವ್ಯಶ್ರೀ ಅವರದ್ದು. ಕಾಮಿಡಿ ಕಿಲಾಡಿಗಳು ಶೋಗೆ ಸ್ಪರ್ಧೆಯಾಗಿ ಬಂದವರು, ನಂತರ ಸ್ನೇಹಿತರಾದರು. ಆನಂತರ ಪ್ರೇಮಿಗಳಾದರು. ಪ್ರೇಮವೇ ಸಪ್ತಪದಿ ತುಳಿಯುವುದಕ್ಕೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ದಿವ್ಯಶ್ರೀ ಅವರ ಸೀಮಂತ ಕಾರ್ಯಕ್ರಮವಾಯಿತು. ಅಂದು ಈ ದಂಪತಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನೇತ್ರದಾನ ಮಾಡುವ ಮೂಲಕ ನವ ಜೋಡಿಗಳಿಗೆ ಮಾದರಿಯಾದರು. ಇದನ್ನೂ ಓದಿ : ಶಬ್ದ ಚಿತ್ರದ ವಿಭಿನ್ನ ಪಾತ್ರದಲ್ಲಿ ಮೇಘನಾ ರಾಜ್ : ನಿರ್ದೇಶಕ ಕಾಂತ ಹೇಳಿದ್ದೇನು?


    ಮೊದಲಿನಿಂದಲೂ ನನಗೆ ಪುನೀತ್ ರಾಜ್ ಕುಮಾರ್ ಅಂದರೆ ಇಷ್ಟ. ಅವರ ಸಿನಿಮಾಗಳನ್ನೇ ನೋಡಿಕೊಂಡು ಬೆಳೆದವರು ನಾವು. ಅಂತಹ ಮಹಾನ್ ನಟರೇ ಕಣ್ಣುದಾನ ಮಾಡಿದ್ದಾರೆ. ಅವರಿಂದ ಸ್ಫೂರ್ತಿಗೊಂಡು ನಾವು ಕೂಡ ಈ ಕೆಲಸಕ್ಕೆ ಮುಂದಾದೆವು ಅನ್ನುತ್ತಾರೆ ಕಿಲಾಡಿ ಜೋಡಿ. ಇದನ್ನೂ ಓದಿ : ಡಿಸೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ -ದೇವರಕೊಂಡ ಮದುವೆ? ಏನಿದು ಮ್ಯಾರೇಜ್ ಕಹಾನಿ


    ತಾವು ಮಾತ್ರ ನೇತ್ರದಾನ ಮಾಡಿಲ್ಲ, ಜತೆಗೆ ಇದೇ ವೇಳೆ ನೇತ್ರದಾನ ಶಿಬಿರವನ್ನು ಕೂಡ ಅವರು ಆಯೋಜನೆ ಮಾಡಿದ್ದರು. ಈ ಸಂದರ್ಭದಲ್ಲಿ ಡಾ.ರಾಜ್ ಐ ಬ್ಯಾಂಕಿನ ಸಿಬ್ಬಂದಿ ಕೂಡ ಹಾಜರಿತ್ತು.

  • ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇಗೌಡಗೆ ಅಪಘಾತ- ಪ್ರಾಣಾಪಾಯದಿಂದ ಪಾರು

    ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇಗೌಡಗೆ ಅಪಘಾತ- ಪ್ರಾಣಾಪಾಯದಿಂದ ಪಾರು

    ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದಾರೆ. ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

    ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು ಬಿದ್ದಿರೋದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಕಾರಣದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್, ಕಾಮಿಡಿಕಿಲಾಡಿ ನಟ ಜಿಜಿ ಗೋವಿಂದೇಗೌಡನಿಗೆ ಚಿತ್ರೀಕರಣ ಸಮಯದಲ್ಲಿ ಅಪಘಾತವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ. ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ ಎಂದು ತಿಳಿಸಿದ್ದಾರೆ.

    ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಯೋಗರಾಜ್ ಭಟ್, ಒಂದು ಚಿಕ್ಕ ಅಪಘಾತವಾಗಿದೆ. ಗೋವಿಂದೇಗೌಡ ಅರಾಮಾಗಿದ್ದಾರೆ. ಚಿಕಿತ್ಸೆ ಬಳಿಕ ಮತ್ತೆ ಅವರು ಚಿತ್ರೀಕರಣಕ್ಕೆ ಮರಳಿದ್ದಾರೆ. ಈಗಷ್ಟೇ ನಾವೆಲ್ಲರೂ ಚಿತ್ರೀಕರಣ ಮುಗಿಸಿ ವಾಪಾಸ್ ಬಂದಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

    ಈ ಸಂಬಂಧ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದು, ಈಗ ತಾನೆ ಗೋವಿಂದೇಗೌಡನನ್ನ ಭೇಟಿ ಮಾಡಿದೆ. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದು ಟ್ವೀಟ್ ಮಾಡಿದ್ದಾರೆ.

  • ‘ಅಕ್ಷಿ’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ – ಸಂತಸ ವ್ಯಕ್ತಪಡಿಸಿದ ಕಾಮಿಡಿ ಕಿಲಾಡಿ ಜಿಜಿ

    ‘ಅಕ್ಷಿ’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ – ಸಂತಸ ವ್ಯಕ್ತಪಡಿಸಿದ ಕಾಮಿಡಿ ಕಿಲಾಡಿ ಜಿಜಿ

    ಬೆಂಗಳೂರು: ಅಕ್ಷಿ ಸಿನಿಮಾಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಿಕ್ಕಿದ್ದು, ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಖ್ಯಾತಿ ಪಡೆದ ಗೋವಿಂದೇ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತಂತೆ ಮಾತನಾಡಿದ ಗೋವಿಂದ್ ಗೌಡ(ಜಿಜಿ) ಅಕ್ಷಿ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ದೊರೆಯುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಕನ್ನಡದ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ನಾನು ಆ ಸಿನಿಮಾದಲ್ಲಿ ಅಭಿನಯಿಸಿದ್ದೇನೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆಯಲು ಪ್ರಮುಖ ಕಾರಣ ಸಿನಿಮಾದ ನಿರ್ದೇಶಕ ಮನೋಜ್ ಕುಮಾರ್. ಹಾಗಾಗಿ ಅವರಿಗೆ ಈ ಕ್ರೆಡಿಟ್ ಸಲ್ಲಬೇಕು. ಸಿನಿಮಾ ಬಗ್ಗೆ ಹೇಳಿದಾಗ ಇಲ್ಲಿಯವರೆಗೂ ಜನರು ನನ್ನನ್ನು ಹಾಸ್ಯದ ಪಾತ್ರಗಳಲ್ಲಿ ಹೆಚ್ಚಾಗಿ ನೋಡಿದ್ದಾರೆ. ಆದರೆ ಅಕ್ಷಿ ಸಿನಿಮಾದಲ್ಲಿ ನನ್ನ ಪಾತ್ರ ಗಂಭೀರ ಪಾತ್ರವಾಗಿದ್ದು, ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಸಿನಿಮಾವನ್ನೂ ಪ್ರಾರಂಭಿಸುವುದಕ್ಕೂ ಮುನ್ನ ಒಮ್ಮೆ ಯೋಚನೆ ಮಾಡಿ ಎಂದು ನಿರ್ದೇಶಕರಿಗೆ ಹೇಳಿದ್ದೆ. ಆದರೆ ಅವರು ನನ್ನ ಮೇಲೆ ಸಂಪೂರ್ಣ ನಂಬಿಕೆ ಇಟ್ಟು ನೀನು ಈ ಪಾತ್ರವನ್ನು ಮಾಡಲೇಬೇಕು ಎಂದು ಹೇಳಿದ್ದರು. ನಿಜಕ್ಕೂ ಅವರ ಶ್ರಮದಿಂದ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಸಿನಿಮಾ ಇನ್ನೂ ಬಿಡುಗಡೆಯಾಗಿಲ್ಲ. ಆದರೂ ಕೆಲವರು ಸಿನಿಮಾವನ್ನು ವೀಕ್ಷಿಸಿದ್ದು ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ ಎಂದರು.

    ಸದ್ಯ ಸಿನಿಮಾವನ್ನು ಏಪ್ರಿಲ್‍ನಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಿ ನಡೆಸುತ್ತಿದ್ದು, ಮೊದಲ ಬಾರಿಗೆ ಮನೋಜ್‍ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗೋವಿಂದೇ ಗೌಡ, ಇಳಾ ವಿಟ್ಲಾ, ಮಾಸ್ಟರ್ ಮಿಥುನ್, ಮಾಸ್ಟರ್ ಸೌಮ್ಯ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಿನಿಮಾಕ್ಕೆ ಶ್ರೀನಿವಾಸ್, ರಮೇಶ್ ಬಂಡವಾಳ ಹೂಡಿದ್ದು, ಕಲಾ ದೇಗುಲ ಶ್ರೀನಿವಾಸ್ ಸಂಗೀತ ಸಂಯೋಜಿಸಿದ್ದಾರೆ ಹಾಗೂ ಮುಕುಲ್ ಗೌಡ ಛಾಯಾಗ್ರಹಣ ಸಿನಿಮಾಕ್ಕಿದೆ.

  • ಹಳ್ಳಿ ಘಮಲಿನ ‘ಚಂಪಾ’ಕಲಿಯಂಥಾ ‘ಪರಸಂಗ’!

    ಹಳ್ಳಿ ಘಮಲಿನ ‘ಚಂಪಾ’ಕಲಿಯಂಥಾ ‘ಪರಸಂಗ’!

    ಹೊಸಾ ಅಲೆ ಹಳೇ ಸೆಲೆಗಳೆಲ್ಲವೂ ಝಗಮಗಿಸುವ ಕಥೆಗಳ ಬೆಂಬೀಳೋದೇ ಹೆಚ್ಚಾದ್ದರಿಂದ ಹಳ್ಳಿ ಘಮಲಿನ ಕಥೆಗಳೇ ಅಪರೂಪವಾಗಿ ಬಿಟ್ಟಿವೆ. ಹಾಗೊಂದು ವೇಳೆ ಅಂಥಾ ಚಿತ್ರಗಳು ತೆರೆ ಕಂಡರೂ ಎಲ್ಲದರಲ್ಲಿಯೂ ವೀಕ್ ನೆಸ್ ಪ್ರಾಬ್ಲಮ್ಮಿನಿಂದ ಸೊರಗಿರುತ್ತವೆ. ಆದರೆ ಎಲ್ಲ ವಿಚಾರದಲ್ಲಿಯೂ ದಷ್ಟ ಪುಷ್ಟವಾಗಿರುವ ಮಿತ್ರಾ ಅಭಿನಯದ ಪರಸಂಗ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಣಿಸುತ್ತಾ ಸಾರಾಸಗಟಾಗಿ ಎಲ್ಲರನ್ನು ಥೇಟರಿನತ್ತ ಸೆಳೆಯುತ್ತಿದೆ.

    ಪ್ರೇಕ್ಷಕರ ಬಾಯಿ ಮಾತಿಂದಲೇ ಥೇಟರು ತುಂಬಿಸಿಕೊಂಡ ಚಿತ್ರಗಳು ಗೆದ್ದವೆಂದೇ ಅರ್ಥ. ಸದ್ಯ ಪರಸಂಗವೂ ಅಂಥಾದ್ದೇ ವಾತಾವರಣ ಸೃಷ್ಟಿಸಿರೋದರಿಂದ ಇದು ಗೆದ್ದ ಲಕ್ಷಣ ಎಂಬುದನ್ನು ಸಪರೇಟಾಗಿ ಹೇಳೋ ಅವಶ್ಯಕತೆಯಿಲ್ಲ!

    ಯಾರಾದರೂ ಕಾಯಿಲೆ ಬಿದ್ದರೆ ಬೊಂಬೆಯೊಂದನ್ನು ತಯಾರಿಸಿ ಕಾಯಿಲೆಯನ್ನು ಅದರೊಳಗೆ ತುಂಬಿಸೋ ನಂಬಿಕೆಯಿಂದ ಅದನ್ನು ಗಡಿಯಾಚೆ ಬಿಟ್ಟು ಬರುವ ಒಂದು ಸಂಪ್ರದಾಯವಿದೆ. ಹಳ್ಳಿಗಾಡುಗಳಲ್ಲಿ ಇದು ಈಗಲೂ ಅಳಿದುಳಿದುಕೊಂಡಿದೆ. ಆ ಹಳ್ಳಿಯಲ್ಲಿ ತನ್ನ ವಿಧವೆ ತಾಯಿಯ ಜೊತೆ ಬದುಕುತ್ತಾ, ಊರ ಗೌಡನ ಮನೆಯಲ್ಲಿ ಚಾಕರಿ ಮಾಡಿಕೊಂಡಿರೋ ತಿಮ್ಮ ಕೂಡಾ ಗೊಂಬೆ ದಾಟಿಸುವ ವೃತ್ತಿಯನ್ನೂ ನಡೆಸಿಕೊಂಡು ಬಂದಿರುತ್ತಾನೆ. ಇಂಥವನಿಗೆ ಎತ್ತಣಿದ್ದೆಂತಲಿಂದಲೂ ಮ್ಯಾಚ್ ಆಗದ ಬೊಂಬೆಯಂಥಾ ಹುಡುಗಿಯೇ ಮಡದಿಯಾಗಿ ಬಂದು ಬಿಡುತ್ತಾಳೆ.

    ಚಂಪಾ ಹೆಸರಿನ ಈ ಚೆಲುವೆ ಪರಿಸ್ಥಿತಿಯ ಸಂಕೋಲೆಗೆ ಸಿಲುಕಿ ತನಗೆ ಹೊಂದದ ತಿಮ್ಮನನ್ನು ಮದುವೆಯಾಗುತ್ತಾಳೆ. ಈ ನಡುವೆ ತಿಮ್ಮ ಮಡದಿನ ಮಾತು ಕೇಳಿ ಚಂಪಾ ಚಾಟ್ಸ್ ಎಂಬ ಹೋಟೆಲು ಶುರುವಿಟ್ಟುಕೊಂಡೇಟಿಗೆ ಚಂಪಾಕಲಿಯಂಥಾ ಚಂಪಾಳ ಮೇಲೆ ಇಡೀ ಊರ ಕಣ್ಣು ಬೀಳುತ್ತದೆ. ಚಂಪಾ ಕೂಡಾ ಅಂಥಾ ಪಡ್ಡೆಗಳ ಜೊತೆ ಮೆತ್ತಗೆ ನವರಂಗಿಯಾಟ ಶುರು ಮಾಡಿಕೊಳ್ಳುತ್ತಾಳೆ.

    ಆದರೆ ಊರೆಲ್ಲ ಏನೇ ಹೇಳಿದರೂ ತಿಮ್ಮ ಮಾತ್ರ ತನ್ನ ಹೆಂಡತಿ ಪರಮ ಪತಿವ್ರತೆ ಎಂದೇ ನಂಬಿ ಕೂತಿರುತ್ತಾನೆ. ಹೀಗಿರುವಾಗಲೇ ಚಂಪಾ ಚಾಟ್ಸ್ ಎದುರಿಗೇ ಕ್ಲಿನಿಕ್ಕು ತೆರೆಯೋ ಸ್ಫುರದ್ರೂಪಿ ವೈದ್ಯನೂ ಚಂಪಾಳ ಬಾಧೆಗೆ ಟ್ರೀಟ್ ಮೆಂಟು ಶುರು ಮಾಡಿದಾಕ್ಷಣ ತಿಮ್ಮನ ಬದುಕಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತೆ. ಅದರಾಚೆಗಿನದ್ದು ಅಸಲೀ ಆಹ್ಲಾದ. ನಿರ್ದೇಶಕ ಕೆ.ಎಂ. ರಘು ತಾನೊಬ್ಬ ಅಪ್ಪಟ ಹಳ್ಳಿ ಘಮಲಿನ ಕಥೆ ಹೇಳೇ ಪಾರಂಗತ ಎಂಬುದನ್ನು ಹೆಜ್ಜೆ ಹೆಜ್ಜೆಗೂ ಧೃಡಪಡಿಸಿದ್ದಾರೆ.

    ಹಾಸ್ಯ ನಟರಾಗಿ ಬ್ರ್ಯಾಂಡ್ ಆಗಿದ್ದ ಮಿತ್ರಾ ಈ ಹಿಂದೆ ರಾಗ ಚಿತ್ರದ ಮೂಲಕ ಆ ಸೀಮೆ ದಾಟಿಕೊಂಡಿದ್ದರು. ಪರಸಂಗ ಚಿತ್ರದ ತನ್ಮಯ ನಟನೆಯಿಂದ ಯಾವ ಪಾತ್ರಕ್ಕೂ ಸೈ ಎನಿಸಿದ ಓರ್ವ ಅಪ್ಪಟ ಕಲಾವಿದನಾಗಿ ಮಿತ್ರಾ ಪ್ರೇಕ್ಷಕರನ್ನು ಮುಟ್ಟಿದ್ದಾರೆ. ಇನ್ನು ನಾಯಕಿ ಅಕ್ಷತಾ ಈ ಪಾತ್ರವನ್ನು ಮೈ ಮನಸುಗಳಿಗೆ ತುಂಬಿಕೊಂಡು ನಟಿಸೋ ಮೂಲಕ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ನೆಲೆ ನಿಲ್ಲವ ಕನಸನ್ನು ಖಂಡಿತಾ ನನಸು ಮಾಡಿಕೊಂಡಿದ್ದಾರೆ. ವೈದ್ಯನಾಗಿ ನಟಿಸಿರೋ ಮನೋಜ್, ಕನೆಕ್ಷನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಂದ್ರಪ್ರಭ ಸೇರಿದಂತೆ ಎಲ್ಲರದ್ದೂ ಮಾಗಿದ ನಟನೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇಗೌಡರದ್ದೂ ಮನಸಲ್ಲುಳಿಯುವ ಪಾತ್ರ. ನಿರ್ದೇಶಕ, ಕ್ಯಾಮೆರಾ, ಸಂಗೀತ ಸೇರಿದಂತೆ ತಾಂತ್ರಿಕವಾಗಿಯೂ ವಿಶಿಷ್ಟವಾದ ಫೀಲ್ ಕೊಡುವ ಮೂಲಕ ಪರಸಂಗ ಚಿತ್ರ ಗೆಲುವಿನತ್ತ ದಾಪುಗಾಲಿಡುತ್ತಿದೆ.